Tag: ಹ್ಯಾರೀಸ್

  • ಆಪರೇಷನ್ ಬುಲ್ಡೋಜರ್‌ಗೆ 3ನೇ ದಿನ- ಇಂದೂ ನಡೆಯಲಿದೆ ನಲಪಾಡ್ ಅಕಾಡೆಮಿ ಒತ್ತುವರಿ ತೆರವು!

    ಆಪರೇಷನ್ ಬುಲ್ಡೋಜರ್‌ಗೆ 3ನೇ ದಿನ- ಇಂದೂ ನಡೆಯಲಿದೆ ನಲಪಾಡ್ ಅಕಾಡೆಮಿ ಒತ್ತುವರಿ ತೆರವು!

    ಬೆಂಗಳೂರು: ರಾಜಕಾಲುವೆ ಒತ್ತುವರಿದಾರರ ಹಿಟ್ ಲಿಸ್ಟ್ ನಲ್ಲಿ ಕಾಂಗ್ರೆಸ್ ಯುವನಾಯಕ ಮಾಲೀಕತ್ವದ ನಲಪಾಡ್ ಅಕಾಡೆಮಿ (Nalapad Academy) ಯಲ್ಲಿ ನಿನ್ನೆ (ಮಂಗಳವಾರ) ರಾಜಕಾಲುವೆ ತೆರವು ಕಾರ್ಯಾಚರಣೆ ವೇಳೆ ಹೈಡ್ರಾಮವೇ ನಡೆಯಿತು. ದೊಡ್ಡವರ ಮುಂದೆ ಜೆಸಿಬಿ (JCB) ಘರ್ಜನೆ ಸೈಲೆಂಟ್ ಆಗಿತ್ತು. ಇಂದೂ ಕೂಡ ನಲಪಾಡ್ ಅಕಾಡೆಮಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಪ್ರಹಸನ ಮುಂದುವರಿಯಲಿದೆ.

    ಜಸ್ಟ್ ಕಾಪೌಂಡ್ ಗೋಡೆ ಜೆಸಿಬಿಯಿಂದ ಟಚ್ ಮಾಡ್ತಿದ್ದಂತೆ ನಲಪಾಡ್ ಅಕಾಡೆಮಿಯ ಮ್ಯಾನೇಜರ್ ಕಿರುಚಾಟ, ಕಾರ್ಯಾಚರಣೆ ಸ್ಥಗಿತ. ಮತ್ತೆ ಮಾಧ್ಯಮ ಪ್ರಶ್ನೆ ಮಾಡ್ತಿದ್ದಂತೆ ಕಾರ್ಯಾಚರಣೆ ಆರಂಭ. ಹೀಗೆ ನಿನ್ನೆ ಚಲ್ಲಘಟ್ಟದ. ಶಾಸಕ ಹ್ಯಾರಿಸ್ (Harris) ಹಾಗೂ ನಲಪಾಡ್ ಮಾಲೀಕತ್ವದ ನಲಪಾಡ್ ಅಕಾಡೆಮಿಯ ತೆರವು ಕಾರ್ಯಾಚರಣೆ ವೇಳೆ ದೊಡ್ಡ ಹೈಡ್ರಾಮವೇ ನಡೆದುಹೋಯ್ತು. ಕೊನೆಗೂ ಜೆಸಿಬಿಯಿಂದ ರಾಜಕಾಲುವೆ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಇಂದೂ ಕೂಡ ನಡೆಯಲಿದೆ. 150 ಮೀಟರ್ ಉದ್ದ 2.5 ಮೀಟರ್ ಅಗಲ ವಿರುವ ರಾಜಕಾಲುವೆ ಒತ್ತುವರಿ ಸಧ್ಯ 50 ಮೀಟರ್ ತೆರವು ಆಗಿದೆ. ಇಂದು ಉಳಿದ ಭಾಗದಲ್ಲಿಒತ್ತುವರಿ ತೆರವು ನಡೆಯಲಿದೆ. ಇದನ್ನೂ ಓದಿ: BBMP ಜೆಸಿಬಿ ಆಪರೇಷನ್ – ಒಂದೇ ವಾರದಲ್ಲಿ ನಲಪಾಡ್ ನಾಟಕ ಬಯಲು

    ನಿನ್ನೆ ಕ್ಷಣಕ್ಕೊಂದು ನಾಟಕವಾಡಿ ರಾಜಕಾಲುವೆ (Rajakaluve) ಒತ್ತುವರಿ ಮಾಡೇ ಇಲ್ಲ ಅಂತಾ ಶಾಸಕ ಹ್ಯಾರಿಸ್ ಸೇರಿದಂತೆ ಅಕಾಡೆಮಿಯ ಸಿಬ್ಬಂದಿಯೂ ವಾದ ಮಾಡ್ತಿದ್ರು. ಹೀಗಾಗಿ ಇಂದಿನ ಕಾರ್ಯಾಚರಣೆ ವೇಳೆಯೂ ಹೈಡ್ರಾಮ ನಡೆಯೋದು ಖಚಿತವಾಗಿದೆ. ಇನ್ನು ಒತ್ತುವರಿ ಭಾಗದಲ್ಲಿ ಕಾಪೌಂಡ್ ಕಟ್ಟಿ ಫೆನ್ಸಿಂಗ್ ಕೂಡ ಮಾಡಲಾಗಿದೆ. ಇದನ್ನೂ ಓದಿ: ಅಲ್ಲಿ ಪ್ರವಾಹ ಆಗಿಲ್ಲ, ಆ ಮೋರಿ ಎಲ್ಲಿದೆ, ಎಲ್ಲಿಗೆ ಹೋಗಿ ತಲುಪುತ್ತೆ ಗೊತ್ತಿಲ್ಲ: ಹ್ಯಾರಿಸ್

    ಬಡವರ ಮನೆ ಮುಂದೆ ಬಾಹುಬಲಿ, ಶ್ರೀಮಂತರ ಮನೆ ಮುಂದೆ ಇಲಿಯಂತೆ ಬಿಬಿಎಂಪಿ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ಪ್ರಭಾವಿಗಳನ್ನು ಕಂಡ್ರೆ ಒತ್ತುವರಿಯೇ ಕೈಬಿಟ್ಟು ಕೈಕಟ್ಟಿ ನಿಂತುಬಿಡ್ತಾರೆ. ಹೀಗಾಗಿಯೇ ಜನರಿಗೆ ಅಪರೇಷನ್ ಬುಲ್ಡೋಜರ್ (Operation Buldozer) ಬಗ್ಗೆ ಅಪನಂಬಿಕೆ ಇರೋದು. ಇನ್ನೊಂದು ಕಡೆ ಜನ್ರಿಗೆ ಮಾದರಿಯಾಗಬೇಕಾಗಿದ್ದ ಜನಪ್ರತಿನಿಧಿಗಳೇ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವು ವಿಷಾದನೀಯ. ಇದನ್ನೂ ಓದಿ: ಪಬ್ಲಿಕ್‌ ಟಿವಿ ಇಂಪ್ಯಾಕ್ಟ್‌ – ನಲಪಾಡ್‌ ಅಕಾಡೆಮಿಗೆ ಜೆಸಿಬಿ ಗುನ್ನಾ!

    Live Tv
    [brid partner=56869869 player=32851 video=960834 autoplay=true]

  • ನಮ್ಮ-ನಿಮ್ಮೆಲ್ಲರ ರಕ್ತ ಒಂದೇ ಬಣ್ಣದ್ದು, ಮೂರು ದಿನಗಳ ಬಾಳಲ್ಲಿ ಏಕೆ ಕಿತ್ತಾಟ?: ಹ್ಯಾರೀಸ್

    ನಮ್ಮ-ನಿಮ್ಮೆಲ್ಲರ ರಕ್ತ ಒಂದೇ ಬಣ್ಣದ್ದು, ಮೂರು ದಿನಗಳ ಬಾಳಲ್ಲಿ ಏಕೆ ಕಿತ್ತಾಟ?: ಹ್ಯಾರೀಸ್

    ಬೆಂಗಳೂರು: ನಮ್ಮ ನಿಮ್ಮೆಲ್ಲರ ರಕ್ತ ಒಂದೇ ಬಣ್ಣದಾಗಿದ್ದು, ಹೀಗಿರುವಾಗ ಮೂರು ದಿನಗಳ ಬಾಳಲ್ಲಿ ಕಿತ್ತಾಟ ಏಕೆ ಎಂದು ಕಾಂಗ್ರೆಸ್ ಶಾಸಕ ಹ್ಯಾರೀಸ್ ಹೇಳಿದರು.

    ಇಂದು ವಿಧಾನಸಭೆಯಲ್ಲಿ ಹಿಜಬ್ ಬಗ್ಗೆ ಪರೋಕ್ಷ ಪ್ರಸ್ತಾಪ ಮಾಡಿದ ಅವರು, ನಾವೆಲ್ಲರೂ ಅಣ್ಣ-ತಮ್ಮಂದಿರಂತೆ ಬಾಳೋಣ. ನಮ್ಮ-ನಿಮ್ಮೆಲ್ಲರ ರಕ್ತ ಒಂದೇ ಬಣ್ಣದ್ದು. ಮೂರು ದಿನಗಳ ಬಾಳಲ್ಲಿ ಏಕೆ ಕಿತ್ತಾಟ ಎಂದು ಬಿಜೆಪಿ ನಾಯಕರಿಗೆ ಮಾತಲ್ಲೇ ತಿವಿದರು.

    ನಮ್ಮ ನಿಮ್ಮ ರಕ್ತವೂ ಒಂದೇ ಬಣ್ಣದ್ದು, ನಮ್ಮೆಲ್ಲರ ಡಿಎನ್‍ಎ ಟೆಸ್ಟ್ ಮಾಡಿ, ಎಲ್ಲ ಒಂದೇ ಇರುತ್ತೆ. ಅನ್ಯೋನ್ಯತೆಯಿಂದ ಅಣ್ಣ-ತಮ್ಮಂದಿರಾಗಿ ಬಾಳೋಣ. ಶಾಲೆಯಲ್ಲಿ ಎಲ್ಲ ಭಾರತೀಯರು ಅಣ್ಣ-ತಮ್ಮಂದಿರು ಎಂದು ಪ್ರಾರ್ಥನೆಯಲ್ಲಿತ್ತು. ಇದೇ ಪ್ರಾರ್ಥನೆ ಇಂದಿಗೂ ನಮ್ಮ ಮನದಲ್ಲಿ ಇದೆ ಎಂದರು. ಇದನ್ನೂ ಓದಿ: ಮೂವರು ಶಾಸಕರು ಬಿಜೆಪಿಗೆ ಸೇರ್ಪಡೆ – ಸಚಿವ ಮುಖೇಶ್ ನಾಮಫಲಕ ನಾಪತ್ತೆ

    ನಮ್ಮಲ್ಲಿ ವ್ಯತ್ಯಾಸ ತರುವ ಪ್ರಯತ್ನ ಏಕೆ? ಅಧಿಕಾರಕ್ಕಾಗಿನಾ? ನಾವು ಸಾವಿರ ವರ್ಷ ಬದುಕಲು ಸಾಧ್ಯನಾ..?. ಸಿಗುವ ಮೂರು ದಿನಗಳಲ್ಲಿ ಕಿತ್ತಾಟ ಏಕೆ? ಇಂತಹ ಬದುಕು ಬೇಕಾ? ಅವರವರ ನಂಬಿಕೆ ಅವರರನ್ನು ಕಾಪಾಡುತ್ತೆ, ಕಿತ್ತಾಟ ಏಕೆ..!? ಎಲ್ಲರೂ ಸೇರಿ ದೇಶಕ್ಕೆ ಸ್ವಾತಂತ್ರ್ಯ ತಂದಿದ್ದೇವೆ. ಇವಾಗ ಎಲ್ಲ ಸೇರಿ ದೇಶದಲ್ಲಿ ಸಮಾಧಾನ ತರುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.

    ಇದೇ ವೇಳೆ ಮುಖ್ಯಮಂತ್ರಿ ಪರಿಹಾರ ನಿಧಿ ಎಲ್ಲರಿಗೂ ಕೊಡಿ. ಈಗ ಕೇವಲ ಬಿಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರ ಮುಖ್ಯಮಂತ್ರಿ ಪರಿಹಾರ ನಿಧಿ ಕೊಡಲಾಗ್ತಿದೆ. ಇದರಿಂದ ಮಧ್ಯಮವರ್ಗದ ಜನರಿಗೆ ತುಂಬಾ ತೊಂದರೆ ಆಗ್ತಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯನ್ನ ಎಪಿಎಲ್ ಕಾರ್ಡ್ ಇದ್ದವರಿಗೂ ನೀಡಿ. ಒಂದು ಹಾಸ್ಪಿಟಲ್ ಗೆ 15 ರಿಂದ 20 ಲಕ್ಷ ಆಗುತ್ತೆ. ಮಧ್ಯಮವರ್ಗದ ಜನರು ಇಷ್ಟು ದೊಡ್ಡ ಹಣ ಹೇಗೆ ಕಟ್ಟುತ್ತಾರೆ. ಹೀಗಾಗಿ ಬಿಪಿಎಲ್ ನಂತೆ ಎಪಿಎಲ್ ಕಾರ್ಡ್ ಇದ್ದವರಿಗೂ ಮುಖ್ಯಮಂತ್ರಿ ಪರಿಹಾರ ನಿಧಿ ಕೊಡಬೇಕು. ಇದರಿಂದ ಮಧ್ಯಮವರ್ಗದ ಜನರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

  • ಬೆಂಗಳೂರಿನ ಪುಂಡರು ಅಮಾಯಕರು, ಮುಗ್ಧರಂತೆ – ಕೈ ನಾಯಕರಿಗೆ ‘ಪಬ್ಲಿಕ್’ ಪ್ರಶ್ನೆ

    ಬೆಂಗಳೂರಿನ ಪುಂಡರು ಅಮಾಯಕರು, ಮುಗ್ಧರಂತೆ – ಕೈ ನಾಯಕರಿಗೆ ‘ಪಬ್ಲಿಕ್’ ಪ್ರಶ್ನೆ

    ಬೆಂಗಳೂರು: ದೇವರಜೀವನಹಳ್ಳಿ ಮತ್ತು ಕಾಡುಗೊಂಡನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಬಗ್ಗೆ ಇನ್ನೂ ಪೊಲೀಸ್ ತನಿಖೆ ನಡೆಯುತ್ತಿದೆ. ಪಾಲಿಕೆ ಸದಸ್ಯರ ಪಾತ್ರದ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ. ಅಷ್ಟರಲ್ಲೇ ಕೆಲ ಕಾಂಗ್ರೆಸ್ ನಾಯಕರು ಪುಂಡರಿಗೆ ಕ್ಲೀನ್‍ಚಿಟ್ ನೀಡಲು ಹೊರಟಂತೆ ಇದೆ.

    ಮೊನ್ನೆ ಮೊನ್ನೆಯಷ್ಟೇ ಡಿ.ಜೆ. ಹಳ್ಳಿ ಗಲಭೆಕೋರರಲ್ಲಿ ಕೆಲವರು ಅಮಾಯಕರು ಅಂತ ಶಾಸಕ ಜಮೀರ್ ಹೇಳಿಕೆ ಕೊಟ್ಟ ಬೆನ್ನಲ್ಲೇ ಇವತ್ತು ಕೂಡ, ಮೇಲ್ಮನೆ ಸದಸ್ಯ ಸಿ.ಎಂ. ಇಬ್ರಾಹಿಂ ಹಾಗೂ ಶಾಂತಿ ನಗರದ ಶಾಸಕ ಹ್ಯಾರೀಸ್ ಇದೇ ಜಪ ಮಾಡಿದ್ದಾರೆ.

    ಗಲಭೆ ಸಂಬಂಧ ಇವತ್ತು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರನ್ನು ಭೇಟಿಯಾದ ಕೈ ನಾಯಕರು ಹಾಗೂ ಮೌಲ್ವಿಗಳು, ಅಮಾಯಕರಿದ್ದರೆ ಬಿಟ್ಟು ಬಿಡಿ ಅಂತ ಒತ್ತಡ ಹೇರಿದ್ದಾರೆ. ಬಂಧಿತರಲ್ಲಿ ಕೆಲವರು ನಿರಾಪರಾಧಿಗಳಿದ್ದಾರೆ. ಅವರನ್ನು ಬಿಟ್ಟು ಕಳುಹಿಸಿ. ಆರೋಪಿಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.

    ಪೋಸ್ಟ್ ಹಾಕಿದಾಕ್ಷಣ ಪೊಲೀಸರು ಕ್ರಮ ಕೈಗೊಂಡಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದು ಹೇಳಿ ಗೂಬೆ ಕೂರಿಸಿದ್ದಾರೆ. ಇನ್ನೊಂದೆಡೆ, ಕೆಲವು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತಕ್ಷಣವೇ ಬಿಡುಗಡೆ ಮಾಡಬೇಕೆಂದು ಶಾಸಕ ಹ್ಯಾರೀಸ್ ಹೇಳಿದ್ದಾರೆ.

    ಅಮಾಯಕರನ್ನು ಬಂಧಿಸಿದ್ರೆ ಬಿಟ್ಟು ಕಳುಹಿಸಿ ಅಂತ ಹೇಳಿದರೆ ಒತ್ತಡ ಆಗುವುದಿಲ್ಲವೇ ಎಂದು ಶಾಸಕ ಹ್ಯಾರೀಸ್‍ರನ್ನು ಪ್ರಶ್ನಿಸುತ್ತಿದ್ದಂತೆ ಸಿಟ್ಟಾಗಿದ್ದಾರೆ. ಈ ನಿಯೋಗದಲ್ಲೇ ಇದ್ದ ಮುಸ್ಲಿಂ ಜಮಾತ್ ಮುಖ್ಯಸ್ಥ ಮೊಹಮ್ಮದ್ ಸಾದ್, ಗಲಭೆಯಲ್ಲಿ ಕಾಣಿಸಿಕೊಂಡವವರೆಲ್ಲರೂ ಬೆಂಕಿ ಹಚ್ಚಿಲ್ಲ. ಕೆಲವರು ಅಲ್ಲಿಗೆ ಬಂದಿದ್ದಾರಷ್ಟೇ. ಹಾಗಾಗಿ, ಬಿಟ್ಟು ಕಳುಹಿಸಿ ಅಂತ ಮನವಿ ಮಾಡಿದ್ದೇವೆ ಎಂದಿದ್ದಾರೆ.

    ಇದೇ ವೇಳೆ, ಒಂದು ವಾರದಿಂದ ಹೇರಿರುವ ಕರ್ಫ್ಯೂವನ್ನು ಸಡಿಲಿಸಿ ಎಂದು ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ. ಕೆಲ ಕಾಂಗ್ರೆಸ್ ನಾಯಕರು ಗಲಭೆಕೋರರು ಅಮಾಯಕರು ಎಂದು ಹೇಳುತ್ತಿರುವ ಬೆನ್ನಲ್ಲೇ ಜನ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

    ಕಾಂಗ್ರೆಸ್‍ಗೆ ‘ಪಬ್ಲಿಕ್’ ಪ್ರಶ್ನೆಗಳು
    1. ಡಿ.ಜೆ. ಹಳ್ಳಿ ಗಲಭೆ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ. ಅಷ್ಟರಲ್ಲಿ ಕ್ಲೀನ್‍ಚಿಟ್ ನೀಡಲು ಕಾಂಗ್ರೆಸ್ ನಾಯಕರ್ಯಾರು?
    2. ಗಲಭೆಕೋರರಲ್ಲಿ ಕೆಲವರು ಅಮಾಯಕರಿದ್ದರೆ ಘಟನಾ ಸ್ಥಳದಲ್ಲಿ ಇವರಿಗೇನು ಕೆಲಸ?
    3. ಗಲಭೆಕೋರರಲ್ಲಿರೋ ಅಪ್ರಾಪ್ತರನ್ನು ಬಿಟ್ಟು ಬಿಡಬೇಕಾ? ತಪ್ಪು ಮಾಡಿದರೂ ಕ್ಷಮಿಸಿ ಬಿಡಬೇಕಾ?


    4. ಅಪ್ರಾಪ್ತರನ್ನು ಎಲ್ಲಿಗೆ ಕಳುಹಿಸಬೇಕು? ಏನ್ ಮಾಡಬೇಕು? ಅಂತ ಕಾನೂನು ನಿರ್ಧರಿಸುತ್ತೆ. ಇದನ್ನು ನಿರ್ಧರಿಸಲು ಕಾಂಗ್ರೆಸ್ ನಾಯಕರು ಯಾರು?
    5. ಗಲಭೆಕೋರರ ಬಗ್ಗೆಯಷ್ಟೇ ಮಾತನಾಡುವ ಕಾಂಗ್ರೆಸ್ಸಿಗೆ ಮನೆ ಕಳೆದುಕೊಂಡವರು, ವಾಹನ ಕಳೆದುಕೊಂಡವರು ನೆನಪಾಗುತ್ತಿಲ್ವಾ?
    6. ಗಲಭೆಯಿಂದ ಡಿ.ಜೆ. ಹಳ್ಳಿ ಹೊತ್ತಿ ಉರಿಯುತ್ತಿದ್ದಾಗ ಈ ನಾಯಕರೆಲ್ಲ ಎಲ್ಲಿ ಹೋಗಿದ್ದರು? ಈಗ ನೆನಪಾಯ್ತಾ?

  • ಬಿಬಿಎಂಪಿ ಶಾಲೆಯ ಮಕ್ಕಳಿಗೆ ನಾಯಿ ಕಾಟ

    ಬಿಬಿಎಂಪಿ ಶಾಲೆಯ ಮಕ್ಕಳಿಗೆ ನಾಯಿ ಕಾಟ

    ಬೆಂಗಳೂರು: ಬಿಬಿಎಂಪಿ ಶಾಲೆಯ ಮಕ್ಕಳಿಗೆ ನಾಯಿ ಕಾಟ ಶುರುವಾಗಿದೆ. ಶ್ವಾನಕ್ಕೆ ಹೆದರಿ ಶಾಲೆ ವಿದ್ಯಾರ್ಥಿಗಳು ಬರುತ್ತಿಲ್ಲ. ಎಲ್ಲಿ ನೋಡಿದರೂ ನಾಯಿಗಳು ಕಚ್ಚಲು ಬರುತ್ತಿವೆ. ಸರಿಸುಮಾರು ಇಪ್ಪತ್ತು ನಾಯಿಗಳ ದಂಡೇ ಶಾಲೆಯ ಅಕ್ಕಪಕ್ಕವಿದೆ. ಶಾಲೆಯ ಬಾಗಿಲು ಕಾಣುವ ಮುಂಚೆ ನಾಯಿಗಳು ಕಾಣಿಸುತ್ತವೆ ಎಂದು ಬಿಬಿಎಂಪಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಳ್ಳುತ್ತಾರೆ.

    ಹೌದು. ಆಸ್ಟಿನ್ ಟೌನ್ ಬಿಬಿಎಂಪಿ ಬಾಲಕರ ಶಾಲೆಯ ಆವರಣದಲ್ಲಿ ನಾಯಿಗಳ ಕಾಟ ಇದೆ. ಶಾಲೆ ಆವರಣದಲ್ಲಿ ಅನಧಿಕೃತವಾಗಿ ವಾಸವಾಗಿರೋ ಕುಟುಂಬ ಹೀಗೆ ಸುಮಾರು 20 ನಾಯಿ ಸಾಕಿದೆ. ಹೀಗೆ ನಾಯಿಗಳ ಕಂಡು ಕಳೆದ ವರ್ಷ 150 ಜನ ವಿದ್ಯಾರ್ಥಿಗಳ ಸಂಖ್ಯೆ ಪ್ರಸಕ್ತ ಸಾಲಿನಲ್ಲಿ 120 ಕ್ಕೆ ಇಳಿದಿದೆ.

    ಶಾಲೆಯಲ್ಲಿ ಆತಂಕ ಹುಟ್ಟಿಸಿರುವ ಒತ್ತುವರಿದಾರರನ್ನು ಕೇಳಿದರೆ ಪಾಲಿಕೆ ಬಾಕಿ ಉಳಿಸಿಕೊಂಡಿದೆ. 8 ಲಕ್ಷ ರೂ. ಸಂಬಳ ಕೊಡಬೇಕಿದೆ. ನನ್ನ ಗಂಡ ಈ ಶಾಲೆಯ ಸೆಕ್ಯೂರಿಟಿಯಾಗಿದ್ದರು. 5 ವರ್ಷ ಸಂಬಳ ಬಂದಿಲ್ಲ ಎಂದು ಕೊರಗುವಾಗ ಸತ್ತರು. ನಂತರ 3 ವರ್ಷದಿಂದ ಸಂಬಳ ಕೇಳುತ್ತಾ ಇದ್ದೇವೆ. ಆದರೆ ಅವರು ಕೊಡುತ್ತಿಲ್ಲ. ಸಂಬಳ ಕೊಡಿ ಜಾಗ ಬಿಟ್ಟು ಕೊಡುತ್ತೇವೆ ಎಂದು ಒತ್ತುವರಿದಾರರಾದ ನಾಗಿಣಿ ತಿಳಿಸಿದ್ದಾರೆ.

    ಒತ್ತುವರಿದಾರರ ಬೆನ್ನಿಗೆ ಸ್ಥಳೀಯ ಶಾಸಕ ಹ್ಯಾರಿಸ್ ಇದ್ದಾರೆ ಎನ್ನಲಾಗುತ್ತಿದೆ. ಆದರೆ ಮಕ್ಕಳಿಗೆ ರಕ್ಷಣೆಗೆ ಯಾರು ಇಲ್ಲ ಅನ್ನೋ ನೋವು ಕಾಡುತ್ತಿದೆ ಎಂದು ಶಾಲೆಯ ಶಿಕ್ಷಕಿ ಆತಂಕ ವ್ಯಕ್ತಪಡಿಸಿದ್ದಾರೆ.

    ಪಾಲಿಕೆ ಶಾಲೆಯ ನಾಯಿ ಕಾಟ ಪೊಲೀಸ್ ಠಾಣೆ ಮೆಟ್ಟಿಲು ಹತ್ತಲು ಸಿದ್ಧವಾಗಿದೆ. ಶಾಲೆಯ ಹೆಡ್ ಮಾಸ್ಟರ್ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಬೀದಿ ನಾಯಿ ರಸ್ತೆಗಳಲ್ಲಿ ಅಲ್ಲ, ಶಾಲೆಯಲ್ಲೇ ಕಾಡ್ತಾ ಇವೆ. ಪಾಲಿಕೆ ಒತ್ತುವರಿ ಬಿಡಿಸಿ ಮಕ್ಕಳ ಆತಂಕ ದೂರ ಮಾಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

  • ಸೆಕ್ಯೂರಿಟಿಯಲ್ಲೇ ಬೆಳೆದ ರಾಗಾ ಭದ್ರತೆ ಬಗ್ಗೆ ಮೋದಿ ಗಮನಹರಿಸ್ತಿಲ್ಲ- ಹ್ಯಾರೀಸ್ ಆರೋಪ

    ಸೆಕ್ಯೂರಿಟಿಯಲ್ಲೇ ಬೆಳೆದ ರಾಗಾ ಭದ್ರತೆ ಬಗ್ಗೆ ಮೋದಿ ಗಮನಹರಿಸ್ತಿಲ್ಲ- ಹ್ಯಾರೀಸ್ ಆರೋಪ

    ಮಡಿಕೇರಿ: ಉತ್ತರಪ್ರದೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಹಣೆಯ ಭಾಗಕ್ಕೆ ಹಸಿರು ಬಣ್ಣದ ಲೇಸರ್ ಲೈಟ್ ಬಿದ್ದಿದ್ದಕ್ಕೆ ಕೇಂದ್ರ ಎಸ್‍ಜಿಪಿಯಲ್ಲಿ ಹಸ್ತಕ್ಷೇಪ ಮಾಡ್ತಿರೋದು ಕಾರಣ ಎಂದು ಶಾಂತಿನಗರ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಹ್ಯಾರೀಸ್ ಗಂಭೀರ ಆರೋಪ ಮಾಡಿದ್ದಾರೆ.

    ಮಡಿಕೇರಿಯಲ್ಲಿ ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಪರ ಪ್ರಚಾರದಲ್ಲಿ ಭಾಗವಹಿಸಿದ್ದ ಸಂದರ್ಭ ಮಾತನಾಡಿದ ಅವರು, ಚಿಕ್ಕಂದಿನಿಂದ ಸೆಕ್ಯೂರಿಟಿಯಲ್ಲೇ ಬೆಳೆದ ರಾಹುಲ್ ಗಾಂಧಿಯವರ ಸೆಕ್ಯೂರಿಟಿಯ ಬಗ್ಗೆ ಮೋದಿ ಸರ್ಕಾರ ಗಮನ ಹರಿಸುತ್ತಿಲ್ಲ. ಆಗಾಗ ಅವರ ಸೆಕ್ಯೂರಿಟಿ ಕಡಿಮೆ ಮಾಡುತ್ತಿದೆ. ಇದೆಲ್ಲದ್ದರಿಂದಲೇ ಇಂತಹ ಘಟನೆ ನಡೆದಿದೆ ಎಂದರು.

    ಐಟಿ, ಈಡಿ ಎಲ್ಲದರಲ್ಲೂ ಹಸ್ತಕ್ಷೇಪ ಮಾಡುವ ಮೋದಿ ಸರ್ಕಾರ ಈ ವಿಚಾರದಲ್ಲೂ ಹಾಗೆ ಮಾಡಿದೆ. ಮೋದಿ ಸರ್ಕಾರಕ್ಕೆ ಸೋಲುವ ಭಯ ಕಾಡುತ್ತಿದ್ದು ಅವರು ಈಗ ಏನು ಮಾಡೋದಕ್ಕೂ ರೆಡಿಯಾಗಿದ್ದಾರೆ ಎಂದು ಹ್ಯಾರೀಸ್ ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 7 ಬಾರಿ ತಲೆ ಮೇಲೆ ಲೇಸರ್ ಲೈಟ್ – ಅಮೇಥಿ ರ‍್ಯಾಲಿ ವೇಳೆ ರಾಹುಲ್ ಹತ್ಯೆಗೆ ಸಂಚು?

    ಪ್ರಕಾಶ್ ರೈ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿರುವ ಹ್ಯಾರೀಸ್, ಪ್ರಕಾಶ್ ರೈ ನಮ್ಮ ಆತ್ಮೀಯ ಸ್ನೇಹಿತರು, ಅವರಿಗೆ ಸ್ಪರ್ಧೆ ಮಾಡದಂತೆ ಮನವಿ ಮಾಡಿದ್ದೆವು. ಆದರೆ ಅವರು ತಮ್ಮ ನಿಲುವನ್ನು ಬದಲಿಸಲು ತಯಾರಿಲ್ಲ ಎಂದು ಹೇಳಿದರು.

    ಶಾಂತಿನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಖುಷ್ಬೂ ಯುವಕನೊಬ್ಬನಿಗೆ ಕಪಾಳ ಮೋಕ್ಷ ಮಾಡಿದ್ದರ ಬಗ್ಗೆ ಮಾತನಾಡಿದ ಹ್ಯಾರೀಸ್, ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ, ವೈಯಕ್ತಿಕವಾಗಿ ಏನಾದ್ರೂ ಹರ್ಟ್ ಆದಾಗ ಕೆಲವರು ಹೀಗೆ ರಿಯಾಕ್ಟ್ ಮಾಡ್ತಾರೆ ಎಂದರು.

  • ಒಂದ್ಕಡೆ ದೇಶಕ್ಕೆ ಉಗ್ರದಾಳಿಯ ಶೋಕ- ಇತ್ತ ಶಾಸಕ  ಹ್ಯಾರೀಸ್‌ಗೆ ಹುಟ್ಟುಹಬ್ಬದ ಸಂಭ್ರಮ

    ಒಂದ್ಕಡೆ ದೇಶಕ್ಕೆ ಉಗ್ರದಾಳಿಯ ಶೋಕ- ಇತ್ತ ಶಾಸಕ ಹ್ಯಾರೀಸ್‌ಗೆ ಹುಟ್ಟುಹಬ್ಬದ ಸಂಭ್ರಮ

    ಬೆಂಗಳೂರು: ಇಡೀ ದೇಶವೇ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಈ ನಡುವೆ ಶಾಂತಿನಗರ ಶಾಸಕ ಹ್ಯಾರೀಸ್ ಬೆಂಬಲಿಗರಿಂದ ಹುಟ್ಟುಹಬ್ಬ ಮನರಂಜನಾ ಕಾರ್ಯಕ್ರಮ ನಡೆದಿದೆ.

    ಶಾಂತಿನಗರ ಹಬ್ಬ ಎಂಬ ಹೆಸರಿನಲ್ಲಿ ವಿವೇಕನಗರ ಬಸ್ ನಿಲ್ದಾಣ ಬಳಿ ಕಾರ್ಯಕ್ರಮ ಆಯೋಜಿಸಿದ್ದು, ಆರ್ಕೆಸ್ಟ್ರಾ ಏರ್ಪಡಿಸಲಾಗಿತ್ತು. ಅಪ್ಪ-ಮಗನ ಹೆಸರಿನಲ್ಲಿ ದೊಡ್ಡ ದೊಡ್ಡ ಫ್ಲೆಕ್ಸ್ ಗಳು ರಾರಾಜಿಸುತ್ತಿದ್ದವು. ಆದರೆ ವಿಷಯ ಮಾಧ್ಯಮದವರಿಗೆ ಗೊತ್ತಾಗುತ್ತಿದ್ದಂತೆ ಹ್ಯಾರೀಸ್ ಬೆಂಬಲಿಗರು ಕಾರ್ಯಕ್ರಮವನ್ನ ರದ್ದುಗೊಳಿಸಿದ್ದಾರೆ.

    ಈ ಬಗ್ಗೆ ಶಾಸಕ ಹ್ಯಾರೀಸ್‍ರನ್ನೇ ಕೇಳಿದ್ದಕ್ಕೆ, ನನ್ನ ಬರ್ತ್ ಡೇ ಇರುವುದು ಜನವರಿ ತಿಂಗಳಲ್ಲಿ. ಬರ್ತ್ ಡೇ ಪಾರ್ಟಿ ಮಾಡಿಲ್ಲ. ಅದು ಶಾಂತಿನಗರ ಹಬ್ಬ ಅಂತ ಮಾಡುತ್ತಿದ್ದರು. ಸ್ಥಳಕ್ಕೆ ಭೇಟಿ ನೀಡಿ ಆ ಕಾರ್ಯಕ್ರಮ ಬದಲಾಯಿಸಿ ಯೋಧರ ಬಗ್ಗೆ ಶ್ರದ್ಧಾಂಜಲಿ ಸಲ್ಲಿಸಿ ಕಾರ್ಯಕ್ರಮ ಮುಗಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಇನ್ನೂ ಪುಲ್ವಾಮಾ ದಾಳಿಯಲ್ಲಿ ಮಂಡ್ಯದ ಯೋಧ ಗುರು ಹುತಾತ್ಮ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಐವತ್ತು ಸಾವಿರ ನೆರವು ನೀಡಲು ಮುಂದಾಗಿದ್ದಾರೆ. ಎನ್.ಎ.ಹ್ಯಾರೀಸ್ ಫೌಂಡೇಷನ್ ನಿಂದ ಐವತ್ತು ಸಾವಿರ ನೆರವು ನೀಡುವುದಾಗಿ ಶಾಸಕ ಹ್ಯಾರೀಸ್ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ವಿದೇಶಕ್ಕೆ ಹೋಗೋಕೆ ನಲಪಾಡ್ ಕೋರ್ಟ್ ಗೆ ಮನವಿ

    ವಿದೇಶಕ್ಕೆ ಹೋಗೋಕೆ ನಲಪಾಡ್ ಕೋರ್ಟ್ ಗೆ ಮನವಿ

    ಬೆಂಗಳೂರು: ವಿದೇಶಕ್ಕೆ ತೆರಳಲು ತನಗೆ ಅನುಮತಿ ನಿಡಿ ಅಂತ ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಹೈಕೋರ್ಟ್ ಮೊರೆ ಹೋಗಿದ್ದಾನೆ. ವಿದ್ವತ್ ಮೇಲೆ ನಲಪಾಡ್ ಮತ್ತು ಗ್ಯಾಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳ ಸಡಿಲಿಕೆ ಕೋರಿ ನಲಪಾಡ್ ಈ ಅರ್ಜಿ ಸಲ್ಲಿಸಿದ್ದಾನೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ವೇಳೆ ನಗರ ಬಿಟ್ಟು ತೆರಳದಂತೆ ನಲಪಾಡ್ ಗೆ ಕೋರ್ಟ್ ಷರತ್ತು ವಿಧಿಸಿತ್ತು. ಇದೀಗ ನನ್ನ ಸಹೋದರ ಲಂಡನ್ ನಲ್ಲಿ ವಾಸವಾಗಿದ್ದಾನೆ. ಹೀಗಾಗಿ ತಮ್ಮನನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿ. 15 ದಿನಗಳ ಕಾಲ ವಿದೇಶಕ್ಕೆ ಪ್ರಯಾಣ ಬೆಳೆಸಲು ಅವಕಾಶ ನೀಡಿ ಅಂತ ಮನವಿ ಮಾಡಿಕೊಂಡಿದ್ದಾನೆ.

    ಈ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 27 ಕ್ಕೆ ಮುಂದೂಡಿದೆ. ಇದನ್ನೂ ಓದಿ: ಕಷ್ಟ ಅಂದ್ರೆ ಏನು ಅನ್ನೋದು ಗೊತ್ತಾಗಿದೆ, ರಾತ್ರಿ 9 ಗಂಟೆಯ ನಂತ್ರ ಎಲ್ಲಿಗೂ ಬರಲ್ಲ: ನಲಪಾಡ್

    ಏನಿದು ಪ್ರಕರಣ?:
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.  ಇದನ್ನೂ ಓದಿ: ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿತ್ತು?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

    ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

    ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಲಪಾಡ್ ಗೆ ಇಂದು ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ನಲಪಾಡ್ ಸಹೋದರ ಉಮರ್ ನಲಪಾಡ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

    ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ ಅಂತ ಮಾಧ್ಯಮಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಅಲ್ಲದೇ ಮೊಹಮ್ಮದ್ ನಲಪಾಡ್ ಗೆ ಜಾಮೀನು ಸಿಕ್ಕಿದ್ದಕ್ಕೆ ಹರ್ಷ ವ್ಯಕ್ತಪಡಿಸಿ, ಮನೆಯ ಬಳಿ ಇದ್ದ ಸ್ನೇಹಿತರಿಗೆ ದೂರದಿಂದಲೇ ಶುಭಕೋರಿದ್ರು.  ಇದನ್ನೂ ಓದಿ: ಮೊಹಮ್ಮದ್ ನಲಪಾಡ್ ಸೆರೆವಾಸ ಅಂತ್ಯ – ವಕೀಲ ಶ್ಯಾಮ್ ಸುಂದರ್ ಹೇಳಿದ್ದು ಹೀಗೆ

    ಇತ್ತ ಮಗನಿಗೆ ಜಾಮೀನು ಮಂಜೂರಾಗುತ್ತಿದ್ದಂತೆ ಹ್ಯಾರೀಸ್ ಮನೆಯಲ್ಲಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ. ಮಗನಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು – ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್

    ನಲಪಾಡ್ ಮನೆಗೆ ಬಂದಾಗ ಹೆಚ್ಚು ಜನ ಸೇರಬಾರದು. ಹೆಚ್ಚು ಜನ ಸೇರಿದ್ರೆ ಗಲಾಟೆಯಾಗ್ಬಹುದು. ಹೀಗಾಗಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಕಬ್ಬನ್ ಪಾರ್ಕ್ ಎಸಿಪಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

  • ಮೊಹಮ್ಮದ್ ನಲಪಾಡ್ ಸೆರೆವಾಸ ಅಂತ್ಯ – ವಕೀಲ ಶ್ಯಾಮ್ ಸುಂದರ್ ಹೇಳಿದ್ದು ಹೀಗೆ

    ಮೊಹಮ್ಮದ್ ನಲಪಾಡ್ ಸೆರೆವಾಸ ಅಂತ್ಯ – ವಕೀಲ ಶ್ಯಾಮ್ ಸುಂದರ್ ಹೇಳಿದ್ದು ಹೀಗೆ

    ಬೆಂಗಳೂರು: ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಇಂದು ಮೊಹಮ್ಮದ್ ನಲಪಾಡ್ ಅವರಿಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ಮಾಡಿದೆ. ಹೀಗಾಗಿ ನ್ಯಾಯಾಲಯದ ಆದೇಶವನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇನೆ ಅಂತ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಮೀನಿನ ಬಳಿಕ ನಲಪಾಡ್ ಗೆ ಹೈಕೋರ್ಟ್ ಕೆಲವೊಂದು ಷರತ್ತುಗಳನ್ನು ಹಾಕಿದೆ. ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ತನಿಖೆಗೆ ಸಹಕರಿಸಬೇಕು. ಅಲ್ಲದೇ ವಿಚಾರಣೆಗೆ ಕರೆದಾಗಲೆಲ್ಲಾ ಬರಬೇಕು. ಅಧೀನ ನ್ಯಾಯಾಲಯ ನೀಡುವ ಷರತ್ತಿಗೂ ಬದ್ಧವಾಗಿರಬೇಕು ಎಂದು ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ ಆದೇಶ ನೀಡಿದ್ದಾರೆ ಅಂದ್ರು.

    ಹಿರಿಯ ವಕೀಲ ಬಿವಿ ಆಚಾರ್ಯ ಅವರು ವಾದ ಮಂಡಿಸಿದ್ದಾರೆ. ಈಗಾಗಲೇ ಜಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಸರಿ ಸುಮಾರು 3 ತಿಂಗಳಿನಿಂದ ನಲಪಾಡ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಜಾರ್ಜ್ ಶೀಟ್ ಸಲ್ಲಿಕೆಯಾಗಿರೋದ್ರಿಂದ ಇದೊಂದು ಬದಲಾಯಿತ ಸಂದರ್ಭ ಅಂತ ಪರಿಗಣಿಸಬಹುದು ಅಂತ ತಿಳಿಸಿದ್ರು.

    ಒಟ್ಟಿನಲ್ಲಿ ಜಾರ್ಜ್ ಶೀಟ್ ಸಲ್ಲಿಕೆಯಾಗಿರೋದ್ರಿಂದ ಇನ್ನು ಅವರನ್ನು ಜೈಲಿನಲ್ಲಿರಿಸಿ ಶಿಕ್ಷೆಯ ರೂಪದಲ್ಲಿ ನ್ಯಾಯಾಂಗ ಬಂಧನ ಆಗಬಾರದು ಎನ್ನುವ ರೀತಿಯಲ್ಲಿ ವಾದಮಂಡಿಸಿ ಕೆಲ ಷರತ್ತುಗಳನ್ನು ವಿಧಿಸಿ ಅವರಿಗೆ ಜಾಮೀನು ನೀಡಿ ಅನ್ನೋ ವಾದವನ್ನು ಮುಂದಿಟ್ಟಿದ್ದರು ಎಂದು ವಿವರಿಸಿದರು.

    ನಾವು ಕೂಡ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ, ಈ ಹಿಂದೆ ನಿಕಟ ಪೂರ್ವದಲ್ಲಿ ಮೂರು ಬಾರಿ ಅವರು ಜಾಮೀನು ಅರ್ಜಿ ತಿರಸ್ಕೃತವಾಗುವುದಕ್ಕೆ ಬಹಳ ವಿದ್ಯುಕ್ತವಾದ ಕಾರಣಗಳಿವೆ. ಜಾರ್ಜ್ ಶೀಟ್ ನಲ್ಲಿ ಕೂಡ ಅವರ ವಿರುದ್ಧದ ಕೇಸ್ ಬಲಗೊಂಡಿದೆ. ಹಾಗಾಗಿ ಇವರು ಸಾಕ್ಷಿ ನಾಶ ಮಾಡ್ತಾರೆಂಬ ಭಯ ಹಾಗೂ ಹಲವಾರು ಪ್ರತ್ಯಕ್ಷದರ್ಶಿ ಸಾಕ್ಷಿಗಳಿರುವುದರಿಂದ ಜಾಮೀನನ್ನು ಮತ್ತೆ ತಿರಸ್ಕೃತಗೊಳಿಸಿ ಅಂತ ವಿನಂತಿಸಿಕೊಳ್ಳುವುದಾಗಿ ಅವರು ಹೇಳಿದ್ರು.

    ಏನಿದು ಪ್ರಕರಣ?
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿತ್ತು?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

  • ಶಾಸಕ ಹ್ಯಾರಿಸ್ ಮಗ ನಲಪಾಡ್‍ಗೆ ಜೈಲಾ, ಬೇಲಾ? – ಬೆಂಗ್ಳೂರು ಕೋರ್ಟ್ ನಿಂದ ಇಂದು ತೀರ್ಪು

    ಶಾಸಕ ಹ್ಯಾರಿಸ್ ಮಗ ನಲಪಾಡ್‍ಗೆ ಜೈಲಾ, ಬೇಲಾ? – ಬೆಂಗ್ಳೂರು ಕೋರ್ಟ್ ನಿಂದ ಇಂದು ತೀರ್ಪು

    ಬೆಂಗಳೂರು: ಪಬ್‍ನಲ್ಲಿ ಗೂಂಡಾಗಿರಿ ನಡೆಸಿ ಮೂರು ತಿಂಗಳಿಂದ ಜೈಲಲ್ಲಿರುವ ಕಾಂಗ್ರೆಸ್ ಶಾಸಕ ಎನ್‍ಎ ಹ್ಯಾರಿಸ್ ಮಗ ನಲಪಾಡ್ ಗೆ ಇಂದು ನಿರ್ಣಾಯಕ ದಿನವಾಗಿದೆ.

    ಹ್ಯಾರಿಸ್ ಮಗ ಮಹಮ್ಮದ್ ನಲಪಾಡ್ ಜಾಮೀನು ಪಡೆದು ಹೊರಗೆ ಬರ್ತಾನೋ ಇಲ್ಲ ಇನ್ನಷ್ಟು ದಿನ ಕಾರಾಗೃಹದಲ್ಲೇ ಕಂಬಿ ಎಣಿಸ್ಬೇಕೋ ಅನ್ನೋದು ಸ್ಪಷ್ಟವಾಗಲಿದೆ. ಈತ ಸಲ್ಲಿಸಿದ್ದ ಜಾಮೀನು ಅರ್ಜಿ ಸಂಬಂಧ ಬೆಂಗಳೂರಿನ 66ನೇ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಲಿದೆ.

    ವಿದ್ವತ್- ಹಲ್ಲೆಗೊಳಗಾದ ಯುವಕ.

    ಈಗಾಗ್ಲೇ ಸಿಸಿಬಿ ಪೊಲೀಸರು ಕೋರ್ಟ್ ಗೆ ಆರೋಪಪಟ್ಟಿ ಸಲ್ಲಿಸಿದ್ದು, ಜೈಲಿಂದ ಹೊರಬಂದರೂ ನಲಪಾಡ್ ಸಾಕ್ಷ್ಯ ನಾಶ ಮಾಡೋ ಸಾಧ್ಯತೆ ಇಲ್ಲ. ಹೀಗಾಗಿ ತಮ್ಮ ಕಕ್ಷಿದಾರನಿಗೆ ಜಾಮೀನು ಕೊಡುವಂತೆ ವಕೀಲ ಉಸ್ಮಾನ್ ವಾದಿಸಿದ್ದಾರೆ. ಆದ್ರೆ ಆರೋಪಪಟ್ಟಿ ಬಳಿಕವೂ ಜಾಮೀನು ನೀಡದ ಪ್ರಕರಣಗಳು ಹಲವಾರಿದ್ದು, ಈ ಕೇಸಲ್ಲೂ ಜಾಮೀನು ಕೊಡ್ಬೇಡಿ ಅಂತ ವಿಶೇಷ ಸರ್ಕಾರಿ ವಕೀಲ ಶ್ಯಾಮ್‍ಸುಂದರ್ ವಾದಿಸಿದ್ದಾರೆ.

    ಏನಿದು ಪ್ರಕರಣ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದನು. ಫೆಬ್ರವರಿ 17ರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದರು. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯಾ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.