Tag: ಹೊಳೆನರಸಿಪುರ

  • ಪೂಜೆಗೆ ತೆರಳಿದ್ದ ವೈದ್ಯ ಹೇಮಾವತಿ ನದಿಯಲ್ಲಿ ಮುಳುಗಿ ಸಾವು

    ಪೂಜೆಗೆ ತೆರಳಿದ್ದ ವೈದ್ಯ ಹೇಮಾವತಿ ನದಿಯಲ್ಲಿ ಮುಳುಗಿ ಸಾವು

    ಹಾಸನ: ಪೂಜೆಗೆ ತೆರಳಿದ್ದ ವೈದ್ಯರೊಬ್ಬರು (Doctor) ಹೇಮಾವತಿ ನದಿಯ (Hemavati River) ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಖೋನಾಪುರದಲ್ಲಿ ನಡೆದಿದೆ.

    ಮೃತರನ್ನು ಡಾ.ಚಂದ್ರಶೇಖರ್ (31) ಎಂದು ಗುರುತಿಸಲಾಗಿದೆ. ಅವರು ಹೊಳೆನರಸಿಪುರದ (Holenarasipur) ಕೆರಗೋಡಿನಲ್ಲಿ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಕರ್ತವ್ಯಕ್ಕೆ ತೆರಳುವ ಮುನ್ನ ಖೋನಾಪುರದ ಐಲ್ಯಾಂಡ್‍ನಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದರು. ಈ ವೇಳೆ ನದಿಗೆ ಸ್ನಾನಕ್ಕೆ ತೆರಳಿದ್ದಾಗ ಈ ಅವಘಡ ನಡೆದಿದೆ. ಇದನ್ನೂ ಓದಿ: ಚೈತ್ರಾ ಗ್ಯಾಂಗ್ ವಂಚನೆ ಪ್ರಕರಣ – ಸಿಸಿಬಿಯಿಂದ ಸ್ಥಳ ಮಹಜರು

    ಹಲವು ವರ್ಷಗಳಿಂದಲೂ ಚಂದ್ರಶೇಖರ್ ಹೇಮಾವತಿ ನದಿಯಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸುತ್ತಿದ್ದರು. ಅದರಂತೆ ಚಂದ್ರಶೇಖರ್ ಶುಕ್ರವಾರ ಸಹ ಪೂಜೆಗೂ ಮುನ್ನ ನದಿಗೆ ಇಳಿದಿದ್ದರು. ಹೇಮಾವತಿ ನದಿ ನೀರು ಸಂಪೂರ್ಣ ಕಡಿಮೆಯಾಗಿದ್ದು, ಆಳ ಅರಿಯದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

    ರಾತ್ರಿ ಆದರೂ ಮನೆಗೆ ವಾಪಸ್ ಆಗದ ಹಿನ್ನೆಲೆ ಪೋಷಕರು ಚಂದ್ರಶೇಖರ್‌ಗೆ ಕರೆ ಮಾಡಿದ್ದಾರೆ. ಫೋನ್ ರಿಸೀವ್ ಮಾಡದೇ ಇದ್ದಾಗ ಗಾಬರಿಗೊಂಡ ಪೋಷಕರು ಅರಕಲಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಗೊರೂರು ಪೊಲೀಸರಿಗೆ ಮಾಹಿತಿ ರವಾನೆಯಾಗಿತ್ತು, ಗಸ್ತಿನಲ್ಲಿದ್ದ ಗೊರೂರು ಪೊಲೀಸರು ಒಂದೇ ಸ್ಥಳದಲ್ಲಿ ಕಾರು ನಿಂತಿದ್ದನ್ನು ಗಮನಿಸಿದ್ದರು. ಈ ವೇಳೆ ಹುಡಕಾಟ ನಡೆಸಿದಾಗ ನದಿಯ ದಡದಲ್ಲಿ ಚಂದ್ರಶೇಖರ್ ಬಟ್ಟೆ ಪತ್ತೆಯಾಗಿತ್ತು. ಬಳಿಕ ನದಿಯಲ್ಲಿ ಚಂದ್ರಶೇಖರ್ ಶವ ತೇಲುತ್ತಿರುವುದು ಪತ್ತೆಯಾಗಿತ್ತು.

    ನಂತರ ಪೊಲೀಸರು ಶವವನ್ನು ಹೊರಗೆ ತೆಗೆದಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವರ್ಗಾವಣೆ ಮಾಡಿದರೂ ಜಾಗ ಖಾಲಿ ಮಾಡದ ಮುಕ್ತ ವಿವಿ ಹಣಕಾಸು ಅಧಿಕಾರಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಡಿದು ಬಂದು ಮದುವೆ ಮಾಡಿಸುವಂತೆ ಕಿರಿಕ್ – ತಂದೆಯಿಂದಲೇ ಮಗನ ಹತ್ಯೆ

    ಕುಡಿದು ಬಂದು ಮದುವೆ ಮಾಡಿಸುವಂತೆ ಕಿರಿಕ್ – ತಂದೆಯಿಂದಲೇ ಮಗನ ಹತ್ಯೆ

    ಹಾಸನ: ಪ್ರತಿನಿತ್ಯ ಕುಡಿದು ಬಂದು ಮದುವೆ ಮಾಡಿಸುವಂತೆ ಗಲಾಟೆ ಮಾಡಿ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಹತ್ಯೆಗೈದ ಪ್ರಕರಣ ಹೊಳೆನರಸೀಪುರದ (Holenarasipur) ಮಾವನೂರಿನಲ್ಲಿ ನಡೆದಿದೆ.

    ಹತ್ಯೆಗೀಡಾದ ವ್ಯಕ್ತಿಯನ್ನು ಉಮೇಶ್ (35) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ನಂಜುಂಡೇಗೌಡ ಎಂದು ಗುರುತಿಸಲಾಗಿದೆ. ಉಮೇಶ್ ಪ್ರತಿನಿತ್ಯ ಕುಡಿದು ಬಂದು ಆಸ್ತಿ ನೀಡುವಂತೆ ಹಾಗೂ ಮದುವೆ ಮಾಡುವಂತೆ ತಂದೆಯೊಂದಿಗೆ ಜಗಳವಾಡುತ್ತಿದ್ದ. ಇದೇ ಕಾರಣಕ್ಕೆ ಆರೋಪಿ ಬ್ಯಾಟರಿಯಿಂದ ಉಮೇಶ್ ತಲೆಗೆ ಬಲವಾಗಿ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಈಗ ಕರ್ನಾಟಕಕ್ಕೂ ಚಂದ್ರನಿಗೂ ನೇರ ಸಂಪರ್ಕ

    ಉಮೇಶ್ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಇದರಿಂದ ಆತ ಕೊಟ್ಟಿಗೆಯಲ್ಲಿ ಬಿದ್ದಿದ್ದಾನೆ. ಬಳಿಕ ಆತನ ಸ್ನೇಹಿತರು ಆಸ್ಪತ್ರೆಗೆ ಸಾಗಿಸಲು ಪ್ರತಯತ್ನಿಸಿದ್ದಾರೆ. ಆದರೆ ಆತ ಮಾರ್ಗ ಮಧ್ಯೆಯೇ ಸಾವಿಗೀಡಾಗಿದ್ದಾನೆ.

    ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆ.26ಕ್ಕೆ ಬೆಂಗಳೂರಿಗೆ ಮೋದಿ – ಇಸ್ರೋ ಕೇಂದ್ರ ಕಚೇರಿಗೆ ಭೇಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]