Tag: ಹೌರಾ

  • ಹಳಿ ತಪ್ಪಿದ ರೈಲಿಗೆ ಯಶವಂತಪುರದಿಂದ ಸಾಗುತ್ತಿದ್ದ ರೈಲು ಡಿಕ್ಕಿ – 50 ಸಾವು

    ಹಳಿ ತಪ್ಪಿದ ರೈಲಿಗೆ ಯಶವಂತಪುರದಿಂದ ಸಾಗುತ್ತಿದ್ದ ರೈಲು ಡಿಕ್ಕಿ – 50 ಸಾವು

    ಭುವನೇಶ್ವರ: ಒಡಿಶಾದ (Odisha) ಬಾಲಸೋರ್ (Balasore) ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು (Coromandel Express Train) ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ ಬೆನ್ನಲ್ಲೇ ಯಶವಂತಪುರದಿಂದ (Yeshwantpur) ಹೌರಾದೆಡೆಗೆ (Howrah) ಸಾಗುತ್ತಿದ್ದ ಮತ್ತೊಂದು ರೈಲು (Train) ಅದೇ ಮಾರ್ಗವಾಗಿ ಸಾಗುತ್ತಿದ್ದಾಗ ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೇ ವಕ್ತಾರ ಅಮಿತಾಬ್ ಶರ್ಮಾ, ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್‌ನ 10-12 ಬೋಗಿಗಳು ಬಾಲೇಶ್ವರ ಬಳಿ ಮತ್ತೊಂದು ಹಳಿ ಮೇಲೆ ಬಿದ್ದಿತ್ತು. ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ 3-4 ಬೋಗಿಗಳು ಹಳಿತಪ್ಪಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ – ಹಲವರ ಸಾವಿನ ಶಂಕೆ

    ಸರಣಿ ಅಪಘಾತದಲ್ಲಿ ರೈಲುಗಳ ಬೋಗಿಯೊಳಗಡೆ ಹಲವರು ಸಿಕ್ಕಿಬಿದ್ದಿರುವುದಾಗಿ ವರದಿಗಳು ತಿಳಿಸಿವೆ. ಈಗಾಗಲೇ 50 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿ ಬಿದ್ದಿರುವುದರಿಂದ ಸಾವು ನೋವುಗಳ ಸಂಖ್ಯೆ ಹೆಚ್ಚುವ ಸಾದ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 200 ಯೂನಿಟ್ ಫ್ರೀ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ – ವಾರ್ಷಿಕ ಸರಾಸರಿ ಅಸ್ತ್ರ ಬಳಸಿ ಬಿಲ್ ವಸೂಲಿ

    ಸಹಾಯವಾಣಿ ಸಂಖ್ಯೆಗಳು:
    ಹೌರಾ: 033-26382217
    ಖರಗ್‌ಪುರ: 8972073925 & 9332392339
    ಬಾಲಸೋರ್: 8249591559 & 7978418322
    ಶಾಲಿಮಾರ್: 9903370746

  • ಅಗಂತುಕರ ಗುಂಡಿಗೆ ಖ್ಯಾತ ನಟಿ ರಿಯಾ ಕುಮಾರಿ ಬಲಿ

    ಅಗಂತುಕರ ಗುಂಡಿಗೆ ಖ್ಯಾತ ನಟಿ ರಿಯಾ ಕುಮಾರಿ ಬಲಿ

    ಟಿಯರ ಸಾವಿನ ಸರದಿ ಮುಂದುವರಿದಿದೆ. ಮೊನ್ನೆಯಷ್ಟೇ ಹಿಂದಿ ಕಿರುತೆರೆಯ ನಟಿ ತುನಿಷಾ ಶೂಟಿಂಗ್ ಸೆಟ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿನ್ನೆ ಯೂಟ್ಯೂಬ್ ಕಲಾವಿದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಜಾರ್ಖಂಡ್ ರಾಜ್ಯದ ಹೆಸರಾಂತ ನಟಿ ರಿಯಾ ಕುಮಾರಿಯನ್ನು ಅಗಂತುಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಸುದ್ದಿ ಜಾರ್ಖಂಡ್ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.

    ಈ ಕುರಿತು ಸ್ವತಃ ನಟಿಯ ಪತಿಯೇ ಹೇಳಿಕೆ ನೀಡಿದ್ದು, ತಮ್ಮ ಪುತ್ರಿ ಮತ್ತು ಪತ್ನಿ ಜೊತೆ ರಾಂಚಿಯಿಂದ ಕೊಲ್ಕತ್ತಾಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಪಶ್ಚಿಮ ಬಂಗಾಳದ ಹೌರಾದಲ್ಲಿ ವಿಶ್ರಾಂತಿಗಾಗಿ ಮಹಿಷ್ರೇಕಾ ಬ್ರಿಡ್ಜ್‌ ಬಳಿ ಕಾರು ನಿಲ್ಲಿಸಿದ್ದಾರೆ. ಆಗ ಬೈಕಿನಲ್ಲಿ ಬಂದ ಮೂವರು ದರೋಡೆಗೆ ಯತ್ನಿಸಿದ್ದಾರೆ. ದರೋಡೆಕೋರರನ್ನು ತಡೆಯಲು ಬಂದಿದ್ದ ರಿಯಾ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದಿವ್ಯಾಳ ಆಸೆಯಂತೆ ದೊಡ್ಮನೆಗೆ ಎಂಟ್ರಿ ಕೊಟ್ಟ ಅರವಿಂದ್ ಕೆ.ಪಿ

    ಕೂಡಲೇ ರಿಯಾ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿದಿಲ್ಲ. ಕಿವಿಯೊಳಗೆ ಬುಲೆಟ್ ಹೊಕ್ಕಿದ್ದು, ತೀವ್ರ ಗಾಯವಾದ ಹಿನ್ನೆಲೆಯಲ್ಲಿ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಪತಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ಹಿಂಸಾಚಾರ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

    ಹಿಂಸಾಚಾರ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

    ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ.

    ಇದೇ ವೇಳೆ ಗಲಭೆ ಪೀಡಿತ ಪ್ರದೇಶವಾದ ಹೌರಾ ಜಿಲ್ಲೆಗೆ ಭೇಟಿ ನೀಡಲು ಯತ್ನಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್‌ನನ್ನು ಪೊಲೀಸರು ಬಂಧಿಸಿ, ಸುಮಾರು ನಾಲ್ಕು ಗಂಟೆಗಳ ಬಳಿಕ ಬಿಡುಗಡೆಗೊಳಿಸಿದ್ದಾರೆ. ಹೌರಾ ಜಿಲ್ಲೆಯಲ್ಲಿ ಹಿಂಸಾತ್ಮಕ ಪತ್ರಿಭಟನೆ ನಡೆಯುತ್ತಿದ್ದರಿಂದ ಮಜುಂದಾರ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ

    ಬಿಡುಗಡೆಯಾದ ಬಳಿಕ ಮಜುಂದಾರ್ ಇತರ ಬಿಜೆಪಿ ನಾಯಕರೊಂದಿಗೆ ಸೇರಿ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಭೇಟಿಯಾಗಿದ್ದಾರೆ. ಹೌರಾ ಮತ್ತು ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ರಾಜ್ಯಪಾಲರಿಗೆ ಜ್ಞಾಪನಾ ಪತ್ರ ಸಲ್ಲಿಸಿ ಬಂಗಾಳ ರಾಜ್ಯದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸುವಂತೆ ಕೋರಿದ್ದಾರೆ.

    ಜೆ.ಪಿ.ನಡ್ಡಾ ಖಂಡನೆ: ಮಜುಂದಾರ್ ಬಂಧನವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಖಂಡಿಸಿದ್ದಾರೆ. ಬಂಗಾಳ ಸರ್ಕಾರವು ಅಪರಾಧಿಗಳ ಉತ್ಸಾಹವನ್ನು ಹೆಚ್ಚಿಸುತ್ತಿದೆ. ಸಮಾಜ ವಿರೋಧಿಗಳಿಗೆ ಆಶ್ರಯ ನೀಡುತ್ತಿದೆ. ಮತ್ತೊಂದೆಡೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ಜನರ ಹಕ್ಕುಗಳ ವಿರುದ್ಧ ಹೋರಾಡುವವರ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್ 

    ಹೌರಾ ಜಿಲ್ಲೆಯ ಪಾಂಚ್ಲಾದಲ್ಲಿ ಹಿಂಸಾಚಾರ ನಡೆದಿರುವ ಕುರಿತು ವರದಿಗಳಾಗಿವೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದು, ಕಲ್ಲು ಹಾಗೂ ಇಟ್ಟಿಗೆಗಳನ್ನು ಎಸೆದಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಪಂಚ್ಲಾ ಮಾರುಕಟ್ಟೆಯ ಸಮೀಪದ ಕೆಲ ಅಂಗಡಿ ಹಾಗೂ ಮನೆಗಳನ್ನು ದರೋಡೆ ಮಾಡಲಾಗಿದೆ. ಅಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

    ನಿನ್ನೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೌರಾ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೆಲ ರಾಜಕೀಯ ಪಕ್ಷಗಳು ಗಲಭೆಗಳನ್ನು ಪ್ರಚೋದಿಸಲು ಯತ್ನಿಸುತ್ತಿವೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.