Tag: ಹೊಸ ಬಟ್ಟೆ

  • ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!

    ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!

    ಮಂಗಳೂರು: ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

    ಮೃತರನ್ನು ಸುಬ್ರಹ್ಮಣ್ಯ ಭಟ್ (84) ಹಾಗೂ ಶಾರದಾ (76) ಎಂದು ಗುರುತಿಸಲಾಗಿದೆ. ಈ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಾದಕರಿಯ ಎಂಬಲ್ಲಿ ನಡೆದಿದೆ.

    ವೃದ್ಧರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ. ಆದರೆ ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಹೊಸ ಬಟ್ಟೆಯನ್ನು ಧರಿಸಿದ್ದಾರೆ. ದಂಪತಿ ಈ ರೀತಿ ಹೊಸ ಬಟ್ಟೆ ಧರಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರವಾಹದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ- ಪಾತ್ರೆಯಲ್ಲಿ ಕುಳಿತು ಮಂಟಪಕ್ಕೆ ತೆರಳಿದ್ರು!

  • ಹುಟ್ಟುಹಬ್ಬಕ್ಕೆ ಡ್ರೆಸ್ ಕೊಡಿಸಿಲ್ಲವೆಂದು ಬಾಲಕಿ ಆತ್ಮಹತ್ಯೆ

    ಹುಟ್ಟುಹಬ್ಬಕ್ಕೆ ಡ್ರೆಸ್ ಕೊಡಿಸಿಲ್ಲವೆಂದು ಬಾಲಕಿ ಆತ್ಮಹತ್ಯೆ

    – ಸಾವಿನ ಹಿಂದೆ ಮೂಡಿದೆ ಅನುಮಾನ

    ಬೆಂಗಳೂರು: ಹುಟ್ಟುಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲಿಲ್ಲವೆಂದು 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಯಲಹಂಕದ ಸಹಕಾರ ನಗರದಲ್ಲಿ ನಡೆದಿದೆ.

    ನಾಳೆ 16 ವರ್ಷದ ಬಾಲಕಿಯ ಹುಟ್ಟುಹಬ್ಬ, ಕಳೆದ ಒಂದು ವಾರದಿಂದಲೇ ಹೊಸ ಬಟ್ಟೆ ಕೊಡಿಸುವಂತೆ ಬಾಲಕಿ ಪೋಷಕರಿಗೆ ಒತ್ತಾಯ ಮಾಡಿದ್ದಳು. ಆದರೆ ಪೋಷಕರು ಆಕೆಯ ಮಾತನ್ನು ಅಷ್ಟು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಇಂದು ಸಹ ಹುಟ್ಟುಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿ ಎಂದು ದುಂಬಾಲು ಬಿದ್ದಿದ್ದಳು. ಆದರೆ ಪೋಷಕರು ಅದ್ಯಾವುದನ್ನೂ ತಲೆಗೆ ಹಾಕಿಕೊಳ್ಳದೆ ಎಂದಿನಂತೆ ಕೆಲಸಕ್ಕೆಂದು ಹೊರಗಡೆ ಹೋಗಿದ್ದರು.

    ಬಟ್ಟೆ ಕೊಡಿಸದ್ದಕ್ಕೆ ಬೇಸರಗೊಂಡ ಬಾಲಕಿ, ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಚಾರ ತಿಳಿದು ವಾಪಸ್ ಬಂದ ಪೋಷಕರು, ಮಗಳ ಈ ನಿರ್ಧಾರದಿಂದ ಶಾಕ್ ಆಗಿದ್ದಾರೆ. ಕೇವಲ ಬಟ್ಟೆ ವಿಚಾರಕ್ಕೆ ಈ ರೀತಿ ಮಾಡಿಕೊಳ್ಳುತ್ತಾಳೆ ಎಂದು ಭಾವಿಸಿರಲಿಲ್ಲವೆಂದು ನೆನದು ಕಣ್ಣೀರು ಹಾಕಿದ್ದಾರೆ.

    ಇದೇ ವೇಳೆ ಮತ್ತೊಂದು ವಿಚಾರ ಕೂಡ ಬೆಳಕಿಗೆ ಬಂದಿದ್ದು, ಕೆಲ ತಿಂಗಳಿಂದ ಬಾಲಕಿ ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು. ಹುಡುಗ ಸಹ ಇಷ್ಟಪಟ್ಟಿದ್ದನಂತೆ. ಈ ವಿಚಾರ ಮನೆಯಲ್ಲಿ ತಿಳಿದಿದ್ದು, ಬಳಿಕ ಅದೇ ಹುಡುಗನ ಜೊತೆ ಮದುವೆ ಮಾಡುವಂತೆ ಪೋಷಕರನ್ನು ಕೇಳಿದ್ದಳಂತೆ. ಆದರೆ ಪೋಷಕರು ಆ ಹುಡುಗ ನಿನಗೆ ಅಣ್ಣನ ವರಸೆ ಆಗಬೇಕು. ಹೀಗಾಗಿ ಮದುವೆ ಸಾಧ್ಯವಿಲ್ಲ ಎಂದು ಹೇಳಿದ್ದರು ಎನ್ನಲಾಗಿದೆ.

    ಈ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಕೊಡುಗೆಹಳ್ಳಿ ಪೊಲೀಸರು, ಪರಿಶೀಲನೆ ನಡೆಸಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

  • ರಂಜಾನ್ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿಲ್ಲ ಎಂದು ಮಹಿಳೆ ಆತ್ಮಹತ್ಯೆ

    ರಂಜಾನ್ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿಲ್ಲ ಎಂದು ಮಹಿಳೆ ಆತ್ಮಹತ್ಯೆ

    ಚಿಕ್ಕಮಗಳೂರು: ರಂಜಾನ್ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿಲ್ಲ ಎಂದು ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮುದುಗುಣಿ ಗ್ರಾಮದಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಅಸ್ಸಾಂ ಮೂಲದ 22 ವರ್ಷದ ಹಲ್ಕಿಮಾ ಎಂದು ಗುರುತಿಸಲಾಗಿದೆ. ಮೃತ ಹಲ್ಕಿಮಾಳಿಗೆ ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದು, ನಾಲ್ಕು ತಿಂಗಳ ಮಗುವಿದೆ. ಆ ಮಗುವನ್ನ ಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ನವೀನ್ ಲಾಯ್ಡ್ ಮಿಸ್ಕತ್ ಎಂಬುವರ ಕಾಫಿ ಎಸ್ಟೇಟ್ ಕೆಲಸಕ್ಕೆ ಅಸ್ಸಾಂ ಮೂಲದ ಕಾರ್ಮಿಕರು ಬಂದಿದ್ದರು. ಹಬ್ಬದ ಹಿನ್ನೆಲೆ ತನ್ನ ಪತಿಗೆ ಹೊಸ ಬಟ್ಟೆ ಬೇಕೆಂದು ಹಲ್ಕಿಮಾ ಕೇಳಿದ್ದು, ಆಗ ಪತಿ ಇಷ್ಟು ದಿನ ಲಾಕ್‍ಡೌನ್ ಆಗಿ ಈಗ ಕೆಲಸ ಆರಂಭವಾಗಿದೆ. ಮುಂದಿನ ದಿನದಲ್ಲಿ ಹೊಸ ಬಟ್ಟೆ ಕೊಡಿಸುವುದಾಗಿ ಹೇಳಿದ್ದಾನೆ.

    ಪತಿಯ ಮಾತಿನಿಂದ ಮನನೊಂದ ಹಲ್ಕಿಮಾ ತೋಟಕ್ಕೆ ಹೋಗಿ ತನ್ನ ವೇಲ್‍ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಬಾಳೆಹೊನ್ನೂರು ಪಿಎಸ್‍ಐ ನೀತು ಗುಡೆ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಬಿಎಸ್‍ವೈ ನಿವಾಸದಲ್ಲಿ ಪೂಜೆ ಪುನಸ್ಕಾರ – ಸಿಎಂ ಆಗುವ ಬಿಎಸ್‍ವೈ ಗೆ ಮಗನಿಂದ ಗಿಫ್ಟ್

    ಬಿಎಸ್‍ವೈ ನಿವಾಸದಲ್ಲಿ ಪೂಜೆ ಪುನಸ್ಕಾರ – ಸಿಎಂ ಆಗುವ ಬಿಎಸ್‍ವೈ ಗೆ ಮಗನಿಂದ ಗಿಫ್ಟ್

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಇಂದು ಸುಮಾರು ಬೆಳಗ್ಗೆ 9 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದು, ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡಿದ್ದಾರೆ.

    ಯಡಿಯೂರಪ್ಪ ನಿವಾಸದಲ್ಲಿ ಹಲವು ಆತಂಕಗಳ ನಡುವೆಯೂ ಸಂಭ್ರಮ ಮನೆ ಮಾಡಿತ್ತು. ಇಂದು ಬೆಳ್ಳಂಬೆಳಗ್ಗೆ ಬಿಎಸ್‍ವೈ ನಿವಾಸಕ್ಕೆ ಬೆಂಬಲಿಗರು, ಕುಟುಂಬದವರಿಂದ ತುಂಬಿ ತುಳುಕಿದೆ. ಅಷ್ಟೇ ಅಲ್ಲದೇ ಸ್ವಾಮೀಜಿಗಳೂ ಕೂಡ ಧವಳಗಿರಿಗೆ ಬಂದು ನಿಮಗೇನು ಆಗಲ್ಲ. ನೀವೇ ಸಿಎಂ ಎಂದು ಆಶೀರ್ವಾದಿಸಿ ಬಿಎಸ್‍ವೈಗೆ ಧೈರ್ಯ ತುಂಬಿದ್ದಾರೆ.

    ಅಷ್ಟೇ ಅಲ್ಲದೇ ಬಿಎಸ್‍ವೈ ನಿವಾಸದಲ್ಲಿ ವಿಶೇಷ ಪೂಜೆಗಳು ನಡೆದಿವೆ. ಬುಧವಾರ ಕೂಡ ಮಲ್ಲೇಶ್ವರಂ ನಲ್ಲಿರು ಬಿಜೆಪಿಯ ಕಚೇರಿಯಲ್ಲೂ ಕೂಡ ಪೂಜೆ-ಹೋಮ ನೆರವೇರಿದೆ. ಈ ವೇಳೆ ಯಡಿಯೂರಪ್ಪ ಮಗ ವಿಜಯೇಂದ್ರ ಅಪ್ಪನಿಗಾಗಿ ಹೊಸ ಡ್ರೆಸ್ ನೀಡಿದ್ದಾರೆ. ಮಲ್ಲೇಶ್ವರಂನ ವಿಜಯೇಂದ್ರ ತಮ್ಮ ಮನೆಯಿಂದ ಬಿಳಿ ಬಣ್ಣದ ಸೂಟ್ ತಂದು ಕೊಟ್ಟಿದ್ದಾರೆ.

    ಸದ್ಯಕ್ಕೆ ಯಡಿಯೂರಪ್ಪ ಸಂಜಯ್ ನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ರಾಜಭವನಕ್ಕೆ ತೆರಳಿ ಪ್ರಮಾಣವಚನ ಸ್ವೀಕರಿಸಿದ್ದಾರೆ.