Tag: ಹೊಸ ರೂಲ್ಸ್

  • ಇಂದಿರಾನಗರ ಪಾರ್ಕ್‌ನಲ್ಲಿ ಹೊಸ ರೂಲ್ಸ್ – ಎದುರು ಬದುರು ವಾಕಿಂಗ್ ನಿಷೇಧ

    ಇಂದಿರಾನಗರ ಪಾರ್ಕ್‌ನಲ್ಲಿ ಹೊಸ ರೂಲ್ಸ್ – ಎದುರು ಬದುರು ವಾಕಿಂಗ್ ನಿಷೇಧ

    ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಣ್ಮಕ್ಕಳನ್ನು ಚೂಡಾಯಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಇಂದಿರಾನಗರ ಪಾರ್ಕ್‌ನಲ್ಲಿ (Indiranagar Park) ಮಹಿಳೆಯರ ಹಾಗೂ ಹಿರಿಯರ ಸುರಕ್ಷತೆಗಾಗಿ ಹೊಸ ರೂಲ್ಸ್‌ಗಳನ್ನು ಜಾರಿ ಮಾಡಿದೆ.

    ಟ್ರಾಫಿಕ್ ಜಂಜಾಟ, ರಣ ಬಿಸಿಲಿಗೆ ಬೆಂಗಳೂರಿಗರು ರೋಸಿ ಹೋಗಿದ್ದಾರೆ. ಜನರಿಗೆ ಆರೋಗ್ಯ ಸಮಸ್ಯೆ ಕಾಡ್ತಿದೆ. ಹೊಟ್ಟೆ ಬೊಜ್ಜು ಕರಗಿಸಲು ಜನರು ಬೆಳಗ್ಗೆ ಮತ್ತು ಸಂಜೆ ಪಾರ್ಕ್‌ನಲ್ಲಿ ಜಾಗಿಂಗ್ ಮಾಡೋದು ಸಾಮಾನ್ಯ. ಆದರೆ ಇಂದಿರಾನಗರದ ಬಿಬಿಎಂಪಿಯ ಪಾರ್ಕ್‌ನಲ್ಲಿ ಜಾಗಿಂಗ್ ನಿಷೇಧ ಹೇರಲಾಗಿದ್ದು, ವಾಕಿಂಗ್‌ಗೂ ರೂಲ್ಸ್ ಮಾಡಲಾಗಿದೆ. ಪಾರ್ಕ್‌ನಲ್ಲಿ `ಜಾಗಿಂಗ್, ಆಟ ಆಡುವುದು, ಪಾಶ್ಚಿಮಾತ್ಯ ಉಡುಪು, ಎದುರು ಬದುರು ಜಾಗಿಂಗ್ ನಿಷೇಧ’ ಎಂದು ಬೋರ್ಡ್ ಹಾಕಲಾಗಿದೆ. ಇದನ್ನೂ ಓದಿ: ಅಭಿಮಾನಿಗಳ ಪ್ರೀತಿ ನೋಡಿದ್ರೆ ಅಪ್ಪು ಚಿಕ್ಕಪ್ಪ ಇಲ್ಲೇ ಇದ್ದಾರೆ ಅನಿಸುತ್ತೆ: ಯುವ

    ಇಂದಿರಾನಗರ ಪಾರ್ಕ್ನಲ್ಲಿ ಹೆಣ್ಣುಮಕ್ಕಳು ವಾಕ್ ಮಾಡುವಾಗ ಕೆಲ ಪುರುಷರು ಕೆಟ್ಟ ಉದ್ದೇಶದಿಂದಲೇ ವಿರುದ್ಧ ದಿಕ್ಕಿನಲ್ಲಿ ವಾಕ್ ಮಾಡುತ್ತಿದ್ದರು. ಹೆಣ್ಣುಮಕ್ಕಳು ಮುಖಕ್ಕೆ ನೇರವಾಗಿ ವಾಕಿಂಗ್ ಮಾಡುತ್ತಿದ್ದರು. ಇದರಿಂದ ಹೆಣ್ಣಮಕ್ಕಳಿಗೆ ಅಭದ್ರತೆ ಕಾಡುತ್ತಿತ್ತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಕೂಡ ಕೆಲವರು ಅಳಲು ತೋಡಿಕೊಂಡಿದ್ದರು. ಹಾಗಾಗಿ ಎದುರು ಬದುರಾಗಿ ವಾಕಿಂಗ್‌ಗೆ ನಿಷೇಧ ಹೇರಲಾಗಿದೆ. ಪಾರ್ಕ್‌ನಲ್ಲಿ ಕ್ಲಾಕ್ ವೈಸ್ ಡೈರೆಕ್ಷನ್‌ನಲ್ಲಿ ಮಾತ್ರ ವಾಕ್ ಮಾಡುವಂತೆ ನಿಯಮ ಮಾಡಲಾಗಿದೆ. ಜೊತೆಗೆ ವೆಸ್ಟರ್ನ್ ಡ್ರೆಸ್ ಸಹ ಹಾಕದಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಜಾತಿನಿಂದನೆ, ಲೈಂಗಿಕ ಕಿರುಕುಳ ಆರೋಪ – ಗ್ರಾಮ ಪಂಚಾಯತಿ ಸದಸ್ಯ ಅರೆಸ್ಟ್

    ಈ ಪಾರ್ಕ್‌ಗೆ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದರು. ಹಿರಿಯರು ವಾಕ್ ಮಾಡುವಾಗ, ಬೇರೆಯವರು ಜಾಗಿಂಗ್ ಮಾಡಿದರೆ ಸಮಸ್ಯೆಯಾಗುತ್ತದೆ ಎನ್ನುವ ಕಾರಣಕ್ಕೆ ಜಾಗಿಂಗ್‌ಗೆ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ಆಸ್ತಿ ಬರೆಸಿ ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿದ್ದಾರೆ ಮಕ್ಕಳು!

    ಪಾರ್ಕ್‌ನಲ್ಲಿ ಬಂದು ಕಾರ್ಡ್ ಆಡ್ತಾರೆ ಎನ್ನುವ ಕಾರಣಕ್ಕೆ ಪಾರ್ಕಿಂಗ್‌ನಲ್ಲಿ ಗೇಮಿಂಗ್ ಆಕ್ಟಿವಿಟೀಸ್‌ಗೆ ನಿಷೇಧ ಹೇರಲಾಗಿದೆ. ಸದ್ಯ ಬಿಬಿಎಂಪಿ ಹಾಗೂ ಇಂದಿರಾನಗರದ ಸಾಮಾಜಿಕ ಸೌಲಭ್ಯಗಳ ಸಂಘ ಮಾತುಕತೆ ಮಾಡಿ ಈ ರೀತಿಯ ನಿಯಮ ಮಾಡಿದೆ. ಹೊಸ ರೂಲ್ಸ್‌ನಿಂದ ಪಾರ್ಕ್‌ನಲ್ಲಿ ನೆಮ್ಮದಿಯಾಗಿ ವಾಕ್ ಮಾಡಬಹುದು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಉತ್ತರ ಪ್ರದೇಶದ ಜೈಲು ನಿಯಮಗಳಲ್ಲಿ ಬದಲಾವಣೆ – ಏನಿದೆ ಹೊಸ ರೂಲ್ಸ್?

    ಉತ್ತರ ಪ್ರದೇಶದ ಜೈಲು ನಿಯಮಗಳಲ್ಲಿ ಬದಲಾವಣೆ – ಏನಿದೆ ಹೊಸ ರೂಲ್ಸ್?

    ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ತನ್ನ ಜೈಲು ನಿಯಮಗಳಿಗೆ ತಿದ್ದುಪಡಿ ತಂದಿದ್ದು, 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೀವಾವಧಿ ಕೈದಿಗಳ ಅವಧಿಪೂರ್ವ ಬಿಡುಗಡೆಯನ್ನು ಪರಿಗಣಿಸಲು ನಿರ್ಧರಿಸಿದೆ. ಹೊಸ ನೀತಿಯ ಪ್ರಕಾರ, ಕೊಲೆಯಂತಹ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಯನ್ನು 16 ವರ್ಷಗಳ ಜೈಲು ಶಿಕ್ಷೆಯು ವಿನಾಯಿತಿ ಇಲ್ಲದೇ ಅಥವಾ 20 ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಬಿಡುಗಡೆ ಮಾಡಲು ಅನುಮತಿ ನೀಡುತ್ತದೆ.

    ರಾಜ್ಯ ಸರ್ಕಾರದ ಹಿಂದಿನ ಜೈಲು ನಿಯಮದ ಪ್ರಕಾರ, ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಿರುವ ಕೈದಿಗಳನ್ನು ಅವಧಿಪೂರ್ವ ಬಿಡುಗಡೆಗೆ ಪರಿಗಣಿಸುವ ಮೊದಲು ಅವರು 60 ವರ್ಷ ವಯಸ್ಸನ್ನು ತಲುಪಬೇಕು ಎಂದು ಶರತ್ತು ವಿಧಿಸಿತ್ತು, ಇದನ್ನು ಈಗ ಸರ್ಕಾರ ಬದಲಾಯಿಸಿದೆ. ಇದನ್ನೂ ಓದಿ: ಪ್ರವಾದಿಗೆ ಅವಹೇಳನಗೈದ ನೂಪುರ್ ಶರ್ಮಾರನ್ನು ಗಲ್ಲಿಗೇರಿಸಿ: ಎಐಎಂಐಎಂ

    ಪ್ರಸ್ತುತ, ಯುಪಿ ಜೈಲುಗಳಲ್ಲಿ ಸುಮಾರು 1.14 ಲಕ್ಷ ಕೈದಿಗಳಿದ್ದು, ಎಲ್ಲ ಜೈಲುಗಳ ಸಾಮರ್ಥ್ಯ ಒಟ್ಟು 70,000 ಆಗಿದೆ. ಸುಮಾರು 30,000 ಶಿಕ್ಷೆಗೊಳಗಾದ ಕೈದಿಗಳಿದ್ದು, ಅವರಲ್ಲಿ ಸುಮಾರು 12,000 ಜನರು ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಿದ್ದಾರೆ. ಹೊಸ ನೀತಿಯು ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಿರುವ ಹೆಚ್ಚಿನ ಸಂಖ್ಯೆಯ ಅಪರಾಧಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಇದು ರಾಜ್ಯಾದ್ಯಂತ ಜನನಿಬಿಡ ಜೈಲುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಯುಪಿ ಡೈರೆಕ್ಟರ್ ಜನರಲ್ (ಕಾರಾಗೃಹ) ಆನಂದ್ ಕುಮಾರ್ ಹೇಳಿದ್ದಾರೆ.

    KILLING CRIME

    ಹಿಂದಿನ ನೀತಿಗಳಂತೆ, ಹೊಸ ನೀತಿಯಲ್ಲಿಯೂ ಕೊಲೆಗಾಗಿ ಅಪಹರಣ, ವ್ಯಕ್ತಿಯನ್ನು ಘೋರವಾದ ನೋವು ಮತ್ತು ಗುಲಾಮಗಿರಿಗೆ ಒಳಪಡಿಸುವ ಸಲುವಾಗಿ ಅಪಹರಣ, ಅಪ್ರಾಪ್ತ ಮತ್ತು ವಯಸ್ಕ ಮಹಿಳೆಯರ ಮಾರಾಟ ಮತ್ತು ಖರೀದಿಯಂತಹ ಅಪರಾಧಗಳಿಗಾಗಿ ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ಬಿಡುಗಡೆಯನ್ನು ಪರಿಗಣಿಸಲು ಸರ್ಕಾರ ನಿರ್ಧರಿಸಿದೆ.

    jail

    ವೇಶ್ಯಾವಾಟಿಕೆ, ಅತ್ಯಾಚಾರ ಮತ್ತು ಇತರ ಅಪರಾಧಿಗಳು 20 ವರ್ಷಗಳವರೆಗೆ ವಿನಾಯಿತಿ ಇಲ್ಲದೆ ಮತ್ತು 25 ವರ್ಷಗಳವರೆಗೆ ಉಪಶಮನದೊಂದಿಗೆ ಜೈಲು ಶಿಕ್ಷೆಯನ್ನು ಅನುಭವಿಸಿದ ನಂತರ ಮಾತ್ರ ಬಿಡುಗಡೆ ಮಾಡಲು ತೀರ್ಮಾನಿಸಿದೆ. ಸಾಮೂಹಿಕ ಹತ್ಯೆಯ ಆರೋಪಕ್ಕಾಗಿ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಗಳು 25 ವರ್ಷಗಳವರೆಗೆ ವಿನಾಯಿತಿ ಇಲ್ಲದೆ ಮತ್ತು 30 ವರ್ಷಗಳವರೆಗೆ ಉಪಶಮನದೊಂದಿಗೆ ಜೈಲು ಶಿಕ್ಷೆಯನ್ನು ಅನುಭವಿಸಿದ ನಂತರ ಬಿಡುಗಡೆಯಾಗಲಿದ್ದಾರೆ. ಇದನ್ನೂ ಓದಿ: ಕಲ್ಲು ತೂರಿದವರಿಗೆ ಬುಲ್ಡೋಜರ್‌ ಶಾಕ್‌ ಕೊಟ್ಟ ಯೋಗಿ – ಅಕ್ರಮ ಕಟ್ಟಡಗಳು ಧ್ವಂಸ

    ಕೈದಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟು ಮಾಡುವ ಸಾಧ್ಯತೆಗಳು ಕಂಡು ಬಂದರೆ ಅಥವಾ ಭಯೋತ್ಪಾದನೆ, ದೇಶದ್ರೋಹದ ಆರೋಪಗಳಿದ್ದರೇ ಕೈದಿಗಳ ಬಿಡುಗಡೆಯನ್ನು ರದ್ದುಗೊಳಿಸಬಹುದು ಎಂದು ರಾಜ್ಯ ಸರ್ಕಾರ ಶರತ್ತು ಹಾಕಿದೆ.

  • ಉಡುಪಿಯಲ್ಲಿ ಎಣ್ಣೆ ಪ್ರಿಯರಿಗೆ ಶಾಕ್ – ಹೊಸ ರೂಲ್ಸ್ ಜಾರಿ

    ಉಡುಪಿಯಲ್ಲಿ ಎಣ್ಣೆ ಪ್ರಿಯರಿಗೆ ಶಾಕ್ – ಹೊಸ ರೂಲ್ಸ್ ಜಾರಿ

    ಉಡುಪಿ: ಗ್ರೀನ್ ಝೋನ್‍ನಲ್ಲಿ ಉಡುಪಿ ಜಿಲ್ಲೆ ಇದ್ದರೂ ಮದ್ಯದಂಗಡಿಗೆ ಬ್ರೇಕ್ ಹಾಕಲಾಗಿದೆ. ಉಡುಪಿಯಲ್ಲಿ ಮದ್ಯಕ್ಕೂ ಮಧ್ಯಾಹ್ನದ ಲಗಾಮು ಹಾಕಲಾಗಿದೆ.

    ನಾಳೆಯಿಂದ ರಾಜ್ಯಾದ್ಯಂತ ಮದ್ಯದಂಗಡಿ ಓಪನ್ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ನಿಯಮದ ಪ್ರಕಾರ ಬೆಳಗ್ಗೆ 9 ರಿಂದ ಸಂಜೆ ಏಳರವರೆಗೆ ಎಣ್ಣೆ ಶಾಪ್‍ಗಳು ತೆರೆದಿರಬೇಕು. ಆದರೆ ಉಡುಪಿಯಲ್ಲಿ ಮಧ್ಯಾಹ್ನ ಒಂದಕ್ಕೆ ಸೀಮಿತ ಮಾಡಲಾಗಿದೆ. ಈ ಬಗ್ಗೆ ಉಡುಪಿ ಶಾಸಕ ರಘುಪತಿ ಭಟ್ ಸುಳಿವು ನೀಡಿದ್ದಾರೆ.

    ನಮ್ಮ ಜಿಲ್ಲೆಯಲ್ಲಿ ಮದ್ಯವನ್ನು ಸಂಜೆಯ ತನಕ ಮಾರಾಟ ಮಾಡುವುದಿಲ್ಲ. ವೈನ್ ಶಾಪ್ ಎಂಎಸ್‍ಐಎಲ್‍ಗಳನ್ನು ಮಧ್ಯಾಹ್ನದವರೆಗೆ ಮಾತ್ರ ತೆರೆಯುತ್ತೇವೆ. ನಮ್ಮ ಜಿಲ್ಲೆಗೆ ವೈನ್ ಶಾಪ್ ಮದ್ಯದಂಗಡಿ ಮುಖ್ಯ ಅಲ್ಲ. ಜಿಲ್ಲೆಯ ಜನರ ಆರೋಗ್ಯ ನಮಗೆ ಮುಖ್ಯ. ಬ್ಯೂಟಿ ಪಾರ್ಲರ್ ಮತ್ತು ಸಲೂನ್ ಗಳನ್ನು ಒಂದು ವಾರ ಓಪನ್ ಮಾಡುವುದಿಲ್ಲ. ಸಲೂನ್ ಪಾರ್ಲರ್ ತೆರೆಯಲು ಕೇಂದ್ರ ಸರ್ಕಾರದ ಮಾರ್ಗದರ್ಶಿ ಸೂತ್ರಗಳಿವೆ ಎಂದು ತಿಳಿಸಿದರು.

    ಕೇಂದ್ರದ ನಿರ್ದೇಶನ ಇದ್ದರೂ, ಜನರ ಆರೋಗ್ಯ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಲಾಕ್‍ಡೌನ್ ಮುಗಿಯುವ ತನಕ ಜಿಲ್ಲೆಯಲ್ಲಿ ಯಾವುದೇ ಡೆಂಟಲ್ ಕ್ಲಿನಿಕ್ ತೆರೆಯಲ್ಲ. ರಾಜ್ಯ ಸರ್ಕಾರ ಹೇಳಿದರೂ ನಮ್ಮ ಜಿಲ್ಲೆಯಲ್ಲಿ ಒಂದು ಗಂಟೆಗೆ ಮದ್ಯದಂಗಡಿ ಬಂದ್ ಆಗುತ್ತದೆ ಎಂದು ರಘುಪತಿ ಭಟ್ ಹೇಳಿದರು.

    ಅಗತ್ಯ ವಸ್ತುಗಳಿಗೆ ಒಂದು ಗಂಟೆಯೊಳಗೆ ವಿನಾಯಿತಿ ಕೊಟ್ಟು ಮದ್ಯದಂಗಡಿಯನ್ನು ಸಂಜೆಯವರೆಗೆ ತೆರೆಯುವುದು ಸರಿಯಲ್ಲ ಎಂಬ ಚರ್ಚೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಜನ ಪ್ರತಿನಿಧಿ ಮತ್ತು ಅಧಿಕಾರಿಗಳ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.