Tag: ಕೇಂದ್ರ ಸರ್ಕಾರ

  • ಶೀಘ್ರವೇ ನಿಮ್ಮ ಕೈ ಸೇರಲಿದೆ 10 ರೂ. ಮುಖ ಬೆಲೆ ಹೊಸ ನೋಟು

    ಶೀಘ್ರವೇ ನಿಮ್ಮ ಕೈ ಸೇರಲಿದೆ 10 ರೂ. ಮುಖ ಬೆಲೆ ಹೊಸ ನೋಟು

    ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶೀಘ್ರವೇ 10 ರೂ. ಮುಖ ಬೆಲೆಯ ಹೊಸ ವಿನ್ಯಾಸದ ನೋಟುಗಳನ್ನು ಬಿಡುಗಡೆಗೊಳಿಸಲಿದೆ ಎಂದು ಮಾಧ್ಯವೊಂದು ವರದಿ ಮಾಡಿದೆ.

    ಮಾಧ್ಯಮ ವರದಿಯ ಪ್ರಕಾರ, ಕಳೆದ ವಾರ ಆರ್ ಬಿಐ ಕೇಂದ್ರ ಸರ್ಕಾರದಿಂದ ಹೊಸ 10 ರೂ ಮುಖ ಬೆಲೆಯ ನೋಟು ಮುದ್ರಣದ ವಿನ್ಯಾಸಕ್ಕೆ ಅನುಮತಿ ಪಡೆದಿದ್ದು, ಈಗಾಗಲೇ ಅಂದಾಜು 100 ಕೋಟಿ 10 ರೂ. ನೋಟುಗಳನ್ನು ಮುದ್ರಣ ಮಾಡಿದೆ ಎನ್ನಲಾಗಿದೆ.

    ನೋಟಿನ ವಿಶೇಷತೆ ಏನು?
    ಹತ್ತು ರೂ. ಹೊಸ ನೋಟಿನಲ್ಲಿ ಗಾಂಧಿ ಭಾವ ಚಿತ್ರ ಇರಲಿದ್ದು, ನೋಟಿನ ಹಿಂಭಾಗದಲ್ಲಿ ಒಡಿಶಾದ ಕೊನಾರ್ಕ್ ಸೂರ್ಯ ದೇವಾಲಯದ ಚಿತ್ರವಿರಲಿದೆ. ಅಲ್ಲದೇ ನೋಟು ಚಾಕೊಲೇಟ್ ಹಳದಿ ಬಣ್ಣವನ್ನು ಹೊಂದಿರಲಿದೆ.

    2016ರ ನವೆಂಬರ್ 8 ರಂದು 1 ಸಾವಿರ ರೂ. ಹಾಗೂ 500 ರೂ. ನೋಟು ನಿಷೇಧದ ಬಳಿಕ ಆರ್ ಬಿಐ ಹೊಸ 500 ರೂ. 2 ಸಾವಿರ ಮುಖ ಬೆಲೆಯ ನೋಟುಗಳನ್ನು ಬಿಡುಗಡೆಗೊಳಿಸಿತ್ತು. ನೋಟ್ ಬ್ಯಾನ್ ಬಳಿಕ ಸೃಷ್ಟಿಯಾಗಿದ್ದ ಚಿಲ್ಲರೆ ಸಮಸ್ಯೆಯನ್ನು ಬಗೆ ಹರಿಸಲು ಆಗಸ್ಟ್ ತಿಂಗಳಿನಲ್ಲಿ ಆರ್ ಬಿಐ ಹೊಸ 200 ರೂ. ಹಾಗೂ 50 ರೂ. ಮುಖ ಬೆಲೆಯ ನೋಟುಗಳನ್ನು ಬಿಡುಗಡೆಗೊಳಿಸಿತ್ತು. 200 ರೂ. ಮುಖ ಬೆಲೆ ನೋಟಿನಲ್ಲಿ ಭಾರತದ ಸಂಸ್ಕೃತಿ ಪರಂಪರೆ ತಿಳಿಸುವ ಸಲುವಾಗಿ ಸಾಂಚಿ ಸೂಪ್ತವನ್ನು ಮುದ್ರಿಸಿದ್ದರೆ, 50 ರೂ. ನೋಟಿನಲ್ಲಿ ಹಂಪಿಯ ಕಲ್ಲಿನ ರಥದ ಚಿತ್ರವನ್ನು ಮುದ್ರಿಸಲಾಗಿತ್ತು.

    ಈ ಹಿಂದೆ 2005ರಲ್ಲಿ 10 ರೂ. ಮುಖ ಬೆಲೆಯ ಹೊಸ ನೋಟುಗಳನ್ನು ಆರ್‍ ಬಿಐ ಬಿಡುಗಡೆ ಮಾಡಿತ್ತು.

  • ಕಾರಿನಲ್ಲಿ ಕ್ರಾಶ್ ಗಾರ್ಡ್ ಬ್ಯಾನ್: ಅಳವಡಿಸಿದ್ರೆ ಬೀಳುತ್ತೆ ಭಾರೀ ದಂಡ!

    ಕಾರಿನಲ್ಲಿ ಕ್ರಾಶ್ ಗಾರ್ಡ್ ಬ್ಯಾನ್: ಅಳವಡಿಸಿದ್ರೆ ಬೀಳುತ್ತೆ ಭಾರೀ ದಂಡ!

    ನವದೆಹಲಿ: ಕಾರ್ ಹಾಗೂ ಇತರೇ ವಾಹನಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಬುಲ್ ಬಾರ್ ಅಥವಾ ಕ್ರಾಶ್ ಗಾರ್ಡ್ ಗಳನ್ನು ತೆಗೆಯಲು ತಕ್ಷಣವೇ ಕ್ರಮಕೈಗೊಳ್ಳಬೇಕೆಂದು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸುತ್ತೋಲೆ ಹೊರಡಿಸಿದೆ.

    ರಸ್ತೆ ಅಪಘಾತದ ಹೆಚ್ಚಿನ ಸಮಯದಲ್ಲಿ ವಾಹನಗಳಿಗೆ ಅಳವಡಿಸಿರುವ ಬುಲ್ ಬಾರ್‍ ಗಳಿಂದ ಪಾದಚಾರಿಗಳಿಗೆ ಹೆಚ್ಚು ಅಪಾಯವಾಗುತ್ತಿದೆ ಎಂದು ತಿಳಿಸಿರುವ ಸಚಿವಾಲಯ ತಕ್ಷಣವೇ ವಾಹನಗಳಲ್ಲಿ ಅಳವಡಿಸಿರುವ ಕ್ರಾಶ್ ಗಾರ್ಡ್ ಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದೆ. ಅಲ್ಲದೇ ಬುಲ್ ಬಾರ್ ಅಳವಡಿಸಿರುವ ವಾಹನಗಳಿಗೆ ಭಾರೀ ದಂಡವನ್ನು ವಿಧಿಸಲು ಅವಕಾಶವನ್ನು ನೀಡಿದೆ.

     

    ಏನಿದು ಕ್ರಾಶ್ ಗಾರ್ಡ್?
    ವಾಹನಗಳಿಗೆ ಸಣ್ಣ ಅಪಘಾತದ ಸಮಯದಲ್ಲಿ ಹೆಚ್ಚಿನ ಹಾನಿಯಾಗದಿರಲಿ ಎಂಬ ಕಾರಣಕ್ಕೆ ಹಾಗೂ ವಾಹನಗಳ ಅಂದವನ್ನು ಹೆಚ್ಚಿಸಲು ಬುಲ್ ಬಾರ್ ಅಥವಾ ಕ್ರಾಶ್ ಗಾರ್ಡ್ ಗಳನ್ನು ಅಳವಡಿಸಲಾಗುತ್ತದೆ. ಕಾರು, ಎಸ್‍ಯುವಿ, ಪಿಕಪ್, ಬಸ್, ಟ್ರಕ್ ಗಳಲ್ಲಿ ಕ್ರಾಶ್ ಗಾರ್ಡ್ ಗಳನ್ನು ಅಳವಡಿಸಲಾಗುತ್ತದೆ. ಇವುಗಳನ್ನು ಕಬ್ಬಿಣ ಮತು ಫೈಬರ್ ನಿಂದ ತಯಾರಿಸಲಾಗುತ್ತದೆ. ಕೆಲವರು ಹೆಚ್ಚಿನ ಸಂಖ್ಯೆಯ ಲೈಟ್ ಗಳನ್ನು ಹಾಕಿ ವಾಹನದ ಅಂದವನ್ನು ಹೆಚ್ಚಿಸಲು ಈ ಕ್ರಾಶ್ ಗಾರ್ಡ್ ಅಳವಡಿಸುತ್ತಾರೆ.

    ಕಾನೂನು ಏನು ಹೇಳುತ್ತೆ?
    1988ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 52 ರ ಪ್ರಕಾರ ಯಾವುದೇ ರೀತಿಯ ವಾಹನಗಳಿಗೆ ಬುಲ್ ಬಾರ್ ಮತ್ತು ಕ್ರಾಶ್ ಗಾರ್ಡ್ ಅಳವಡಿಸುವುದನ್ನು ನಿಷೇಧಿಸಲಾಗಿದೆ. ಈ ಕಾರಣದಿಂದ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಈ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೆ ಮಾಡಲು ರಾಜ್ಯ ಸರ್ಕಾರಿಗಳಿಗೆ ಪತ್ರ ಬರೆದಿದೆ.

    ಕೇಂದ್ರದ ಅದೇಶದ ಅನ್ವಯ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು, ಆಯಾ ರಾಜ್ಯಗಳ ಸಾರಿಗೆ ಇಲಾಖೆ ಕಾರ್ಯದರ್ಶಿಗಳು ಮತ್ತು ಆಯುಕ್ತರು ಈ ಕುರಿತು ಕ್ರಮ ಕೈಗೊಳ್ಳಬೇಕಾಗಿದೆ. ಅಲ್ಲದೇ 1998 ರ ಕಾಯ್ದೆಯ 190, 191 ಸೆಕ್ಷನ್ ಗಳ ಅನ್ವಯ ಬುಲ್ ಬಾರ್ ಅಳವಡಸಿರುವ ವಾಹನ ಚಾಲಕ ಅಥವಾ ಮಾಲೀಕರಿಗೆ ದಂಡ ವಿಧಿಸುವ ಅವಕಾಶವನ್ನು ನೀಡಲಾಗಿದೆ.

    ನಿಷೇಧ ಯಾಕೆ?
    ಅಪಘಾತದ ಸಂದರ್ಭದಲ್ಲಿ ವಾಹನವನ್ನು ರಕ್ಷಿಸಲು ಮತ್ತು ಪಾದಾಚಾರಿಗಳು ವಾಹನ ಸವಾರರಿಗೆ ಗಂಭೀರವಾಗಿ ಏಟು ಬೀಳದೇ ಇರಲಿ ಎನ್ನುವ ಕಾರಣಕ್ಕೆ ಮುಂದುಗಡೆ ಫೈಬರ್ ಬಂಪರ್ ಅಳವಡಿಸಲಾಗುತ್ತದೆ. ಒಂದು ವೇಳೆ ವಾಹನ ಡಿಕ್ಕಿಯಾದಾಗ ಪಾದಾಚಾರಿಗಳು, ಸವಾರರು ಮೇಲಕ್ಕೆ ಚಿಮ್ಮಿ ಬಾನೆಟ್ ಮೇಲೆ ಬೀಳುವಂತೆ ಈ ಕ್ರಾಶ್ ಗಾರ್ಡ್ ವಿನ್ಯಾಸ ಮಾಡಲಾಗುತ್ತದೆ. ಆದರೆ ಅಪಘಾತದ ವೇಳೆ ವಾಹನಕ್ಕೆ ಡಿಕ್ಕಿ ಹೊಡೆಯುವ ಬೈಕ್ ಸವಾರರಿಗೆ, ಪಾದಚಾರಿಗಳಿಗೆ, ಪ್ರಾಣಿಗಳಿಗೆ ಹೆಚ್ಚಿನ ಪೆಟ್ಟು ಬೀಳುತ್ತದೆ. ಈ ಬಂಪರ್ ಬಿದ್ದ ನಂತರ ಪಾದಾಚಾರಿಗಳು ಮೇಲಕ್ಕೆ ಹಾರುವ ಬದಲು ಕೆಳಕ್ಕೆ ಬಿದ್ದು ಮೃತಪಡುವ ಸಾಧ್ಯತೆ ಹೆಚ್ಚಿರುತ್ತದೆ.

    ಎರಡನೇಯದಾಗಿ ಕಾರಿನಲ್ಲಿ ಡ್ರೈವರ್ ಮತ್ತು ಪ್ರಯಾಣಿಕರ ರಕ್ಷಣೆಗೆ ಏರ್ ಬ್ಯಾಗ್ ಇರುತ್ತದೆ. ಈ ಏರ್ ಬ್ಯಾಗ್  ಸೆನ್ಸರ್ ಗಳನ್ನು ಹೆಡ್ ಲ್ಯಾಂಪ್ ಹಿಂಬಂದಿಯಲ್ಲಿ ಅಳವಡಿಸಲಾಗುತ್ತದೆ. ಆದರೆ ಗಂಭೀರ ಅಪಘಾತವಾದಾಗ ಬುಲ್ ಬಾರ್ ನಿಂದಾಗಿ ಅಪಘಾತದ ತೀವ್ರತೆ ಈ ಸೆನ್ಸರ್ ಗೆ ತಟ್ಟುವುದಿಲ್ಲ. ಗಂಭೀರ ಅಪಘಾತ ಸಂಭವಿಸಿದರೂ ಈ ಏರ್ ಬ್ಯಾಗ್ ತೆರೆಯದೇ ಇದ್ದರೆ ಕಾರಿನ ಒಳಗಡೆ ಇರುವ ವ್ಯಕ್ತಿಗಳು ಸಾವನ್ನಪ್ಪುವ ಸಾಧ್ಯತೆ ಹೆಚ್ಚಿರುತ್ತದೆ.

    ಈ ಕ್ರಾಶ್ ಗಾರ್ಡ್ ಗಳನ್ನು ವಾಹನಗಳ ಚಾಸಿಗಳಿಗೆ ಅಳವಡಿಸಲಾಗುತ್ತದೆ. ಯಾವುದೇ ಅಪಘಾತವಾದರೂ ಚಾಸಿಗೆ ಭಾರೀ ಪೆಟ್ಟು ಬೀಳುತ್ತಿರುತ್ತದೆ. ರಕ್ಷಣೆಗಿಂತಲೂ ಅಪಾಯವೇ ಹೆಚ್ಚಾಗುತ್ತಿರುವ ಕಾರಣ ಈಗ ಸರ್ಕಾರ ಈ ಕ್ರಾಶ್ ಗಾರ್ಡ್ ಗಳನ್ನು ತೆಗೆಯುವಂತೆ ಸೂಚಿಸಿದೆ.

    ದಂಡ ಎಷ್ಟು?
    ಬುಲ್ ಬಾರ್ ತೆರವಿಗೆ ರಾಜ್ಯ ಸರ್ಕಾರದ ಅಧಿಕಾರಿಗಳು ನಿಗಧಿತ ಅವಧಿಯನ್ನು ಕಲ್ಪಿಸಿಕೊಡುತ್ತಾರೆ. ನಂತರದಲ್ಲಿಯೂ ವಾಹನಗಳಿಂದ ಬುಲ್ ಬಾರ್ ಗಳನ್ನು ತೆರವುಗೊಳಿಸದೇ ಇದ್ದರೆ ದಂಡ ವಿಧಿಸಲಾಗುತ್ತದೆ. ಮೊದಲ ಬಾರಿ 1 ಸಾವಿರ ರೂ. ದಂಡ ವಿಧಿಸಬಹುದಾಗಿದ್ದು, ಎರಡನೇ ಬಾರಿ ಈ ಮೊತ್ತವನ್ನು 2 ಸಾವಿರಕ್ಕೆ ಹೆಚ್ಚಿಸಲಾಗುತ್ತದೆ. ಒಂದು ವೇಳೆ ವಾಹನದ ತಯಾರಕರು ಬುಲ್ ಬಾರ್ ಅಳವಡಿಸಿದ್ದರೆ ಹಾಗೂ ಬುಲ್ ಬಾರ್ ಗಳನ್ನು ಮಾರಾಟ ಮಾಡುವವರಿಗೆ 5 ಸಾವಿರ ರೂ ದಂಡ ವಿಧಿಸಬಹುದಾಗಿದೆ.

  • ದಲಿತ ಅಂತರ್ಜಾತಿ ವಿವಾಹವಾದ್ರೆ ಕೇಂದ್ರದಿಂದ ಸಿಗುತ್ತೆ 2.5 ಲಕ್ಷ ರೂ.: ಷರತ್ತು ಏನು ಗೊತ್ತಾ?

    ದಲಿತ ಅಂತರ್ಜಾತಿ ವಿವಾಹವಾದ್ರೆ ಕೇಂದ್ರದಿಂದ ಸಿಗುತ್ತೆ 2.5 ಲಕ್ಷ ರೂ.: ಷರತ್ತು ಏನು ಗೊತ್ತಾ?

    ನವದೆಹಲಿ: ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

    ಅಂತರ್ಜಾತಿ ವಿವಾಹಕ್ಕೆ ಬೆಂಬಲ ನೀಡಿ ಸಮಾಜದಲ್ಲಿ ಏಕತೆ ಮೂಡಿಸುವ ಸಲುವಾಗಿ ಡಾ. ಬಿಆರ್. ಅಂಬೇಡ್ಕರ್ ಯೋಜನೆಯನ್ನು 2013ರಲ್ಲಿ ಕೇಂದ್ರ ಸರ್ಕಾರ ಆರಂಭಿಸಿತ್ತು. ಈ ವೇಳೆ ಅಂತರ್ಜಾತಿ ವಿವಾಹವಾಗುವ ವಧು ಅಥವಾ ವರ ದಲಿತ ಸಮುದಾಯಕ್ಕೆ ಸೇರಿರಬೇಕು ಹಾಗೂ ಅವರ ಕುಟುಂಬದ ಆದಾಯ 5 ಲಕ್ಷ ರೂ. ಗಿಂತ ಜಾಸ್ತಿ ಇರಬಾರದು ಎನ್ನುವ ನಿಯಮವನ್ನು ವಿಧಿಸಲಾಗಿತ್ತು. ವಾರ್ಷಿಕವಾಗಿ 500 ಮಂದಿಗೆ ಈ ಆರ್ಥಿಕ ಸಹಾಯವನ್ನು ನೀಡುವ ಗುರಿಯನ್ನು ಸರ್ಕಾರ ಹಾಕಿಕೊಂಡಿತ್ತು.

    ಆದರೆ ಈಗ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಎಲ್ಲ ರಾಜ್ಯಗಳಿಗೆ ಆದೇಶ ಹೊರಡಿಸಿದ್ದು, ಈ ಆದೇಶದಲ್ಲಿ 5 ಲಕ್ಷ ರೂ. ಆದಾಯ ಇರಬೇಕೆಂಬ ನಿಯಮವನ್ನು ಕೈ ಬಿಟ್ಟಿದೆ. ಮದುವೆಯಾದ ಎಲ್ಲರಿಗೂ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ತಿಳಿಸಿದೆ.

    ನಿಯಮ ಏನು ಹೇಳುತ್ತೆ?
    ಈ ಯೋಜನೆಯ ಫಲಾನುಭವಿಯಾಗಲು ದಂಪತಿಗೆ ಮೊದಲ ವಿವಾಹವಾಗಿರಬೇಕು. ಹಿಂದೂ ವಿವಾಹ ಕಾಯ್ದೆಯ ಅಡಿಯಲ್ಲಿ ವಿವಾಹ ನೋಂದಣಿಯಾಗಿರಬೇಕು. ಯೋಜನೆಗೆ ಬೇಕಾದ ಪೂರಕ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಿದರೆ ಸರ್ಕಾರವು 2.5 ಲಕ್ಷ ರೂ. ಹಣವನ್ನು ನೇರವಾಗಿ ನೀಡುತ್ತದೆ. ಈ ಹಣವನ್ನು ಪಡೆಯಲು ದಂಪತಿ ತಮ್ಮ ಆಧಾರ್ ಸಂಖ್ಯೆ ನೊಂದಣಿ ಮಾಡಿಸಿರುವ ಬ್ಯಾಂಕ್ ಖಾತೆಯ ಪೂರಕ ದಾಖಲೆಗಳನ್ನು ನೀಡಬೇಕಾಗುತ್ತದೆ.

    ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುವ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ. ಅವುಗಳು ಯಾವುದೇ ಆದಾಯ ಮಿತಿ ವಿಧಿಸದ ಕಾರಣ ಸರ್ಕಾರ ಈಗ ಈ ನಿರ್ಧಾರ ಕೈಗೊಂಡಿದೆ ಎಂದು ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ.

    ಯೋಜನೆ ಜಾರಿಗೆಯಾದ ನಂತರ 2014-15 ಸಾಲಿನಲ್ಲಿ 5 ದಂಪತಿಗಳಿಗೆ ಹಣ ಮಂಜೂರು ಆಗಿದ್ದರೆ, 2015-16 ಸಾಲಿನಲ್ಲಿ ಇಲಾಖೆಗೆ 522 ಅರ್ಜಿಗಳು ಸಲ್ಲಿಕೆಯಾಗಿದ್ದು, 72 ಅರ್ಜಿಗಳಿ ಹಣ ಸಿಕ್ಕಿದೆ. 2016-17 ಸಾಲಿನಲ್ಲಿ ಸಲ್ಲಿಕೆಯಾದ 736 ಅರ್ಜಿಗಳಲ್ಲಿ 45 ಅರ್ಜಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ವರ್ಷದಲ್ಲಿ ಇದುವರೆಗೂ 409 ಅರ್ಜಿಗಳು ಸಲ್ಲಿಕೆಯಾಗಿದ್ದು, 74 ದಂಪತಿಗಳ ಅರ್ಜಿಗಳನ್ನು ಅಂಗೀಕರಿಸಲಾಗಿದೆ.

    ಈ ನೆರವು ಪಡೆಯಲು ವಿಧಿಸಲಾಗಿರುವ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದ ಕಾರಣ ಬಹಳಷ್ಟು ಅರ್ಜಿಗಳು ತಿರಸ್ಕೃತಗೊಂಡಿದೆ. ವಿಶೇಷವಾಗಿ ಹಿಂದೂ ಮದುವೆ ಕಾಯ್ದೆಯಡಿ ಈ ಮದುವೆ ನೊಂದಣಿ ಆಗಬೇಕೆಂಬ ನಿಯಮವಿದ್ದರೂ ಬಹಳಷ್ಟು ಮದುವೆಗಳು ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ನೊಂದಣಿ ಆಗುತ್ತಿರುವ ಕಾರಣ ಅರ್ಜಿ ತಿರಸ್ಕೃತಗೊಳ್ಳುತ್ತಿವೆ. ಈ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ಪೂರಕ ಅರಿವು ಕಡಿಮೆ ಇದ್ದು, ಯೋಜನೆ ಫಲಾನುಭವಿಯಾಗಲು ಸಂಸದ, ಶಾಸಕ ಅಥವಾ ಜಿಲ್ಲಾಧಿಕಾರಿಗಳ ಶಿಫಾರಸ್ಸು ಅಗತ್ಯವಿದೆ. ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಂದ ಮಾತ್ರ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಭಾರತದಲ್ಲಿ ಎಷ್ಟು ಮಂದಿ ಅಂತರ್ಜಾತಿ ವಿವಾಹವಾಗಿದ್ದಾರೆ ಎನ್ನುವ ನಿಖರ ಮಾಹಿತಿ ಸಿಗುವುದು ಕಷ್ಟ. ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯ ನಂತರ ಸರ್ಕಾರ ಜಾತಿ ಡೇಟಾವನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಿಲ್ಲ. ಆದರೆ ಕೆಲ ಸಂಶೋಧಕರು ಈ ವಿಚಾರದ ಬಗ್ಗೆ ಸಂಶೋಧನೆ ನಡೆಸಿ ವರದಿ ನೀಡಿದ್ದಾರೆ.

    ಜಮ್ಮು ಕಾಶ್ಮೀರ, ರಾಜಸ್ಥಾನ, ಮಧ್ಯಪ್ರದೇಶ, ಮೇಘಾಲಯ, ತಮಿಳುನಾಡು ರಾಜ್ಯಗಳಲ್ಲಿ ಶೇ.95 ರಷ್ಟು ವಿವಾಹಗಳು ತಮ್ಮ ಜಾತಿಯಲ್ಲೇ ನಡೆಯುತ್ತವೆ. ಇನ್ನು ಪಂಜಾಬ್, ಸಿಕ್ಕಿಂ, ಗೋವಾ, ಕೇರಳ ರಾಜ್ಯಗಳಲ್ಲಿ ಶೇ.80 ವಿವಾಹಗಳು ತಮ್ಮ ಜಾತಿ ಮಿತಿಯಲ್ಲೇ ನಡೆಯುತ್ತವೆ ಎಂದು ಕೆಲ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ತಿಳಿದು ಬಂದಿದೆ.

     

  • ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಖಚಿತ- ಶೋಭಾ ಕರಂದ್ಲಾಜೆ

    ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಖಚಿತ- ಶೋಭಾ ಕರಂದ್ಲಾಜೆ

    ಉಡುಪಿ: ಕೇಂದ್ರ ಸರ್ಕಾರ, ಉತ್ತರಪ್ರದೇಶ ಸರ್ಕಾರ ಮತ್ತು ಎಲ್ಲ ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಆಗುವುದು ನಿಶ್ಚಿತ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ಧರ್ಮ ಸಂಸತ್ ಅಧಿವೇಶನದಲ್ಲಿ ಪಾಲ್ಗೊಂಡ ಶೋಭಾ ಕರಂದ್ಲಾಜೆ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಸಂತರು ರಾಮಮಂದಿರಕ್ಕೆ ಒತ್ತುಕೊಟ್ಟು ಮಾತನಾಡಿದ್ದಾರೆ. ವರ್ಷದ ಒಳಗೆ ರಾಮ ಮಂದಿರ ದೇಶದಲ್ಲಿ ನಿರ್ಮಾಣವಾಗುತ್ತದೆ ಎಂಬ ನಂಬಿಕೆ ಬಂದಿದೆ. ರವಿಶಂಕರ್ ಗುರೂಜಿ ಈಗಾಗಲೇ ಸಂಧಾನ ಪ್ರಕ್ರಿಯೆಯನ್ನು ನಡೆಸುತ್ತಿದ್ದು ಇದರಲ್ಲಿ ಅವರು ಯಶಸ್ವಿಯಾಗಲಿದ್ದಾರೆ ಎಂದರು.

    ನಮ್ಮ ಮೇಲೆ ಶ್ರೀರಾಮಚಂದ್ರ, ಆಂಜನೇಯರ ಆಶೀರ್ವಾದ ಇದೆ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇದೆ. ಎರಡು ಸಮುದಾಯದವರು ಸೇರಿ ಕೋರ್ಟ್‍ನಿಂದ ಹೊರಗೆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳಬೇಕು ಎಂದರು.

  • ಈ ಬಾರಿ ಸಂಸತ್‍ ನ ಚಳಿಗಾಲದ ಅಧಿವೇಶನ ನಡೆಯೋದು ಡೌಟ್

    ಈ ಬಾರಿ ಸಂಸತ್‍ ನ ಚಳಿಗಾಲದ ಅಧಿವೇಶನ ನಡೆಯೋದು ಡೌಟ್

    ನವದೆಹಲಿ: ಈ ಬಾರಿ ಚಳಿಗಾಲದ ಸಂಸತ್ ಅಧಿವೇಶನ ನಡೆಯೋದು ಅನುಮಾನ ಎಂದು ಹೇಳಲಾಗ್ತಿದೆ. ಇದೇನಾದ್ರೂ ನಿಜವೇ ಆದಲ್ಲಿ ಹೀಗೆ ಆಗೋದು ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿ.

    ಗುಜರಾತ್-ಹಿಮಾಚಲ ಪ್ರದೇಶ ವಿಧಾಸಭೆ ಚುನಾವಣೆ, ರಾಜ್ಯದಲ್ಲಿ ಪರಿವರ್ತನೆ ಯಾತ್ರೆಗಳಲ್ಲಿ ಪ್ರಧಾನಿ ಮೋದಿ ಸೇರಿದಂತೆ ಇಡೀ ಸಂಪುಟ ಫುಲ್ ಬ್ಯುಸಿ ಇದೆ. ಕೇಂದ್ರ ಸಚಿವರು ಪುರುಸೊತ್ತು ಇಲ್ಲದಂತೆ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಚಳಿಗಾಲದ ಅಧಿವೇಶನ ನಡೆಸೋದು ಬೇಡ ಎಂಬ ನಿರ್ಧಾರಕ್ಕೆ ಬಿಜೆಪಿ ನಾಯಕರು ಬಂದಿದ್ದಾರೆ ಎನ್ನಲಾಗುತ್ತಿದೆ.

    ಸಂವಿಧಾನದ ಪ್ರಕಾರ, ಎರಡು ಅಧಿವೇಶನಗಳ ನಡುವಿನ ಅಂತರ 6 ತಿಂಗಳು ಮೀರಬಾರದು. ಆದ್ರೆ ವರ್ಷದಲ್ಲಿ ಮೂರು ಬಾರಿ ಅಧಿವೇಶನ ಕರೆಯಬೇಕೆಂಬ ಕಡ್ಡಾಯ ನಿಯಮವೇನೂ ಇಲ್ಲ. ಆದ್ರೂ ಇದುವರೆಗೂ ಬಜೆಟ್ ಅಧಿವೇಶನ, ಮಳೆಗಾಲದ ಅಧಿವೇಶನ ಮತ್ತು ಚಳಿಗಾಲದ ಅಧಿವೇಶನ ನಡೆಸೋದು ಒಂದು ಸಂಪ್ರದಾಯವೇ ಆಗಿ ಹೋಗಿದೆ.

    ಆದ್ರೆ ಈ ಬಾರಿ ಇದಕ್ಕೆ ಬ್ರೇಕ್ ಬೀಳೋ ಸಾಧ್ಯತೆ ಇದೆ. ಮಳೆಗಾಲದ ಸಂಸತ್ ಅಧಿವೇಶ ಆಗಸ್ಟ್ 11ಕ್ಕೆ ಮುಗಿದಿತ್ತು. ಹೀಗಾಗಿ ಮುಂದಿನ ಅಧಿವೇಶನ ನಡೆಸೋದಕ್ಕೆ ಫೆಬ್ರವರಿವರೆಗೂ ಸರ್ಕಾರಕ್ಕೆ ಟೈಂ ಇದೆ. ಈ ಬಗ್ಗೆ ವಿಪಕ್ಷಗಳು ತಕರಾರು ತೆಗೆದಲ್ಲಿ ಡಿಸೆಂಬರ್‍ನಲ್ಲಿ 10 ದಿನ ಅಧಿವೇಶನ ಕರೆಯಲು ಸಹ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

     

  • ಆಧಾರ್ ಕಡ್ಡಾಯದಿಂದ ದೇಶದ ಭದ್ರತೆಗೆ ಅಪಾಯ: ಸುಬ್ರಮಣಿಯನ್ ಸ್ವಾಮಿ

    ಆಧಾರ್ ಕಡ್ಡಾಯದಿಂದ ದೇಶದ ಭದ್ರತೆಗೆ ಅಪಾಯ: ಸುಬ್ರಮಣಿಯನ್ ಸ್ವಾಮಿ

    ನವದೆಹಲಿ: ಎಲ್ಲದಕ್ಕೂ ಆಧಾರ್ ಕಡ್ಡಾಯಗೊಳಿಸಿರುವುದರಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಾಗುತ್ತದೆ ಎಂದು ರಾಜ್ಯಸಭಾ ಬಿಜೆಪಿ ಸಂಸದ  ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

    ಆಧಾರ್ ಕಡ್ಡಾಯಗೊಳಿಸಿರುವುದರಿಂದ ದೇಶದ ಭದ್ರತೆಗೆ ಯಾವ ರೀತಿಯಾಗಿ ಅಪಾಯವಿದೆ ಎಂದು ವಿವರಿಸಿ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಅವರು ಹೇಳಿದ್ದಾರೆ,

    ವಿವಿಧ ಸೇವೆಗಳನ್ನು ಹಾಗೂ ಸಮಾಜ ಕಲ್ಯಾಣ ಯೋಜನೆಯನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿರುವ ವಿಷಯವು ಸವಾಲು ಆಗುವುದರಿಂದ ಸುಪ್ರೀಂ ಕೊರ್ಟ್ ರದ್ದು ಪಡಿಸಲಿದೆ ಎಂದು  ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

    ಇದನ್ನೂ ಓದಿ: ಆಧಾರ್ ಮಾಹಿತಿ ನೀಡದ್ದಕ್ಕೆ ಬಾಲಕನಿಗೆ ಶಿಕ್ಷಕರಿಂದ ಹಿಗ್ಗಾಮುಗ್ಗ ಥಳಿತ, ಸರ್ಜರಿಯೇ ಮಾಡಿಸಬೇಕಾಯ್ತು

    ಮೊಬೈಲ್ ಫೋನ್ ಗಳಿಗೆ ಆಧಾರ್ ಲಿಂಕ್ ಮಾಡುವುದನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆ ವೇಳೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿ ಉತ್ತರಿಸುವಂತೆ ಸೂಚಿಸಿದೆ. ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಆಧಾರ್ ಕಡ್ಡಾಯ ಗೊಳಿಸುವುದನ್ನು ಪ್ರಶ್ನಿಸಿರುವ ಕೋರ್ಟ್ ಎಲ್ಲಾ ಅರ್ಜಿಗಳನ್ನು ಸಂವಿಧಾನ ಪೀಠ ಒಟ್ಟಿಗೆ ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

    ಇದನ್ನೂ ಓದಿ: ಗ್ರಾಮದ 800 ಜನರ ಆಧಾರ್ ಕಾರ್ಡ್‍ನಲ್ಲೂ ಒಂದೇ ಜನ್ಮ ದಿನಾಂಕ

    ಈ ಹಿಂದೆಯೂ ಸುಬ್ರಮಣಿಯನ್ ಸ್ವಾಮಿಯವರು ಆಧಾರ್ ವಿರುದ್ಧ ಮಾತನಾಡಿದ್ದರು. ಆಧಾರ್ ವಿವರಗಳು ವಿದೇಶಿ ಗುಪ್ತಚರ ಸಂಸ್ಥೆಗಳ ಪಾಲಾಗುವ ಅಪಾಯವಿದೆ ಎಂದು ವಾದಿಸಿದ್ದರು.

     

  • ಕೇಂದ್ರ ಸರ್ಕಾರದ ಬಳಿ ಒಟ್ಟು ಎಷ್ಟು ಭೂಮಿ ಇದೆ ಗೊತ್ತಾ?

    ಕೇಂದ್ರ ಸರ್ಕಾರದ ಬಳಿ ಒಟ್ಟು ಎಷ್ಟು ಭೂಮಿ ಇದೆ ಗೊತ್ತಾ?

    ನವದೆಹಲಿ: ಕೇಂದ್ರ ಸರ್ಕಾರವು ದೇಶಾದ್ಯಂತ ಹೊಂದಿರುವ ಒಟ್ಟು ಭೂಮಿಯ ವಿಸ್ತೀರ್ಣ ಎಷ್ಟು ಎಂಬ ಕುರಿತು ಸ್ಪಷ್ಟ ಮಾಹಿತಿ ಲಭಿಸಿದ್ದು, ರಾಷ್ಟರ ರಾಜಧಾನಿ ದೆಹಲಿಗಿಂತ ಸುಮಾರು 9 ಪಟ್ಟು ದೊಡ್ಡದಾಗಿದೆ ಎಂಬ ಮಾಹಿತಿಯನ್ನು ಸರ್ಕಾರ ಅಂಕಿ ಅಂಶಗಳು ತಿಳಿಸಿವೆ.

    ಕೇಂದ್ರ ಸರ್ಕಾರ 51 ಸಚಿವಾಲಯಗಳ ಪೈಕಿ 41 ಕೇಂದ್ರ ಸಚಿವಾಲಯಗಳು ಹಾಗೂ 22 ರಾಜ್ಯ ಸಚಿವಾಲಯಗಳು ತಮ್ಮ ಇಲಾಖೆಯ ಅಧೀನದಲ್ಲಿರುವ ಭೂಮಿಯ ಕುರಿತು ಮಾಹಿತಿಯನ್ನು ನೀಡಿವೆ.

    ಸಚಿವಾಲಯಗಳು ನೀಡಿರುವ ಮಾಹಿತಿಯಂತೇ ದೇಶಾದ್ಯಂತ ಒಟ್ಟು 13,505 ಚದರ ಕಿ.ಮೀ ಪ್ರದೇಶದ ಭೂಮಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಅಂದರೆ ರಾಜಧಾನಿ ದೆಹಲಿ (1,483 ಚದರ ಕಿ.ಮೀ) 9 ಪಟ್ಟು ಹೆಚ್ಚಿನ ಭೂಮಿ ಕೇಂದ್ರ ಸರ್ಕಾರದ ಒಡೆತನದಲ್ಲಿದೆ.

    ಕೇಂದ್ರವು ಹೊಂದಿರುವ ಒಟ್ಟು ಭೂ ಪ್ರದೇಶದಲ್ಲಿ ಹೆಚ್ಚಿನ ಪ್ರದೇಶವು ರೈಲ್ವೇ ಇಲಾಖೆ(2,929.6 ಚದರ ಕಿ.ಮೀ)ಗೆ ಸಂಬಂಧಿಸಿದೆ. ಇನ್ನುಳಿದಂತೆ ರಕ್ಷಣಾ ಇಲಾಖೆ ಎರಡನೇ ಸ್ಥಾನದಲ್ಲಿದ್ದು, ದೇಶದ ರಕ್ಷಣಾ ದೃಷ್ಟಿಯಿಂದ ಈ ಮಾಹಿತಿಯನ್ನು ಬಹಿರಂಗೊಳಿಸಿಲ್ಲ. ರಕ್ಷಣಾ ಇಲಾಖೆಯ ಸಂಬಂಧಿಸಿದಂತೆ ಕೇವಲ 383.62 ಚದರ ಕಿ.ಮೀ ಪ್ರದೇಶದ ಮಾಹಿತಿಯನ್ನು ಮಾತ್ರ ನೀಡಿದೆ. ಈ ಹಿಂದೆ 2010-11 ನೇ ಸಾಲಿನಲ್ಲಿ ಸರ್ಕಾರದ ವರದಿ ರಕ್ಷಣಾ ಇಲಾಖೆಯು ಸುಮಾರು 7 ಸಾವಿರ ಚದರ ಕಿ.ಮೀ ಭೂಮಿಯನ್ನು ಹೊಂದಿದೆ ಎಂದು ತಿಳಿಸಿತ್ತು.

    ಕೇಂದ್ರ ತನ್ನ ಇಲಾಖೆಗಳ ಅಧೀನದಲ್ಲಿರುವ ಭೂ ವಿಸ್ತೀರ್ಣದ ಬಗ್ಗೆ ಮಾಹಿತಿಯನ್ನು ಪಡೆಯಲು 2012 ರಲ್ಲಿ ಮಾಜಿ ಹಣಕಾಸು ಕಾರ್ಯದರ್ಶಿ ವಿಜಯ್ ಕೇಲ್ಕರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಕ ಮಾಡಿತ್ತು. ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ದೇಶದ ಹಲವು ರಾಜ್ಯಗಳು ಕೇಂದ್ರ ಭೂಮಿಯನ್ನು ಬಾಡಿಗೆಗೆ ನೀಡುವುದರ ಮೂಲಕ ಆಧಾಯವನ್ನು ಪಡೆಯುತ್ತಿದ್ದವು.

    ಸರ್ಕಾರ ಈ ಪ್ರದೇಶಗಳು ದೇಶದ ಸಾರ್ವಜನಿಕರ ಸೇರಿದ ಅಮೂಲ್ಯ ಪ್ರದೇಶಗಳಾಗಿದ್ದು ಈ ಕುರಿತು ಸ್ಪಷ್ಟ ಮಾಹಿತಿಯನ್ನು ಹೊಂದಿರಬೇಕಿದೆ ಎಂದು ಭಾರತದ ಸ್ವತಂತ್ರ ಸಂಶೋಧನಾ ಸಂಸ್ಥೆಯ ನಿರ್ದೇಶಕರು ಹಾಗೂ ಸ್ಥಾಪಕರದ ಶುಭಾಸಿಸ್ ಗಂಗೋಪಾಧ್ಯಾಯ ತಿಳಿಸಿದ್ದಾರೆ.

    ಸರ್ಕಾರಿ ಪ್ರದೇಶಗಳ ಸೂಕ್ತ ಬಳಕೆಯ ಕುರಿತು ಸಾರ್ವಜನಿಕರಿಂದ ಸಲಹೆಗಳನ್ನು ‘ರೈಟ್ ಟು ಕಾಂಟೆಸ್ಟ್’ ಎಂಬ ಯೋಜನೆಯ ಮೂಲಕ ಮಾಹಿತಿಯನ್ನು ನೀಡುವಂತೆ ಕೇಳಲಾಗಿದೆ ಎಂದು ತಿಳಿಸಿದರು.

    ಇನ್ನುಳಿದಂತೆ ಕಲ್ಲಿದ್ದಲು ಗಣಿ 2,580.92 ಚದರ ಕಿ.ಮೀ., ಇಂಧನ ಇಲಾಖೆಯ 1,806.69 ಚದರ ಕಿ.ಮೀ, ಬೃಹತ್ ಉದ್ಯಮಗಳು ಹಾಗೂ ಸಾರ್ವಜನಿಕ ಉದ್ಯಮ ಇಲಾಖೆ 1,209.49 ಚದರ ಕಿ.ಮೀ ವಿಸ್ತೀರ್ಣದ ಪ್ರದೇಶಗಳನ್ನು ಹೊಂದಿವೆ.

    ಸರ್ಕಾರ ದೊರೆತಿರುವ ಭೂಮಿ ಒಂದು ಭಾಗವನ್ನು ಹಣಗಳಿಕೆ, ವಸತಿ ಮತ್ತು ಇತರ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಯಾವ ಸಚಿವಾಲಯದಲ್ಲಿ ಎಷ್ಟು?
    ರೈಲ್ವೇ – 2,929.6 ಚದರ ಕಿ.ಮೀ
    ಕಲ್ಲಿದ್ದಲು ಗಣಿ – 2,580.92 ಚದರ ಕಿ.ಮೀ
    ಇಂಧನ ಇಲಾಖೆ – 1,806.69 ಚದರ ಕಿ.ಮೀ
    ಬೃಹತ್ ಉದ್ಯಮಗಳು ಹಾಗೂ ಸಾರ್ವಜನಿಕ ಉದ್ಯಮ ಇಲಾಖೆ – 1,209.49 ಚದರ ಕಿ.ಮೀ
    ನೌಕ ಇಲಾಖೆ – 1,146 ಚದರ ಕಿ.ಮೀ
    ಸ್ಟಿಲ್ – 608.02 ಚದರ ಕಿ.ಮೀ
    ಕೃಷಿ – 589.07 ಚದರ ಕಿ.ಮೀ
    ಗೃಹ ಸಚಿವಾಲಯ – 443.12 ಚದರ ಕಿ.ಮೀ
    ಮಾನವ ಸಂಪನ್ಮೂಲ ಅಭಿವೃದ್ಧಿ – 409.43 ಚದರ ಕಿ.ಮೀ
    ರಕ್ಷಣೆ – 383.62 ಚದರ ಕಿ.ಮೀ

     

     

  • ಸಂಸತ್ ನಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ: ಎಚ್.ಡಿ. ದೇವೇಗೌಡ

    ಸಂಸತ್ ನಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ: ಎಚ್.ಡಿ. ದೇವೇಗೌಡ

    ಬಳ್ಳಾರಿ: ಸಂಸತ್ ನಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

    ಮಕ್ಕೆಜೋಳ ಹಾನಿ ಪರಿಶೀಲನೆ ಮಾಡಲು ಇಂದು ಜಿಲ್ಲೆಯ ಹೂವಿನ ಹಡಗಲಿಗೆ ದೇವೇಗೌಡರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು, ಸಂಸತ್‍ನಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಕಳೆದ ವರ್ಷ ಸರ್ಕಾರದ ಬಜೆಟ್ ಮೇಲೆ ನಾನು ಮಾತನಾಡಿದ್ದೇನೆ. ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕಠಿಣವಾಗಿ ಮಾತನಾಡುತ್ತಿದ್ದೆ. ಆದರೆ ಈಗ ಸಂಖ್ಯಾಬಲದ ಆಧಾರವೆಂದು ಹೊಸ ನಿಯಮ ಜಾರಿಗೆ ತಂದು ನನ್ನ ಭಾಷಣವನ್ನು ಹತ್ತಿಕ್ಕಲಾಗುತ್ತಿದೆ ಎಂದು ಕೋಪಗೊಂಡು ಹೇಳಿದ್ದಾರೆ.

    ಮಾತನ್ನು ಮುಂದುವರೆಸಿ, ಸೈನಿಕ ಹುಳಕಾಟದಿಂದ ಮೆಕ್ಕೆಜೋಳ ಎಲ್ಲಾವೂ ಹಾಳಾಗಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಅತಿಯಾದ ಮಳೆಯಿಂದ ಕೂಡಾ ಬೆಳೆಹಾನಿಯಾಗಿದೆ. ಪರಿಹಾರ ನೀಡಬೇಕಾದ ಎರಡು ಸರ್ಕಾರಗಳು ರೈತರ ಬಗ್ಗೆ ತಾತ್ಸಾರ ಮನೋಭಾವನೆ ಹೊಂದಿವೆ. ಅಷ್ಟೇ ಅಲ್ಲದೇ ಟಿಪ್ಪು ಜಯಂತಿ ವಿವಾದದಿಂದ ಕಾಂಗ್ರೆಸ್-ಬಿಜೆಪಿ ಒಬ್ಬರಿಗೊಬ್ಬರು ಪೈಪೋಟಿ ನಡೆಸುತ್ತಿದ್ದಾರೆ. ಈ ರೀತಿಯ ಪರವಿರೋಧ ಚರ್ಚೆಗೆ ಅರ್ಥವಿಲ್ಲ. ಬಿಜೆಪಿ ಅತಿರೇಕಕ್ಕೆ ಹೋಗಬಾರದು ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

    ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಟಿಪ್ಪು ಜಯಂತಿಗೆ ಬೆಂಬಲ ನೀಡಿದ್ದರು. ಆದರೆ ಈಗ ವಿರೋದಿಸುತ್ತಿರುವುದು ಸರಿಯಲ್ಲ. ಅನಂತಕುಮಾರ ಹೆಗಡೆ ಮಂತ್ರಿಯಾಗಿ ಈ ರೀತಿ ಮುಸ್ಲಿಮರ ಓಟು ನನಗೆ ಬೇಕಿಲ್ಲ ಎಂದು ಮಾತನಾಡುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಯಾಗುತ್ತದೆ. ಮುಸ್ಲಿಂ ಮತ್ತು ಕ್ರೈಸ್ತರನ್ನು ಕಳುಹಿಸಿ 2ನೇ ಪಾಕಿಸ್ತಾನ ಹುಟ್ಟು ಹಾಕೋಕೆ ಆಗುತ್ತಾ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

  • ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ-ಆರ್‍ಬಿಐ ಸ್ಪಷ್ಟನೆ

    ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ-ಆರ್‍ಬಿಐ ಸ್ಪಷ್ಟನೆ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ನಿಯಮಗಳ ಅಡಿಯಲ್ಲಿ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ರಿಸರ್ವ ಬ್ಯಾಂಕ್ ಸ್ಪಷ್ಟಪಡಿಸಿದ್ದು, ಆಧಾರ್ ಲಿಂಕ್ ಕುರಿತು ಜನತೆಯಲ್ಲಿ ಮೂಡಿದ್ದ ಗೊಂದಲಗಳಿಗೆ ಈಗ ಆರ್‍ಬಿಐ ತೆರೆ ಎಳೆದಿದೆ.

    ಈ ಹಿಂದೆ ಕೇಂದ್ರ ಸರ್ಕಾರವು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ 2017 ಡಿಸೆಂಬರ್ 31 ಅಂತಿಮ ದಿನ ಎಂಬ ಆದೇಶವನ್ನು ಹೊರಡಿಸಿತ್ತು. ಆದರೆ ಬಗ್ಗೆ ರಿಸರ್ವ್ ಬ್ಯಾಂಕ್ ಯಾವುದೇ ಆದೇಶವು ನೀಡಿಲ್ಲ ಎಂದು ತಿಳಿಸಿತ್ತು.

    ಪ್ರಸ್ತುತ ಈ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿರುವ ರಿಸರ್ವ್ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯ ಎಂದು ತಿಳಿಸಿದೆ. ಈಗಾಗಲೇ ತೆರೆಯಲಾಗಿರುವ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಬೇಕಾಗಿದ್ದು, ಹೊಸ ಖಾತೆಯನ್ನು ಆಂಭಿಸಬೇಕಾದರೆ 12 ಸಂಖ್ಯೆಗಳ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಅರ್ಜಿಯಲ್ಲಿ ನಮೂದಿಸಬೇಕಿದೆ ಎಂದು ತಿಳಿಸಿದೆ.

    ಆರ್ಥಿಕ ಸಚಿವ ಆರುಣ್ ಜೇಟ್ಲಿ ಆಗಸ್ಟ್ ತಿಂಗಳಿನಲ್ಲಿ ಸುಮಾರು 52.4 ಕೋಟಿ ಬ್ಯಾಂಕ್ ಖಾತೆಗಳಿಗೆ ಆಧಾರ್ ನಂಬರ್ ಜೋಡಣೆ ಮಾಡಲಾಗಿದೆ ಎಂದು ತಿಳಿಸಿದ್ದರು. ಅಲ್ಲದೇ ಹಲವು ಬ್ಯಾಂಕ್ ಗ್ರಾಹಕರು ಟ್ಯಾಕ್ಸ್ ಸಲ್ಲಿಕೆಯ ವೇಳೆ ತಮ್ಮ ಬ್ಯಾಂಕ್ ಖಾತೆಗಳಿಗೆ ಕಡ್ಡಾಯವಾಗಿ ಪ್ಯಾನ್ ನಂಬರ್ ಲಿಂಕ್ ಮಾಡಿದ್ದಾರೆ.

    ಆಧಾರ್ ಲಿಂಕ್ ಮಾಡುವ ಕುರಿತು ಮಾಹಿತಿಯನ್ನು ಕೋರಿ ಆರ್‍ಟಿಐ ಕಾರ್ಯಕರ್ತರೊಬ್ಬರು ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಿದ್ದ ಆರ್‍ಬಿಐ ತಾನು ಯಾವುದೇ ಬ್ಯಾಂಕ್‍ಗಳಿಗೆ ಈ ಕುರಿತು ಆದೇಶವನ್ನು ನೀಡಿಲ್ಲ ಎಂದು ತಿಳಿಸಿತ್ತು.

  • ಗುಡ್‍ನ್ಯೂಸ್, ಮುಷ್ಕರ ಕೈಬಿಟ್ಟ ಪೆಟ್ರೋಲ್ ಬಂಕ್ ಮಾಲೀಕರು

    ಗುಡ್‍ನ್ಯೂಸ್, ಮುಷ್ಕರ ಕೈಬಿಟ್ಟ ಪೆಟ್ರೋಲ್ ಬಂಕ್ ಮಾಲೀಕರು

    ಬೆಂಗಳೂರು: ನಾಳೆ ಮಧ್ಯರಾತ್ರಿಯಿಂದ ದೇಶಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಇದೀಗ ಮುಷ್ಕರವನ್ನು ಕೈಬಿಟ್ಟಿದ್ದಾರೆ.

    ತೈಲ ಕಂಪನಿಗಳು ಮಾತುಕತೆ ಗೆ ಮುಂದಾದ ಹಿನ್ನಲೆಯಲ್ಲಿ ಬಂಕ್ ಮಾಲೀಕರು ಈ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ.

    ಮುಷ್ಕರ ಯಾಕೆ?: ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಪೆಟ್ರೋಲ್ ಡೀಸೆಲ್ ಡೀಲರ್ಸ್ ಆಸೋಸಿಯೇಷನ್ ಅಕ್ಟೋಬರ್ 13 ರಂದು ದೇಶಾದ್ಯಂತ ಪೆಟ್ರೋಲ್ ಬಂಕ್ ಬಂದ್ ನಡೆಸಲು ನಿರ್ಧರಿಸಿತ್ತು.

    ಸರ್ಕಾರವು ನಿತ್ಯ ದರದ ಪರಿಷ್ಕರಣೆಯನ್ನು ಕೈ ಬಿಡಲು ಹಾಗೂ ಅಪೂರ್ಣ ಚಂದ್ರ ಕಮೀಟಿ ವರದಿ ಜಾರಿಗೆ ಒತ್ತಾಯಿಸಿ ನಾಳೆ ಮಧ್ಯರಾತ್ರಿಯಿಂದ ಅಕ್ಟೋಬರ್ 13 ರ ದಿನವಿಡಿ ಪೆಟ್ರೋಲ್ ಬಂಕ್ ಬಂದ್ ಮಾಡಲು ಸಂಘ ಮುಂದಾಗಿತ್ತು.

    ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳದಿದ್ದರೆ, ನಾವು ಅಕ್ಟೋಬರ್ 27 ರಿಂದ ನಮ್ಮ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟಾವಾಧಿ ಬಂದ್ ನಡೆಸುವುದಾಗಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಪೆಟ್ರೋಲ್ ಡೀಸೆಲ್ ಡೀಲರ್ಸ್ ಆಸೋಸಿಯೇಷನ್ ರವೀಂದ್ರನಾಥ್ ಪಬ್ಲಿಕ್ ಟಿವಿಗೆ ತಿಳಿಸಿದ್ದರು.