Tag: ಹೈದರಬಾದ್

  • ಸರಸಕ್ಕೆಂದು ಮನೆಗೆ ಕರೆಸಿಕೊಂಡು ಪ್ರಿಯಕರನ ಮರ್ಮಾಂಗ ಕತ್ತರಿಸಿದ್ಲು

    ಸರಸಕ್ಕೆಂದು ಮನೆಗೆ ಕರೆಸಿಕೊಂಡು ಪ್ರಿಯಕರನ ಮರ್ಮಾಂಗ ಕತ್ತರಿಸಿದ್ಲು

    ಹೈದರಾಬಾದ್: ವಿವಾಹೇತರ ಸಂಬಂಧಗಳು ಮತ್ತು ಅಕ್ರಮ ಸಂಬಂಧಗಳು ಮುಂದೊಂದು ದಿನ ಅಪಾಯಕ್ಕೆ ತಂದೊಡ್ಡುತ್ತದೆ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳಿದೆ. ಅಕ್ರಮ ಸಂಬಂಧಕ್ಕೆ ಅದೆಷ್ಟೋ ಜೀವಗಳು ಬಲಿಯಾಗಿರುವ ದುರಾದೃಷ್ಟಕರ ಘಟನೆಗಳು ಸಾಕಷ್ಟಿದೆ. ಇದೀಗ ಆಂಧ್ರಪ್ರದೇಶದ (Andhra Pradesh) ಪ್ರಕಾಶಂ ಜಿಲ್ಲೆಯ (Prakasam District) ಕೊಂಡಪಿ ಮಂಡಲದ (Kondapi Mandal) ಕೊಳೆಗೇರಿಯಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ 60 ವರ್ಷದ ವ್ಯಕ್ತಿಯ ಮರ್ಮಾಂಗವನ್ನು ಪ್ರಿಯತಮೆಯೇ ಕತ್ತರಿಸಿ ಹಾಕಿದ್ದು, ವ್ಯಕ್ತಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.

     

    ಹೌದು ವಿವಾಹೇತರ ಸಂಬಂಧ ಹೊಂದಿದ್ದ ವ್ಯಕ್ತಿ ಇದೀಗ ಆಸ್ಪತ್ರೆಯ ಹಾಸಿಗೆಯಲ್ಲಿ ಪರದಾಡುತ್ತಿದ್ದಾನೆ. ಇದಕ್ಕೆ ಕಾರಣ 55ರ ವರ್ಷದ ಆತನ ಗೆಳತಿ. ಹೌದು, ತನ್ನನ್ನು ಒಬ್ಬನೇ ಬಂದು ಭೇಟಿಯಾಗುವಂತೆ ಹೇಳಿದ್ದ ಪ್ರಿಯತಮೆಯೇ ವ್ಯಕ್ತಿಯ ಮರ್ಮಾಂಗವನ್ನು ಬ್ಲೇಡ್ ನಿಂದ ಕತ್ತರಿಸಿದ್ದಾಳೆ. ಇದನ್ನೂ ಓದಿ: ಸ್ನಾನದ ವೀಡಿಯೋ ಲೀಕ್‌ ಬೆನ್ನಲ್ಲೇ ಹಾಸ್ಟೆಲ್‌ ತೊರೆಯುತ್ತಿರುವ ವಿದ್ಯಾರ್ಥಿನಿಯರು – 5 ದಿನ ವಿವಿ ಬಂದ್‌

    ಸುಮಾರು 10 ವರ್ಷಗಳಿಂದ ವಿವಾಹೇತರ ಸಂಬಂಧ ಹೊಂದಿದ್ದ ಈ ಜೋಡಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಮನೆಗೆ ಕರೆಸಿಕೊಂಡು ಮಹಿಳೆ ಈ ಕೃತ್ಯವೆಸಗಿದ್ದಾಳೆ. ಇದೀಗ ಸ್ಥಳೀಯರು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ. ಸದ್ಯ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸುಮಲತಾ ಹೇಳಿದ ದಿನ ಆಣೆ ಮಾಡಲು ರೆಡಿ- ಮೇಲುಕೋಟೆ ಸನ್ನಿಧಿಯಲ್ಲಿ ಪುಟ್ಟರಾಜು ಸವಾಲು ಸ್ವೀಕಾರ

    Live Tv
    [brid partner=56869869 player=32851 video=960834 autoplay=true]

  • ನಾಪತ್ತೆಯಾಗಿದ್ದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ

    ನಾಪತ್ತೆಯಾಗಿದ್ದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ

    – ಮನೆಯ ಬಳಿ ಸೈಕಲ್ ಸವಾರಿ ಮಾಡುವಾಗ ಮಿಸ್ಸಿಂಗ್
    – ಸೈಕಲ್ ಪತ್ತೆಯಾದ 2 ಕಿ.ಮೀ ದೂರದಲ್ಲಿ ಶವವಾಗಿ ಪತ್ತೆ

    ಹೈದರಾಬಾದ್: ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದ 12 ವರ್ಷದ ಬಾಲಕಿ ಇಂದು ಶವವಾಗಿ ಕೆರೆಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೃತ ಬಾಲಕಿಯನ್ನು ಸುಮೇಧಾ ಕಪುರಿಯಾ ಎಂದು ಗುರುತಿಸಲಾಗಿದೆ. ಸುಮೇಧಾ ಕೊನೆಯದಾಗಿ ಹೈದರಾಬಾದ್‍ನ ವಸತಿ ಪ್ರದೇಶವಾದ ನೆರೆಡ್‍ಮೆಟ್‍ನ ಕಾಕತಿಯಾ ನಗರದಲ್ಲಿ ತನ್ನ ಮನೆಯ ಹೊರಗೆ ಸೈಕಲ್ ಸವಾರಿ ಮಾಡುತ್ತಿದ್ದಳು. ಆದರೆ ಬಾಲಕಿಯ ಸೈಕಲ್ ಪತ್ತೆಯಾದ ಸ್ಥಳದಿಂದ 2 ಕಿ.ಮೀ ದೂರದಲ್ಲಿರುವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಗಾಗಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾದ ಕೆಲವೇ ಗಂಟೆಗಳ ನಂತರ ಮೃತದೇಹ ಪತ್ತೆಯಾಗಿದೆ.

    ಸುಮೇಧಾ 5ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಈಕೆ ಗುರುವಾರ ಸಂಜೆ ನಾಪತ್ತೆಯಾಗಿದ್ದಳು. ನಂತರ ಪೋಷಕರು ಮಗಳಿಗಾಗಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿಲ್ಲ. ಕೂಡಲೇ ಪೋಷಕರು ನೆರೆಡ್‍ಮೆಟ್ ಪೊಲೀಸರಿದೆ ನಾಪತ್ತೆ ದೂರ ದಾಖಲಿಸಿದ್ದರು. ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದರು. ಬಾಲಕಿ ಸೈಕಲ್ ತುಳಿಯುತ್ತಿದ್ದಾಗ ಚರಂಡಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

    ನನ್ನ ಮಗಳು ಚರಂಡಿಗೆ ಬಿದ್ದಿದ್ದಾಳೆ ಎಂದರೆ ನಾನು ನಂಬಲ್ಲ. ಹೀಗಾಗಿ ಅವಳ ಸಾವಿನ ಬಗ್ಗೆ ತನಿಖೆ ನಡೆಸಬೇಕಾಗಿದೆ. ಏನೋ ಸಂಭವಿಸಿದಂತೆ ತೋರುತ್ತದೆ ಎಂದು ಬಾಲಕಿ ತಾಯಿ ಸುಕನ್ಯಾ ಕಪುರಿಯಾ ಆಗ್ರಹಿಸಿದ್ದಾರೆ.

    ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ತಂಡಗಳು ಬಾಲಕಿಯ ಗುಲಾಬಿ ಬಣ್ಣದ ಸೈಕಲ್ ಅನ್ನು ಮನೆಗೆ ಹತ್ತಿರವಿರುವ ತೆರೆದ ಚರಂಡಿಯಲ್ಲಿ ಪತ್ತೆ ಮಾಡಿದೆ. ಕಳೆದ ಎರಡು ದಿನಗಳಿಂದ ಹೈದರಾಬಾದ್‍ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಾರು ಚರಂಡಿಗಳು ತುಂಬಿ ಹರಿಯುತ್ತಿವೆ. ಹೀಗಾಗಿ ಬಾಲಕಿ ಚರಂಡಿಗೆ ಬಿದ್ದಿರಬಹುದೆಂದು ಶಂಕಿಸಿ ರಕ್ಷಣಾ ಪಡೆ ಪೊಲೀಸರಿಗೆ ಚರಂಡಿ ತೆರೆಯಲು ಸಹಾಯ ಮಾಡಿದ್ದಾರೆ.

    ಚರಂಡಿಯಲ್ಲಿ ಬಾಲಕಿ ಪತ್ತೆಯಾಗಿಲ್ಲ. ಆದರೆ ಸ್ವಲ್ಪ ಸಮಯದ ನಂತರ ಸಮೀಪದ ಕೆರೆಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಸದ್ಯಕ್ಕೆ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಸ್ಥಳದಲ್ಲಿ ಮಗಳ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಗುರುವಾರ ರಾತ್ರಿಯೇ ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ. ನಾವು ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡುತ್ತಿದ್ದೇವೆ. ಸದ್ಯ ತನಿಖೆಗಾಗಿ ನಾಲ್ಕು ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಅದೇ ಕಾಲೋನಿಯ ಮನೆಯೊಂದರ ಹೊರಗಿನ ಕ್ಯಾಮೆರಾದಿಂದ ಪಡೆದ ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ತನ್ನ ಸೈಕಲ್‍ನಲ್ಲಿ ಹೋಗುತ್ತಿರುವನ್ನು ಕಾಣಬಹುದು ಎಂದು ಸಹಾಯಕ ಪೊಲೀಸ್ ಆಯುಕ್ತ ಶಿವಕುಮಾರ್ ಹೇಳಿದರು.

  • ರಕ್ಷಾ ಬಂಧನದ ಹಾಡಿನ ಮೂಲಕ ಖ್ಯಾತಿ – ರಾಖಿ ಹಬ್ಬಕ್ಕೂ ಮುನ್ನ ಟಿಕ್‍ಟಾಕ್ ಸಿಂಗರ್ ಆತ್ಮಹತ್ಯೆ

    ರಕ್ಷಾ ಬಂಧನದ ಹಾಡಿನ ಮೂಲಕ ಖ್ಯಾತಿ – ರಾಖಿ ಹಬ್ಬಕ್ಕೂ ಮುನ್ನ ಟಿಕ್‍ಟಾಕ್ ಸಿಂಗರ್ ಆತ್ಮಹತ್ಯೆ

    ಹೈದರಾಬಾದ್: ಟಿಕ್‍ಟಾಕ್ ಮೂಲಕ ಖ್ಯಾತಿ ಪಡೆದುಕೊಂಡಿದ್ದ ಗಾಯಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಗಂಗಾಪುರ ಗ್ರಾಮದ ನಿವಾಸಿ ರಾಜು ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತ ಯುವಕ ಗಡ್ಡಮ್ ರಾಜು ಎಂದೇ ಖ್ಯಾತಿ ಪಡೆದುಕೊಂಡಿದ್ದನು. ಆದರೆ ಇಂದು ಬೆಳಗ್ಗೆ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

    ಮೃತ ರಾಜು ಟಿಕ್‍ಟಾಕ್‍ನಲ್ಲಿ ರಕ್ಷಾ ಬಂಧನದ ಹಬ್ಬಕ್ಕೆ ಸಂಬಂಧಿಸಿದ ಹಾಡಿನ ಮೂಲಕ ಗುರುತಿಸಿಕೊಂಡಿದ್ದನು. ನಂತರ ಟಿಕ್‍ಟಾಕ್‍ನಲ್ಲಿ ಅನೇಕ ಹಾಡುಗಳನ್ನು ಹಾಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದುಕೊಂಡಿದ್ದನು. ಆದರೆ ದುರದೃಷ್ಟಕರ ಸಂಗತಿ ಎಂದರೆ ರಾಜು ರಕ್ಷಾ ಬಂಧನದ ಹಬ್ಬಕ್ಕೂ ಮುನ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಳೆ ಅಂದರೆ ಸೋಮವಾರ ರಾಖಿ ಹಬ್ಬವಿದೆ.

    ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಆದರೆ ರಾಜು ಆತ್ಮಹತ್ಯೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಮಗನನ್ನು ಕಳೆದುಕೊಂಡು ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.

    ಸದ್ಯಕ್ಕೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂದು ಆಸ್ಪತ್ರೆಗೆ ರವಾನಿಸಿದ್ದಾರೆ. ಇತ್ತ ರಾಜು ಕುಟುಂವದವರು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • 120 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ 3 ವರ್ಷದ ಬಾಲಕ ಸಾವು

    120 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ 3 ವರ್ಷದ ಬಾಲಕ ಸಾವು

    – ತಾಯಿ ಸೀರೆ ಬಿಚ್ಚಿ ಬಾವಿಯೊಳಗೆ ಕೊಟ್ರೂ ಮಗು ಉಳಿಲಿಲ್ಲ
    – 25ಕ್ಕೂ ಅಧಿಕ ಸಿಬ್ಬಂದಿಯಿಂದ ಸತತ 12 ಗಂಟೆ ಕಾರ್ಯಾಚರಣೆ

    ಹೈದರಾಬಾದ್: 120 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಮೂರು ವರ್ಷದ ಮಗುವನ್ನು ನಿರಂತರ ರಕ್ಷಣಾ ಕಾರ್ಯಚರಣೆಯ ನಂತರವೂ ಉಳಿಸಲು ಸಾಧ್ಯವಾಗದಿರುವ ಘಟನೆ ತೆಲಂಗಾಣದ ಮೆಡಕ್ ಜಿಲ್ಲೆಯಲ್ಲಿ ನಡೆದಿದೆ.

    ಮೃತ ಬಾಲಕನನ್ನು ಸಾಯಿ ವರ್ಧನ್ ಎಂದು ಗುರುತಿಸಲಾಗಿದೆ. ವರ್ಧನ್ ಬುಧವಾರ ರಾತ್ರಿ ಮೆಡಕ್ ಜಿಲ್ಲೆಯ ಪಪನ್ನಪೆಟ್ ಮಂಡಲ್ ಸಮೀಪ ಪೊಡ್ಚನಂಪಲ್ಲಿ ಗ್ರಾಮದಲ್ಲಿ ಹೊಸದಾಗಿ ಕೊರೆಸಿದ್ದ ಬೋರ್‌ವೆಲ್‌ಗೆ ಬಿದ್ದಿದ್ದನು. ಮಾಹಿತಿ ತಿಳಿದು ತಕ್ಷಣ ಬಾಲಕನ ಪ್ರಾಣ ಉಳಿಸಲು ಅಧಿಕಾರಿಗಳು ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

    ಇಂದು ಬೆಳಗ್ಗೆ ಬಾಲಕನ ಮೃತದೇಹವನ್ನು ಬೋರ್‌ವೆಲ್‌ನಿಂದ ಹೊರತೆಗೆಯಲಾಗಿದೆ. ಬೋರ್‌ವೆಲ್‌ ಒಳಗೆ 17 ಅಡಿ ಆಳದಲ್ಲಿ ವರ್ಧನ್ ಮೃತದೇಹ ಪತ್ತೆಯಾಗಿದೆ. ಈ ಮೂಲಕ ನಿರಂತರ ರಕ್ಷಣಾ ಕಾರ್ಯಚರಣೆಯ ನಂತರವೂ ಬಾಲಕನ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

    ಬೋರ್‌ವೆಲ್‌ಗೆ ಬಾಲಕ ಬಿದ್ದ ತಕ್ಷಣ ಹೈದರಾಬಾದ್ ಮತ್ತು ಗುಂಟೂರಿನಿಂದ ಬಂದಿದ್ದ ಎನ್‌ಡಿಆರ್‌ಎಫ್ ತಂಡದ 25ಕ್ಕೂ ಅಧಿಕ ಸಿಬ್ಬಂದಿ ಸತತ 12 ಗಂಟೆ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಇಂದು ಬೆಳಗ್ಗೆ ಬಾಲಕನ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಧರ್ಮ ರೆಡ್ಡಿ ತಿಳಿಸಿದರು.

    ನಡೆದಿದ್ದೇನು?
    ಇತ್ತೀಚೆಗೆ ವರ್ಧನ್ ತಾತ ಕೊಳವೆ ಬಾವಿಗಳನ್ನು ಕೊರೆಸಿದ್ದರು. ನೀರು ಸಿಗದಿದ್ದಾಗ ಬುಧವಾರ ಮತ್ತೊಂದು ಬೋರ್‌ವೆಲ್‌ ಕೊರೆಸಿದ್ದರು. ಅದರಲ್ಲಿಯೂ ನೀರು ಸಿಗಲಿಲ್ಲ. ಇದರಿಂದ ಬೇಸರಗೊಂಡು ಕೊಳವೆ ಬಾವಿಯನ್ನು ಮುಚ್ಚದೆ ಹಾಗೆಯೇ ಬಿಟ್ಟುಬಿಟ್ಟರು. ಗದ್ದೆ ಪಕ್ಕದ ಮನೆಯಲ್ಲಿ ಸಾಯಿ ವರ್ಧನ್ ತಂದೆ ಮತ್ತು ತಾಯಿ ಮತ್ತಿಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದರು.

    ಬುಧವಾರ ಸಂಜೆ ಸುಮಾರು 5 ಗಂಟೆ ಜಿಲ್ಲೆಯ ಪಪನ್ನಪೇಟೆ ಮಂಡಲ್‍ದಲ್ಲಿರುವ ತೋಟದಲ್ಲಿ ಬಾಲಕ ತನ್ನ ಅಜ್ಜ ಮತ್ತು ತಂದೆಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾನೆ. ಮಾಹಿತಿ ತಿಳಿದು ಎನ್‌ಡಿಆರ್‌ಎಫ್ ತಂಡವೂ ಸ್ಥಳಕ್ಕೆ ಬಂದು 120 ಅಡಿ ತೆರೆದ ಬೋರ್‌ವೆಲ್‌ಗೆ ಆಮ್ಲಜನಕ ಸರಬರಾಜು ಮಾಡಿದೆ. ಅಲ್ಲದೇ ಬಾಲಕನನ್ನು ರಕ್ಷಿಸಲು ಪಕ್ಕದಲ್ಲಿ ಮಣ್ಣನ್ನು ಅಗೆಯಲಾಗಿತ್ತು. ಆದರೆ ಬಾಲಕನಿಗೆ ಸರಿಯಾಗಿ ಆಮ್ಲಜನಕ ಸಿಗದೆ ಮೃತಪಟ್ಟಿದ್ದು, ಇಂದು ಬೆಳಗ್ಗೆ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಬಾಲಕ ಬೋರ್‌ವೆಲ್‌ಗೆ ಬಿದ್ದ ತಕ್ಷಣ ತಾಯಿ ತಾನು ಉಟ್ಟಿದ್ದ ಸೀರೆಯನ್ನು ಬಿಚ್ಚಿ ಕೊಳವೆ ಬಾವಿಯೊಳಗೆ ಇಳಿಸಿದ್ದಾರೆ. ಅದನ್ನು ಹಿಡಿದುಕೊಂಡು ಮಗು ಮೇಲಕ್ಕೆ ಬರಬಹುದು ಎಂದು ಪ್ರಯತ್ನಿಸಿದ್ದಾರೆ. ಆದರೆ ಬಾಲಕ ಬಾವಿಯೊಳಗೆ ಆಳದವರೆಗೆ ಹೋಗಿದ್ದು, ಸೀರೆಯನ್ನು ಹಿಡಿದುಕೊಳ್ಳಲು ಸಾಧ್ಯವಾಗಿಲ್ಲ.

    ಸದ್ಯಕ್ಕೆ ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅನುಮತಿಯಿಲ್ಲದೆ ಮೂರು ಬೋರ್‌ವೆಲ್‌ಗಳನ್ನು ಕೊರೆಸಿದ್ದಾರೆ. ಆದರೆ ನೀರು ಸಿಗಲಿಲ್ಲ ಎಂದು ಅದನ್ನು ಮುಚ್ಚದ ಬಿಟ್ಟಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

  • ತುಂಬು ಗರ್ಭಿಣಿ ವೈದ್ಯೆಯಿಂದ ಜನರ ಸೇವೆ – ಪ್ರತಿದಿನ ಆರೋಗ್ಯ ಕೇಂದ್ರಕ್ಕೆ 30 ಕಿ.ಮೀ. ಪ್ರಯಾಣ

    ತುಂಬು ಗರ್ಭಿಣಿ ವೈದ್ಯೆಯಿಂದ ಜನರ ಸೇವೆ – ಪ್ರತಿದಿನ ಆರೋಗ್ಯ ಕೇಂದ್ರಕ್ಕೆ 30 ಕಿ.ಮೀ. ಪ್ರಯಾಣ

    – ಗ್ರಾಮಗಳ ಮನೆಗೆ ಹೋಗಿ ರೋಗಿಗಳ ತಪಾಸಣೆ
    – ಲಾಕ್‍ಡೌನ್ ವೇಳೆ ಜನರ ಸೇವೆಯೇ ಮುಖ್ಯ

    ಹೈದರಾಬಾದ್: ಕೊರೊನಾ ನಡುವೆಯೂ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಒಂದು ತಿಂಗಳ ಮಗುವನ್ನು ಕೈಯಲ್ಲಿ ಎತ್ತಿಕೊಂಡೇ ಕೆಲಸಕ್ಕೆ ಹಾಜರಾಗಿದ್ದರು. ಇದೀಗ ಎಂಟು ತಿಂಗಳ ಗರ್ಭಿಣಿಯೊಬ್ಬರು ಮನೆಯಲ್ಲಿ ವಿಶ್ರಾಂತಿ ಪಡೆಯುವ ಬದಲು ಪ್ರತಿದಿನ 30 ಕಿಲೋ ಮೀಟರ್ ಪ್ರಯಾಣಿಸಿ ಹಳ್ಳಗಳಿಂದ ಬರುವ ರೋಗಿಗಳ ಸೇವೆ ಮಾಡುತ್ತಿದ್ದಾರೆ.

    ಡಾ. ಜಾನ್ಸಿ (33) 8 ತಿಂಗಳ ಗರ್ಭಿಣಿಯಾಗಿದ್ದರೂ ಜನರ ಸೇವೆ ಮಾಡುತ್ತಿದ್ದಾರೆ. ಇವರು ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ಸುಮಾರು 30 ಕಿ.ಮೀ ಪ್ರಯಾಣಿಸುತ್ತಾರೆ. ಅಲ್ಲಿ ಬರುವ ಸುತ್ತಮುತ್ತಲ 30 ಹಳ್ಳಿಗಳಿಂದ ಬರುವ ರೋಗಿಗಳಿಗೆ ಆರೋಗ್ಯ ಸೇವೆ ನೀಡುತ್ತಿದ್ದಾರೆ. ದೇವಪಲ್ಲಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಯಾವುದೇ ಖಾಸಗಿ ಆರೋಗ್ಯ ಕೇಂದ್ರ ಇಲ್ಲ. ಹೀಗಾಗಿ ಇಲ್ಲಿನ ಸುತ್ತಮುತ್ತಲಿನ ಜನರು ಈ ಆರೋಗ್ಯ ಕೇಂದ್ರವನ್ನೇ ಅವಲಂಬಿಸಿದ್ದಾರೆ.

    ನಾನು ಕಳೆದ ಒಂದೂವರೆ ವರ್ಷದಿಂದ ಈ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಇಲ್ಲಿನ ಗ್ರಾಮಸ್ಥರು ಈ ಆರೋಗ್ಯ ಸೇವೆಗೆ ನಮ್ಮನ್ನು ನಂಬಿಕೊಂಡು ಬರುತ್ತಾರೆ. ಈ ಕೊರೊನಾ ಸೋಂಕು ಮತ್ತು ಲಾಕ್‍ಡೌನ್ ಮಧ್ಯೆ ಜನರ ಸೇವೆ ಮಾಡುವುದು ಮುಖ್ಯ ಎಂದು ಭಾವಿಸಿ ಆಸ್ಪತ್ರೆಗೆ ಬರುತ್ತಿದ್ದೇನೆ ಎಂದು ಡಾ.ಜಾನ್ಸಿ ಹೇಳಿದ್ದಾರೆ.

    ಲಾಕ್‍ಡೌನ್‍ನಿಂದಾಗಿ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಸಂಚಾರ ಮಾಡುವುದು ಕಷ್ಟವಾಗಿದೆ. ಆದರೂ ಡಾ.ಜಾನ್ಸಿ ಬುಡಕಟ್ಟು ಗ್ರಾಮಗಳ ಮನೆ ಮನೆಗೆ ಹೋಗಿ ರೋಗಿಗಳ ತಪಾಸಣೆ ಮಾಡುತ್ತಿದ್ದಾರೆ. ಅದರಲ್ಲೂ ಗರ್ಭಿಣಿಯರು ಮತ್ತು ಕೊರೊನಾ ವೈರಸ್ ಪ್ರಕರಣಗಳನ್ನು ಪರೀಕ್ಷೆ ಮಾಡುತ್ತಾರೆ. ಈ ಗ್ರಾಮಗಳಲ್ಲಿ ವಿದೇಶಗಳಿಂದ ಬಂದವರು ಕೂಡ ಇದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ ಕೊರೋನಾ ಸೋಂಕು ಲಕ್ಷಣ ಹೊಂದಿರುವ 10 ರೋಗಿಗಳಿಗೆ ಡಾ.ಜಾನ್ಸಿ ಚಿಕಿತ್ಸೆ ನೀಡುತ್ತಿದ್ದಾರೆ.

    ನಾವು ಕಳೆದ 10 ದಿನಗಳಲ್ಲಿ ಸುಮಾರು 10 ಗರ್ಭಿಣಿಯರನ್ನು ಹೆರಿಗೆಗಾಗಿ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಿದ್ದೇನೆ. ಹೆರಿಗೆಯ ಹೊರತಾಗಿ, ಬಿಪಿ, ಮಧುಮೇಹ ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿರುವ ಜನರು ಕೂಡ ಇಲ್ಲಿಗೆ ಬರುತ್ತಾರೆ. ನಾನು ಸರ್ಕಾರವು ನೀಡುವ ಮಾಸ್ಕ್, ಮತ್ತು ಗ್ಲೌಸ್‍ಗಳನ್ನು ಬಳಸುತ್ತೇನೆ. ಅದೇ ರೀತಿ ಸ್ಯಾನಿಟೈಸರ್ ಹಾಕಿಕೊಂಡ ಕೈ ಸ್ವಚ್ಛ ಮಾಡಿಕೊಳ್ಳುತ್ತೇನೆ. ಎಂದು ಡಾ.ಜಾನ್ಸಿ ತಿಳಿಸಿದ್ದಾರೆ.

    ಡಾ. ಜಾನ್ಸಿ ಮಾತೃತ್ವ ರಜೆ ತೆಗೆದುಕೊಳ್ಳುವ ಅವಕಾಶವಿದೆ. ಆದರೆ ಕೊರೊನಾದಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮನೆಯಲ್ಲಿ ಸುಮ್ಮನೇ ಕೂರುವ ಬದಲು ಜನರ ಸೇವೆ ಮಾಡುವುದು ಉತ್ತಮ ಎಂದು ಆರೋಗ್ಯ ಕೇಂದ್ರಕ್ಕೆ ಬರುತ್ತಿದ್ದಾರೆ.

    ನನ್ನ ಕೆಲಸಕ್ಕೆ ಕುಟುಂಬದವರ ಬೆಂಬಲವಿದೆ. ಪತಿ ಡಾ.ಪ್ರಸಾಂತ್ ಕೂಡ ವೈದ್ಯರಾಗಿದ್ದು, ಜಿಲ್ಲೆಯ ನೆಲ್ಲಿಮೆರ್ಲಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯನ್ನು ಚಿಕಿತ್ಸೆ ನೀಡುವ ವೈದ್ಯರು ದೇವರು ಎಂದು ಜನರು ಭಾವಿಸುತ್ತಾರೆ. ಹೀಗಾಗಿ ಅವರ ಸೇವೆ ಮಾಡುವುದೇ ನಮಗೆ ಮುಖ್ಯ ಎಂದು ಹೇಳಿದರು. ದೇವಪಲ್ಲಿಗಿಂತ ಮೊದಲು ಗೋದಾವರಿ ಜಿಲ್ಲೆಯ ರಾಮಚೋದವರಂನ ಬುಡಕಟ್ಟು ಪ್ರದೇಶದಲ್ಲಿ ಆರು ವರ್ಷಗಳ ಕಾಲ ಆರೋಗ್ಯ ಕೆಂದ್ರದಲ್ಲಿ ಕೆಲಸ ಮಾಡಿದ್ದರು.

  • ಪತ್ನಿ ಮಲಗಿದ್ದಾಗ ಪತಿಯಿಂದ ನೀಚ ಕೃತ್ಯ

    ಪತ್ನಿ ಮಲಗಿದ್ದಾಗ ಪತಿಯಿಂದ ನೀಚ ಕೃತ್ಯ

    – 3 ವರ್ಷದಿಂದ ದೂರವಿದ್ದ ಹೆಂಡ್ತಿ
    – ಮನೆಗೆ ಬಂದ ತಕ್ಷಣ ಕೊಂದೇಬಿಟ್ಟ

    ಹೈದರಾಬಾದ್: ವ್ಯಕ್ತಿಯೊಬ್ಬ ಮಕ್ಕಳಾಗಿಲ್ಲವೆಂಬ ಕಾರಣಕ್ಕೆ ಮಲಗಿದ್ದ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    ನಾಗಜ್ಯೋತಿ (26) ಕೊಲೆಯಾದ ಪತ್ನಿ. ಚೆರುಮಾಲ್ಕಾಪುರಂ ಗ್ರಾಮದ ನಿವಾಸಿ ಸೋಮಶೇಖರ್ ಮಲಗಿದ್ದ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ಆತ್ಮಹತ್ಯೆ ಎಂದು ಬಿಂಬಿಸಲು ಪತ್ನಿಯನ್ನ ಫ್ಯಾನಿಗೆ ನೇಣು ಹಾಕಿದ್ದಾನೆ.

    ಏನಿದು ಪ್ರಕರಣ?
    ನಾಗಜ್ಯೋತಿ 2012ರಲ್ಲಿ ಸೋಮಶೇಖರ್ ನನ್ನು ಮದುವೆಯಾಗಿದ್ದರು. ಆದರೆ ಮದುವೆಯಾಗಿ ಕೆಲವು ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಇದರಿಂದ ಪತ್ನಿಯನ್ನು ಸೋಮಶೇಖರ್ ಪ್ರತಿನಿತ್ಯ ನಿಂದಿಸುತ್ತಿದ್ದನು. ಇದರಿಂದಾಗಿ ನೊಂದ ನಾಗಜ್ಯೋತಿ ಮೂರು ವರ್ಷಗಳಿಂದ ತವರು ಮನೆಯಲ್ಲಿ ಉಳಿದುಕೊಂಡಿದ್ದರು.

    ಒಂದು ತಿಂಗಳ ಹಿಂದೆ ಗ್ರಾಮದ ಮುಖ್ಯಸ್ಥರ ನಡುವೆ ಪಂಚಾಯಿತಿ ನಡೆದಿದ್ದು, ಕೊನೆಗೆ ನಾಗಜ್ಯೋತಿ ಮತ್ತೆ ಪತಿಯ ಜೊತೆ ವಾಸಿಸುತ್ತಿದ್ದರು. ಆದರೆ ಮುಂಜಾನೆ ನಿದ್ದೆ ಮಾಡುತ್ತಿದ್ದ ನಾಗಜ್ಯೋತಿಯ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ಫ್ಯಾನಿಗೆ ನೇಣು ಹಾಕಿದ್ದಾನೆ. ನಂತರ ನನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಎಲ್ಲರಿಗೂ ನಂಬಿಸುವ ಪ್ರಯತ್ನ ಮಾಡಿದ್ದಾನೆ.

    ಮೃತ ನಾಗಜ್ಯೋತಿ ಸಂಬಂಧಿಕರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಗ್ರಾಮಕ್ಕೆ ಬಂದು ಆರೋಪಿ ಸೋಮಶೇಖರ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದ್ದಾರೆ. ಆಗ ತಾನೇ ಕೊಲೆ ಮಾಡಿ ನೇಣು ಹಾಕಿದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಮೃತ ನಾಗಜ್ಯೋತಿ ಪೋಷಕರು, ತಮ್ಮ ಮಗಳನ್ನು ಪ್ಲಾನ ಮಾಡಿ ಕೊಲೆ ಮಾಡಿದ್ದಾರೆ. ಈ ಕೃತ್ಯಕ್ಕೆ ಆರೋಪಿ ಸೋಮಶೇಖರ್ ತಂದೆ ಕೂಡ ಸಾಥ್ ನೀಡಿರುವುದಾಗಿ ಆರೋಪಿಸಿದ್ದಾರೆ.

    ಸದ್ಯಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಗಜ್ಯೋತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

  • ಡೆಲಿವರಿ ಬಾಯ್‍ಯಿಂದ ಥಳಿತ – 10 ದಿನದ ಬಳಿಕ ಸೂಪರ್‌ವೈಸರ್‌ ಸಾವು

    ಡೆಲಿವರಿ ಬಾಯ್‍ಯಿಂದ ಥಳಿತ – 10 ದಿನದ ಬಳಿಕ ಸೂಪರ್‌ವೈಸರ್‌ ಸಾವು

    ಹೈದರಾಬಾದ್: ಡೆಲಿವರಿ ಹುಡುಗನಿಂದ ಥಳಿತಕ್ಕೊಳಗಾಗಿದ್ದ ಸೂಪರ್‌ವೈಸರ್‌ 10 ದಿನಗಳ ನಂತರ ಸಾವನ್ನಪ್ಪಿರುವ ಘಟನೆ ಹೈದರಾಬಾದ್‍ನ ಗೋಲ್ಕೊಂಡದಲ್ಲಿ ನಡೆದಿದೆ.

    ಎಎಸ್‍ಸಿಎ ಮ್ಯಾನೇಜ್‍ಮೆಂಟ್ ಸರ್ವಿಸಸ್ ಕಂಪನಿಯಲ್ಲಿ ಸೂಪರ್‌ವೈಸರ್‌ ಆಗಿ ಕೆಲಸ ಮಾಡುತ್ತಿದ್ದ 20 ವರ್ಷದ ಶಿವರಾಮ್ ಮೃತ ದುರ್ದೈವಿ. ಇದೇ ಕಂಪನಿಯಲ್ಲಿ ಡೆಲಿವರಿ ಹುಡುಗನಾಗಿ ಕೆಲಸ ಮಾಡುತ್ತಿದ್ದ ಮುನೀರ್ ಡಿಸೆಂಬರ್ 20 ರಂದು ಶಿವರಾಮ್ ಮೇಲೆ ಹಲ್ಲೆ ಮಾಡಿದ್ದ.

    ಸರಿಯಾದ ಸಮಯಕ್ಕೆ ಮುನೀರ್ ಡೆಲಿವರಿ ನೀಡುವುದಿಲ್ಲ ಎಂದು ಶಿವರಾಮ್ ಕಂಪನಿಯ ಮ್ಯಾನೇಜರ್ ಗೆ ದೂರು ನೀಡಿದ್ದರು. ಇದನ್ನೇ ಮನಸ್ಸಿನಲ್ಲಿ ಇಟ್ಟಿಕೊಂಡಿದ್ದ ಮುನೀರ್ ಡಿಸೆಂಬರ್ 20 ರಂದು ಆಫೀಸ್‍ನಲ್ಲಿ ಶಿವರಾಮ್ ಜೊತೆ ಜಗಳ ಮಾಡಿದ್ದಾನೆ. ಈ ನಡುವೆ ಮುನೀರ್ ಶಿವರಾಮ್‍ಗೆ ತಲೆಗೆ ಹೊಡೆದಿದ್ದಾನೆ. ಆ ಸಮಯದಲ್ಲಿ ಆಫೀಸ್‍ನಲ್ಲಿದ್ದ ಕೆಲವರು ಶಿವರಾಜ್ ಅವರನ್ನು ಬಿಡಿಸಿ ಮನೆಗೆ ಕಳುಹಿಸಿದ್ದಾರೆ.

    ಘಟನೆಯ ನಂತರ ಶಿವರಾಮ್ ತಾನು ತಂಗಿದ್ದ ಪಿಜಿಗೆ ವಾಪಸ್ ಬಂದಿದ್ದಾರೆ. ಅವರ ತಲೆಗೆ ತೀವ್ರವಾದ ಗಾಯವಾದ ಕಾರಣ ಪಿಜಿಯಲ್ಲಿ ತಲೆನೋವು ಎಂದು ಬಿದ್ದು ಪ್ರಜ್ಞೆ ತಪ್ಪಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ತಲೆಗೆ ತೀವ್ರವಾದ ಗಾಯವಾಗಿದೆ ಎಂದು ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ. ಇದಾದ ನಂತರ 10 ದಿನಗಳ ಕಾಲ ಕೋಮಾದಲ್ಲಿದ್ದ ಶಿವರಾಮ್ ಮೃತಪಟ್ಟಿದ್ದಾರೆ.

    ಮುನೀರ್ ಶಿವರಾಮ್‍ಗೆ ಥಳಿಸಿರುವ ದೃಶ್ಯ ಆಫೀಸಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ದೂರು ದಾಖಲಿಸಿಕೊಂಡು, ಆರೋಪಿ ಮುನೀರ್ ನನ್ನು ಬಂಧಿಸಿದ್ದಾರೆ.

  • ಮುಸ್ಲಿಮರು ಮುಸ್ಲಿಮರಿಗೆ ಮತ ಹಾಕ್ಬೇಕು: ಅಸಾದುದ್ದಿನ್ ಓವೈಸಿ

    ಮುಸ್ಲಿಮರು ಮುಸ್ಲಿಮರಿಗೆ ಮತ ಹಾಕ್ಬೇಕು: ಅಸಾದುದ್ದಿನ್ ಓವೈಸಿ

    ಹೈದರಾಬಾದ್: ಮುಸ್ಲಿಮ್ ಸಮುದಾಯದವರು ಮುಸ್ಲಿಮ್ ಅಭ್ಯರ್ಥಿಗಳಿಗೆ ಮತ ಹಾಕಬೇಕೆಂದು ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಅಧ್ಯಕ್ಷ, ಹೈದರಬಾದಿನ ಸಂಸದ ಅಸಾದುದ್ದಿನ್ ಓವೈಸಿ ಹೇಳಿಕೆಯೊಂದನ್ನು ನೀಡಿದ್ದು ಈಗ ವಿವಾದಕ್ಕೆ ಗುರಿಯಾಗಿದೆ.

    ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಮ್ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಸಮುದಾಯದ ಸದಸ್ಯರಿಗೆ ಒತ್ತಾಯ ಮಾಡಿದ್ದಾರೆ.

    ಹಪೂರ್ ನಲ್ಲಿ ನಡೆದ ಕಾಸಿಂ ಹತ್ಯೆ ನಮ್ಮನ್ನು ಚಿಂತೆಗೀಡುಮಾಡಿದೆ. ಆದರೆ ನಾನು ನಿಮಗೆ ಈ ವಿಚಾರಕ್ಕೆ ಕಣ್ಣೀರು ಸುರಿಸಿ ಎಂದು ಹೇಳುತ್ತಿಲ್ಲ. ಆದರೆ ನಿಮ್ಮ ಆತ್ಮಸಾಕ್ಷಿ ಅನುಗುಣವಾಗಿ ನಡೆಯುವಂತೆ ಎಚ್ಚರಿಸುತ್ತಿದ್ದೇನೆ. ಜಾತ್ಯಾತೀತತೆಯ ಕುರಿತು ಮಾತನಾಡುತ್ತಿರುವ ಜನರು ದೊಡ್ಡ ಡಕಾಯಿತರು ಮತ್ತು ಅವಕಾಶವಾದಿಗಳಾಗಿದ್ದಾರೆ. ಅವರು ಮುಸ್ಲಿಮರನ್ನು 70 ವರ್ಷಗಳಿಂದ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ನಮಗೆ ಬೆದರಿಕೆ ಹಾಕಿ ನಮ್ಮನ್ನು ಸುಮ್ಮನಿರುವಂತೆ ಮಾಡಿದ್ದಾರೆ ಎಂದು ದೂರಿದರು.

    ಈಗ ಮುಸ್ಲಿಮರು ಅವರ ಹಕ್ಕಿಗಾಗಿ ಹೋರಾಡಬೇಕಿದೆ. ನೀವು ಜ್ಯಾತ್ಯಾತೀತೆಯನ್ನು ಬದುಕಿಸಬೇಕೆಂದಿದ್ದರೆ ನಿಮಗಾಗಿ ಹೋರಾಡಿ. ಅದನ್ನು ತಿಳಿಯಲು ರಾಜಕೀಯ ಶಕ್ತಿಯಾಗಿ ಮುಸ್ಲಿಮ್ ನಾಯಕರು ಗೆಲ್ಲುವಂತೆ ಮಾಡಿ ಎಂದಿದ್ದಾರೆ.

    ಕಾರ್ಯಕ್ರಮದಲ್ಲಿ ಬಹಿರಂಗವಾಗಿಯೇ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಓವೈಸಿ ಹಪೂರ್ ಘಟನೆ ಸಂಬಂಧಿಸಿದಂತೆ ಅವಾಚ್ಯ ಶಬ್ಧಗಳನ್ನ ಬಳಸಿದ್ದಾರೆ. ಅಲ್ಲದೇ ಎಷ್ಟೋ ಮುಸ್ಲಿರನ್ನು ಬಂಧಿಸಲಾಗಿದೆ. ಇದೇನಾ ನಿಮ್ಮ ಸಬ್ ಕಿ ಸಾಥ್, ಸಬ್ ಕಿ ವಿಕಾಸ್ ಎಂದು ಮೋದಿಯವರ ವಿರುದ್ಧ ಹರಿಹಾಯ್ದಿದರು.

    ಭಾರತೀಯ ಜನತಾ ಪಾರ್ಟಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಹಿಂದೂ ಮತ ಬ್ಯಾಂಕ್ ಗಾಗಿ ಹಾತೊರೆಯುತ್ತಿವೆ. ಆದರೆ ಮುಸ್ಲಿಂರನ್ನು ಮತಬ್ಯಾಂಕ್ ಎಂದು ಹೇಳುತ್ತ ಎರಡೂ ಪಕ್ಷಗಳು ವಂಚಿಸುತ್ತಿವೆ ಎಂದು ದೂರಿದರು.

    ಉತ್ತರಪ್ರದೇಶದ ಹಪೂರ್ ದಲ್ಲಿ ಹಸು ಕಳ್ಳಸಾಗಾಣಿಗೆ ಶಂಕೆಯ ಹಿನ್ನೆಲೆಯಲ್ಲಿ ಗುಂಪೊಂದು ಕಾಸೀಂ(38) ಹತ್ಯೆಗೈದರೆ, ಶಾಮಿಯುದ್ದೀನ್(65) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು.

  • ಸೋದರ ಮಾವನಿಂದಲೇ ಅವಳಿ ಮಕ್ಕಳ ಹತ್ಯೆ!

    ಸೋದರ ಮಾವನಿಂದಲೇ ಅವಳಿ ಮಕ್ಕಳ ಹತ್ಯೆ!

    ಹೈದರಾಬಾದ್: ಇಬ್ಬರು ಬುದ್ಧಿಮಾಂದ್ಯ ಮಕ್ಕಳನ್ನು ಸೋದರಮಾವನೇ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಹೈದರಾಬಾದ್‍ನ ಚೈತನ್ಯಪುರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    12 ವರ್ಷದ ಸೃಜನಾ ರೆಡ್ಡಿ ಹಾಗೂ ವಿಷ್ಣುವರ್ಧನ ರೆಡ್ಡಿ ಕೊಲೆಯಾದ ಅವಳಿ ಮಕ್ಕಳು. ಶುಕ್ರವಾರ ಅವಳಿ ಮಕ್ಕಳನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ತನ್ನ ಸೋದರ ಮಾವನೇ ಮಕ್ಕಳನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಮಲ್ಲಿಕಾರ್ಜುನ ರೆಡ್ಡಿಯು ಹೈದರಾಬಾದ್‍ನ ಚೈತನ್ಯಪುರದ ಬಾಡಿಗೆ ಮನೆಯ ವಾಸಿಯಾಗಿದ್ದು, ಶುಕ್ರವಾರ ತನ್ನ ತಂಗಿ ಮಕ್ಕಳನ್ನು ಈಜು ಕಲಿಸುವುದಾಗಿ ಹೇಳಿ ನಲ್ಗೋಂಡ ಜಿಲ್ಲೆಯಿಂದ ಕರೆದುಕೊಂಡು ಬಂದಿದ್ದಾನೆ. ಮನೆಗೆ ಬಂದ ಮಕ್ಕಳನ್ನು ತನ್ನ ಸ್ನೇಹಿತ, ಮನೆಯಲ್ಲಿದ್ದ ಜೊತೆಗಾರ ಟ್ಯಾಕ್ಸಿ ಚಾಲಕನೊಂದಿಗೆ ಸೇರಿ ಹತ್ಯೆ ಮಾಡಿದ್ದಾನೆ. ಇಂದು ಬೆಳಗ್ಗೆ ಮಕ್ಕಳ ಮೃತದೇಹವನ್ನು ಕಾರಿನಲ್ಲಿ ಸಾಗಿಸುವಾಗ ಮನೆಯ ಮಾಲೀಕ ಗಮನಿಸಿ ಪೊಲೀಸರಿಗೆ ಸುದ್ದಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಪೊಲೀಸರು ಹತ್ಯೆಯ ಹಿಂದೆ ಪೋಷಕರ ಕೈವಾಡ ಶಂಕೆ ವ್ಯಕ್ತವಾಗಿ ಲಕ್ಷ್ಮೀ ಹಾಗೂ ಶ್ರೀನಿವಾಸ್‍ರವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ತನ್ನ ಅಣ್ಣ ಈಜು ಕಲಿಸುವ ಸಲುವಾಗಿ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾನೆ. ಇಬ್ಬರೂ ಅವಳಿ ಮಕ್ಕಳಾಗಿದ್ದು ಹುಟ್ಟಿನಿಂದಲೂ ಬುದ್ಧಿಮಾಂದ್ಯರಾಗಿದ್ದರು, ಅಲ್ಲದೇ ಇಬ್ಬರಿಗೂ ಮಾತು ಸಹ ಬರುತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಶನಿವಾರ ಬೆಳಗ್ಗೆ ಮಕ್ಕಳ ಹತ್ಯೆ ಕುರಿತು ಆರೋಪಿ ಮಲ್ಲಿಕಾರ್ಜುನ ರೆಡ್ಡಿ ಹಾಗೂ ಕೃತ್ಯಕ್ಕೆ ಸಹಾಯ ಮಾಡಿದ ಟ್ಯಾಕ್ಸಿ ಚಾಲಕನನ್ನು ಬಂಧಿಸಿದ್ದೇವೆ. ಕೃತ್ಯದಲ್ಲಿ ಆರೋಪಿ ತಂಗಿಯ ಕೈವಾಡ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರ ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

  • ಐಪಿಎಲ್ ನಲ್ಲಿ 30 ದಾಖಲೆಗಳು ಉಡೀಸ್!

    ಐಪಿಎಲ್ ನಲ್ಲಿ 30 ದಾಖಲೆಗಳು ಉಡೀಸ್!

    ಮುಂಬೈ: 2018ರ ಐಪಿಎಲ್ ಗೆ ಮುಬೈನಲ್ಲಿ ಅದ್ಧೂರಿಯಾಗಿ ತೆರೆ ಬಿದ್ದಿದ್ದು, ಚೆನ್ನೈ ತಂಡ ಮೂರನೇ ಬಾರಿಗೆ ಕಪ್ ತನ್ನದಾಗಿಸಿಕೊಂಡಿದೆ. ಅಲ್ಲದೇ ಟೂರ್ನಿಯಲ್ಲಿ 30 ಹೊಸ ದಾಖಲೆಗಳು ನಿರ್ಮಾಣವಾಗಿದ್ದು, ಈ ಬಾರಿಯ ಐಪಿಎಲ್ ದಾಖಲಾದ ಪ್ರಮುಖ ದಾಖಲೆಗಳು ಇಂತಿದೆ.

    ಟೂರ್ನಿಯ ಆರಂಭಿಕ ಎರಡನೇ ಪಂದ್ಯದಲ್ಲಿಯೇ ಕನ್ನಡಿಗ ಕೆಎಲ್ 14 ಎಸೆಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಈ ಹಿಂದಿನ ದಾಖಲೆ ಮುರಿದಿದ್ದರು. ಡೆಲ್ಲಿ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅಜೇಯ 128(63) ರನ್ ಬಾರಿಸಿ ಐಪಿಎಲ್ ನಲ್ಲಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಡೆದರು. ಬೆಂಗಳೂರು, ಚೆನ್ನೈ ನಡುವಿನ ಪಂದ್ಯವೊಂದರಲ್ಲಿ 33 ಸಿಕ್ಸರ್ ಮೂಡಿ ಬಂದು ಐಪಿಎಲ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿದ ಪಂದ್ಯಕ್ಕೆ ಸಾಕ್ಷಿಯಾಗಿತ್ತು.

    ಚೆನ್ನೈ ತಂಡದ ನಾಯಕ ಧೋನಿ ಐಪಿಎಲ್ ನಲ್ಲಿ 150 ಪಂದ್ಯ ಪೂರ್ಣಗೊಳಿಸಿದ ಆಟಗಾರರಾದರೆ, ಮತ್ತೊಂದೆಡೆ ನಾಯಕನಾಗಿ ಅತೀ ಹೆಚ್ಚು ರನ್ ಸಿಡಿಸಿದ ಗಂಭೀರ್ ದಾಖಲೆ ಮುರಿದರು. ಅಲ್ಲದೇ ಟಿ20 ಮಾದರಿಯಲ್ಲಿ ಅತೀ ಹೆಚ್ಚು (144) ಕ್ಯಾಚ್, 73 ಸ್ಟಪಿಂಗ್ ಹಾಗೂ 186 ಸಿಕ್ಸರ್ ಸಿಡಿಸಿ ದಾಖಲೆ ಬರೆದರು. ಐಪಿಎಲ್ ನಲ್ಲಿ 150 ಪಂದ್ಯಗಳನ್ನು ಗೆದ್ದ ಸಾಧನೆಯನ್ನು ಮಾಡಿದರು. ಅಲ್ಲದೇ ಕೀಪರ್ ಆಗಿ 8 ಬಾರಿಗೆ ಐಪಿಎಲ್ ಫೈನಲ್ ಪ್ರವೇಶ ಪಡೆದರು. ಆದರೆ ಹೈದರಾಬಾದ್ ತಂಡದ ಬೌಲರ್ ತಂಪಿ ಪಂದ್ಯವೊಂದರಲ್ಲಿ 70 ರನ್ ನೀಡಿ ಬೇಡದ ದಾಖಲೆ ಪಡೆದರು. ಈ ಬಾರಿಯ ಐಪಿಎಲ್ ನಲ್ಲಿ ಒಟ್ಟಾರೆ 872 ಸಿಕ್ಸರ್ ಬಾರಿಸಲಾಗಿದ್ದು, ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಸಿಕ್ಸರ್ ದಾಖಲಾಯಿತು.

    ಅಫ್ಘನ್ ನ ಮುಜೀಬ್ ಪಂಜಾಬ್ ಪರ 17 ವರ್ಷಕ್ಕೆ ಕಣಕ್ಕೆ ಇಳಿದು ಐಪಿಎಲ್ ಪಂದ್ಯದಲ್ಲಿ ವಿಕೆಟ್ ಪಡೆದ ಯುವ ಆಟಗಾರ ಎನಿಸಿಕೊಂಡರು. ಅಲ್ಲದೇ ಡೆಲ್ಲಿ ತಂಡದ ಸಂದೀಪ್ ಲಾಮಿಚ್ಚನೆ ಐಪಿಎಲ್ ಆಡಿದ ಮೊದಲ ನೇಪಾಳ ಆಟಗಾರ ಎಂಬ ಇತಿಹಾಸ ಬರೆದರು. ಆಸೀಸ್ ಆಟಗಾರ ಆರೋನ್ ಫಿಂಚ್ ಈ ಬಾರಿಯ ಐಪಿಎಲ್ ನಲ್ಲಿ ಪಂಜಾಬ್ ತಂಡದ ಪರ ಕಣಕ್ಕೆ ಇಳಿಯುವುದರೊಂದಿಗೆ ಐಪಿಎಲ್ ನಲ್ಲಿ 7 ತಂಡಗಳ ಪರ ಭಾಗವಹಿಸಿದ ಆಟಗಾರನಾಗಿ ಹೊರ ಹೊಮ್ಮಿದರು.

    ಪಂದ್ಯವೊಂದರಲ್ಲಿ ಎರಡು ತಂಡದ ನಾಯಕರು ಸಹ 90ಪ್ಲಸ್ ರನ್ ಸಿಡಿಸಿದ ಹೆಗ್ಗಳಿಕೆಗೆ ಮುಂಬೈನ ರೋಹಿತ್, ಆರ್ ಸಿಬಿ ಕೊಹ್ಲಿ ಪಾತ್ರರಾದರು. ಅಲ್ಲದೇ ಕೊಹ್ಲಿ 54 ಅರ್ಧಶತಕ ಸಿಡಿಸಿ ಐಪಿಎಲ್ ಅತಿ ಹೆಚ್ಚು ಅರ್ಧ ಶತಕ ಸಿಡಿಸಿದ ಬ್ಯಾಟ್ಸ್ ಮನ್ ಎನ್ನುವ ಗಿರಿಮೆಗೆ ಪಾತ್ರರಾದರು.

    51 ದಿನಗಳ ಕಾಲ ನಡೆದ ದೇಶಿಯ ಕ್ರಿಕೆಟ್ ಹಬ್ಬ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದಿದೆ. ಅಲ್ಲದೇ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಯುವ ಹಾಗೂ ಅನುಭವಿ ಆಟಗಾರರಿಗೂ ತಮ್ಮ ಸಾಮಥ್ರ್ಯ ಪ್ರದರ್ಶಿಸುವ ವೇದಿಕೆಯಾಗಿ ನಿರ್ಮಾಣವಾಗಿತ್ತು.