Tag: ಹೊನ್ನಾಳಿ

  • ‘ಈ ಕೂಡಲೇ ಮನೆಯನ್ನು ಖಾಲಿ ಮಾಡಿʼ – ಹೊನ್ನಾಳಿ ತಾಲೂಕು ಆಡಳಿತ ಸೂಚನೆ

    ‘ಈ ಕೂಡಲೇ ಮನೆಯನ್ನು ಖಾಲಿ ಮಾಡಿʼ – ಹೊನ್ನಾಳಿ ತಾಲೂಕು ಆಡಳಿತ ಸೂಚನೆ

    ದಾವಣಗೆರೆ: ಭಾರೀ ಮಳೆಯಿಂದ ತುಂಗಾಭದ್ರೆ ಮೈ ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಜನ ಕೂಡಲೇ ಮನೆಯನ್ನು ಖಾಲಿ ಮಾಡುವಂತೆ ಹೊನ್ನಾಳಿ ತಾಲೂಕು ಆಡಳಿತ ಸೂಚನೆ ನೀಡಿದೆ.

    ಈಗಾಗಲೇ ಹೊನ್ನಾಳಿಯ‌ ಪಟ್ಟಣದಲ್ಲಿ ಮನೆಗಳ‌ ಮುಂಭಾಗಕ್ಕೆ ನೀರು ನಿಂತಿದ್ದು, ಕೂಡಲೇ ಜನರು ಸ್ಥಳೀಯ ಗಂಜಿ ಕೇಂದ್ರಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ಮತ್ತೆ ಗುಡ್ಡ ಕುಸಿತ – ಸ್ಥಳೀಯ ನಿವಾಸಿಗಳ ಸ್ಥಳಾಂತರ

    ನೀರಿನ ಮಟ್ಟ ಕ್ಷಣಕ್ಕೂ ಹೆಚ್ಚಾಗುತ್ತಿದ್ದು ನದಿ ಪಾತ್ರದ ಮನೆಗಳಿಗೆ‌ ನೀರು ನುಗ್ಗುವ ಸಾಧ್ಯತೆ ಹೆಚ್ಚಿದೆ. ನೆರೆ ಮತ್ತಷ್ಟು ಜಾಸ್ತಿಯಾದರೆ ಹರಿಹರದ ಸಾರಥಿ, ಉಕ್ಕಡಗಾತ್ರಿ, ಸೇರಿದಂತೆ ಹಲವು ಗ್ರಾಮಗಳ ಸಂಪರ್ಕ ಕಡಿತವಾಗುವ ಸಾಧ್ಯತೆಯಿದೆ.

     

  • ಶಾಸಕರ ಜನಸಂಪರ್ಕ ಕಚೇರಿಗೆ ಓಡೋಡಿ ಬಂದ ರೇಣುಕಾಚಾರ್ಯ

    ಶಾಸಕರ ಜನಸಂಪರ್ಕ ಕಚೇರಿಗೆ ಓಡೋಡಿ ಬಂದ ರೇಣುಕಾಚಾರ್ಯ

    ದಾವಣಗೆರೆ: ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೀಡಬೇಕಾಗಿದ್ದ ಪರಿಹಾರ ಸಾಮಗ್ರಿಗಳನ್ನು ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಇಟ್ಟುಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಪಬ್ಲಿಕ್ ಟಿವಿ ವರದಿ ಮಾಡುತ್ತಿದಂತೆ ಶಾಸಕ ರೇಣುಕಾಚಾರ್ಯ ಅವರು ಓಡೋಡಿ ಬಂದು ಸ್ಪಷ್ಟನೆ ನೀಡಿದ್ದಾರೆ.

    ಜಿಲ್ಲೆಯ ಹೊನ್ನಾಳಿ ತಾಲೂಕಿನ ಸುತ್ತಾಮುತ್ತ ಕಳೆದ ನಾಲ್ಕೈದು ತಿಂಗಳ ಹಿಂದೆ ತುಂಗಾಭದ್ರ ನದಿಯ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರವಾಹ ಉಂಟಾಗಿತ್ತು. ಇದರಿಂದ ತಾಲ್ಲೂಕಿನ ಸುತ್ತ ಮುತ್ತಲಿನ ಗ್ರಾಮದ ಜನರು ನಿರಾಶ್ರಿತರಿಗೆ ನೆರವಾಗಲು ಅಗತ್ಯ ಸಾಮಗ್ರಿಗಳನ್ನು ಹಾಗೂ ದವಸ ಧಾನ್ಯಗಳನ್ನು ನೀಡಿದ್ದರು. ಆದರೆ ಶಾಸಕ ರೇಣುಕಾಚಾರ್ಯ ಅವರಿಗೆ ಒಪ್ಪಿಸಿದ ಸಾಮಗ್ರಿಗಳನ್ನು ನಿರಾಶ್ರಿತರಿಗೆ ನೀಡದೆ ಶಾಸಕರ ಜನ ಸಂಪರ್ಕ ಕೇಂದ್ರದಲ್ಲಿ ಸಂಗ್ರಹಿಸಿಡಲಾಗಿತ್ತು. ಕಿಂಟ್ವಾಲ್ ಗಟ್ಟಲೆ ಸಾಮಗ್ರಿಗಳನ್ನು ಹೆಚ್ಚು ದಿನಗಳ ಕಾಲ ಸಂಗ್ರಹಿಸಿಟ್ಟ ಕಾರಣ ಹಾಳಾಗುವ ಹಂತಕ್ಕೆ ತಲುಪಿದ್ದವು, ಈ ಕುರಿತ ವರದಿಯನ್ನು ಪಬ್ಲಿಕ್ ಟಿವಿ ಪ್ರಸಾರ ಮಾಡಿತ್ತು.

    ವರದಿ ಪ್ರಸಾರವಾಗುತ್ತಿದಂತೆ ಎಚ್ಚೆತ್ತ ಶಾಸಕ ರೇಣುಚಾರ್ಯ ಅವರು, ಕೂಡಲೇ ಸ್ಥಳಕ್ಕೆ ಓಡೋಡಿ ಬಂದು, ಸಾಮಗ್ರಿಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಹೊನ್ನಾಳಿಯಲ್ಲಿರುವ ನನ್ನ ಕಚೇರಿಗೆ ಇದೂವರೆಗೂ ನಾನು ಆಗಮಿಸಿಲ್ಲ. ಸಂಗ್ರಹಿಸಿದ್ದ 46 ಲಕ್ಷ ರೂ. ಹಣವನ್ನು ಸಿಎಂ ಪರಿಹಾರ ನಿಧಿ ನೀಡಿದ್ದೇವೆ. ರೈತರಿಗೆ ಪರಿಹಾರವಾಗಿ ನೀಡಿದ್ದ ಹಣ ಅವರ ಬ್ಯಾಂಕ್ ಖಾತೆ ಜಮೆ ಮಾಡಿದ್ದೇವೆ. 7000 ಬಟ್ಟೆ, 35 ಸಾವಿರ ಕ್ವಿಂಟಾಲ್ ಅಕ್ಕಿಯನ್ನು ತಾಲೂಕು ಅಧಿಕಾರಿಗಳಿಗೆ ನೀಡಲಾಗಿದೆ ಎಂದರು.

    ಜಿಲ್ಲಾಧಿಕಾರಿಗಳು ತಾಲೂಕು ಅಧಿಕಾರಿಗಳಿಗೆ ಸಂಗ್ರಹಿಸಿರುವ ವಸ್ತುಗಳನ್ನು ಜನರಿಗೆ ತಲುಪಿಸಲು ಹೇಳಿದ್ದರು. ಆದರೆ ಸದ್ಯ ಸಾಮಾಗ್ರಿಗಳನ್ನು ತಲುಪಿಸುವ ಕಾರ್ಯ ವಿಳಂಬವಾಗಿದೆ. ನಾನು ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಕಾರಣದಿಂದ ವಿತರಣೆ ಮಾಡಲು ತಡವಾಗಿದೆ. ಇಲ್ಲಿರುವ ಯಾವುದೇ ಸಾಮಗ್ರಿಗಳು ದುರ್ಬಳಕೆ ಆಗಿಲ್ಲ, ಇನ್ನೊಂದು ವಾರದಲ್ಲಿ ಸಾಮಾಗ್ರಿಗಳನ್ನು ಸಂತ್ರಸ್ತರಿಗೆ ವಿತರಣೆ ಮಾಡುತ್ತೇನೆ. ಯಾವುದೇ ವಸ್ತುಗಳು ಹಾಳಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

  • ಮತ್ತೊಮ್ಮೆ ಹೋರಿಯಿಂದ ತಪ್ಪಿಸಿಕೊಂಡ ರೇಣುಕಾಚಾರ್ಯ

    ಮತ್ತೊಮ್ಮೆ ಹೋರಿಯಿಂದ ತಪ್ಪಿಸಿಕೊಂಡ ರೇಣುಕಾಚಾರ್ಯ

    – ಮುಟ್ಟಲು ಹೋದಾಗ ಮೇಲೆರಗಿ ಬಂದ ಹೋರಿ

    ದಾವಣಗೆರೆ: ಹೊನ್ನಾಳ್ಳಿ ಕ್ಷೇತ್ರದ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತೊಮ್ಮೆ ಹೋರಿಯಿಂದ ತಪ್ಪಿಸಿಕೊಂಡಿದ್ದಾರೆ.

    ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ಹೊನ್ನಾಳ್ಳಿಯಲ್ಲಿ ಹೋರಿ ಬೆದರಿಸುವ ಹಬ್ಬ ಆಯೋಜಿಸಲಾಗಿತ್ತು. ಹಬ್ಬಕ್ಕೆ ಸ್ಥಳೀಯ ಶಾಸಕರಾಗಿರುವ ರೇಣುಕಾಚಾರ್ಯರನ್ನು ಆಹ್ವಾನಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹೋರಿಗಳ ಬಳಿ ರೇಣುಕಾಚಾರ್ಯರರು ತೆರಳಿದ್ದರು. ರೇಣುಕಾಚಾರ್ಯರು ಹೋರಿಯನ್ನು ಮುಟ್ಟಲು ಹೋಗುತ್ತಿದ್ದಂತೆ ಅವರ ಮೇಲೆಯೇ ಎರಗಿ ಬಂದಿದೆ. ಹೋರಿ ಎರಗಿ ಬರುತ್ತಿದ್ದಂತೆ ಎಚ್ಚೆತ್ತ ಅಂಗರಕ್ಷಕರು ರೇಣುಕಾಚಾರ್ಯರನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಬರೀ ಕೋಣ, ಎಮ್ಮೆ ಹತ್ರ ಗುದ್ದಿಸ್ಕೋ: ರೇಣುಕಾಚಾರ್ಯ ವಿರುದ್ಧ ಬಿಎಸ್‌ವೈ ಗರಂ

    ಅಕ್ಟೋಬರ್ 31ರಂದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ರೇಣುಕಾಚಾರ್ಯರಿಗೆ ಹೋರಿಯೊಂದು ಡಿಚ್ಚಿ ಹೊಡೆದಿತ್ತು. ದೀಪಾವಳಿ ಹಬ್ಬದ ಪ್ರಯುಕ್ತ ಹೋರಿ ಬೆದರಿಸುವ ಕಾರ್ಯಕ್ರಮವನ್ನು ದೊಡ್ಡೇರಿ ಗ್ರಾಮಸ್ಥರು ಆಯೋಜನೆ ಮಾಡಿದ್ದರು. ಇದಕ್ಕೆ ಮುಖ್ಯ ಅತಿಥಿಯಾಗಿ ಶಾಸಕ ರೇಣುಕಾಚಾರ್ಯ ಅವರನ್ನು ಕರೆಯಾಲಾಗಿತ್ತು. ಈ ಕಾರ್ಯಕ್ರಮಕ್ಕೆ ಹೋಗಿದ್ದ ರೇಣುಕಾಚಾರ್ಯ ಅವರಿಗೆ ಹೋರಿಯೊಂದು ವೇಗವಾಗಿ ಓಡಿಬಂದು ಡಿಚ್ಚಿ ಹೊಡೆದಿತ್ತು. ಇದನ್ನೂ ಓದಿ: ರೇಣುಕಾಚಾರ್ಯ ಕಚೇರಿಗೆ ಬಂದ್ರೆ ಹೆದರಿಕೆಯಾಗುತ್ತೆ – ಈಶ್ವರಪ್ಪ ಹಾಸ್ಯ ಚಟಾಕಿ

    ತಮ್ಮ ನೆಚ್ಚಿನ ನಾಯಕ ಊರ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ರೇಣುಕಾಚಾರ್ಯ ಅವರ ಅಭಿಮಾನಿಗಳು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡುತ್ತಿದ್ದರು. ಈ ಸಮಯದಲ್ಲಿ ಜನರ ಕಿರುಚಾಟಕ್ಕೆ ಹೆದರಿ ಓಡಿಬಂದ ಹೋರಿ ಶಾಸಕ ರೇಣುಕಾಚಾರ್ಯ ಅವರಿಗೆ ಗುದ್ದಿತ್ತು. ಹೋರಿ ಹೊಡೆದ ರಭಸಕ್ಕೆ ರೇಣುಕಾಚಾರ್ಯ ಅವರು ಕೆಳಗೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿದೇ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದರು. ಇದನ್ನೂ ಓದಿ: ಹೊನ್ನಾಳಿ ಹೋರಿ ರೇಣುಕಾಚಾರ್ಯಗೆ ಡಿಚ್ಚಿ ಹೊಡೆದ ರಿಯಲ್ ಹೋರಿ

  • ಕೃಷ್ಣಮಠದ ‘ಸುಭದ್ರೆ’ ರಾತ್ರೋ ರಾತ್ರಿ ಹೊನ್ನಾಳಿ ಮಠಕ್ಕೆ ಸ್ಥಳಾಂತರ

    ಕೃಷ್ಣಮಠದ ‘ಸುಭದ್ರೆ’ ರಾತ್ರೋ ರಾತ್ರಿ ಹೊನ್ನಾಳಿ ಮಠಕ್ಕೆ ಸ್ಥಳಾಂತರ

    -ಆನೆ ರವಾನೆ ಹಿಂದಿದೆ ಹಲವು ಅನುಮಾನ

    ಉಡುಪಿ: ಶ್ರೀಕೃಷ್ಣ ಮಠದ ಆನೆ ಸುಭದ್ರೆಯನ್ನು ಹೊನ್ನಾಳಿ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಕಳೆದ ಎರಡು ದಶಕಗಳಿಂದ ಉಡುಪಿ ಕೃಷ್ಣ ಮಠದಲ್ಲಿ ಸೇವೆ ಸಲ್ಲಿಸುತ್ತಿದ್ದ ಆನೆ ಸುಭದ್ರೆಯನ್ನು ಇದೀಗ ಸ್ಥಳಾಂತರ ಮಾಡಲಾಗಿದೆ.

    ಹೊನ್ನಾಳಿಯ ಮಠವೊಂದಕ್ಕೆ ಸೋಮವಾರ ಮುಂಜಾನೆ 4 ಗಂಟೆಯ ವೇಳೆಗೆ ಕೊಂಡೊಯ್ಯಲಾಗಿದೆ. ಮಠದ ಹೊರವಲಯದಲ್ಲಿರುವ ಕನಕ ಶಾಪಿಂಗ್ ಮಾಲ್ ನ ನಿರ್ಮಾಣ ಹಂತದ ಕಟ್ಟಡದ ಮೂಲಕ ಆನೆಯನ್ನು ಲಾರಿಗೆ ಹತ್ತಿಸುವ ಪ್ರಯತ್ನ ನಡೆಯಿತು. ನಾಲ್ವರು ಮಾವುತರ ಪ್ರಯತ್ನದ ಹೊರತಾಗಿಯೂ ಆನೆ ಲಾರಿ ಹತ್ತಲು ಒಪ್ಪಲೇ ಇಲ್ಲ. ಲಾರಿಯ ಚಕ್ರಗಳು ಹೂತುಹೋಗಿ ಸಮಸ್ಯೆ ಉಂಟಾಯ್ತು. ಕೊನೆಗೂ ಹರಸಾಹಸಪಟ್ಟು, ಬೇರೆ ಲಾರಿಗೆ ಕಟ್ಟಿ ಎಳೆಯಲಾಯ್ತು. ಬೆಳಗಿನ ಜಾವ ನಾಲ್ಕು ಗಂಟೆಗೆ ಲಾರಿ ಹತ್ತಿಸಿ ಆನೆಯನ್ನು ರವಾನಿಸಲಾಗಿದ್ದು, ಆನೆ ಸಾಗಾಟದ ವೇಳೆ ಸೂಕ್ತ ವೈದ್ಯರಾಗಲೀ, ಅರಣ್ಯ ಇಲಾಖೆಯವರಾಗಲೀ ಸ್ಥಳದಲ್ಲಿ ಇರಲಿಲ್ಲ.

    ಆನೆಯನ್ನು ಮಠಕ್ಕೆ ದಾನ ನೀಡಿದ ಮುಂಬೈನ ಉದ್ಯಮಿ ಕುಟುಂಬಕ್ಕೆ ಈ ಆನೆಯನ್ನು ಮಠದಿಂದ ಸಾಗಿಸುವುದಕ್ಕೆ ಮನಸ್ಸಿಲ್ಲ. ರಾತೋರಾತ್ರಿ ಗೌಪ್ಯವಾಗಿ ಆನೆಯನ್ನು ಹೊನ್ನಾಳಿಗೆ ಸಾಗಿಸಿರುವುದು ಅನುಮಾನಕ್ಕೆ ಎಡೆಮಾಡುತ್ತಿದೆ. ಆನೆಯ ಅನಾರೋಗ್ಯದ ಕಾರಣಕ್ಕೆ ಸ್ಥಳಾಂತರ ಮಾಡುವುದು ಅನಿವಾರ್ಯ. ಹೊನ್ನಾಳಿ ಮಠದಲ್ಲಿರುವ ಗಂಡಾನೆಯ ಮೂಲಕ ಸುಭದ್ರೆಯ ಸಂತಾನೋತ್ಪತ್ತಿಗೆ ಅವಕಾಶ ಮಾಡಲಾಗುತ್ತಿದೆ ಎಂದು ಮಠ ಮಾಹಿತಿ ನೀಡಿದೆ.

    ಮಾವುತ ಮಹಮ್ಮದ್ ನ ಪ್ರಕಾರ ಆನೆ ಆರೋಗ್ಯವಾಗಿದೆ ಮತ್ತು ಬೆದೆಯ ಕಾಲ ಇದಲ್ಲ. ಮದ ಬಂದ ಗಂಡಾನೆಯ ಮದ ಇಳಿಸುವ ಸಂದರ್ಭ ಕ್ರಾಸಿಂಗ್ ಮಾಡಿಸಬೇಕು ಎಂದು ಹೇಳಿದ್ದಾರೆ. ಆನೆಯನ್ನು ಪರ್ಮನೆಂಟಾಗಿ ಹೊನ್ನಾಳಿಯಲ್ಲೇ ಇರಿಸಿಕೊಳ್ಳಲಾಗುತ್ತದೆ ಎಂಬ ಮಾಹಿತಿಯಿದೆ. ಅನಾರೋಗ್ಯದಿಂದ ಇರುವ ಆನೆಯನ್ನು ಮಠದಲ್ಲಿ ಉಳಿಸಿಕೊಂಡರೆ ಕಾನೂನು ಸಂಕಟ ಎದುರಿಸಬೇಕಾಗಿದಿತು ಎಂದು ಕೃಷ್ಣಮಠ ಹೊನ್ನಾಳಿಗೆ ದಾಟಿಸಿದೆ ಎಂದೂ ಹೇಳಲಾಗಿದೆ. ಉಡುಪಿ ಕೃಷ್ಣಮಠದ ಪರ್ಯಾಯ ಪಲಿಮಾರು ಮಠ ಇದಕ್ಕೆ ಸ್ಪಷ್ಟನೆ ಕೊಡಬೇಕಿದೆ.

  • ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ಬಂದಿದೆ- ರೇಣುಕಾಚಾರ್ಯ

    ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ಬಂದಿದೆ- ರೇಣುಕಾಚಾರ್ಯ

    ದಾವಣಗೆರೆ: 17 ಮಂದಿ ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ದೇಶಕ್ಕೆ ಸ್ವಾತಂತ್ರ್ಯ ಬಂದ ರೀತಿ ಅನರ್ಹ ಶಾಸಕರ ತ್ಯಾಗದಿಂದ ನಮ್ಮ ಸರ್ಕಾರ ಬಂದಿದೆ ಎಂದಿದ್ದಾರೆ.

    ಪಕ್ಷ ನನ್ನನ್ನು ಗುರುತಿಸಿ ಸ್ಥಾನಮಾನ ನೀಡಿದೆ. ಕೊಟ್ಟಂತಹ ಜವಾಬ್ದಾರಿಯನ್ನು ನಾನು ನಿಭಾಯಿಸುತ್ತೇನೆ. ಸಮಾಧಾ£ಪಡಿಸಲು ರಾಜಕೀಯ ಕಾರ್ಯದರ್ಶಿಯಾಗಿ ಮಾಡಿದ್ದಾರೆ ಎನ್ನುತ್ತಾರೆ. ಆದರೆ ನನಗೆ ಅಂತಹ ಯಾವುದೇ ಅಸಮಾಧಾನವಿಲ್ಲ. ನಮಗೆ ಪಕ್ಷ ಮೊದಲು ಅಧಿಕಾರ, ಸ್ಥಾನ ಮಾನ ನಂತರ ಎಂದು ಹೇಳಿದರು.

    ಇದೇ ವೇಳೆ ಅಬಕಾರಿ ಸಚಿವ ನಾಗೇಶ್ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕರು, ಹುಚ್ಚು ಹುಚ್ಚಾದ ಹೇಳಿಕೆ ಕೊಡುವುದನ್ನ ನಿಲ್ಲಿಸಲಿ. ಮನೆಮನೆಗೆ, ಹಟ್ಟಿಗಳಿಗೆ ಮದ್ಯ ಸರಬರಾಜು ಮಾಡುವುದಾಗಿ ಹೇಳಿ ಸರ್ಕಾರಕ್ಕೆ ಡ್ಯಾಮೇಜ್ ಮಾಡಬೇಡಿ. ಸಿಎಂ ಸಲಹೆ ಪಡೆದು ಪ್ರಬುದ್ಧ ರಾಜಕಾರಣ ಮಾಡಿ ಎಂದು ಸಲಹೆ ನೀಡಿದರು.

    ನಾನು ಅಬಕಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ವಿಧಾನಸೌದದ ಮೂರನೇ ಮಹಡಿಯಲ್ಲಿ ಮಾತ್ರ ಅಧಿಕಾರ ಇತ್ತು. ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಕಳ್ಳಭಟ್ಟಿ, ನಕಲಿ ಮದ್ಯ ತಡೆಗಟ್ಟಿ ಸರ್ಕಾರಕ್ಕೆ ಆದಾಯ ತಂದಿದ್ದೇನೆ. ಹೀಗಾಗಿ ನಾಗೇಶ್ ಅವರು ಆತುರದ ಹೇಳಿಕೆ ಕೊಡದೇ ಸರಿಯಾಗಿ ಜವಾಬ್ದಾರಿ ನಿರ್ವಹಿಸಲಿ ಎಂದರು.

    https://www.youtube.com/watch?v=-f8ZukxBbbY

  • ‘ಎಣ್ಣೆ’ ಸಚಿವರ ಹೇಳಿಕೆಗೆ ರೇಣುಕಾಚಾರ್ಯ ಆಕ್ರೋಶ

    ‘ಎಣ್ಣೆ’ ಸಚಿವರ ಹೇಳಿಕೆಗೆ ರೇಣುಕಾಚಾರ್ಯ ಆಕ್ರೋಶ

    ದಾವಣಗೆರೆ: ಮನೆ ಬಾಗಿಲಿಗೆ ಮದ್ಯ ವಿತರಣೆ ಮಾಡುವುದಾಗಿ ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಎಚ್.ನಾಗೇಶ್ ವಿರುದ್ಧ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ನ್ಯಾಮತಿಯ ದೊಡ್ಡಯತ್ತಿನಹಳ್ಳಿಯಲ್ಲಿ ಕೆರೆಗೆ ಭಾಗಿನ ಅರ್ಪಿಸಿ ಮಾತನಾಡಿದ ಶಾಸಕ ರೇಣುಕಾಚಾರ್ಯ, ಅಬಕಾರಿ ಸಚಿವ ನಾಗೇಶ್ ಹೇಳಿಕೆಯಿಂದ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಮನೆ ಮನೆಗೆ ಮದ್ಯ ಹಾಗೂ ಮೊಬೈಲ್ ಬಾರ್ ಗಳ ಬಗ್ಗೆ ಮಾತನಾಡಬಾರದಿತ್ತು. ನಿಮ್ಮ ಈ ರೀತಿಯ ಹೇಳಿಕೆಯಿಂದ ಸಿಎಂ ಬಿಎಸ್‍ವೈ ಅವರ ಸರ್ಕಾರ ಹಾಗೂ ಬಿಜೆಪಿ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆ ಕಡಿಮೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಸಚಿವರಾಗಿ ಸರ್ಕಾರದ ಅದಾಯವನ್ನು ಹೆಚ್ಚಿಸಬೇಕು ಎಂದರೆ ಮೊದಲು ಅಕ್ರಮ ಮದ್ಯ ಹಾಗೂ ಕಳ್ಳಭಟ್ಟಿಯನ್ನು ನಿಲ್ಲಿಸಿ. ಆಗ ಸರ್ಕಾರಕ್ಕೆ ತಾನಾಗಿಯೇ ಆದಾಯ ಬರುತ್ತದೆ. ಅದನ್ನು ಬಿಟ್ಟು ಈ ರೀತಿಯ ಹೇಳಿಕೆ ನೀಡಬಾರದು. ನಾನು ಅಬಕಾರಿ ಸಚಿವನಾಗಿದ್ದ ವೇಳೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಅಕ್ರಮ ಮದ್ಯದ ತಯಾರಿಕೆಯನ್ನು ತಡೆದು ಕಳ್ಳಭಟ್ಟಿ ಮುಕ್ತ ರಾಜ್ಯವನ್ನಾಗಿ ಮಾಡಲು ಶ್ರಮವಹಿಸಿದ್ದೆ. ನೀವು ಹೇಳಿರುವಂತೆ ಕಳ್ಳಭಟ್ಟಿ ತಯಾರಿಕೆ ತಡೆಯುವ ಬಗ್ಗೆ ಗಮನಹರಿಸಿ. ಈ ಬಗ್ಗೆ ನಿಮ್ಮನ್ನು ಸಂಪರ್ಕ ಮಾಡಿ ಮಾತನಾಡಲು ಪ್ರಯತ್ನಿಸಿದ್ದೆ. ಆದರೆ ಸಂಪರ್ಕ ಮಾಡಲು ಆಗಲಿಲ್ಲ. ಆದ್ದರಿಂದ ಇಂತಹ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದರು.

    ಬಿಎಸ್ ಯಡಿಯೂರಪ್ಪ ಸರ್ಕಾರದ ಮೇಲೆ ಭಾರೀ ನಿರೀಕ್ಷೆ ಇದ್ದು, ಜನರ ಅಭಿವೃದ್ಧಿಗೆ ಬೇಕಾದ ಒಳ್ಳೆಯ ಕಾರ್ಯಕ್ರಮ ಬಗ್ಗೆ ಗಮನ ನೀಡೋಣ. ರೈತರ ಅಭಿವೃದ್ಧಿಗಾಗಿ ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ನೀರಿನ ಸಮಸ್ಯೆಗಳನ್ನು ಬಗೆಹರಿಸುವತ್ತ ಕಾರ್ಯ ನಿರ್ವಹಿಸೋಣ. ನಿಮ್ಮ ಬಗ್ಗೆ ಗೌರವವಿದ್ದು, ಯಾವುದೇ ಅವಿಶ್ವಾಸ ಇಲ್ಲ. ಸರ್ಕಾರಕ್ಕೆ ಒಳ್ಳೆ ಹೆಸರು ತರುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

  • ಪ್ರವಾಹ ವೀಕ್ಷಣೆ ವೇಳೆ ಜಾರಿ ಬಿದ್ದ ರೇಣುಕಾಚಾರ್ಯ

    ಪ್ರವಾಹ ವೀಕ್ಷಣೆ ವೇಳೆ ಜಾರಿ ಬಿದ್ದ ರೇಣುಕಾಚಾರ್ಯ

    ದಾವಣಗೆರೆ: ಪ್ರವಾಹ ವೀಕ್ಷಣೆ ವೇಳೆ ಹೊನ್ನಾಳಿಯ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಜಾರಿ ಬಿದ್ದ ಪ್ರಸಂಗ ಸಾಸ್ವೇಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆಯಿತು.

    ತುಂಗಭದ್ರಾ ನದಿಯ ಹರಿವು ಹೆಚ್ಚಾಗಿದ್ದರಿಂದ ಅನೇಕ ಗ್ರಾಮಗಳಿಗೆ ನೀರು ನುಗ್ಗಿದೆ. ಹೀಗಾಗಿ ಶಾಸಕರು ತಮ್ಮ ಕ್ಷೇತ್ರವಾದ ಹೊನ್ನಾಳಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಸ್ವೇಹಳ್ಳಿ ಗ್ರಾಮದಲ್ಲಿ ಪ್ರವಾಹಕ್ಕೆ ಹಾನಿಯಾದ ಪ್ರದೇಶವನ್ನು ವೀಕ್ಷಣೆ ಮಾಡುತ್ತಿದ್ದಾಗ ಅಣ್ಣಾ… ಚಾರುತ್ತೇ ಅಣ್ಣಾ… ಬೀಳುತ್ತಿರಾ ಹುಷಾರು ಎಂದು ಬೆಂಬಲಿಗರು ಶಾಸಕರಿಗೆ ತಿಳಿಸಿದರು.

    ಅಣ್ಣಾ ನನ್ನನ್ನು ಹಿಡಿದುಕೊಳ್ಳಿ. ನಿಧಾನವಾಗಿ ದಾಟಿ ಎಂದು ರೇಣುಕಾಚಾರ್ಯ ಅವರ ಕೈಯನ್ನು ಬೆಂಬಲಿಗೊಬ್ಬರು ಹಿಡಿದರು. ಆದರೆ ಅವರಿಂದ ಕೈ ಕೊಸರಿಕೊಂಡ ಶಾಸಕರು ಹೆಜ್ಜೆ ಕೀಳುತ್ತಿದ್ದಂತೆ ಜಾರಿ ಬಿದ್ದರು. ಇದನ್ನು ನೋಡಿ ಬೆಂಬಲಿಗರು ತಕ್ಷಣವೇ ಶಾಸಕರನ್ನು ಎತ್ತಿದರು. ಅದೃಷ್ಟವಶಾತ್ ರೇಣುಕಾಚಾರ್ಯ ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ.

    ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕರು, ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಮೂಲ ಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈ ಭಾಗದ ಜನರು ನನ್ನನ್ನು ಮೂರು ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಒಂದು ಬಾರಿ ಪ್ರೀತಿಯಿಂದ ಸೋಲಿಸಿದ್ದಾರೆ. ಆದರೆ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ನನ್ನ ಬಗ್ಗೆ ಕೆಟ್ಟದಾಗಿ ಬಿಂಬಿಸುವ ಕೆಲಸವಾಗಿದೆ ಎಂದು ಆರೋಪಿಸಿದರು.

    ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದ ಶಾಸಕರು, ಯಡಿಯೂರಪ್ಪ ಎಲ್ಲಿದೀಯಾಪ್ಪ ಎಂದು ಕುಮಾರಸ್ವಾಮಿ ವ್ಯಂಗ್ಯವಾಡುತ್ತಾರೆ. ಆದರೆ ಅವರು ಎಲ್ಲಿ ಇದೀರಾ ಅಂತ ಯಾರಿಗೂ ಗೊತ್ತಾಗುತ್ತಿಲ್ಲ. ಯಡಿಯೂರಪ್ಪನವರು ಪ್ರತಿಯೊಬ್ಬರ ಮನೆ, ಕೇರಿ, ಗಲ್ಲಿಗಳಲ್ಲಿ ಇರುತ್ತಾರೆ ಎಂದು ಟಾಂಗ್ ಕೊಟ್ಟರು.

    ಪ್ರವಾಹ ಪೀಡಿತ ಪ್ರದೇಶಕ್ಕೆ ವಿಪಕ್ಷದ ಯಾವುದೇ ನಾಯಕರು ಭೇಟಿ ನೀಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪುನರ್ಜನ್ಮ ನೀಡಿದ ಬದಾಮಿ ಕ್ಷೇತ್ರದಲ್ಲಿ ಸಾಕಷ್ಟು ಪ್ರವಾಹವಿದೆ. ಆದರೂ ಸಹ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಅಂತವರು ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ವಿಪಕ್ಷದವರು ಯಡಿಯೂರಪ್ಪ ಒಂಟಿ ಸಲಗ, ಒನ್ ಮ್ಯಾನ್ ಆರ್ಮಿ ಎಂದು ಹೀಯಾಳಿಸುತ್ತಿದ್ದಾರೆ. ಯಡಿಯೂರಪ್ಪನವರು ಒಬ್ಬರೇ ಅಲ್ಲ ಅವರ ಜೊತೆ ನಾವು ಕೂಡ ಇದ್ದೇವೆ. ಪ್ರವಾಹ ಪರಿಸ್ಥಿತಿಯನ್ನು ಎಲ್ಲರೂ ಎದುರಿಸುತ್ತಿದ್ದೇವೆ ಎಂದು ಹೇಳಿದರು.

  • ತೆಪ್ಪಕ್ಕೆ ಹುಟ್ಟು ಹಾಕಿದನ್ನೇ ದೊಡ್ಡ ವಿಷಯ ಮಾಡಿದ್ರು: ಮಾಧ್ಯಮಗಳ ವಿರುದ್ಧ ರೇಣುಕಾಚಾರ್ಯ ಕಿಡಿ

    ತೆಪ್ಪಕ್ಕೆ ಹುಟ್ಟು ಹಾಕಿದನ್ನೇ ದೊಡ್ಡ ವಿಷಯ ಮಾಡಿದ್ರು: ಮಾಧ್ಯಮಗಳ ವಿರುದ್ಧ ರೇಣುಕಾಚಾರ್ಯ ಕಿಡಿ

    ದಾವಣಗೆರೆ: ತೆಪ್ಪಕ್ಕೆ ಹುಟ್ಟು ಹಾಕಿದನ್ನು ದೊಡ್ಡ ವಿಷಯ ಮಾಡಿದರು ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

    ಹೊನ್ನಾಳಿಯ ಸಾಸ್ವೇಹಳ್ಳಿ ಹಳ್ಳಿಯಲ್ಲಿ ಮಾತನಾಡಿದ ಶಾಸಕರು, ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಮೂಲ ಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈ ಭಾಗದ ಜನರು ನನ್ನನ್ನು ಮೂರು ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಒಂದು ಬಾರಿ ಪ್ರೀತಿಯಿಂದ ಸೋಲಿಸಿದ್ದಾರೆ. ಆದರೆ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ನನ್ನ ಬಗ್ಗೆ ಕೆಟ್ಟದಾಗಿ ಬಿಂಬಿಸುವ ಕೆಲಸವಾಗಿದೆ ಎಂದು ಆರೋಪಿಸಿದರು.

    ನಾನು ಪ್ರಚಾರಕ್ಕಾಗಿ ತೆಪ್ಪಕ್ಕೆ ಹುಟ್ಟು ಹಾಕಿಲ್ಲ. ಶನಿವಾರ ಕ್ಷೇತ್ರದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದರಿಂದ ಆಯಾಸವಾಗಿತ್ತು. ಜನರು ತೆಪ್ಪದಲ್ಲಿ ಕುಳಿತುಕೊಳ್ಳುವಂತೆ ತಿಳಿಸಿದರು. ಈ ವೇಳೆ ಇಳಿ ವಯಸ್ಸಿನ ಯಜಮಾನರೊಬ್ಬರು ಹುಟ್ಟು ಹಾಕುತ್ತಿದ್ದರು. ಅದನ್ನು ನೋಡಿ ಅವರಿಂದ ಹುಟ್ಟು ಪಡೆದು ಎರಡು ನಿಮಿಷ ತೆಪ್ಪವನ್ನು ನಡೆಸಿದೆ. ಅದನ್ನೇ ಮಾಧ್ಯಮಗಳು ಟ್ರೋಲ್ ಮಾಡಿದರು. ಈ ಘಟನೆಯನ್ನು ಯಾರು ಹೇಗೆ ಬಿಂಬಿಸಿದರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಕ್ಷೇತ್ರದ ಜನತೆಗೆ ನನ್ನ ಬಗ್ಗೆ ಗೊತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು.

    ಮಾತು ಸಾಧನೆಯಲ್ಲ. ನಾನು ಕ್ಷೇತ್ರದ ಜನರಿಗಾಗಿ ಶ್ರಮಿಸುತ್ತಿದ್ದೇನೆಯೇ ಹೊರತು ಪ್ರಚಾರಕ್ಕಾಗಿ ಅಲ್ಲ. ಟೀಕೆ-ಟಿಪ್ಪಣಿ, ತೆಗಳಿಕೆ-ಹೊಗಳಿಕೆ ಎಲ್ಲವನ್ನೂ ನಾನು ಸ್ವೀಕರಿಸುತ್ತೇನೆ. ಯಾವುದಕ್ಕೂ ಜಗ್ಗಲ್ಲ-ಕುಗ್ಗಲ್ಲ ಎಂದು ಗುಡುಗಿದರು.

    ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದ ಶಾಸಕರು, ಯಡಿಯೂರಪ್ಪ ಎಲ್ಲಿದೀಯಾಪ್ಪ ಎಂದು ಕುಮಾರಸ್ವಾಮಿ ವ್ಯಂಗ್ಯವಾಡುತ್ತಾರೆ. ಆದರೆ ಕುಮಾರಸ್ವಾಮಿ ಅವರು ಎಲ್ಲಿ ಇದ್ದಾರೆ ಅಂತ ಯಾರಿಗೂ ಗೊತ್ತಾಗುತ್ತಿಲ್ಲ. ಯಡಿಯೂರಪ್ಪನವರು ಪ್ರತಿಯೊಬ್ಬರ ಮನೆ, ಕೇರಿ, ಗಲ್ಲಿಗಳಲ್ಲಿ ಇರುತ್ತಾರೆ ಎಂದು ಟಾಂಗ್ ಕೊಟ್ಟರು.

    ಪ್ರವಾಹ ಪೀಡಿತ ಪ್ರದೇಶಕ್ಕೆ ವಿಪಕ್ಷದ ಯಾವುದೇ ನಾಯಕರು ಭೇಟಿ ನೀಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪುನರ್ಜನ್ಮ ನೀಡಿದ ಬದಾಮಿ ಕ್ಷೇತ್ರದಲ್ಲಿ ಸಾಕಷ್ಟು ಪ್ರವಾಹವಿದೆ. ಆದರೂ ಸಹ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಅಂತವರು ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ವಿಪಕ್ಷದವರು ಯಡಿಯೂರಪ್ಪ ಒಂಟಿ ಸಲಗ, ಒನ್ ಮ್ಯಾನ್ ಆರ್ಮಿ ಎಂದು ಹೀಯಾಳಿಸುತ್ತಿದ್ದಾರೆ. ಯಡಿಯೂರಪ್ಪನವರು ಒಬ್ಬರೇ ಅಲ್ಲ ಅವರ ಜೊತೆ ನಾವು ಕೂಡ ಇದ್ದೇವೆ. ಪ್ರವಾಹ ಪರಿಸ್ಥಿತಿಯನ್ನು ಎಲ್ಲರೂ ಎದುರಿಸುತ್ತಿದ್ದೇವೆ ಎಂದು ಹೇಳಿದರು.

  • ಹೊನ್ನಾಳಿಯಲ್ಲೂ ಪ್ರವಾಹ ಭೀತಿ- ಜನರ ಸ್ಥಳಾಂತರ ಕಾರ್ಯಕ್ಕೆ ರೇಣುಕಾಚಾರ್ಯ ಸಾಥ್

    ಹೊನ್ನಾಳಿಯಲ್ಲೂ ಪ್ರವಾಹ ಭೀತಿ- ಜನರ ಸ್ಥಳಾಂತರ ಕಾರ್ಯಕ್ಕೆ ರೇಣುಕಾಚಾರ್ಯ ಸಾಥ್

    ದಾವಣಗೆರೆ: ತುಂಗಭದ್ರಾ ನದಿಯಲ್ಲಿ ನೀರು ಹೆಚ್ಚಾದ ಕಾರಣ ಹೊನ್ನಾಳಿಯಲ್ಲಿಯೂ ಸಹ ಪ್ರವಾಹ ಭೀತಿ ಉಂಟಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಜನರನ್ನು ಕಾಪಾಡಲು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರೇ ಅಖಾಡಕ್ಕಿಳಿದ್ದಿದ್ದು, ಸಂತ್ರಸ್ತರ ಮೆನೆಗೆ ತೆರಳಿ ಜನರನ್ನು ಹೊರಗೆ ಕರೆ ತರುತ್ತಿದ್ದಾರೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಸಕ ರೇಣುಕಾಚಾರ್ಯ ಅವರೇ ಸ್ವತಃ ನೀರಿಗೆ ಇಳಿದು ಜನರನ್ನು ಸ್ಥಳಾಂತರ ಮಾಡಿಸುತ್ತಿದ್ದಾರೆ. ತುಂಗಾಭದರ್ರಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗುತ್ತಿದೆ. ಹೊನ್ನಾಳಿಯ ಬಾಲ್ ರಾಜ್ ಘಾಟ್, ಬಂಬುಬಜಾರ್ ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಪ್ರವಾಹ ಇನ್ನು ಹೆಚ್ಚಾಗುವ ಹಿನ್ನಲೆ ಅಧಿಕಾರಿಗಳು ಮನೆಗಳನ್ನು ಖಾಲಿ ಮಾಡಿಸುತ್ತಿದ್ದಾರೆ.

    ಅಧಿಕಾರಿಗಳ ಜೊತೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹ ಕಾರ್ಯಕರ್ತರೊಂದಿಗೆ ನೀರಿಗೆ ಇಳಿದು ಜನರನ್ನು ಮನೆಯಿಂದ ಹೊರಗೆ ಕರೆ ತರುತ್ತಿದ್ದಾರೆ. ತಕ್ಷಣ ಮನೆ ಖಾಲಿ ಮಾಡಿ ಎಂದು ಸೂಚನೆ ನೀಡುತ್ತಿದ್ದಾರೆ. ರೇಣುಕಾಚಾರ್ಯ ಜೊತೆ ಕಾರ್ಯಕರ್ತರು ಸಹ ಸಾಥ್ ನೀಡಿದ್ದಾರೆ. ಶಿಂಗಟಾಲೂರು ಏತ ನೀರಾವರಿ ಬ್ಯಾರೇಜ್‍ನಿಂದ 1.80 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಟ್ಟಿದ್ದರಿಂದ ತುಂಗಭದ್ರಾ ನದಿಯಲ್ಲಿ ಪ್ರವಾಹ ಹೆಚ್ಚಾಗಿದೆ.

    ಕುರವತ್ತಿ, ಹರವಿ, ಅಲ್ಲಿಪುರ, ಮಾಗಳ, ಅಂಗೂರು, ಗ್ರಾಮದಲ್ಲಿ ಬೆಳೆ ಹಾನಿ ಸಂಭವಿಸಿದೆ. ಕುರವತ್ತಿ ಗ್ರಾಮದಲ್ಲಿ 5 ಕುಟುಂಬಗಳನ್ನು ಈಗಾಗಿಲೇ ಸ್ಥಳಾಂತರಿಸಲಾಗಿದ್ದು, ಉಳಿದ ಕುಟುಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ. ಹಡಗಲಿ ತಾಲೂಕಿನಲ್ಲಿ ಒಟ್ಟು 127 ಮನೆಗಳು ನೆಲಸಮವಾಗಿದೆ.

  • ಕಾಡುಬಿಟ್ಟು ನಾಡಿಗೆ ಬಂತು ಚಿರತೆ ಹಿಂಡು: ಆತಂಕದಲ್ಲಿದ್ದಾರೆ ಹೊನ್ನಾಳಿ ಸುತ್ತಮುತ್ತಲಿನ ಗ್ರಾಮಸ್ಥರು!

    ಕಾಡುಬಿಟ್ಟು ನಾಡಿಗೆ ಬಂತು ಚಿರತೆ ಹಿಂಡು: ಆತಂಕದಲ್ಲಿದ್ದಾರೆ ಹೊನ್ನಾಳಿ ಸುತ್ತಮುತ್ತಲಿನ ಗ್ರಾಮಸ್ಥರು!

    ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಯರಲಬನ್ನಿ ಕೋಡು ಗ್ರಾಮದಲ್ಲಿ ಚಿರತೆಯ ದಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕವುಂಟು ಮಾಡಿದೆ.

    ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ 2 ಚಿರತೆ ಹಾಗೂ ಅವುಗಳ ಮರಿಗಳು ಪ್ರತ್ಯಕ್ಷವಾಗಿದ್ದು, ಕೂಲಂಬಿ-ಹೊನ್ನಾಳಿ ಮಾರ್ಗದಲ್ಲಿ ಸುತ್ತುಮುತ್ತಲಿನ ಭತ್ತದ ಗದ್ದೆಗಳಲ್ಲಿವೆ ಎಂದು ಶಂಕೆ ವ್ಯಕ್ತವಾಗಿದೆ.

    ಕಳೆದು ಎರಡ್ಮೂರು ದಿನಗಳಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಅವುಗಳನ್ನು ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದು, ಗದ್ದೆಗಳಲ್ಲಿ ಭತ್ತದ ಹುಲ್ಲು ಹೊದಿಸಿ ಬೋನುಗಳನ್ನು ಇಟ್ಟಿದ್ದಾರೆ.