Tag: ಹೊನ್ನವಾರ

  • ಭಾಷಣದ ವೇಳೆ ಮೋದಿ ಘೋಷ – ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದ ರಾಹುಲ್

    ಭಾಷಣದ ವೇಳೆ ಮೋದಿ ಘೋಷ – ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದ ರಾಹುಲ್

    ಹೊನ್ನವಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣ ಗಣನೆ ಆರಂಭವಾಗುತ್ತಿದಂತೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೊದಲ ದಿನವೇ ಮುಜುಗರ ಅನುಭವಿಸಿದ್ದಾರೆ.

    ಪ್ರಚಾರಕ್ಕಾಗಿ ಇಂದು ಹೊನ್ನಾವರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ನಗರದ ಶರಾವತಿ ಸರ್ಕಲ್ ಬಳಿ ಭಾಷಣ ಮಾಡುತ್ತಿದ್ದರು. ಈ ವೇಳೆ ಅಲ್ಲಿದ್ದ ಸ್ಥಳೀಯರು “ಮೋದಿ ಮೋದಿ” ಎಂದು ಪ್ರಧಾನಿಗಳ ಪರ ಘೋಷಣೆ ಕೂಗಿದರು.

    ಈ ಸಂದರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಪರ ಘೋಷಣೆ ಕೂಗಿದರು. ತಮ್ಮ ಭಾಷಣಕ್ಕೆ ಅಡ್ಡಿಯಾಗುತ್ತಿದಂತೆ ರಾಹುಲ್ ಅರ್ಧಕ್ಕೆ ತಮ್ಮ ಮಾತು ನಿಲ್ಲಿಸಿ ಸ್ಥಳದಿಂದ ನಿರ್ಗಮಿಸಿದರು.

    ತಮ್ಮ ಭಾಷಣ ವೇಳೆ ಪ್ರಧಾನಿಗಳ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮೋದಿ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ. ಆದರೆ 9 ಸಾವಿರ ಕೋಟಿ ದೋಚಿ ಹೋದ ನೀರವ್ ಮೋದಿ ಬಗ್ಗೆ ಏನೂ ಹೇಳಲ್ಲ. ಬಿಜೆಪಿಯವರು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಜೈಲಿಗೆ ಹೋಗಿದ್ದರು. ಅವರ ಬೆಂಬಲಿಗರೂ ಹೋಗಿದ್ದಾರೆ. ಇಂತಹವರ ಜೊತೆ ಮೋದಿ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.