Tag: ಹೋರಾಟಗಾರ

  • ರೈತ ಬಂಧು ಕೆಎಸ್ ಪುಟ್ಟಣ್ಣಯ್ಯ ಬದುಕಿನ ಪುಟಗಳ ಒಂದಿಷ್ಟು ಮಾಹಿತಿ ಇಲ್ಲಿದೆ

    ರೈತ ಬಂಧು ಕೆಎಸ್ ಪುಟ್ಟಣ್ಣಯ್ಯ ಬದುಕಿನ ಪುಟಗಳ ಒಂದಿಷ್ಟು ಮಾಹಿತಿ ಇಲ್ಲಿದೆ

    ಬೆಂಗಳೂರು: ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಕರ್ನಾಟಕ ರೈತ ಸಂಘ ಕಂಡಂತಹ ಧೀಮಂತ ಹೋರಾಟಗಾರ. ರಾಜಕಾರಣಿಯಾಗಿದ್ದರೂ ಸರಳ ಜೀವಿಯಾಗಿ ಬದುಕನ್ನು ಸವೆಸಿದವರು. ಸ್ವತಃ ಕಬಡ್ಡಿ ಆಟಗಾರರಾಗಿದ್ದ ಪುಟ್ಟಣ್ಣಯ್ಯ ಅದನ್ನೇ ನೋಡುತ್ತಾ ಕೊನೆಯುಸಿರೆಳೆದಿದ್ದಾರೆ. ಅವರ ಬದುಕಿನ ಪುಟಗಳು ಇಲ್ಲಿದೆ.

    ರೈತ ಚಳವಳಿಯ ಕೊಂಡಿಯೊಂದು ಅಸ್ತಂಗತವಾಗಿದೆ. ಶಾಸಕನಾಗಿದ್ದರೂ ಸರಳಜೀವಿಯಾಗಿಯೇ ಬದುಕ ಸವೆಸಿದ ಮಾಣಿಕ್ಯವೊಂದು ನಮ್ಮನ್ನಗಲಿದೆ. ರೈತ ನಾಯಕನೆಂದೇ ಚಿರಪರಿಚಿತವಾಗಿದ್ದ ಪುಟ್ಟಣ್ಣಯ್ಯ, ಮಂಡ್ಯದ ಕ್ಯಾತನಹಳ್ಳಿಯಲ್ಲಿ ಜನಿಸಿದ್ರು. ಹುಟ್ಟೂರಿನಲ್ಲಿಯೇ ಎಸ್.ಎಸ್.ಎಲ್.ಸಿ. ವಿದ್ಯಾಭ್ಯಾಸ ಪಡೆದ ಬಳಿಕ ಮೈಸೂರಿನಲ್ಲಿರುವ ಸೆಂಟ್ ಫಿಲೋಮಿನಾ ಶಾಲೆಯಲ್ಲಿ ಪದವಿ ಪೂರ್ವ ಶಿಕ್ಷಣ, ಮೈಸೂರಿನ ಡಿ. ಬನುಮಯ್ಯ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದರು.

    ರೈತರ ಬಗ್ಗೆ ಕಾಳಜಿಯಳ್ಳವರಾಗಿದ್ದ ಪುಟ್ಟಣ್ಣಯ್ಯ, ಎಸ್.ಡಿ. ಜಯರಾಂರ ಮಾರ್ಗದರ್ಶನದಲ್ಲಿ 1983ರಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಸಾಮಾನ್ಯ ಕಾರ್ಯಕರ್ತನಾಗಿ ಪಾದಾರ್ಪಣೆ ಮಾಡಿದರು. ಬಳಿಕ ಪಾಂಡವಪುರ ತಾಲೂಕು ರೈತ ಸಂಘದ ಅಧ್ಯಕ್ಷರಾಗಿ, ಮಂಡ್ಯ ಜಿಲ್ಲಾ ರೈತ ಸಂಘದ ಅಧ್ಯಕ್ಷರಾಗಿ ಹಾಗೂ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಗಳಾಗಿ ಆಯ್ಕೆಯಾದ್ರು. ನಂತರ 1999 ರಿಂದ 2012ರವರೆಗೆ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾಗಿ ದುಡಿದರು. ಬಳಿಕ `ಸರ್ವೋದಯ ಕರ್ನಾಟಕ ಪಕ್ಷ’ದಿಂದ ಪಾಂಡವಪುರ ಶಾಸಕರಾಗಿ ಆಯ್ಕೆಯಾದರು.

    ಪ್ರೊಫೆಸರ್ ನಂಜುಂಡಸ್ವಾಮಿಯ ಚಿಂತನೆಗಳು ಕೆ.ಎಸ್. ಪುಟ್ಟಣ್ಣಯ್ಯರನ್ನು ಆಕರ್ಷಿಸಿತ್ತು. ಇನ್ನು ಏಕಾಏಕಿ ಸಾಲಗಾರರ ಮನೆಗಳನ್ನು ಜಪ್ತಿಮಾಡುವ ಪ್ರಕ್ರಿಯೆಗೆ ನಿರ್ಬಂಧ, ಕಬ್ಬಿಗೆ ಬೆಂಬಲ ಬೆಲೆ, ಕಾವೇರಿ ಹೋರಾಟದಲ್ಲೂ ಪುಟ್ಟಣ್ಣಯ್ಯ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು. ಪುಟ್ಟಣ್ಣಯ್ಯ ರೈತ ನಾಯಕ ಮಾತ್ರವಲ್ಲದೇ ಉತ್ತಮ ಕಬಡ್ಡಿ, ಕುಸ್ತಿಪಟುವಾಗಿದ್ದರು. ಇನ್ನು ಶಾಸಕರಾಗಿ ಎಲ್ಲರೂ ಆಡಂಬರದ ಓಡಾಟ ಇಟ್ಟುಕೊಂಡಿದ್ದರೆ, ಪುಟ್ಟಣ್ಣಯ್ಯ ಮಾತ್ರ ರಾಜ್ಯದೆಲ್ಲೆಡೆ ಮಾತ್ರವಲ್ಲದೇ ವಿಧಾನಸಭೆಯೊಳಗೆ ಹಸಿರು ಶಾಲು ಧರಿಸಿಕೊಂಡೇ ಓಡಾಡುತ್ತಿದ್ದರು. ಕಾರ್ಯಕರ್ತರು, ರೈತರ ಮನೆಗೆ ಭೇಟಿ ನೀಡಿದರೆ ಸಾಮಾನ್ಯರಂತೆ ಮಜ್ಜಿಗೆ ಕುಡಿದು ತೆರಳುತ್ತಿದ್ದ ಆದರ್ಶ ರಾಜಕಾರಣಿಯಾಗಿದ್ದರು. ಇಂತಹ ರೈತ ನಾಯಕ ಇಹಲೋಕ ತ್ಯಜಿಸಿದ್ದು, ಅನ್ನದಾತರೇ ಒಂಟಿಯಾದಂತಾಗಿದೆ.

    https://www.youtube.com/watch?v=TuaPJAz2Uyw&feature=youtu.be

    https://www.youtube.com/watch?v=9Mk5JbCzl0I&feature=youtu.be

  • ಮೈಸೂರು ಪಾಲಿಕೆ ಸದಸ್ಯನಿಂದ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

    ಮೈಸೂರು ಪಾಲಿಕೆ ಸದಸ್ಯನಿಂದ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

    ಮೈಸೂರು: ಮೈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದ ಬಳಿ ಸಾಮಾಜಿಕ ಕಾರ್ಯಕರ್ತರೊಬ್ಬರ ಮೇಲೆ ಮಹಾನಗರ ಪಾಲಿಕೆ ಸದಸ್ಯರೊಬ್ಬರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ

    ಮೈಸೂರಿನ ಸುಬ್ಬರಾಯನ ಕೆರೆ ಬಳಿ ಸರ್ಕಾರೇತರ ಸಂಸ್ಥೆಯಿಂದ ‘ನೋ ಜಾಬ್ ನೋ ವೋಟ್’ ಅಭಿಯಾನ ನಡೆಯುತ್ತಿತ್ತು. ಈ ಮೂಲಕ ಸಿಎಂ ಅವರಿಗೆ ಪ್ರತಿಭಟನಾಕಾರರು ವರುಣಾ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಜಾಗೃತಿ ಮೂಡಿಸಲು ಆರಂಭಿಸಿದ್ದರು.

    ಈ ಸಂದರ್ಭದಲ್ಲಿ ಚಂದ್ರ ಮಿಶ್ರಾ ಎಂಬವರು ಸಿಎಂ ಭಾವಚಿತ್ರ ಹಾಕಿಕೊಂಡು ಪ್ರತಿಭಟನೆಗೆ ಸಜ್ಜಾಗಿದ್ದರು. ಈ ವೇಳೆ ವಾರ್ಡ್ ನಂಬರ್ 36 ಪಾಲಿಕೆ ಸದಸ್ಯ ಪ್ರಶಾಂತ್‍ಗೌಡ ಈ ಪ್ರತಿಭಟನೆಗೆ ತಕಾರರು ತೆಗೆದು ಹೋರಾಟಗಾರ ಚಂದ್ರ ಮಿಶ್ರಾ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಬಂದಿದೆ.

    ಈ ಬಗ್ಗೆ ಮೈಸೂರಿನ ಲಕ್ಷ್ಮಿಪುರಂ ಠಾಣೆಯಲ್ಲಿ ಚಂದ್ರ ಮಿಶ್ರಾ ಅವರು ಪ್ರಶಾಂತ್ ಗೌಡರ ವಿರುದ್ಧ ದೂರು ದಾಖಲಿಸಿದ್ದಾರೆ. ಹೋರಾಟಗಾರನ ಮೇಲೆ ಹಲ್ಲೆ ಆರೋಪವನ್ನು ನಗರಪಾಲಿಕೆ ಸದಸ್ಯ ಪ್ರಶಾಂತಗೌಡ ನಿರಾಕರಿಸಿದ್ದಾರೆ. ಅನುಮತಿ ಪಡೆಯದೆ ನನ್ನ ವ್ಯಾಪ್ತಿಯಲ್ಲಿ ಪ್ರತಿಭಟನೆ ಮಾಡಲಾಗುತ್ತಿತ್ತು. ಈ ವೇಳೆ ಪಾಲಿಕೆ ಸಿಬ್ಬಂದಿ ಫ್ಲೆಕ್ಸ್ ತೆರವುಗೊಳಿಸಿದರು. ಫ್ಲೆಕ್ಸ್ ತೆರವುಗೊಳಿಸಲು ಪ್ರತಿಭಟನಾ ನಿರತರಿಂದ ವಿರೋಧ ವ್ಯಕ್ತವಾಯಿತು. ಈ ವೇಳೆ ನಾನು ವಿಚಾರಿಸಲು ಹೋಗಿದ್ದೆ. ಈ ವೇಳೆ ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿದ ಚಂದ್ರ ಮಿಶ್ರ ನನ್ನ ಮೇಲೆ ಹಲ್ಲೆಗೆ ಯತ್ನಿಸಿದರು. ಈ ವೇಳೆ ಸಾರ್ವಜನಿಕರೇ ಚಂದ್ರ ಮಿಶ್ರರನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ವೇಳೆ ಹಲ್ಲೆ ನಡೆದಿರಬಹುದು ಎಂದು ಹೇಳಿದ್ದಾರೆ.

    https://www.youtube.com/watch?v=7akX9PABrmk

  • ಮಹದಾಯಿ ಹೋರಾಟಗಾರರಿಗೆ ಸಮನ್ಸ್- ಅಂಬ್ಯುಲೆನ್ಸ್ ಸಿಬ್ಬಂದಿ, ಸೈನಿಕ, ಎಂಜಿನೀಯರ್‍ಗೂ ನೋಟಿಸ್

    ಮಹದಾಯಿ ಹೋರಾಟಗಾರರಿಗೆ ಸಮನ್ಸ್- ಅಂಬ್ಯುಲೆನ್ಸ್ ಸಿಬ್ಬಂದಿ, ಸೈನಿಕ, ಎಂಜಿನೀಯರ್‍ಗೂ ನೋಟಿಸ್

    ಗದಗ: ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರಿಗೆ ಮತ್ತೆ ನರಗುಂದ ಜೆಎಮ್‍ಎಫ್‍ಸಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ನರಗುಂದ ತಾಲೂಕಿನ 32 ರೈತರು ಇಂದೇ ಜೆಎಮ್‍ಎಫ್‍ಸಿ ಕೋರ್ಟ್‍ಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ.

    ವಿಪರ್ಯಾಸವೆಂದರೆ ಹೊರಾಟದಲ್ಲಿ ಇಲ್ಲದೆ ಇರುವವರ ಮೇಲೆಯೂ ಕೇಸ್ ದಾಖಲಿಸಿ ಸಮನ್ಸ್ ಜಾರಿ ಮಾಡಲಾಗಿದೆ. 108 ಸಿಬ್ಬಂದಿ, ಸೈನಿಕ ಹಾಗೂ ಎಂಜಿನೀಯರ್ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ.

    ನರಗುಂದ ತಾಲೂಕಿನ ಜಗಾಪೂರ ಗ್ರಾಮದ ಸೈನಿಕ ಶಂಕರಗೌಡ ಸಿದ್ದನಗೌಡ್ರ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅದೇ ಗ್ರಾಮದ ಕುಮಾರ ಬಾರಕೇರ್ ಉಡಪಿಯಲ್ಲಿ 108 ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದಾರೆ. ಇನ್ನು ರೋಣ ಮೂಲದ ಚರಣ್ ರಾಜ್ ಜಾಣಮಟ್ಟಿ ತೊರಣಗಲ್ ನಲ್ಲಿ ಎಂಜನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೂ ಸಮನ್ಸ್ ಜಾರಿಯಾಗಿರುವುದು ದುರದೃಷ್ಟಕರ.

    ಹೋರಾಟಗಾರರ ಮೇಲೆ ಐಪಿಸಿ ಕಲಂ 143, 147, 323, 353, 427, 436, 504, 506, 149 ರ ಕೇಸ್ ದಾಖಲು ಮಾಡಿದೆ. ಹಿಂದೆ ಸಿಎಂ ಸಿದ್ದರಾಮಯ್ಯನವರು ರೈತ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆದುಕೊಳ್ಳುವುದಾಗಿ ಹೇಳಿದ್ದರು. ಆದರೆ ಮತ್ತೆ ನೋಟೀಸ್ ನೀಡಿ ಇಂದೇ ಕೋರ್ಟ್ ಗೆ ಹಾಜರಾಗುವಂತೆ ಆದೇಶಿಸಿದ್ದು, ಸರ್ಕಾರದ ನಡಾವಳಿಗಳನ್ನ ಖಂಡಿಸಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.