Tag: ಹೈದರಾಬಾದ್ ಪೊಲೀಸ್

  • ಬಲವಂತದ ಮತಾಂತರ, ಮೋಸದ ಮದ್ವೆ – ಪಾಕಿಸ್ತಾನದ ವ್ಯಕ್ತಿ ಹೈದರಾಬಾದ್‌ನಲ್ಲಿ ಅರೆಸ್ಟ್

    ಬಲವಂತದ ಮತಾಂತರ, ಮೋಸದ ಮದ್ವೆ – ಪಾಕಿಸ್ತಾನದ ವ್ಯಕ್ತಿ ಹೈದರಾಬಾದ್‌ನಲ್ಲಿ ಅರೆಸ್ಟ್

    – ವಿಚ್ಛೇದನ ಕೊಟ್ಟು ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದ ಮಹಿಳೆ

    ಹೈದರಾಬಾದ್‌: ಬಲವಂತದ ಮತಾಂತರ (Forced Conversion), ಮೋಸದ ಮದ್ವೆ, ದ್ರೋಹ ಬಗೆದಿರುವ ಆರೋಪದ ಮೇಲೆ 1998ರಲ್ಲಿ ಭಾರತಕ್ಕೆ ವಲಸೆ ಬಂದಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನ ಹೈದರಾಬಾದ್‌ನ (Hyderabad) ಲಂಗರ್‌ಹೌಸ್ ಪೊಲೀಸರು ಬಂಧಿಸಿದ್ದಾರೆ.

    ಹೈದರಾಬಾದ್‌ನ ಬಂಜಾರ ಹಿಲ್ಸ್‌ನ ಮೌಂಟ್ ಬಂಜಾರ ಕಾಲೋನಿಲ್ಲಿ (Mount Banjara Colony) ನೆಲೆಸಿದ್ದ ಪಾಕ್‌ ವ್ಯಕ್ತಿ 2016ರಲ್ಲಿ ಕೀರ್ತಿ ಎಂಬಾಕೆಯನ್ನ ಬಲವಂತದಿಂದ ಮತಾಂತರಗೊಳಿಸಿ ಮದ್ವೆಯಾಗಿದ್ದಾನೆಂದು ಖುದ್ದು ಪತ್ನಿಯೇ ದೂರು ನೀಡಿದ್ದಾಳೆ. ಇದನ್ನೂ ಓದಿ: 2-3 ವಾರದ ನಂತ್ರ ಹೊಸ ಸುಂಕದ ಬಗ್ಗೆ ಯೋಚಿಸ್ತೀನಿ – ಭಾರತಕ್ಕೆ ಸಿಗುತ್ತಾ ಸುಂಕ ವಿನಾಯ್ತಿ?

    ಯೆಸ್‌… ಸಂತ್ರಸ್ತೆ ಹೇಳುವಂತೆ ಫಹಾದ್‌ 1998ರಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿದ್ದ. 2016ರಲ್ಲಿ ತನ್ನನ್ನ ಮದ್ವೆಯಾಗಲು ತನ್ನನ್ನ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ. ಮೊದಲ ವಿಚ್ಛೇದನದ ಬಳಿಕ ನಾನು ದೌರ್ಬಲ್ಯ ಸ್ಥಿತಿಯಲ್ಲಿದ್ದೆ, ಇದರ ಲಾಭ ಪಡೆದು ನನ್ನನ್ನ ಮತಾಂತರಕ್ಕೆ ಒತ್ತಾಯಿಸಿದ್ದ. ಅದರಂತೆ ನನ್ನ ಹೆಸರನ್ನ ದೋಹಾ ಫಾತಿಮಾ ಅಂತ ಬದಲಾಯಿಸಿಕೊಂಡಿದ್ದೆ. ಮದ್ವೆ ಆಗೋವರ್ಗೂ ಅವನು ಪಾಕಿಸ್ತಾನದವನು ಅಂತ ಗೊತ್ತಿರಲಿಲ್ಲ. ಆದ್ರೆ ಪ್ರತಿವರ್ಷ ನಿಯಮಿತವಾಗಿ ಪಾಸ್‌ಪೋರ್ಟ್ ರಿನಿವಲ್‌ಗಾಗಿ ಆಯುಕ್ತರ ಕಚೇರಿಗೆ ಭೇಟಿ ಕೊಡ್ತಿದ್ದ. ಇದನ್ನ ಪರಿಶೀಲನೆ ಮಾಡಿದಾಗ ಅವನು ಪಾಕ್‌ನಿಂದ ವಲಸೆ ಬಂದಿರೋದು ಗೊತ್ತಾಯ್ತು. ಅಲ್ದೇ ಫಹಾದ್‌ ತನ್ನ ಕಂಪನಿಯಲ್ಲೇ ಬೇರೊಬ್ಬಳೊಂದಿಗೆ ಅಕ್ರಮ ಸಂಬಂಧ ಇಟ್ಕೊಂಡಿದ್ದ. ಇದು ತಿಳಿದ ಬಳಿಕವೇ ನಾನು ಮೋಸ ಹೋಗಿದ್ದೇನೆ ಅನ್ನೋದು ಗೊತ್ತಾಯ್ತು ಅಂತ ಕೀರ್ತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    ಇನ್ನೂ ಫಹಾದ್‌ ಪಾಕಿಸ್ತಾನದ ವ್ಯಕ್ತಿ ಅಂತ ಗೊತ್ತಾದ್ಮೇಲೆ ನಾನು ವಿಚ್ಛೇದನ ಪಡೆದು ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದ್ದೇನೆ ಎಂದು ಮಹಿಳೆ ಹೇಳ್ಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮೇಘಸ್ಫೋಟ | ದುರಂತ ನಡೆದಾಗ ಸ್ಥಳದಲ್ಲಿ 1,200 ಜನ ಇದ್ದರು: ಬಿಜೆಪಿ ಶಾಸಕ ಬಾಂಬ್‌

    ಒಟ್ನಲ್ಲಿ ಮಹಿಳೆ ನೀಡಿದ ದೂರಿನ ಅನ್ವಯ ಕೇಸ್‌ ದಾಖಲಿಸಿಕೊಂಡಿರುವ ಲಂಗರ್‌ ಹೌಸ್‌ನ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದು, ಆರೋಪಿಗೆ ತಕ್ಕ ಶಿಕ್ಷೆ ಕೊಡಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ – ಗಣ್ಯರಿಂದ ಗೌರವ ಸಮರ್ಪಣೆ 

  • 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್ – ಹೆಣ್ಣು ಮಕ್ಕಳಿಬ್ಬರ ಕಾಲೇಜು ಫೀಸ್‌ ಕಟ್ಟಲಾಗದೇ ಕೃತ್ಯಕ್ಕಿಳಿದಿದ್ದ ದಂಪತಿ

    2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್ – ಹೆಣ್ಣು ಮಕ್ಕಳಿಬ್ಬರ ಕಾಲೇಜು ಫೀಸ್‌ ಕಟ್ಟಲಾಗದೇ ಕೃತ್ಯಕ್ಕಿಳಿದಿದ್ದ ದಂಪತಿ

    – ಇತ್ತ ಆಸ್ಪತ್ರೆ ಚಿಕಿತ್ಸೆಗೂ ಹಣವಿಲ್ಲದ ಸ್ಥಿತಿ

    ಹೈದರಾಬಾದ್: 2,000 ರೂ.ಗೆ ಸೆಕ್ಸ್ ಲೈವ್ ಸ್ಟ್ರೀಮ್ ಮಾಡ್ತಿದ್ದ ದಂಪತಿಯನ್ನು (Hyderabad Couple) ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆದ್ರೆ ದಂಪತಿಯ ಬಗ್ಗೆ ಅಚ್ಚರಿ ಸಂಗತಿಯೊಂದು ಬೆಳಕಿಗೆ ಬಂದಿದೆ.

    ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ (Two Daughters). ಪತಿ ವೃತ್ತಿಯಲ್ಲಿ ಕ್ಯಾಬ್‌ ಡ್ರೈವರ್‌ ಆಗಿದ್ದರೆ, ಪತ್ನಿ ಗೃಹಿಣಿಯಾಗಿದ್ದಳು. ಮನೆಯಲ್ಲಿ ಆರ್ಥಿಕ ಸಮಸ್ಯೆಯಿದ್ದ ಕಾರಣ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಪತಿ-ಪತ್ನಿ ಇಬ್ಬರು ಕೃತ್ಯಕ್ಕೆ ಇಳಿದಿದ್ದರು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕೃತ್ಯದಲ್ಲಿ ಭಾಗಿ
    ಆರ್ಥಿಕ ಕೊರತೆಯಿಂದ ಮಕ್ಕಳಿಬ್ಬರ ಕಾಲೇಜು ಶುಲ್ಕ (college fees) ಪಾವತಿಸಿರಲಿಲ್ಲ. ಇಬ್ಬರೂ ಪ್ರತಿಭಾನ್ವಿತ ವಿದ್ಯಾರ್ಥಿಗಳೇ ಆಗಿದ್ದರು. ಒಬ್ಬ ಮಗಳು ಬಿ.ಟೆಕ್‌ ವ್ಯಾಸಂಗ ಮಾಡುತ್ತಿದ್ದರು, ಮತ್ತೊಬ್ಬಳು ಮಗಳು ಇತ್ತೀಚಿಗೆ ನಡೆದ intermediate ಪರೀಕ್ಷೆಯಲ್ಲಿ 470ಕ್ಕೆ 468 ಅಂಕ ಗಳಿಸಿ, ಕಾಲೇಜು ಪ್ರವೇಶಕ್ಕೆ ತಯಾರಿ ನಡೆಸಿದ್ದಳು. ಈ ನಡುವೆ ಆಟೋ ಚಾಲಕನಾಗಿದ್ದ ಪತಿ ಅನಾರೋಗ್ಯದಿಂದ ಬಳಲುತ್ತಿದ್ದ, ಚಿಕಿತ್ಸೆ ಪಡೆಯೋದಕ್ಕೂ ಹಣ ಇರಲಿಲ್ಲ. ಹೀಗಾಗಿ ಸುಲಭವಾಗಿ ಹಣಗಳಿಸಲು ತಮ್ಮ ಲೈಂಗಿಕ ಕೃತ್ಯವನ್ನು ಲೈವ್‌ಸ್ಟ್ರೀಮ್‌ ಮಾಡುವ ಕೆಲಸಕ್ಕೆ ಮುಂದಾದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೋಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌; ಟಿಎಂಸಿ ನಾಯಕ ಸೇರಿ ಮೂವರ ಬಂಧನ

    ಹಣ ಗಳಿಸುತ್ತಿದ್ದದ್ದು ಹೇಗೆ?
    ಪರಸ್ಪರ ಒಪ್ಪಿಗೆಯೊಂದಿಗೆ ಕೃತ್ಯಕ್ಕೆ ಇಳಿದಿದ್ದ ದಂಪತಿ ಲೈವ್ ಸ್ಟ್ರೀಮ್‌ಗೆ 2,000 ರೂ. ಪಡೆಯುತ್ತಿದ್ದರು ಮತ್ತು ರೆಕಾರ್ಡ್ ಮಾಡಿದ ಕ್ಲಿಪ್‌ ಅನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದರು. ಹೆಚ್ಚಾಗಿ ಯುವಕರಿಗೆ ಈ ವಿಡಿಯೋಗಳನ್ನು ಸೇಲ್‌ ಮಾಡ್ತಿದ್ದರು. ಇದನ್ನೂ ಓದಿ: ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು

    ಸಾಂದರ್ಭಿಕ ಚಿತ್ರ

    ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಅಂಬರ್‌ಪೇಟೆಯ ಮಲ್ಲಿಕಾರ್ಜುನ ನಗರದಲ್ಲಿರುವ ತಮ್ಮ ಮನೆಯಲ್ಲಿ ದಂಪತಿಯನ್ನ ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದಂಪತಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಮಕ್ಕಳಿಬ್ಬರಿಗೂ ಪೋಷಕರ ಈ ಕೃತ್ಯದ ಬಗ್ಗೆ ತಿಳಿದಿರಲಿಲ್ಲ. ಗುರುತು ಮರೆಮಾಚಲು ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

    ದಂಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67 (ಎ) ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

  • 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    – ರೆಕಾರ್ಡ್‌ ವಿಡಿಯೋವನ್ನ 500 ರೂ.ಗೆ ಸೇಲ್‌ ಮಾಡ್ತಿದ್ದ ದಂಪತಿ

    ಹೈದರಾಬಾದ್‌: 2,000 ರೂ.ಗೆ ಸೆಕ್ಸ್‌ ಲೈವ್‌ ಸ್ಟ್ರೀಮ್‌ (Live Stream) ಮಾಡ್ತಿದ್ದ ಹೈದರಾಬಾದ್‌ ಜೋಡಿಯನ್ನು (Hyderabad couple) ಪೊಲೀಸರು ಬಂಧಿಸಿದ್ದಾರೆ.

    ಸೋಷಿಯಲ್‌ ಮೀಡಿಯಾ (Social Media) ಅಪ್ಲಿಕೇಶನ್‌ನಲ್ಲಿ‌ ಸೆಕ್ಸ್‌ (ಲೈಂಗಿಕ ಕ್ರಿಯೆ) ಕೃತ್ಯವನ್ನ ಲೈವ್‌ ಸ್ಟ್ರೀಮ್‌ ಮಾಡಿದ್ದಕ್ಕಾಗಿ ಹೈದರಾಬಾದ್‌ ಪೊಲೀಸರು 41 ವರ್ಷದ ಪತಿ, 37 ವರ್ಷದ ಪತ್ನಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಹಾಡಹಗಲೇ ಹಣ ಎಣಿಸುವಾಗ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ರಾಬರಿ

    ಜೂನ್ 17 ರಂದು ಮಧ್ಯಾಹ್ನ ಅವರ ಮನೆಯ ಟೆರೇಸ್‌ ಮೇಲಿದ್ದಾಗ ಇಬ್ಬರನ್ನೂ ಬಂಧಿಸಲಾಗಿದ್ದು, ಹೈ ಡೆಫಿನಿಷನ್ ಕ್ಯಾಮೆರಾ ಸೇರಿ ಹಲವು ಡಿಜಿಟಲ್‌ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಂಗಳೂರು | ಲವ್, ಸೆಕ್ಸ್, ದೋಖಾ ಆರೋಪ – ಕೇಸ್ ದಾಖಲಾಗ್ತಿದ್ದಂತೆ ಆರೋಪಿ ಯುವಕ ಎಸ್ಕೇಪ್

    ಸುಲಭವಾಗಿ ಹಣಗಳಿಸುವ ಉದ್ದೇಶದಿಂದ ಕೃತ್ಯ
    ವೃತ್ತಿಯಲ್ಲಿ ಕ್ಯಾಬ್‌ ಚಾಲಕನಾಗಿದ್ದ (Cab Driver) ಪತಿ ಸುಲಭವಾಗಿ ಹಣ ಗಳಿಸುವ ಉದ್ದೇಶ ಹೊಂದಿದ್ದ. ಇದಕ್ಕಾಗಿ ಇಬ್ಬರೂ ಒಪ್ಪಿಕೊಂಡು ಕೃತ್ಯದಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಲೈವ್‌ ಸ್ಟ್ರೀಮ್‌ಗೆ ಯುವಕರು, ವೃದ್ಧದಿಂದ 2,000 ರೂ. ಪಡೆಯುತ್ತಿದ್ದರು ಮತ್ತು ರೆಕಾರ್ಡ್‌ ಮಾಡಿದ‌ ಕ್ಲಿಪ್‌ ಅನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: 3ನೇ ಪತ್ನಿಯ ಹತ್ಯೆಗೈದು ಗೋಣಿ ಚೀಲದಲ್ಲಿ ಪ್ಯಾಕ್ – ಲಗೇಜ್ ಎಂದು ಸರ್ಕಾರಿ ಬಸ್ಸಲ್ಲಿ ಕಳುಹಿಸಿದ್ದವ 24 ವರ್ಷಗಳ ಬಳಿಕ ಅರೆಸ್ಟ್

    ಸಾಂದರ್ಭಿಕ ಚಿತ್ರ

    ಪತ್ನಿ ಗೃಹಿಣಿಯಾಗಿದ್ದು, ದಂಪತಿಗೆ ಇಬ್ಬರು ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳಿದ್ದಾರೆ. ಮಕ್ಕಳಿಬ್ಬರಿಗೂ ಪೋಷಕರ ಈ ಕೃತ್ಯ ತಿಳಿದಿರಲಿಲ್ಲ. ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದಲೇ ಈ ಕೃತ್ಯಕ್ಕಿಳಿದಿದ್ದ ದಂಪತಿ ಗುರುತು ಮರೆಮಾಚಲು ಮುಖಕ್ಕೆ ಮಾಸ್ಕ್‌ ಧರಿಸಿಕೊಳ್ಳುತ್ತಿದ್ದರು. ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

    ದಂಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67 (ಎ) ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

  • ಫ್ರೀ ಬಸ್‌ ಹತ್ತಿ 33 ಗಂಟೆ ಸುತ್ತಾಟ – ಹಿಡಿದು ಪೋಷಕರಿಗೊಪ್ಪಿಸಿದ ಪೊಲೀಸರು!

    ಫ್ರೀ ಬಸ್‌ ಹತ್ತಿ 33 ಗಂಟೆ ಸುತ್ತಾಟ – ಹಿಡಿದು ಪೋಷಕರಿಗೊಪ್ಪಿಸಿದ ಪೊಲೀಸರು!

    ಹೈದರಾಬಾದ್‌: ಹಾಸ್ಟೆಲ್‌ಗೆ (Hostel) ಹೋಗುವುದನ್ನು ತಪ್ಪಿಸಿಕೊಳ್ಳುವುದಕ್ಕಾಗಿ 12 ವರ್ಷದ ಬಾಲಕಿಯೊಬ್ಬಳು ಉಚಿತ ಬಸ್ ಸೇವೆ ಬಳಸಿಕೊಂಡು 33 ಗಂಟೆಗಳ ಕಾಲ ಪ್ರಯಾಣ ಮಾಡಿದ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ.

    ಬಾಲಕಿ ತಪ್ಪಿಸಿಕೊಂಡಿರುವುದಾಗಿ ನೀಡಲಾದ ದೂರನ್ನು ಆಧರಿಸಿ ತನಿಖೆ ಆರಂಭಿಸಿದ್ದ ಪೊಲೀಸರು (Police) ಬಾಲಕಿಯನ್ನು ಹೈದರಾಬಾದ್‌ನ (Hyderabad) ಜ್ಯೂಬಿಲಿ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಭಗವಂತ ಶಿವನ ಚಿತ್ರ ಬಳಸಿ ಅಪಮಾನ – ಕಾಂಗ್ರೆಸ್‌ನಿಂದ ದೂರು

    ಅಷ್ಟಕ್ಕೂ ನಡೆದಿದ್ದೇನು?
    ವಿದ್ಯಾರಣ್ಯಪುರಿಯ ನಿವಾಸಿಯಾದ ಬಾಲಕಿ ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿದ್ದುಕೊಂಡು 8ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಕ್ರಿಸ್ಮಸ್ ರಜೆಗಾಗಿ ಪೆದ್ದಪಳ್ಳಿಯಲ್ಲಿರುವ ತಾತನ ಮನೆಗೆ ತೆರಳಿದ್ದಳು. ರಜೆ ಮುಗಿದ ಬಳಿಕ ತಾತನ ಮನೆಯಿಂದ ಹೊರಟ ಬಾಲಕಿ ಹಾಸ್ಟೆಲ್‌ಗೆ ಹೋಗಲು ಇಷ್ಟವಿಲ್ಲದೇ ಒಂದಾದ ಮೇಲೋಂದು ಬಸ್ ಬದಲಾಯಿಸುತ್ತಾ ಸುಮಾರು 33 ಗಂಟೆ ಪ್ರಯಾಣ ಮಾಡಿದ್ದಾಳೆ.

    ಬಸ್ ಹತ್ತಿಸಿದ ಬಳಿಕ ಬಾಲಕಿ ಊರು ತಲುಪಿಲ್ಲ, ಹಾಸ್ಟೆಲ್‌ಗೂ ಸೇರಿಲ್ಲ ಎಂಬುದನ್ನ ತಿಳದು ಆತಂಕಗೊಂಡ ಆಕೆಯ ತಾತ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಸತತ ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆ ಮಾಡಿ ಪೋಷಕರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಕಚೇರಿಗೆ ಹೋಗದಂತೆ ತಡೆ; ಕರ್ತವ್ಯ ಪಥದಲ್ಲೇ ಖೇಲ್‌ ರತ್ನ, ಅರ್ಜುನ ಪ್ರಶಸ್ತಿ ಬಿಟ್ಟು ಹೋದ ಕುಸ್ತಿಪಟು

  • ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ!

    ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ!

    ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan )ಇದ್ದ ಹೋಟೆಲ್‌ ಮೇಲೆ ಹೈದರಾಬಾದ್‌ ಪೊಲೀಸರು (Hyderabad Police) ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.

    ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್‌ ವಾಸ್ತವ್ಯವಿದ್ದ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ (Park Hyatt Hotel) ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.

    ಈ ದಾಳಿ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ನಾನು ಉಳಿದುಕೊಂಡಿರುವ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದರು. ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ (BJP) ಮತ್ತು ರಾಜ್ಯದ ಬಿಆರ್‌ಎಸ್‌ (BRS) ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಉಗ್ರರ ವಿರುದ್ಧ ಎನ್‌ಕೌಂಟರ್‌ – ಕರ್ನಾಟಕ ಮೂಲದ ಕ್ಯಾಪ್ಟನ್‌ ಸೇರಿ ನಾಲ್ವರು ಯೋಧರು ಹುತಾತ್ಮ

    ಈ ದಾಳಿಯು ನಮ್ಮನ್ನು ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರವಾಗಿದೆ, ಇದಕ್ಕೆಲ್ಲ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದವರ ಹೊರತರಲು ಕ್ಷಣಗಣನೆ – ಆರೈಕೆಗೆ ಆಸ್ಪತ್ರೆ ರೆಡಿ 

  • ಹೈದ್ರಾಬಾದ್ ರೇಪಿಸ್ಟ್‌ಗಳನ್ನು ಎನ್‍ಕೌಂಟರ್ ಮಾಡಿದಂತೆ ಆರೋಪಿಗಳಿಗೆ ಶಿಕ್ಷೆಯಾಗಲಿ: ಉನ್ನಾವೋ ಸಂತ್ರಸ್ತೆಯ ತಂದೆ

    ಹೈದ್ರಾಬಾದ್ ರೇಪಿಸ್ಟ್‌ಗಳನ್ನು ಎನ್‍ಕೌಂಟರ್ ಮಾಡಿದಂತೆ ಆರೋಪಿಗಳಿಗೆ ಶಿಕ್ಷೆಯಾಗಲಿ: ಉನ್ನಾವೋ ಸಂತ್ರಸ್ತೆಯ ತಂದೆ

    ನವದೆಹಲಿ: ಎರಡು ದಿನಗಳಿಂದ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಉನ್ನಾವೋ ಸಂತ್ರಸ್ತೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. ಈ ನಡುವೆ ಸಂತ್ರಸ್ತೆಯ ತಂದೆ ಹೈದರಾಬಾದ್ ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದಂತೆ ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಸಂತ್ರಸ್ತೆ ತಂದೆ, ಅತ್ಯಾಚಾರಿಗಳನ್ನು ಹೈದರಾಬಾದ್ ಪೊಲೀಸರು ಹೇಗೆ ಎನ್‍ಕೌಂಟರ್ ಮಾಡಿದ್ದಾರೋ ಹಾಗೆಯೇ ನನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳನ್ನು ಶಿಕ್ಷೆಯಾಗಲಿ. ಆರೋಪಿಗಳಿಗೆ ಎನ್‍ಕೌಂಟರ್ ಮಾಡಿ ಅಥವಾ ಗಲ್ಲಿಗೇರಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ನನಗೆ ಹಣದ ಅಮೀಷವಿಲ್ಲ. ನಾನು ಕೇಳುವುದು ಒಂದೇ ವಿಷಯ. ನನ್ನ ಮಗಳ ಸಾವಿಗೆ ನ್ಯಾಯ ಸಿಗಲಿ ಎಂದು ಹೇಳಿದರು.

    ಸಂತ್ರಸ್ತೆಗೆ ಚಿಕಿತ್ಸೆ ನೀಡುವಾಗ ಸೋಂಕು ಎಲ್ಲಿ ಹರಡುತ್ತದೆಯೋ ಎಂದು ಭಯಗೊಂಡಿದ್ದೆವು. ಆದರೆ ಆ ಭಯ ನಿಜವಾಯಿತು. ಸಂತ್ರಸ್ತೆ ದೇಹ ತುಂಬಾ ಸೋಂಕು ಹರಡಿತ್ತು. ಅದನ್ನು ತಡೆಯಲು ನಮಗೆ ಸಾಧ್ಯವಾಗಲಿಲ್ಲ. ಸಂತ್ರಸ್ತೆಯ ದೇಹ ತುಂಬಾ ಸೋಂಕು ಹರಡಿದರೆ ಅದನ್ನು ತಡೆಯುವುದು ತುಂಬಾ ಕಷ್ಟ ಎಂದು ನಾವು ಈ ಮೊದಲೇ ಹೇಳಿದ್ದೆವು ಎಂದು ವೈದ್ಯರು ಪ್ರತಿಕ್ರಿಯಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪೋಷಕರಿಗೆ ಆಕೆಯ ಮೃತದೇಹವನ್ನು ಹಸ್ತಾಂತರಿಸಲಾಗುತ್ತದೆ. ಇದನ್ನೂ ಓದಿ: ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

    ನಡೆದಿದ್ದೇನು?
    ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ. 90ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ `ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು’ ಎಂದು ಹೇಳಿಕೊಂಡಿದ್ದರು. ಹೈದ್ರಾಬಾದ್ ಎನ್‍ಕೌಂಟರ್ನಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದ ಬೆನ್ನಲ್ಲೇ ಈ ಆಘಾತಕಾರಿ ಬೆಳವಣಿಗೆಯಾಗಿದೆ.

  • ಯುಪಿ, ದೆಹಲಿ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ: ಮಾಯಾವತಿ

    ಯುಪಿ, ದೆಹಲಿ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ: ಮಾಯಾವತಿ

    ಲಕ್ನೋ: ಹೈದರಾಬಾದಿನ ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಬಗ್ಗೆ ಬಹುಜನ್ ಸಮಾಜ್ ಪಕ್ಷ(ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿ, ದೆಹಲಿ, ಉತ್ತರ ಪ್ರದೇಶ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಮಾಯಾವತಿ ಅವರು ಹೈದರಾಬಾದ್ ಪೊಲೀಸರಿಗೆ ಅಭಿನಂದನೆ ತಿಳಿಸಿದರು. ಜೊತೆಗೆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಸಾಕಷ್ಟು ಒತ್ತು ಕೊಟ್ಟಿಲ್ಲವೆಂದು ಯೋಗಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಉತ್ತರ ಪ್ರದೇಶ ಮತ್ತು ದೆಹಲಿ ಪೊಲೀಸ್ ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು. ಆದರೆ ದುರಾದೃಷ್ಟವಶಾತ್ ಇಲ್ಲಿ ಕ್ರಿಮಿನಲ್‍ನಳನ್ನು ರಾಜ್ಯದ ಅತಿಥಿಗಳ ರೀತಿ ಸತ್ಕರಿಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕಳೆದ 7 ವರ್ಷಗಳಿಂದ ಪ್ರತಿದಿನವೂ ಸಾಯುತ್ತಿದ್ದೇವೆ: ನಿರ್ಭಯಾ ತಾಯಿ

    ಈಗ ಉತ್ತರ ಪ್ರದೇಶದಲ್ಲಿ ಜಂಗಲ್ ರಾಜ್ ನಡೆಯುತ್ತಿದೆ. ಮುಂದೆ ಈ ಮನೋಭಾವ ಬದಲಾಗುತ್ತದೆಂದು ಆಶಿಸುತ್ತೇನೆ. ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರೆ ರಾಜ್ಯ ಸರ್ಕಾರ ನಿದ್ರೆ ಮಾಡುತ್ತಿದೆ ಎಂದು ಕಿಡಿಕಾಡಿದರು. ಇದನ್ನೂ ಓದಿ: ‘ಹತ್ಯಾಚಾರಿ’ಗಳ ಎನ್‍ಕೌಂಟರ್- ಪೊಲೀಸರಿಗೆ ಸ್ಟಾರ್ಸ್ ಶಬ್ಬಾಶ್

    ಇಂದು ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಸೈಬರಾಬಾದ್ ಪೊಲೀಸರು ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ಪೊಲೀಸರು ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ.

    ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಸೈಬರಾಬಾದ್ ಪೊಲೀಸರ ಈ ಕಾರ್ಯಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಸಿನಿಮಾ ಕಲಾವಿದರು, ರಾಜಕಾರಣಿಗಳು, ಸಾರ್ವಜನಿಕರು ಪೊಲೀಸರಿಗೆ ಸಲಾಂ ಎಂದಿದ್ದಾರೆ. ಬೆಳ್ಳಂಬೆಳಗ್ಗೆ ಒಳ್ಳೆ ಸುದ್ದಿ ಕೊಟ್ಟಿದ್ದೀರಿ, ಅತ್ಯಾಚಾರಿಗಳನ್ನು ಹತ್ಯೆಗೈದಿದ್ದು ಸರಿಯಾಗಿದೆ. ಇದು ಬೇರೆಯವರಿಗೆ ಪಾಠವಾಗಲಿದೆ ಎಂದು ಪೊಲೀಸರಿಗೆ ಧನ್ಯವಾದ ತಿಳಿಸುತ್ತಿದ್ದಾರೆ.

    ಏನಿದು ಪ್ರಕರಣ?
    ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.

    ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದರು. ಸಾಮೂಹಿಕ ಅತ್ಯಾಚಾರದ ಬಳಿಕ ಪಶುವೈದ್ಯೆ ಓಡಿಹೋಗಬಾರದು ಎನ್ನುವ ಉದ್ದೇಶದಿಂದ ಅವಳ ಕೈ ಕಾಲುಗಳನ್ನು ಕಟ್ಟಿದ್ದೆವು. ಅತ್ಯಾಚಾರದ ನಂತರವೂ ಸಂತ್ರಸ್ತೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದೆವು. ಸಂತ್ರಸ್ತೆ ಪ್ರಜ್ಞೆ ತಪ್ಪಿದಾಗ ಆಕೆಯನ್ನು ಸೇತುವೆಯ ಕೆಳಗೆ ಸಾಗಿಸಲಾಗಿತ್ತು. ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ವಿ ಎಂದು ಮುಖ್ಯ ಆರೋಪಿ ಮೊಹಮ್ಮದ್ ಪಾಷಾ, ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮ ವರದಿ ಮಾಡಿತ್ತು.

    ಬೆಂಕಿ ಹಚ್ಚುವುದಕ್ಕೂ ಮುನ್ನ ಪಶುವೈದ್ಯೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದೇವು. ಆದರೆ ಬೆಂಕಿಯ ಹಚ್ಚಿದಾಗ ಅವಳು ಕಿರುಚಲು ಪ್ರಾರಂಭಿಸಿದಳು. ಹೀಗಾಗಿ ಸಂತ್ರಸ್ತೆ ಸಾಯುವವರೆಗೂ ನೋಡುತ್ತಲೇ ಇದ್ದೆವು. ಏಕೆಂದರೆ ಒಂದು ವೇಳೆ ಆಕೆ ಜೀವಂತವಾಗಿ ಉಳಿದರೆ ಪೊಲೀಸರು ನಮ್ಮನ್ನು ಹಿಡಿಯುತ್ತಾರೆ ಎನ್ನುವ ಭಯ ನಮ್ಮಲ್ಲಿತ್ತು ಎಂದು ಆರೋಪಿ ಪಾಷಾ ಬಾಯಿ ಬಿಟ್ಟಿದ್ದನು.