Tag: ಹೈಟೆನ್ಶನ್ ವೈಯರ್

  • ಹೈಟೆನ್ಷನ್ ಕೆಳಗೆ ನಗರದಲ್ಲಿವೆಯಂತೆ 10 ಸಾವಿರ ಮನೆಗಳು- ಖಡಕ್ ನೋಟಿಸ್ ಕೊಡಲು ಬಿಬಿಎಂಪಿ ತಯಾರಿ

    ಹೈಟೆನ್ಷನ್ ಕೆಳಗೆ ನಗರದಲ್ಲಿವೆಯಂತೆ 10 ಸಾವಿರ ಮನೆಗಳು- ಖಡಕ್ ನೋಟಿಸ್ ಕೊಡಲು ಬಿಬಿಎಂಪಿ ತಯಾರಿ

    ಬೆಂಗಳೂರು: ಕೆಲ ದಿನಗಳ ಹಿಂದೆ ಹೈ ಟೆನ್ಷನ್ ವೈಯರ್ (High Tension Wire) ನಿಂದಾಗಿ 11 ವರ್ಷದ ಬಾಲಕ ಸಾವನ್ನಪ್ಪಿದ್ದ. ಆ ಬಳಿಕ ಬೆಸ್ಕಾಂ ಹಾಗೂ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಗರದ ಅನಧಿಕೃತ ಕಟ್ಟಡ ಮಾಲೀಕರಿಗೆ ಠಕ್ಕರ್ ಕೊಡಲು ಬಿಬಿಎಂಪಿ (BBMP) ಸಜ್ಜಾಗಿದೆ. ಮತ್ತೆ ಈ ರೀತಿಯ ಅನಾಹುತ ಆಗದಂತೆ ತಡೆಯಲು ದೊಡ್ಡ ಸ್ಟ್ರೈಕ್ ಮಾಡಲು ಸಿದ್ಧವಾಗಿದೆ.

    ಹೈಟೆನ್ಷನ್ ವೈಯರ್‍ನಿಂದಾಗಿ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ನಂತರ ಬೆಸ್ಕಾಂ ಹಾಗೂ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಹೈ ಟೆನ್ಷನ್ ವೈರ್ ಹಾದು ಹೋಗಿರುವ 10 ಸಾವಿರ ಮನೆಗಳು ನಗರದಲ್ಲಿದೆ ಎಂದು ಬೆಸ್ಕಾಂನಿಂದ ಬಿಬಿಎಂಪಿಗೆ ಮಾಹಿತಿ ನೀಡಲಾಗಿದ್ಯಂತೆ. ಕೂಡಲೇ ನೋಟಿಸ್ ಕೊಟ್ಟು ತೆರವು ಮಾಡಿ ಅಂತ ಬೆಸ್ಕಾಂನಿಂದ ಬಿಬಿಎಂಪಿಗೆ ಮನವಿ ಬಂದಿರುವ ಹಿನ್ನೆಲೆ ನೋಟಿಸ್ ನೀಡಲು ಬಿಬಿಎಂಪಿ ಮುಂದಾಗಿದೆ.

    ಹೈ ಟೆನ್ಷನ್ ವೈಯರ್ ಹಾದು ಹೋಗುವ ಭಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಆರೋಪ ಹೆಚ್ಚಾಗಿ ಕೇಳಿ ಬಂದ ಹಿನ್ನೆಲೆ ಬೆಸ್ಕಾಂ ಈಗ ಹೈಟೆನ್ಷನ್ ವೈರ್ ಕೆಳಗೆ ಕಟ್ಟಿರುವ ಮನೆಗಳ ಲೆಕ್ಕ ಹಾಕಿದ್ಯಂತೆ. ಬೆಸ್ಕಾಂ ಪ್ರಕಾರ ಹೈಟೆನ್ಷನ್ ವೈಯರ್ ಹಾದು ಹೋಗುವ ಜಾಗದಲ್ಲಿ 10 ಸಾವಿರ ಮನೆಗಳಿವೆಯಂತೆ. ಇವೆಲ್ಲವನ್ನೂ ತೆರವು ಮಾಡಲು ಬಿಬಿಎಂಪಿಗೆ ಬೆಸ್ಕಾಂ ಮನವಿ ಮಾಡಿದೆ. ಬಿ ಖಾತಾ ಸೈಟ್‍ನಲ್ಲಿ ಗ್ರೌಂಡ್ ಪ್ಲಸ್ ಎರಡು ಸೇರಿದಂತೆ ಮೂರು ಅಂತಸ್ತಿಗೆ ಮಾತ್ರ ಅವಕಾಶ. ಆದರೆ ನಗರದ ಹಲವೆಡೆ ಅದಕ್ಕೂ ಮೀರಿ ಅಂತಸ್ತು ಕಟ್ಟಿಕೊಳ್ಳಲಾಗಿದೆ. ಯಾರು ಬಿಬಿಎಂಪಿ ಕಾನೂನು ಉಲ್ಲಂಘಿಸಿ ಕಟ್ಟಡ ಕಟ್ಟಿದ್ದಾರೋ ಅಂತಹವರಿಗೆ ನೋಟೀಸ್ ನೀಡಲು ಪಾಲಿಕೆ ನಿರ್ಧಾರ ಮಾಡಿದೆ.

    ಬೆಸ್ಕಾಂ ಲೆಕ್ಕದ ಪ್ರಕಾರ 10 ಸಾವಿರ ಮನೆಗಳ ಸರ್ವೇ, ದಾಖಲೆ ಪರಿಶೀಲನೆಗೆ ಬಿಬಿಎಂಪಿ ಮುಂದಾಗುತ್ತಿದೆ. ಈ ಸಂಬಂಧ ಎಲ್ಲಾ ವಲಯ ಚೀಫ್ ಇಂಜಿನಿಯರ್‍ಗಳಿಗೆ ಪಾಲಿಕೆಯಿಂದ ಉಸ್ತುವಾರಿ ನೀಡಿ ತ್ವರಿತಗತಿಯಲ್ಲಿ ಬೆಸ್ಕಾಂ ಪಟ್ಟಿ ಸರ್ವೇ ಮಾಡಿ ಮಾಹಿತಿ ದಾಖಲಿಸುವಂತೆ ಪಾಲಿಕೆ ಇಂಜಿನಿಯರ್ ಗಳಿಗೆ ತಾಕೀತು ಮಾಡಿದೆ. ಇದನ್ನೂ ಓದಿ: ವ್ಯಕ್ತಿತ್ವವನ್ನು ಹಾಳುಮಾಡಬೇಕೆಂದು ಪ್ರಯತ್ನಿಸ್ತಿದ್ದಾರೆ: ಕಣ್ಣೀರಿಟ್ಟ ಶಾಸಕ ಹೆಚ್.ಕೆ ಕುಮಾರಸ್ವಾಮಿ

    ಜನರು ಕಾನೂನು ಮೀರಿ ಹೆಚ್ಚುವರಿ ಅಂತಸ್ತುಗಳ ಕಟ್ಟಡ ನಿರ್ಮಾಣ ಮಾಡಿರೋದ್ರಿಂದ ಅವಘಡ ಆಗುತ್ತಿದೆ. ಹೀಗಾಗಿ ಆ ರೀತಿಯ ಕಟ್ಟಡಗಳನ್ನ ತೆರವು ಮಾಡಿ ಅಪಾಯ ತಪ್ಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಿ ಅಂತ ಬೆಸ್ಕಾಂ ಮನವಿಗೆ ನಿಜಕ್ಕೂ ಬಿಬಿಎಂಪಿ ಕಾರ್ಯಪ್ರವೃತ್ತವಾಗಿ ಕ್ರಮ ಕೈಗೊಳ್ಳುತ್ತಾ..? ಅಥವಾ ಈ ಬಿಸಿ ತಣ್ಣಗಾದ ನಂತರ ಸುಮ್ಮನಾಗುತ್ತಾರಾ ಕಾದುನೋಡಬೇಕು..

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಂಗಳೂರಿನಲ್ಲಿ ಹೈಟೆನ್ಶನ್ ವೈಯರ್‌ಗೆ ಬಾಲಕ ಬಲಿ

    ಬೆಂಗಳೂರಿನಲ್ಲಿ ಹೈಟೆನ್ಶನ್ ವೈಯರ್‌ಗೆ ಬಾಲಕ ಬಲಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೈಟೆನ್ಶನ್ ವೈಯರ್ ಗೆ ಮತ್ತೊಂದು ಜೀವ ಬಲಿಯಾಗಿದೆ. ಆರ್‍ಟಿ ನಗರದ ಚಾಮುಂಡಿ ನಗರದ ಚಿಂಗಮ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದೆ.

    ಗಾಳಿಪಟ ಬಿಡಲು ಹೋಗಿ ಹೈ ಟೆನ್ಶನ್ ವೈಯರ್ (High Tension Wire) ತಗುಲಿ 11 ವರ್ಷದ ಅಬೂಬಕ್ಕರ್ ಎಂಬ ಬಾಲಕ ಮೃತಪಟ್ಟಿದ್ದಾನೆ. ಸೋಮವಾರ ಈ ಘಟನೆ ನಡೆದಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆ (Victoria Hospital) ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಅಬೂಬಕ್ಕರ್ ಮೃತಪಟ್ಟಿದ್ದಾನೆ.

    ಇದೇ ಜಾಗದಲ್ಲಿ ಈ ಹಿಂದೆ ನಾಲ್ವರು ಬಾಲಕರು ಹೈ ಟೆನ್ಶನ್ ವೈಯರ್ ಗೆ ಬಲಿಯಾಗಿದ್ದು, ಇದು ಐದನೇ ಘಟನೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮನೆಯ ಮೇಲೆಯೇ ಹಾದು ಹೋಗಿರುವ ಹೈಟೆನ್ಶ್ ವೈಯರ್, ಟೆರೇಸ್ ಮೇಲಿಂದ ಕೈಗೆ ತಾಕುವಂತಿದೆ. ಇದನ್ನೂ ಓದಿ: ಕಾಮಾಕ್ಷಿ ಪಾಳ್ಯದಲ್ಲೊಂದು ವಿಚಿತ್ರ ಕೊಲೆ- ತಾನು ನಿಲ್ಲಿಸಿದ್ದ ಜಾಗದಲ್ಲಿ ಬಸ್ ನಿಲ್ಲಿಸಿದ್ದಕ್ಕೆ ಮರ್ಡರ್

    ಹೈಟೆನ್ಶನ್ ವೈಯರ್ ಗಿಂತ ಮನೆಗಳು ಎತ್ತರದಲ್ಲಿವೆ. ಹೀಗಾಗಿ ವೈಯರ್‍ಗಳು ಮನೆಯ ಮೇಲೆ ಕೈಗೆ ತಾಕುವಂತಿವೆ. ಹೆನ್ಶನ್ ವೈಯರ್ ಹಾದು ಹೋದ ಜಾಗದಲ್ಲಿ ಪಾರ್ಕ್ ಕೂಡ ಇದೆ. ಈ ಪಾರ್ಕ್ ಗೆ ಬರೋ ಮಕ್ಕಳಿಗೆ, ವೃದ್ಧರಿಗೂ ಕಂಟಕ ಎದುರಾಗುವ ಸಾಧ್ಯತೆಗಳಿವೆ. ಘಟನೆ ನಡೆದ ಬಳಿಕವೂ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಬೆಸ್ಕಾಂ ಅಧಿಕಾರಿಗಳ ಮೇಲೆ ದೂರು ದಾಖಲಿಸಿಕೊಳ್ಳಲು, ಆರ್ ಟಿ ನಗರ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಮಗುವಿನದ್ದೇ ತಪ್ಪು ಎಂದು ದೂರು ದಾಖಲಿಸಿಕೊಳ್ಳದೇ, ಪೋಷಕರನ್ನ ಬೈದು ಕಳಿಸಿದ್ದಾರೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k