Tag: ಹೊಂಬಾಳೆ ಬ್ಯಾನರ್

  • ದೊಡ್ಮನೆ ಯುವರಾಜನಿಗೆ ನಾಯಕಿ ಯಾರು? ಕೊನೆಗೂ ಸಿಕ್ತು ಅಪ್‌ಡೇಟ್

    ದೊಡ್ಮನೆ ಯುವರಾಜನಿಗೆ ನಾಯಕಿ ಯಾರು? ಕೊನೆಗೂ ಸಿಕ್ತು ಅಪ್‌ಡೇಟ್

    ದೊಡ್ಮನೆಯ ಕುಡಿ ಯುವರಾಜ್‌ಕುಮಾರ್(Yuvarajkumar) ಎಂಟ್ರಿಗೆ ಕೌಂಟ್‌ಡೌನ್ ಶುರುವಾಗಿದೆ. ಯುವನ ಪಟ್ಟಾಭಿಷೇಕಕ್ಕೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿರುವ ಬೆನ್ನಲ್ಲೇ ಯುವನ ನಾಯಕಿ ಯಾರು ಎಂಬುದರರ ಬಗ್ಗೆ ಭಾರಿ ಚರ್ಚೆ ಕೂಡ ನಡೆಯುತ್ತಿದೆ. ಅದಕ್ಕೆಲ್ಲ ಉತ್ತರ ಕೂಡ ಇದೀಗ ಸಿಕ್ಕಿದೆ.

    ಸಂತೋಷ್ ಆನಂದ್‌ರಾಮ್ (Santhosh Anandram) ಮತ್ತು ಯುವ ಕಾಮಬಿನೇಷನ್ ಚಿತ್ರ ಅನೌನ್ಸ್ ಆದ ದಿನದಿಂದ ಒಂದಲ್ಲಾ ಒಂದು ವಿವಾರವಾಗಿ ಸುದ್ದಿಯಾಗುತ್ತಲೇ ಇದೆ. ಮುಂದಿನ ಜನವರಿಯಿಂದ ಯುವನ ಡೆಬ್ಯೂ ಸಿನಿಮಾ ಶೂಟಿಂಗ್‌ಗೆ ತಯಾರಿ ನಡೆಯುತ್ತಿದ್ದು, ಯುವನಿಗೆ ಉಪೇಂದ್ರ (Upendra) ಅವರ ಮಗಳು ಐಶ್ವರ್ಯ, ಸುಧಾರಾಣಿ (Sudharani) ಮಗಳು ನಿಧಿ ಎಂದು ಸುದ್ದಿಯಾಗಿತ್ತು. ಇದೀಗ ಈ ಇಬ್ಬರು ಸ್ಟಾರ್ ಕಿಡ್ಸ್ ಯುವನಿಗೆ ನಾಯಕಿನಾ ಎಂಬ ಪ್ರಶ್ನೆ ಉತ್ತರ ಸಿಕ್ಕಿದೆ.

    ಉಪೇಂದ್ರ ಅವರ ಮಗಳು ಐಶ್ವರ್ಯ ಈಗಾಗಲೇ ದೇವಕಿ ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸುಧಾರಾಣಿ ಮಗಳು ನಿಧಿಗೆ ನಟನೆಯ ಬಗ್ಗೆ ಆಸಕ್ತಿ ಇದ್ಯಾ ಎಂಬುದು ತಿಳಿದು ಬಂದಿಲ್ಲ. ಇದೀಗ ಚಿತ್ರತಂಡದಿಂದ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ. ಐಶ್ವರ್ಯಾ ಮತ್ತು ನಿಧಿ ಇಬ್ಬರು ಯುವನಿಗೆ ನಾಯಕಿಯರಾಗಿ ನಟಿಸುತ್ತಿಲ್ಲ ಎಂಬ ಸ್ಪಷ್ಟನೆ ಸಿಕ್ಕಿದೆ. ಇದು ಸುಳ್ಳು ಸುದ್ದಿ ಎಂದು ಖಾತ್ರಿಯಾಗಿದೆ. ಇದನ್ನೂ ಓದಿ: ರೂಪೇಶ್ ಶೆಟ್ಟಿ ವಿಚಾರವಾಗಿ, ಬಿಗ್ ಬಾಸ್ ವಿರುದ್ಧ ಸಾನ್ಯ ಅಯ್ಯರ್ ಗರಂ

     

    View this post on Instagram

     

    A post shared by Dr.Sudharani (@sudharanigovardhan)

    ಸದ್ಯದಲ್ಲಿ ಹೊಂಬಾಳೆ ಬ್ಯಾನರ್, ಯುವ ಚಿತ್ರದ ಕುರಿತಾದ ವಿಚಾರವನ್ನ ಅಧಿಕೃತವಾಗಿ ತಿಳಿಸುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಸದ್ಯದಲ್ಲೇ ಹೊಸ ಅಪ್‌ಡೇಟ್‌ಯೊಂದನ್ನ ಚಿತ್ರತಂಡ ರಿವೀಲ್ ಮಾಡಲಿದೆ.

    Live Tv
    [brid partner=56869869 player=32851 video=960834 autoplay=true]

  • ಮುಂದುವರಿದ ಸಂಘರ್ಷ -‘ಕಾಂತಾರʼ ಪರ ತೀರ್ಪು ನೀಡಿದ್ದ ಜಿಲ್ಲಾ ಕೋರ್ಟ್‌ ಆದೇಶಕ್ಕೆ ಕೇರಳ ಹೈಕೋರ್ಟ್‌ ತಡೆ

    ಮುಂದುವರಿದ ಸಂಘರ್ಷ -‘ಕಾಂತಾರʼ ಪರ ತೀರ್ಪು ನೀಡಿದ್ದ ಜಿಲ್ಲಾ ಕೋರ್ಟ್‌ ಆದೇಶಕ್ಕೆ ಕೇರಳ ಹೈಕೋರ್ಟ್‌ ತಡೆ

    ನ್ನಡದ `ಕಾಂತಾರ’ಗೆ (Kantara) ಮತ್ತೊಂದು ಸಂಕಷ್ಟ ಎದುರಾಗಿದೆ. ಸಿನಿಮಾದ ‘ವರಾಹ ರೂಪಂ’ (Varaha Roopam) ಹಾಡಿನ ವಿರುದ್ಧ ಕೃತಿಚೌರ್ಯದ ಆರೋಪ ಮಾಡಿದ್ದ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

    ಹೊಂಬಾಳೆ ಬ್ಯಾನರ್, ರಿಷಬ್ ಶೆಟ್ಟಿ, ಪೃಥ್ವಿರಾಜ್ ಫಿಲ್ಮ್ಸ್, ಅಮೆಜಾನ್ ಸೆಲ್ಲರ್ ಸರ್ವೀಸ್ ಪ್ರೈವೇಟ್‌  ಲಿಮಿಟೆಡ್, ಗೂಗಲ್ ಇಂಡಿಯಾ ಹೆಡ್ ಆಫೀಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಇತರರಿಗೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಸೆಪ್ಟೆಂಬರ್ 30,2022 ರಂದು ಬಿಡುಗಡೆಯಾದ ರಿಷಬ್ ಶೆಟ್ಟಿ (Rishab Shetty) ಅವರ ಬ್ಲಾಕ್‌ಬಸ್ಟರ್ ಕನ್ನಡ ಚಲನಚಿತ್ರ ಕಾಂತಾರ ಸೂಪರ್ ಹಿಟ್ ಆಯಿತು. ಈ ನಡುವೆಯೇ ಸಿನಿಮಾದ ಸಂಗೀತ ಸಂಯೋಜಕ ಬಿ.ಅಜನೀಶ್ ಲೋಕನಾಥ್ ‘ವರಾಹ ರೂಪಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪಗಳನ್ನು ಎದುರಿಸಿದರು. ಈ ಹಾಡು ಕೃತಿಚೌರ್ಯ. ಹೀಗಾಗಿ ಹಾಡಿನ ಪ್ರಸಾರಕ್ಕೆ ತಡೆ ನೀಡುವಂತೆ ಒತ್ತಾಯಿಸಿ ಥೈಕ್ಕುಡಂ ಬ್ರಿಡ್ಜ್ ಕೋರ್ಟ್ ಮೊರೆ ಹೋಗಿತ್ತು.

    ವಿಚಾರಣೆಗೆ ನ್ಯಾಯವ್ಯಾಪ್ತಿ ಅಡ್ಡಿ ಎಂದು ಹೇಳಿ ಕೋರ್ಟ್ ಅರ್ಜಿಯನ್ನೇ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಥೈಕುಡಂ ಬ್ರಿಡ್ಜ್ ಹೈಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಇದೀಗ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ಆದೇಶಕ್ಕೆ ಕೇರಳ ಹೈಕೋರ್ಟ್(Kerala Court) ಗುರುವಾರ ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ: ಕನ್ನಡದ `ಕಾಂತಾರ’ ತುಳು ಭಾಷೆಯಲ್ಲಿ ಇಂದು ರಿಲೀಸ್

    ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿರುವ `ಕಾಂತಾರ’ ಚಿತ್ರದ `ವರಾಹ ರೂಪಂ’ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಹೊಂಬಾಳೆ ಸಂಸ್ಥೆ ವಿರುದ್ಧ ವರಾಹ ರೂಪಂ ಹಾಡು ಬಳಸಿದಕ್ಕಾಗಿ ಥೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಯನ್ನು ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾ ಮಾಡಿ ಆದೇಶಿಸಿತ್ತು. ಈ ಆದೇಶಕ್ಕೆ ಕೇರಳ ಹೈಕೋರ್ಟ್ ಗುರುವಾರ (ಡಿ.2) ತಡೆಯಾಜ್ಞೆ ನೀಡಿದೆ.

    ಈ ಎಲ್ಲಾ ವಿವಾದಗಳ ಮಧ್ಯೆ ಕನ್ನಡದ `ಕಾಂತಾರ’ ತುಳುವಿನಲ್ಲಿ ರಿಲೀಸ್ ಆಗಿ ಭರ್ಜರಿ ರೆಸ್ಪಾನ್ಸ್ ಗಿಟ್ಟಿಸಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ದೊಡ್ಮನೆ ಕುಡಿ ಯುವ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಟ್ರು ಸಂತೋಷ್ ಆನಂದ್‌ರಾಮ್

    ದೊಡ್ಮನೆ ಕುಡಿ ಯುವ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಟ್ರು ಸಂತೋಷ್ ಆನಂದ್‌ರಾಮ್

    ದೊಡ್ಮನೆ ಕುಡಿ ಯುವರಾಜ್‌ಕುಮಾರ್(Yuva Rajkumar) ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಕಲ ಸಿದ್ಧತೆ ನಡೆಸಿದ್ದಾರೆ. ಅಭಿಮಾನಿಗಳ ಮನದಾಸೆಯಂತೆ ಸಂತೋಷ್ ಆನಂದ್‌ರಾಮ್(Santhosh Anandram) ಮತ್ತು ಯುವ ಕಾಂಬಿನೇಷನ್‌ನಲ್ಲಿ ಸಿನಿಮಾ ಬರೋದು ಈ ಹಿಂದಯೇ ಅಧಿಕೃತವಾಗಿದೆ. ಈ ಚಿತ್ರದ ಬಗ್ಗೆ ಏನು ಅಪ್‌ಡೇಟ್ ಸಿಗದೇ ನಿರಾಸೆಯಾಗಿದ್ದ ಫ್ಯಾನ್ಸ್‌ಗೆ ಇದೀಗ ಗುಡ್ ನ್ಯೂಸ್‌ವೊಂದು ಸಿಕ್ಕಿದೆ.

    `ಯುವ ರಣಧೀರ ಕಂಠೀರವ’ ಚಿತ್ರದ ಮೂಲಕ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ ಈ ಚಿತ್ರದ ಬದಲಾಗಿ ಯುವರತ್ನ ನಿರ್ದೇಶಕ ಸಂತೋಷ್ ನಿರ್ದೇಶನದ ಚಿತ್ರದಲ್ಲಿ ಯುವ ಲಾಂಚ್ ಆಗುತ್ತಿದ್ದಾರೆ. ಈ ಸಿನಿಮಾಗೆ ಹೊಂಬಾಳೆ ಸಂಸ್ಥೆ(Hombale Films) ಕೂಡ ಸಾಥ್ ಕೊಟ್ಟಿದೆ. ಕಳೆದ ಏಪ್ರಿಲ್ ಯುವನ ಭರ್ಜರಿ ಫೋಟೋಶೂಟ್ ಮಾಡಿಸಿ ಅಧಿಕೃತ ಅನೌನ್ಸ್ ಕೂಡ ಮಾಡಿದ್ದರು. ಬಳಿಕ ಈ ಚಿತ್ರದ ಯಾವುದೇ ಅಪ್‌ಡೇಟ್ ಕೂಡ ಅಭಿಮಾನಿಗಳಿಗೆ ಸಿಕ್ಕಿರಲಿಲ್ಲ. ಈಗ ಈ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಕ್ಕಿದೆ. ಇದನ್ನೂ ಓದಿ:ಮತ್ತೊಂದು ಮದುವೆಗೆ ಒಪ್ಕೊಂಡ್ರಾ ಮಲೈಕಾ?: ಯಸ್ ಅಂದೆ ಅಂತ ಪೋಸ್ಟ್ ಹಾಕಿದ ನಟಿ

    ಪುನೀತ್ ರಾಜ್‌ಕುಮಾರ್ ಹೊಂಬಾಳೆ ಬ್ಯಾನರ್ ಅಡಿ ಸಾಕಷ್ಟು ಸಿನಿಮಾಗಳನ್ನ ಮಾಡಿದ್ದರು. ಮತ್ತೆ ಮುಂಬರುವ ಪ್ರಾಜೆಕ್ಟ್ಗಳನ್ನ ಹೊಂಬಾಳೆ ಜೊತೆ ಪ್ಲ್ಯಾನ್ ಮಾಡಲಾಗಿತ್ತು. ಆದರೆ ಅಪ್ಪು ಅಗಲಿಕೆ ನಂತರ ಎಲ್ಲಾ ತಲೆಕೆಳಗಾಗಿತ್ತು. ಹೊಂಬಾಳೆ ನಿರ್ಮಾಣ ಸಂಸ್ಥೆ, ಸಂತೋಷ್ ನಿರ್ದೇಶನದಲ್ಲಿ ಯುವಗೆ ಡೈರೆಕ್ಷನ್ ಮಾಡಬೇಕು ಎಂಬುದು ಅಭಿಮಾನಿಗಳ ಬೇಡಿಕೆಯ ಜೊತೆ ಮಹಾದಾಸೆಯಾಗಿತ್ತು. ಅದರಂತೆಯೇ ಚಿತ್ರದ ಅನೌನ್ಸ್‌ಮೆಂಟ್ ಕೂಡ ನಡೆದಿತ್ತು.

    ಅನೌನ್ಸ್‌ಮೆಂಟ್ ನಂತರ ಚಿತ್ರದ ಬಗ್ಗೆ ಏನು ಅಪ್‌ಡೇಟ್ ಇಲ್ಲ ಎಂದು ಬೇಸರದಲ್ಲಿದ್ದ ಫ್ಯಾನ್ಸ್‌ಗೆ ನಿರ್ದೇಶಕ ಸಂತೋಷ್ ರಿಯಾಕ್ಟ್ ಮಾಡಿದ್ದಾರೆ. ನನ್ನ ಸಹೋದರ ಸಮಾನರಾದ ಎಲ್ಲಾ ಅಭಿಮಾನಿಗಳಿಗೆ ಅತೀ ಶೀಘ್ರದಲ್ಲಿ ನನ್ನ ಮತ್ತು ಯುವರಾಜ್‌ಕುಮಾರ್ ಕಾಂಬಿನೇಷನ್ ಚಿತ್ರದ ಎಲ್ಲಾ ಮಾಹಿತಿ ಹೊರಬರುತ್ತದೆ ನಿಮ್ಮ ಆಶೀರ್ವಾದ ಸದಾ ಇರಲಿ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಸದ್ಯದಲ್ಲೇ ಚಿತ್ರದ ಅಪ್‌ಡೇಟ್ ಸಿಗಲಿದೆ ಎಂದು ಸೂಚನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೊಂಬಾಳೆ ಬ್ಯಾನರ್ ಮುಂದಿನ ಚಿತ್ರಕ್ಕೆ `ಮಹಾನಟಿ’ ಕೀರ್ತಿ ಸುರೇಶ್ ನಾಯಕಿ

    ಹೊಂಬಾಳೆ ಬ್ಯಾನರ್ ಮುಂದಿನ ಚಿತ್ರಕ್ಕೆ `ಮಹಾನಟಿ’ ಕೀರ್ತಿ ಸುರೇಶ್ ನಾಯಕಿ

    ಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ `ಸರ್ಕಾರಿ ವಾರಿ ಪಾಟ’ ಚಿತ್ರದ ಸಕ್ಸಸ್ ನಂತರ ಪ್ರತಿಷ್ಠಿತ ಬ್ಯಾನರ್ ಹೊಂಬಾಳೆ ಬ್ಯಾನರ್‌ಗೆ ಕೀರ್ತಿ ಸುರೇಶ್ ಸಾಥ್ ನೀಡಿದ್ದಾರೆ. ಜತೆಗೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಿರ್ದೇಶಕಿಯ ಡೈರೆಕ್ಷನ್‌ನಲ್ಲಿ ಕೀರ್ತಿ ಸುರೇಶ್ ಕಾಣಿಸಿಕೊಳ್ತಿದ್ದಾರೆ.

    ಸೌತ್ ಸಿನಿರಂಗದಲ್ಲಿ ಟಾಪ್ ನಟಿಮಣಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್ ಸತತ ಸೋಲಿನಿಂದ ಕಂಗೆಟ್ಟಿದ್ದರು. ಈಗ `ಸರ್ಕಾರಿ ವಾರಿ ಪಾಟ’ ಚಿತ್ರದ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಇದೀಗ ಚಿತ್ರದ ಆಯ್ಕೆಯಲ್ಲೂ ಚ್ಯೂಸಿಯಾಗಿರುವ ಕೀರ್ತಿ ಸುರೇಶ್ ಸದ್ಯ ಹೊಂಬಾಳೆ ಬ್ಯಾನರ್ ನಿರ್ಮಾಣ ಹೊಸ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ. ಇದನ್ನೂ ಓದಿ:ಸೋನು ಶ್ರೀನಿವಾಸ್ ಗೌಡಗೆ ಟ್ರೋಲ್ ಆಗಿ ಫೇಮಸ್ ಆಗುವ ಆಸೆ: ಉದಯ್ ಸೂರ್ಯ

    ರಾಷ್ಟ್ರ ವಿಜೇತೆ ಸುಧಾ ಕೊಂಗರ ನಿರ್ದೇಶನದ ಹೊಸ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಟಿಟೌನ್‌ನಲ್ಲಿ ಸದ್ದು ಮಾಡುತ್ತಿದೆ. ನಾಯಕ ಯಾರು ಎಂಬುದು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. `ಸೂರರೈ ಪೋಟ್ರು’ ಖ್ಯಾತಿಯ ನಿರ್ದೇಶಕಿ ಸುಧಾ ಕೊಂಗರ ಡೈರೆಕ್ಷನ್ ಕೀರ್ತಿ ಸುರೇಶ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ರಾಜ್‌ಕುಮಾರ್ ಮಾಡಬೇಕಿದ್ದ ಪಾತ್ರಕ್ಕೆ `ಪುಷ್ಪ’ ಸ್ಟಾರ್ ಫೈನಲ್

    ಪುನೀತ್ ರಾಜ್‌ಕುಮಾರ್ ಮಾಡಬೇಕಿದ್ದ ಪಾತ್ರಕ್ಕೆ `ಪುಷ್ಪ’ ಸ್ಟಾರ್ ಫೈನಲ್

    ಪುನೀತ್ ರಾಜ್‌ಕುಮಾರ್ ಇಷ್ಟಪಟ್ಟು ಕಥೆ ಫೈನಲ್ ಮಾಡಿದ್ದ ಚಿತ್ರ `ದ್ವಿತ್ವ’ಗೆ `ಪುಷ್ಪ’ ಸ್ಟಾರ್ ಫಯಾದ್ ಫಾಸಿಲ್ ಎಂಟ್ರಿ ಕೊಡಲಿದ್ದಾರೆ. ಈ ಸುದ್ದಿಯ ಕುರಿತು ಪಬ್ಲಿಕ್ ಟಿವಿ ಡಿಜಿಟೆಲ್ ಈ ಹಿಂದೆಯೇ ಬ್ರೇಕ್ ಮಾಡಿತ್ತು. ಫಯಾದ್ ಫಾಸಿಲ್‌ಗೆ ಲೂಸಿಯಾ ಪವನ್ ಕುಮಾರ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಈ ಇಬ್ಬರ ಡೆಡ್ಲಿ ಕಾಂಬಿನೇಷನ್‌ಗೆ ಜನಪ್ರಿಯ ನಿರ್ಮಾಣ ಸಂಸ್ಥೆ ಸಾಥ್ ನೀಡುತ್ತಿದೆ.

    ಅಪ್ಪು ಕಡೆಯದಾಗಿ ಓಕೆ ಮಾಡಿದ್ದ `ದ್ವಿತ್ವ’ ಸಿನಿಮಾಗೆ ಈಗ `ಪುಷ್ಪ’ ಸ್ಟಾರ್ ಫಯಾದ್ ಮಾಡಲಿದ್ದಾರೆ. ಅಪ್ಪುನ `ದ್ವಿತ್ವ’ ಚಿತ್ರದಲ್ಲಿ ಹೊಸ ರೀತಿಯಲ್ಲಿ ನೋಡಬಹುದಿತ್ತು. ಆದರೆ ಪುನೀತ್ ಅನಿರೀಕ್ಷಿತ ಸಾವು ಈಗಲೂ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇನ್ನು ಅಪ್ಪು ಆಯ್ಕೆ ಮಾಡಿದ್ದ `ದ್ವಿತ್ವ’ ಸಿನಿಮಾಗೆ ಮತ್ತೆ ಮರುಜೀವ ಕೊಡಲು ಪವನ್ ಕುಮಾರ್ ಸಜ್ಜಾಗಿದ್ದಾರಂತೆ. ಇದನ್ನೂ ಓದಿ:ನಾನು ಮತ್ತು ರೂಪೇಶ್ ಶೆಟ್ಟಿ ಜಸ್ಟ್ ಫ್ರೆಂಡ್ಸ್, ಅಂಥದ್ದೇನೂ ಇಲ್ಲ: ಸಾನ್ಯಾ ಅಯ್ಯರ್

     

    View this post on Instagram

     

    A post shared by Hombale Films (@hombalefilms)

    ಪವನ್ ಕುಮಾರ್ ಮತ್ತು ಫಯಾದ್ ಫಾಸಿಲ್ ಕಾಂಬಿನೇಷನ್ ಚಿತ್ರಕ್ಕೆ ಹೊಂಬಾಳೆ ಸಂಸ್ಥೆ ಬಂಡವಾಳ ಹೂಡಲು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ನಟ ಫಯಾದ್ ಹುಟ್ಟುಹಬ್ಬಕ್ಕೆ ಹೊಂಬಾಳೆ ಸಂಸ್ಥೆ ಶುಭಹಾರೈಸಿದ್ದಾರೆ. ಈ ಮೂಲಕ ಹೊಂಬಾಳೆ ಸಂಸ್ಥೆ ಸುಳಿವು ನೀಡಿದೆ. ನಿರ್ದೇಶಕ ಪವನ್ ಮತ್ತು ಫಯಾದ್ ಕಾಂಬಿನೇಷನ್ ಚಿತ್ರಕ್ಕೆ ಹೊಂಬಾಳೆ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಿದ್ದಾರೆ. `ದ್ವಿತ್ವ’ ಚಿತ್ರಕ್ಕೆ ಫಯಾದ್ ಅವರನ್ನ ನಿರ್ದೇಶಿಸುತ್ತಾರಾ ಅಥವಾ ಬೇರೇ ಕಥೆಗೆ ಡೈರೆಕ್ಷನ್ ಮಾಡಲು ಪವನ್ ಕುಮಾರ್ ಸಜ್ಜಾಗಿದ್ದಾರಾ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಹೊಂಬಾಳೆ ಫಿಲ್ಮ್ಸ್- ಮಲಯಾಳಂ ನಿರ್ದೇಶಕ ಪೃಥ್ವಿರಾಜ್ ಅವರನ್ನ ಆಯ್ಕೆ ಮಾಡಿಕೊಂಡಿದ್ಹೇಕೆ?

    ಹೊಂಬಾಳೆ ಫಿಲ್ಮ್ಸ್- ಮಲಯಾಳಂ ನಿರ್ದೇಶಕ ಪೃಥ್ವಿರಾಜ್ ಅವರನ್ನ ಆಯ್ಕೆ ಮಾಡಿಕೊಂಡಿದ್ಹೇಕೆ?

    ಮಾಲಿವುಡ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ `ಟೈಸನ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಲಗ್ಗೆ ಇಡ್ತಿದ್ದಾರೆ. `ಟೈಸನ್’ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, `ಕೆಜಿಎಫ್ 2′ ನಿರ್ಮಾಣ ಸಂಸ್ಥೆ ಹೊಂಬಾಳೆ ಬ್ಯಾನರ್ ಸಾಥ್ ನೀಡುತ್ತಿದೆ. ಆ್ಯಕ್ಷನ್ ಥ್ರಿಲರ್ ಕಥೆಯನ್ನ ತೆರೆಯ ಮೇಲೆ ತೋರಿಸಲು ನಟ ಕಮ್ ನಿರ್ದೇಶಕ ಪೃಥ್ವಿರಾಜ್ ಸಜ್ಜಾಗಿದ್ದಾರೆ.

    ಪೃಥ್ವಿರಾಜ್ ಸುಕುಮಾರನ್ ನಟನೆಯ ಜೊತೆ ನಿರ್ದೇಶನ ಮಾಡುತ್ತಿರುವ `ಟೈಸನ್’ ಸಿನಿಮಾ ಆ್ಯಕ್ಷನ್ ಪ್ಯಾಕ್ಡ್ ಸೋಷಿಯೋ ಥ್ರಿಲರ್ ಚಿತ್ರವಾಗಿದ್ದು, ವಿಭಿನ್ನ ಕಥೆ ಮತ್ತು ಪಾತ್ರದ ಮೂಲಕ ಕಮಾಲ್ ಮಾಡಲು ಸ್ಯಾಂಡಲ್‌ವುಡ್ ಎಂಟ್ರಿ ಕೊಡ್ತಿದ್ದಾರೆ. ಮುರಳಿ ಗೋಪಿ ಚಿತ್ರಕಥೆ ಬರೆದಿದ್ದು, ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ.

    ಇನ್ನು `ಕೆಜಿಎಫ್ 2′ ಸಿನಿಮಾವನ್ನು ಮಲಯಾಳಂನಲ್ಲಿ ಪ್ರೇಸೆಂಟ್ ಮಾಡಿದ್ದರು. ಈ ಸಿನಿಮಾದ ವಿತರಕರು ಅವರೇ ಆಗಿದ್ದರು. ಬೆಂಗಳೂರಿನಲ್ಲಿ ನಡೆದ `ಕೆಜಿಎಫ್ 2′ ಟೀಸರ್ ರಿಲೀಸ್ ಕಾರ್ಯಕ್ರಮಕ್ಕೆ ಆಗಮಿಸಿ ಸಾಥ್ ನೀಡಿದ್ದರು. ಹೀಗೆ ಹೊಂಬಾಳೆ ಸಂಸ್ಥೆಯ ಜತೆ ಒಳ್ಳೆಯ ಬಾಂಧವ್ಯವಿರುವ ಕಾರಣ ಇದೀಗ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರಕ್ಕೆ ಪೃಥ್ವಿರಾಜ್ ಆ್ಯಕ್ಷನ್ ಕಟ್ ಹೇಳೋದಕ್ಕೆ ಸಜ್ಜಾಗಿದ್ದಾರೆ. ಇದನ್ನೂ ಓದಿ:ಮಲಯಾಳಂ ಪೃಥ್ವಿರಾಜ್ ಜೊತೆ ಹೊಂಬಾಳೆ ಫಿಲ್ಮ್ಸ್ ಘೋಷಣೆ : ಐದು ಭಾಷೆಗಳಲ್ಲಿ ಸಿನಿಮಾ

    ಚಿತ್ರ ತೆರೆಗೆ ಬರೋದಕ್ಕೂ ಮುಂಚೆ `ಟೈಸನ್’ ಸಿನಿಮಾ ಸದ್ದು ಮಾಡುತ್ತಿದೆ. ಸದ್ಯದಲ್ಲೇ ಶೂಟಿಂಗ್ ಶುರುವಾಗಲಿದೆ. ರಿಲೀಸ್ ಬಳಿಕ ಯಾವ ರೀತಿ ಸೌಂಡ್ ಮಾಡುತ್ತೆ ಕಾದುನೋಡಬೇಕಿದೆ.

  • `ಕಾಂತಾರ’ ರಿಷಬ್ ಶೆಟ್ಟಿಗೆ ಸಪ್ತಮಿ ಗೌಡ ನಾಯಕಿ

    `ಕಾಂತಾರ’ ರಿಷಬ್ ಶೆಟ್ಟಿಗೆ ಸಪ್ತಮಿ ಗೌಡ ನಾಯಕಿ

    ಸ್ಯಾಂಡಲ್‌ವುಡ್‌ನ ನಿರೀಕ್ಷಿತ ಚಿತ್ರ `ಕಾಂತಾರ’ ರಿಲೀಸ್‌ಗೂ ಮುನ್ನವೇ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ. `ಕೆಜಿಎಫ್’ ಚಿತ್ರವನ್ನ ಕೊಟ್ಟಿರೋ ಪ್ರತಿಷ್ಠಿತ ಹೊಂಬಾಳೆ ಬ್ಯಾನರ್ ಕಡೆಯಿಂದ ಕಾಂತಾರ ಚಿತ್ರ ಕೂಡ ನಿರ್ಮಾಣವಾಗಿದ್ದು, ಇದೀಗ ಕಾಂತಾರ ರಿಷಬ್ ಶೆಟ್ಟಿಗೆ ನಾಯಕಿಯಾಗಿ ಸಪ್ತಮಿ ಗೌಡ ಫಿಕ್ಸ್ ಆಗಿದ್ದಾರೆ.

    `ಪಾಪ್‌ಕಾರ್ನ್ ಮಂಕಿ ಟೈಗರ್’ ಚಿತ್ರದಲ್ಲಿ ಡಾಲಿಗೆ ನಾಯಕಿಯಾಗುವ ಮೂಲಕ ಚಂದನವನಕ್ಕೆ ಪರಿಚಿತರಾದ ನಟಿ ಸಪ್ತಮಿ ಗೌಡ ಈಗ ಕಾಂತಾರ ತಂಡ ಸೇರಿಕೊಂಡಿದ್ದಾರೆ. ಸಪ್ತಮಿ ಗೌಡ ಹುಟ್ಟುಹಬ್ಬದಂದು ಹೊಸ ಚಿತ್ರ ಅನೌನ್ಸ್ ಆಗಿದ್ದು, `ಕಾಂತಾರ’ ಚಿತ್ರದ ನಾಯಕ ರಿಷಬ್ ಶೆಟ್ಟಿ ಜೊತೆ ತೆರೆಹಂಚಿಕೊಳ್ಳಲಿದ್ದಾರೆ. ಇದನ್ನೂ ಓದಿ: ಸನ್ನಿ ಲಿಯೋನ್ ಫುಲ್ ಗರಂ: ಓರ್ವ ವ್ಯಕ್ತಿಗೆ ಸನ್ನಿ ಕೊಟ್ರು ಚಪ್ಪಲಿ ಏಟು

     

    View this post on Instagram

     

    A post shared by Hombale Films (@hombalefilms)

    ʻಕಾಂತಾರʼ ಚಿತ್ರದ ನಿರ್ದೇಶನದ ಜತೆ ನಾಯಕನಾಗಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ವಿಜಯ್ ಕಿರಗಂದೂರು ನೇತೃತ್ವದ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಕಾಂತಾರಾ ಭಿನ್ನ ಕಥೆಗೆ ಈಗ ಸಪ್ತಮಿ ಗೌಡ ಕೂಡ ಸಾಥ್ ನೀಡಿದ್ದು, ಲೀಲಾ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ನಟಿ ಸಪ್ತಮಿಯ ಚಿತ್ರದ ಪೊಲೀಸ್ ಪೇದೆ ಲುಕ್ ರಿವೀಲ್ ಆಗಿದ್ದು, ಪೋಸ್ಟರ್ ಲುಕ್ ಈಗ ಸಂಚಲನ ಮೂಡಿಸುತ್ತಿದೆ. ಇದೇ ಸೆಪ್ಟೆಂಬರ್‌ 30ಕ್ಕೆ ʻಕಾಂತಾರʼ ಚಿತ್ರ ತೆರೆಗೆ ಬರಲಿದೆ.

  • ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!

    ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!

    ಣ್ಣಾವ್ರ ಮನೆಮಗ ದೊಡ್ಮನೆ ಕುಡಿ ಭರವಸೆಯ ನಟ ಯುವರಾಜ್‌ಕುಮಾರ್ ನಟನೆ ಎಂಬ ಅಖಾಡಕ್ಕೆ ಇಳಿದಿದ್ದಾರೆ. ಇತ್ತಿಚೆಗಷ್ಟೇ ಯುವರಾಜ್‌ಕುಮಾರ್ ಮತ್ತು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಕಾಂಬಿನೇಷನ್‌ನಲ್ಲಿ ಹೊಸ ಚಿತ್ರದ ಕುರಿತು ಅನೌನ್ಸ್ ಮಾಡಲಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಬ್ರೇಕಿಂಗ್ ನ್ಯೂಸ್ ಹೊರ ಬಿದ್ದಿದೆ. ಯುವರಾಜ್ ಎದುರು ಖಡಕ್ ವಿಲನ್ ಆಗಿ ಡಾಲಿ ಕಾಣಿಸಿಕೊಳ್ತಿದ್ದಾರೆ.ದೊಡ್ಮನೆ ಅಂದ್ರೆ ಭರವಸೆ, ಮೂರು ತಲೆಮಾರುಗಳಿಂದ ತಮ್ಮ ಚಿತ್ರಗಳ ಮೂಲಕ ಅಭಿಮಾನಿಗಳನ್ನ ರಂಜಿಸುತ್ತಲೇ ಬಂದಿದ್ದಾರೆ. ಇದೀಗ ಈ ಸಾಲಿಗೆ ಭರವಸೆಯ ನಟ ಯುವರಾಜ್ ಸೇರ್ಪಡೆಯಾಗಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಯುವರಾಜ್ ಕಾಣಿಸಿಕೊಳ್ತಿದ್ದಾರೆ. ಡೊಡ್ಮನೆ ಕುಡಿ ಯುವಗೆ ಟಕ್ಕರ್ ಕೊಡೋದಕ್ಕೆ ಧನಂಜಯ್ ರೆಡಿಯಾಗಿದ್ದಾರಂತೆ ಎಂಬ ಸುದ್ದಿ ಜೋರಾಗಿದೆ.

    ಡಾಲಿ ನಟನೆಯಲ್ಲಿ ನಟರಾಕ್ಷಸ, ಪಾತ್ರ ಯಾವುದೇ ಆಗಿದ್ರು ಆ ಪಾತ್ರಕ್ಕೆ ಜೀವ ತುಂಬೋ ಮಹಾನ್ ನಟ. ಡೊಡ್ಮನೆಗೆ ನಟನೆ ಅನ್ನೋದು ರಕ್ತಗತವಾಗಿ ಬಂದಿರೋದ್ರಿಂದ ಯುವರಾಜ್ ಮತ್ತು ಡಾಲಿ ಡೆಡ್ಲಿ ಕಾಂಬಿನೇಷನ್ ಬಗ್ಗೆ ಫ್ಯಾನ್ಸ್‌ಗೆ ಸಿಕ್ಕಾಪಟ್ಟೆ ಕುತೂಹಲ ಮೂಡಿಸುತ್ತಿದೆ. ಖಡಕ್ ವಿಲನ್ ಎದುರಿದ್ರೆ ಹೀರೋಗೊಂದು ಗತ್ತು ಗಮ್ಮತ್ತು ಅನ್ನೋದಕ್ಕೆ ಯುವ ಮತ್ತು ಡಾಲಿ ಕಾಂಬಿನೇಷನ್ ಸಾಕ್ಷಿಯಾಗಬಹುದು. ಇನದನ್ನೂ ಓದಿ:`ಫಿದಾ’ ಬ್ಯೂಟಿ ಸಾಯಿ ಪಲ್ಲವಿಗೆ ಕನ್ನಡ ಹೇಳಿಕೊಟ್ಟ ಶೀತಲ್ ಶೆಟ್ಟಿ

    ಯುವರಾಜ್ ನಟನೆಯ ಈ ಚಿತ್ರದ ಟೈಟಲ್ ಮತ್ತು ಪಾತ್ರದ ಜತೆಗೆ ಚಿತ್ರಕಥೆ ಹೇಗಿರಬಹುದು ಅಂತೆಲ್ಲಾ ಈಗಾಗಲೇ ಅಭಿಮಾನಿಗಳು ಯೋಚನೆ ಮಾಡೋದಕ್ಕೆ ಶುರು ಮಾಡಿದ್ದಾರೆ. ಇನ್ನು ರಾಘವೇಂದ್ರ ಸ್ಟೊರ‍್ಸ್ ಚಿತ್ರದ ಶೂಟಿಂಗ್ ಮುಗಿಸಿ ಈಗ ಹೊಂಬಾಳೆ ಬ್ಯಾನರ್‌ನಲ್ಲಿ ಯುವರಾಜ್ ಸಿನಿಮಾವನ್ನು ಸಂತೋಷ್ ಆನಂದ್ ರಾಮ್ ಕೈಗೆತ್ತಿಕೊಂಡಿದ್ದಾರೆ. ಇನ್ನು ಈಗಾಗಲೇ ಸಂತೋಷ್ ಆನಂದ್ ರಾಮ್ ಅವರ ಅಪ್ಪು ಜತೆ ಯುವರತ್ನದಲ್ಲಿ ಡಾಲಿ ನಟಿಸಿರೋದ್ರಿಂದ ಈ ಚಿತ್ರದಲ್ಲೂ ಡಾಲಿ ಇರುತ್ತಾರೆ ಎಂದು ಸುದ್ದಿ ಜೋರಾಗಿದೆ. ಎಲ್ಲದಕ್ಕೂ ಚಿತ್ರತಂಡದಿಂದ ಅಧಿಕೃತ ಮಾಹಿತಿಗಾಗಿ ಕಾದು ನೋಡಬೇಕಿದೆ.

  • `ಕೆಜಿಎಫ್ 2′ 1000 ಕೋಟಿ: ಟೀಸರ್ ಮೂಲಕ ಅಧಿಕೃತ ಮುದ್ರೆ ಒತ್ತಿದ ಹೊಂಬಾಳೆ

    `ಕೆಜಿಎಫ್ 2′ 1000 ಕೋಟಿ: ಟೀಸರ್ ಮೂಲಕ ಅಧಿಕೃತ ಮುದ್ರೆ ಒತ್ತಿದ ಹೊಂಬಾಳೆ

    ರಾಕಿಂಗ್ ಸ್ಟಾರ್ ಯಶ್ ವೃತ್ತಿಜೀವನದ ದಿಕ್ಕೆನ್ನೇ ಬದಲಿಸಿದ `ಕೆಜಿಎಫ್ 2′ ಸಿನಿಮಾ. ದಿನದಿಂದ ದಿನಕ್ಕೆ ಗಲ್ಲಾಪೆಟ್ಟಿಗೆಯಲ್ಲಿ ಹೈಪ್ ಕ್ರಿಯೇಟ್ ಮಾಡ್ತಿದೆ. ಬರೋಬ್ಬರಿ ಒಂದು ಸಾವಿರ ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಸಿನಿರಂಗದಲ್ಲಿ ಯಶ್ ಚಿತ್ರ ದಾಖಲೆ ಬರೆದಿದೆ. ಇದೀಗ ಟೀಸರ್ ಮೂಲಕ ಹೊಂಬಾಳೆ ಬ್ಯಾನರ್ 1 ಸಾವಿರ ಕೋಟಿ ಕಲೆಕ್ಷನ್ ಕುರಿತು ಸಂಭ್ರಮ ಹಂಚಿಕೊಂಡಿದೆ.

    ಎಲ್ಲೆಲ್ಲೂ `ಕೆಜಿಎಫ್ 2′ ಹಬ್ಬ ಜೋರಾಗಿದೆ. ಸಿನಿಮಾ ರಿಲೀಸ್ 3 ವಾರ ಕಳೆದರು ರಾಕಿಭಾಯ್ ಖದರ್ ಮಾತ್ರ ಕಮ್ಮಿಯಾಗಿಲ್ಲ ಎಂಬುದಕ್ಕೆ ಬಾಕ್ಸಾಫೀಸ್ ಕಲೆಕ್ಷನ್ ತಾಜಾ ಉದಾಹರಣೆ. ಬಾಲಿವುಡ್ ಬಾಕ್ಸ್ಆಫೀಸ್‌ನಲ್ಲಿ ಹಿಂದಿ ಸಿನಿಮಾಗಳೇ ಮಾಡಿರದ ದಾಖಲೆಯನ್ನ `ಕೆಜಿಎಫ್ 2′ ಸಿನಿಮಾ ಮಾಡಿ ತೋರಿಸಿದೆ. ಇದೀಗ ಯಶ್ ಸಿನಿಮಾ ಸಾವಿರ ಕೋಟಿಗೂ ಅಧಿಕ ಕ್ಲಬ್ ಸೇರಿದೆ. ಆದರೆ 1 ಸಾವಿರ ಕೋಟಿ ತಲುಪಿ ಕೆಲವು ದಿನಗಳ ಬಳಿಕ ಆಫಿಷಿಯಲ್ ಅನೌನ್ಸ್ಮೆಂಟ್ ಮಾಡಿದೆ ಚಿತ್ರತಂಡ.

    kgf 2

    ನ್ಯಾಷನಲ್ ಸ್ಟಾರ್ ಯಶ್ ನಟನೆಯ `ಕೆಜಿಎಫ್ 2′ ನರಾಚಿ ಅಧಿಪತಿ ಕಥೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. ಬಾಕ್ಸಾಫೀಸ್‌ನಲ್ಲೂ ಈಗಾಗಲೇ 1000 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಇದೀಗ ಹೊಂಬಾಳೆ ಟೀಮ್ ಆಫಿಷಿಯಲ್ ಆಗಿ ಯಶ್ ಇರುವ ಚಿತ್ರದ ಸಣ್ಣ ತುಣುಕಿನೊಂದಿಗೆ ಟೀಸರ್ ಮೂಲಕ ಸಾವಿರ ಕೋಟಿಯ ಕಲೆಕ್ಷನ್ ಸಂಭ್ರಮ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬ್ಯಾಡ್ ಬಾಯ್ ಗೆ ಸಾರ್ವಜನಿಕವಾಗಿ ಕಿಸ್: ವೈರಲ್ ಆದ ನಟಿ ಶೆಹನಾಜ್ ಗಿಲ್

    ಇದೀಗ 1000 ಕೋಟಿಗೂ ಅಧಿಕ ತಲುಪಿ ಗಲ್ಲಾಪೆಟ್ಟಿಗೆಯಲ್ಲಿ ಹಣದ ಭೇಟೆ `ಕೆಜಿಎಫ್ 2′ ಮುಂದುವರೆಸಿದೆ. ಇನ್ನು ಯಶ್ ಬಾಕ್ಸ್ಆಫೀಸ್‌ನ ಮಾನ್‌ಸ್ಟಾರ್ ಆಗಿ ಮುನ್ನುಗ್ಗುತ್ತಿದ್ದಾರೆ. ಪ್ರಶಾಂತ್ ನೀಲ್ ಮತ್ತು ಯಶ್ ಕಾಂಬಿನೇಷನ್ ಚಿತ್ರಕ್ಕೆ ಫಿದಾ ಆಗಿರೋ ಅಭಿಮಾನಿಗಳು ಕೆಜಿಎಫ್ 3ಗಾಗಿ ಎದುರು ನೋಡ್ತಿದ್ದಾರೆ.

  • ಯಶ್ ಅಭಿಮಾನಿಗಳಿಗಾಗಿ ಸ್ಪೆಷಲ್ ಶೋ ಡಿಮ್ಯಾಂಡ್: ರಾಕಿಭಾಯ್ ನಿರಂತರ ಪ್ರದರ್ಶನ

    ಯಶ್ ಅಭಿಮಾನಿಗಳಿಗಾಗಿ ಸ್ಪೆಷಲ್ ಶೋ ಡಿಮ್ಯಾಂಡ್: ರಾಕಿಭಾಯ್ ನಿರಂತರ ಪ್ರದರ್ಶನ

    ನ್ಯಾಷನಲ್ ಸ್ಟಾರ್ ಯಶ್ ನಟನೆಯ `ಕೆಜಿಎಫ್ 2′ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ರಾಕಿಭಾಯ್ ದರ್ಶನಕ್ಕಾಗಿ ಫ್ಯಾನ್ಸ್ ಕಾದು ಕುಳಿತಿದ್ದಾರೆ. ದಿನದಿಂದ ದಿನಕ್ಕೆ ರಾಕಿಂಗ್ ಸ್ಟಾರ್ ಅಭಿಮಾನಿಗಳಲ್ಲಿ `ಕೆಜಿಎಫ್ 2′ ಫೀವರ್ ಹೆಚ್ಚಾಗ್ತಿದೆ. ಏಪ್ರಿಲ್ 14ಕ್ಕೆ ರಿಲೀಸ್ ಆಗ್ತಿರೋ `ಕೆಜಿಎಫ್ 2′ ಚಿತ್ರ ನೋಡಲು ಸ್ಪೆಷಲ್ ಶೋ ಡಿಮ್ಯಾಂಡ್ ಹೆಚ್ಚಾಗ್ತಿದೆ.

    ಹೊಂಬಾಳೆ ಬ್ಯಾನರ್‌ನ ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರ `ಕೆಜಿಎಫ್ 2′ ಸಿನಿಮಾ ನೋಡಲು ವಿಶ್ವದೆಲ್ಲೆಡೆ ಅಭಿಮಾನಿಗಳು ಕಾಯ್ತಿದ್ದಾರೆ. ಇನ್ನು ರಾಕಿಭಾಯ್‌ನ ಸ್ವಾಗತ ಕೋರಲು ಅಭಿಮಾನಿಗಳು ಈಗಾಗಲೇ ಯೋಜನೆ ಹಾಕಿಕೊಂಡಿದ್ದಾರೆ. ರಿಲೀಸ್ ದಿನ ಮಧ್ಯರಾತ್ರಿ 1 ಗಂಟೆಗೆ ಅಭಿಮಾನಿಗಳಿಗಾಗಿ ಸ್ಪೆಷಲ್ ಶೋ ಶುರುವಾಗಲಿದೆ. ಇದನ್ನು ಓದಿ:ʼ2 ಸ್ಟೇಟ್ಸ್’ ಖ್ಯಾತಿಯ ಶಿವಕುಮಾರ್ ಸುಬ್ರಮಣಿಯಂ ನಿಧನ

    `ಕೆಜಿಎಫ್ 2′ ನೋಡಲು ಯಶ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಸಿನಿಅಭಿಮಾನಿಗಳಿಗಾಗಿ ಬೆಂಗಳೂರುಗೌಡನ ಪಾಳ್ಯದ ಶ್ರೀನಿವಾಸ ಮಂದಿರದಲ್ಲಿ `ಕೆಜಿಎಫ್ 2′ ಫ್ಯಾನ್ಸ್ ಶೋ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 14ರಂದು ಮಧ್ಯರಾತ್ರಿ 1 ಗಂಟೆಯಿಂದ ನಿರಂತರ 8 ಶೋಗಳ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ.

    ಇನ್ನು ಈ ಹಿಂದಿನ ಎಲ್ಲಾ ಚಿತ್ರಗಳ ದಾಖಲೆ ಮುರಿದು `ಕೆಜಿಎಫ್ 2′ ನಿರಂತರ 8 ಶೋ ಪ್ರದರ್ಶನವಾಗಲಿದೆ. `ಕೆಜಿಎಫ್ 2′ ಟೀಮ್ ಮಾತ್ರವಲ್ಲ, ಯಶ್ ಅಭಿಮಾನಿಗಳು ದಾಖಲೆಯ ಮೇಲೆ ದಾಖಲೆ ಮಾಡುತ್ತಿದ್ದಾರೆ. ರಾಕಿಭಾಯ್ ಚಿತ್ರ ಬಾಕ್ಸ್ಆಫೀಸ್‌ನಲ್ಲಿ ಲೂಟಿ ಮಾಡೋದು ಗ್ಯಾರೆಂಟಿ ಅಂತಿದೆ ಗಾಂಧಿನಗರ.