Tag: ಹೋಮ್ ಕ್ವಾರೆಂಟೈನ್

  • ಕ್ವಾರಂಟೈನ್ ಟೈಂನಲ್ಲಿ ‘ಪಕೋಡಾ’ ಹುಡುಕಿದ ಅಗ್ನಿಸಾಕ್ಷಿ ತಂಡ

    ಕ್ವಾರಂಟೈನ್ ಟೈಂನಲ್ಲಿ ‘ಪಕೋಡಾ’ ಹುಡುಕಿದ ಅಗ್ನಿಸಾಕ್ಷಿ ತಂಡ

    ಬೆಂಗಳೂರು: ಬಾಲಿವುಡ್ ಬಿಗ್‍ಬಿ ಅಮಿತಾಬ್ ಬಚ್ಚನ್ ನೇತೃತ್ವದಲ್ಲಿ ಬಹುಭಾಷಾ ನಟರ ತಂಡ ಈ ಹಿಂದೆ ಮನೆಯಲ್ಲೇ ಇದ್ದುಕೊಂಡು ಶಾರ್ಟ್ ಫಿಲ್ಮ್ ಮಾಡುವ ಮೂಲಕ ಸಾಮಾಜಿಕ ಅಂತರದ ಮಹತ್ವವನ್ನು ಸಾರಿತ್ತು. ಈ ಚಿತ್ರ ಇತರರಿಗೆ ಪ್ರೇರಣೆಯಾಗಿತ್ತು ಸಹ. ಅದೇ ರೀತಿ ಇದೀಗ ಅಗ್ನಿಸಾಕ್ಷಿ ಧಾರಾವಾಹಿ ತಂಡ ಸಹ ಇಂತಹದ್ದೇ ಪ್ರಯತ್ನವನ್ನು ಮಾಡಿದ್ದು, ಫನ್ನಿಯಾಗಿರುವ ಕಥೆಯನ್ನಿಟ್ಟುಕೊಂಡು ಜನತೆಯನ್ನು ನಗಿಸಿದ್ದಾರೆ.

    ಬಿಗ್‍ಬಿ ನೇತೃತ್ವದಲ್ಲಿ ಮಾಡಿದ ಶಾರ್ಟ್ ಫಿಲ್ಮ್‍ನಲ್ಲಿ ಕನ್ನಡಕ ಹುಡುಕುವ ಕಾನ್ಸೆಪ್ಟ್ ಇತ್ತು. ಆದರೆ ಅಗ್ನಿಸಾಕ್ಷಿ ತಂಡದ ಕಾನ್ಸೆಪ್ಟ್ ಕೇಳಿದರೆ ನಿಮ್ಮ ಬಾಯಲ್ಲಿ ಖಂಡಿತ ನೀರು ಬರುತ್ತದೆ. ಅದೇನಪ್ಪಾ ಅಂತಾ ವಿಷಯ ಅಂತೀರಾ, ಫುಲ್ ಹಾಟ್ ಆಗಿ ನಗಿಸಲು ಯತ್ನಿಸಿದ್ದಾರೆ ಕಣ್ರಿ…..ಪಕೋಡಾ ಕಾನ್ಸೆಪ್ಟ್ ಇಟ್ಟುಕೊಂಡು ಅಗ್ನಿಸಾಕ್ಷಿ ಧಾರಾವಾಹಿ ತಂಡ ಒಂದೊಳ್ಳೆ ಪ್ರಯತ್ನ ಮಾಡಿದ್ದು, ಇನ್ನೂ ವಿಶೇಷವೆಂದರೆ ರಾಜ್ಯದ ವಿವಿಧ ಭಾಗಗಳ ಭಾಷೆಗಳ ಶೈಲಿಯನ್ನು ಬಳಸಿದ್ದಾರೆ.

    ಉತ್ತರ ಕರ್ನಾಟಕ, ಕರಾವಳಿ, ತುಳು ಹೀಗೆ ರಾಜ್ಯದ ವಿವಿಧ ಶೈಲಿಯ ಭಾಷೆಗಳನ್ನು ಬಳಿಸಿದ್ದಾರೆ. ಈ ಮೂಲಕ ಎಲ್ಲ ಭಾಷೆಯ ಜನರಿಗೆ ಹತ್ತಿರವಾಗಿದ್ದಾರೆ. ಮೊದಲು ರಾಜೇಶ್ ಧ್ರುವ ಅವರಿಗೆ ಪಕೋಡಾ ಕುರಿತು ನೆನಪಾಗುತ್ತದೆ. ನಂತರ ವಿಜಯ್ ಸೂರ್ಯ ಬಳಿ ಪಕೋಡಾ ಕುರಿತು ಕೇಳುತ್ತಾರೆ. ಬಳಿಕ ಸುಕೃತಾ, ಐಶ್ವರ್ಯ ನಂತರ ವೈಷ್ಣವಿ ಹಾಗೂ ಇಷಿತಾ ವರ್ಷ ಬಳಿ ಪಕೋಡಾ ಪ್ರಪೋಸಲ್ ಹೋಗುತ್ತದೆ. ಹೀಗೆ ಕೊನೆಗೆ ಮುಖ್ಯಮಂತ್ರಿ ಚಂದ್ರು ಅವರ ಬಳಿ ಪಕೋಡಾ ಕುರಿತು ಹೇಳಲು ರಾಜೇಶ್ ಮುಖ್ಯಮಂತ್ರಿ ಚಂದ್ರು ಬಳಿ ಹೋಗಿರುತ್ತಾರೆ. ಆಗ ಮುಖ್ಯಮಂತ್ರಿ ಚಂದ್ರು ಅವರು ಆಗಲೇ ಪಕೋಡಾ ಸವಿಯುತ್ತಿರುತ್ತಾರೆ.

    ಮುಖ್ಯಮಂತ್ರಿ ಚಂದ್ರು ಅವರು ಈ ವೇಳೆ ಮಾತನಾಡಿ, ತಿನ್ನೋದಕ್ಕೆ ಹುಡುಕುತ್ತಿದ್ದಿರಾ, ನನಗೀಗಾಲೇ ಸಿಕ್ಕಿಬಿಟ್ಟಿದೆ ಪಕೋಡಾ. ಮನೆಯಲ್ಲೇ ಸಿಗುತ್ತೆ ಅಲ್ಲಿ ಇಲ್ಲಿ ಹುಡುಕಾಡಿಕೊಂಡು ತಿನ್ನಬೇಡಿ, ಅಕಸ್ಮಾತ್ ತಿಂದರೆ ಹೊಗೆ ಹಾಕಿಸಿಕೊಂಡು ಬಿಡುತ್ತೀರಾ ಎಂದು ಎಚ್ಚರಿಸುತ್ತಾರೆ. ಅಲ್ಲದೆ ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ ಬೇರೆಯವರಿಗೂ ಅಪಾಯ ತಂದಿಡಬೇಡಿ ಎಂದು ಕರೆ ನೀಡಿದ್ದಾರೆ. ಅಂದಹಾಗೆ ಒಟ್ಟು 12 ಜನ ಈ ಚಿತ್ರದಲ್ಲಿ ನಟಿಸಿದ್ದು, ತುಂಬಾ ಚೆನ್ನಾಗಿ ಮೂಡಿ ಬಂದಿದೆ.

    ಶಾರ್ಟ್ ಫಿಲ್ಮ್ ಕುರಿತು ನಟ ರಾಜೇಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಹಿಂದಿ ಶಾರ್ಟ್ ಮೂವಿ ನೋಡಿ ನಾವೂ ಯಾಕೆ ಹೀಗೆ ಮಾಡಬಾರದು ಎನಿಸಿತು. ತಕ್ಷಣವೇ ನಮ್ಮದೇ ಅಗ್ನಿಸಾಕ್ಷಿ ಗ್ರೂಪ್‍ನಲ್ಲಿ ಚರ್ಚಿಸಿದೆವು. ಎಲ್ಲರೂ ಒಪ್ಪಿಕೊಂಡರು, ಒಂದು ದಿನದಲ್ಲಿ ಸ್ಕ್ರಿಪ್ಟ್ ಬರೆದೆ, ಚಿತ್ರ ಕಾಮಿಡಿಯಾಗಿದ್ದರೆ ಹೆಚ್ಚು ಜನಕ್ಕೆ ರೀಚ್ ಆಗುತ್ತೆ ಎಂಬ ಉದ್ದೇಶದಿಂದ ಪಕೋಡಾ ಕಾನ್ಸೆಪ್ಟ್ ಇಟ್ಟುಕೊಂಡು ಈ ಸಿನಿಮಾ ಮಾಡಿದೆವು. ಅಲ್ಲದೆ ಮುಂಚೆಯೇ ಪ್ರಿಪೇರ್ ಆಗಿದ್ದರಿಂದ ಎಲ್ಲರೂ ತಮ್ಮ ವಿಡಿಯೋವನ್ನು ನನಗೆ ಕಳುಹಿಸಿದರು. ನಂತರ ಅದನ್ನು ನಾನೇ ಎಡಿಟ್ ಮಾಡಿ, ಫೈನಲ್ ಟಚ್ ನೀಡಿದೆ. ಔಟ್‍ಪುಟ್ ನೋಡಿದಾಗ ಎಲ್ಲರಿಗೂ ತುಂಬಾ ಖುಷಿಯಾಯಿತು ಎಂದಿದ್ದಾರೆ.

     

    View this post on Instagram

     

    Concept Editing by – extremely talented @rajesh.dhruva1

    A post shared by Vaishnavi (@vaishnavi.r.b_) on

  • ಕೋಲಾರ ಸೇಫ್: ಸೋಂಕಿತರ ಜೊತೆ ಸಂಪರ್ಕದಲ್ಲಿದ್ದ 18 ಜನರ ವರದಿ ನೆಗೆಟಿವ್

    ಕೋಲಾರ ಸೇಫ್: ಸೋಂಕಿತರ ಜೊತೆ ಸಂಪರ್ಕದಲ್ಲಿದ್ದ 18 ಜನರ ವರದಿ ನೆಗೆಟಿವ್

    ಕೋಲಾರ: ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ 18 ಜನರ ವರದಿ ನೆಗೆಟಿವ್ ಬಂದಿದ್ದು, ಕೋಲಾರ ಜನತೆ ಹಾಗೂ ಜಿಲ್ಲಾಡಳಿತ ಕೋವಿಡ್-19 ಆತಂಕದಿಂದ ಕೊಂಚ ನಿರಾಳವಾಗಿದೆ.

    ಜಿಲ್ಲೆಯ ಎರಡು ಕುಟುಂಬಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲ್ ನರಸಾಪುರದ ಸೋಂಕಿತ ವ್ಯಕ್ತಿ ಸಂಪರ್ಕ ಹೊಂದಿದ್ದ ಪರಿಣಾಮ ಜಿಲ್ಲೆಯ ಸುಮಾರು 21 ಜನರನ್ನು ಹೋಮ್ ಕ್ವಾರಂಟೇನ್ ಮಾಡಲಾಗಿತ್ತು. ಅಲ್ಲದೆ 21 ಜನರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 18 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ ಮೂವರ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ. ಸಧ್ಯಕ್ಕೆ ಕೊರೊನಾ ಆತಂಕದಿಂದ ಕೊಂಚ ನಿರಾಳವಾಗಿದೆ.

    ಕೋಲಾರ ಗಡಿಭಾಗವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೈಲು ನರಸಾಪುರ ಗ್ರಾಮ ಪಂಚಾಯಿತಿ ಸದಸ್ಯ ಕೊರೊನಾ ಸೋಂಕಿತ ವ್ಯಕ್ತಿ, ಕೋಲಾರ ತಾಲೂಕಿನ ನರಸಾಪುರ ಗ್ರಾಮದ ಎರಡು ಕುಟುಂಬಗಳೊಂದಿಗೆ ಸಂಪರ್ಕ ಹೊಂದಿದ್ದ. ಹೀಗಾಗಿ ನರಸಾಪುರ ಗ್ರಾಮದ ಸುಮಾರು 21 ಜನರನ್ನ ಹೋಮ್ ಕ್ವಾರಂಟೇನ್ ಮಾಡಲಾಗಿತ್ತು. ಈ ಮೂಲಕ ನರಸಾಪುರ, ವೇಮಗಲ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಇದೀಗ 18 ಜನರ ವರದಿ ನೆಗೆಟಿವ್ ಬಂದಿರುವ ಹಿನ್ನೆಲೆ ನರಸಾಪುರ ಗ್ರಾಮದ ಜನತೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸಧ್ಯಕ್ಕೆ ನಿರಾಳವಾಗಿರುವ ಜಿಲ್ಲಾಡಳಿತ ಮೂವರ ವರದಿಗಾಗಿ ಕಾದು ಕುಳಿತಿದೆ.

  • ಬಿಕಿನಿ ತೊಟ್ಟು ಕಪ್ಪು ಕುದುರೆ ಏರಿ ಹೊರಟ್ಟಿದೆಲ್ಲಿಗೆ ಸನ್ನಿ

    ಬಿಕಿನಿ ತೊಟ್ಟು ಕಪ್ಪು ಕುದುರೆ ಏರಿ ಹೊರಟ್ಟಿದೆಲ್ಲಿಗೆ ಸನ್ನಿ

    ನವದೆಹಲಿ: ಹೋಮ್ ಕ್ವಾರೆಂಟೈನ್ ನಡುವೆ ಮಾದಕ ಚಲುವೆ ಸನ್ನಿ ಲಿಯೋನ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಆ್ಯಕ್ಟಿವ್ ಆಗಿದ್ದು, ದಿನಕ್ಕೆ ನಾಲ್ಕೈದು ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕುತ್ತಿದ್ದಾರೆ.

    ಸನ್ನಿ ಲಿಯೋನ್ ತಾವು ಮನೆಯಲ್ಲಿ ಕಾಲ ಕಳೆಯುತ್ತಿರುವ ಕುರಿತು ಅಪ್‍ಡೇಟ್ ನೀಡುತ್ತಿದ್ದು, ಇದರ ಜೊತೆಗೆ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಿಂದಿರಲು ಸಹ ಯತ್ನಿಸುತ್ತಿದ್ದಾರೆ. ವಿವಿಧ ಅತಿಥಿಗಳೊಂದಿಗೆ ಲೈವ್ ವಿಡಿಯೋ ಚಾಟ್ ಮಾಡುತ್ತಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿದ್ದಾರೆ. ಈ ಕುರಿತು ಪೋಸ್ಟ್ ಸಹ ಮಾಡಿದ್ದು, ಲಾಕಡ್ ಅಪ್ ವಿತ್ ಸನ್ನಿ ಎಂಬ ಟೈಟಲ್‍ನಲ್ಲಿ ಲೈವ್ ವಿಡಿಯೋ ಚಾಟ್ ಮಾಡುತ್ತಿದ್ದಾರೆ.

    ಲಾಕ್‍ಡೌನ್ ಹಿನ್ನೆಲೆ ಅಭಿಮಾನಿಗಳು ಸಹ ಈ ವಿಡಿಯೋ ನೋಡುತ್ತಿದ್ದು, ಹಲವರು ಕಮೆಂಟ್ ಮಾಡಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಮೂಲಕ ಸನ್ನಿ ಲಿಯೋನ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಆ್ಯಕ್ಟಿವ್ ಆಗಿದ್ದು, ಲಾಕ್‍ಡೌನ್ ದಿನಗಳನ್ನು ಕಳೆಯುತ್ತಿದ್ದಾರೆ. ಇದನ್ನು ಹೊರತುಪಡಿಸಿ ಎಂದಿನಂತೆ ಹಾಟ್ ಫೋಟೋಗಳನ್ನು ಅಪ್‍ಲೋಡ್ ಮಾಡುತ್ತಿದ್ದಾರೆ.

    ಬೇಸಿಗೆ ಹಿನ್ನೆಲೆ ನೀರಿನಲ್ಲಿ ಕುಳಿತಿರುವ ಫೋಟೋವನ್ನು ಹಾಕಿದ್ದು, ಇನ್ನೂ 12ದಿನಗಳ ದಿನಗಳ ಸಮ್ಮರ್ ಕಳೆಯಿರಿ ಎಂಬ ಸಾಲುಗಳನ್ನು ಬರೆದಿದ್ದರು. ಮಾತ್ರವಲ್ಲದೆ ಕಿಸ್ಸಿಂಗ್ ವಿಡಿಯೋ ಹಂಚಿಕೊಂಡು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಕಿಸ್ ಕೊಟ್ಟು, ಕಣ್ಣು ಹೊಡೆದಿರುವ ವಿಡಿಯೋ ಹಾಕಿ, ಕಿಸ್….ಕಿಸ್….! ಮಾರ್ನಿಂಗ್ ಎವರಿಒನ್ ಎಂದು ಬರೆದುಕೊಂಡಿದ್ದಾರೆ.

     

    View this post on Instagram

     

    Kiss kiss!! Morning everyone!

    A post shared by Sunny Leone (@sunnyleone) on

    ಇದೀಗ ಬಿಕಿನಿ ತೊಟ್ಟು ಕಪ್ಪು ಕುದುರೆಯನ್ನೇರಿರುವ ಫೋಟೋ ಹಾಕಿದ್ದು, ಫುಲ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಕಪ್ಪು ಕುದುರೆ, ಬಿಳಿ ಮೈಮಾಟ ಯುವ ಸಮೂಹವನ್ನು ಸೆಳೆದಿದ್ದು, ಹುಡುಗರು ಸೂಪರ್ ಡಿಯರ್, ಯು ಆರ್ ಅಮೇಜಿಂಗ್ ಎಂದೆಲ್ಲ ಕಮೆಂಟ್ ಮಾಡುತ್ತಿದ್ದಾರೆ. ಹೀಗಾಗಿ ಇನ್‍ಸ್ಟಾಗ್ರಾಮ್‍ನಲ್ಲಿ ಈ ಪೋಸ್ಟ್ ಸಾಕಷ್ಟು ಸದ್ದು ಮಾಡುತ್ತಿದೆ.

  • ಕೊರೊನಾ ಲಾಕ್‍ಡೌನ್- ಪತ್ನಿಗಾಗಿ ಕಾರ್ ರಸ್ತೆಗಿಳಿಸಿದ ಅಕ್ಷಯ್ ಕುಮಾರ್

    ಕೊರೊನಾ ಲಾಕ್‍ಡೌನ್- ಪತ್ನಿಗಾಗಿ ಕಾರ್ ರಸ್ತೆಗಿಳಿಸಿದ ಅಕ್ಷಯ್ ಕುಮಾರ್

    ನವದೆಹಲಿ: ಕೊರೊನಾ ವಿರುದ್ಧ ಹೋರಾಡಲು ಬರೋಬ್ಬರಿ 25 ಕೋಟಿ ರೂ.ಗಳ ಸಹಾಯ ಧನ ನೀಡುವ ಮೂಲಕ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮೆಚ್ಚುಗೆಗೆ ಪಾತ್ರರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಹ ಪ್ರಶಂಸೆ ವ್ಯಕ್ತಪಡಿಸಿದ್ದರು. ಇದೀಗ ಅವರು ಪತ್ನಿಗಾಗಿ ಕಾರನ್ನು ರಸ್ತೆಗಿಳಿಸಿದ್ದಾರೆ.

    ಅಕ್ಷಯ್ ಕುಮಾರ್ ಯಾವುದೇ ತುರ್ತು ಸಂದರ್ಭದಲ್ಲಿ ಸಹಾಯ ಮಾಡಲು ಎತ್ತಿದ ಕೈ. ಅದರಲ್ಲೂ ಯೋಧರ ವಿಚಾರದಲ್ಲಿ ಸಹಾಯ ಮಾಡಲು ಮುಂಚೂಣಿಯಲ್ಲಿರುತ್ತಾರೆ ಎಂಬುದು ತಿಳಿದೇ ಇದೆ. ಅದೇ ರೀತಿ ಈ ಬಾರಿ ಆರೋಗ್ಯ ತುರ್ತು ಪರಿಸ್ಥಿತಿ ಉಂಟಾಗಿದ್ದು, ಈ ವೇಳೆಯೂ ಅತಿ ದೊಡ್ಡ ಮೊತ್ತವನ್ನು ನೀಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಅವರ ಈ ಕಾಳಜಿ ಹಾಗೂ ಸಮಾಜದ ಕುರಿತು ಅವರಿಗಿರುವ ದೃಷ್ಟಿಕೋನಕ್ಕೆ ಇಡೀ ಭಾರತೀಯರೇ ಮನಸೋತಿದ್ದಾರೆ.

    ಪ್ರಧಾನಿ ಟ್ವೀಟ್‍ಗೆ ಅಕ್ಷಯ್ ಕುಮಾರ್ ಪ್ರತಿಕ್ರಿಯಿಸಿ, ಈ ಸಮಯದಲ್ಲಿ ಜನರ ಪ್ರಾಣವೇ ಎಲ್ಲಕ್ಕಿಂತ ಮುಖ್ಯ. ಅದಕ್ಕಾಗಿ ಏನೆಲ್ಲ ಸಾಧ್ಯವೋ ಅದೆಲ್ಲವನ್ನು ನಾವು ಮಾಡಬೇಕು. ನನ್ನ ಉಳಿತಾಯದ ಹಣದಲ್ಲಿ 25 ಕೋಟಿ ರೂ. ಗಳನ್ನು ನರೇಂದ್ರ ಮೋದಿಯವರ ಪಿಎಂ-ಕೇರ್ಸ್ ಫಂಡ್‍ಗೆ ನೀಡುವುದಾಗಿ ಪ್ರಮಾಣಿಸುತ್ತಿದ್ದೇನೆ. ನಾವೆಲ್ಲ ಒಂದಾಗಿ ಜೀವ ಉಳಿಸೋಣ. ಜೀವ ಇದ್ದರೆ ಜಗತ್ತು’ ಎಂದು ಬರೆದುಕೊಂಡಿದ್ದರು.

    ಇದೀಗ ಅವರು ತಮ್ಮ ಪತ್ನಿಯನ್ನು ಕಾರ್ ನಲ್ಲಿ ಕರೆದುಕೊಂಡು ಹೋಗಿದ್ದು, ಈ ಕುರಿತು ಸಾಕಷ್ಟು ಚರ್ಚೆ ನಡೆದಿದೆ. ಯಾಕೆಂದರೆ ಅವರ ಪತ್ನಿ ಟ್ವಿಂಕಲ್ ಖನ್ನಾ ಅವರಿಗೆ ಕಾಲಿನ ಮೂಳೆಗೆ ಪೆಟ್ಟಾಗಿದ್ದು, ತುಂಬಾ ನೋವು ಅನುಭವಿಸುತ್ತಿದ್ದರು. ಹೀಗಾಗಿ ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಕುರಿತು ಹೆಚ್ಚು ಜನ ಆತಂಕಗೊಂಡಿದ್ದು, ಅವರ ಅಭಿಮಾನಿಗಳು ಹಾಗೂ ಸ್ನೇಹಿತರು ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

    ಟ್ವಿಂಕಲ್ ಖನ್ನಾ ಅವರು ಈ ವಿಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದು, ನಾವು ಆಸ್ಪತ್ರೆಯಿಂದ ಹಿಂದಿರುಗುವಾಗ ರಸ್ತೆ ಹೀಗಿದ್ದವು. ದಯವಿಟ್ಟು ಗಾಬರಿಯಾಗಬೇಡಿ ನಾನು ಬಕೆಟ್ ಒದಿಯುವ ಕುರಿತು ಮಾತನಾಡುತ್ತಿಲ್ಲ. ಏಕೆಂದರೆ ಈ ಸಂದರ್ಭದಲ್ಲಿ ಏನನ್ನೂ ಒದಿಯಲು ನನ್ನಿಂದ ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ. ಇನ್ನೊಂದು ಪೋಸ್ಟ್‍ನಲ್ಲಿ ಕರಣ್ ಕಪಾಡಿಯಾ ಅವರ ಸಲಹೆ ಮೇರೆಗೆ ನನ್ನ ಬಳಿ ಟಿಕ್-ಟಾಕ್-ಟೋ ಆಡಿದ್ದಾರೆ. ಕಾಲು ಮುರಿಯಲು ಎಂದಿಗೂ ಉತ್ತಮ ಸಮಯವಲ್ಲ. ಏಕೆಂದರೆ ನಾನಾದರೂ ಎಲ್ಲಿಗೆ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

  • ಹೋಮ್ ಕ್ವಾರೆಂಟೈನ್ ಮಧ್ಯೆ ಹುಟ್ಟುಹಬ್ಬ ಹೇಗೆ ಆಚರಿಸಬೇಕೆಂದು ತಿಳಿಸಿದ ಹೃತಿಕ್

    ಹೋಮ್ ಕ್ವಾರೆಂಟೈನ್ ಮಧ್ಯೆ ಹುಟ್ಟುಹಬ್ಬ ಹೇಗೆ ಆಚರಿಸಬೇಕೆಂದು ತಿಳಿಸಿದ ಹೃತಿಕ್

    ಮುಂಬೈ: ವಿಚ್ಛೇದಿತ ದಂಪತಿಯನ್ನು ಕೊರೊನಾ ವೈರಸ್ ಒಂದು ಮಾಡಿದ್ದು, ಇತ್ತೀಚೆಗಷ್ಟೇ ಮಾಜಿ ಪತ್ನಿ ಸುಸ್ಸೇನ್ ಖಾನ್ ಖಾನ್ ಅವರು ನಟ ಹೃತಿಕ್ ರೋಷನ್ ಅವರ ಮನೆಗೆ ಆಗಮಿಸಿದ್ದಾರೆ. ಇಬ್ಬರೂ ಮಕ್ಕಳೊಂದಿಗೆ ಸಮಯ ಕಳೆಯುತ್ತಿದ್ದಾರೆ. ಈ ಕ್ಷಣವನ್ನು ಹೃತಿಕ್ ರೋಷನ್ ಅವರು ಭಾವುಕರಾಗಿಯೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದೀಗ ಮತ್ತೊಂದು ಸಂತಸ ಕ್ಷಣವನ್ನು ಹಂಚಿಕೊಂಡಿದ್ದಾರೆ.

    ಹೋಮ್ ಕ್ವಾರೈಂಟೇನ್ ಹಿನ್ನೆಲೆ ಹೃತಿಕ್ ದಂಪತಿ ಮಕ್ಕಳೊಂದಿಗೆ ಕಾಲ ಕಳೆಯುತ್ತಿದ್ದು, ಕುಟುಂಬದೊಂದಿಗಿನ ಕ್ಷಣವನ್ನು ಆನಂದಿಸುತ್ತಿದ್ದಾರೆ. ಇದೀಗ ಮಗನ ಹುಟ್ಟುಹಬ್ಬದ ಸಂಭ್ರದ ಕ್ಷಣವನ್ನು ಸಹ ಹಂಚಿಕೊಂಡಿದ್ದು, ಕೊರೊನಾ ವೈರಸ್ ಗೊಂದಲದ ಮಧ್ಯೆ ಹುಟ್ಟುಹಬ್ಬವನ್ನು ಹೇಗೆ ಆಚರಿಸಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

    ಈ ಕುರಿತ ವಿಡಿಯೋವನ್ನು ಹೃತಿಕ್ ರೋಷನ್ ಅವರು ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಮಾರ್ಚ್ 28ರಂದು ಹ್ರಿಹಾನ್‍ನ ಹುಟ್ಟುಹಬ್ಬ, ಸಣ್ಣ ಹೊಂದಾಣಿಕೆ, ಸಲಿಗೆ ಹಾಗೂ ತಂತ್ರಜ್ಞಾನಕ್ಕೆ ಧನ್ಯವಾದ. ಗಾಡ್ ಬ್ಲೆಸ್ ಅವರ್ ಚಿಲ್ಡ್ರನ್. ಉತ್ತಮ ದಿನಗಳು ಕಾದಿವೆ. ಲವ್ ಟು ಆಲ್ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಹ್ಯಾಪಿ ಬರ್ತ್ ಡೇ, ಹ್ರಿಹಾನ್‍ರಿಟನ್ರ್ಸ್‍ಫೋರ್ಟೀನ್, ಗಿವ್‍ಟೈಮ್‍ಟುಥೀಲ್ಡರ್ಸ್ ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

    ಸುಸ್ಸೇನ್ ಸಹ ಈ ಕುರಿತು ಪೋಸ್ಟ್ ಮಾಡಿದ್ದು, ಟು ಮೈ ಸನ್… ನಾವು ಎಲ್ಲಿಗೆ ಹೋಗುತ್ತೇವೆ ಎಂಬುದು ಯಾರಿಗೂ ತಿಳಿದಿಲ್ಲ. ಆದರೆ ನಾನು ಹೇಳಲು ಬಯಸುತ್ತೇನೆ, ನೀನು ನಿನ್ನ ದಾರಿಯಲ್ಲಿದ್ದೀಯಾ. ಅತ್ಯುತ್ತಮವಾದುದು ಅಲ್ಲಿದೆ. ಸನ್ ಶೈನ್‍ನ ನನ್ನ ಕಿರಣಕ್ಕೆ 14ನೇ ಹುಟ್ಟುಹಬ್ಬದ ಶುಭಾಶಯ. ಇಂದು, ನಾಳೆ ಎಂದೆಂದಿಗೂ ನೀನು ನನ್ನ ಅಂತರಂಗದ ಆಳದಲ್ಲಿ ಇರುತ್ತೀಯಾ ಎಂದು ಬರೆದುಕೊಂಡಿದ್ದಾರೆ.

    ಬಾಲಿವುಡ್ ನಟ ಹೃತಿಕ್ ರೋಷನ್ ಮತ್ತು ಪತ್ನಿ ಸುಸ್ಸೇನ್ ಖಾನ್ ದಂಪತಿ ಈಗಾಗಲೇ ವಿಚ್ಛೇದನ ಪಡೆದು ವರ್ಷಗಳೇ ಕಳೆದಿದೆ. ಆದರೆ ಈಗ ಕೊರೊನಾ ವೈರಸ್ ಭೀತಿಯಿಂದ ಮತ್ತೆ ದಂಪತಿ ಒಂದಾಗಿದ್ದಾರೆ. ವಿಚ್ಛೇದನ ಪಡೆದಿದ್ದರೂ ಹೃತಿಕ್, ಸುಸ್ಸೇನ್ ತಮ್ಮ ಮಕ್ಕಳು ರೇಹಾನ್ ಮತ್ತು ರಿದಾನ್ ಪಾಲಿಗೆ ಈಗಲೂ ತಂದೆ-ತಾಯಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಕ್ಕಳಿಗೋಸ್ಕರ ಈ ದಂಪತಿ ಒಂದಾಗಿದ್ದಾರೆ. ಸದ್ಯ ಕ್ವಾರೆಂಟೈನ್ ಸಮಯವನ್ನು ಕಳೆಯಲು ಹೃತಿಕ್ ತಮ್ಮ ಜುಹು ಮನೆಗೆ ಮಕ್ಕಳ ಜೊತೆ ಶಿಫ್ಟ್ ಆಗಿದ್ದು, ಅವರಿಗೆ ಸುಸ್ಸೇನ್ ಕೂಡ ಸಾಥ್ ನೀಡುತ್ತಿದ್ದಾರೆ.

    ದೇಶವು ಲಾಕ್‍ಡೌನ್‍ನಲ್ಲಿ ಇರೋದನ್ನ ರೂಢಿ ಮಾಡಿಕೊಳ್ಳುತ್ತಿರುವ ಸಮಯದಲ್ಲಿ ಮಕ್ಕಳು ನಮ್ಮಿಂದ ದೂರವಿದ್ದರೆ ಹೆತ್ತವರಿಗೆ ಸಹಿಸೋದಿಕ್ಕೆ ಆಗೋದಿಲ್ಲ. ಇಂದು ದೇಶ ಎದುರಿಸುತ್ತಿರುವ ಪರಿಸ್ಥಿತಿಯನ್ನು ನಿಭಾಯಿಸಲು ಇಡೀ ವಿಶ್ವ ಸಾಮಾಜಿಕ ಅಂತರ ಹಾಗೂ ಲಾಕ್‍ಡೌನ್ ವಿಚಾರದಲ್ಲಿ ಒಗ್ಗಟ್ಟು ತೋರುತ್ತಿರುವುದನ್ನು ನೋಡಿದರೆ ಹೃದಯತುಂಬಿ ಬರುತ್ತದೆ. ನನ್ನ ಮಾಜಿ ಪತ್ನಿ ಸುಸ್ಸೇನ್ ಮಕ್ಕಳಿಗೋಸ್ಕರ ತಾತ್ಕಾಲಿಕವಾಗಿ ನನ್ನ ಮನೆಗೆ ಬಂದಿದ್ದಾಳೆ. ಇದರಿಂದ ಮಕ್ಕಳಿಗೆ ಅಪ್ಪ-ಅಮ್ಮನ ಪ್ರೀತಿ ಎರಡೂ ಸಿಗುತ್ತಿದೆ. ನನ್ನನ್ನು ಅರ್ಥಮಾಡಿಕೊಂಡಿದ್ದಕ್ಕೆ, ಪ್ರೋತ್ಸಾಹ ನೀಡಿದ್ದಕ್ಕೆ ಸುಸ್ಸೇನ್‍ಗೆ ಧನ್ಯವಾದ ಎಂದು ಈ ಹಿಂದಿನ ಪೋಸ್ಟ್ ನಲ್ಲಿ ಹೃತಿಕ್ ಬರೆದುಕೊಂಡು ಫೋಟೋ ಹಂಚಿಕೊಂಡಿದ್ದರು.

    17 ವರ್ಷಗಳ ಕಾಲ ವೈವಾಹಿಕ ಜೀವನ ನಡೆಸಿದ ಹೃತಿಕ್, ಸುಸ್ಸೇನ್ 2014ರಲ್ಲಿ ವಿಚ್ಛೇದನ ಪಡೆದು ದೂರವಾಗಿದ್ದರು. ವಿಚ್ಛೇದನ ಪಡೆದು ಆರು ವರ್ಷಗಳು ಕಳೆಯುತ್ತಿದೆ. ಆದರೂ ಸಹ ಹೃತಿಕ್, ಸುಸ್ಸೇನ್ ಒಳ್ಳೆಯ ಸ್ನೇಹಿತರಾಗಿ, ಮಕ್ಕಳಿಗಾಗಿ ಪೋಷಕರ ಕರ್ತವ್ಯವನ್ನು ಒಟ್ಟಾಗಿ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಮಕ್ಕಳ ಜೊತೆ ವಿದೇಶ ಪ್ರವಾಸಕ್ಕೆ ದಂಪತಿ ಹೋಗುತ್ತಾರೆ, ಜೊತೆಗೆ ಡಿನ್ನರ್, ಶಾಪಿಂಗ್ ಮಾಡುತ್ತಿದ್ದಾರೆ.

  • ಹೋಮ್ ಕ್ವಾರೆಂಟೈನ್‍ನಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

    ಹೋಮ್ ಕ್ವಾರೆಂಟೈನ್‍ನಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

    ಹಾಸನ: ಮುನ್ನೆಚ್ಚರಿಕಾ ಕ್ರಮವಾಗಿ 14 ದಿನ ಮನೆಯಲ್ಲೇ ಇರಲು ತಿಳಿಸಿದ್ದ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ.

    ಯುಗಾದಿ ಹಬ್ಬಕ್ಕೆ ಮುಂಬೈನಿಂದ ಹುಟ್ಟೂರಿಗೆ ಬಂದಿದ್ದ 35 ವರ್ಷದ ವ್ಯಕ್ತಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೊರರಾಜ್ಯದಿಂದ ಬಂದಿದ್ದರಿಂದ ಆತನಿಗೆ 14 ದಿನ ಮನೆಯಲ್ಲೇ ಇರಲು ಆರೋಗ್ಯ ಇಲಾಖೆ ಅಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದರು. ಆತ ಅಸ್ತಮಾ ಮತ್ತು ಕಿಡ್ನಿ ಸಮಸ್ಯೆಯಿಂದಲೂ ಬಳಲುತ್ತಿದ್ದ ಎಂದು ಹೇಳಲಾಗುತ್ತಿದೆ.

    ಇಂದು ವ್ಯಕ್ತಿ ಮನನೊಂದು ನೇಣಿಗೆ ಶರಣಾಗಿದ್ದಾನೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದ್ದಾರೆ. ಅಲ್ಲದೇ ವೈದ್ಯರು ಬರುವವರೆಗೂ ಮೃತದೇಹದ ಬಳಿ ಹೋಗದಂತೆ ಸಂಬಂಧಿಕರಿಗೆ ಪೊಲೀಸರ ಸೂಚನೆ ನೀಡಿದ್ದಾರೆ.

    ಶ್ರವಣಬೆಳಗೊಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಸಾಮಾಜಿಕ ದೂರ ಹೆಚ್ಚಿಸಿ, ಭಾವನಾತ್ಮಕ ದೂರ ಕಡಿಮೆ ಮಾಡ್ಬೇಡಿ: ಮೋದಿ ಮನವಿ

    ಸಾಮಾಜಿಕ ದೂರ ಹೆಚ್ಚಿಸಿ, ಭಾವನಾತ್ಮಕ ದೂರ ಕಡಿಮೆ ಮಾಡ್ಬೇಡಿ: ಮೋದಿ ಮನವಿ

    ನವದೆಹಲಿ: ಹೋಮ್ ಕ್ವಾರೆಂಟೈನ್‍ಗಳೊಂದಿಗೆ ಕೆಲವರು ಕೆಟ್ಟದಾಗಿ ವರ್ತಿಸುತ್ತಿದ್ದಾರೆಂದು ತಿಳಿದಾಗ ನನಗೆ ತುಂಬಾ ನೋವಾಯಿತು. ನಾವು ಸೂಕ್ಷ್ಮ ಮತ್ತು ತಿಳುವಳಿಕೆ ಹೊಂದಬೇಕಿದೆ. ಸಾಮಾಜಿಕ ದೂರವನ್ನು ಹೆಚ್ಚಿಸಿ. ಆದರೆ ಭಾವನಾತ್ಮಕ ದೂರವನ್ನು ಕಡಿಮೆ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದಾರೆ.

    ಕೊರೊನಾ ವಿಚಾರದ ಬಗ್ಗೆ ಮನ್ ಕೀ ಬಾತ್‍ನಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್ ತಡೆಯಲು ಸಂಪರ್ಕತಡೆಯನ್ನು ಮಾಡಬೇಕಾಗಿದೆ. ಆದರೆ ಹೋಮ್ ಕ್ವಾರೆಂಟೈನ್‍ನಲ್ಲಿರುವವನ್ನು ಕೆಟ್ಟದಾಗಿ ಕಾಣಬೇಡಿ. ಅವರು ಅನಿವಾರ್ಯವಾಗಿ ಕೆಲವು ದಿನಗಳ ಕಾಲ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗುತ್ತದೆ. ಅವರೊಂದಿಗೆ ನಾವು ಭಾವನಾತ್ಮಕ ಸಂಬಂಧವನ್ನು ಕಾಪಾಡಿಕೊಳ್ಳಬೇಕು. ಇದು ಸಂಬಂಧಗಳನ್ನು ಪುನಶ್ಚೇತನಗೊಳಿಸುವ ಸಮಯವಾಗಿದೆ ಎಂದು ತಿಳಿಸಿದರು.

    ಮನೆಗಳಲ್ಲಿ ಉಳಿಯುವಂತೆ ನಿಮ್ಮಲ್ಲಿ ಮನವಿ ಮಾಡಿಕೊಂಡೆ. ಆದರೆ ನಿಮ್ಮ ಮನಸ್ಸನ್ನು ಅದನ್ನು ಕೇಳುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನಾವು ಲಾಕ್‍ಡೌನ್ ಎಂಬ ಲಕ್ಷ್ಮಣ ರೇಖೆಯನ್ನು ಪಾಲಿಸಲೇಬೇಕಿದೆ. ನಾನು ಫಿಟ್‍ನೆಸ್ ತರಬೇತುದಾರನಲ್ಲ. ಆದರೆ ಕೆಲವು ಯೋಗಗಳಿಂದ ಬಲಿಷ್ಠವಾಗಿದ್ದೇನೆ ಎಂದರು.

    ಸಹಾಯ ಮಾಡಿ:
    ದೇಶಾದ್ಯಂತ ಲಾಕ್‍ಡೌನ್‍ನಿಂದಾಗಿ ಬಡವನು ಹಸಿವಿನಿಂದ ಕಂಗೆಟ್ಟಿದ್ದಾರೆ ಅಥವಾ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ದಯವಿಟ್ಟು ಅಂಥವರ ಸಹಾಯ ನಿಲ್ಲಿ. ಇಂದು ದೇಶವನ್ನು ಉಳಿಸಲು ನಾವು ಜಾತಿ, ಧರ್ಮ, ಮೇಲೂ, ಕೀಳು ಎಂಬ ಎಲ್ಲಾ ಗೋಡೆಗಳನ್ನು ಮುರಿಯಬೇಕಾಗಿದೆ. ನೀವು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ. ನಾವು ಈ ಯುದ್ಧವನ್ನು ಗೆಲ್ಲಬೇಕಿದೆ. ನಾನು ನಿಮಗೆ ಶುಭ ಹಾರೈಸುತ್ತೇನೆ ಎಂದು ತಿಳಿಸಿದರು.

  • ಬೀದಿ ನಾಯಿಗಳನ್ನು ಕಾಪಾಡಲು ತಂಡವನ್ನೇ ಕಟ್ಟಿದ ಸಂಯುಕ್ತಾ

    ಬೀದಿ ನಾಯಿಗಳನ್ನು ಕಾಪಾಡಲು ತಂಡವನ್ನೇ ಕಟ್ಟಿದ ಸಂಯುಕ್ತಾ

    ಬೆಂಗಳೂರು: ದೇಶವೇ ಲಾಕ್ ಡೌನ್ ಆಗಿರುವುದರಿಂದ ಜನರು ಹೊರಗೆ ಬರುವುದು ವಿರಳವಾಗಿದ್ದು, ಹೀಗಾಗಿ ಪ್ರಾಣಿ ಪಕ್ಷಿಗಳು ಅನ್ನ, ನೀರು ಇಲ್ಲದೆ ಪರದಾಡುತ್ತಿವೆ. ಹಲವು ನಟ, ನಟಿಯರು ಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೆ ಹಾಗೂ ಬಡವರಿಗೆ ಸಹಾಯ ಮಾಡುವ ಮೂಲಕ ಸ್ಪಂದಿಸುತ್ತಿದ್ದಾರೆ. ಆದರೆ ಪ್ರಾಣಿಗಳು ಮಾತ್ರ ನರಳುತ್ತಿವೆ. ಹೀಗಾಗಿ ನಟಿ ಸಂಯುಕ್ತಾ ಹೊರನಾಡು ಪ್ರಾಣಿಗಳತ್ತ ಲಕ್ಷ್ಯ ಹರಿಸಿದ್ದಾರೆ.

    ಹೋಮ್ ಕ್ವಾರೆಂಟೈನ್‍ನಿಂದಾಗಿ ಹಲವು ನಟ, ನಟಿಯರು ಮನೆಯಲ್ಲೇ ಉಳಿದುಕೊಂಡಿದ್ದು, ಕುಟುಂಬದೊಂದಿಗೆ ಹಾಗೂ ತಮ್ಮ ಮುಂದಿನ ಸಿನಿಮಾ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಆದರೆ ಸಂಯುಕ್ತಾ ಹೊರನಾಡು ಅವರು ಇನ್ನೂ ಒಂದು ಹೆಜ್ಜೆ ಮುಂದೆ ಬೀದಿ ನಾಯಗಳಿಗೆ ಆಹಾರ ನೀಡುವುದರಲ್ಲಿ ನಿರತರಾಗಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

    ಪ್ರಾಣಿಗಳು ಅದರಲ್ಲೂ ನಾಯಿ ಎಂದರೆ ಸಂಯುಕ್ತ ಅವರಿಗೆ ಪಂಚ ಪ್ರಾಣ, ಅವರೂ ಒಂದು ನಾಯಿಯನ್ನು ದತ್ತು ಪಡೆದಿದ್ದಾರೆ. ಅದಕ್ಕೆ ಗುಂಡ ಎಂದು ನಾಮಕರಣ ಮಾಡಿದ್ದು, ಅದರ ಜೊತೆಗೆ ಹೆಚ್ಚು ಸಮಯವನ್ನು ಕಳೆಯುತ್ತಾರೆ. ಇದರ ಜೊತೆಗೆ ಇದೀಗ ಬೀದಿ ನಾಯಿಗಳನ್ನು ಕಾಪಾಡಲು ಮುಂದಾಗಿದ್ದಾರೆ.

    ಕೊರೊನಾ ಭೀತಿಯಿಂದಾಗಿ ದೇಶವೇ ಲಾಕ್‍ಡೌನ್ ಅಗಿದ್ದು, ಬಹುತೇಕರು ಸ್ವಯಂ ದಿಗ್ಬಂಧನ ವಿಧಿಸಿಕೊಂಡು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಹೀಗಾಗಿ ಪ್ರಾಣಿ, ಪಕ್ಷಿಗಳು ಆಹಾರ ನೀರು ಇಲ್ಲದೆ ಪರಿತಪಿಸುತ್ತಿವೆ. ಇದನ್ನು ಕಂಡ ನಟಿ ಸಂಯುಕ್ತಾ ಹೊರನಾಡು, ಬೀದಿ ನಾಯಿಗಳಿಗೆ ಬಿಸ್ಕೆಟ್ ಹಾಗೂ ತಿಂಡಿಯನ್ನು ಹಾಕಿ ಮಾನವೀಯತೆ ಮೆರೆದಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲೇ ಕಾಲ ಕಳೆಯುತ್ತಿರುವ ಸಂಯುಕ್ತಾ ಹೊರನಾಡು ಶುಕ್ರವಾರ ಹೊರಗಡೆ ಬಂದಿದ್ದಾರೆ. ಈ ವೇಳೆ ಬೀದಿ ನಾಯಿಗಳು ಆಹಾರವಿಲ್ಲದೆ ಪರದಾಡುವುದನ್ನು ನೋಡಿದ್ದಾರೆ. ತಕ್ಷಣವೇ ಬಿಸ್ಕೆಟ್ ತಿನ್ನಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದೊಂದು ವಾರದಿಂದ ನಾಯಿಗಳು ಆಹಾರವಿಲ್ಲದೆ ಪರದಾಡುತ್ತಿರುವುದನ್ನು ಕಂಡು ಹೃದಯಕ್ಕೆ ತುಂಬಾ ಘಾಸಿಯುಂಟಾಗಿತ್ತು. ಹೀಗಾಗಿ ಕೆಲವು ನಾಯಿಗಳಿಗೆ ನಾನು ಆಹಾರ ತಿನ್ನಿಸಿದೆ. ಅಲ್ಲದೆ ಟಾಸ್ಕ್ ಫೋರ್ಸ್‍ನಲ್ಲಿ ಭಾಗವಾಗಿಸಿದ್ದಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಧನ್ಯವಾದಗಳು. ಈ ನಿಟ್ಟಿನಲ್ಲಿ ನಮ್ಮ ತಂಡ ಫುಲ್ ಆ್ಯಕ್ಟಿವ್ ಆಗಿದ್ದು, ತುಂಬಾ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

    ಸಂಯುಕ್ತಾ ಹೊರನಾಡು ಲೈಫು ಇಷ್ಟೇನೆ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಗುರುತಿಸಿಕೊಂಡಿದ್ದು, ನಂತರ ಬರ್ಫಿ, ಒಗ್ಗರಣೆ, ನೀನೆ ಬರಿ ನೀನೆ, ಜಿಗರ್‍ಥಂಡ, ಸರ್ಕಾರಿ ಕೆಲಸ ದೇವರ ಕೆಲಸ, ದಯವಿಟ್ಟು ಗಮನಿಸಿ, ದಿ ವಿಲನ್ ಹಾಗೂ ಇತ್ತೀಚೆಗೆ ನಾನು ಮತ್ತು ಗುಂಡ ಸಿನಿಮಾದಲ್ಲಿ ನಟಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಕೆಲ ತಮಿಳು ಸಿನಿಮಾಗಳಲ್ಲಿ ಸಹ ನಟಿಸಿದ್ದಾರೆ.

  • ವಿದೇಶದಿಂದ ಬಂದವರು ಸುತ್ತಾಡಿದ್ರೆ ಪಾಸ್‍ಪೋರ್ಟ್ ಮುಟ್ಟುಗೋಲು

    ವಿದೇಶದಿಂದ ಬಂದವರು ಸುತ್ತಾಡಿದ್ರೆ ಪಾಸ್‍ಪೋರ್ಟ್ ಮುಟ್ಟುಗೋಲು

    – ಉಡುಪಿ ಡಿಸಿ ಜಿ.ಜಗದೀಶ್ ಆದೇಶ

    ಉಡುಪಿ: ವಿದೇಶದಿಂದ ಬಂದು 28 ದಿನ ಗೃಹ ಬಂಧನದಲ್ಲಿ ಇರದೇ ಬೇಕಾಬಿಟ್ಟಿ ಸುತ್ತಾಡಿದ್ರೆ ನಿಮ್ಮ ಪಾಸ್‍ಪೋರ್ಟ್ ಮುಟ್ಟುಗೋಲು ಹಾಕುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಕೆ ನೀಡಿದ್ದಾರೆ.

    ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಗೃಹ ಬಂಧನದಲ್ಲಿರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕೊರೊನಾ ಹರಡದಂತೆ ಕೇಂದ್ರ ಸರ್ಕಾರ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಿದೆ. ಆದರೆ ಆದೇಶ ಉಲ್ಲಂಘಿಸಿ ಶಂಕಿತರು ಸುತ್ತಾಡುವ ಮಾಹಿತಿ ಸಾರ್ವಜನಿಕರಿಂದ ಸಿಕ್ಕಿದೆ. ಒಂದೊಂದು ಮನೆಗೆ ಮೂರು ಬಾರಿ ಅಧಿಕಾರಿಗಳು, ಪೊಲೀಸರು, ಆರೋಗ್ಯ ಇಲಾಖೆಯವರು ಭೇಟಿ ಕೊಡಲು ಸೂಚನೆ ಕೊಟ್ಟಿದ್ದೇನೆ. ಆದೇಶ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇನೆ ಎಂದು ಬಿಸಿ ಮುಟ್ಟಿಸಿದ್ದಾರೆ.

    ಪಾಸ್‍ಪೋರ್ಟ್ ಮುಟ್ಟುಗೋಲು ಹಾಕಿಸುತ್ತೇನೆ. ಮುಂದೆ ವಿದೇಶ ಪ್ರಯಾಣ ಮಾಡದಂತೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಡಿಸಿ ಖಡಕ್ ಎಚ್ಚರಿಗೆ ಮುಟ್ಟಿಸಿದ್ದಾರೆ. ಜಿಲ್ಲೆಯಲ್ಲಿ 1,400 ಮಂದಿ ಗೃಹ ಬಂಧನದಲ್ಲಿ ಇದ್ದು, ಸುತ್ತಮುತ್ತಲ ಮನೆಗಳಿಗೂ ಅವರನ್ನು ಕಾಯುವ ಜವಾಬ್ದಾರಿಯನ್ನು ವಹಿಸಿದ್ದೇವೆ. ಒಂದೆರಡು ಜನ ಮಾತು ಕೇಳದವರಿಂದ ಇಡೀ ಸಮಾಜಕ್ಕೆ ಆತಂಕ ಇದೆ. ಜನ ಜವಾಬ್ದಾರಿಯನ್ನು ಅರಿಯಬೇಕು. ಪರಿಸ್ಥಿತಿ ತಿಳಿದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

  • ಮೊಮ್ಮಗನೊಂದಿಗೆ ಬ್ಯುಸಿಯಾದ ಕೆಜಿಎಫ್-2 ಪ್ರಧಾನಿ

    ಮೊಮ್ಮಗನೊಂದಿಗೆ ಬ್ಯುಸಿಯಾದ ಕೆಜಿಎಫ್-2 ಪ್ರಧಾನಿ

    ನವದೆಹಲಿ: ನಟನೆ ಹಾಗೂ ಇತರೆ ಕೆಲಸಗಳಲ್ಲಿ ಸದಾ ಬ್ಯುಸಿಯಾಗಿರುತ್ತಿದ್ದ ನಟ, ನಟಿಯರು ಕುಟುಂಬದೊಂದಿಗೆ ಹೆಚ್ಚು ಕಾಲ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಇದೀಗ ಕೊರೊನಾ ಭೀತಿಯಿಂದಾಗಿ ಹೋಮ್ ಕ್ವಾರೆಂಟೈನ್ ವಿಧಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೆವಲರು ಅವರ ಮುಂದಿನ ಸಿನಿಮಾದ ಇತರ ಕೆಲಸಗಳ ಕಡೆ ಗಮನಹರಿಸಿದರೆ, ಇನ್ನೂ ಕೆಲವರು ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ.

    ಅದೇ ರೀತಿ ಕೆಜಿಎಫ್-2 ಸಿನಿಮಾದಲ್ಲಿ ಪ್ರಧಾನಿ ಪಾತ್ರ ನಿರ್ವಹಿಸುತ್ತಿರುವ ರವೀನಾ ಟಂಡನ್ ಸಹ ಮನೆಯಲ್ಲಿ ಕುಟುಂಬದೊಂದಿಗೆ ಎಂಜಾಯ್ ಮಾಡುತ್ತಿದ್ದು, ಮೊಮ್ಮಗನ ಜೊತೆ ಕಾಲ ಕಳೆಯುತ್ತಿದ್ದಾರೆ. ಮೊಮ್ಮಗನ ಜೊತೆ ಆಟವಾಡುವುದು, ಹಾಲು ಕುಡಿಸುವುದು, ಡೈಪರ್ ಚೇಂಜ್ ಮಾಡುವುದು ಸೇರಿದಂತೆ ಬಹುತೇಕ ಸಮಯವನ್ನು ಪ್ರೀತಿಯ ಮೊಮ್ಮಗನೊಂದಿಗೆ ಕಳೆಯುತ್ತಿದ್ದಾರೆ.

    ಈ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದು, 2ನೇ ಸಲ ಅಜ್ಜಿಯಾಗಿರುವ ಖುಷಿಯಲ್ಲಿದ್ದಾರೆ. ತಮ್ಮ ಎರಡನೇ ಮೊಮ್ಮಗುವನ್ನು ಆಡಿಸುತ್ತಿರುವುದಾಗಿ ತಿಳಿಸಿದ್ದಾರೆ. ಬಹುತೇಕ ಸಮಯ ಔಟ್ ಡೋರ್ ಶೂಟಿಂಗ್ ಇರುವ ಕಾರಣ ನಟ, ನಟಿಯರು ತಮ್ಮ ಮನೆಯವರೊಂದಿಗೆ ಕಾಲ ಕಳೆಯಲು ಸಾಧ್ಯವಾಗಿರುವುದಿಲ್ಲ. ಇದೇ ಉತ್ತಮ ಅವಕಾಶ ಎಂದುಕೊಂಡು ಬಹುತೇಕರು ತಮ್ಮ ಕುಟುಂಬಕ್ಕೆ ಸಮಯ ಮೀಸಲಿಟ್ಟಿದ್ದಾರೆ.

    ರವೀನಾ ಟಂಡನ್ ಅವರು ಇದೀಗ ತಮ್ಮ ಮಗಳ ಮಗು ರುದ್ರ್ ನೊಂದಿಗೆ ಕಾಲ ಕಳೆಯುತ್ತಿದ್ದು, ಸಂಪೂರ್ಣ ಸಮಯವನ್ನು ಮಗುವಿನೊಂದಿಗೆ ಕಳೆಯುತ್ತಿದ್ದಾರೆ. ಅಲ್ಲದೆ ಮೊಮ್ಮಗನಿಗೆ ರವೀನಾ ಮುದ್ದಾದ ಅಡ್ಡ ಹೆಸರನ್ನು ಇಟ್ಟಿದ್ದು, ಬಾಂಡ್ ಎಂದು ಕರೆಯುತ್ತಾರೆ. ಅದೇ ರೀತಿ ತಮಗೂ ನಿಕ್ ನೇಮ್ ಇಟ್ಟುಕೊಂಡಿದ್ದು, ಅವನಿಗಾಗಿ ನನ್ನ ಹೆಸರನ್ನು ‘ಗ್ಲಾಮ್ ಮಾ’ ಎಂದು ಬದಲಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

    ಇನ್‍ಟ್ಟಾಗ್ರಾಮ್‍ನಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಲವರು ಕಮೆಂಟ್ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಕೆಲವರು ‘ಗ್ಲಾಮ್ ಮಾ’ ಎಂದು ಕಮೆಂಟ್ ಮಾಡುತ್ತಿದ್ದಾರೆ.

    ರವೀನಾ ಟಂಡನ್ 21 ವರ್ಷಕ್ಕೆ ಎರಡು ಹೆಣ್ಣುಮಕ್ಕಳ ತಾಯಿಯಾದವರು. ಸಿನಿಮಾಗಳಲ್ಲಿ ನಟಿಸುವಾಗಲೇ ರವೀನಾ ಇಬ್ಬರು ಹೆಣ್ಣು ಮಕ್ಕಳನ್ನು ದತ್ತು ತೆಗೆದುಕೊಂಡಿದ್ದರು. ಈಗ ಅವರಲ್ಲಿ ಎರಡನೇ ಮಗಳಿಗೆ ಮಗುವಾಗಿದೆ. ಅವನ ಹೆಸರೇ ರುದ್ರ್, ಈ ರುದ್ರ್ ನೊಂದಿಗೆ ರವೀನಾ ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಕೆಜಿಎಫ್-2 ಚಿತ್ರದ ತಮ್ಮ ಶೂಟಿಂಗ್ ಪೂರ್ಣಗೊಳಿಸಿರುವ ರವೀನಾ ಟಂಡನ್, ಚಿತ್ರ ತಂಡಕ್ಕೆ ಬೈ ಹೇಳಿ ಮನೆ ಸೇರಿಕೊಂಡಿದ್ದಾರೆ.