Tag: ಕೇಂದ್ರ ಸರ್ಕಾರ

  • ಸಾಲಿಸಿಟರ್ ಆಗಿದ್ದು ಗೋವಾ ಪರ ವಾದ ಮಾಡುವುದು ಎಷ್ಟು ಸರಿ: ಕೇಂದ್ರದ ವಿರುದ್ಧ ಕೋನರೆಡ್ಡಿ ಅಸಮಾಧಾನ

    ಸಾಲಿಸಿಟರ್ ಆಗಿದ್ದು ಗೋವಾ ಪರ ವಾದ ಮಾಡುವುದು ಎಷ್ಟು ಸರಿ: ಕೇಂದ್ರದ ವಿರುದ್ಧ ಕೋನರೆಡ್ಡಿ ಅಸಮಾಧಾನ

    ಬೆಂಗಳೂರು: ಮಹದಾಯಿ ಯೋಜನೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಪರ ಆತ್ಮಾರಾಮ ನಾಡಕರ್ಣಿ ವಾದಮಾಡಲು ಕೇಂದ್ರದ ಅನುಮತಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ, ಶಾಸಕ ಕೋನರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಬೇಕಿದ್ದರೆ ಸಾಲಿಸಿಟರ್ ಹುದ್ದೆಯಿಂದ ಆತ್ಮಾರಾಮ ನಾಡಕರ್ಣಿಗೆ ವಿಮುಕ್ತಿಕೊಡಿ. ಆ ಬಳಿಕ ಬೇಕಾದರೆ ಅವರು ಗೋವಾ ಪರ ವಾದಮಾಡಲಿ. ಆದರೆ ಸಾಲಿಸಿಟರ್ ಆಗಿದ್ದು ವಾದ ಮಾಡುವುದು ಸರಿಯಲ್ಲ. ಅವರಿಗೆ ಅವಕಾಶ ಮಾಡಿಕೊಟ್ಟ ಕೇಂದ್ರ ಸರ್ಕಾರದ ಕ್ರಮ ಕೂಡ ಸರಿಯಲ್ಲ ಅಂತಾ ಶಾಸಕರು ಕಿಡಿಕಾರಿದ್ದಾರೆ.

    ಈ ಕೂಡಲೇ ಅವರನ್ನ ಹುದ್ದೆಯಿಂದ ವಜಾಗೊಳಿಸಿ. ಇಲ್ಲವೇ ಗೋವಾ ಪರ ವಾದ ಮಂಡನೆಗೆ ಅವಕಾಶ ರದ್ದು ಮಾಡಿ. ರಾಜ್ಯದ ಬಿಜೆಪಿ ನಾಯಕರು ಇದರ ಬಗ್ಗೆ ಯಾಕೆ ಧ್ವನಿಯೆತ್ತುತ್ತಿಲ್ಲ?. ಮಹದಾಯಿ ಹೋರಾಟಗಾರ ಸಮಸ್ಯೆ ನಿಮಗೆ ಅರ್ಥವಾಗುತ್ತಿಲ್ಲವೇ? ಇದರ ಬಗ್ಗೆ ನೀವು ಸುಮ್ಮನಿರುವುದೇಕೆ? ಅಂತಾ ರಾಜ್ಯ ಬಿಜೆಪಿ ಸಂಸದರು, ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕೋನರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

  • ನೋಟ್ ಬ್ಯಾನ್‍ನಿಂದ ಸಾವನ್ನಪ್ಪಿರುವವರ ‘ಅಧಿಕೃತ ವರದಿ’ ಇಲ್ಲ: ಕೇಂದ್ರ ಸರ್ಕಾರ

    ನೋಟ್ ಬ್ಯಾನ್‍ನಿಂದ ಸಾವನ್ನಪ್ಪಿರುವವರ ‘ಅಧಿಕೃತ ವರದಿ’ ಇಲ್ಲ: ಕೇಂದ್ರ ಸರ್ಕಾರ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1000 ರೂ. ನೋಟ್ ಬ್ಯಾನ್ ಮಾಡಿದ ವೇಳೆ ನೋಟು ಬದಲಾವಣೆಗೆ ಕ್ಯೂನಲ್ಲಿ ನಿಂತು ಜನರು ಸಾವನ್ನಪ್ಪಿರುವ ಬಗ್ಗೆ ಯಾವುದೇ ‘ಅಧಿಕೃತ ವರದಿ’ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

    ಲೋಕಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿರುವ ಹಣಕಾಸು ಇಲಾಖೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್, ಜನರು ಸಾವನ್ನಪ್ಪಿರುವಂತಹ ಅಧಿಕೃತ ವರದಿ ನಮಗಿನ್ನೂ ಬಂದಿಲ್ಲ ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರದ ನೋಟ್ ಬ್ಯಾನ್ ನಿರ್ಧಾರದಿಂದ ತೊಂದರೆಗೆ ಸಿಲುಕಿ ಎಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಿಪಿಎಂ ಸಂಸದ ಜಿತೇಂದ್ರ ಚೌಧರಿ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ಪ್ರಶ್ನೆ ಕೇಳಿದ್ದರು. ಇದಕ್ಕೆ ಸಚಿವರು ಇಂದು ಲಿಖಿತ ಉತ್ತರ ನೀಡಿದ್ದಾರೆ.

    ನೋಟ್ ಬ್ಯಾನ್ ಮಾಡಿದ್ದಾಗ, ದೇಶದ ಹಲವೆಡೆ ಜನ ಕ್ಯೂನಲ್ಲಿ ನಿಂತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದರು ಎಂಬ ವರದಿಗಳೂ ಬಂದಿದ್ದವು. ಕಳೆದ ನವೆಂಬರ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1 ಸಾವಿರ ರೂ.ಗಳ ನೋಟನ್ನು ಬ್ಯಾನ್ ಮಾಡಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ನೋಟುಗಳನ್ನು ಜಮೆ ಮಾಡಲು ಜನರು ಸರತಿ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿಯೂ ನಿರ್ಮಾಣವಾಗಿತ್ತು.

    ಇದನ್ನೂ ಓದಿ:ಮತ್ತೆ 2,000 ನೋಟು ನಿಷೇಧವಾಗುತ್ತಾ: ಜನ್ರಲ್ಲಿ ಮೂಡಿದ್ದ ಪ್ರಶ್ನೆಗೆ ಜೇಟ್ಲಿ ಉತ್ತರಿಸಿದ್ರು

  • ಕಪ್ಪತ್ತಗುಡ್ಡಕ್ಕೆ ಕನ್ನ ಹಾಕಲು ಬಹುರಾಷ್ಟ್ರೀಯ ಕಂಪನಿಗಳ ಸಂಚು!

    ಕಪ್ಪತ್ತಗುಡ್ಡಕ್ಕೆ ಕನ್ನ ಹಾಕಲು ಬಹುರಾಷ್ಟ್ರೀಯ ಕಂಪನಿಗಳ ಸಂಚು!

    ಗದಗ: ಕಪ್ಪತ್ತಗುಡ್ಡ ರಕ್ಷಿಸುವಂತೆ ಹೋರಾಟಗಳು ನಡೆದಿರುವಾಗಲೇ ಕಪ್ಪತ್ತಗುಡ್ಡಕ್ಕೆ ಕನ್ನ ಹಾಕಲು ಬಹುರಾಷ್ಟ್ರೀಯ ಕಂಪನಿಗಳು ಸಂಚು ಹಾಕಿರುವ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

    ಸೊರಟೂರು, ವೆಂಕಟಾಪೂರಕ್ಕೆ ಹೊಂದಿಕೊಂಡಂತೆ ಇರುವ ಗುಡ್ಡದ ಬಳಿ ಕೇಂದ್ರ ಸರ್ಕಾರದ ಭೂಗರ್ಭ ಶಾಸ್ತ್ರ ಇಲಾಖೆ ಹಾಗೂ ಆಸ್ಟ್ರೇಲಿಯಾ ಮೂಲದ ಕಂಪನಿಯ ಪ್ರತಿನಿಧಿಗಳು ಅದಿರು ನಿಕ್ಷೇಪ ಶೋಧ ಕಾರ್ಯಾಚರಣೆ ಮಾಡಿದ್ದಾರೆ. ಜಿಲ್ಲಾಡಳಿತಕ್ಕೂ ಮಾಹಿತಿ ನೀಡದೇ 30ಕ್ಕೂ ಹೆಚ್ಚ ಅಧಿಕಾರಿಗಳ ತಂಡ ಆಗಮಿಸಿ ಅದಿರು ನಿಕ್ಷೇಪ ಶೋಧ ಮಾಡಿರುವುದು ಇದೀಗ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

    ಕಪ್ಪತ್ತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಬೇಕು ಅನ್ನೋ ಕೂಗು ಕೇಳಿಬರುವಾಗಲೇ ಅದಿರು ಶೋಧ ಕಾರ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಲ್ದೋಟಾ ಕಂಪನಿಗೆ ಅನುಕೂಲ ಮಾಡಿಕೊಡಲು ಅದಿರು ನಿಕ್ಷೇಪ ಶೋಧ ಕಾರ್ಯ ನಡೆಸಿದ್ದಾರೆ ಅಂತಾ ಜನರು ಸಂಶಯ ವ್ಯಕ್ತಪಡಿಸಿದ್ದಾರೆ.

    ಗಣಿಗಾರಿಕೆ ಸೇರಿದಂತೆ ಹಲವು ವ್ಯವಹಾರಗಳಲ್ಲಿ ಬಲ್ಡೊಟ ಕಂಪನಿ ಆಸ್ಟ್ರೇಲಿಯಾ ಕಂಪನಿ ಜೊತೆ ಪಾಲುಗಾರಿಕೆ ಹೊಂದಿರುವ ಮಾಹಿತಿಯಿದೆ. ಕಳೆದ ಭಾನುವಾರವೇ ಈ ಅಧಿಕಾರಿಗಳ ತಂಡ ಶೋಧ ಮಾಡಿದ್ದು, ತಡವಾಗಿ ವಿಚಾರ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರವು ಬಲ್ದೋಟ ಕಂಪನಿ ಪರ ಇದೆ ಅಂತಾ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ನೋಟ್‍ಬ್ಯಾನ್ ಗೆ 100 ದಿನ: ಬೆಂಗಳೂರಿನಲ್ಲಿ ಸಿಕ್ತು ಪುಡಿಪುಡಿಯಾಗೋ 2,000 ನೋಟು!

    ನೋಟ್‍ಬ್ಯಾನ್ ಗೆ 100 ದಿನ: ಬೆಂಗಳೂರಿನಲ್ಲಿ ಸಿಕ್ತು ಪುಡಿಪುಡಿಯಾಗೋ 2,000 ನೋಟು!

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 500ರೂ. ಹಾಗೂ 1,000ರೂ. ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡಿ ಇಂದಿಗೆ 100 ದಿನ. ಹೊಸ 2000 ಸಾವಿರ ನೋಟ್ ಕೈಗೆ ಬಂದು ಮೂರು ತಿಂಗಳೇ ಕಳೆದಿವೆ. ಈ ಮಧ್ಯೆ ಮೈಸೂರಿನಲ್ಲಿ 2000 ನೋಟು ಪುಡಿ ಪುಡಿಯಾಗಿದ್ದ ಸುದ್ದಿ ನೋಡಿದ್ರಿ. ಅದೇ ರೀತಿಯ ಘಟನೆ ಬೆಂಗಳೂರಿನ ಪೀಣ್ಯದಲ್ಲೂ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಪೀಣ್ಯ ದಾಸರಹಳ್ಳಿಯ ನಿರಂಜನ್ ಹೆಗಡೆಯವರಿಗೆ ಸಿಕ್ಕಿರುವ 2000 ಸಾವಿರ ರೂ. ಹೊಸ ನೋಟ್ ಕೂಡ ಪುಡಿ ಪುಡಿಯಾಗಿ ಉದುರುತ್ತಿದೆ.

    ಕಳೆದ ಮೂರು ದಿನಗಳ ಹಿಂದೆ ನಿರಂಜನ್ ಹೆಗಡೆಯವರ ಹಾರ್ಡ್‍ವೇರ್ ಶಾಪ್‍ಗೆ ಬಂದ ಗ್ರಾಹಕರೊಬ್ಬರು ಈ ನೋಟನ್ನ ಕೊಟ್ಟಿದ್ದಾರೆ. ಆದ್ರೆ ಇದೀಗ ಈ ನೋಟ್‍ನ್ನು ಬ್ಯಾಂಕ್‍ನವರಿಗೆ ತೋರಿಸಿದ್ರೆ ಇದು ನಕಲಿ ನೋಟ್ ಅಲ್ಲ ಒರಿಜಿನಲ್ ನೋಟು ಅದ್ರೆ ಯಾಕೆ ಹೀಗೆ ಆಗ್ತಿದೆ ಅಂತಾ ಗೊತ್ತಿಲ್ಲ ಅಂತಾರೆ ಎಂಬುವುದಾಗಿ ತಿಳಿದುಬಂದಿದೆ.

    https://www.youtube.com/watch?v=VqP0ijlkl6Q&feature=youtu.be

  • ಕೆಂಪೇಗೌಡ ವಿಮಾನ ನಿಲ್ದಾಣದ ಹೆಸರು ಬದಲಾವಣೆ?

    – ದೇಶದ ಏರ್‍ಪೋರ್ಟ್‍ಗಳಿಗೆ ಇನ್ಮುಂದೆ ವ್ಯಕ್ತಿಗಳ ಹೆಸರಿಲ್ಲ
    – ಹೊಸ ಮಸೂದೆಗೆ ಕೇಂದ್ರ ಸರ್ಕಾರ ಸಿದ್ಧತೆ

    ಬೆಂಗಳೂರು: ಇನ್ಮುಂದೆ ವಿಮಾನ ನಿಲ್ದಾಣಗಳನ್ನ ಆಯಾ ಊರಿನ ಹೆಸರಿನಿಂದಲೇ ಕರೆಯಬೇಕು. ಇಷ್ಟು ದಿನ ಐತಿಹಾಸಿಕ ಪುರುಷರು, ಅಥವಾ ಗಣ್ಯ ವ್ಯಕ್ತಿಗಳ ಹೆಸರನಿಂದ ಕರೆಯುತ್ತಿದ್ದ ವಿಮಾನ ನಿಲ್ದಾಣಗಳ ಹೆಸರುಗಳು ಇತಿಹಾಸದ ಪುಟ ಸೇರಲಿವೆ. ಈ ಮೂಲಕ ಬೆಂಗಳೂರು ವಿಮಾನ ನಿಲ್ದಾಣವನ್ನು ಕೆಂಪೇಗೌಡ ಏರ್‍ಪೋರ್ಟ್ ಮಾಡಿದ್ದ ಮೋದಿ ಸರ್ಕಾರ, ಆ ಹೆಸರನ್ನ ಅಳಿಸೋಕೆ ಮುಂದಾಗಿದೆ.

    ಕೆಂಪೇಗೌಡ ಏರ್‍ಪೋರ್ಟ್, ಇಂದಿರಾಗಾಂಧಿ ಏರ್‍ಪೋರ್ಟ್, ರಾಜೀವ್ ಗಾಂಧಿ ಏರ್‍ಪೋರ್ಟ್, ಅಂಬೇಡ್ಕರ್ ಏರ್‍ಪೋರ್ಟ್ ಅನ್ನೋ ಹೆಸರುಗಳು ಇನ್ಮುಂದೆ ಮೆರಯಾಗಲಿದೆ. ಯಾಕಂದ್ರೆ ಕೇಂದ್ರ ಸರ್ಕಾರ ಹೊಸ ಮಸೂದೆಯೊಂದನ್ನ ಜಾರಿಗೆ ತರುತ್ತಿದೆ. ಯಾವುದೇ ವಿಮಾನ ನಿಲ್ದಾಣಗಳಿಗೆ ವ್ಯಕ್ತಿಗಳ ಹೆಸರನ್ನ ಇಡುವಂತಿಲ್ಲ ಅಂತ ಮಸೂದೆ ಸಿದ್ದಪಡಿಸಿದೆ. ಅಷ್ಟೇ ಅಲ್ಲದೆ ಈ ಮಸೂದೆಯಲ್ಲಿ ಪ್ರಸ್ತುತ ಇರೋ ವಿಮಾನ ನಿಲ್ದಾಣಗಳ ಹೆಸರನ್ನು ಬದಲಾವಣೆ ಮಾಡುವಂತಹ ನಿಯಮವನ್ನು ಅಳವಡಿಸಲಾಗಿದೆ. ಈ ಮಸೂದೆ ಅಂಗೀಕಾರವಾದಲ್ಲಿ ದೇಶದ 24 ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಪೈಕಿ 14 ವಿಮಾನ ನಿಲ್ದಾಣಗಳ ಹೆಸರುಗಳನ್ನ ಬದಲಾಯಿಸಬೇಕಾಗುತ್ತದೆ.

    ಈಗಾಗಲೇ ಮಸೂದೆಯ ಸಿದ್ಧತೆ ಅಂತಿಮ ರೂಪಕ್ಕೆ ಬಂದಿದ್ದು ಇದೇ ಸಂಸತ್ ಅಧಿವೇಶನದಲ್ಲಿ ಅಥವಾ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಅಂತ ಕೇಂದ್ರ ವಿಮಾನಯಾನ ರಾಜ್ಯ ಸಚಿವ ಜಯಂತ್ ಸಿನ್ಹಾ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಮೋದಿ ಸರ್ಕಾರವಿದ್ದಾಗಲೇ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಬಂತು. ಈಗ ಅದೇ ಸರ್ಕಾರದ ಅವಧಿಯಲ್ಲಿ ಕೆಂಪೇಗೌಡರ ಹೆಸರು ಕಳೆದುಕೊಳ್ಳುವುದು ಸನ್ನಿಹಿತವಾಗ್ತಿದೆ.

    ಯಾಕೆ ಈ ಬದಲಾವಣೆ?: ಭಾರತದ ಗಣ್ಯರು, ರಾಜ್ಯದ ಪ್ರಸಿದ್ಧ ವ್ಯಕ್ತಿಗಳ ಹೆಸರಿನ ಬಗ್ಗೆ ಮಾಹಿತಿ ಇಲ್ಲದ ವಿದೇಶಿಯರಿಗೆ ನಿಲ್ದಾಣಗಳ ಹೆಸರನ್ನು ಗುರುತಿಸಲು ಕಷ್ಟವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಪ್ರಸ್ತಾಪವನ್ನು ಸಲ್ಲಿಸಲಾಗಿತ್ತು.

    ಉಗ್ರ ಹೋರಾಟ: ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಉಗ್ರವಾಗಿ ಖಂಡಿಸಿರೋ ರಾಜ್ಯ ಒಕ್ಕಲಿಗರ ಸಂಘ, ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ಈ ಮಸೂದೆಯನ್ನು ಒಪ್ಪಲು ಸಾಧ್ಯವಿಲ್ಲ ಅಂತ ಹೇಳಿದೆ. ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ. ಹಾಗಾಗಿ ಅವರ ಹೆಸರು ಇಡೀ ಪ್ರಪಂಚಕ್ಕೆ ಗೋತ್ತಾಗಬೇಕು ಅನ್ನೋ ದೃಷ್ಠಿಯಿಂದ ಆ ಹೆಸರನ್ನು ಇಡಲಾಗಿದೆ. ಅಕಸ್ಮಾತ್ ಸರ್ಕಾರ ಏನಾದ್ರೂ ಈ ಹೆಸರನ್ನು ಬದಲಾವಣೆ ಮಾಡಿದ್ರೆ ಉಗ್ರ ಹೋರಾಟ ಮಾಡಬೇಕಾಗುತ್ತೆ ಅಂತ ಸಂಘದ ನಿರ್ದೇಶಕ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.