Tag: ಹೇಮಾವತಿ

  • ಯಾವುದೇ ಕ್ಷಣದಲ್ಲಿ ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

    ಯಾವುದೇ ಕ್ಷಣದಲ್ಲಿ ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

    ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು (Heavy Rain) ಯಾವುದೇ ಸಮಯದಲ್ಲಿ ಡ್ಯಾಂನಿಂದ (Hemavati Dam) ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ.

    ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ 4,600 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

    ಸದ್ಯ ಈಗ 2,921.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಇನ್ನೂ ಅರ್ಧ ಅಡಿಗಳಷ್ಟು ನೀರನ್ನು ಮಾತ್ರ ಜಲಾಶಯದಲ್ಲಿ ಸಂಗ್ರಹಿಸಬಹುದಾಗಿದೆ.  ಇದನ್ನೂ ಓದಿ:  ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

     

    ಈಗಾಗಲೇ ಹವಾಮಾನ ಇಲಾಖೆ (IMD) ಅ.29 ರವರೆಗೆ ಮಳೆಯ ಮುನ್ಸೂಚನೆ ನೀಡಿರುವ ಕಾರಣ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರಲಿದೆ. ಹೀಗಾಗಿ ಹೇಮಾವತಿ ನದಿ ಪಾತ್ರ, ನದಿ ದಂಡೆ, ನದಿಯ ಅಸುಪಾಲಿನಲ್ಲಿರುವ ಎಲ್ಲಾ ಗ್ರಾಮಸ್ಥರು, ಸ್ಥಳೀಯರು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಲ್ಲಿ ತಕ್ಷಣವೇ ತೆರಳುವಂತೆ ಸೂಚನೆ ನೀಡಲಾಗಿದೆ.

    ಕಂದಾಯ ಇಲಾಖೆ, ತಹಸೀಲ್ದಾರ್‌ ಸೇರಿದಂತೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು. ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಹೇಮಾವತಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಜ್ಯೋತಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    ಹೇಮಾವತಿ ಜಲಾಶಯ 37.103 ಟಿಎಂಸಿ ನೀರಿನ ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 36.620 ಟಿಎಂಸಿ ನೀರು ಸಂಗ್ರಹವಾಗಿದೆ.

  • ಕಾವೇರಿ, ಹೇಮಾವತಿ ನೀರಿಗಾಗಿ ಮಂಗಳವಾರ ಕೆಆರ್ ಪೇಟೆ ಬಂದ್

    ಕಾವೇರಿ, ಹೇಮಾವತಿ ನೀರಿಗಾಗಿ ಮಂಗಳವಾರ ಕೆಆರ್ ಪೇಟೆ ಬಂದ್

    ಮಂಡ್ಯ: ಕಾವೇರಿ (Cauvery) ಮತ್ತು ಹೇಮಾವತಿ (Hemavati) ನೀರಿಗಾಗಿ ಸೆಪ್ಟೆಂಬರ್ 26ರಂದು ಕೆಆರ್ ಪೇಟೆ (KR Pete) ಬಂದ್‌ಗೆ (Bandh) ಕರೆ ನೀಡಲಾಗಿದೆ.

    ಕಾವೇರಿ ನೀರಿನ ಜೊತೆಗೆ ಹೇಮಾವತಿ ನೀರು ಉಳಿವಿಗಾಗಿ ಬಂದ್‌ಗೆ ಕರೆ ನೀಡಲಾಗಿದೆ. ರೈತ, ಕನ್ನಡ, ದಲಿತ, ಪ್ರಗತಿಪರ ಸಂಘಟನೆಗಳು ಬದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ಜೆಡಿಎಸ್ ಹಾಗೂ ಬಿಜೆಪಿಯೂ ಬೆಂಬಲ ಸೂಚಿಸಿವೆ. ಇದನ್ನೂ ಓದಿ: ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ

    ಕೆಆರ್ ಪೇಟೆ ಭಾಗದಲ್ಲಿ ಉಪಯೋಗಕ್ಕೆ ಸಿಗುವುದು ಹೇಮಾವತಿ ನೀರು. ಕೆಆರ್‌ಎಸ್ ಡ್ಯಾಂನಲ್ಲಿ ನೀರು ಖಾಲಿಯಾದರೆ ಹೇಮಾವತಿಯಿಂದ ನೀರು ಬಿಡುಗಡೆಯಾಗಲಿದೆ. ಆಗ ಎರಡೂ ಡ್ಯಾಂನ ನೀರು ಖಾಲಿಯಾಗುವ ಆತಂಕ ಎದುರಾಗಿದೆ. ಹೀಗಾಗಿ ಎರಡು ಡ್ಯಾಂ ನೀರು ರಕ್ಷಣೆಗೆ ಆಗ್ರಹಿಸಿ ಕೆಆರ್ ಪೇಟೆ ಬಂದ್‌ಗೆ ಕರೆ ನೀಡಲಾಗಿದೆ. ಇದನ್ನೂ ಓದಿ: ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೇಮಾವತಿ ಒಳ ಹರಿವು ಹೆಚ್ಚಳ – ಯಗಚಿ ಜಲಾಶಯ ಭರ್ತಿ

    ಹೇಮಾವತಿ ಒಳ ಹರಿವು ಹೆಚ್ಚಳ – ಯಗಚಿ ಜಲಾಶಯ ಭರ್ತಿ

    ಹಾಸನ: ಜಿಲ್ಲೆಯ ಜೀವನಾಡಿ ಹೇಮಾವತಿ ಹಾಗೂ ಬೇಲೂರಿನ ಯಗಚಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಇದರಿಂದ ಜಿಲ್ಲೆಯ ಜನರಲ್ಲಿ ಹರ್ಷ ಮೂಡಿಸಿದೆ. ಹೇಮಾವತಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ವೃದ್ಧಿಸಿದೆ.

    ಹೇಮಾವತಿ ಜಲಾಶಯದ ಜಲಾನಯನ ಪ್ರದೇಶಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು ತಾಲೂಕಿನಲ್ಲಿ ಮುಂಗಾರು ಮಳೆ ಬಿರುಸಾಗಿದೆ. ಇಂದು 10,089 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಕಳೆದ ಎರಡು ವಾರದಿಂದ ಪ್ರತಿದಿನ ಸರಿಸುಮಾರು 2,000 ಕ್ಯೂಸೆಕ್ ನೀರು ಹರಿದು ಜಲಾಶಯ ಸೇರುತ್ತಿದೆ. ಕಳೆದ ಮೂರು ವಾರದ ಹಿಂದೆ ಮುಂಗಾರು ಚುರುಕಾಗಿತ್ತು ಈ ವೇಳೆ ಒಳಹರಿವು 16 ಸಾವಿರ ಕ್ಯೂಸೆಕ್ ತಲುಪಿತ್ತು ನಂತರ ಮಳೆಯ ಪ್ರಮಾಣ ಕಡಿಮೆಯಾಗಿ ಕೆಲ ದಿನದಿಂದ ಮತ್ತೆ ಮಳೆ ಶುರುವಾಗಿದೆ.

    37.10 ಟಿಎಂಸಿ ಸಂಗ್ರಹಣಾ ಸಾಮಥ್ರ್ಯದ ಜಲಾಶಯದಲ್ಲಿ ಸದ್ಯ 19.227 ಟಿಎಂಸಿ ನೀರು ಸಂಗ್ರಹವಾಗಿದೆ. 200 ಕ್ಯೂಸೆಕ್ ನೀರು ಕ್ರಸ್ಟ್‍ಗೇಟ್‍ಗಳ ಮೂಲಕ ನದಿಗೆ ಹರಿಬಿಡಲಾಗುತ್ತಿದೆ. ಜಲಾಶಯದಲ್ಲಿ 25 ಟಿಎಂಸಿ ಗೂ ಹೆಚ್ಚುನೀರು ಸಂಗ್ರಹವಾದರೆ ಮಾತ್ರ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸಲು ನಾಲೆಗಳಲ್ಲಿ ನೀರು ಹರಿಸಲಾಗುವುದು ಎಂದು ಹೇಮಾವತಿ ಅಣೆಕಟ್ಟು ವಿಭಾಗದ ಎಂಜಿನಿಯರುಗಳು ಸ್ಪಷ್ಟಪಡಿಸಿದ್ದಾರೆ.

    23 ಅಡಿ ಬಾಕಿ: ಜಲಾಶಯ ಭರ್ತಿಗೆ ಇನ್ನೂ 23 ಅಡಿಗಳಷ್ಟು ನೀರು ತುಂಬಬೇಕಿದೆ. ಒಳ ಹರಿವೇನೂ ಹೆಚ್ಚಳವಾಗಿದೆ ಆದರೆ ಮಳೆಯ ಪ್ರಮಾಣ ಇದೇ ರೀತಿ ಹೆಚ್ಚಾದರೆ ಜಲಾಶಯ ಭರ್ತಿಯಾಗಲಿದ್ದು ಇನ್ನು ಎರಡು ಮೂರು ವಾರ ಒಳ ಹರಿವು ಪ್ರತಿದಿನ ಹೆಚ್ಚಾದರೆ ಮಾತ್ರ ಜಲಾಶಯ ತುಂಬಲಿದೆ ಎಂದು ಅಂದಾಜಿಸಲಾಗಿದೆ.

    ಯಗಚಿ ಜಲಾಶಯ ಭರ್ತಿ: ಜಿಲ್ಲೆಯ ಬೇಲೂರಿನ ಯಗಚಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ. ಡ್ಯಾಂಗೆ ಸದ್ಯ 500 ಕ್ಯೂಸೆಕ್ ಒಳಹರಿವು ಬರುತ್ತಿದೆ.

    ಜಲಾಶಯಕ್ಕೆ ಒಳಹರಿವಿನಲ್ಲಿ ಹೆಚ್ಚಳ ಹಿನ್ನೆಲೆ ಐದು ಕ್ರಸ್ಟ್ ಗೇಟ್ ಗಳ ಮೂಲಕ 500 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 3164.900 ಅಡಿಗಳಷ್ಟು ಇದ್ದು ಬಹುತೇಕ ಭರ್ತಿಯಾಗಿದೆ. ಜಲಾಶಯದ ನೀರಿನ ಸಂಗ್ರಹ ಸಾಮಥ್ರ್ಯ 3.603 ಟಿಎಂಸಿ ಇದ್ದು ಇಂದು 3.055 ಟಿಎಂಸಿ ಸಂಗ್ರಹ ವಿದೆ. ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾದರೆ ಮತ್ತಷ್ಟು ನೀರು ಹೊರಬಿಡುವ ಸಾಧ್ಯತೆ ಇರುವ ಕಾರಣ ಅಣೆಕಟ್ಟೆಯ ಅಚ್ಚುಕಟ್ಟು ಪ್ರದೇಶ ಹಾಗೂ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಯಗಚಿ ಯೋಜನಾ ವಿಭಾಗದ ಕಾರ್ಯಪಾಲಕ ಅಭಿಯಂತರ ಎಸ್.ಡಿ.ತಿಮ್ಮೇಗೌಡ ಸೂಚನೆ ಹೊರಡಿಸಿದ್ದಾರೆ. ಇದನ್ನೂ ಓದಿ: ಲಾಕ್ ಡೌನ್ ನಡುವೆ ಎಂಜಿನಿಯರಿಂಗ್ ಪದವೀಧರನಿಂದ ಮೀನು ಕೃಷಿಯಲ್ಲಿ ವಿನೂತನ ಸಾಧನೆ

  • ಜೀವನಾಡಿ ಹೇಮೆಯ ಒಡಲು ಸೇರುತ್ತಿದೆ ಯುಜಿಡಿ ಕಲುಷಿತ ನೀರು

    ಜೀವನಾಡಿ ಹೇಮೆಯ ಒಡಲು ಸೇರುತ್ತಿದೆ ಯುಜಿಡಿ ಕಲುಷಿತ ನೀರು

    ತುಮಕೂರು: ತುಮಕೂರು-ತಿಪಟೂರು ನಗರದ ಯುಜಿಡಿ ಕಲುಷಿತ ನೀರು ಹೇಮಾವತಿ ನಾಲೆಗೆ ಹರಿಯುತ್ತಿದೆ. ಜಿಲ್ಲೆಯ ಜನರ ಜೀವನಾಡಿ ಹೇಮಾವತಿ ನಾಲೆ ನೀರು ಮಲಿನವಾಗ್ತಿದೆ.

    ಹಾಸನ ಜಿಲ್ಲೆಯ ಗೋರೂರು ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಯ ವಿವಿಧ ಕೆರೆಗಳಿಗೆ ನಾಲೆ ಮೂಲಕ ಹರಿಯುತ್ತಿರುವ ನೀರು ತಿಪಟೂರು ತಾಲೂಕಿನ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಮಾಲಿನ್ಯಗೊಳ್ಳುತ್ತಿದೆ.

    ತಿಪಟೂರು ನಗರದ ಹೃದಯಭಾಗದಲ್ಲಿರುವ ಅಮಾನಿಕೆರೆ ತುಂಬಿ ಹರಿಯುವ ನೀರು ರಾಜಕಾಲುವೆ ಮೂಲಕ ಗೊರಗೊಂಡನಹಳ್ಳಿ, ಕೊಪ್ಪ, ಹುಲ್ಲುಕಟ್ಟೆ ಮಾರ್ಗವಾಗಿ ಹೇಮಾವತಿ ನಾಲೆ ಹಾದು ಈಚನೂರು ಕೆರೆ ಸೇರುತ್ತದೆ. ಈ ರಾಜ ಕಾಲುವೆಯಲ್ಲಿ ಹಲವು ವರ್ಷಗಳಿಂದ ತಿಪಟೂರು ನಗರದ ಯುಜಿಡಿ ಕೊಳಚೆ ನೀರು ಈಚನೂರು ಕೆರೆಗೆ ಬಂದು ಸೇರುತ್ತಿದೆ. ಇದೇ ಕೆರೆಯಿಂದ ಹಾಸನ ಜಿಲ್ಲೆಯ ಅರಸೀಕೆರೆ, ತಿಪಟೂರು ನಗರಕ್ಕೆ ನೀರು ಸರಬರಾಜು ಮಾಡಲಾಗ್ತಿದೆ. ತಿಪಟೂರು ನಗರದ ಜನರು ತಾವು ಬಳಸಿದ ಕಲುಷಿತ ನೀರನ್ನ ತಾವೇ ತಮಗರಿವಿಲ್ಲದಂತೆ ಕುಡಿಯುತ್ತಿದ್ದಾರೆ. ಇದೀಗ ಕಲುಷಿತ ನೀರು ನಾಲೆ ಸೇರುತ್ತಿದ್ದು, ತುಮಕೂರು ಜನರು ಇದೇ ನೀರನ್ನ ಕುಡಿಯುವಂತಹ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ ಎಂಬುದು ಸಾರ್ವಜನಿಕರ ಆರೋಪ.

    ನಗರದ ಯುಜಿಡಿ ಕೊಳಚೆ ನೀರು ಹಾಗೂ ಚರಂಡಿಯ ನೀರು ರಾಜಕಾಲುವೆ ಮೂಲಕ ಹಳ್ಳಗಳ ಮೂಲಕ ಹರಿದು ನೇರವಾಗಿ ಈಚನೂರು ಬಳಿ ಹೇಮಾವತಿ ನಾಲೆ ಸೇರುತ್ತಿದೆ. ನಗರದ ತ್ಯಾಜ್ಯ ಹಾಗೂ ವಿಷಪೂರಿತ ನೀರು ನಾಲೆಗೆ ಸೇರಿ ನಾಲೆ ಪ್ರದೇಶ ವ್ಯಾಪ್ತಿಯಲ್ಲಿ ಗ್ರಾಮಗಳಿಗೆ ಕೃಷಿ ಹಾಗೂ ಕುಡಿಯಲು ಬಳಕೆಯಾಗುತ್ತದೆ. ತುಮಕೂರು ನಗರ ಸೇರಿದಂತೆ ಗ್ರಾಮಾಂತರದ ಜನರೂ ಸಹ ಇದೆ ನೀರನ್ನ ಬಳಸಬೇಕಿದೆ.

    ತಿಪಟೂರು ನಗರಸಭೆಯ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲಾಡಳಿತ ತ್ಯಾಜ್ಯದ ನೀರು ಹೇಮೆ ಒಡಲು ಸೇರದಂತೆ ಕ್ರಮವಹಿಸಬೇಕು ಸಾರ್ವಜನಿಕರಿಗೆ ಶುದ್ದ ಹೇಮಾವತಿ ನೀರು ದೊರೆಯುವಂತೆ ಮಾಡಬೇಕಿದೆ.

  • ಲಾಸ್ ಮಾಡಿದವನಲ್ಲಿ ಹಣವಿಲ್ಲದಿದ್ರೆ, ಬೆಂಕಿ ಇಡು ಎಂದವನ ಬಳಿ ವಸೂಲಿ ಮಾಡ್ತೀವಿ: ಮಾಧುಸ್ವಾಮಿ

    ಲಾಸ್ ಮಾಡಿದವನಲ್ಲಿ ಹಣವಿಲ್ಲದಿದ್ರೆ, ಬೆಂಕಿ ಇಡು ಎಂದವನ ಬಳಿ ವಸೂಲಿ ಮಾಡ್ತೀವಿ: ಮಾಧುಸ್ವಾಮಿ

    ಹಾಸನ: ನಷ್ಟ ಮಾಡಿದವನ ಬಳಿ ಹಣವಿಲ್ಲದಿದ್ದರೆ ಬೆಂಕಿ ಇಡು ಎಂದು ಹೇಳಿದವನ ಬಳಿ ವಸೂಲಿ ಮಾಡುತ್ತೇವೆ ಎಂದು ಬೆಂಗಳೂರಿನ ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.

    ಜಿಲ್ಲೆಯ ಗೊರೂರಿನಲ್ಲಿ ಹೇಮಾವತಿ ನದಿಗೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, ಲಾಸ್ ಮಾಡಿದವರು, ಪ್ರಚೋದನೆ ಮಾಡಿದವರು, ಪಿತೂರಿ ಮಾಡಿದವರಿಂದ ಆಗಿರುವ ನಷ್ಟದ ವಸೂಲಿ ಮಾಡುತ್ತೇವೆ ಎಂದರು.

    ಡಿಜೆ ಹಳ್ಳಿಯಂಥ ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆಗಳನ್ನು ಬ್ಯಾನ್ ಮಾಡಲು ಕರ್ನಾಟಕದಲ್ಲಿ 1981 ರಲ್ಲಿ ಕಾಯ್ದೆ ಮಾಡಿದ್ದೆವು. ಅದರ ಪ್ರಕಾರ ಕಮಿಷನ್ ನೇಮಕ ಮಾಡಬೇಕಾಗಿದೆ. ಯಾರು ಪ್ರಚೋದನೆ ಮಾಡಿದ್ದಾರೆ. ಯಾರು ಸಂಘಟನೆ ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ರಾಜ್ಯ ಸರ್ಕಾರ ನಡೆಸುವಾಗ ಎಮೋಷನಲ್ ಆಗಿ ಮಾತನಾಡಲು ಆಗಲ್ಲ. ಪೊಲೀಸರು ಸಾಕ್ಷ್ಯಾಧಾರ ಕಲೆ ಹಾಕುತ್ತಿದ್ದು, ಅವರು ನ್ಯಾಯಾಲಯಕ್ಕೆ ದಾಖಲೆ ಒದಗಿಸಲಿದ್ದಾರೆ ಎಂದು ತಿಳಿಸಿದರು.

    ಸಿದ್ದರಾಮಯ್ಯ ಅವರು ಈ ಗಲಭೆಗೆ ಸಂಬಂಧಿಸಿದಂತೆ ಇನ್ನೂ ಎರಡು ಮೂರು ವಿಷಯ ಸೇರಿಸಿಕೊಳ್ಳಲು ಹೇಳಿದ್ದಾರೆ. ಸದ್ಯಕ್ಕೆ ಆ ವಿಷಯ ನಮ್ಮ ಮುಂದೆ ಇಲ್ಲ. ತಪ್ಪು ಮಾಡಿದವರನ್ನು ರಕ್ಷಣೆ ಮಾಡುವ ಮಾತೇ ಇಲ್ಲ. ನಾವು ಪಬ್ಲಿಕ್ ಪ್ರಾಪರ್ಟಿಗೆ ಸಂಬಂಧಿಸಿದ ಕಾಯ್ದೆ ಅನ್ವಯ ಹಾನಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆ ಕಾಯಿದೆಯಲ್ಲಿ ಸಾಕಷ್ಟು ಶಕ್ತಿ ಇಲ್ಲ ಎಂದರೇ ಈ ವಿಚಾರದಲ್ಲಿ ಉತ್ತರ ಪ್ರದೇಶದ ಕಾನೂನು ಏನಿದೆ ಅದನ್ನೂ ಪರಿಶೀಲಿಸಿ, ಇನ್ನೇನಾದರೂ ಕಾಯ್ದೆಯಲ್ಲಿ ತಿದ್ದುಪಡಿ ಮಾಡಬಹುದಾ ಎಂಬುದನ್ನು ನೋಡಿ ನಷ್ಟ ವಸೂಲಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

  • ಹೇಮಾವತಿ, ಕಾವೇರಿ ನದಿಗೆ ತಡೆಗೊಡೆ- ಸಚಿವ ಗೋಪಾಲಯ್ಯ ಭರವಸೆ

    ಹೇಮಾವತಿ, ಕಾವೇರಿ ನದಿಗೆ ತಡೆಗೊಡೆ- ಸಚಿವ ಗೋಪಾಲಯ್ಯ ಭರವಸೆ

    ಹಾಸನ: ರಾಮನಾಥಪುರ ಪಟ್ಟಣದಿಂದ ಹಾದು ಹೋಗಿರುವ ಹೇಮಾವತಿ, ಕಾವೇರಿ ನದಿಯಿಂದ ಹಾನಿಯಾಗದಂತೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಭರವಸೆ ನೀಡಿದರು.

    ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸೂಚನೆಯಂತೆ ರಾಮನಾಥಪುರ ನೆರೆ ಹಾವಳಿ ಪ್ರದೇಶದ ಪರಿಶೀಲನೆಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹೇಮಾವತಿ, ಕಾವೇರಿ ನದಿಯಿಂದ ಆಗಿರುವಂತಹ ಹಾನಿಯನ್ನು ಕಂಡಿದ್ದು ಮುಂದಿನ ಕೆಲ ದಿನಗಳಲ್ಲಿ ತಡೆಗೋಡೆ ನಿರ್ಮಿಸಲಾಗುವುದು ಎಂದು ತಿಳಿಸಿದರು.

    ಪ್ರತಿವರ್ಷ ಮಳೆಯ ಅವಾಂತರ ಹೆಚ್ಚುತ್ತಿದ್ದು ಸಕಲೇಶಪುರ ಮಡಿಕೇರಿ ಹಾಗೂ ಇತರ ಜಿಲ್ಲೆಗಳಲ್ಲಿ ಹೆಚ್ಚು ಹಾನಿ ಸಂಭವಿಸುತ್ತಿದೆ. ಇದಕ್ಕೆ ಅರಣ್ಯನಾಶವು ಒಂದು ಕಾರಣವಾಗಿದೆ. ಮೂರ್ನಾಲ್ಕು ತಿಂಗಳು ಬರಬೇಕಾದ ಮಳೆ 8-10 ದಿನದಲ್ಲಿ ಸುರಿಯುತ್ತಿರುವುದರಿಂದ ಇಂತಹ ಅನಾಹುತಗಳು ಸಂಭವಿಸುತ್ತಿವೆ ಎಂದು ಹೇಳಿದರು.

    ಜಿಲ್ಲೆಯ ಜಲಾಶಯಗಳ ಹಿನ್ನೀರಿನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನೀರಿನ ಹರಿವು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಹಾಗೂ ಇತರ ಜಿಲ್ಲೆಗಳಿಗೆ ನಾಲೆಗಳ ಮೂಲಕ ಕೆರೆಕಟ್ಟೆ ತುಂಬಿಸಲು ನೀರನ್ನು ಹರಿ ಬಿಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.

    ರಾಮನಾಥಪುರ ಪಟ್ಟಣಕ್ಕೆ ಹೇಮಾವತಿ, ಕಾವೇರಿ ನೀರು ಉಕ್ಕಿ ಹರಿಯದಂತೆ ತಡೆಗೋಡೆ ನಿರ್ಮಾಣ ನಮ್ಮ ಸರ್ಕಾರದ ಅವಧಿಯಲ್ಲಿ ಪೂರ್ಣಗೊಳಿಸುವುದು ನಿಶ್ಚಿತ. ಸರ್ಕಾರ ಜನರ ಸಂಕಷ್ಟಗಳಿಗೆ ಸೂಕ್ತವಾಗಿ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅರಕಲಗೂಡು ಕ್ಷೇತ್ರದ ಶಾಸಕ ಎ ಟಿ ರಾಮಸ್ವಾಮಿ ಮಾಜಿ ಸಚಿವ ಮಂಜು ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

  • ಹೇಮಾವತಿ ಅಣೆಕಟ್ಟೆಯಿಂದ ನಾಲೆಗೆ ನೀರು ಹರಿಸಿ: ಸಚಿವ ಗೋಪಾಲಯ್ಯ ಸೂಚನೆ

    ಹೇಮಾವತಿ ಅಣೆಕಟ್ಟೆಯಿಂದ ನಾಲೆಗೆ ನೀರು ಹರಿಸಿ: ಸಚಿವ ಗೋಪಾಲಯ್ಯ ಸೂಚನೆ

    ಹಾಸನ: ಈ ಕೂಡಲೇ ಹೇಮಾವತಿ ಅಣೆಕಟ್ಟೆಯಿಂದ ನಾಲೆಗೆ ನೀರು ಹರಿಸುವಂತೆ ಹಾಸನದಲ್ಲಿ ಉಸ್ತುವಾರಿ ಸಚಿವ ಗೋಪಾಲಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ನದಿಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಲವಾರು ಜಿಲ್ಲೆಯ ರೈತರು ನೀರು ಬಿಡಿ ಎನ್ನುತ್ತಿದ್ದಾರೆ. ಹೀಗಾಗಿ ನೀರು ಬಿಡಲು ಆದೇಶ ನೀಡುತ್ತಿರುವುದಾಗಿ ಸಚಿವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಗುಡ್ಡಕುಸಿಯುವುದು, ನೀರು ಹೆಚ್ಚು ಬರುವ ಸ್ಥಳಗಳಿದ್ದರೆ ಕೂಡಲೇ ಜನರನ್ನು ಸ್ಥಳಾಂತರಿಸಲು ಸೂಚಿಸಿದ್ದೇನೆ. ಬೆಳೆ ನಷ್ಟ, ಜೀವಹಾನಿ, ಮನೆ ಬಿದ್ದು ಹೋಗಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಮನೆ ಕಳೆದುಕೊಂಡವರಿಗೆ ತಕ್ಷಣ ಹತ್ತು ಸಾವಿರ ಹಣ ನೀಡಿ, ವರದಿ ಬಂದ ನಂತರ ಮತ್ತಷ್ಟು ಪರಿಹಾರ ನೀಡಲಾಗುವುದು. ಇಂದು ನಾಳೆ ಹಾಸನದಲ್ಲೇ ಇದ್ದು ಕೆಲವು ಸ್ಥಳಗಳಿಗೆ ನಾನೇ ಖುದ್ದು ಭೇಟಿ ನೀಡುತ್ತೇನೆ. ಜಿಲ್ಲೆಯಲ್ಲಿ ಇದುವರೆಗೂ 190ಕ್ಕೂ ಹೆಚ್ಚು ಮನೆ ಬಿದ್ದಿದೆ. ಓರ್ವ ಮಳೆಯಿಂದ ಸಾವನ್ನಪ್ಪಿದ್ದಾರೆ. 2,100 ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಜೋಳದ ಬೆಳೆ ನಷ್ಟವಾಗಿದೆ. 779 ಹೆಕ್ಟೇರ್ ಭತ್ತ ನಾಶವಾಗಿದೆ. ಈ ಎಲ್ಲದರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇನೆ. ಸರ್ಕಾರ ಜಿಲ್ಲೆಯ ಜನರ ಕಷ್ಟಕ್ಕೆ ಸ್ಪಂದಿಸಲಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

  • ವಾರದ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯೋಧ ನೀರಿನಲ್ಲಿ ಮುಳುಗಿ ಸಾವು

    ವಾರದ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯೋಧ ನೀರಿನಲ್ಲಿ ಮುಳುಗಿ ಸಾವು

    ಮಡಿಕೇರಿ: ಈಜಲು ತೆರಳಿದ್ದ ವೇಳೆ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನ ಬಳಿ ನಡೆದಿದೆ.

    ಸೋಮವಾರಪೇಟೆ ತಾಲೂಕಿನ ಬೆಸ್ಸೂರಿನ ನಿವಾಸಿಗಳಾದ ಸೈನಿಕ ಲೋಕೇಶ್ (30) ಹಾಗೂ ಲತೇಶ್ (27) ನೀರಿನಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿಗಳು. ಇಬ್ಬರೂ ಮಧ್ಯಾಹ್ನ ಹೇಮಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದರು.

    ಉತ್ತರಾಖಂಡ್‍ನಲ್ಲಿ ಸೈನಿಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್‍ಗೆ ವಾರದ ಹಿಂದೆಯಷ್ಟೇ ಹಾಸನ ಮೂಲದ ಯುವತಿ ಜೊತೆಗೆ ನಿಶ್ಚಿತಾರ್ಥವಾಗಿತ್ತು. 2009ರಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನೀರಿನಲ್ಲಿ ಮುಳುಗಿರುವ ಲತೇಶ್ ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ತೀವ್ರ ಶೋಧ ಮುಂದುವರೆಸಿದ್ದಾರೆ. ಸ್ಥಳಕ್ಕೆ ಶನಿವಾರಸಂತೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಹೇಮಾವತಿ ನೀರಿಗಾಗಿ ಹೋರಾಟಕ್ಕಿಳಿದ ಸಿದ್ದರಬೆಟ್ಟ ಶ್ರೀಗಳು

    ಹೇಮಾವತಿ ನೀರಿಗಾಗಿ ಹೋರಾಟಕ್ಕಿಳಿದ ಸಿದ್ದರಬೆಟ್ಟ ಶ್ರೀಗಳು

    ತುಮಕೂರು: ಹೇಮಾವತಿ ನೀರಿಗಾಗಿ ಸಿದ್ದರಬೆಟ್ಟ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಹೋರಾಟಕ್ಕೆ ಇಳಿದಿದ್ದಾರೆ. ಮಾಜಿ ಡಿಸಿಎಂ ಜಿ. ಪರಮೇಶ್ವರ ಅವರ ಸ್ವಕ್ಷೇತ್ರ ಕೊರಟಗೆರೆ ತಾಲೂಕಿನ ತೋವಿನಕೆರೆಯ ಸುತ್ತಮುತ್ತಲಿನ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಬೃಹತ್ ಬೈಕ್  ರ‍್ಯಾಲಿ ನಡೆಸಿದರು.

    ಸ್ವಾಮೀಜಿ ನೇತೃತ್ವದಲ್ಲಿ ತೋವಿನಕೆರೆಯಿಂದ ರ‍್ಯಾಲಿ ಹೊರಟ ನೂರಾರು ಪ್ರತಿಭಟನಾಕಾರರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಬೈಕ್ ರ‍್ಯಾಲಿ ಅಂತ್ಯಗೊಳಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕಳೆದ ಹತ್ತು- ಹದಿನೈದು ವರ್ಷದಿಂದಲೂ ಈ ಭಾಗದಲ್ಲಿ ಸರಿಯಾಗಿ ಮಳೆಯಾಗಿಲ್ಲ. ಹಾಗಾಗಿ ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಉಂಟಾಗಿದೆ. ಜಾನುವಾರುಗಳಿಗೂ ಮೇವಿನ ತೊಂದರೆ ಆಗಿದೆ. ಹೀಗಾಗಿ ಸಮಸ್ಯೆಯನ್ನು ಪರಿಹಾರ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಜಿಲ್ಲೆಯ ತಿಪಟೂರು, ತುರುವೇಕೆರೆ, ಗುಬ್ಬಿ, ಕುಣಿಗಲ್ ಸೇರಿದಂತೆ ಇತರೆ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರನ್ನು ಹರಿಸಲಾಗುತ್ತಿದೆ. ತೋವಿನಕೆರೆ ಸುತ್ತಮುತ್ತಲಿನ ಭಾಗಕ್ಕೆ ನೀರು ಬಿಟ್ಟಿಲ್ಲ. ಮಳೆಯೂ ಬಂದಿಲ್ಲ. ಕೂಡಲೇ ಹೇಮಾವತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಇಂದು ಮಾಡಿದ ಹೋರಾಟ ಸಾಂಕೇತಿಕವಾಗಿದ್ದು ನೀರು ಹರಿಸದೇ ಇದ್ದರೆ ಮುಂದಿನ ದಿನದಲ್ಲಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ಕೊಟ್ಟಿದ್ದಾರೆ.

  • ಗಮನಿಸಿ, ಯಾವುದೇ ಕ್ಷಣದಲ್ಲಿ  ಕೆಆರ್‌ಎಸ್‌ನಿಂದ ನೀರು ಬಿಡುಗಡೆ

    ಗಮನಿಸಿ, ಯಾವುದೇ ಕ್ಷಣದಲ್ಲಿ ಕೆಆರ್‌ಎಸ್‌ನಿಂದ ನೀರು ಬಿಡುಗಡೆ

    ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಯಿಂದ ಯಾವ ಕ್ಷಣದಲ್ಲಾದರೂ ನೀರು ಹೊರಗೆ ಬಿಡುವ ಸಾಧ್ಯತೆಯಿದ್ದು ನದಿ ಪಾತ್ರದ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

    ಕಾವೇರಿ ನದಿ ಪಾತ್ರದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಇಂದು ಸಂಜೆಯ ವೇಳೆಗೆ 1 ಲಕ್ಷ ಕ್ಯೂಸೆಕ್ ಅಧಿಕ ಪ್ರಮಾಣದಲ್ಲಿ ನೀರು ಜಲಾಶಯಕ್ಕೆ ಬರುತ್ತಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ನೀರನ್ನು ಬಿಡುವ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಜನ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕೆಆರ್‌ಎಸ್‌ ಕಾರ್ಯಪಾಲಕ ಎಂಜಿನಿಯರ್ ಸೂಚನೆ ನೀಡಿದ್ದಾರೆ.

    ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ ಇಂದು 100 ಅಡಿ ದಾಟಿದೆ. ಒಂದೂವರೆ ದಿನದಲ್ಲಿ 10 ಅಡಿ ಏರಿಕೆಯಾಗಿದೆ.

    124.80 ಅಡಿ ಗರಿಷ್ಠ ಎತ್ತರದ ಡ್ಯಾಂನಲ್ಲಿ ಪ್ರಸ್ತುತ 102.30 ಅಡಿ ನೀರು ಸಂಗ್ರಹಗೊಂಡಿದೆ. ಗುರುವಾರ ಬೆಳಗ್ಗೆ ಜಲಾಶಯದಲ್ಲಿ 91 ಅಡಿ ನೀರು ಸಂಗ್ರಹಗೊಂಡಿತ್ತು. ಕೊಡಗಿನಲ್ಲಿ ನಿರಂತರ ಮಳೆ ಜೊತೆಗೆ ಹೇಮಾವತಿ ಜಲಾಶಯದಿಂದ ನೀರನ್ನು ಹೊರಬಿಟ್ಟ ಪರಿಣಾಮ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

    ಇಂದು ಮಧ್ಯಾಹ್ನ 12 ಗಂಟೆಯಲ್ಲಿ 60 ಸಾವಿರ ಕ್ಯೂಸೆಕ್ ಒಳ ಹರಿವು ಇದ್ದರೆ ಮಧ್ಯಾಹ್ನ 2 ಗಂಟೆ ವೇಳೆಗೆ 63,211 ಕ್ಯೂಸೆಕ್‍ಗೆ ಏರಿಕೆಯಾಗಿತ್ತು. ಇಂದು ಸಂಜೆಯ ವೇಳೆಗೆ 1 ಲಕ್ಷ ಕ್ಯೂಸೆಕ್ ಗೆ ಏರಿಕೆಯಾಗಿದೆ. ಸದ್ಯ 469 ಕ್ಯೂಸೆಕ್ ನೀರನ್ನು ಮಾತ್ರ ಜಲಾಶಯದಿಂದ ಹೊರಬಿಡಲಾಗುತ್ತಿದೆ.

    ಪಶ್ಚಿಮ ಘಟ್ಟ, ಮಲೆನಾಡು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹಾರಂಗಿಯಿಂದ 30 ಸಾವಿರಕ್ಕೂ ಹೆಚ್ಚು, ಹೇಮಾವತಿಯಿಂದ 5 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಪರಿಣಾಮ ಕೆಆರ್‌ಎಸ್‌ ನೀರಿನ ಮಟ್ಟ 100 ಅಡಿ ದಾಟಿದೆ.

    ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು Cubic feet per Second ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.