Tag: ಹ್ಯಾಕರ್ ಶ್ರೀಕಿ

  • ಬಿಟ್ ಕಾಯಿನ್ ಹಗರಣ ತನಿಖೆ ಪುನಾರಂಭ ಮಾಡ್ತೀವಿ: ಜಿ.ಪರಮೇಶ್ವರ್

    ಬಿಟ್ ಕಾಯಿನ್ ಹಗರಣ ತನಿಖೆ ಪುನಾರಂಭ ಮಾಡ್ತೀವಿ: ಜಿ.ಪರಮೇಶ್ವರ್

    ಬೆಂಗಳೂರು: ಬಿಟ್ ಕಾಯಿನ್‌ ಹಗರಣ (Bitcoin Scam) ಮರು ತನಿಖೆಗೆ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (Dr G.Parameshwara) ಹೇಳಿದ್ದಾರೆ.

    ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡುತ್ತೇವೆ.‌ ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು. ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆಯಿಲ್ಲ : ಸಿದ್ದರಾಮಯ್ಯ ವಾಗ್ದಾಳಿ

    ಸುರ್ಜೇವಾಲ ಅಧಿಕಾರಿಗಳ ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಆ ವೇಳೆ ರಣದೀಪ್ ಸಿಂಗ್ ಸುರ್ಜೇವಾಲ ಬಂದಿದ್ದಾರೆ ಅಷ್ಟೇ. ವಿಧಾನಸೌಧದ ಒಳಗೆ ಸಭೆ ಮಾಡಿದರೆ ತಪ್ಪು. ಖಾಸಗಿ ಹೊಟೇಲ್‌ನಲ್ಲಿ ಡಿ‌.ಕೆ.ಶಿವಕುಮಾರ್ ಸಭೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸುರ್ಜೇವಾಲ ಬಂದಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿಲ್ಲ. ಬಿಜಪಿಯವರು ದೂರು‌ ನೀಡಲಿ. ರಾಜಭವನದವರು ಪರಿಶೀಲನೆ ಮಾಡ್ತಾರೆ ಎಂದಿದ್ದಾರೆ.

    ದಲಿತ ಸಿಎಂ ವಿಚಾರದಲ್ಲಿ ನೀವು ಬಹಳ ಡೀಪ್‌ ಆಗಿ ಹೋಗುವ ಅಗತ್ಯವಿಲ್ಲ. ನಮ್ಮ ಸಮುದಾಯಕ್ಕೆ ಧೈರ್ಯ ತುಂಬುವ ನಿಟ್ಟಿನಲ್ಲಿ ಮಾತನಾಡಿದ್ದೇನೆ. ನಾಳೆಯೇ ಹೋಗಿ ನಾವು ಸಿಎಂ ಆಗಬೇಕು ಅಂತ ನಾವು ಕೇಳಲ್ಲ. ಯಾವುದೇ ಗೊಂದಲವಾದ ಮಾತುಗಳು ಅದರಲ್ಲಿ ಇಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ನಿತಿನ್ ಗಡ್ಕರಿ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ- ಶಿವಮೊಗ್ಗ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ಒತ್ತಾಯ

    ಬಿಟ್‌ ಕಾಯಿನ್‌ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಬಿಡುಗಡೆ ಮಾಡಿದ್ದರು.

  • ಹ್ಯಾಕರ್ ಶ್ರೀಕಿ ಪೊಲೀಸರಿಗಿಂತ ಬಹಳ ಬುದ್ಧಿವಂತ: ಗೃಹ ಸಚಿವ

    ಹ್ಯಾಕರ್ ಶ್ರೀಕಿ ಪೊಲೀಸರಿಗಿಂತ ಬಹಳ ಬುದ್ಧಿವಂತ: ಗೃಹ ಸಚಿವ

    ಚಿಕ್ಕಬಳ್ಳಾಪುರ: ಬಿಟ್ ಕಾಯಿನ್ ಹಗರಣದಲ್ಲಿ ಆರೋಪಿತನಾಗಿದ್ದ ಹ್ಯಾಕರ್ ಶ್ರೀಕಿ ಪೊಲೀಸರಗಿಂತ ಬಹಳ ಬುದ್ಧಿವಂತ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಂತರ ಉತ್ತಮ ಕೆಲಸ ಮಾಡಿದ ಸಿಬ್ಬಂದಿಗೆ ಪ್ರಶಸ್ತಿ ಪ್ರದಾನ ಮಾಡುವ ವೇಳೆ ಮಾತನಾಡಿದ ಅವರು, ಶ್ರೀಕಿ ಅರೆಸ್ಟ್ ಆಗೋವರೆಗೂ ಅಂತ ತುಂಬಾ ಬುದ್ಧಿವಂತ ಎಂಬುದು ನಮಗೆ ಗೊತ್ತಿರಲಿಲ್ಲ. ಈ ವಿಚಾರ ಆತ ಆರೆಸ್ಟ್‌ ಆದ ನಂತರವೇ ತಿಳಿಯಿತು. ಆದರೆ ಬುದ್ಧಿವಂತಿಕೆಯಲ್ಲಿ ಆತನಿಗಿಂತ ನಮ್ಮ ಪೊಲೀಸರು ಮುಂದೆ ಇರಬೇಕು. ಅಂತಹ ತಂತ್ರಜ್ಞರು ಪೊಲೀಸ್ ಇಲಾಖೆಗೆ ಅಗತ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೋಕರ್ ವೆಬ್‍ಸೈಟ್ ಹ್ಯಾಕ್ – ಕೋಟ್ಯಂತರ ಹಣ ಮಾಡಿದ್ದ ಕುಖ್ಯಾತ ಹ್ಯಾಕರ್ ಅರೆಸ್ಟ್

    ಈ ವೇಳೆ ನಮ್ಮ ಇಲಾಖೆಯಲ್ಲಿ ಯಾರಾದರೂ ಅಂತಹವರು ಇದ್ದಾರಾ ಅಂತ ಕೇಂದ್ರ ವಲಯ ಐಜಿಪಿಯನ್ನು ಕೇಳಿದರು. ಅಂತಹವರು ಇಲಾಖೆಯಲ್ಲಿ ಇಲ್ಲ, ಹೊರಗೆ ಇದ್ದಾರೆ ಎಂದು ಐಜಿಪಿ ಉತ್ತರಿಸಿದರು. ನಂತರ ಮಾತನಾಡಿದ ಸಚಿವರು, ಪೊಲೀಸ್ ಇಲಾಖೆಯಲ್ಲಿ ಅಂತಹ ನಿಪುಣರ ಅವಶ್ಯಕತೆ ಇದೆ. ಅಂತಹವರನ್ನು ತಯಾರು ಮಾಡಬೇಕು ಎಂದು ತಿಳಿಸಿದ್ದಾರೆ.

    ಶ್ರೀಕೃಷ್ಣ (ಶ್ರೀಕಿ) ಬೆಂಗಳೂರಿನ ನಿವಾಸಿಯಾಗಿದ್ದು, 2014 ರಿಂದ 2017ರವರೆಗೆ ಈತ ನೆದರ್‌ಲ್ಯಾಂಡ್‌ ಆಮ್‌ಸ್ಟರ್‌ಡ್ಯಾಮ್ ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಎಸ್‍ಸಿ ಪದವಿ ಪಡೆದ ಬಳಿಕ ವೆಬ್‍ಸೈಟ್ ಹ್ಯಾಕ್ ಮಾಡಲು ಆರಂಭಿಸಿದ್ದ. ಆರಂಭದಲ್ಲಿ ಸಣ್ಣ ಪಟ್ಟ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಅನುಭವ ಪಡೆದ ಬಳಿಕ ದೊಡ್ಡ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಇದನ್ನೇ ಉದ್ಯೋಗ ಮಾಡಿಕೊಂಡಿದ್ದ. ಇದನ್ನೂ ಓದಿ: ಹ್ಯಾಕಿಂಗ್‌ ಮಾಡಲು ಏಕಾಗ್ರತೆ ಬೇಕು, ಅದಕ್ಕಾಗಿ ಭಗವದ್ಗೀತೆ ಓದುತ್ತೇನೆ – ಹ್ಯಾಕರ್‌ ಶ್ರೀಕಿ

    ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿದ ಬಳಿಕ ಆತ ಬಿಟ್‍ಕಾಯಿನ್ ಬಳಸಿ ಹಣವನ್ನು ಪಡೆಯುತ್ತಿದ್ದ. ಈ ಎಲ್ಲ ಕೆಲಸಕ್ಕೆ ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ. ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ ಕಾರಣ ಈತನ ಮಾಹಿತಿಗಳು ಸಿಗುತ್ತಿರಲಿಲ್ಲ. ಬಿಟ್ ಕಾಯಿನ್ ಮೂಲಕ ಡ್ರಗ್ಸ್ ತರಿಸಿಕೊಂಡು ಬೇಕಾದ ವ್ಯಕ್ತಿಗಳಿಗೆ ನೀಡುತ್ತಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

  • ಬಿಟ್‍ಕಾಯಿನ್ ಹಗರಣಕ್ಕೆ ಸ್ಫೋಟಕ ತಿರುವು – ಪೊಲೀಸ್ ಕಸ್ಟಡಿಯಲ್ಲೇ ಶ್ರೀಕಿಗೆ ಮಾದಕ ದ್ರವ್ಯ!

    ಬಿಟ್‍ಕಾಯಿನ್ ಹಗರಣಕ್ಕೆ ಸ್ಫೋಟಕ ತಿರುವು – ಪೊಲೀಸ್ ಕಸ್ಟಡಿಯಲ್ಲೇ ಶ್ರೀಕಿಗೆ ಮಾದಕ ದ್ರವ್ಯ!

    – ಪೊಲೀಸರ ವಿರುದ್ಧ ಶ್ರೀಕಿ ತಂದೆ ಆರೋಪ

    ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬೆಂಗಳೂರು ಪೊಲೀಸರ ವಿರುದ್ಧವೇ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ ಈ ಸಂಬಂಧ ಹ್ಯಾಕರ್ ಶ್ರೀಕಿ ತಂದೆ ಗೋಪಾಲ್ ರಮೇಶ್ ಕೋರ್ಟ್ ಮೆಟ್ಟಿಲೇರಿದ್ದಾರೆ.

    ಹೌದು. ಹ್ಯಾಕರ್ ಶ್ರೀಕಿಗೆ ಪೊಲೀಸರೇ ಮಾದಕ ದ್ರವ್ಯ ನೀಡಿದ್ದಾರಂತೆ. ಕಸ್ಟಡಿಯಲ್ಲಿದ್ದಾಗಲೇ ಪೊಲೀಸರೇ ಡ್ರಗ್ಸ್ ನೀಡಿದ್ದರು ಎಂದು ನ್ಯಾಯಾಧೀಶರ ಎದುರೇ ಇನ್ಸ್‍ಪೆಕ್ಟರ್ ಚಂದ್ರಾಧರ್ ವಿರುದ್ಧ ಶ್ರೀಕಿ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಶ್ರೀಕಿ ಆರೋಪ ಹಿನ್ನೆಲೆಯಲ್ಲಿ ಮಾದಕದ್ರವ್ಯ ಪರೀಕ್ಷೆಗೆ ಕೋರ್ಟ್ ಆದೇಶ ನೀಡಿದೆ.

    ಮೊದಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಕೋರ್ಟ್ ಆದೇಶಿಸಿತ್ತು. ಆದರೆ ವಿಕ್ಟೋರಿಯಾದಲ್ಲಿ ಕೋವಿಡ್ ವಾರ್ಡ್ ಇದ್ದ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಮಾದಕ ದ್ರವ್ಯ ಪರೀಕ್ಷೆಗೆ ಸೂಚಿಸಿತ್ತು. ನಂತರ ಪೊಲೀಸರ ಮನವಿ ಪರಿಗಣಿಸಿ ಬೌರಿಂಗ್ ಆಸ್ಪತ್ರೆಗೆ ಪರೀಕ್ಷೆಗೆ ಆದೇಶ ನೀಡಿದೆ. ಇದನ್ನೂ ಓದಿ: ಹ್ಯಾಕರ್ ಶ್ರೀಕಿಯಿಂದ 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ

    ಇತ್ತ ಪ್ರಕರಣ ಸಂಬಂಧ ಗೋಪಾಲ್ ರಮೇಶ್ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಪೊಲೀಸರ ವಿರುದ್ಧ ನನ್ನ ಮಗ ಮಾಡಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಎಂದು ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಶ್ರೀಕಿ ತಂದೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶ್ರೀಕಿ ನನಗೆ ಪರಿಚಯ ಇರೋದು ನಿಜ: ಮೊಹಮ್ಮದ್ ನಲಪಾಡ್

    ನನ್ನ ಮಗನಿಂದ ಒತ್ತಾಯಪೂರ್ವಕವಾಗಿ ಬೇರೆ ಕೆಲಸ ಮಾಡಿಸಲು ಯತ್ನ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸರ ವಿರುದ್ಧವೇ ಶ್ರೀಕಿ ತಂದೆ ಸ್ಫೋಟಕ ಆರೋಪ ಮಾಡಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿ ನನ್ನ ಮಗನಿಗೆ ಮಾದಕ ದ್ರವ್ಯ ನೀಡಿದ್ದಾರೆ. ಆತನಿಂದ ಬೆಂಗಳೂರು ಪೊಲೀಸರು ಬಲವಂತವಾಗಿ ಹೇಳಿಕೆ ಪಡೀತಿದ್ದಾರೆ. ಆತನಿಂದ ಏನೋ ಬೇರೆ ಬೇರೆ ಕೆಲಸ ಮಾಡಿಸಲು ಪೊಲೀಸರು ಯತ್ನಿಸ್ತಿದ್ದಾರೆ. ನನ್ನ ಮಗನೇ ಆರೋಪಿಸಿರುವ ಕಾರಣ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಿ. ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಿಸಿ ಎಂದು ಶ್ರೀಕಿ ತಂದೆ ಗೋಪಾಲ್ ರಮೇಶ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

  • ಶ್ರೀಕಿ ಹ್ಯಾಕರ್ ಅಂತ ಗೊತ್ತಿರಲಿಲ್ಲ, ಕಾಲೇಜಿನಲ್ಲಿ ಪರಿಚಯ ಅಷ್ಟೇ: ಉಮರ್ ನಲಪಾಡ್

    ಶ್ರೀಕಿ ಹ್ಯಾಕರ್ ಅಂತ ಗೊತ್ತಿರಲಿಲ್ಲ, ಕಾಲೇಜಿನಲ್ಲಿ ಪರಿಚಯ ಅಷ್ಟೇ: ಉಮರ್ ನಲಪಾಡ್

    ಬೆಂಗಳೂರು: ಶ್ರೀಕಿ ಹ್ಯಾಕರ್ ಅಂತ ಗೊತ್ತಿರಲಿಲ್ಲ. 2017ರಲ್ಲಿ ಬೆಂಗಳೂರಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುವಾಗ ಪರಿಚಯವಾಗಿತ್ತು ಅಷ್ಟೇ ಎಂದು ಶಾಸಕ ಹ್ಯಾರಿಸ್ ಪುತ್ರ ಉಮರ್ ನಲಪಾಡ್ ಸ್ಪಷ್ಟನೆ ನೀಡಿದ್ದಾರೆ.

    ಬಿಟ್ ಕಾಯಿನ್ ಸಂಬಂಧ ಶ್ರೀಕಿಗೂ ಉಮರ್ ಗೂ ನಂಟಿದೆ ಎಂಬ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಅನಗತ್ಯವಾಗಿ ನನ್ನ ಹೆಸರು ತರಲಾಗುತ್ತಿದೆ. ಕಾಲೇಜು ಟೈಂ ನಲ್ಲಿ ಗೊತ್ತಿತ್ತು. 2017 ರಲ್ಲಿ ಮಾಸ್ಟರ್ಸ್ ಸ್ಟಡಿಸ್ ಗೆ ಅಂತ ನಾನು ಲಂಡನ್ ಗೆ ಹೋಗಿದ್ದೆ. ಆ ಗ್ಯಾಪ್ ನಲ್ಲಿ ಏನಾಯ್ತು ಗೊತ್ತಿಲ್ಲ, ಆ ಬಳಿಕದಿಂದ ಟಚ್ ನಲ್ಲಿ ಇರಲಿಲ್ಲ ಎಂದಿದ್ದಾರೆ.

    ಕಾಲೇಜೊಂದರಲ್ಲಿ ಶ್ರೀಕಿ ಪರಿಚಯ ಆಗಿತ್ತು. ಯಾರು ಬಂದ್ರೂ ಸ್ಮೈಲ್ ಮಾಡಿಕೊಂಡು, ಚೆನ್ನಾಗಿರ್ತಿದ್ವಿ. ಯಾರು ಹೇಗಿದ್ದಾರೆ ಅನ್ನೋದು ನಮ್ಗೆ ಗೊತ್ತಿರಲ್ಲ. ನಾವು 10 -15 ಜನ ಸೇರ್ತಿದ್ವಿ. ನಮ್ಮಪ್ಪ ಕಾಂಗ್ರೇಸ್ ಲೀಡರ್ ಅಂತ ಇದೀಗ ಅದರಲ್ಲಿ ನನ್ನ ಹೆಸರು ಮಾತ್ರ ಪ್ರಸ್ತಾಪ ಆಗಿದೆ ಎಂದರು.  ಇದನ್ನೂ ಓದಿ:ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

    ಬಿಟ್ ಕಾಯಿನ್ ವಿಚಾರವಾಗಿ ಪೊಲೀಸರು ಕೂಡ ವಿಚಾರಣೆ ಕರೆದಿಲ್ಲ, ಮಾಹಿತಿನೂ ಕೇಳಿಲ್ಲ. ನಾನೇನು ತಪ್ಪು ಮಾಡಿಲ್ಲ, ಹೋಗೋಣ ಏನಾಗುತ್ತೋ ಆಗುತ್ತೆ ಎಂದು ಉಮರ್ ನಲಪಾಡ್ ತಿಳಿಸಿದ್ದಾರೆ.

  • ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್‌ನವರಿದ್ದರೆ ತನಿಖೆ ಮಾಡಿ ನೇಣಿಗೆ ಹಾಕಲಿ: ಡಿ.ಕೆ.ಶಿವಕುಮಾರ್

    ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್‌ನವರಿದ್ದರೆ ತನಿಖೆ ಮಾಡಿ ನೇಣಿಗೆ ಹಾಕಲಿ: ಡಿ.ಕೆ.ಶಿವಕುಮಾರ್

    ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಯಾವುದೇ ಅವ್ಯವಹಾರದಲ್ಲಿ ತೊಡಗಿದ್ದರೆ ಅವರನ್ನು ಕಾನೂನು ಪ್ರಕಾರ ಗಲ್ಲಿಗೆ ಹಾಕಲಿ. ನಮ್ಮಿಂದ ಯಾವುದೇ ಅಭ್ಯಂತರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (KPCC President DK Shivakumar) ಹೇಳಿದ್ದಾರೆ.

    ಬಿಟ್ ಕಾಯಿನ್ (Bit Coin) ವಿಚಾರವಾಗಿ ಕಾಂಗ್ರೆಸ್ ಪಕ್ಷದ ಬಳಿ ಸಾಕ್ಷಿ ಇದ್ದರೆ ನೀಡಲಿ ಎಂಬ ಬಿಜೆಪಿ ಮುಖಂಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಟ್ ಕಾಯಿನ್ ವಿಚಾರವಾಗಿ ಪೊಲೀಸ್ ದಾಖಲೆ ಮಾಡಿರುವ ಎಫ್ಐಆರ್, ಮಾಧ್ಯಮಗಳಲ್ಲಿ ಕೇಳಿ ಬಂದಿರುವ ಹೆಸರುಗಳು, ಪ್ರಧಾನ ಮಂತ್ರಿಗಳಿಗೆ ಹೋಗಿರುವ ದೂರುಗಳು, ಯಾರನ್ನು ವಿವಿಧ ಪ್ರಕರಣದಲ್ಲಿ ಬಂಧಿಸಿ ವಿಚಾರಣೆ ಮಾಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಬಹಿರಂಗ ಮಾಡಲಿ. ಕಾಂಗ್ರೆಸ್ ಪಕ್ಷದ ನಾಯಕರು ಇದರಲ್ಲಿ ಭಾಗಿಯಾಗಿದ್ದರೆ ಅವರನ್ನು ಕೂಡ ಬಂಧಿಸಿ ವಿಚಾರಣೆ ನಡೆಸಲಿ. ನಾವು ಯಾರ ಬೆಂಬಲಕ್ಕೂ ನಿಲ್ಲುವುದಿಲ್ಲ ಎಂದರು. ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

    ಹಿಂದೆ ಸಂದೀಪ್ ಪಾಟೀಲ್ ಅವರು ಮಾಧ್ಯಮಗೋಷ್ಠಿ ನಡೆಸಿದ್ದು, ಇಡಿಗೆ ಪ್ರಕರಣ ವಹಿಸಿರುವ ಬಗ್ಗೆ ಸಿಎಂ ಹೇಳಿಕೆ ನೀಡಿದ್ದಾರೆ. ಇದೆಲ್ಲದರ ಮಾಹಿತಿಯನ್ನು ನೀಡಲಿ. ನಾವು ಕೂಡ ಈ ವಿಚಾರವಾಗಿ ಆಂತರಿಕ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದು, ನಾವು ಕೂಡಾ ಸೂಕ್ತ ಸಮಯದಲ್ಲಿ ನಮ್ಮ ಬಳಿ ಇರುವ ದಾಖಲೆಗಳನ್ನು ನೀಡುತ್ತೇವೆ. ನಾವು ತನಿಖೆ ಮಾಡಿಸುವುದು ಬೇರೆ ವಿಚಾರ. ಬಿಜೆಪಿ ಅಧಿಕಾರದಲ್ಲಿದೆ. ಅವರ ಕೈಯಲ್ಲಿ ಸರ್ಕಾರ ಇದೆ. ಗೃಹಮಂತ್ರಿಗಳು ಇದ್ದಾರೆ. ರಾಜ್ಯದ ಜನರಿಂದ ಅವರು ಮುಚ್ಚಿಟ್ಟಿರುವ ಸತ್ಯಾಂಶ ಹೊರಗಿಡಲಿ ಎಂದರು.

    ವಿದ್ವತ್ ಹಲ್ಲೆ ಪ್ರಕರಣದಲ್ಲಿ ಶ್ರೀಕಿ ಜತೆ ನಲಪಾಡ್ ಆರೋಪಿಯಾಗಿದ್ದರೂ ಅವರ ವಿರುದ್ಧ ಯಾಕೆ ವಿಚಾರಣೆ ಮಾಡಲಿಲ್ಲ ಎಂಬ ಬಿಜೆಪಿ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ನಾನು ಗೃಹಮಂತ್ರಿಗಳಿಂದ ಹೇಳಿಕೆ ಬಯಸುತ್ತೇನೆ. ಮಾಧ್ಯಮಗಳ ಮೂಲಕ ನಾನು ಯಾರ ಹೆಸರನ್ನೂ ಕೇಳಲು ಬಯಸುವುದಿಲ್ಲ. ಸಿಎಂ ಹಾಗೂ ಗೃಹ ಸಚಿವರಿಗೆ ಮಾಹಿತಿ ಇದ್ದರೆ ಅವರು ಹೇಳಲಿ. ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದರು. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪರಸ್ಪರರನ್ನು ಹಾಡಿ ಹೊಗಳಿಕೊಂಡ ಸಿದ್ದು-ಜಿಟಿಡಿ

    ಜಾಮೀನು ಪಡೆದಿದ್ದ ಶ್ರೀಕಿ ಅವರನ್ನು ಮತ್ತೆ ಬಂಧಿಸಿರುವುದರ ಹಿಂದೆ ಬೇರೆಯವರ ಕೈವಾಡ ಇದೆಯೇ ಎಂಬ ಪ್ರಶ್ನೆಗೆ, ಈ ಪ್ರಕರಣದಲ್ಲಿ ಎಷ್ಟು ಎಫ್ಐಆರ್ ಬಂದಿದೆ. ಯಾರ ಮೇಲೆ ಪ್ರಕರಣ ದಾಖಲಾಗಿದೆ, ಹೈಕೋರ್ಟ್‌ನಲ್ಲಿದ್ದ ಪ್ರಕರಣ ಹಿಂಪಡೆದಿದ್ದು ಯಾಕೆ ಎಂಬ ವಿಚಾರಗಳನ್ನು ಬಹಿರಂಗ ಪಡಿಸಲಿ. ಸಮಯ ಬಂದಾಗ ಪಕ್ಷ ಚರ್ಚೆ ಮಾಡಿ ತನ್ನ ತೀರ್ಮಾನ ಕೈಗೊಳ್ಳಲಿದೆ. ಸರ್ಕಾರ ಈ ಪ್ರಕರಣದಲ್ಲಿ ಪಂಚನಾಮೆಯಿಂದ ಹಿಡಿದು ಜಾರಿ ನಿರ್ದೇಶನಾಲಯ (ED)ಕ್ಕೆ ಪ್ರಕರಣ ವಹಿಸಿರುವವರೆಗೂ ಸಂಪೂರ್ಣ ಮಾಹಿತಿ ನೀಡಲಿ ಎಂದು ಉತ್ತರಿಸಿದರು.

  • ಕುಖ್ಯಾತ ಹ್ಯಾಕರ್ ಶ್ರೀಕಿ ಬಂಧನ

    ಕುಖ್ಯಾತ ಹ್ಯಾಕರ್ ಶ್ರೀಕಿ ಬಂಧನ

    ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ವಿಚಾರ ಚರ್ಚೆಯಲ್ಲಿರುವಾಗಲೇ ಕುಖ್ಯಾತ ಹ್ಯಾಕರ್ ಶ್ರೀಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಜೀವನಭೀಮಾನಗರ ಪೊಲೀಸರು ನಿನ್ನೆ ಮಧ್ಯಾಹ್ನ ಶ್ರೀಕಿ ಮತ್ತು ಸ್ನೇಹಿತ ವಿಷ್ಣು ಭಟ್‍ನನ್ನು ಬಂಧಿಸಿದ್ದಾರೆ.

    ನಿನ್ನೆ ತಡರಾತ್ರಿವರೆಗೆ ಶ್ರೀಕಿ ವಿಚಾರಣೆ ನಡೆಸಿದ್ದು, ಆತನ 2 ಮೊಬೈಲನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಜೊತೆಗೆ ಶ್ರೀಕಿಯ ನಾಲ್ಕು ಲ್ಯಾಪ್ ಟ್ಯಾಪ್‍ಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರಸ್ತುತ ಇವರ ವಿರುದ್ಧ ಐಪಿಸಿ ಸೆಕ್ಷನ್ 504, 348, 323 ಅಡಿ ಪ್ರಕರಣ ದಾಖಲಾಗಿದ್ದು, ಇಂದು ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಮೂರನೇ ಪೀಠ ಅಸ್ತಿತ್ವಕ್ಕೆ..?

    ಪ್ರಾಥಮಿಕ ತನಿಖೆಯಲ್ಲಿ ವಿಷ್ಣು ಭಟ್ ಹಲ್ಲೆ ಮಾಡಿರೋದು ಸಾಬೀತು ಆಗಿದ್ದು, ಹಲ್ಲೆ ವೇಳೆ ಶ್ರೀಕಿ ವಿಷ್ಣು ಜೊತೆಗಿದ್ದ, ಆದ್ರೆ ಹಲ್ಲೆ ಮಾಡಿಲ್ಲ ಅನ್ನೋ ಮಾಹಿತಿ ಕೂಡ ಪೊಲೀಸರಿಗೆ ಲಭ್ಯವಾಗಿದೆ. ಪ್ರಸ್ತುತ ವಿಷ್ಣು ಭಟ್ ಮತ್ತು ಶ್ರೀಕಿ ಮೆಡಿಕಲ್ ಚೆಕಪ್ ಮಾಡಿಸಿರೋ ಪೊಲೀಸರು ಮೆಡಿಕಲ್ ರಿಪೋರ್ಟ್ ಗಾಗಿ ಕಾಯುತ್ತಿದ್ದಾರೆ.

    ಮೆಡಿಕಲ್ ನಲ್ಲಿ ಮಾದಕ ವಸ್ತು ಸೇವನೆ ಪಕ್ಕಾ ಆದ್ರೆ ಎನ್‍ಡಿಪಿಎಸ್ ಕೇಸ್ ದಾಖಲು ಮಾಡುವ ಸಿದ್ಧತೆಯಲ್ಲಿ ಪೊಲೀಸರು ಇದ್ದಾರೆ. ಬಿಟ್ ಕಾಯಿನ್ ವಿಚಾರದಲ್ಲಿ ರಾಜಕೀಯ ವಲಯದಲ್ಲಿ ಹ್ಯಾಕರ್ ಶ್ರೀಕಿ ಹೆಸರು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.