Tag: ಕೇಂದ್ರ ಸರ್ಕಾರ

  • ಅದಾನಿಯನ್ನು ಬಂಧಿಸಬೇಕು, ಸಂಸತ್ತಿನಲ್ಲಿ ಹೋರಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

    ಅದಾನಿಯನ್ನು ಬಂಧಿಸಬೇಕು, ಸಂಸತ್ತಿನಲ್ಲಿ ಹೋರಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಕೇಂದ್ರ ಸರ್ಕಾರ ಅದಾನಿಗೆ ಸಂಪೂರ್ಣ ಬೆಂಬಲ ಮಾಡುತ್ತಿದೆ ಎಂದು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆರೋಪಿಸಿದ್ದಾರೆ.

    ಅದಾನಿ ವಿರುದ್ಧ ಯುಎಸ್ ಕೋರ್ಟ್‌ನಿಂದ ವಾರೆಂಟ್ ಜಾರಿ ವಿಚಾರವಾಗಿ ಮಾತನಾಡಿದ ಅವರು, ಗೌತಮ್ ಅದಾನಿಯನ್ನು (Gautham Adani) ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು. ಆದರೆ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಶಾ ಅದಾನಿಯನ್ನ ರಕ್ಷಣೆ ಮಾಡುತ್ತಿದ್ದಾರೆ. ಈ ವಿಚಾರವನ್ನ ನಾವು ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಅದಾನಿ ಕಾನೂನು ಬಾಹಿರ ಕೆಲಸ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಕೇಸ್‌ಲ್ಲಿ ಭಾಗಿಯಾಗಿದ್ದಾರೆ ಎಂದು ಅನೇಕ ವರ್ಷಗಳಿಂದ ಹೇಳುತ್ತಿದ್ದೇವೆ. ಇಷ್ಟೆಲ್ಲಾ ಇದ್ದರೂ ಮೋದಿ ಸ್ವಲ್ವವೂ ಬಗ್ಗೆ ಮಾತನಾಡಲ್ಲ. ಅಮಿತ್ ಶಾ ಕಡೆ ಇಡಿ ಇದೆ. ಸಿಬಿಐ ಇದೆ. ಯಾಕೆ ತನಿಖೆ ಮಾಡುತ್ತಿಲ್ಲ ಎಂದು ಗುಡುಗಿದರು.ಇದನ್ನೂ ಓದಿ: IND vs Aus Test| ವಿವಾದಾತ್ಮಕ ತೀರ್ಪಿಗೆ ರಾಹುಲ್‌ ಔಟ್‌

    ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಪ್ರಕಟಿಸಿದಾಗ ಇದೆಲ್ಲ ಸುಳ್ಳು ಅಂದರು. ಈಗ ವಿದೇಶದಲ್ಲಿ ಅಕ್ರಮದ ಬಗ್ಗೆ ಚರ್ಚೆ ಆಗುತ್ತಿದೆ. ನಮ್ಮ ದೇಶದ ಆಸ್ತಿಯನ್ನ ಅದಾನಿಗೆ ಕೊಡುತ್ತಿದ್ದಾರೆ. ಏರ್ಪೋರ್ಟ್, ಪೋರ್ಟ್, ಜಮೀನು ಸೇರಿ ಎಲ್ಲಾ ಅದಾನಿಗೆ ಕೊಡುತ್ತಿದ್ದಾರೆ. ಅವನು ನ್ಯಾಯವಾಗಿ ಮಾಡಿಕೊಂಡರೆ ಪರವಾಗಿಲ್ಲ. ಒಬ್ಬನಿಗೆ ಶ್ರೀಮಂತ ಮಾಡಲು ಹೀಗೆ ಅಕ್ರಮ ಮಾಡುತ್ತಿದ್ದಾರೆ. ಇದಕ್ಕಾಗಿ ಅದಾನಿ ಕೇಂದ್ರ ಸರ್ಕಾರಕ್ಕೆ, ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ನಾವು ಯಾವತ್ತು ಟಾಟಾ, ಬಿರ್ಲಾ ಹೆಸರು ಹೇಳಿಲ್ಲ. ದಿಢೀರ್ ಕೋಟ್ಯಧಿಪತಿ ಆಗಬೇಕು, ಮಿಲಿಯನೇರ್, ಬಿಲಿಯನೇರ್ ಆಗಲು ಹೊರಟಿದ್ದಾರೆ. ಅಕ್ರಮದ ಬಗ್ಗೆ ತನಿಖೆ ಆಗಬೇಕು. ಅದಾನಿ ಬಂಧನ ಮಾಡಬೇಕು ಎಂದು ಆಗ್ರಹಿಸುತ್ತೇವೆ ಎಂದರು.

    ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರ, ಜಾರ್ಖಂಡ್ ಎರಡು ರಾಜ್ಯಗಳಲ್ಲಿ ಇಂಡಿಯಾ ಕೂಟ ಗೆಲ್ಲಲಿದೆ ಎರಡು ರಾಜ್ಯದಲ್ಲಿಯೂ ನಮಗೆ ನಿರೀಕ್ಷೆ ಇದೆ. ನಾವು ಉತ್ತಮವಾಗಿ ಕೆಲಸ ಮಾಡಿದ್ದೇವೆ. ನಾಳೆ ಫಲಿತಾಂಶದಲ್ಲಿ ನೋಡೋಣ. ಈಗ ನಾವು ಏನೇ ಹೇಳಿದರೂ ಅದೆಲ್ಲಾ ಊಹಾಪೋಹಗಳು ಆಗುತ್ತವೆ. ನಾನು ಅನೇಕ ಕಡೆ ಸಭೆ ಮಾಡಿದ್ದೇವೆ ಹಾಗೂ ಉತ್ತಮ ಕೆಲಸ ಮಾಡಿದ್ದೇವೆ. ಎರಡು ರಾಜ್ಯದಲ್ಲಿ ನಾವು ಗೆಲ್ಲುತ್ತೇವೆ ಎಂದು ಭರವಸೆ ಇಟ್ಟುಕೊಂಡಿದ್ದೇವೆ. ಕರ್ನಾಟಕದ್ದು ನಿಮಗೆಲ್ಲ ಗೊತ್ತಿದೆ ಬಿಡಿ ಎಂದು ಹೇಳಿದರು.ಇದನ್ನೂ ಓದಿ: BBK 11: ಕೊನೆಗೂ ಅನಾವರಣ ಆಯ್ತು ಶೋಭಾ ಶೆಟ್ಟಿ ಅಸಲಿ ಮುಖ

  • ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – 1,500ರ ಗಡಿ ದಾಟಿದ AQI

    ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – 1,500ರ ಗಡಿ ದಾಟಿದ AQI

    – ವಿಮಾನಗಳು, ರೈಲು ಪ್ರಯಾಣದಲ್ಲಿ ಅಸ್ತವ್ಯಸ್ತ

    ನವದೆಹಲಿ: ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಹುಲ್ಲು ಸುಡುವಿಕೆಯಿಂದೆ ದೆಹಲಿಯಲ್ಲಿ ಉಂಟಾದ ವಾಯು ಮಾಲಿನ್ಯ (Delhi Air Pollution) ಅಪಾಯದ ಮಟ್ಟ ಮೀರಿದೆ. ಸತತ 6ನೇ ದಿನವೂ ವಾಯುಮಾಲಿನ್ಯ ಮುಂದುವರಿದಿದ್ದು ಉಸಿರಾಡುವ ಗಾಳಿ ವಿಷವಾಗುತ್ತಿದೆ. ಸೋಮವಾರ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) 1,500ರ ಗಡಿ ದಾಟಿದೆ.

    ಸೋಮವಾರ ಬೆಳಗ್ಗೆ ದೆಹಲಿಯ ಮುಂಡ್ಕಾದಲ್ಲಿ ಎಕ್ಯೂಐ 1591 ಎಕ್ಯೂಐ, ದ್ವಾರಕ-8ನೇ ಸೆಕ್ಟಾರ್‌ನಲ್ಲಿ ಎಕ್ಯೂಐ 1,497 ಹಾಗೂ ರೋಹಿಣಿ ಸೆಕ್ಟಾರ್‌ನಲ್ಲಿ 1,427 ಎಕ್ಯೂಐ ದಾಖಲಾಗಿದೆ. ಗೋಚರತೆ ಪ್ರಮಾಣ ಇನ್ನಿಲ್ಲದಂತೆ ಕುಸಿದಿದೆ. ರಸ್ತೆ, ರೈಲು, ವೈಮಾನಿಕ ಸೇವೆಗಳಲ್ಲಿ ತೀವ್ರ ವ್ಯತ್ಯಯವಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮತ್ತೊಂದೆಡೆ ಹೆಚ್ಚಿದ ವಾಯು ಮಾಲಿನ್ಯದಿಂದ ದೆಹಲಿ ಜನರಲ್ಲಿ ಉಸಿರಾಟ ಸಮಸ್ಯೆ ತೀವ್ರವಾಗಿದೆ. ಇದನ್ನೂ ಓದಿ: ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ

    ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದೆ. ಅಪಾಯದ ಮಟ್ಟ ಮೀರಿದ ಮಾಲಿನ್ಯ ನಿಯಂತ್ರಣಕ್ಕೆ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್‌ನ 4ನೇ ಹಂತವನ್ನು ದೆಹಲಿ ಸರ್ಕಾರ ಜಾರಿ ಮಾಡಿದೆ. ಮಾಲಿನ್ಯ ವಿಚಾರವಾಗಿ ಆಳುವ ಸರ್ಕಾರವನ್ನು ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: `ಏಕ್ ಹೈ ತೊ ಸೇಫ್ ಹೈ’ ಪ್ರಧಾನಿ ಘೋಷಣೆಗೆ ಟೀಕೆ – ಮೋದಿ, ಅದಾನಿ ಫೋಟೋ ತೋರಿಸಿ ರಾಗಾ ವ್ಯಂಗ್ಯ

    ನಾವು ಹೇಳೋವರೆಗೂ ಜಿಆರ್‌ಎಪಿ-4 ನಿಯಮ ಸಡಿಲಿಸಬಾರದು. ಎಕ್ಯೂಐ 400ಕ್ಕಿಂತ ಕಡಿಮೆಯಾದ್ರೂ ಈ ನಿಯಮ ಸಡಿಲಿಸಬಾರದು ಎಂದು ಸೂಚಿಸಿದೆ. ಆದರೆ, ವಾಯುಮಾಲಿನ್ಯ ವಿಚಾರವಾಗಿ ರಾಜಕೀಯ ನಡೆದಿದೆ. ವಾಯು ಮಾಲಿನ್ಯ ತೀವ್ರ ಸ್ವರೂಪ ಪಡೆಯೋವರೆಗೂ ಕೇಂದ್ರ ಅಚೇತನವಾಗಿತ್ತು.

    ಯಾವುದೇ ಮುಂಜಾಗ್ರತೆ ವಹಿಸಲಿಲ್ಲ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಹುಲ್ಲು ಸುಡುತ್ತಿರುವುದೇ ದೆಹಲಿ ಮಾಲಿನ್ಯಕ್ಕೆ ಕಾರಣ ಎಂದು ಸಿಎಂ ಅತಿಶಿ ದೂರಿದ್ದಾರೆ. ಇದನ್ನೂ ಓದಿ: ಮಣಿಪುರ ಗಲಭೆ: ಅಮಿತ್ ಶಾ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ – 50 ಕೇಂದ್ರೀಯ ಭದ್ರತಾ ಪಡೆ ನಿಯೋಜನೆ

  • ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ

    ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ

    ನವದೆಹಲಿ: ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಹುಲ್ಲು ಸುಡುವಿಕೆ ವ್ಯಾಪಕವಾಗಿದೆ ಇದರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ದೆಹಲಿಯಲ್ಲಿ ವಾಯು ಮಾಲಿನ್ಯದ (Delhi Air Pollution) ಪ್ರಮಾಣ ತೀವ್ರವಾಗಿ ಏರುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ (Atishi) ಆರೋಪಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲ್ಲು ಸುಡುವ ಬಿಕ್ಕಟ್ಟಿಗೆ ರಾಷ್ಟ್ರವ್ಯಾಪಿ ಪರಿಹಾರ ಕಂಡುಕೊಳ್ಳುವುದು ಕೇಂದ್ರ ಸರ್ಕಾರದ (Central Government) ಜವಾಬ್ದಾರಿಯಾಗಿದೆ. ಆದರೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಿಷ್ಕ್ರಿಯವಾಗಿದೆ. ಪಂಜಾಬ್‌ನಲ್ಲಿ ಹುಲ್ಲು ಸುಡುವುದು ನಿಯಂತ್ರಿಸಬಹುದಾದರೆ ಉಳಿದ ರಾಜ್ಯಗಳಲ್ಲಿ ಯಾಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ವೇದಘೋಷಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ

    ಜನರು ಉಸಿರಾಡಲು ಕಷ್ಟಪಡುತ್ತಿದ್ದಾರೆ. ಕಳೆದ ರಾತ್ರಿ, ನನಗೆ ಹಲವಾರು ಕರೆಗಳು ಬಂದವು. ಕೆಲವರು ವಯಸ್ಸಾದ ಕುಟುಂಬ ಸದಸ್ಯರನ್ನು ಆಸ್ಪತ್ರೆಗಳಿಗೆ ಧಾವಿಸುತ್ತಿದ್ದಾರೆ, ಇತರರು ತಮ್ಮ ಮಕ್ಕಳಿಗೆ ಸ್ಟೀರಾಯ್ಡ್‌ಗಳನ್ನು ಹುಡುಕುತ್ತಿದ್ದಾರೆ. ಉತ್ತರ ಭಾರತವು ಇಂದು ಆರೋಗ್ಯ ತುರ್ತು ಪರಿಸ್ಥಿತಿ (Health Emergency) ಎದುರಿಸುತ್ತಿದೆ, ಪ್ರದೇಶದಾದ್ಯಂತ ನಗರಗಳು ‘ತೀವ್ರ’ ಮತ್ತು ‘ಅತ್ಯಂತ ಕಳಪೆ’ AQI ಮಟ್ಟವನ್ನು ದಾಖಲಿಸುತ್ತಿವೆ ಎಂದರು. ಇದನ್ನೂ ಓದಿ: ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಅಂದ್ರೆ ಅದು ಬಿಜೆಪಿಯವರು: ಈಶ್ವರ್ ಖಂಡ್ರೆ

    ಹುಲ್ಲು ಸುಡುವಿಕೆ ಉತ್ತರ ಪ್ರದೇಶದಲ್ಲಿ 60% ನಷ್ಟು ಹೆಚ್ಚಳವಾಗಿದೆ, ಆದರೆ ಮಧ್ಯಪ್ರದೇಶವು ಪ್ರಸ್ತುತ ಅತಿ ಹೆಚ್ಚು ಹುಲ್ಲು ಸುಡುತ್ತಿದೆ ಅಲ್ಲಿ ಪ್ರತಿದಿನ 700ಕ್ಕೂ ಹೆಚ್ಚು ಘಟನೆಗಳು ವರದಿಯಾಗುತ್ತವೆ. ಕಳೆದ 6-7 ವರ್ಷಗಳಿಂದ, ದೇಶಾದ್ಯಂತ ಹುಲ್ಲು ಸುಡುವ ಘಟನೆಗಳು ಹೆಚ್ಚಾಗುತ್ತಿವೆ, ಪಂಜಾಬ್ ಹುಲ್ಲು ಸುಡುವಿಕೆ 80% ಕಡಿತವನ್ನು ಸಾಧಿಸಬಹುದಾದರೆ, ಇತರ ರಾಜ್ಯಗಳು ಏಕೆ ಸಾಧ್ಯವಿಲ್ಲ? ಉತ್ತರ ಭಾರತದಾದ್ಯಂತ ನಗರಗಳಲ್ಲಿನ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಕೇಂದ್ರ ಸರ್ಕಾರ ರಾಜಕೀಯ ಮಾಡುವುದನ್ನು ಬಿಟ್ಟು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಮಾಲಿನ್ಯವು ರಾಜ್ಯದ ಗಡಿಗಳನ್ನು ಅಥವಾ ರಾಜಕೀಯ ಸಂಬಂಧಗಳನ್ನು ಗುರುತಿಸುವುದಿಲ್ಲ ಎಂಬುದನ್ನು ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅರ್ಥಮಾಡಿಕೊಳ್ಳಬೇಕು, ಮಾಸ್ಕ್ ಹಂಚುವ ರಾಜಕೀಯ ಮಾಡುವುದು ಬಿಟ್ಟು ಮಾಲಿನ್ಯ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ದೇವೇಗೌಡ, ಕುಮಾರಸ್ವಾಮಿ ಯಾವತ್ತು ಕರ್ನಾಟಕಕ್ಕೆ ಅನ್ಯಾಯ ಆಗಿದೆ ಅಂತ ಮಾತಾಡಿಲ್ಲ- ಸಿಎಂ

  • ಕೃಷಿ ತ್ಯಾಜ್ಯಕ್ಕೆ ಬೆಂಕಿ: ದಂಡ ದುಪ್ಪಟ್ಟುಗೊಳಿಸಿ ಕೇಂದ್ರ ಸರ್ಕಾರ ಆದೇಶ

    ಕೃಷಿ ತ್ಯಾಜ್ಯಕ್ಕೆ ಬೆಂಕಿ: ದಂಡ ದುಪ್ಪಟ್ಟುಗೊಳಿಸಿ ಕೇಂದ್ರ ಸರ್ಕಾರ ಆದೇಶ

    – 5 ಎಕರೆಗಿಂತ ಜಾಸ್ತಿ ಇದ್ದರೆ 30,000 ರೂ. ದಂಡ

    ನವದೆಹಲಿ: ದೆಹಲಿ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವ ಹಿನ್ನೆಲೆ ಕೃಷಿ ತ್ಯಾಜ್ಯಕ್ಕೆ ಬೆಂಕಿ (Stubble Burning) ಹಚ್ಚುವ ಕೃಷಿಕರಿಗೆ ಕೇಂದ್ರ ಸರ್ಕಾರ (Central Government) ಬಿಸಿ ಮುಟ್ಟಿಸುವ ಕೆಲಸ ಮಾಡಿದೆ. ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವವರಿಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು ದುಪ್ಪಟ್ಟು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ದೆಹಲಿಯ ಎನ್‌ಸಿಆ‌ರ್ (Delhi NCR) ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವ ಸಂಬಂಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ, ನಿಯಮಗಳಿಗೆ ಸರ್ಕಾರ ತಿದ್ದುಪಡಿ ತಂದಿದೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

    ದಂಡದ ಪ್ರಮಾಣ ಎಷ್ಟು?
    ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು 5,000 ರೂ., 2 ಎಕರೆಗಿಂತ ಹೆಚ್ಚು ಮತ್ತು 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು 10,000 ರೂ. ಹಾಗೂ 10 ಎಕರೆಗಿಂತಲೂ ಅಧಿಕ ಜಮೀನು ಹೊಂದಿರುವವರು 30,000 ರೂ. ಪರಿಸರ ಪರಿಹಾರ ಪಾವತಿಸಬೇಕಾಗುತ್ತದೆ.

    ಗಾಳಿಯ ಗುಣಮಟ್ಟ ಸೂಚ್ಯಂಕವು (ಎಕ್ಯೂಐ) ದೆಹಲಿಯ ಆನಂದ್ ವಿಹಾರ, ಅಶೋಕ ವಿಹಾರ, ಬವಾನ, ಜಹಾಂಗಿರ್‌ಪುರಿ, ಮುಂಡ್ಯಾ, ರೋಹಿಣಿ, ಸೋನಿಯಾ ವಿಹಾ. ವಿವೇಕ್ ವಿಹಾರ, ವಾಝಿಪುರದಲ್ಲಿ ನವೆಂಬರ್ 7ರ ಬೆಳಿಗ್ಗೆ 9ರ ಹೊತ್ತಿಗೆ 367ಕ್ಕೆ ಕುಸಿದಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಡಿ.ರೂಪಾಗೆ ಹಿನ್ನಡೆ

    ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ಎಕ್ಯೂಐ ಮಟ್ಟವು ಶೂನ್ಯದಿಂದ 50 ರಷ್ಟಿದ್ದರೆ ಉತ್ತಮ, 51 ರಿಂದ 100 ರಷ್ಟಿದ್ದರೆ ಸಮಾಧಾನಕರ, 101 ರಿಂದ 200 ರಷ್ಟಿದ್ದರೆ ಸಾಧಾರಣ, 201 ರಿಂದ 300 ರಷ್ಟಿದ್ದರೆ ಕಳಪೆ ಹಾಗೂ 301 ರಿಂದ 400 ರಷ್ಟಿದ್ದರೆ ಅತ್ಯಂತ ಕಳಪೆ, 401 ರಿಂದ 450ರಷ್ಟು ಕಂಡು ಬಂದರೆ ತೀವ್ರ ಕಳಪೆ ಹಾಗೂ 450ಕ್ಕಿಂತ ಹೆಚ್ಚಾದರೆ ಅತ್ಯಂತ ಅಪಾಯಕಾರಿ ಎಂದು ವರ್ಗೀಕರಿಸಲಾಗುತ್ತದೆ.

    ದೆಹಲಿಯಲ್ಲಿ ಸತತವಾಗಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ವಹಣೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿತ್ತು. ಹೀಗಾಗಿ ಕೇಂದ್ರ ಸರ್ಕಾರ ದಂಡದ ಪ್ರಮಾಣ ದುಪ್ಪಟ್ಟು ಮಾಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶನ- ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ತಾರಕಕ್ಕೇರಿದ ಗದ್ದಲ 

  • ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

    ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

    – ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ; ದೆಹಲಿಯಲ್ಲಿ ಪ್ರತಿಭಟನಾ ಸಭೆ

    ನವದೆಹಲಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ (Union Government) ತೆರಿಗೆ ವಂಚನೆಯಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi) ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.

    ದೆಹಲಿಯ ಕರ್ನಾಟಕ ಸಂಘದಲ್ಲಿ ರಾಜ್ಯಸಭೆ ಮಾಜಿ ಸಂಸದ ಎಲ್‌. ಹನುಮಂತಯ್ಯ (L Hanumanthaiah) ಅವರ ನೇತೃತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ರಾಜ್ಯದ ಪ್ರಮುಖ ಸಾಹಿತಿಗಳು, ಚಿಂತಕರು, ಕನ್ನಡಪರ ಹೋರಾಟಗಾರರು, ರೈತ ನಾಯಕರು, ಮಹಿಳಾ ಹೋರಾಟಗಾರ್ತಿಯರು ಭಾಗಿಯಾಗಿದ್ದರು. ಪ್ರತಿಭಟನಾ ಸಭೆ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು. ಇದನ್ನೂ ಓದಿ: ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಬೇಕು: ಅರವಿಂದ ಬೆಲ್ಲದ್‌

    ಸಭೆಯಲ್ಲಿ ಮಾತನಾಡಿದ ಎಲ್.ಹನುಮಂತಯ್ಯ, ಪ್ರಧಾನಿ ಮೋದಿ ಅವರ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು ಎಂದು ಒತ್ತಾಯಿಸಿದರು. ಪ್ರತಿಯೊಂದು ರಾಜ್ಯದ ಭಾಷೆ, ಸಂಸ್ಕೃತಿ ವೈವಿಧ್ಯತೆಯನ್ನು ಒಕ್ಕೂಟ ಸರ್ಕಾರ ಕಾಪಾಡಬೇಕು. ಅದರ ಬದಲು ಏಕಮುಖ ಸಂಸ್ಕೃತಿ ಏರಿಕೆ ಮಾಡಬಾರದು ಎಂದರು. ರಾಜ್ಯಕ್ಕೆ ಬರಬೇಕಿರುವ ನ್ಯಾಯಬದ್ಧವಾದ ತೆರಿಗೆಯನ್ನು ನೀಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಶಿವರಾಂ ಎಚ್ಚರಿಕೆ ನೀಡಿದರು.

    ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ ವಿಜಯ್‌ಕುಮಾರ್ ಮಾತನಾಡಿ, ದೇಶದ ಆತಂರಿಕ ಶಾಂತಿಗಾಗಿ ದೆಹಲಿಯಲ್ಲಿ ಸಭೆ ಮಾಡುವ ಅನಿವಾರ್ಯತೆ ಬಂದಿದೆ. ಬುದ್ಧಿ ಹೇಳುವ ವ್ಯವಸ್ಥೆಯ ವಿರುದ್ಧವೇ ನಾವು ಮಾತನಾಡಬೇಕಾದ ಅನಿವಾರ್ಯತೆ ಇದೆ. ಐಟಿ, ಇಡಿ ಸಿಬಿಐ ಅನ್ನು 65 ವರ್ಷ ಕಾಂಗ್ರೆಸ್‌ ನಡೆಸಿಕೊಂಡ ರೀತಗು, ಬಿಜೆಪಿ ನಡೆಸಿಕೊಂಡ ರೀತಿಗು ಭಿನ್ನವಾಗಿದೆ ಎಂದರು. ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

    ಕನ್ನಡ ಪ್ರಾಧಿಕಾರದ ಸದಸ್ಯ ಟಿ. ಗುರುರಾಜ್ ಮಾತನಾಡಿ, ಕರ್ನಾಟಕ, ಕನ್ನಡಿಗರು ವಿಷಮ ಪರಿಸ್ಥಿತಿಯಲ್ಲಿ ನರಳುತ್ತಿದ್ದಾರೆ. ತಾರತಮ್ಯ ಮಾಡದೇ ಆಡಳಿತ ಮಾಡಬೇಕಿದ್ದ ಕೇಂದ್ರ ಸರ್ಕಾರ ಉತ್ತರ ಭಾರತ, ದಕ್ಷಿಣ ಭಾರತದ ಎಂದು ಮಲತಾಯಿ ಧೋರಣೆ ಮಾಡುತ್ತಿದೆ. ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಬರಬೇಕಿರುವ ತೆರಿಗೆ ಹಣ ನೀಡುತ್ತಿಲ್ಲ. ನರೇಂದ್ರ ಮೋದಿ ಅವರು ಸಾಮ್ರಾಟನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅವರು ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದು ಮರೆತಿದ್ದಾರೆ. ನಮ್ಮ ತೆರಿಗೆ ಪಾಲು ಕೊಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಪ್ರತಿಭಟನೆ ನಡೆಸಿದರು ಎನ್ನುವ ಕಾರಣಕ್ಕೆ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಬಳಕೆ ಮಾಡುತ್ತಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

    ಪ್ರತಿಭಟನಾ ಸಭೆಯಲ್ಲಿ ಹಿರಿಯ ಕನ್ನಡ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ‌ ಮಾಜಿ ಅಧ್ಯಕ್ಷ ಪ್ರೊ. ಎಸ್‌.ಜಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಖ್ಯಾತ ಸಾಹಿತಿ ಕಾಳೇಗೌಡ ನಾಗವಾರ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್, ಪ್ರಗತಿಪರ ರೈತ ಆರ್‌.ಸ್ವಾಮಿ ಆನಂದ, ರೆಸ್ಪಾನ್ಸಿಬಲ್ ಸಿಟಿಝನ್ಸ್ ವಾಯ್ಸ್ ಫೋರಂ ಅಧ್ಯಕ್ಷ ಎಫ್.ಎಂ ಕಲೀಂ ಮತ್ತಿತರು ಭಾಗಿಯಾಗಿದ್ದರು‌.

  • ಕರ್ನಾಟಕದ 7 ಮಂದಿ ಸೇರಿ ದೇಶದ 463 ಭದ್ರತಾ ಅಧಿಕಾರಿಗಳಿಗೆ ʻಕೇಂದ್ರೀಯ ಗೃಹಮಂತ್ರಿ ದಕ್ಷತಾ ಪದಕʼ

    ಕರ್ನಾಟಕದ 7 ಮಂದಿ ಸೇರಿ ದೇಶದ 463 ಭದ್ರತಾ ಅಧಿಕಾರಿಗಳಿಗೆ ʻಕೇಂದ್ರೀಯ ಗೃಹಮಂತ್ರಿ ದಕ್ಷತಾ ಪದಕʼ

    ನವದೆಹಲಿ: ಅನುಕರಣೀಯ ಸೇವೆ ಗುರುತಿಸಿ, ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಕೇಂದ್ರ ಪೊಲೀಸ್ ಸಂಸ್ಥೆಗಳ 463 ಸಿಬ್ಬಂದಿಗೆ ʻಕೇಂದ್ರೀಯ ಗೃಹಮಂತ್ರಿ ದಕ್ಷತಾ ಪದಕʼ (Kendriya Grihmantri Dakshata Padak) ಪ್ರಶಸ್ತಿ ಘೋಷಣೆ ಮಾಡಲಾಗಿದೆ.

    ವಿವಿಧ ಭದ್ರತಾ ಪಡೆಗಳಲ್ಲಿರುವ ಪೊಲೀಸ್‌ ಅಧಿಕಾರಿಗಳ ಅತ್ಯುತ್ತಮ ಸೇವೆ, ಕೊಡುಗೆಗಳನ್ನು ಗುರುತಿಸಲು, ವೃತ್ತಿಪರ ಗುಣಮಟ್ಟವನ್ನು ಉತ್ತೇಜಿಸಲು ಕೊಡಮಾಡುವ ಪ್ರತಿಷ್ಠಿತ ಪದಕ ಇದಾಗಿದೆ.

    ಕರ್ನಾಟಕದ 7 ಮಂದಿಗೆ ಪದ:
    ದೇಶದ ವಿವಿಧ ಭದ್ರತಾ ಪಡೆಗಳಲ್ಲಿರುವ ಪೊಲೀಸ್‌ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿದ್ದು, ಈ ಪಟ್ಟಿಯಲ್ಲಿ ಕರ್ನಾಟಕದ 6 ಪೊಲೀಸ್‌ ಅಧಿಕಾರಿಗಳು ಹಾಗೂ ಓರ್ವ ಎಫ್‌ಎಸ್‌ಎಲ್‌ ಅಧಿಕಾರಿಯೂ ಸೇರಿದ್ದಾರೆ. ಇದನ್ನೂ ಓದಿ: ಮೊದಲು ನಗರ ನಕ್ಸಲರ ವಿರುದ್ಧ ಹೋರಾಡಬೇಕು – ವಿಪಕ್ಷಗಳ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ

    ಕರ್ನಾಟಕದ ಅಧಿಕಾರಿಗಳಾದ ಡಿವೈಎಸ್ಪಿ, ಐಎಸ್ಡಿ ಬಸವರಾಜ್, ಬೆಂಗಳೂರು ನಗರ ಎಸಿಪಿ ರಮೇಶ್ ವಿ.ಎಲ್, ರಾಯಚೂರು ಜಿಲ್ಲೆ ಇನ್ಸ್ಪೆಕ್ಟರ್ ಉಮೇಶ್ ಕಾಂಬ್ಲೇ, ಸಿಐಡಿ ಇನ್ಸ್ಪೆಕ್ಟರ್ ನರೇಂದ್ರ ಬಾಬು, ಹಾಸಜನ ಜಿಲ್ಲೆ ಇನ್ಸ್ಪೆಕ್ಟರ್ ವಸಂತ ಕೆ.ಎಂ, ಉತ್ತರಕನ್ನಡ ಜಿಲ್ಲೆಯ ಇನ್ಸ್ಪೆಕ್ಟರ್ ರಮೇಶ್ ಹೆಚ್ ಹನಾಪುರ್, ಬೆಳಗಾವಿ ಜಿಲ್ಲೆಯ ಡಾ.ಪ್ರವೀಣ್ ಸಂಗ್ನಲ್ ಮಠ್ ಅವರು ಪದಕಕ್ಕೆ ಭಾಜನರಾಗಿದ್ದಾರೆ. ಇದನ್ನೂ ಓದಿ: ಆರ್‌.ಆರ್‌ ನಗರ ದರ್ಶನ್ ನಿವಾಸದ ಬಳಿ ಪೊಲೀಸರ ಬಿಗಿ ಭದ್ರತೆ – ನಾಳೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ

    ಪದಕದ ವಿಶೇಷತೆ ಏನು?
    2024ರ ಫೆಬ್ರವರಿ 1ರಂದು ಕೇಂದ್ರೀಯ ಗೃಹದಕ್ಷತಾ ಪದಕವನ್ನು ಸ್ಥಾಪಿಸಲಾಗಿದೆ. ಕರ್ತವ್ಯದಲ್ಲಿ ಉನ್ನತ ಕೊಡುಗೆ ನೀಡಿದ ಪೊಲೀಸ್ ಪಡೆಗಳು, ಭದ್ರತಾ ಸಂಸ್ಥೆ, ಗುಪ್ತಚರ ವಿಭಾಗ, ಶಾಖೆ, ರಾಜ್ಯದ ವಿಶೇಷ ಶಾಖೆ, ಯುಟಿ ಸದಸ್ಯರಿಗೆ ಈ ಪದಕ ನೀಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಪ್ರಾರಂಭವಾದ ʻಕೇಂದ್ರೀಯ ಗೃಹಮಂತ್ರಿ ದಕ್ಷತಾ ಪದಕʼವು ಎಲ್ಲಾ ಪೊಲೀಸ್ ಸಿಬ್ಬಂದಿಯ ನೈತಿಕತೆ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದು ಬಣ್ಣಿಸಲಾಗಿದೆ.

  • ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ

    ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ

    ಕೇಂದ್ರದಿಂದ 2, ರಾಜ್ಯ ಸರ್ಕಾರದಿಂದ 4 ಖರೀದಿ ಏಜನ್ಸಿ ನೇಮಕ: ಸಚಿವ ಶಿವಾನಂದ ಪಾಟೀಲ

    ಬೆಂಗಳೂರು: ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ (Shivananda Patil) ತಿಳಿಸಿದ್ದಾರೆ.

    ಪ್ರತಿ ಕ್ವಿಂಟಾಲ್‌ಗೆ 6,783 ರೂ. ನಿಗದಿಪಡಿಸಿದ್ದು, ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ ಮತ್ತು ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಬಿಎಂಪಿಗೆ ಡಿಸಿಎಂ ಖಡಕ್ ವಾರ್ನಿಂಗ್ – ಸೋಮವಾರದಿಂದ ಅನಧಿಕೃತ ಕಟ್ಟಡಗಳ ಸರ್ವೆ ಆರಂಭ

    ಈಗ ಅನುಮತಿ ದೊರೆತಿರುವ ಶೇಂಗಾ ಸೇರಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಟ್ಟು ಎಂಟು ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗಿದೆ. ಇದುವರೆಗೆ ಉಂಡೆ ಕೊಬ್ಬರಿ, ಮಿಲ್ಲಿಂಗ್ ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬಿನ್, ಸೂರ್ಯಕಾಂತಿ, ಹತ್ತಿಯನ್ನು ಖರೀದಿಸಲಾಗಿದೆ. ಬೆಲೆ ಕುಸಿತದ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ರಾಜ್ಯದ ಮನವಿಯನ್ನು ಕೇಂದ್ರ ಪುರಸ್ಕರಿಸಿದ್ದು, ಶೇಂಗಾ ಖರೀದಿಗೆ ಕೇಂದ್ರ ಸರ್ಕಾರದಿಂದ ಎರಡು, ರಾಜ್ಯ ಸರ್ಕಾರದಿಂದ ನಾಲ್ಕು ಏಜನ್ಸಿಗಳನ್ನು ಗುರುತಿಸಲಾಗಿದೆ. ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲು ನಾಫೆಡ್ ಸಂಸ್ಥೆ, ಎನ್ಸಿಸಿಎಫ್ ಸಂಸ್ಥೆ ಹಾಗೂ ಖರೀದಿ ಏಜನ್ಸಿಗಳೊಂದಿಗೆ ಸಮಾಲೋಚನೆ ನಡೆಸಿ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

    ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸುವ ಪೂರ್ವದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಖರೀದಿ ಕೇಂದ್ರದಿಂದ ದೂರುಗಳು ಬರಬಾರದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನಾಗಮಂಗಲದಲ್ಲಿ ಕೋಟೆ ವಿದ್ಯಾಗಣಪತಿ ವಿಸರ್ಜನೆ – ಕೋಮು ಗಲಭೆ ನಡೆದ ಸ್ಥಳದಲ್ಲೇ ಇಂದು ಬೃಹತ್ ಶೋಭಾಯಾತ್ರೆ

  • ಸುಪ್ರೀಂ ಕೋರ್ಟ್‌ನ ನೂತನ ಸಿಜೆಐ ಆಗಿ ಸಂಜೀವ್‌ ಖನ್ನಾ ನೇಮಕ – ನ.11ರಂದು ಪ್ರಮಾಣ ವಚನ

    ಸುಪ್ರೀಂ ಕೋರ್ಟ್‌ನ ನೂತನ ಸಿಜೆಐ ಆಗಿ ಸಂಜೀವ್‌ ಖನ್ನಾ ನೇಮಕ – ನ.11ರಂದು ಪ್ರಮಾಣ ವಚನ

    ನವದೆಹಲಿ: ನ್ಯಾ. ಸಂಜೀವ್‌ ಖನ್ನಾ (Sanjiv Khanna) ಅವರನ್ನು ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯನ್ಯಾಮೂರ್ತಿಯನ್ನಾಗಿ (CJI) ನೇಮಕ ಮಾಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

    ಭಾರತದ ಸಂವಿಧಾನದ 124ನೇ ವಿಧಿಯ ಷರತ್ತು (2)ರ ಅನ್ವಯ ನೀಡಲಾದ ಅಧಿಕಾರ ಚಲಾಯಿಸುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮುಂದಿನ ಸಿಜೆಐ ಆಗಿ ನ್ಯಾ. ಸಂಜೀವ್ ಖನ್ನಾ ಅವರನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ. ಇದನ್ನೂ ಓದಿ: ಕಣ್ತೆರೆದ ನ್ಯಾಯದೇವತೆ – ಇಲ್ಲಿಯವರೆಗೂ ಕಣ್ಣಿಗೆ ಕಟ್ಟಿದ್ದ ಬಟ್ಟೆ ತೆರವುಗೊಳಿಸಿದ ಸುಪ್ರೀಂ ಕೋರ್ಟ್

    ನವೆಂಬರ್‌ 11ರಂದು ಸಿಜೆಐ ಹುದ್ದೆಯಿಂದ ಹಾಲಿ ಸಿಜೆಐ ಚಂದ್ರಚೂಡ್‌ (DY ChandraChud) ನಿವೃತ್ತಿಯಾಗಲಿದ್ದಾರೆ. ಅಂದೇ ಸಂಜೀವ್‌ ಖನ್ನಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದು, 2025ರ ಮೇ 13ರ ವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ. 2019ರ ಜನವರಿ 18ರಂದು ನ್ಯಾ. ಸಂಜೀವ್‌ ಖನ್ನಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌‌ ಹುದ್ದೆಗೆ ನೇಮಿಸಲಾಗಿತ್ತು. ಇದನ್ನೂ ಓದಿ: ಬಿಹಾರ, ಆಂಧ್ರಕ್ಕೆ ಬಂಪರ್‌ ಗಿಫ್ಟ್‌ – 6,798 ಕೋಟಿ ಮೊತ್ತದ 2 ರೈಲ್ವೇ ಯೋಜನೆಗಳಿಗೆ ಕೇಂದ್ರ ಕ್ಯಾಬಿನೆಟ್ ಅಸ್ತು

    2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಿದ ಬಳಿಕ ಚಂದ್ರಚೂಡ್‌ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಯುಯು ಲಲಿತ್‌ ಅವರಿಗೂ ಮುನ್ನ ಎನ್.ವಿ.ರಮಣ (NV Ramana) ಅವರು 48ನೇ ಸಿಜೆಐ ಆಗಿ ಅಧಿಕಾರ ನಿರ್ವಹಿಸಿದ್ದರು. ಇದನ್ನೂ ಓದಿ: ಮಹಾ ಚುನಾವಣೆ: ಅಜಿತ್ ಪವಾರ್ ಬಣಕ್ಕೆ ಸಿಕ್ತು ಗಡಿಯಾರ ಚಿಹ್ನೆ – ಸುಪ್ರೀಂ ಕೋರ್ಟ್ ಅನುಮತಿ

  • ಪರಿಸರ ಸಂರಕ್ಷಣಾ ಕಾಯ್ದೆ ಹಲ್ಲಿಲ್ಲದ ಹಾವು, ಇದು ರಾಜಕೀಯವಲ್ಲದೆ ಮತ್ತೇನು ಅಲ್ಲ: ಸುಪ್ರೀಂ ತರಾಟೆ

    ಪರಿಸರ ಸಂರಕ್ಷಣಾ ಕಾಯ್ದೆ ಹಲ್ಲಿಲ್ಲದ ಹಾವು, ಇದು ರಾಜಕೀಯವಲ್ಲದೆ ಮತ್ತೇನು ಅಲ್ಲ: ಸುಪ್ರೀಂ ತರಾಟೆ

    – ದೆಹಲಿ ಮಾಲಿನ್ಯ ಹಿನ್ನೆಲೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಚಾಟಿ

    ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿನ (Delhi) ವಾಯು ಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಕಳವಳ ವ್ಯಕ್ತಪಡಿಸಿದೆ. ಪರಿಣಾಮಕಾರಿಯಲ್ಲದ ಪರಿಸರ ಸಂರಕ್ಷಣಾ ಕಾಯಿದೆ (Environmental Protection Act) ಜಾರಿ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಇದೇ ವೇಳೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ನೆರೆ ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮಾಲಿನ್ಯ ನಿಯಂತ್ರಣಕ್ಕೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಪರಿಸರ ಸಂರಕ್ಷಣಾ ಕಾಯಿದೆ ಹಲ್ಲಿಲ್ಲದ ಹಾವಿನಂತಾಗಿದೆ. ಕಾಯಿದೆಯಲ್ಲಿ ತಪ್ಪಿತಸ್ಥರನ್ನು ಶಿಕ್ಷೆಯಿಂದ ಮುಕ್ತಗೊಳಿಸಿ, ದಂಡದ ಮೂಲಕ ಅದನ್ನು ಬದಲಾಯಿಸಿದ್ದೀರಿ. ಇಂತಹ ನಿಯಮಗಳಿಂದ ಮಾಲಿನ್ಯ ನಿಯಂತ್ರಣ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದೆ.ಇದನ್ನೂ ಓದಿ: ಕರ್ನಾಟಕ ಫ್ರಾಡ್‌ಗಳ ಸಂತೆಯಾಗಲು ಸಿದ್ದರಾಮಯ್ಯ ಕಾರಣ – ಹೆಚ್‌. ವಿಶ್ವನಾಥ್‌ ಲೇವಡಿ

    ಪಂಜಾಬ್ ಮತ್ತು ಹರಿಯಾಣದ ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಶೋಕಾಸ್ ನೋಟಿಸ್ ನೀಡಿದ ಕೋರ್ಟ್, ಹುಲ್ಲು ಸುಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಸರ್ಕಾರಗಳು ಹಾಗೂ ಕೇಂದ್ರ ಪರಿಸರವನ್ನು ರಕ್ಷಿಸಲು ಗಂಭೀರವಾಗಿ ಸಿದ್ಧರಿದ್ದರೆ, ಸೆಕ್ಷನ್ 15ನ್ನು ತಿದ್ದುಪಡಿ ಮಾಡುವ ಮೊದಲು ಎಲ್ಲವನ್ನೂ ಸರಿಪಡಿಸಲಾಗುತ್ತಿತ್ತು. ಇದೆಲ್ಲವೂ ರಾಜಕೀಯ ಬೇರೇನೂ ಅಲ್ಲ ಎಂದು ಹೇಳಿದೆ.

    ಟ್ರ್ಯಾಕ್ಟರ್‌ ಮತ್ತು ರೈತರಿಗೆ ಡೀಸೆಲ್ ಹಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಪಂಜಾಬ್‌ನ ಅಡ್ವೊಕೇಟ್ ಜನರಲ್‌ಗೆ ಸುಳ್ಳು ಹೇಳಿಕೆಯನ್ನು ನೀಡಿತ್ತು. ಅದನ್ನು ಯಾಕೆ ನೀಡಿದ್ದೀರಿ ಎಂದು ನೀವು ಉತ್ತರಿಸಬೇಕು. ಇಲ್ಲಿಯವರೆಗೂ ಒಂದೇ ಒಂದು ಪ್ರಾಸಿಕ್ಯೂಷನ್ ಮಾಡಿಲ್ಲ, ಆದರೆ ಕೋರ್ಟ್‌ಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ನಾವು ನಿಮ್ಮನ್ನು ಬಿಡುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.

    ಇದಕ್ಕೆ ಪಂಜಾಬ್ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಸಿಂಘ್ವಿ, ನಾವು ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

    ಕೇಂದ್ರ ಸರ್ಕಾರ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಮುಂದಿನ 10 ದಿನಗಳಲ್ಲಿ ಪರಿಸರ ಸಂರಕ್ಷಣಾ ನಿಯಮಗಳನ್ನು ಬದಲಿಸಿ, ಅಂತಿಮಗೊಳಿಸಲಾಗುವುದು ಮತ್ತು ಕಾಯಿದೆಯನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಲಾಗುವುದು ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಬಹುಮತದಿಂದ ಜಯಗಳಿಸುವುದು ನಿಶ್ಚಿತ: ಸಿದ್ದರಾಮಯ್ಯ

  • ಅಗತ್ಯ ಪೌಷ್ಟಿಕ ಆಹಾರ ವಿತರಣೆಗೆ ಮಿಲೆಟ್ಸ್ ಖರೀದಿ ಹೆಚ್ಚಳ – ಪ್ರಹ್ಲಾದ್ ಜೋಶಿ

    ಅಗತ್ಯ ಪೌಷ್ಟಿಕ ಆಹಾರ ವಿತರಣೆಗೆ ಮಿಲೆಟ್ಸ್ ಖರೀದಿ ಹೆಚ್ಚಳ – ಪ್ರಹ್ಲಾದ್ ಜೋಶಿ

    -2023-24ರ ಮುಂಗಾರು ಋತುವಿನಲ್ಲಿ 12.49 ಎಲ್‌ಎಂಟಿ ಮಿಲೆಟ್ಸ್ ಖರೀದಿ

    ನವದೆಹಲಿ: ದೇಶವಾಸಿಗಳಿಗೆ ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ಮಿಲೆಟ್ಸ್ (Millets) ಖರೀದಿಯನ್ನು ಹೆಚ್ಚಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರ (Central Government) ಮೂರನೇ ಅವಧಿ ಆಡಳಿತದಲ್ಲಿ ಹಿಂದೆಂದಿಗಿಂತ ಅಧಿಕ ಮಿಲೆಟ್ಸ್ ಖರೀದಿ ಮಾಡುತ್ತಿದೆ ಎಂದಿದ್ದಾರೆ.ಇದನ್ನೂ ಓದಿ: ರಾಯಚೂರು | ಆಸ್ಪತ್ರೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣ ಕಳ್ಳತನ

    12.49 ಲಕ್ಷ ಮೆಟ್ರಿಕ್ ಟನ್ ಖರೀದಿ:
    2023-24ರ ಮುಂಗಾರು ಮಾರುಕಟ್ಟೆ ಋತುವಿನಲ್ಲಿ ಕೇಂದ್ರ ಸರ್ಕಾರ 12.49 ಲಕ್ಷ ಮೆಟ್ರಿಕ್ ಟನ್ ಮಿಲೆಟ್ಸ್ ಖರೀದಿ ಮಾಡಿದೆ ಎಂದು ತಿಳಿಸಿದ್ದಾರೆ.

     

    ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.170ರಷ್ಟು ಮಿಲೆಟ್ಸ್ ಖರೀದಿ ಹೆಚ್ಚಳ ಕಂಡಿರುವುದು ಗಮನಾರ್ಹ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ಇತರ ಕಲ್ಯಾಣ ಯೋಜನೆಗಳ ಫಲಾನುಭವಿಗಳಲ್ಲಿ ಪೌಷ್ಟಿಕಾಂಶಕ್ಕೆ ಮಹತ್ವ ನೀಡಿದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಮಿಲೆಟ್ಸ್ ಖರೀದಿಯಲ್ಲಿನ ಹೆಚ್ಚಳ ಪ್ರಮುಖವಾಗಿದೆ ಎಂದರು.ಇದನ್ನೂ ಓದಿ: ನಿರಂತರ ಮಳೆಯಿಂದ ಹೆಚ್ಚಿದ ಒಳಹರಿವು – ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಭರ್ತಿ