Tag: ಹೇಳಿಕೆ

  • ನಟಿಯರ ಬಗ್ಗೆ ಗಾಯಕ ಎಸ್‍ಪಿಬಿ ಶಾಕಿಂಗ್ ಹೇಳಿಕೆ

    ನಟಿಯರ ಬಗ್ಗೆ ಗಾಯಕ ಎಸ್‍ಪಿಬಿ ಶಾಕಿಂಗ್ ಹೇಳಿಕೆ

    ಹೈದಾರಾಬಾದ್: ಬಹುಭಾಷಾ ಗಾಯಕ, ನಟ ಎಸ್‍ಪಿ ಬಾಲಸುಬ್ರಮಣ್ಯಂ ಅವರು ಕಾರ್ಯಕ್ರಮವೊಂದರಲ್ಲಿ ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

    ಇತ್ತೀಚೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಎಸ್‍ಪಿಬಿ ಅವರು ನಟಿಯರು ಧರಿಸುವ ಉಡುಪಿನ ಬಗ್ಗೆ ಪ್ರಶ್ನಿಸಿದ್ದಾರೆ. ನಟಿಯರು ತಾವು ಧರಿಸುವ ಉಡುಪಿನಿಂದ ಅವರಿಗೆ ಕೆಲಸ ಸಿಗುತ್ತದೆ ಎಂದು ತಿಳಿದುಕೊಂಡಿರುತ್ತಾರೆ ಎಂದು ನನಗೆ ಅನ್ನಿಸುತ್ತದೆ ಎಂದು ಹೇಳುವ ಮೂಲಕ ನಟಿಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಈಗಿನ ಕಾಲದಲ್ಲಿ ನಟಿಯರಿಗೆ ಸಿನಿಮಾ ಕಾರ್ಯಕ್ರಮಗಳಲ್ಲಿ ಯಾವ ರೀತಿಯ ಉಡುಪು ಧರಿಸಬೇಕು ಎಂದು ತಿಳಿದಿಲ್ಲ. ನಟಿಯರ ವರ್ತನೆ ನೋಡಿ ಇದು ಅವರ ಮುಗ್ಧತೆ ಎಂದು ತಿಳಿದುಕೊಳ್ಳಬೇಕೋ? ಅಥವಾ ಮೈ ಕಾಣುವಂತಹ ಬಟ್ಟೆ ಧರಿಸಿದ್ದರೆ ಮಾತ್ರ ನಾಯಕರು ಹಾಗೂ ನಿರ್ದೇಶಕರು ಸಿನಿಮಾಗಳಲ್ಲಿ ಅವಕಾಶ ನೀಡುತ್ತಾರೆ ಎಂದು ಅವರು ಭಾವಿಸುತ್ತಾರೋ? ಗೊತ್ತಿಲ್ಲ ಎಂದು ಎಸ್‍ಪಿಬಿ ಅವರು ಹೇಳಿದ್ದಾರೆ.

    ನನ್ನ ಈ ಹೇಳಿಕೆಗೆ ನಟಿಯರು ನನ್ನ ಮೇಲೆ ಕೋಪ ಮಾಡಿಕೊಂಡರು ಪರವಾಗಿಲ್ಲ. ಏಕೆಂದರೆ ಇಲ್ಲಿ ಸಾಕಷ್ಟು ಜನರಿಗೆ ತೆಲುಗು ತಿಳಿಯಲ್ಲ. ಹಾಗಾಗಿ ಅವರಿಗೆ ನನ್ನ ಹೇಳಿಕೆ ಅರ್ಥವಾಗಿರುವುದಿಲ್ಲ ಎಂದು ಹೇಳಿದ್ದಾರೆ.

    ಎಸ್‍ಪಿ ಬಾಲಸುಬ್ರಮಣ್ಯಂ ಅವರು ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ಅತಿ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಎಸ್‍ಪಿಬಿ ಒಟ್ಟು 16 ಭಾಷೆಯಲ್ಲಿ 40,000 ಹಾಡನ್ನು ಹಾಡಿದ್ದಾರೆ. ಎಸ್‍ಪಿಬಿ ಅವರಿಗೆ ಅತ್ಯುತ್ತಮ ಗಾಯಕನಾಗಿ ಒಟ್ಟು 6 ನ್ಯಾಷನಲ್ ಫಿಲ್ಮ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಬಾಲಿವುಡ್ ಹಾಡುಗಳಿಗೂ ಕೂಡ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಹಾರ್ದಿಕ್ ಪಾಂಡ್ಯ ಹೇಳಿಕೆಗೆ ಟಾಂಗ್ ಕೊಟ್ಟ ರಾಖಿ ಸಾವಂತ್

    ಹಾರ್ದಿಕ್ ಪಾಂಡ್ಯ ಹೇಳಿಕೆಗೆ ಟಾಂಗ್ ಕೊಟ್ಟ ರಾಖಿ ಸಾವಂತ್

    ಮುಂಬೈ: ಭಾರತ ಕ್ರಿಕೆಟ್ ತಂಡದ ಅಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆಗೆ ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಟಾಂಗ್ ನೀಡಿದ್ದಾರೆ.

    ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಭಾರತ ತಂಡದ ಕ್ರಿಕೆಟ್ ಆಟಗಾರರಾದ ಕೆ.ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಭಾಗವಹಿಸಿದ್ದರು. ಈ ವೇಳೆ ಹಾರ್ದಿಕ್ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಈಗ ರಾಖಿ ಸಾವಂತ್ ಟಾಂಗ್ ಕೊಟ್ಟಿದ್ದಾರೆ.

    ಇತ್ತೀಚೆಗೆ ರಾಖಿ ಸಾವಂತ್ ‘ಬಿ ವಿತ್ ಭೇಟಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, “ಇತ್ತೀಚೆಗೆ ನಮ್ಮ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅವರು ನಾನು ಹುಡುಗಿರನ್ನು ಹಿಂದೆ ಕಡೆಯಿಂದ ನೋಡುತ್ತೇನೆ. ನನಗೆ ಇಷ್ಟ ಆದರೆ ಆಗ ನಾನು ನನ್ನ ತಾಯಿ ಬಳಿ ಹೋಗಿ ನಾನು ಇಂದು ಮಾಡಿ ಬಂದಿದ್ದೇನೆ ಎಂದು ಹೇಳುತ್ತೇನೆ” ಎಂದು ಅವರು ಕಾರ್ಯಕ್ರಮದಲ್ಲಿ ಹೇಳಿದ್ದರು.

    ಹಾರ್ದಿಕ್ ಅವರ ಈ ಹೇಳಿಕೆ ನನಗೆ ತುಂಬಾ ಬೇಸರವಾಯಿತು. ಈಗ ನಾನು ಹಾರ್ದಿಕ್ ಅವರಿಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ. “ಹಾರ್ದಿಕ್ ಅವರೇ ಕೆಲವು ಬಾರಿ ಹುಡುಗರು ಹಿಂದಿನಿಂದ ಚೆನ್ನಾಗಿ ಕಾಣಿಸುತ್ತಾರೆ. ನೀವು ನೋಡುವಾಗ ಹುಡುಗಿ ಬದಲು ಅದು ಹುಡುಗ ಆಗುತ್ತಿದ್ದರೆ, ಆಗ ನೀವು ಏನು ಮಾಡುತ್ತೀದ್ದೀರಿ?” ಎಂದು ಪ್ರಶ್ನಿಸುವ ಮೂಲಕ ರಾಖಿ ಸಾವಂತ್ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ಕರಣ್ ಜೋಹರ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರಿಗೆ ಕೇಳಿದ ಪ್ರಶ್ನೆಗಳಿಗೆ ಮನಸ್ಸಿಗೆ ಬಂದಂತೆ ಹಿಂದೆ ಮುಂದೆ ನೋಡದೆ ಇಬ್ಬರು ಆಟಗಾರರು ಉತ್ತರಿಸಿದ್ದರು. ಅಲ್ಲದೇ ಸಚಿನ್ ಹಾಗೂ ಕೊಹ್ಲಿ ಇಬ್ಬರಲ್ಲಿ ಯಾರು ಬೆಟರ್ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಹಾರ್ದಿಕ್ ಹಾಗೂ ಕೆಎಲ್ ರಾಹುಲ್ ಹಿಂದು ಮುಂದು ನೋಡದೇ ಕೊಹ್ಲಿ ಎಂದು ಉತ್ತರಿಸಿದ್ದರು. ಅಲ್ಲದೇ ಮಹಿಳೆಯರು ಹಾಗೂ ಸೆಕ್ಸ್ ಜೀವನದ ಬಗ್ಗೆ ಕೇಳಿದ ಪ್ರಶ್ನೆಯ ಬಗ್ಗೆ ಕ್ಷಣ ಕಾಲ ಕೂಡ ಯೋಚಿಸದೇ ಹಾರ್ದಿಕ್ ಉತ್ತರಿಸಿದ್ದರು. ಇದರಿಂದ ಹಲವು ಕ್ರಿಕೆಟ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹಾರ್ದಿಕ್ ವಿರುದ್ಧ ಟೀಕೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಮ ಆಯ್ತು, ಈಗ ಸೀತೆ ಸರದಿ – ದನದ ಮಾಂಸ ತಿನ್ತಿದ್ದಳು: ಚಿಂತಕಿ ಕಲೈಸೆಲ್ವಿ

    ರಾಮ ಆಯ್ತು, ಈಗ ಸೀತೆ ಸರದಿ – ದನದ ಮಾಂಸ ತಿನ್ತಿದ್ದಳು: ಚಿಂತಕಿ ಕಲೈಸೆಲ್ವಿ

    ಮೈಸೂರು: ರಾಮಾಯಣದ ರಾಮ ಆಯ್ತು ಇದೀಗ ಸೀತೆಯ ಸರದಿ. ರಾಮ ಮದ್ಯವ್ಯಸನಿ ಎಂದು ವಿಚಾರವಾದಿ ಕೆ.ಎಸ್. ಭಗವಾನ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಈಗ ಮತ್ತೊಂದು ವಿವಾದ ಸೃಷ್ಟಿಯಾಗಿದೆ.

    ಸೀತೆ ಜಿಂಕೆ, ಹಂದಿ, ದನದ ಮಾಂಸ ತಿಂದಿದ್ದಾಳೆ ಎಂದು ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಪೆರಿಯಾರ್ ವಾದಿ ಚಿಂತಕಿ ಕಲೈಸೆಲ್ವಿ ಹೇಳಿಕೆ ನೀಡಿದ್ದಾರೆ. ಸೀತೆ ಅರಣ್ಯದಲ್ಲಿ ಇದ್ದಾಗ ದನದ ಮಾಂಸ ತಿಂದಿದ್ದಾಳೆ. ದನದ ಮಾಂಸವನ್ನು ಹಸುವಿನ ತುಪ್ಪದಲ್ಲಿ ಉರಿದು ತಿಂದಿದ್ದಾಳೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮ ಒಬ್ಬ ಕುಡುಕ, ಮಾಂಸ ತಿನ್ತಿದ್ದ- ಮತ್ತೆ ಕೆಂಗಣ್ಣಿಗೆ ಗುರಿಯಾದ ಪ್ರೊ. ಭಗವಾನ್

    ವೇದಗಳ ಕಾಲದಲ್ಲಿ ಮಹಿಳೆಯರಿಗೆ ಹೆಚ್ಚಿನ ಮಹತ್ವ ಇತ್ತು ಅಂತಾರೆ. ಎಲ್ಲಿತ್ತು ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ವರ್ಣಾಶ್ರಮ ಧರ್ಮವನ್ನು ಒಪ್ಪಿಕೊಂಡು ವರ್ಣಾಶ್ರಮ ಶ್ರೇಷ್ಠ, ಬ್ರಾಹ್ಮಣರು ಶ್ರೇಷ್ಠ ಎಂದು ಒಪ್ಪಿಕೊಳ್ಳಬೇಕು. ಇಲ್ಲವಾದರೆ ಅವರನ್ನು ಕೀಳಾಗಿ ನೋಡುತ್ತಿದ್ದರು. ವಿಷ್ಣು ಅಷ್ಟೊಂದು ಅವತಾರ ಎತ್ತಿದ್ದಾನೆ. ಆದರೆ ಶಿವ ಯಾಕೆ ಎತ್ತಿಲ್ಲ. ವಿಷ್ಟು ದೇವಾಲಯಗಳು ವಿಜೃಂಭಣೆಯಿಂದ ಕೂಡಿರುತ್ತವೆ. ಶಿವನ ದೇವಾಲಯ ಸಿಂಪಲ್ಲಾಗಿರಲು ಕಾರಣ ಏನು. ಇದು ಮೌಢ್ಯವನ್ನು ಹೆಚ್ಚಿಸುವ ಕೆಲಸ ಎಂದು ಕಲೈಸೆಲ್ವಿ ಹೇಳಿದ್ದಾರೆ.

    ಈ ಹಿಂದೆ ವಿಚಾರವಾದಿ ಪ್ರೊಫೆಸರ್ ಕೆ. ಎಸ್ ಭಗವಾನ್ ಅವರು ರಾಮ ಮಂದಿರ ಏಕೆ ಬೇಡ? ಎಂಬ ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ರಾಮನೊಂದಿಗೆ ಮಹಾತ್ಮ ಗಾಂಧೀಜಿ ಹಾಗೂ ಚಾಮುಂಡಿ ದೇವಿಯನ್ನು ಕೂಡ ಟೀಕಿಸಿದ್ದು, ಭಾರೀ ಚರ್ಚೆಗೆ ಒಳಗಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ರವಿಶಾಸ್ತ್ರಿ

    ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ರವಿಶಾಸ್ತ್ರಿ

    ಸಿಡ್ನಿ: ಆಸೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಪಡೆದು ದಾಖಲೆ ನಿರ್ಮಿಸಿದ ಕೆಲವೇ ಕ್ಷಣಗಳಲ್ಲಿ ತಂಡದ ಕೋಚ್ ರವಿಶಾಸ್ತ್ರಿ ವಿವಾದಾತ್ಮಕ ಹೇಳಿಕೆ ನೀಡಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

    ಸಿಡ್ನಿ ಟೆಸ್ಟ್ ಪಂದ್ಯದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರವಿಶಾಸ್ತ್ರಿ, ನನಗೆ ಈ ಟೆಸ್ಟ್ ಸರಣಿಯ ಗೆಲುವು ಎಷ್ಟು ಸಮಾಧಾನ ತಂದಿದೆ ಎಂದರೆ, 1983 ವಿಶ್ವಕಪ್ ಮತ್ತು 1985ರ ವಿಶ್ವ ಚಾಂಪಿಯನ್‍ಶಿಪ್ ಗೆಲುವಿಗಿಂತ ದೊಡ್ಡದು. ಏಕೆಂದರೆ ಇದು ಕ್ರಿಕೆಟ್‍ನ ಟೆಸ್ಟ್ ಮಾದರಿಯಲ್ಲಿ ಪಡೆದ ಗೆಲುವಾಗಿದೆ ಎಂದು ಹೇಳಿದ್ದಾರೆ.

    ರವಿಶಾಸ್ತ್ರಿ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುನಿಲ್ ಗವಾಸ್ಕರ್, ರವಿಶಾಸ್ತ್ರಿ ಅವರ ಹೇಳಿಕೆ ಟೆಸ್ಟ್ ಕ್ರಿಕೆಟ್ ಸಂಬಂಧಿಸಿದ್ದು, 1983 ಮತ್ತು 1985 ರ ಗೆಲುವು ಸಿಮೀತ ಓವರ್ ಗಳ ಟೂರ್ನಿಗಳ ಭಾಗವಾಗಿದ್ದು, ಅವರಿಗೆ ಆಸೀಸ್ ಟೆಸ್ಟ್ ಸರಣಿ ಬಹುದೊಡ್ಡ ಗೆಲುವಾಗಿದೆ. ಏಕೆಂದರೆ ಈ ಹಿಂದಿನ ಗೆಲುವುಗಳು ಕ್ರಿಕೆಟ್ 50 ಓವರ್ ಗಳ ಮಾದರಿಯಲ್ಲಿ ಲಭಿಸಿತ್ತು. ಆದರೆ ಟೆಸ್ಟ್ ಮಾದರಿಯಲ್ಲಿ ಈ ಗೆಲುವು ತಂಡದ ಕೋಚ್ ಆಗಿರುವ ಅವರಿಗೆ ಹೆಚ್ಚು ಸಂತಸ ತಂದಿದೆ. ಆದ್ದರಿಂದಲೇ ರವಿಶಾಸ್ತ್ರಿ ಈ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ತಮ್ಮ ಹೇಳಿಕೆ ವೇಳೆ ಕ್ರಿಕೆಟ್ ದೇವರ ಹೆಸರನ್ನು ಪ್ರಸ್ತಾಪ ಮಾಡಿರುವ ಕೋಚ್ ರವಿಶಾಸ್ತ್ರಿ, ಈ ತಂಡ ದೇವರು, ದೇವಾಂಶ ಸಂಭೂತರು, ಹಿರಿಯ, ಕಿರಿಯ ಆಟಗಾರರು ಎಂಬ ಬೇದ ಇರುವ ತಂಡವಲ್ಲ. ದೇಶಕ್ಕಾಗಿ ಆಡುವ ಯುವ ಆಟಗಾರರ ತಂಡವಾಗಿದೆ ಎಂದು ಪರೋಕ್ಷವಾಗಿ ತಮ್ಮ ವಿರುದ್ಧ ಟೀಕೆ ಮಾಡಿದವರಿಗೆ ಟಾಂಗ್ ನೀಡಿದ್ದಾರೆ.

    ರವಿಶಾಸ್ತ್ರಿ ಅವರ ಹೇಳಿಕೆಗೆ ಕೆಲ ವಿಶ್ಲೇಷಕರು ಸಾಥ್ ನೀಡಿ ಸ್ಪಷ್ಟನೆ ನೀಡಿದ್ದರೆ, ಅಭಿಮಾನಿಗಳು ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆರೋಗ್ಯ ಸಚಿವರನ್ನು ಮೊದ್ಲು ನಿಮಾನ್ಸ್‌ಗೆ ಸೇರಿಸ್ಬೇಕು: ವಾಟಾಳ್ ನಾಗರಾಜ್

    ಆರೋಗ್ಯ ಸಚಿವರನ್ನು ಮೊದ್ಲು ನಿಮಾನ್ಸ್‌ಗೆ ಸೇರಿಸ್ಬೇಕು: ವಾಟಾಳ್ ನಾಗರಾಜ್

    ಮೈಸೂರು: ಆರೋಗ್ಯ ಸಚಿವರಾದ ಶಿವಾನಂದ ಪಾಟೀಲರ ಆರೋಗ್ಯವೇ ಸರಿಯಿಲ್ಲ. ಅವರಿಗೆ ತಲೆ ಕೆಟ್ಟು ಅರೆ ಹುಚ್ಚರಾಗಿರಬೇಕು. ಹೀಗಾಗಿ ಮೊದಲು ಅವರನ್ನೇ ನಿಮಾನ್ಸ್ ಆಸ್ಪತ್ರೆಗೆ ಸೇರಿಸಬೇಕೆಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ವ್ಯಂಗ್ಯವಾಡಿದ್ದಾರೆ.

    ಸುಳ್ವಾಡಿ ಗ್ರಾಮಕ್ಕೆ ಬಂದು ನಾನು ಏನು ಮಾಡಬೇಕಿತ್ತು ಎಂಬ ಆರೋಗ್ಯ ಸಚಿವರ ಉಡಾಫೆಯ ಹೇಳಿಕೆಗೆ ಕಿಡಿಕಾರಿದ ವಾಟಾಳ್, ಆರೋಗ್ಯ ಸಚಿವರಿಗೆ ಆರೋಗ್ಯ ಸರಿಯಿಲ್ಲ. ಅವರಿಗೆ ತಲೆ ಕೆಟ್ಟು ಅರೆಹುಚ್ಚರಾಗಿ ಆ ರೀತಿ ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಮೊದಲು ಅವರನ್ನು ನಿಮಾನ್ಸ್ ಆಸ್ಪತ್ರೆಗೆ ಸೇರಿಸಬೇಕಿತ್ತು. ಸುಳ್ವಾಡಿ ಮಾರಮ್ಮ ದೇವಾಲಯದ ಪ್ರಸಾದ ತಿಂದು ಭಕ್ತರು ಸಾವನ್ನಪ್ಪಿದ್ದ ವಿಚಾರ ತಿಳಿದು ಕೂಡಲೇ ಅವರು ಹೆಲಿಕಾಪ್ಟರ್ ನಲ್ಲಿ ಬರಬೇಕಿತ್ತು. ಯಾಕೆ ಅವರಿಗೆ ಹೆಲಿಕಾಪ್ಟರ್ ನಲ್ಲಿ ಬರಲು ಸಾಧ್ಯವಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

    ನಮ್ಮಲ್ಲಿ ತುಂಬಾ ಜನ ನಿಮಾನ್ಸ್ ನಲ್ಲಿ ಇರಬೇಕಾದವರು, ಇಂದು ಸಚಿವರಾಗಿದ್ದಾರೆ. ಆ ಬಗ್ಗೆ ಮಾತನಾಡೋದು ಬೇಡ. ಬೇಜವಾಬ್ದಾರಿಯುತ ಹೇಳಿಕೆ ನೀಡಿರುವ ಆರೋಗ್ಯ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 44 ಗಂಟೆ ತಡವಾಗಿ ಬಂದ್ರು ? ನಾ ಬಂದು ಏನ್ಮಾಡಬೇಕಿತ್ತೆಂದು ಆರೋಗ್ಯ ಸಚಿವರ ಉಡಾಫೆ

    ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ಆಗಬೇಕು. ಈ ಬಗ್ಗೆ ಸರ್ಕಾರಕ್ಕೆ ಒತ್ತಾಯ ಮಾಡಲು ನಾನು ಪ್ರತಿಭಟನೆ ನಡೆಸುತ್ತೇನೆ. ಅಲ್ಲದೇ ಸುವರ್ಣಸೌಧದ ಮುಂದೆ ಉನ್ನತ ಮಟ್ಟದ ತನಿಖೆಗಾಗಿ ಪ್ರತಿಭಟನೆ ಮಾಡುತ್ತೇನೆ. ಇದು ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ಆಗಬೇಕು. ಪ್ರಕರಣ ಸಂಬಂಧ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕೆಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ ರಥಯಾತ್ರೆ ತಡೆಯುವವರ ತಲೆಗಳು, ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತೆ: ಬಿಜೆಪಿ ನಾಯಕಿ

    ಬಿಜೆಪಿ ರಥಯಾತ್ರೆ ತಡೆಯುವವರ ತಲೆಗಳು, ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತೆ: ಬಿಜೆಪಿ ನಾಯಕಿ

    ಕೋಲ್ಕತಾ: ರಾಜ್ಯದಲ್ಲಿ ನಡೆಯುವ ಬಿಜೆಪಿ ರಥಯಾತ್ರೆಗೆ ಅಡ್ಡಿಪಡಿಸುವವರ ತಲೆಗಳು ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮಹಿಳಾ ಘಟಕದ ಮುಖ್ಯಸ್ಥೆ ಲಾಕೆಟ್ ಚಟರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಸಿನಿಮಾದಿಂದ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿರುವ ಲಾಕೆಟ್ ಚಟರ್ಜಿ ಶನಿವಾರ ಮಲ್ಡಾ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಪ್ರಜಾಪ್ರಭುತ್ವದ ಉಳಿವಿಗಾಗಿ ಬಿಜೆಪಿ ರಥಯಾತ್ರೆ ಮಾಡುತ್ತಿದೆ. ಅಲ್ಲದೇ ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ. ಈ ರಥಯಾತ್ರೆಯನ್ನು ಯಾರೇ ತಡೆಯಲು ಮುಂದಾದರೆ, ಅವರ ತಲೆಗಳೇ ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮುಂಬರುವ ಲೋಕಸಭಾ ಚುನಾವಣೆಯ ಅಂಗವಾಗಿ ರಾಜ್ಯದಲ್ಲಿ ಡಿಸೆಂಬರ್ 5, 6 ಮತ್ತು 7 ರಂದು 42 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ರಥಯಾತ್ರೆ ಸಂಚರಿಸಲಿದೆ. ಈ ಯಾತ್ರೆಯನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಅಲ್ಲದೇ ರಥಯಾತ್ರೆಯ ಸಮಾರೋಪ ಸಮಾರಂಭವನ್ನು ಕೋಲ್ಕತಾದಲ್ಲಿ ನಡೆಸಲು ತೀರ್ಮಾನಿಸಿದ್ದೇವೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

    ಲಾಕೆಟ್ ಚಟರ್ಜಿ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ಸಿನ ಕಾರ್ಯದರ್ಶಿ ಪಾರ್ಥ ಚಟರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಿದ್ದಾರೆ. ಬಂಗಾಳದಲ್ಲಿ ಕೋಮುವಾದವನ್ನು ಬಿತ್ತುವುದೇ ಬಿಜೆಪಿ ನಾಯಕರ ಪ್ರಮುಖ ಉದ್ದೇಶ. ಹೀಗಾಗಿಯೇ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಬಿಜೆಪಿಯ ಒಡೆದು ಆಳುವ ನೀತಿಯನ್ನು, ಪಶ್ಚಿಮ ಬಂಗಾಳ ಜನ ಚುನಾವಣೆಯಲ್ಲಿ ಅವರನ್ನು ಸೋಲಿಸುವ ಮೂಲಕ ಉತ್ತರಿಸುತ್ತಾರೆಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪೊಲೀಸರ ಮುಂದೆ ಶೃತಿ ಹರಿಹರನ್ ಆಪ್ತ ಸಹಾಯಕ ಕಿರಣ್, ಸಹ ನಿರ್ದೇಶಕಿ ಮೋನಿಕಾ ಸ್ಫೋಟಕ ಹೇಳಿಕೆ

    ಪೊಲೀಸರ ಮುಂದೆ ಶೃತಿ ಹರಿಹರನ್ ಆಪ್ತ ಸಹಾಯಕ ಕಿರಣ್, ಸಹ ನಿರ್ದೇಶಕಿ ಮೋನಿಕಾ ಸ್ಫೋಟಕ ಹೇಳಿಕೆ

    ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮೀಟೂ ಆರೋಪ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಇಬ್ಬರು ಸಾಕ್ಷಿಗಳ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

    ಶೃತಿ ಹರಿಹರನ್ ಆಪ್ತ ಸಹಾಯಕ ಕಿರಣ್ ಮತ್ತು ವಿಸ್ಮಯ ಚಿತ್ರದ ಸಹ ನಿರ್ದೇಶಕಿ ಮೋನಿಕಾ ಹೇಳಿಕೆಯನ್ನು ರಹಸ್ಯ ಸ್ಥಳದಲ್ಲಿ ಪೊಲೀಸರು ವಿಡಿಯೋ ಮಾಡಿಕೊಂಡಿದ್ದಾರೆ. ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ ಹಾಗೂ ಪಿಎಸ್‍ಐ ರೇಣುಕಾ ಸಮ್ಮುಖದಲ್ಲಿ ಸಾಕ್ಷಿಗಳ ಈ ಹೇಳಿಕೆ ದಾಖಲು ಮಾಡಿದ್ದಾರೆ. ಇಬ್ಬರು ಪೊಲೀಸರ ಮುಂದೆ ಹೇಳಿದ್ದು ಏನು ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ. ಇದನ್ನೂ ಓದಿ: 6 ಮಂದಿ ಮೇಲೆ ನಿಂತಿದೆ ನಟ ಅರ್ಜುನ್ ಹಣೆಬರಹ!

    ಕಿರಣ್ ಹೇಳಿದ್ದು ಏನು?
    ಶೃತಿ ಹರಿಹರನ್ ಗೆ ಅರ್ಜುನ್ ಸರ್ಜಾ ಅವರಿಂದ ಕಿರುಕುಳ ಆಗಿದ್ದು ನಿಜ. ರಿಹರ್ಸಲ್ ವೇಳೆಯೂ ಶೃತಿ ಮನಸ್ಸಿಗೆ ಬೇಜಾರು ಮಾಡಿಕೊಂಡಿದ್ದರು. ನಾವು ದೇವನಹಳ್ಳಿಯಿಂದ ಹೊರಟಾಗ ಸಿಗ್ನಲ್ ಬಳಿ ಅರ್ಜುನ್ ಸರ್ಜಾ ಮತ್ತೊಂದು ಕಾರಿನಲ್ಲಿ ಎದುರಾದರು. ಆಗ ನಾನು ಶೃತಿ ಹರಿಹರನ್ ಪಕ್ಕದಲ್ಲಿಯೇ ಕುಳಿತ್ತಿದ್ದೆ. ಶೃತಿ ಹರಿಹರನ್ ಅವರನ್ನು ಅರ್ಜುನ್ ಸರ್ಜಾರ ಊಟಕ್ಕೆ ಕರೆದರು. ಅಷ್ಟೇ ಅಲ್ಲದೇ ರೆಸಾರ್ಟ್ ಗೆ ಹೋಗೋಣ ಬಾ ಎಂದಿದ್ದರು. ಈ ಸಂದರ್ಭದಲ್ಲಿ ಸರ್ಜಾ ಜೊತೆ ಊಟಕ್ಕೆ ಹೋಗಲು ಶೃತಿ ಹರಿಹರನ್ ನಿರಾಕರಿಸಿ ಕಣ್ಣಿರು ಹಾಕಿದರು. ಇದಕ್ಕೆ ನಾನೇ ಸಾಕ್ಷಿ, ನಾನು ಆಗ ಅವರ ಪಕ್ಕದಲ್ಲೇ ಕುಳಿತಿದ್ದೆ. ನಂತರ ಅರ್ಜುನ್ ಸರ್ಜಾ ಹೊರಟರು.

    ಮೋನಿಕಾ ಹೇಳಿದ್ದು ಏನು?
    ನನಗೇನು ಗೊತ್ತಿಲ್ಲ, ನನಗೆ ಏನೂ ನೆನಪಾಗುತ್ತಿಲ್ಲ. ವಿಸ್ಮಯ ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಏನಾಯ್ತು ಅನ್ನೋದು ನನಗೆ ಸರಿಯಾಗಿ ಗೊತ್ತಿಲ್ಲ. ಲೈಂಗಿಕ ಕಿರುಕುಳ ಬಗ್ಗೆ ನನಗೇನೂ ಗೊತ್ತಿಲ್ಲ, ಶೃತಿಯೂ ಈ ಬಗ್ಗೆ ನನ್ನಲ್ಲಿ ಹೇಳಿಕೊಂಡಿಲ್ಲ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ವಿಸ್ಮಯ ಚಿತ್ರದ ಸಹ ನಿರ್ದೇಶಕಿ ಮೋನಿಕಾ ಹೇಳಿಕೆ ನೀಡಿದ್ದಾರೆ.

    ಶೃತಿ ಹರಿಹರನ್ ಅವರ ಆಪ್ತ ಸಹಾಯಕ ಬೋರೇಗೌಡ ಮತ್ತು ವಿಸ್ಮಯ ಚಿತ್ರದ ಮತ್ತೊಬ್ಬ ಸಹ ನಿರ್ದೇಶಕ ಭರತ್ ನೀಲಕಂಠ ಅವರು ಬುಧವಾರ ಪೊಲೀಸರ ಮುಂದೆ ಹೇಳಿಕೆ ನೀಡುವ ಸಾಧ್ಯತೆಗಳಿವೆ.

    ಶುಕ್ರವಾರಕ್ಕೆ ಮುಂದೂಡಿಕೆ:
    ಅರ್ಜುನ್ ಸರ್ಜಾ ಹೂಡಿದ್ದ ಮಾನನಷ್ಟ ಕೇಸ್ ವಿಚಾರಣೆಯನ್ನು ನವೆಂಬರ್ 2ಕ್ಕೆ ಮೇಯೋ ಹಾಲ್ ಕೋರ್ಟ್ ಮುಂದೂಡಿದೆ. ನಿನ್ನೆಯಷ್ಟೇ ಶೃತಿಹರನ್ ಆಕ್ಷೇಪಣೆ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಲು ಸಮಯ ಬೇಕು ಎಂದು ಸರ್ಜಾ ಪರ ವಕೀಲರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ನ್ಯಾಯಧೀಶರು ವಿಚಾರಣೆಯನ್ನ ಶುಕ್ರವಾರಕ್ಕೆ ಮುಂದೂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಿಂದೂಗಳ ಕಡೆಗಣನೆಯೇ ಕಾಂಗ್ರೆಸ್ ಸೋಲಿಗೆ ಕಾರಣವೆಂದ ಜೆಡಿಎಸ್- ಸಚಿವ ಖಾದರ್ ತಿರುಗೇಟು

    ಹಿಂದೂಗಳ ಕಡೆಗಣನೆಯೇ ಕಾಂಗ್ರೆಸ್ ಸೋಲಿಗೆ ಕಾರಣವೆಂದ ಜೆಡಿಎಸ್- ಸಚಿವ ಖಾದರ್ ತಿರುಗೇಟು

    ಮಂಗಳೂರು: ಹಿಂದೂಗಳನ್ನು ಕಡೆಗಣಿಸಿದ್ದಕ್ಕೆ ಕಾಂಗ್ರೆಸ್ ಗೆ ಸೋಲುಂಟಾಗಿದೆ ಎನ್ನುವ ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಭೋಜೇಗೌಡರ ಹೇಳಿಕೆ ಆಶ್ಚರ್ಯ ತಂದಿದೆ ಎಂದು ವಸತಿ ಹಾಗೂ ನಗರ ಪಾಲಿಕೆಗಳ ಸಚಿವರಾದ ಯು.ಟಿ. ಖಾದರ್ ಹೇಳಿದ್ದಾರೆ.

    ನಗರದಲ್ಲಿ ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಭೋಜೇಗೌಡರ ಹೇಳಿಕೆ ಅಚ್ಚರಿ ತಂದಿದೆ. ಭೋಜೇಗೌಡರು ಮೂಲತಃ ನಮ್ಮ ಜಿಲ್ಲೆಯವರಲ್ಲ. ಹೀಗಾಗಿ ನಮ್ಮ ಜಿಲ್ಲೆಯ ಬಗ್ಗೆ ಅವರಿಗೆ ಗೊತ್ತಿಲ್ಲ. ಕಾಂಗ್ರೆಸ್ ನಲ್ಲಿ ಹಿಂದೂಗಳನ್ನು ಕಡೆಗಣಿಸಿಲ್ಲ. ಒಬ್ಬ ಜನಪ್ರತಿನಿಧಿಯಾಗಿ ಅವರು ಈ ಹೇಳಿಕೆ ನೀಡಬಾರದು ಎಂದು ಗರಂ ಆದ್ರು.

    ಕಾಂಗ್ರೆಸ್ ಧರ್ಮದ ಆಧಾರದಲ್ಲಿ ಅಭಿವೃದ್ಧಿಯನ್ನು ಮಾಡಿಲ್ಲ. ಇಂತಹ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ. ಈ ಹೇಳಿಕೆ ಅವರಿಗೆ ಕಪ್ಪು ಚುಕ್ಕೆ ತಂದಿದೆ. ಜನರ ಪರ ಕೆಲಸ ಮಾಡಿದರೆ ಮಾತ್ರ ಪಕ್ಷ ಸಂಘಟನೆಯಾಗುತ್ತದೆ ಎಂದು ಅವರು ಹೇಳಿದ್ರು.

    ಭೋಜೇಗೌಡರು ಹೇಳಿದ್ದೇನು?
    ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನನಾಡಿದ ಭೋಜೇಗೌಡ, ಕರಾವಳಿಯಲ್ಲಿ ಹಿಂದೂಗಳನ್ನು ಕಡೆಗಣಿಸಿದ್ದಕ್ಕೆ, ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ ಹೀನಾಯ ಸೋಲುಂಡಿದ್ದಕ್ಕೆ ಕಾರಣ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳನ್ನು ಕಡೆಗಣಿಸಲಾಗಿದೆ. ಹಾಗಾಗಿ ಕಾಂಗ್ರೆಸ್ ಈ ಭಾಗದಲ್ಲಿ ಸೋತಿದೆ. ಆದರೆ, ಬಹುಸಂಖ್ಯಾತ ಹಿಂದೂಗಳನ್ನು ಕಡೆಗಣಿಸದಂತೆ ಜೆಡಿಎಸ್ ಮುಖಂಡರಿಗೆ ಹೇಳಿದ್ದೇನೆ. ಹಿಂದೂಗಳನ್ನು ಕಡೆಗಣಿಸಿದ್ರೆ ಸರ್ಕಾರ ಉಳಿಯಲ್ಲ. ಅಲ್ಪಸಂಖ್ಯಾತರ ವಿಶ್ವಾಸ ಗಳಿಸಿ ಹಿಂದೂಗಳನ್ನು ಕಡೆಗಣಿಸದೆ ಪಕ್ಷ ಸಂಘಟನೆ ಮಾಡುತ್ತೇವೆ ಅಂತ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ರಾಜಕೀಯ ಲಾಭಕ್ಕಾಗಿ ಏಕೀಕೃತ ಕರ್ನಾಟಕ ಒಡೆಯಲು ಜೆಡಿಎಸ್ ಷಡ್ಯಂತ್ರ: ಬಿಎಸ್‍ವೈ

    ರಾಜಕೀಯ ಲಾಭಕ್ಕಾಗಿ ಏಕೀಕೃತ ಕರ್ನಾಟಕ ಒಡೆಯಲು ಜೆಡಿಎಸ್ ಷಡ್ಯಂತ್ರ: ಬಿಎಸ್‍ವೈ

    ಬೆಂಗಳೂರು: ಸಿಎಂ ಕುಮಾರಸ್ವಾಮಿಯವರ ಹೇಳಿಕೆಗಳನ್ನು ಗಮನಿಸಿದರೆ ತಮ್ಮ ರಾಜಕೀಯ ಲಾಭಕ್ಕಾಗಿ ಏಕೀಕೃತ ಕರ್ನಾಟಕ ಒಡೆಯಲು ಷಡ್ಯಂತ್ರ ರೂಪಿಸಿರುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಆರೋಪಿಸಿದ್ದಾರೆ.

    ಸಿಎಂ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಖಂಡ ಕರ್ನಾಟಕಕ್ಕೆ ಹಿರಿಯರು ರಕ್ತ ಹರಿಸಿದ್ದಾರೆ. ಉತ್ತರ ಕರ್ನಾಟಕದ ಜನತೆಯನ್ನ ಸವತಿ ಮಕ್ಕಳಂತೆ ಸಿಎಂ ಕಾಣುತ್ತಿದ್ದಾರೆ. ನಿಮ್ಮ ಸಾಲಮನ್ನಾ ಮಾಡಲು ನೀವೇನು ನಮಗೆ ವೋಟ್ ಹಾಕಿದ್ದೀರಾ ಅಂತಾ ಪ್ರಶ್ನೆ ಮಾಡಿದ್ದು, ಸಿಎಂ ಅವರ ದುರಂಹಕಾರದ ಮಾತಾಗಿದೆ. ಸಿಎಂರವರ ಹೇಳಿಕೆಗಳನ್ನು ಗಮನಿಸಿದರೆ, ಏಕೀಕೃತ ಕರ್ನಾಟಕ ಒಡೆಯಲು ಷಡ್ಯಂತ್ರ ರೂಪಿಸಿರುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ದೂರಿದರು. ಇದನ್ನೂ ಓದಿ: ಮತ್ತೆ ಮಾಧ್ಯಮಗಳ ಮೇಲೆ ಸಿಎಂ ಎಚ್‍ಡಿಕೆ ಉಗ್ರ ಪ್ರತಾಪ

    ಮಾಜಿ ಪ್ರಧಾನಿ ದೇವೆಗೌಡರ ವಿರುದ್ಧ ಹರಿಹಾಯ್ದ ಅವರು, ಈ ಹಿಂದೆ ವೀರಶೈವ – ಲಿಂಗಾಯತ ಪ್ರತ್ಯೇಕತೆ ಮಾಡಲು ಕಾಂಗ್ರೆಸ್ ಕೈ ಹಾಕಿತ್ತು. ಈಗ ಜೆಡಿಎಸ್ ರಾಜ್ಯ ಪ್ರತ್ಯೇಕ ಮಾಡುವ ಹುನ್ನಾರ ಮಾಡ್ತಿದೆ. ದೇವೇಗೌಡರ ಈ ತಂತ್ರವನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಪ್ರತ್ಯೇಕ ರಾಜ್ಯ ಹೋರಾಟ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಮೌನವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ ಎಂದು ತಿಳಿಸಿದರು.

    ಮಂಗಳವಾರ ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸಲು ಹೋರಾಟಗಾರರು ಮುಂದಾಗಿದ್ದಾರೆ. ಹೀಗಾಗಿ ಹೋರಾಟಗಾರರ ಮನವೊಲಿಸಲು ನಾನು ಬೆಳಗಾವಿಗೆ ತೆರಳುತ್ತೇನೆ. ರಾಜ್ಯವನ್ನು ವಿಭಜಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

  • ಸರ್ಕಾರ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಲೇ ಇರು ಎಂದು ಪತ್ನಿಗೆ ಹೇಳಿದ್ದೀನಿ: ಬಿಜೆಪಿ ಶಾಸಕ

    ಸರ್ಕಾರ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಲೇ ಇರು ಎಂದು ಪತ್ನಿಗೆ ಹೇಳಿದ್ದೀನಿ: ಬಿಜೆಪಿ ಶಾಸಕ

    ಮುಜಾಫರ್ ನಗರ್ : ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರ ನಿರ್ದಿಷ್ಟ ಕಾನೂನು ರೂಪಿಸುವವರೆಗೂ ನೀನು ಮಕ್ಕಳನ್ನು ಹಡೆಯುವುದನ್ನು ನಿಲ್ಲಿಸಬೇಡ ಎಂದು ಪತ್ನಿಗೆ ಹೇಳಿದ್ದೇನೆ ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಬಿಜೆಪಿ ಶಾಸಕರೊಬ್ಬರು ವಿವಾದಕ್ಕೆ ಕಾರಣರಾಗಿದ್ದಾರೆ.

    ಖತೌಲಿ ಕ್ಷೇತ್ರದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಶುಕ್ರವಾರ ಈ ಹೇಳಿಕೆಯನ್ನು ನೀಡಿದ್ದಾರೆ. ಮುಜಾಫರ್ ನಗರದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮಗೆ ಇಬ್ಬರು ಮಕ್ಕಳು ಸಾಕು ಎಂದು ನನ್ನ ಪತ್ನಿ ಹೇಳಿದ್ದಾಳೆ. ಆದರೆ ಸರ್ಕಾರ ಜನಸಂಖ್ಯಾ ನಿಯಂತ್ರಣ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಾ ಇರಲು ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

    ನಾವು ಇಬ್ಬರು ಮಕ್ಕಳು ಸಾಕು ಎಂಬ ನಿಯಮವನ್ನು ಒಪ್ಪಿಕೊಂಡಿದ್ದೇವೆ. ಆದರೆ ಇತರರು ಅದನ್ನು ಒಪ್ಪಿಕೊಂಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಹಿಂದೂಗಳು ಮಕ್ಕಳಿಗೆ ಜನ್ಮ ನೀಡುವುದನ್ನು ನಿಲ್ಲಿಸಬಾರದು. ನನ್ನ ಪತ್ನಿ ನಮಗೆ ಮೂರನೇ ಮಗು ಬೇಡವೆಂದು ಹೇಳಿದ್ದಳು. ಆದರೆ ನಾನು 4 ರಿಂದ 5 ಮಕ್ಕಳನ್ನು ಪಡೆಯೋಣವೆಂದು ಹೇಳಿದ್ದೇನೆ ಎಂದು ಜನಸಂಖ್ಯಾ ನಿಯಂತ್ರಣ ವಿಷಯದ ಕುರಿತು ನಡೆದ ಕಾರ್ಯಕ್ರಮದಲ್ಲಿ ಹೇಳಿದರು.

    ಶಾಸಕರು ವಿವಾದತ್ಮಾಕ ಹೇಳಿಕೆ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದು, ಕಳೆದ ವರ್ಷ ಜನವರಿಯಲ್ಲಿ ಹಿಂದೂಸ್ತಾನ ಹಿಂದೂಗಳದ್ದು ಮಾತ್ರ, ಇತರರು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳಿದ್ದರು. ಅಲ್ಲದೇ ಹೊಸ ವರ್ಷದ ಆಚರಣೆ ಕ್ರೈಸ್ತ ಸಮುದಾಯದ ಹಬ್ಬ. ಇದರಿಂದ ಹಿಂದೂಗಳು ದೂರವಿರಿ ಎಂದು ಹೇಳಿದ್ದರು. ಫೆಬ್ರವರಿ 14ರ ಪ್ರೇಮಿಗಳ ದಿನವನ್ನು ಆಚರಿಸಬೇಡಿ ಎಂದು ಯುವಕರಿಗೆ ಕರೆ ನೀಡಿದ್ದರು.