Tag: ಹೈದರಾಬಾದ್ ಪೊಲೀಸರು

  • ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ – ಸಿದ್ದಾರ್ಥ್ ವಿರುದ್ಧ FIR ದಾಖಲು

    ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ – ಸಿದ್ದಾರ್ಥ್ ವಿರುದ್ಧ FIR ದಾಖಲು

    ಹೈದರಾಬಾದ್: ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಕಾಲಿವುಡ್ ನಟ ಸಿದ್ಧಾರ್ಥ್ ವಿರುದ್ಧ ಹೈದರಾಬಾದ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ಬಿಜೆಪಿ ನಾಯಕರಾದ ನೀಲಂ ಭಾರ್ಗವ ರಾಮ್ ಮತ್ತು ಪ್ರೇರಣಾ ಟಿ ನೀಡಿದ ದೂರಿನ ಆಧಾರದ ಮೇಲೆ ಹೈದರಾಬಾದ್ ಪೊಲೀಸರು ನಟ ಸಿದ್ಧಾರ್ಥ್ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಜನವರಿ 5ರಂದು ಪಂಜಾಬ್‍ನ ಫಿರೋಜ್‍ಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಂಟಾದ ಭದ್ರತಾ ಲೋಪ ಕುರಿತಂತೆ ಸೈನಾ ನೆಹ್ವಾಲ್ ಅವರು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ಸಿದ್ದಾರ್ಥ್ ಅವರು ಅವಹೇಳಕಾರಿ ಕಾಮೆಂಟ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಸೈನಾ ನೆಹ್ವಾಲ್ ಟ್ವೀಟ್‍ಗೆ ಸಿದ್ದಾರ್ಥ್ ಅವಹೇಳನಕಾರಿ ಕಾಮೆಂಟ್ – ನೆಟ್ಟಿಗರು ಗರಂ

    ಈ ಹಿನ್ನೆಲೆ ಸಿದ್ಧಾರ್ಥ್ ಅವರು, ಆತ್ಮೀಯ ಸೈನಾ, ಕೆಲವು ದಿನಗಳ ಹಿಂದೆ ನಿಮ್ಮ ಟ್ವೀಟ್‍ಗೆ ಪ್ರತಿಕ್ರಿಯೆಯಾಗಿ ನಾನು ಬರೆದ ನನ್ನ ಅಸಭ್ಯ ಹಾಸ್ಯಕ್ಕಾಗಿ ನಾನು ನಿಮ್ಮಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ನಿಮ್ಮೊಂದಿಗೆ ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ ಅಂದು ನಿಮ್ಮ ಟ್ವೀಟ್ ಅನ್ನು ನಾನು ಓದಿದಾಗ ನನಗೆ ಕೋಪವನ್ನು ತಡೆದುಕೊಳ್ಳಲಾಗಲಿಲ್ಲ. ಅದಕ್ಕೆ ಆ ರೀತಿ ಪ್ರತಿಕ್ರಿಯೆ ನೀಡಿದೆ.

    ಯಾವುದೇ ದುರುದ್ದೇಶದಿಂದ ನಾನು ಆ ರೀತಿ ಪ್ರತಿಕ್ರಿಯೆಯನ್ನು ನೀಡಲಿಲ್ಲ. ನಾನು ಸ್ತ್ರೀವಾದಿ ಮಿತ್ರ. ನನ್ನ ಟ್ವೀಟ್‍ನಲ್ಲಿ ಯಾವುದೇ ಲಿಂಗವನ್ನು ಸೂಚಿಸಿಲ್ಲ. ನಿಮ್ಮ ಮೇಲೆ ಯಾವುದೇ ದುರುದ್ದೇಶದಿಂದ ಆ ಪದಗಳನ್ನು ಬಳಸಲಿಲ್ಲ ಎಂಬ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ. ಈ ಪತ್ರವನ್ನು ನೀವು ಸಮ್ಮತಿಸುತ್ತೀರಾ ಎಂದು ನಾನು ಭಾವಿಸುತ್ತೇನೆ. ನೀವು ಯಾವಾಗಲೂ ನನ್ನ ಚಾಂಪಿಯನ್ ಆಗಿರುತ್ತೀರಿ ಎಂದು ಬರೆದು ಕ್ಷಮೆಯನ್ನು ಕೇಳಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

  • ರಕ್ಷಣೆ ಬೇಕಾದಾಗ ಎನ್‍ಕೌಂಟರ್ ಮಾಡಬಹುದು, ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು: ಸಿದ್ದರಾಮಯ್ಯ

    ರಕ್ಷಣೆ ಬೇಕಾದಾಗ ಎನ್‍ಕೌಂಟರ್ ಮಾಡಬಹುದು, ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು: ಸಿದ್ದರಾಮಯ್ಯ

    ರಾಯಚೂರು: ರಕ್ಷಣೆ ಬೇಕಾದಾಗ ಎನ್‍ಕೌಂಟರ್ ಮಾಡಬಹುದು, ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ರಾಯಚೂರಿನ ಸಿಂಧನೂರಿನಲ್ಲಿ ಸಿದ್ದರಾಮಯ್ಯನವರು ಹೈದರಾಬಾದ್ ಎನ್‍ಕೌಂಟರ್ ವಿಚಾರವಾಗಿ ಮಾತನಾಡಿ, ಪೊಲೀಸರಿಗೆ ರಕ್ಷಣೆ ಬೇಕಾದಾಗ, ಆರೋಪಿಗಳು ತಪ್ಪಿಸಿಕೊಂಡು ಹೋದಾಗ ಎನ್‍ಕೌಂಟರ್ ಮಾಡಬಹುದು. ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಲಾಯರ್ ಆಗಿ ನಾನು ಹೇಳುತ್ತಿದ್ದೇನೆ ಸುಮ್ಮನೆ ಹೇಳಲ್ಲ. ಇಂತಹ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು. ನಮ್ಮ ದೇಶದಲ್ಲಿ ಮರಣದಂಡನೆ ಶಿಕ್ಷೆಯಿಲ್ಲ, ಅದನ್ನು ಜಾರಿಗೆ ತರಬೇಕು ಎಂದು ಹೇಳಿದರು.

    ಇದೇ ವೇಳೆ ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿ, ಉಪಚುನಾವಣೆಯಲ್ಲಿ 12 ಸ್ಥಾನ ಗೆಲ್ಲುತ್ತೇವೆ 15 ಸ್ಥಾನ ಗೆದ್ದರೂ ಅಚ್ಚರಿಯಿಲ್ಲ ಎಂದರು. ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷಾಂತರಿಗಳಿಗೆ ವಿರೋಧ ಅಲೆಯಿದೆ. ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ. 12 ಸೀಟ್ ಗೆದ್ದರೆ ನಮಗೆ ಅವಕಾಶ ಇದೆ. ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಎಂದರು.

    ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಫಲಿತಾಂಶ ಮೇಲೆ ಅವಲಂಬಿಸಿದೆ. ದೇವೇಗೌಡರು ಒಮ್ಮೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ಹೇಳುತ್ತಾರೆ. ಇನ್ನೊಮ್ಮೆ ಸೋನಿಯಾ ಗಾಂಧಿ ಜೊತೆ ಮಾತನಾಡುತ್ತೇನೆ ಎನ್ನುತ್ತಾರೆ ಎಂದು ತಿಳಿಸಿದರು.

    ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗಬಾರದು ಎಂದು ನಾವು ಎಲ್ಲಿಯೂ ಹೇಳಿಲ್ಲ. ಪಕ್ಷದಲ್ಲಿ ಯಾರನ್ನು ಐಸೋಲೆಟ್ ಮಾಡುವ ಕೆಲಸ ನಡೆದಿಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.