Tag: ಹ್ಯಾರೀಸ್

  • ವಿದ್ವತ್ ಮೇಲೆ ಹಲ್ಲೆ ಪ್ರಕರಣ- ಇಂದು ನಲಪಾಡ್ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರ

    ವಿದ್ವತ್ ಮೇಲೆ ಹಲ್ಲೆ ಪ್ರಕರಣ- ಇಂದು ನಲಪಾಡ್ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರ

    ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾರೀಸ್ ಪುತ್ರ ನಲಪಾಡ್‍ಗೆ ಜೈಲಾ..? ಬೇಲಾ..? ಎಂಬುದು ಇಂದು ಗೊತ್ತಾಗಲಿದೆ.

    ಹೌದು. ಶಾಸಕ ಹ್ಯಾರಿಸ್ ಮಗ ನಲಪಾಡ್ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸೋಮವಾರ ನಲಪಾಡ್ ಪರ ವಕೀಲ ಉಸ್ಮಾನ್ ವಾದ ಮುಕ್ತಾಯ ಮಾಡಿದ್ದಾರೆ. ಹೀಗಾಗಿ ಇಂದು ಎಸ್ ಪಿಪಿ ಅವರಿಂದ ಪ್ರತಿವಾದ ನಡೆಯಲಿದೆ.

    ಪ್ರತಿವಾದ ಬೇಗ ಮುಗಿದ್ರೆ ಇಂದೇ ತೀರ್ಪು ಸಿಗುವ ಸಾಧ್ಯತೆಗಳಿವೆ. 63 ನೇ ಸಿಸಿಎಚ್ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿದ್ವತ್ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಜಾರ್ಜ್ ಶೀಟ್ ಸಲ್ಲಿಸಲಾಗಿದೆ.

    ಈ ಹಂತದಲ್ಲಿ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಲು ಸಾಧ್ಯವಿಲ್ಲ. ಹಾಗಾಗಿ ಜಾಮೀನು ನೀಡುವಂತೆ ನಲಪಾಡ್ ಪರ ವಕೀಲರಿಂದ ವಾದ ಮಂಡಿಸಲಾಗಿತ್ತು. ಇಂದು ಕೂಡ ಸ್ಪೆಷಲ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ಅವರಿಂದ ವಾದ ಮಂಡನೆ ನಡೆಯಲಿದೆ.

    ಏನಿದು ಪ್ರಕರಣ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದನು. ಫೆಬ್ರವರಿ 17ರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದರು. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯಾ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

                                                                                      ವಿದ್ವತ್- ಹಲ್ಲೆಗೊಳಗಾದ ಯುವಕ.
  • ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ: ಕೊನೆಗೂ ಪೊಲೀಸರಿಗೆ ಶರಣಾದ ಶಾಸಕ ಹ್ಯಾರಿಸ್ ಪುತ್ರ

    ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ: ಕೊನೆಗೂ ಪೊಲೀಸರಿಗೆ ಶರಣಾದ ಶಾಸಕ ಹ್ಯಾರಿಸ್ ಪುತ್ರ

    ಬೆಂಗಳೂರು: ಯುವಕನೊಬ್ಬನ ಮೇಲೆ ನಡೆಸಿ ಪರಾರಿಯಾಗಿದ್ದ ಶಾಸಕ ಹ್ಯಾರಿಸ್ ಪುತ್ರ ಕೊನೆಗೂ ಪೊಲೀಸರ ಮುಂದೆ ಶರಣಾಗಿದ್ದಾನೆ.

    ಶನಿವಾರ ರಾತ್ರಿ ಯುವಕನೊಬ್ಬನ ಜೊತೆ ಜಗಳವಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ನಲಪಾಡ್ ಪಾರಾರಿಯಾಗಿದ್ದನು. ಆದ್ರೆ ಇಂದು ಬೆಳಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.

    ಸದ್ಯ ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್

    ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಾಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ.

    ಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಯಾಗಿರುವ ಶಾಸಕರ ಪುತ್ರ ಮಹಮ್ಮದ್ ನಲಪಾಡ್ ಪರಾರಿಯಾಗಿದ್ದಾನೆ.

    ವಿದ್ವತ್- ಹಲ್ಲೆಗೊಳಗಾದ ಯುವಕ.
  • ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್

    ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್

    ಬೆಂಗಳೂರು: ನನ್ನ ಮಗನನ್ನು ನಾನೇ ಪೊಲೀಸರಿಗೆ ಸರೆಂಡರ್ ಮಾಡಿಸ್ತೇನೆ. ನಿನ್ನೆ ರಾತ್ರಿ ಮಗ ಆತನ ಅಮ್ಮನಿಗೆ ಕರೆ ಮಾಡಿದ್ದನು. ಈ ವೇಳೆ ನಾನೇ ಸರೆಂಡರ್ ಆಗುವಂತೆ ಹೇಳಿದ್ದಾಗಿ ಶಾಂತಿನಗರ ಕ್ಷೇತ್ರದ ಶಾಸಕ ಹ್ಯಾರಿಸ್ ಹೇಳಿದ್ದಾರೆ.

    ಯುವಕನ ಮೇಲೆ ರೆಸ್ಟೊರೆಂಟ್ ನಲ್ಲಿ ಹಲ್ಲೆ ನಡೆಸಿದ ಬಳಿಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ತಲೆಮರೆಸಿಕೊಂಡಿದ್ದನು. ಈ ಕುರಿತು ಇದೀಗ ಹ್ಯಾರಿಸ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನನ್ನ ಮಗ ಫೋನ್ ಸ್ವಿಚ್ ಆಫ್ ಮಾಡ್ಕೊಂಡಿದ್ದನು. ನಿನ್ನೆ ರಾತ್ರಿ ಅವ್ನ ಅಮ್ಮನಿಗೆ ಫೋನ್ ಮಾಡಿದ್ದನು. ಆಗ ಸರೆಂಡರ್ ಆಗುವಂತೆ ನಾನೇ ಮಗನಿಗೆ ಹೇಳಿದ್ದೇನೆ ಅಂದಿದ್ದಾರೆ.

    ವಿದ್ವತ್- ಹಲ್ಲೆಗೊಳಗಾದ ಯುವಕ.

    ಗೂಂಡಾಗಿರಿ ನಡೆಸಿ ಹಲವು ಗಂಟೆಗಳೇ ಕಳೆದ್ರೂ ಅರೆಸ್ಟ್ ಆಗದ ಮಹಮ್ಮದ್ ನಲಪಾಡ್ ಇದೀಗ ಅಶೋಕ ನಗರ ಸ್ಟೇಷನ್ ಪೊಲೀಸರು ಮನೆಗೆ ಬರ್ತಿದ್ದಂತೆ ಶಾಸಕರು ಕಥೆ ಕಟ್ಟಿದ್ದಾರೆ. ಶಾಸಕನ ರೌಡಿ ಮಗನ ಚೇಲಾಗಳನ್ನಷ್ಟೇ ಅರೆಸ್ಟ್ ಮಾಡಿ ಬೆಂಗಳೂರು ಪೊಲೀಸ್ರ ನಾಟಕಾವಾಡ್ತಿದ್ದಾರಾ?. ಅಲ್ಲದೇ ಶಾಸಕರಿಗೆ ಮಗ ಎಲ್ಲಿದ್ದಾನೆ ಅನ್ನೋದು ಗೊತ್ತಿದೆ ಅದ್ಮೇಲೆ ಅರೆಸ್ಟ್ ಮಾಡೋಕೆ ಪೊಲೀಸರಿಗೇನು? ಸರೆಂಡರ್ ಮೂಲಕ ಮಹಮ್ಮದ್ ನಲಪಾಡ್ ಬಚಾವ್ ಮಾಡೋಕೆ ಪೊಲೀಸ್ರ ಕುತಂತ್ರ ಹೂಡ್ತಿದ್ದಾರಾ ಎಂಬ ಅನುಮಾನಗಳು ಹುಟ್ಟಿವೆ. ಇದನ್ನೂ ಓದಿ: ನಲಪಾಡ್ ಹಲ್ಲೆ ಕೇಸ್ ಸಿಸಿಬಿಗೆ- ದಿನ ಕಳೆದ್ರೂ ಹ್ಯಾರಿಸ್ ಪುತ್ರನ ಬಂಧಿಸದ ಖಾಕಿ

    ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಾಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ.

    ಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಯಾಗಿರುವ ಶಾಸಕರ ಪುತ್ರ ಮಹಮ್ಮದ್ ನಲಪಾಡ್ ಪರಾರಿಯಾಗಿದ್ದಾನೆ.

  • ಕಾಂಗ್ರೆಸ್ ಶಾಸಕ ಹ್ಯಾರಿಸ್ ಮಗನ ಗೂಂಡಾಗಿರಿ -ರೆಸ್ಟೊರೆಂಟ್‍ನಲ್ಲಿ ಯುವಕನಿಗೆ ರಕ್ತ ಬರುವಂತೆ ಥಳಿಸಿ, ಆಸ್ಪತ್ರೆಗೂ ನುಗ್ಗಿ ಹಲ್ಲೆ

    ಕಾಂಗ್ರೆಸ್ ಶಾಸಕ ಹ್ಯಾರಿಸ್ ಮಗನ ಗೂಂಡಾಗಿರಿ -ರೆಸ್ಟೊರೆಂಟ್‍ನಲ್ಲಿ ಯುವಕನಿಗೆ ರಕ್ತ ಬರುವಂತೆ ಥಳಿಸಿ, ಆಸ್ಪತ್ರೆಗೂ ನುಗ್ಗಿ ಹಲ್ಲೆ

    ಬೆಂಗಳೂರು: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

    ಉದ್ಯಮಿ ಲೋಕ್‍ನಾದ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕ. ವಿದ್ವತ್ ಸಿಂಗಪೂರ್‍ನಲ್ಲಿ ಪದವಿ ಮುಗಿಸಿ ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ.

    ಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಯಾಗಿರುವ ಶಾಸಕರ ಪುತ್ರ ಮಹಮ್ಮದ್ ನಲಪಾಡ್ ಪರಾರಿಯಾಗಿದ್ದಾನೆ.

    ಈ ಹಿಂದೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಶಾಂತಿನಗರದ ಪ್ಲಾನ್ ಬಿ ಪಬ್‍ನಲ್ಲಿ ಗಲಾಟೆ ಮಾಡಿಕೊಂಡಿದ್ದ. ಬೌರಿಂಗ್ ಕ್ಲಬ್‍ನಲ್ಲಿ ಸೆಕ್ಯುರಿಟಿ ಗಾರ್ಡ್‍ಗಳ ಮೇಲೆ ಹಲ್ಲೆ ಮಾಡಿದ್ದ ಎಂಬ ಆರೋಪಗಳು ಕೇಳಿ ಬಂದಿದ್ದವು. ಇಷ್ಟಲ್ಲದೇ ಇಂದಿರಾನಗರದ ಪಬ್‍ವೊಂದರಲ್ಲಿ ಸಹ ಗಲಾಟೆ ಮಾಡಿ ಹ್ಯಾರಿಸ್ ಪುತ್ರ ಸುದ್ದಿಯಾಗಿದ್ದ.

    ಶಾಂತಿನಗರ ರೌಡಿಸಂ ಕ್ಷೇತ್ರವಾಗಿ ಬದಲಾಗುತ್ತಿದ್ದು, ಗಾಂಜಾ ಹಾವಳಿ ವಿಪರೀತವಾಗಿದೆ. ಪೊಲೀಸರಿಗೆ ದೂರು ನೀಡಿದ್ರೆ ತೆಗೆದುಕೊಳ್ಳಲು ಹಿಂದೇಟು ಹಾಕ್ತಾರೆ. ಹ್ಯಾರಿಸ್ ಪುತ್ರನ ಮೇಲೆ ಬೌರಿಂಗ್ ಇನ್ಸ್ಟಿಟ್ಯೂಟ್ ಗಲಾಟೆ, ರಿಚ್ಮಂಡ್ ಹೋಟೆಲ್ ಗಲಾಟೆ ಇರಬಹುದು ಯಾವುದೇ ದೂರು ದಾಖಲಾಗಲ್ಲ. ಶಾಸಕರು ತಮ್ಮ ಪ್ರಭಾವ ಬಳಸಿ ಮಗನನ್ನು ರಕ್ಷಣೆ ಮಾಡುತ್ತಿದ್ದಾರೆ. ಪೊಲೀಸರೆಲ್ಲ ಶಾಸಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇಂದು ಸಂಜೆ ಆರು ಗಂಟೆ ಒಳಗಾಗಿ ನಲಪಾಡ್ ನನ್ನ ಬಂಧಿಸದೇ ಹೋದ್ರೆ ಸೋಮವಾರ ಪ್ರತಿಭಟನೆ ಮಾಡ್ತೀವಿ ಅಂತಾ ಬಿಜೆಪಿ ಮುಖಂಡ ವಾಸುದೇವ ಮೂರ್ತಿ ಹೇಳಿದ್ದಾರೆ.

    ವಿದ್ವತ್- ಹಲ್ಲೆಗೊಳಗಾದ ಯುವಕ.