Tag: ಹೈ ಗ್ರೌಂಡ್ಸ್ ಪೊಲೀಸ್

  • `ಕೈ’ ಕಾರ್ಯಕರ್ತೆಯ ಮೇಲೆ ಹೆಚ್.ಎಂ ರೇವಣ್ಣ ಹಲ್ಲೆ

    `ಕೈ’ ಕಾರ್ಯಕರ್ತೆಯ ಮೇಲೆ ಹೆಚ್.ಎಂ ರೇವಣ್ಣ ಹಲ್ಲೆ

    ಬೆಂಗಳೂರು: ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್.ಎಂ.ರೇವಣ್ಣ (HM Revanna) ಅವರು ಕಾಂಗ್ರೆಸ್ (Congress) ಕಾರ್ಯಕರ್ತೆಯ ಮೇಲೆ ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.

    ಸೋಮವಾರ ಮಧ್ಯಾಹ್ನ ಕುಮಾರಕೃಪಾದಲ್ಲಿ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಮಧ್ಯಾಹ್ನ 3:30ರ ಸುಮಾರಿಗೆ ರೂಂ.ನಂಬರ್ 2ರಲ್ಲಿ ರೇವಣ್ಣ ಊಟ ಮಾಡುತ್ತಿದ್ದರು. ಈ ವೇಳೆ ಅವರನ್ನು ಭೇಟಿಯಾಗಿ ಮಾತನಾಡಿಸಲು ತೆರಳಿದ್ದೆ.ಇದನ್ನೂ ಓದಿ: ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಹೆಚ್‍ಡಿಕೆ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ

    ಈ ವೇಳೆ ನನ್ನ ಮೊಬೈಲ್ ಕಸಿದುಕೊಂಡು ನನನ್ನು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ರೇವಣ್ಣ ಮಹಿಳೆಯ ಮೊಬೈಲ್ ಕಸಿದುಕೊಳ್ಳುತ್ತಿರುವ ವಿಡಿಯೋ ಲಭ್ಯವಾಗಿದೆ.

    ಹಲ್ಲೆ ಪರಿಣಾಮ ಮಹಿಳೆಯ ಕೈ ಮೂಳೆಗೆ ಫ್ಯಾಕ್ಚರ್ ಆಗಿದ್ದು, ಬಳಿಕ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸದ್ಯ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎನ್‌ಸಿಆರ್ ದಾಖಲಾಗಿದೆ.ಇದನ್ನೂ ಓದಿ: ಪುತ್ರನ ನಾಮಕರಣ ಸಂಭ್ರಮದ ಫೋಟೋ ಹಂಚಿಕೊಂಡ ಅಂಬಿ ಸೊಸೆ

  • ಹಟ್ಟಿ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಪುತ್ರನ ಗುಂಡಾಗಿರಿ, ಎಫ್‍ಐಆರ್ ದಾಖಲು

    ಹಟ್ಟಿ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಪುತ್ರನ ಗುಂಡಾಗಿರಿ, ಎಫ್‍ಐಆರ್ ದಾಖಲು

    ಬೆಂಗಳೂರು: ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಟ್ಟಿ ಗಣಿ ಅಧ್ಯಕ್ಷ, ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಹೈಗ್ರೌಂಡ್ಸ್ ಠಾಣೆಯಲ್ಲಿ ಆಂಜನೇಯ ಮಾನಪ್ಪ ವಜ್ಜಲ್ ವಿರುದ್ಧ ಹಲ್ಲೆಗೆ ಒಳಗಾದ ಉದ್ಯಮಿ ದೀಪಕ್ ರೈ ಪುತ್ರ ವಿಕ್ರಮ್ ರೈ ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ.

    ಪಂಚ್ ಮಾಡುವ ಆಯುಧದಿಂದ ಹಲ್ಲೆ ನಡೆಸಿದ್ದು, ಬರೋಬ್ಬರಿ ಮೂರು ಕಾರುಗಳಿಂದ ಪಂಚ್ ಆಯುಧ ಹೊರತೆಗೆದು ಹಲ್ಲೆ ಮಾಡಿದ್ದಾರೆ. ಸುಮಾರು 10 ರಿಂದ 15 ಹುಡುಗರನ್ನು ಕರೆಸಿ ಉದ್ಯಮಿ ದೀಪಕ್ ಪುತ್ರ ವಿಕ್ರಮ್ ರೈ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ರಾಹುಲ್‍ಗೆ ಪಿಸ್ತೂಲ್ ಬಳಸಲು ತರಬೇತಿಯನ್ನು ನೀಡಲಾಗಿತ್ತು: ಡಿಸಿಪಿ ಅನುಚೇತ್

    ಇತ್ತ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ಸಹ ಪ್ರತಿ ದೂರು ನೀಡಿದ್ದಾರೆ. ಗಲಾಟೆ ಸಂಬಂಧ ಇಬ್ಬರ ದೂರುಗಳ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 124, 324, 504, 506, 149 ಅಡಿ ಎಫ್‍ಐಆರ್ ಮಾಡಿದ್ದಾರೆ.

    ಏನಿದು ಪ್ರಕರಣ?
    ವಸಂತನಗರದಲ್ಲಿರುವ ಮಾನಪ್ಪ ವಜ್ಜಲ್ ರ ಎಂಬೆಸಿ ಹ್ಯಾಬಿಟೆಟ್ ಅಪಾರ್ಟ್ ಮೆಂಟ್ ಬಳಿ ಗಲಾಟೆಯಾಗಿತ್ತು. ಸೆ.12ರಂದು ರಾತ್ರಿ 10 ಗಂಟೆಗೆ ಸ್ನೇಹಿತ ರೋಲ್ಟ್ ಮೆರೇನ್ ರನ್ನು ಡ್ರಾಪ್ ಮಾಡಲು ವಿಕ್ರಮ್ ಎಂಬೆಸಿ ಹ್ಯಾಬಿಟೆಟ್ ಅಪಾರ್ಟ್ ಮೆಂಟ್ ಬಳಿ ಬಂದಿದ್ದ. ಈ ವೇಳೆ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ. ಈ ಹಿಂದೆಯೇ ಪಾರ್ಕಿಂಗ್ ವಿಚಾರವಾಗಿ ಮಾನಪ್ಪ ವಜ್ಜಲ್ ಪುತ್ರ ಎರಡು ಬಾರಿ ಗಲಾಟೆ ಮಾಡಿದ್ದರಂತೆ.

    ಇದೀಗ ಆಂಜನೇಯ ಮತ್ತು ಮೌನೇಶ್ ಸೇರಿ 10 ರಿಂದ 15 ಜನ ಹುಡುಗರನ್ನು ಕರೆಸಿ ಹಲ್ಲೆ ನಡೆಸಿದ್ದಾರೆ. ಬೆಂಜ್, ಸೆಲ್ಟೋಸ್ ಮತ್ತು ಫಾಚ್ರ್ಯೂನರ್ ಕಾರುಗಳಿಂದ ಪಂಚ್ ಮಾಡುವ ಆಯುಧ ಹೊರತೆಗೆದು ಹಲ್ಲೆ ಮಾಡಿದ್ದಾರೆ. ತಲೆ, ಕಣ್ಣು ಮತ್ತು ದೇಹದ ಇತರೆ ಭಾಗಗಳಿಗೆ ಹಲ್ಲೆ ಮಾಡಿದ್ದಾರೆ. ಕಣ್ಣಿನ ಮೇಲ್ಭಾಗಕ್ಕೆ ರಕ್ತ ಬರುವಂತೆ ಗಾಯಗೊಳಿಸಿದ್ದಾರೆ. ಅಲ್ಲದೆ ನೀನು ಎಲ್ಲಿಗೆ ಹೋದರು ಬಿಡುವುದಿಲ್ಲ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ. ನೀನು ಪೊಲೀಸ್ ಠಾಣೆಗೆ ಹೋದರೂ ನಮಗೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಧಮಕಿ ಹಾಕಿದ್ದಾರೆ. ಆರೋಪಿಗಳಿಂದ ತಪ್ಪಿಸಿಕೊಂಡು ಬಂದು ಚೇತನ್ ಅವರು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು.

    ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಹಲ್ಲೆ ನಂತರ ಎರಡೂ ಕಡೆಯವರು ರಾಜಿಗೆ ಮುಂದಾಗಿದ್ದರು. ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಸಿದ್ದರು. ಈ ವೇಳೆ ದೂರು ಕೊಟ್ಟರೆ ತೆಗೆದುಕೊಳ್ಳುವುದಾಗಿ ಪೊಲೀಸರು ಹೇಳಿ ಕಳುಹಿಸಿದ್ದರು.