Tag: ಕೇಂದ್ರ ಸರ್ಕಾರ

  • ಮತ್ತೆ 500, 1 ಸಾವಿರ ರೂ. ಹಳೆ ನೋಟುಗಳಿಗೆ ಮರುಜೀವ?

    ಮತ್ತೆ 500, 1 ಸಾವಿರ ರೂ. ಹಳೆ ನೋಟುಗಳಿಗೆ ಮರುಜೀವ?

    ನವದೆಹಲಿ: ನೋಟ್ ಬ್ಯಾನ್ ಬಳಿಕ ಮೂಲೆಗುಂಪಾಗಿದ್ದ ಹಳೆಯ 500, ಸಾವಿರ ನೋಟಿಗೆ ಸುಪ್ರೀಂಕೋರ್ಟ್ ಮತ್ತೆ ಮರುಜೀವ ನೀಡಿದೆ.

    ಯಾವ ವ್ಯಕ್ತಿ ಪ್ರಾಮಾಣಿಕವಾಗಿ ಹಳೆಯ ನೋಟುಗಳನ್ನು ಇಟ್ಟುಕೊಂಡಿದ್ದಾರೋ ಅಂಥವರಿಗೆ ಮತ್ತೊಮ್ಮೆ ಹಣವನ್ನು ಠೇವಣಿ ಇಡಲು ಅವಕಾಶ ನೀಡಬೇಕು. ಈ ಬಗ್ಗೆ ನಿಮ್ಮ ನಿಲುವು ಏನು ಎನ್ನುವುದನ್ನು ತಿಳಿಸಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

    ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಹಣಕಾಸು ಸಚಿವಾಲಯ ಈ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಬೇಕು. ಇದಕ್ಕಾಗಿ 2 ವಾರಗಳ ಕಾಲ ಕಾಲಾವಕಾಶ ನೀಡುತ್ತಿದ್ದೇವೆ. ಒಂದುವೇಳೆ ನೀವು ಉತ್ತರ ನೀಡದೇ ಇದ್ದರೆ ಇದೊಂದು ಗಂಭೀರ ಪ್ರಕರಣ ಎಂದು ಪರಿಗಣಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಜುಲೈ 18ರಂದು ಮತ್ತೆ ಅರ್ಜಿ ವಿಚಾರಣೆಗೆ ಕೋರ್ಟ್ ಸಮಯ ನಿಗದಿಪಡಿಸಿದ್ದು, ಇಂದಿನ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್, ಪ್ರಾಮಾಣಿಕವಾಗಿ ಹಣವನ್ನು ಇಟ್ಟುಕೊಂಡವರಿಗೆ ಅವರಿಗೆ ಮತ್ತೊಮ್ಮೆ ಠೇವಣಿ ಇಡಲು ಅವಕಾಶ ನೀಡಬೇಕು. ಒಂದು ವೇಳೆ ಅವಕಾಶ ನೀಡದೇ ಇದ್ದಲ್ಲಿ ಇದನ್ನು ಗಂಭೀರ ಪ್ರಕರಣ ಎಂದು ಪರಿಗಣಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ನವೆಂಬರ್ 8ರಂದು ನೋಟು ಬ್ಯಾನ್ ನಿರ್ಧಾರ ಕೈಗೊಂಡ ಬಳಿಕ ಮಾರ್ಚ್ 31ರ ವರೆಗೆ ಹಳೆಯ ನೋಟುಗಳನ್ನು ಠೇವಣಿ ಇಡಲು ಆರ್‍ಬಿಐ ಅನುಮತಿ ನೀಡಿತ್ತು.

     

  • ಜಿಎಸ್‍ಟಿ ಬಗ್ಗೆ ತಲೆಕಡಿಸಿಕೊಳ್ಳಬೇಡಿ, ಈ ಸುದ್ದಿ ಓದಿ ನಕ್ಕುಬಿಡಿ

    ಜಿಎಸ್‍ಟಿ ಬಗ್ಗೆ ತಲೆಕಡಿಸಿಕೊಳ್ಳಬೇಡಿ, ಈ ಸುದ್ದಿ ಓದಿ ನಕ್ಕುಬಿಡಿ

    ನವದೆಹಲಿ: ದೇಶದಲ್ಲಿ ಜಿಎಸ್‍ಟಿ ಜಾರಿಗೆ ಬಂದಿದ್ದೂ ಆಯ್ತು. ಆದ್ರೆ ಈ ಬಗ್ಗೆ ಜನರಿಗೆ ಇನ್ನೂ ಏನೂ ಅನ್ನೋದೇ ತಿಳಿದಿಲ್ಲ. ಈ ಮಧ್ಯೆ ಜಿಎಸ್‍ಟಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಜೋಕ್ಸ್ ಹಾಗೂ ಮೀಮ್ಸ್ ಗಳು ಹರಿದಾಡುತ್ತಿವೆ.

    ಜಿಎಸ್‍ಟಿ ಅಂದ್ರೆ ಏನೂ ಅಂತಾ ಜನರು ಇನ್ನೂ ಗೊಂದಲಕ್ಕೀಡಾಗಿದ್ದಾರೆ. ಹೀಗಾಗಿ ಅದಕ್ಕೆ ಏನೇನೂ ಅರ್ಥಗಳನ್ನು ಕಲ್ಪಿಸಿಕೊಂಡು ಜನ ಜೋಕ್ಸ್ ಗಳನ್ನು ಹರಿಯಬಿಡುತ್ತಾರೆ. ಹೀಗಾಗಿ ಕೇಂದ್ರ ಸರ್ಕಾರ ಜುಲೈ 1ರಿಂದ ದೇಶಾದ್ಯಂತ ಜಾರಿಗೆ ತಂದಿರುವ ಈ ಜಿಎಸ್‍ಟಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದೆ.

    ಒಟ್ಟಿನಲ್ಲಿ ಜಿಎಸ್‍ಟಿ ಬಗ್ಗೆ ನೀವೂ ತಲೆಕೆಡಿಸಿಕೊಳ್ಳುವ ಬದಲು ಈ ಕೆಳಗಿನ ಜೋಕ್ಸ್ ಗಳನ್ನು ಓದಿ ನಕ್ಕುಬಿಡಿ. ಮನರಂಜನೆಗೆ ಮಾತ್ರ ಈ ಸುದ್ದಿಯನ್ನು ನೀಡಿದ್ದು ಗಂಭೀರವಾಗಿ ಸ್ವೀಕರಿಸಬೇಡಿ.

    https://twitter.com/Fussy_Ca/status/877929713984917504

    https://twitter.com/Supermanbita/status/880983846174552064

    https://twitter.com/James_Beyond/status/881117320361504768

    https://twitter.com/Atheist_Krishna/status/880777477093703680

    https://twitter.com/hankypanty/status/880360010718617600

    https://twitter.com/itsdhruvism/status/880852644071264256

    https://twitter.com/AkshayKatariyaa/status/881016493827387394

    https://twitter.com/juniorbacchhan/status/877511541771321345

  • ಸಾಲ ಮನ್ನಾ ಖುಷಿಯಲ್ಲಿರೋ ಸಿಎಂಗೆ ಕೇಂದ್ರದಿಂದ ಖಡಕ್ ಎಚ್ಚರಿಕೆ

    ಸಾಲ ಮನ್ನಾ ಖುಷಿಯಲ್ಲಿರೋ ಸಿಎಂಗೆ ಕೇಂದ್ರದಿಂದ ಖಡಕ್ ಎಚ್ಚರಿಕೆ

    ಬೆಂಗಳೂರು: ರೈತರ ಸಾಲ ಮನ್ನಾ ಖುಷಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಖಡಕ್ ವಾರ್ನಿಂಗ್ ಕೊಟ್ಟಿದೆ.

    ರೈತರ ಉದ್ದಾರಕ್ಕಾಗಿ, ಉತ್ತಮ ರಸ್ತೆಗಳ ನಿರ್ಮಾಣದ ಹೆಸರಿನಲ್ಲಿ ಬಹುರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ತೆಗೆದುಕೊಂಡಿರುವ ಸಾಲವನ್ನೇ ಸರಿಯಾಗಿಯೇ ಬಳಸಿಕೊಂಡಿಲ್ಲ ಅಂತ ಗರಂ ಆಗಿ ಪತ್ರ ಬರೆದಿದೆ.

    ಮಿಲಿಯನ್ ಗಟ್ಲೆ ಸಾಲವಿದೆ.  ಆದರೆ ಆ ಯೋಜನೆಗಳು ಮಾತ್ರ ಶೇ.20ರಷ್ಟು ಮುಗಿದಿಲ್ಲ. ಇನ್ನು ಆ ಯೋಜನೆಗೆ ನಿಗದಿಪಡಿಸಿರುವ ಸಮಯ ಶೇ. 60ರಷ್ಟು ಮುಗಿದಿದೆ ಅಂತಾ ಖಾರವಾಗಿ ಪತ್ರಬರೆಯಲಾಗಿದೆ.

    ಕೇಂದ್ರ ಆರ್ಥಿಕ ವ್ಯವಹಾರಗಳ ಇಲಾಖೆಯು ಕಾರ್ಯದರ್ಶಿ ಪತ್ರ ಬರೆದಿದ್ದು ಈ ಕೂಡಲೇ ಆ ವಿಳಂಬವನ್ನು ತಪ್ಪಿಸಲು ಕ್ರಮ ಕೈಗೊಳ್ಳಿ ಅಂಥ ತಾಕಿತು ಮಾಡಿದ್ದಾರೆ.

    ಡ್ಯಾಂ ಪುನರ್ ವಸತಿ ಮತ್ತು ನಿರ್ವಹಣೆ ಯೋಜನೆ, ಸಮಗ್ರ ಕರ್ನಾಟಕ ಜಲಸಂಪನ್ಮೂಲ ನಿರ್ವಹಣಾ ಯೋಜನೆಗಳಲ್ಲಿ ಪ್ರಗತಿಯಾಗಿಲ್ಲ ಅಂತ ತಿಳಿಸಲಾಗಿದೆ. 2011ರಲ್ಲಿ 1357 ಮಿಲಿಯನ್ ಡಾಲರ್‍ಗಳು ಸಾಲ ಪಡೆಯಲಾಗಿದೆ.ಇದರಲ್ಲಿ ಶೇ. ಅರ್ಧದಷ್ಟು ಹಣ ಕೂಡ ಬಿಡುಗಡೆಯಾಗಿದೆ. ಆದ್ರೆ ಯೋಜನೆಗಳು ಮಾತ್ರ ಶೇ.20ರಷ್ಟು ಪ್ರಗತಿಯಾಗಿಲ್ಲ ತಿಳಿಸಿದೆ.

    ರಸ್ತೆಯ ನಿರ್ಮಾಣ ಯೋಜನೆಗಳಿಗೂ ಎಡಿಬಿ, ಐಬಿಆರ್‍ಡಿ ಹಣಕಾಸು ಸಂಸ್ಥೆಗಳಿಂದ 750 ಕೋಟಿ ಸಾಲ ಪಡೆಯಲಾಗಿದೆ. ಇದನ್ನು ಕೂಡಲೇ ಸರಿಪಡಿಸಿ ಅಂತ ರಾಜ್ಯ ಮುಖ್ಯಕಾರ್ಯದರ್ಶಿಗೆ ಕೇಂದ್ರ ತಾಕಿತು ಮಾಡಿದೆ.

     

     

  • ಜಾನುವಾರು ಮಾರಾಟ ನಿಷೇಧ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

    ಜಾನುವಾರು ಮಾರಾಟ ನಿಷೇಧ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

    ನವದೆಹಲಿ: ಮಾಂಸದ ಉದ್ದೇಶದಿಂದ ಜಾನುವಾರು ಮಾರಾಟವನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನೋಟಿಸ್ ನಲ್ಲಿ ಎರಡು ವಾರಗಳಲ್ಲಿ ಉತ್ತರಿಸಬೇಕೆಂದು ಸೂಚಿಸಿದ್ದು, ಜುಲೈ 11ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    ನ್ಯಾ.ಆರ್‍ಕೆ ಅಗರ್‍ವಾಲ್ ಮತ್ತು ನ್ಯಾ, ಎಸ್‍ಕೆ ಕೌಲ್ ಅವರಿದ್ದ ರಜಾಕಾಲದ ಪೀಠ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

    ಮಾಂಸ ಉದ್ದೇಶದಿಂದ ಜಾನುವಾರು ಮಾರಾಟವನ್ನು ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದನ್ನು ಪ್ರಶ್ನಿಸಿ ಹೈದರಾಬಾದ್ ಮೂಲದ ಫಾಹಿಮ್ ಖುರೇಷಿ ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿದ್ದರು.

    ಕೇಂದ್ರ ಸರ್ಕಾರದ ನಿರ್ಧಾರ ಅಸಂವಿಧಾನಿಕವಾಗಿದ್ದು, ಈ ನಿರ್ಧಾರದಿಂದ ಮಾಂಸ ವ್ಯಾಪಾರೋದ್ಯಮಿಗಳಿಗೆ ಸಮಸ್ಯೆ ಆಗುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುತ್ತಿದ್ದು, ಮೂಲಭೂತ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

  • ಇನ್ನು ಮುಂದೆ ದನಗಳಿಗೂ  ಆಧಾರ್- ಕೇಂದ್ರದಿಂದ ಸುಪ್ರೀಂಗೆ ಪ್ರಸ್ತಾಪ

    ಇನ್ನು ಮುಂದೆ ದನಗಳಿಗೂ ಆಧಾರ್- ಕೇಂದ್ರದಿಂದ ಸುಪ್ರೀಂಗೆ ಪ್ರಸ್ತಾಪ

    ನವದೆಹಲಿ: ದನಗಳ ರಕ್ಷಣೆ ಮಾಡಲು ಮತ್ತು ಅಕ್ರಮ ಸಾಗಾಟವನ್ನು ತಪ್ಪಿಸಲು ಆಧಾರ್ ನಂತಹ ಗುರುತು ಪತ್ರವನ್ನು ನೀಡುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಪ್ರಸ್ತಾವನೆ ಸಲ್ಲಿಸಿದೆ.

    ಭಾರತ- ಬಾಂಗ್ಲಾದೇಶ ಗಡಿಯಲ್ಲಿ ಹಸುವಿನ ರಕ್ಷಣೆ ಮತ್ತು ಜಾನುವಾರು ಕಳ್ಳಸಾಗಾಣಿಗೆ ತಡೆಯುವ ಸಂಬಂಧ ಇಂದು ಕೇಂದ್ರ ಸರ್ಕಾರ ವರದಿ ಸಲ್ಲಿಸಿದೆ.

    ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಯನ್ನು ಒಳಗೊಂಡ ಸಮಿತಿ ದನಗಳಿಗೂ ಆಧಾರ್ ಕಾರ್ಡ್ ನೀಡುವಂತೆ ಶಿಫಾರಸು ಮಾಡಿದೆ ಎಂದು ತಿಳಿಸಿದೆ. ಈ ಕಾರ್ಡ್ ನಿಂದಾಗಿ ದನಗಳನ್ನು ಪತ್ತೆ ಮಾಡಲು ಸಹಕಾರಿಯಾಗುತ್ತದೆ ಅಷ್ಟೇ ಅಲ್ಲದೇ ಕಳ್ಳ ಸಾಗಾಣಿಕೆಯನ್ನು ತಡೆಯಬಹುದು ಎಂದು ಕೇಂದ್ರ ಹೇಳಿದೆ.

    ಈ ಆಧಾರ್ ಕಾರ್ಡ್ ನಲ್ಲಿ ದನದ ವಯಸ್ಸು, ತಳಿ, ಲಿಂಗ, ಸ್ಥಳ, ಎತ್ತರ, ದೇಹ, ಬಣ್ಣ, ಕೊಂಬುವಿನ ಮಾಹಿತಿ ಇರಲಿದೆ.

    ಇದೇ ವೇಳೆ ಪ್ರತಿಯೊಂದು ಜಿಲ್ಲೆಯಲ್ಲೂ ಕನಿಷ್ಟ 500 ದನಗಳು ಉಳಿದಿಕೊಳ್ಳುವ ಸಂಬಂಧ ವಸತಿ ನಿರ್ಮಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎನ್ನುವ ಅಂಶ ವರದಿಯಲ್ಲಿದೆ. ಇದೇ ವೇಳೆ ಕೇಂದ್ರ ಸರ್ಕಾರ ತೊಂದರೆಗೀಡಾದ ರೈತರಿಗೂ ನೂತನ ಯೋಜನೆಯನ್ನು ಆರಂಭಿಸುವುದಾಗಿ ತಿಳಿಸಿದೆ.

    ದನಗಳಿಗೆ ಆಧಾರ್ ನೀಡಬೇಕೆಂಬ ಪ್ರಸ್ತಾಪ ಕಳೆದ ವರ್ಷವೇ ಚರ್ಚೆಯಲ್ಲಿತ್ತು. ಆದರೆ ಈ ಪ್ರಸ್ತಾಪಕ್ಕೆ ಕೆಲ ವಿರೋಧಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರಲಿಲ್ಲ. ಆದರೆ ಈಗ ಕೇಂದ್ರ ಸರ್ಕಾರ ದನಗಳಿಗೆ ಆಧಾರ್ ನೀಡುವ ಬಗ್ಗೆ ಸುಪ್ರೀಂಗೆ ವರದಿ ಸಲ್ಲಿಸಿದೆ.

    ವಿಮೆ ಗುರುತಿನ ಸಂಖ್ಯೆ ಈಗ ಇದೆ: ಪ್ರಸ್ತುತ ಜಾನುವಾರು ವಿಮೆ ಮಾಡಿಸುವ ಸಂದರ್ಭದಲ್ಲಿ ದನದ ಕಿವಿಗೆ ಗುರುತಿನ ಸಂಖ್ಯೆ ಇರುವ ಒಲೆಯನ್ನು ಹಾಕಿಸಲಾಗುತ್ತದೆ. ಈ ಸಂದರ್ಭದಲ್ಲಿ ರೈತನೊಂದಿಗೆ ಓಲೆ ಸಹಿತದ ದನದ ಫೋಟೋವನ್ನು ಕಡ್ಡಾಯವಾಗಿ ತೆಗೆಯಬೇಕಾಗುತ್ತದೆ. ಈ ಫೋಟೋವನ್ನು ವಿಮಾ ಕಂಪೆನಿಗಳಿಗೆ ನೀಡಲಾಗುತ್ತದೆ.

  • ಹೊಸ ನೋಟುಗಳ ನಕಲು ತಡೆಗೆ ಸರ್ಕಾರ ಮಾಡಿರೋ ಪ್ಲಾನ್ ಏನು ಗೊತ್ತಾ?

    ಹೊಸ ನೋಟುಗಳ ನಕಲು ತಡೆಗೆ ಸರ್ಕಾರ ಮಾಡಿರೋ ಪ್ಲಾನ್ ಏನು ಗೊತ್ತಾ?

    ನವದೆಹಲಿ: ಹೊಸ 2 ಸಾವಿರ ರೂ. ಹಾಗೂ 500 ರೂ. ಮುಖಬೆಲೆಯ ನೋಟುಗಳ ನಕಲು ತಡೆಯುವ ಸಲುವಾಗಿ ಪ್ರತಿ 3-4 ವರ್ಷಗಳಿಗೊಮ್ಮೆ ಜಾಗತಿಕ ಗುಣಮಟ್ಟಕ್ಕೆ ತಕ್ಕಂತೆ ಈ ನೋಟುಗಳ ಭದ್ರತಾ ವೈಶಿಷ್ಟ್ಯಗಳನ್ನು ಬದಲಾಯಿಸಲು ಸರ್ಕಾರ ತೀರ್ಮಾನಿಸಿದೆ.

    ನೋಟ್‍ಬ್ಯಾನ್ ಆದ ಬಳಿಕ ಕಳೆದ 4 ತಿಂಗಳಲ್ಲಿ ಹೆಚ್ಚಿನ ಮೊತ್ತದ ನಕಲಿ ನೋಟ್‍ಗಳನ್ನು ವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ನಿಧಾರವನ್ನು ತೆಗೆದುಕೊಳ್ಳಲಾಗಿದೆ.

    ಈ ಬಗ್ಗೆ ಗುರುವಾರದಂದು ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಹಣಕಾಸು ಹಾಗೂ ಗೃಹ ಇಲಾಖೆಯ ಅಧಿಕಾರಿಗಳು ಸೇರಿದಂತೆ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮಹ್ರಿಶಿ ಈ ಸಭೆಯಲ್ಲಿ ಭಾಗವಹಿಸಿದ್ದರು.

    ಈ ನಿಧಾರದ ಬಗ್ಗೆ ಗೃಹ ಇಲಾಖೆಯ ಅಧಿಕಾರಿಗಳು ಪ್ರಸ್ತಾಪಿಸಿ, ಬಹುತೇಕ ಮುಂದುವರಿದ ದೇಶಗಳು ತಮ್ಮ ಕರೆನ್ಸಿ ನೋಟ್‍ಗಳ ಭದ್ರತಾ ವೈಶಿಷ್ಟ್ಯಗಳನ್ನು 3-4 ವಷಗಳಿಗೊಮ್ಮೆ ಬದಲಾಯಿಸುತ್ತವೆ. ಆದ್ದರಿಂದ ಭಾರತವೂ ಕೂಡ ಈ ನಿಯಮ ಅನುಸರಿಸುವುದು ಅವಶ್ಯಕ ಎಂದು ಹೇಳಿದ್ದಾರೆ.

    ನೋಟ್‍ಬ್ಯಾನ್ ಗಿಂತಲೂ ಮುಂಚೆ ಇದ್ದ ಗರಿಷ್ಠ ಮುಖಬೆಲೆಯ 1 ಸಾವಿರ ರೂ. ನೋಟಿನಲ್ಲಿ ದೀರ್ಘ ಕಾಲದ ವರೆಗೆ ಯಾವುದೇ ದೊಡ್ಡ ಬದಲಾವಣೆ ಆಗಿರಲಿಲ್ಲ.

    ಇತ್ತೀಚೆಗೆ ಜಪ್ತಿ ಮಾಡಲಾದ ಹಲವು ನಕಲಿ ನೋಟ್‍ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಹೊಸ 2 ಸಾವಿರ ರೂ. ನೋಟಿನಲ್ಲಿರುವ 17 ಭದ್ರತಾ ವೈಶಿಷ್ಟ್ಯಗಳಲ್ಲಿ 11 ವೈಶಿಷ್ಟ್ಯಗಳನ್ನು ಅನುಕರಿಸಿರುವುದು ಪತ್ತೆಯಾಗಿದೆ. ಇವುಗಳಲ್ಲಿ ನೋಟಿನಲ್ಲಿನ ಪಾರದರ್ಶಕ ಭಾಗ, ವಾಟರ್ ಮಾರ್ಕ್, ಅಶೋಕ ಸ್ತಂಭ, ಎಡಭಾಗದಲ್ಲಿನ 2000 ರೂ. ಮುದ್ರಣ, ದೇವನಾಗರಿ ಲಿಪಿಯಲ್ಲಿರೋ ನೋಟಿನ ಮುಖಬೆಲೆಯ ಮುದ್ರಣವೂ ಒಳಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಚಂದ್ರಯಾನ್‍ನ ಚಿತ್ರ, ಸ್ವಚ್ಛ ಭಾರತ ಲಾಂಛನ ಹಾಗೂ ನೋಟು ಮುದ್ರಣದ ವರ್ಷವನ್ನ ನೋಟಿನ ವಿರುದ್ಧ ಭಾಗದಲ್ಲಿ ನಕಲು ಮಾಡಲಾಗಿದೆ. ನಕಲಿ ನೋಟುಗಳ ಮುದ್ರಣ ಹಾಗೂ ಪೇಪರ್ ಗುಣಮಟ್ಟ ಕಳಪೆಯಾಗಿದ್ರೂ ಅವು ಒರಿಜಿನಲ್ ನೋಟುಗಳನ್ನೇ ಹೋಲುವಂತಿವೆ.

    ನೋಟುಗಳ ಭದ್ರತಾ ವೈಶಿಷ್ಟ್ಯಗಳನ್ನ 3-4 ವರ್ಷಗಳಿಗೊಮ್ಮೆ ಬದಲಾಯಿಸೋದ್ರಿಂದ ದೊಡ್ಡ ಪ್ರಮಾಣದಲ್ಲಿ ನಕಲಿ ನೋಟುಗಳಿಗೆ ಬ್ರೇಕ್ ಹಾಕಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

    2016ರಲ್ಲಿ ಕೋಲ್ಕತ್ತಾದ ಇಂಡಿಯನ್ ಸ್ಟಾಟಿಸ್ಟಿಕಲ್ ಇನ್ಸ್ಟಿಸ್ಯೂಟ್ ನಡೆಸಿದ ಅಧ್ಯಯನದ ಪ್ರಕಾರ ಭಾರತದಲ್ಲಿ ಸುಮಾರು 400 ಕೋಟಿ ರೂ. ಮೌಲ್ಯದಷ್ಟು ನಕಲಿ ನೋಟು ಚಲಾವಣೆಯಲ್ಲಿದೆ ಎಂದು ವರದಿಯಾಗಿತ್ತು.

  • ಕೇಂದ್ರದಿಂದ ಕರ್ನಾಟಕಕ್ಕೆ ಒಟ್ಟು 1782.44 ಕೋಟಿ ರೂ. ಬರ ಅನುದಾನ ಬಿಡುಗಡೆ

    ಕೇಂದ್ರದಿಂದ ಕರ್ನಾಟಕಕ್ಕೆ ಒಟ್ಟು 1782.44 ಕೋಟಿ ರೂ. ಬರ ಅನುದಾನ ಬಿಡುಗಡೆ

    ನವದೆಹಲಿ: ಬರದಿಂದ ತತ್ತರಿಸಿರುವ ಕರ್ನಾಟಕ ಹಾಗೂ ತಮಿಳುನಾಡಿಗೆ ಕೇಂದ್ರ ಸರ್ಕಾರ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಒಟ್ಟು 1782.44 ಕೋಟಿ ರೂ. ಹಣ ಬರ ಪರಿಹಾರ ಹಣ ಮಂಜೂರು ಮಾಡಿದೆ. ಹಾಗೆ ತಮಿಳುನಾಡಿಗೆ 1793.63 ರೂ. ಬರ ಪರಿಹಾರ ಹಣ ಮಂಜೂರು ಮಾಡಲಾಗಿದೆ.

    ಈ ಮಂಜೂರಾತಿಯ ಆಧಾರದ ಮೇಲೆ ಕರ್ನಾಟಕಕ್ಕೆ ಈ ಹಿಂದೆ ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಲಾಗಿದ್ದ 450 ಕೋಟಿ ರೂ. ಹಾಗೂ ರಾಜ್ಯ ವಿಪತ್ತು ನಿರ್ವಹಣಾ ನಿಧಿ(ಎಸ್‍ಡಿಆರ್‍ಎಫ್)ನಲ್ಲಿ ಕರ್ನಾಟಕದೊಂದಿಗೆ ಬಾಕಿ ಉಳಿದಿದ್ದ 96.92 ಕೋಟಿ ರೂ. ಹೊಂದಿಸಿ ಒಟ್ಟು 1235.52 ಕೋಟಿ ರೂ. ಬಿಡುಗಡೆಯಾಗಿದೆ.

    ಅದೇ ರೀತಿ ತಮಿಳುನಾಡಿಗೆ ಎಸ್‍ಡಿಆರ್‍ಎಫ್‍ನಲ್ಲಿ ಬಾಕಿ ಉಳಿದಿದ್ದ 345.64 ಕೋಟಿ ರೂ. ಹೊಂದಿಸಿ ಒಟ್ಟು 1447.99 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ತಮಿಳುನಾಡಿಗೆ 2016 ರ ಡಿಸೆಂಬರ್‍ನಲ್ಲಿ ಉಂಟಾದ ವಾರ್ಧಾ ಚಂಡಮಾರುತಕ್ಕಾಗಿ 264.11 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ.

    ಬರ ಪರಿಸ್ಥಿತಿಯ ಬಗ್ಗೆ ರಾಜ್ಯಗಳಿಂದ ವಿವರ ಪಡೆದ ಮೇಲೆ ಕೇಂದ್ರ ತಂಡವನ್ನು ಬರಪೀಡಿತ ಪ್ರದೇಶಗಳ ಪರಿಶೀಲನೆಗೆ ಕಳಿಸಲಾಗಿತ್ತು. ಈ ತಂಡ ಸಲ್ಲಿಸಿದ ವರದಿಯ ಆಧಾರದ ಮೇಲೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಹಣವನ್ನ ಬಿಡುಗಡೆ ಮಾಡಲಾಗಿದೆ.

    ಇದಲ್ಲದೆ ಕೇಂದ್ರ ತೆರಿಗೆ ವಿಕೇಂದ್ರೀಕರಣ ಸೂತ್ರದ ಅನ್ವಯ 2016-17ನೇ ಸಾಲಿಗೆ ಎಲ್ಲಾ ರಾಜ್ಯಗಳಿಗೆ 6.08 ಲಕ್ಷ ಕೋಟಿ ರೂ. ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 2,8750 ರೂ. ಬಂದಿದ್ದರೆ ತಮಿಳುನಾಡಿಗೆ 24,538 ಕೋಟಿ ರೂ. ಸಿಕ್ಕಿದೆ.

    ರೈತರ ನೆರವಿಗಾಗಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ, 2016-17ನೇ ಸಾಲಿಗೆ 13,240 ಕೋಟಿ ರೂ. ನೀಡಲಾಗಿದೆ. ಮನರೇಗಾ ಯೋಜನೆಗೆ 47,499 ಕೋಟಿ ರೂ ಸೇರಿದಂತೆ ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿ ಒಟ್ಟು 2,45,435 ಕೋಟಿ ರೂ. ನೀಡಲಾಗಿದೆ.

    ಬರ ಪರಿಹಾರವಾಗಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಆರಂಭದಲ್ಲಿ 1782 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ನೀಡಿದ್ದು, ಅದರಲ್ಲಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿತ್ತು. ಉಳಿದ ಹಣವನ್ನು ಬಿಡುಗಡೆ ಮಾಡಿರಲಿಲ್ಲ. ಆರಂಭದಲ್ಲಿ ಬಿಡುಗಡೆಯಾದ 450 ಕೋಟಿ ರೂ. ಖರ್ಚು ಮಾಡಿದ ಬಳಿಕ ಉಳಿದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಹೇಳಿದ್ದರೆ ರಾಜ್ಯ ಸರ್ಕಾರ ಒಂದೇ ಬಾರಿಗೆ ಈ ಹಣವನ್ನು ಬಿಡುಗಡೆ ಮಾಡಿ ಎಂದು ತನ್ನ ವಾದವನ್ನು ಮಂಡಿಸುತಿತ್ತು. ಎರಡೂ ಸರ್ಕಾರದ ಕಚ್ಚಾಟದಿಂದ ರೈತರಿಗೆ ಸಮಸ್ಯೆಯಾಗುತಿತ್ತು. ಈಗ ಕೇಂದ್ರ ಸರ್ಕಾರ ತನ್ನ ಪಾಲಿನ ಎಲ್ಲ ಹಣವನ್ನು ಬಿಡುಗಡೆ ಮಾಡಿದೆ.

    ಶುಕ್ರವಾರ ಮೋದಿ ಕರೆದಿದ್ದ ದಕ್ಷಿಣ ಭಾರತದ ಸಂಸದರ ಸಭೆಯಲ್ಲಿ ರಾಜ್ಯದ ಬಿಜೆಪಿ ನಾಯಕರು ಕರ್ನಾಟಕಕ್ಕೆ ಬರಬೇಕಾಗಿದ್ದ ಅನುದಾನದ ವಿಚಾರವನ್ನು ಪ್ರಸ್ತಾಪ ಮಾಡದೇ ಇರುವ ವಿಚಾರದ ಸುದ್ದಿ ಪಬ್ಲಿಕ್ ಟಿವಿ ವೆಬ್‍ಸೈಟ್‍ನಲ್ಲಿ ಪ್ರಕಟಗೊಂಡಿತ್ತು.

    ಇದನ್ನೂ ಓದಿ: ಪ್ರಧಾನಿ ಮೋದಿ ಸಭೆಯಲ್ಲಿ ರಾಜ್ಯದ ಹಿತವನ್ನು ಮರೆತ ಬಿಜೆಪಿ ಸಂಸದರು

     

  • ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ದಿದ್ರೆ ಸಿಮ್ ಸಿಗಲ್ಲ!

    ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ದಿದ್ರೆ ಸಿಮ್ ಸಿಗಲ್ಲ!

    ನವದೆಹಲಿ: ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ಲವೆಂದಲ್ಲಿ ಇನ್ನು ಮುಂದೆ ಮೊಬೈಲ್ ಸಿಮ್ ಕಾರ್ಡ್ ಸಿಗಲ್ಲ.

    ಹೌದು. ಈಗಾಗಲೇ ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಹೇಳಿರುವ ಕೇಂದ್ರ ಸರ್ಕಾರ ಇದೀಗ ಮೊಬೈಲ್ ಸಿಮ್ ಪಡೆಯಲು ಕೂಡ ಆಧಾರ್ ಕಾರ್ಡ್ ಕಡ್ಡಾಯ ಮಾಡಲು ಮುಂದಾಗಿದೆ.

    ಈ ಸಂಬಂಧ ಟೆಲಿಕಾಂ ಇಲಾಖೆ ಎಲ್ಲಾ ಟೆಲಿಕಾಂ ಕಂಪೆನಿಗಳಿಗೂ ನೋಟಿಸ್ ಕಳುಹಿಸಿದ್ದು, ಮೊಬೈಲ್ ಚಂದಾದಾರರ ಸಿಮ್ ಕಾರ್ಡ್‍ಗಳು ಅವರ ಆಧಾರ್ ನಂಬರ್ ಜೊತೆ ಲಿಂಕ್ ಆಗಿದೆಯೋ ಅಥವಾ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಸೂಚಿಸಿದೆ. ಮಾತ್ರವಲ್ಲದೇ ಈ ಪ್ರಕ್ರಿಯೆ ವರ್ಷದೊಳಗೆ ಪೂರ್ಣಗೊಳಿಸಬೇಕು ಅಂತಾ ಇಲಾಖೆ ತಿಳಿಸಿದೆ.

    ಈ ಹಿನ್ನೆಲೆಯಲ್ಲಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಎಲ್ಲಾ ಗ್ರಾಹಕರ ದಾಖಲೆಗಳನ್ನು ಆಧಾರ್ ಕಾರ್ಡ್ ಇ- ನಿಮ್ಮ ಗ್ರಾಹಕರನ್ನು ಅರಿಯಿರಿ(ಕೆವೈಸಿ) ಮೂಲಕ ಮರುಪರಿಶೀಲನೆ ಮಾಡಲಿವೆ.

    ಟೆಲಿಕಾಂ ಕಂಪನಿಗಳು ಗ್ರಾಹಕರಿಗೆ ವೆರಿಫಿಕೇಶನ್ ಕೋಡ್ ನ್ನು ಕಳುಹಿಸಲಿವೆ. ಭವಿಷ್ಯದಲ್ಲಿ ವ್ಯಕ್ತಿಯ ಗುರುತು ಪತ್ತೆಗೆ ಆಧಾರ್ ಕಾರ್ಡ್ ಏಕೈಕ ಸಾಧನವಾಗಲಿದೆ ಅಂತಾ ಲೋಕಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದರು.

    ಪಾನ್ ಕಾರ್ಡ್, ಐಟಿ ರಿಟರ್ನ್ಸ್ ಗೂ ಆಧಾರ್ ಕಡ್ಡಾಯ: ಕಳೆದ ಮಂಗಳವಾರವಷ್ಟೇ ಸಂಸತ್ತಿನಲ್ಲಿ ಚರ್ಚೆಯಾದ ಹಣಕಾಸು ಮಸೂದೆಯಲ್ಲಿ ತಿದ್ದುಪಡಿ ತಂದು ಆಧಾರ್ ಕಡ್ಡಾಯ ಎಂಬ ಅಂಶವನ್ನು ಕೇಂದ್ರ ಸರ್ಕಾರ ಸೇರಿಸಿತ್ತು. ಜುಲೈ 1ರಿಂದ ಈ ನಿಯಮ ಜಾರಿಗೆ ಬರಲಿದೆ ಅಂತಾ ಹೇಳಲಾಗಿದೆ.

    ದೇಶದಲ್ಲಿ ಮೊದಲ ಬಾರಿಗೆ ರಿಲಯನ್ಸ್ ಜಿಯೋ ಕಂಪೆನಿ ಆಧಾರ್ ಕಾರ್ಡ್ ಮೂಲಕ ಗ್ರಾಹಕರಿಗೆ ಸಿಮ್ ಕಾರ್ಡನ್ನು ಕೆಲವೇ ನಿಮಿಷಗಳಲ್ಲಿ ವಿತರಣೆ ಮಾಡಿತ್ತು. ಗ್ರಾಹಕರು ಬೆರಳಚ್ಚು ಓತ್ತಿದಾಗಲೇ ಆಧಾರ್ ದಾಖಲೆಗಳು ಸ್ಕ್ರೀನ್‍ನಲ್ಲಿ ಕಾಣುತಿತ್ತು.

  • ಗಮನಿಸಿ, ನಗದು ವ್ಯವಹಾರದ ಗರಿಷ್ಠ ಮಿತಿ 3 ಲಕ್ಷ ಅಲ್ಲ, 2 ಲಕ್ಷ ಮಾತ್ರ!

    ಗಮನಿಸಿ, ನಗದು ವ್ಯವಹಾರದ ಗರಿಷ್ಠ ಮಿತಿ 3 ಲಕ್ಷ ಅಲ್ಲ, 2 ಲಕ್ಷ ಮಾತ್ರ!

    ನವದೆಹಲಿ: ನಗದು ವ್ಯವಹಾರದ ಗರಿಷ್ಠ ಮಿತಿಯನ್ನು 2 ಲಕ್ಷ ರೂ. ಇಳಿಸಬೇಕೆಂಬ ಹೊಸ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಆರ್‍ಬಿಐಗೆ ಸಲ್ಲಿಸಿದೆ.

    ಈ ವರ್ಷದ ಹಣಕಾಸು ಬಜೆಟ್‍ನಲ್ಲಿ ಅರುಣ್ ಜೇಟ್ಲಿ ನಗದು ವ್ಯವಹಾರಕ್ಕೆ 3 ಲಕ್ಷ ರೂ. ಗರಿಷ್ಠ ಮಿತಿಯನ್ನು ಪ್ರಕಟಿಸಿದ್ದರು. ಈಗ ಈ ಮಿತಿಯಲ್ಲಿ 1 ಲಕ್ಷ ರೂ. ಕಡಿತಗೊಳಿಸಿ 2 ಲಕ್ಷ ರೂ. ಇಳಿಸಬೇಕೆಂಬ ಹೊಸ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಆರ್‍ಬಿಐಗೆ ಸಲ್ಲಿಸಿದೆ.

    ಹಣಕಾಸು ಮಸೂದೆಗೆ ಮಾಡಲಾಗಿರುವ 40 ತಿದ್ದುಪಡಿಯಲ್ಲಿ ಈ ತಿದ್ದುಪಡಿ ಅಂಶವೂ ಸೇರಿದೆ. ತಿದ್ದುಪಡಿಯ ಬಳಿಕ ಕಂದಾಯ ಕಾರ್ಯದರ್ಶಿ ಹಸ್ಮುಕ್ ಆಧಿಯಾ ಟ್ವೀಟ್ ಮಾಡಿ, ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದರೆ ಅಷ್ಟೇ ಮೊತ್ತದ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

    ಕಪ್ಪು ಹಣದ ವಿರುದ್ಧ ತನಿಖೆ ನಡೆಸಲು ಸುಪ್ರೀಂಕೋರ್ಟ್ ರಚನೆ ಮಾಡಿದ್ದ ವಿಶೇಷ ತನಿಖಾ ತಂಡ ಸಲ್ಲಿಸಿದ್ದ ವರದಿಯ ಶಿಫಾರಸಿನಂತೆ ನಗದು ಹಣಕಾಸು ವ್ಯವಹಾರವನ್ನು ತಡೆಗಟ್ಟಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅರುಣ್ ಜೇಟ್ಲಿ ಬಜೆಟ್ ಮಂಡನೆ ಮಾಡುವಾಗ ಸಮರ್ಥಿಸಿಕೊಂಡಿದ್ದರು.

    ಈ ಮಸೂದೆ ಕಾಯ್ದೆಯಾಗಿ ಜಾರಿಯಾದರೆ 2 ಲಕ್ಷ ರೂ.ಗಳಿಗಿಂತ ಹೆಚ್ಚಿನ ವ್ಯವಹಾರವನ್ನು ಜನರು ಚೆಕ್, ಡಿಡಿ, ಆನ್‍ಲೈನ್ ಮೂಲಕ ಮಾಡಬೇಕಾಗುತ್ತದೆ.

  • ಆಧಾರ್ ಕಾರ್ಡ್ ಇಲ್ಲದೇ ಇದ್ರೆ ಇನ್ನು ಮುಂದೆ ನಿಮಗೆ ಪಾನ್ ಕಾರ್ಡ್ ಸಿಗಲ್ಲ!

    ಆಧಾರ್ ಕಾರ್ಡ್ ಇಲ್ಲದೇ ಇದ್ರೆ ಇನ್ನು ಮುಂದೆ ನಿಮಗೆ ಪಾನ್ ಕಾರ್ಡ್ ಸಿಗಲ್ಲ!

    ನವದೆಹಲಿ: ಪಾನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವೇಳೆ  ಮತ್ತು ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

    ಸಂಸತ್ತಿನಲ್ಲಿ ಚರ್ಚೆಯಾಗುತ್ತಿರುವ ಹಣಕಾಸು ಮಸೂದೆಯಲ್ಲಿ ತಿದ್ದುಪಡಿ ತಂದು ಆಧಾರ್ ಕಡ್ಡಾಯ ಅಂಶವನ್ನು ಕೇಂದ್ರ ಸರ್ಕಾರ ಸೇರಿಸಿದೆ. ಜುಲೈ 1ರಿಂದ ಈ ನಿಯಮ ಜಾರಿಗೆ ಬರಲಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿ ಹಣಕಾಸು ಮಸೂದೆಯ ಬಗ್ಗೆ ಬುಧವಾರ ಸಂಸತ್ತಿನಲ್ಲಿ ಮಾತನಾಡಲಿದ್ದಾರೆ.

    ಕಳೆದ ಕೆಲ ವರ್ಷಗಳ ಐಟಿಆರ್ ಸಲ್ಲಿಕೆಯ ಆಧಾರ್ ಐಚ್ಚಿಕವಾಗಿತ್ತು. ಭಾರತದಲ್ಲಿ ವಿದೇಶಿ ಪ್ರಜೆಗಳು ತೆರಿಗೆ ಪಾವತಿಸುತ್ತಿರುವುದರಿಂದ ಈಗ ಕೆಲ ಪ್ರಶ್ನೆಗಳು ಎದ್ದಿದ್ದು ಈ ಸಮಸ್ಯೆಗೆ ಪರಿಹಾರ ಏನು ಎನ್ನುವ ಪ್ರಶ್ನೆಗೆ ಸರ್ಕಾರ ಉತ್ತರಿಸಬೇಕಿದೆ.

    ಕೇಂದ್ರ ಸರ್ಕಾರ ಈಗ ಎಲ್ಲ ಸೇವೆಗಳಿಗೂ ಆಧಾರ್ ಕಡ್ಡಾಯಗೊಳಿಸುತ್ತಿದ್ದು, ಕೆಲ ದಿನಗಳ ಹಿಂದೆ ಬಡ ಮಹಿಳೆಯರು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಅಡಿಗೆ ಅನಿಲ(ಎಲ್ ಪಿಜಿ) ಸಂಪರ್ಕ ಪಡೆಯಯಲು ಆಧಾರ ಕಾರ್ಡ್ ಅನ್ನು ಕಡ್ಡಾಯಗೊಳಿಸಿತ್ತು.