Tag: ಸಮಾಜವಾದಿ ಪಕ್ಷ

  • ಬ್ರಿಟಿಷರು ಬಿಜೆಪಿ ರೂಪದಲ್ಲಿ ಮತ್ತೆ ಭಾರತಕ್ಕೆ ಬಂದಿದ್ದಾರೆ: ಲಾಲೂ ಪ್ರಸಾದ್ ಯಾದವ್

    ಬ್ರಿಟಿಷರು ಬಿಜೆಪಿ ರೂಪದಲ್ಲಿ ಮತ್ತೆ ಭಾರತಕ್ಕೆ ಬಂದಿದ್ದಾರೆ: ಲಾಲೂ ಪ್ರಸಾದ್ ಯಾದವ್

    ಪಾಟ್ನಾ: 75 ವರ್ಷಗಳ ಹಿಂದೆ ಭಾರತ ಬಿಟ್ಟು ಹೋಗಿದ್ದ ಬ್ರಿಟಿಷರು ಮತ್ತೆ ಬಿಜೆಪಿಯ ರೂಪದಲ್ಲಿ ಬಂದಿದ್ದಾರೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡುತ್ತೇವೆ ಎಂದ ಅವರು, ಭಾರತೀಯ ಜನತಾ ಪಕ್ಷವು ನಡೆದುಕೊಳ್ಳುತ್ತಿರುವ ರೀತಿಯಿಂದಾಗಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಸೋಲನ್ನು ಅನುಭವಿಸಲಿದೆ ಎಂದು ಭವಿಷ್ಯ ನುಡಿದರು.

    ಬಿಜೆಪಿಯ ಹತಾಶೆ ಉತ್ತರ ಪ್ರದೇಶ ಚುನಾವಣೆಯಲ್ಲಿ ಸೋಲುತ್ತದೆ ಎನ್ನುವುದನ್ನು ತೋರಿಸುತ್ತದೆ. ದೇಗುಲಗಳಂತಹ ಸೂಕ್ಷ್ಮ ವಿಷಯದ ಮೇಲೆ ನಡೆದ ಗಲಭೆಗಳು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶವು ಅಂತರ್ಯುದ್ಧದತ್ತ ಸಾಗುತ್ತದೆ ಎನ್ನುವುದನ್ನು ತೋರುತ್ತಿದೆ. ಅವರು ಕೇವಲ ಗಲಭೆ ಮತ್ತು ದೇವಾಲಯಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಧರ್ಮ ಹೇಳಿದಂತೆ ಮೈತುಂಬ ಬಟ್ಟೆ ಹಾಕುವುದು ತಪ್ಪಾ: ರಾಯರೆಡ್ಡಿ ಪ್ರಶ್ನೆ

    ಉತ್ತರ ಪ್ರದೇಶದ ಜನರು ಬಿಜೆಪಿಯ ಪ್ರಚಾರದಿಂದ ಬೇಸತ್ತಿದ್ದಾರೆ. ಪ್ರಧಾನಿ ಮೋದಿಯವರ ಆಡಳಿತದಲ್ಲಿ ದೇಶವು ಅಂತರ್ಯುದ್ಧದತ್ತ ಸಾಗುತ್ತಿದೆ. ಅವರು ಹಣದುಬ್ಬರ ಮತ್ತು ಬಡತನದ ಬಗ್ಗೆ ಮಾತನಾಡುತ್ತಿಲ್ಲ, ಆದರೆ ಅಯೋಧ್ಯೆ ಮತ್ತು ವಾರಣಾಸಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

    ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ. ಪಶ್ಚಿಮ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯ ಮೊದಲ ಹಂತದ ಪ್ರಚಾರ ಮಂಗಳವಾರ ಸಂಜೆ ಮುಕ್ತಾಯಗೊಂಡಿದೆ.

  • ಯೋಗಿ ಆದಿತ್ಯನಾಥ್‍ಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಯುವತಿ ಸಮಾಜವಾದಿ ಪಕ್ಷದ ಅಭ್ಯರ್ಥಿ

    ಯೋಗಿ ಆದಿತ್ಯನಾಥ್‍ಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಯುವತಿ ಸಮಾಜವಾದಿ ಪಕ್ಷದ ಅಭ್ಯರ್ಥಿ

    ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದ್ದ 25 ವರ್ಷದ ವಿದ್ಯಾರ್ಥಿನಿ ಪೂಜಾ ಶುಕ್ಲಾ ಈಗ ಲಕ್ನೋ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

    ಜೂನ್ 2017ರಲ್ಲಿ ಇತರ 10 ಮಂದಿ ವಿದ್ಯಾರ್ಥಿಗಳೊಂದಿಗೆ ಲಕ್ನೋ ವಿಶ್ವವಿದ್ಯಾಲಯದ ರಸ್ತೆಯಲ್ಲಿ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟಿಸಿ ಕಪ್ಪು ಬಾವುಟ ಪ್ರದರ್ಶಿಸಿ ಆದಿತ್ಯನಾಥ್ ಅವರ  ಬೆಂಗಾವಲು ವಾಹನವನ್ನು  ತಡೆದಿದ್ದರು. ಈ ವಿಚಾರವಾಗಿ ಇವರನ್ನು ಬಂಧನ ಮಾಡಲಾಗಿತ್ತು.  ಬಳಿಕ 20 ದಿನಗಳ ನಂತರ ಜೈಲಿನಿಂದ ಹೊರಬಂದ ನಂತರ ಪೂಜಾ ಶುಕ್ಲಾ ಅವರು ಎಸ್‌ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿಯಾಗಿದ್ದರು. ಬಳಿಕ ಪಕ್ಷದ ವಿದ್ಯಾರ್ಥಿ ವಿಭಾಗವಾದ ಸಮಾಜವಾದಿ ಛತ್ರ ಸಭಾಕ್ಕೆ ಸೇರ್ಪಡೆಗೊಂಡಿದ್ದರು.

    ಈ ವಿಚಾರವಾಗಿ ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಪೂಜಾ ಶುಕ್ಲಾ, ಹಿಂದಿ ಸ್ವರಾಜ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಯೋಗಿ ಲಕ್ನೋ ವಿಶ್ವವಿದ್ಯಾಲಯದ ಕ್ಯಾಂಪಸ್‍ಗೆ ತೆರಳುತ್ತಿದ್ದಾಗ, ಅಖಿಲ ಭಾರತ ವಿದ್ಯಾರ್ಥಿ ಸಂಘ, ಭಾರತೀಯ ವಿದ್ಯಾರ್ಥಿ ಒಕ್ಕೂಟ ಮತ್ತು ಸಮಾಜವಾದಿ ಛತ್ರ ಸಭಾದ ವಿದ್ಯಾರ್ಥಿಗಳು ಒಟ್ಟಾಗಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದೆವು. ಯೋಗಿ ಅವರ ಬೆಂಗಾವಲು ವಾಹನವನ್ನು ತಡೆದಿದ್ದೆವು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದೆವು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಜನಸ್ನೇಹಿ ಬಜೆಟ್, ಎಲ್ಲರಿಗೂ ಸಹಾಯವಾಗುವ ಕಾರ್ಯಕ್ರಮಗಳು: ಆರ್.ಅಶೋಕ್

    ಪ್ರತಿಭಟನೆಗೆ ಪ್ರಜಾಸತ್ತಾತ್ಮಕ ವಿಧಾನಗಳನ್ನು ಬಳಸಿದ್ದರೂ ನಮ್ಮ ಬಂಧನವಾಗಿತ್ತು. ನಾವು ಬಂಧನಕ್ಕೊಳಗಾಗುತ್ತೇವೆ ಎಂದು ಎಂದಿಗೂ ಯೋಚಿಸಿರಲಿಲ್ಲ. ಆದರೆ ಆ ಘಟನೆ ಒಳ್ಳೆಯದ್ದಕ್ಕಾಗಿ ಹೋರಾಡುವ ನನ್ನ ನಂಬಿಕೆಯನ್ನು ಮತ್ತಷ್ಟು ದೃಢಗೊಳಿಸಿತು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಕೆ.ಎಸ್.ಈಶ್ವರಪ್ಪ

  • ಎಸ್‌ಪಿ ಗೆದ್ದರೆ ಯುಪಿ ಗೂಂಡಾಗಳ ರಾಜ್ಯವಾಗುತ್ತೆ: ಅಮಿತ್‌ ಶಾ ವಾಗ್ದಾಳಿ

    ಎಸ್‌ಪಿ ಗೆದ್ದರೆ ಯುಪಿ ಗೂಂಡಾಗಳ ರಾಜ್ಯವಾಗುತ್ತೆ: ಅಮಿತ್‌ ಶಾ ವಾಗ್ದಾಳಿ

    ಲಕ್ನೋ: ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ವಿರುದ್ಧ ಹರಿಹಾಯ್ದಿದ್ದಾರೆ. ಚುನಾವಣೆಯಲ್ಲಿ ಸಮಾಜವಾದಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, ರಾಜ್ಯದಲ್ಲಿ ಗೂಂಡಾಗಳ ರಾಜ್ಯ ಮರುಕಳಿಸುತ್ತದೆ ಎಂದು ಎಚ್ಚರಿಸಿದ್ದಾರೆ.

    ಸಮಾಜವಾದಿ ಪಕ್ಷದ ಮುಖಂಡ ಅಜಮ್‌ ಖಾನ್‌ ಬಂಧನಕ್ಕೊಳಗಾಗಿದ್ದಾರೆ. ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಇಂತಹ ಸಂದರ್ಭದಲ್ಲಿ ಅಖಿಲೇಶ್‌ ಯಾದವ್‌ ಕಾನೂನಿನ ಬಗ್ಗೆ ಮಾತನಾಡುತ್ತಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಅಮಿತ್‌ ಶಾ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ – ಇದು ನಾಚಿಗೇಡಿನ ಸಂಗತಿ ಎಂದ ಕೇಜ್ರಿವಾಲ್

    ರಾಜ್ಯ ಪೊಲೀಸರು ಭಯಪಡುವಷ್ಟು ಪ್ರಾಬಲ್ಯವನ್ನು ದರೋಡೆಕೋರರು, ಕ್ರಿಮನಲ್‌ಗಳು ಹೊಂದಿದ್ದರು. ಮಹಿಳೆಯರು ಮತ್ತು ಯುವತಿಯರು ಹೊರಗಡೆ ಓಡಾಡಲು ಹೆದರುತ್ತಿದ್ದರು. ಆದರೆ ಅದು ಈಗ ಬದಲಾಗಿದೆ. ದರೋಡೆಕೋರರು, ಅಪರಾಧಿಗಳು ಭಯ ಪಡುತ್ತಿದ್ದಾರೆಂದರೆ, ಸ್ವಯಂಪ್ರೇರಣೆಯಿಂದ ಎಲ್ಲರೂ ಶರಣಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ನಾವು ಕ್ರಿಮಿನಲ್‌ಗಳು ಮತ್ತು ದರೋಡೆಕೋರರನ್ನು ತರಾಟೆಗೆ ತೆಗೆದುಕೊಂಡಿದ್ದೇವೆ. ಅವರನ್ನು ಕಂಬಿ ಹಿಂದೆ ಕಳುಹಸಿದ್ದೇವೆ. ಉತ್ತರ ಪ್ರದೇಶ ಪ್ರಗತಿಯಾಗದ ಹೊರತು ಭಾರತದ ಪ್ರಗತಿ ಸಾಧ್ಯವಿಲ್ಲ. ಯುಪಿ ಇಂದು ಪ್ರಗತಿಯಲ್ಲಿದೆ ಇದು ಭಾರತದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಕೊರೊನಾ ಬಂದಿದೆ – ಇಬ್ರಾಹಿಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ

    ಉತ್ತರ ಪ್ರದೇಶ ಚುನಾವಣೆ ಇದೇ ಫೆ.10ರಿಂದ ವಿವಿಧ ಹಂತಗಳಲ್ಲಿ ನಡೆಯಲಿದೆ. ಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು, ಎಸ್‌ಪಿ ವಿರುದ್ಧ ಹರಿಹಾಯ್ದಿದ್ದಾರೆ.

  • ಸಿದ್ದರಾಮಯ್ಯನವ್ರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ ಪಕ್ಷಾಂತರವೋ: ಬಿಜೆಪಿ ವ್ಯಂಗ್ಯ

    ಸಿದ್ದರಾಮಯ್ಯನವ್ರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ ಪಕ್ಷಾಂತರವೋ: ಬಿಜೆಪಿ ವ್ಯಂಗ್ಯ

    ಬೆಂಗಳೂರು: ಸಿದ್ದರಾಮಯ್ಯನವರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ ಪಕ್ಷಾಂತರವೋ ಎಂದು ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಕುಟುಕಿದೆ.

    ಟ್ವೀಟ್‍ನಲ್ಲಿ ಏನಿದೆ?: ನಿಮ್ಮ ಆಪ್ತ ವಲಯದಲ್ಲಿರುವ ಕೆಲವರು ಈಗ ಸಮಾಜವಾದಿ ಪಕ್ಷ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡುತ್ತಿದೆ. ಸಿದ್ದರಾಮಯ್ಯನವರೇ ನಿಮ್ಮ ಆಪ್ತರು ಆಪ್ ಹಾಗೂ ಸಮಾಜವಾದಿ ಪಕ್ಷದ ನಾಯಕರ ಭೇಟಿ ಮಾಡಿರುವುದು ಆಕಸ್ಮಿಕ ಘಟನೆಯಾಗಿರಲು ಸಾಧ್ಯವಿಲ್ಲ. ಇದೊಂದು ವ್ಯವಸ್ಥಿತ ನಡೆ. ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶದ ಬಳಿಕ ಕರ್ನಾಟಕದಲ್ಲೂ ಇದರ ಪ್ರತಿಫಲನ ಕಾಣಬಹುದೇ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಕೊರೊನಾ ಬಂದಿದೆ – ಇಬ್ರಾಹಿಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ

    ನಮ್ಮ ಸಂಪರ್ಕದಲ್ಲಿ ಆ ಪಕ್ಷದವರು ಇದ್ದಾರೆ. ಈ ಪಕ್ಷದವರು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಕಳೆದ ಕೆಲ ದಿನಗಳಿಂದ ನಿರಂತರ ಬುರುಡೆ ಬಿಟ್ಟಾಗಲೇ ಅನುಮಾನವಿತ್ತು. ಈಗ ನೋಡಿದರೆ ತಮ್ಮ ಆಪ್ತರನ್ನೇ ಬೇರೆಯವರ ಸಂಪರ್ಕಕ್ಕೆ ಬಿಟ್ಟಿದ್ದಾರೆ. ಸಿದ್ದರಾಮಯ್ಯನವರೇ, ಮತ್ತೊಮ್ಮೆ ವಲಸೆಗೆ ವೇದಿಕೆ ಸೃಷ್ಟಿಸಿಕೊಳ್ಳುತ್ತಿದ್ದೀರಾ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ:  ಮುಗಿದ ಅಧ್ಯಾಯ – ಕಾಂಗ್ರೆಸ್‍ಗೆ ಸಿಎಂ ಇಬ್ರಾಹಿಂ ಗುಡ್‍ಬೈ

  • ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದ್ರೆ ಯಾರನ್ನೂ ಬಿಡಲ್ಲ: ಆದಿಲ್ ಚೌಧರಿ ವೀಡಿಯೋ ವೈರಲ್

    ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದ್ರೆ ಯಾರನ್ನೂ ಬಿಡಲ್ಲ: ಆದಿಲ್ ಚೌಧರಿ ವೀಡಿಯೋ ವೈರಲ್

    ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ, ಒಬ್ಬ ವ್ಯಕ್ತಿಯನ್ನೂ ಬಿಡುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ಆದಿಲ್ ಚೌಧರಿ ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ವೈರಲ್ ಆದ ವೀಡಿಯೋದಲ್ಲಿ ಏನಿದೆ?
    ವೀಡಿಯೋದಲ್ಲಿ ಹೆಸರಿಲ್ಲದ ವ್ಯಕ್ತಿಯನ್ನು ಉಲ್ಲೇಖಿಸಿ ಆದಿಲ್ ಚೌಧರಿ, ಚಿಂತಿಸಬೇಡಿ, ದೇವರ ಇಚ್ಛೆಯಂತೆ ನಾವು ಉತ್ತರ ಪ್ರದೇಶದಲ್ಲಿ ಸಮಾಜವಾದಿ ಸರ್ಕಾರವನ್ನು ರಚಿಸಲಿದ್ದೇವೆ. ಒಂದು ವೇಳೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಒಬ್ಬ ವ್ಯಕ್ತಿಯನ್ನು ಉಳಿಸಲಾಗುವುದಿಲ್ಲ. ಅವರು ನಮ್ಮ ವಿರುದ್ಧ ಅಪರಾಧ ಎಸಗುತ್ತಿರುವ ರೀತಿಯಲ್ಲಿ, ನಾವು ಸೇಡು ತೀರಿಸಿಕೊಳ್ಳುತ್ತೇವೆ. ಅವರು ಏನನ್ನಾದರೂ ಮಾಡುವ ಮೊದಲು 100 ಬಾರಿ ಯೋಚಿಸಬೇಕು ಹಾಗೆಯೇ ಮಾಡುತ್ತೇವೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಪ್ರೀತಿ ಇದ್ದಲ್ಲಿಗೆ ಹೋಗುತ್ತೇನೆ: ರಮೇಶ್ ಜಾರಕಿಹೊಳಿ

    ವೀಡಿಯೋಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಅಮಿತ್ ಮಾಳವಿಯಾ, ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಎಸ್‍ಪಿ ಅಭ್ಯರ್ಥಿ ಹಿಂದೂಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಎಂದು ಆರೋಪಿಸಿದ್ದಾರೆ. ಆದರೆ ಚೌಧರಿ ವೀಡಿಯೊದಲ್ಲಿ ಯಾವುದೇ ಸಮುದಾಯದ ಬಗ್ಗೆ ಮಾತನಾಡಿರುವುದು ಕಂಡುಬಂದಿಲ್ಲ. ಮೀರತ್ ದಕ್ಷಿಣದ ಎಸ್‍ಪಿ ಅಭ್ಯರ್ಥಿ ಚೌಧರಿಯವರು ನಾವು ಸರ್ಕಾರ ರಚಿಸಿದರೆ ಅವರನ್ನು ಬಿಡುವುದಿಲ್ಲ. ಒಬ್ಬೊಬ್ಬರಾಗಿ ಸೇಡು ತೀರಿಸಿಕೊಳ್ಳುತ್ತೇವೆ ಅಂತ ಹಿಂದೂಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

    ನಾಹಿದ್ ಹಸನ್ ಮತ್ತು ಆದಿಲ್ ಚೌಧರಿ ಅವರಂತಹ ಹಿಂದೂ ವಿರೋಧಿ ಗೂಂಡಾಗಳು. ಚುನಾವಣಾ ಅಭ್ಯರ್ಥಿಗಳನ್ನು ಮಾತ್ರ ನಾಮನಿರ್ದೇಶನ ಮಾಡಿದ್ದಾರೆ. ಅವರು ವೀಡಿಯೊದಲ್ಲಿ ಮಾಡಿದ ಕಾಮೆಂಟ್‍ಗಳನ್ನು ಸ್ಪಷ್ಟಪಡಿಸಲು ಕೇಳಿದಾಗ ಚೌಧರಿಯವರು ನೇರ ಉತ್ತರವನ್ನು ನೀಡಲಿಲ್ಲ. ಬಿಜೆಪಿ ವೀಡಿಯೊವನ್ನು ಎಡಿಟ್ ಮಾಡಿದೆ ಅಂತ ಆರೋಪಿಸಿದ್ದಾರೆ. ಕೇಸರಿ ಪಕ್ಷವು ಅಗತ್ಯವಿರುವ ಯಾವುದೇ ವಿಧಾನಗಳನ್ನು ಬಳಸಲು ಸಮರ್ಥವಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿ ಆತ್ಮಹತ್ಯೆ

    ಈ ಕುರಿತು ಮೀರತ್ ಸಿಟಿ ಎಸ್‍ಪಿ ವಿನೀತ್ ಭಟ್ನಾಗರ್ ಅವರು ಎಸ್ಪಿ ಅಭ್ಯರ್ಥಿ ಬೆದರಿಕೆ ಹಾಕುತ್ತಿರುವ ವೀಡಿಯೋದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ವಿಡಿಯೋವನ್ನು ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ. ಅದರಲ್ಲಿ ಚುನಾವಣಾ ಆಯೋಗದ ನೈತಿಕ ನೀತಿ ಸಂಹಿತೆ ಉಲ್ಲಂಘನೆಯಾಗುವಂತಹ ಹೇಳಿಕೆಗಳಿದ್ದರೆ, ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ನಾನು ರಾಷ್ಟ್ರೀಯತೆಗಾಗಿ ಬಿಜೆಪಿ ಸೇರಿದ್ದೇನೆ: ಅಪರ್ಣಾ ಯಾದವ್

    ನಾನು ರಾಷ್ಟ್ರೀಯತೆಗಾಗಿ ಬಿಜೆಪಿ ಸೇರಿದ್ದೇನೆ: ಅಪರ್ಣಾ ಯಾದವ್

    ಲಕ್ನೋ: ಸಮಾಜವಾದಿ ಪಕ್ಷದಲ್ಲಿ ಟಿಕೆಟ್ ನಿರಾಕರಿಸಿರಿವುದರಿಂದ ಬಿಜೆಪಿಗೆ ಸೇರಿದ್ದೇನೆ ಎಂದು ಕೆಲವರು ನಂಬಿದ್ದಾರೆ. ಆದರೆ ನಾನು ರಾಷ್ಟ್ರೀಯತೆಗಾಗಿ ಬಿಜೆಪಿಯನ್ನು ಸೇರಿದ್ದೇನೆ ಎಂದು ಇತ್ತೀಚೆಗೆ ಬಿಜೆಪಿಗೆ ಸೇರಿದ್ದ ಯಾದವ್ ಕುಟುಂಬದ ಸೊಸೆ ಅಪರ್ಣಾ ಯಾದವ್ ತಿಳಿಸಿದರು.

    ಖಾಸಗಿ ವಾಹಿನಿಗೆ ಸಂದರ್ಶನ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿಂತನೆ ಹಾಗೂ ನೀತಿಗಳಿಂದ ನಾನು ಪ್ರಭಾವಿತನಾಗಿದ್ದೇನೆ. ಇದರಿಂದಾಗಿ ನಾನು ಬಿಜೆಪಿಗೆ ಸೇರಿದ್ದೇನೆ ಎಂದು ಹೇಳಿದರು.

    ಈ ಹಿಂದೆ ಅಪರ್ಣಾ ಯಾದವ್ ಅವರು ಬಿಜೆಪಿಗೆ ಸೇರಿರುವುದರ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಅಖಿಲೇಶ್ ಯಾದವ್ ಅವರು, ನಮಗೆ ಟಿಕೆಟ್ ನೀಡಲು ಸಾಧ್ಯವಾಗದವರಿಗೆ ಬಿಜೆಪಿ ಟಿಕೆಟ್ ನೀಡುತ್ತಿದೆ. ಇದರಿಂದ ಬಿಜೆಪಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ವ್ಯಂಗ್ಯವಾಡಿದ್ದರು.

    ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಹಾಗೂ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸಹೋದರನ ಪತ್ನಿ ಅಪರ್ಣಾ ಯಾದವ್ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದು, ಉತ್ತರಪ್ರದೇಶ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದನ್ನೂ ಓದಿ: ಸೂಪರ್ ಹೀರೋ ರೂಪತಾಳಿದ ಚರಣ್‍ಜಿತ್ ಸಿಂಗ್ ಚನ್ನಿ

    ಅಪರ್ಣಾ ಯಾದವ್ 2017ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಲಕ್ನೋ ಕ್ಯಾಂಟ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ರಿತಾ ಬಹುಗುಣ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಅದಾದ ಬಳಿಕ ಬಿಜೆಪಿ ಪಕ್ಷದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅಪರ್ಣಾ ಯಾದವ್ ಒಲವು ಹೊಂದಿದ್ದರು. ಕೆಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಅವರನ್ನು ಹಾಡಿ ಹೊಗಳಿದ್ದರು. ಇದನ್ನೂ ಓದಿ: ಆತ್ಮನಿರ್ಭರ್ ಭಾರತಕ್ಕೆ ಹೊಸ ರೂಪ ನೀಡಿದ ದೆಹಲಿ ಮೆಟ್ರೋ

  • ಪಂಚರಾಜ್ಯ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬೆಂಬಲವಿಲ್ಲ: ಟಿಕಾಯತ್

    ಪಂಚರಾಜ್ಯ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬೆಂಬಲವಿಲ್ಲ: ಟಿಕಾಯತ್

    ಲಕ್ನೋ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಯಾವುದೇ ರಾಜಕೀಯ ಪಕ್ಷಕ್ಕೂ ಬೆಂಬಲವನ್ನು ನೀಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಸ್ಪಷ್ಟಪಡಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ನಾವು ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದ ಅವರು ರೈತರ ಸಮಸ್ಯೆಗಳ ಕುರಿತು ಚರ್ಚಿಸಿದರು. ರೈತರು ಮತ್ತು ಸಂಘಟನೆಗೆ ಸಂಬಂಧಿಸಿದ ವಿಷಯಗಳಿಗೆ ಹೆಚ್ಚಿನ ಮಹತ್ವ ನೀಡುತ್ತೇವೆ ಎಂದು ಹೇಳಿದರು.

    ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕದಳ-ಸಮಾಜವಾದಿ ಪಕ್ಷದ ಮೈತ್ರಿಗೆ ಬೆಂಬಲ ನೀಡುವಂತೆ ಬಿಕೆಯು ಅಧ್ಯಕ್ಷ ನರೇಶ್ ಟಿಕಾಯತ್ ಮನವಿ ಮಾಡಿದ ನಂತರ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ನಂತರ ಸಿಸೌಲಿಯಲ್ಲಿ ಬಿಜೆಪಿ ಮುಖಂಡ ಸಂಜೀವ್ ಬಲ್ಯಾನ್ ಜೊತೆ ಕೆಲಕಾಲ ಸಭೆ ನಡೆಸಿದರು.

    ಸಭೆಯಲ್ಲಿ ಲಖಿಂಪುರ ಖೇರಿ ಘಟನೆಯಲ್ಲಿ ನಮ್ಮ ಹಲವಾರು ಜನರನ್ನು ಜೈಲಿಗೆ ಕಳುಹಿಸಿದ್ದರು. ಆದರೆ ಗೃಹ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಶೀಘ್ರವೇ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ ಎಂದರು.

    ಜೊತೆಗೆ ರೈತರ ತೊಂದರೆ ಹಾಗೂ ಧಾನ್ಯಗಳ ಸಂಗ್ರಹಣೆಯಲ್ಲಿ ಸಮಸ್ಯೆಗಳಿವೆ. ಈ ವಿಷಯಗಳ ಕುರಿತು ಬಿಜೆಪಿ ಮುಖಂಡರ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ

    ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ 13 ತಿಂಗಳ ಆಂದೋಲನದ ಮಾಡಿದ್ದೆವು. ಇದರಲ್ಲಿ ಅತ್ಯುತ್ತಮ ಗೆಲುವು ಸಾಧಿಸಿದ್ದೆವು. ರಾಜಕೀಯ ಪಕ್ಷಗಳು ರೈತರ ಬಗ್ಗೆ ಏನೆ ನಿರ್ಧಾರವನ್ನು ತೆಗೆದುಕೊಳ್ಳುವುದಾದರೂ ಈಗ ಅವುಗಳ ಬಗ್ಗೆ ಯೋಚಿಸಿ ಎಂದು ಹೇಳಿದರು. ಇದನ್ನೂ ಓದಿ: ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ

  • ಉತ್ತರ ಪ್ರದೇಶದ ಬಿಜೆಪಿ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಎಸ್‍ಪಿಗೆ ಸೇರ್ಪಡೆ

    ಉತ್ತರ ಪ್ರದೇಶದ ಬಿಜೆಪಿ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಎಸ್‍ಪಿಗೆ ಸೇರ್ಪಡೆ

    ಲಕ್ನೋ: ಬಿಜೆಪಿಗೆ ರಾಜೀನಾಮೆ ನೀಡಿದ್ದ ಉತ್ತರ ಪ್ರದೇಶದ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಇಂದು ಸಮಾಜವಾದಿ ಪಕ್ಷಕ್ಕೆ (ಎಸ್‍ಪಿ) ಸೇರ್ಪಡೆಯಾಗಿದ್ದಾರೆ.

    ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ದಾರಾ ಸಿಂಗ್ ಚೌಹಾಣ್ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಳೆದ ಒಂದು ವಾರದಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಉತ್ತರ ಪ್ರದೇಶದ ಮೂರನೇ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಆಗಿದ್ದು, ಈ ಮುನ್ನ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ:  ಬಿಜೆಪಿಯ ದ್ವೇಷದ ರಾಜಕಾರಣ ಭಾರತಕ್ಕೆ ಹಾನಿಕಾರಕ: ರಾಹುಲ್ ಗಾಂಧಿ

    2017ರಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗ ಸಬ್‍ಕಾ ಸಾಥ್, ಸಬ್‍ಕಾ ವಿಕಾಸ್ ಎಂಬ ಘೋಷಣೆ ನೀಡಲಾಗಿತ್ತು. ಆದರೆ ಅಭಿವೃದ್ಧಿಯಾಗುತ್ತಿರುವುದು ಕೇವಲ ಕೆಲವರು ಮಾತ್ರ. ಉಳಿದವರು ಇದ್ದ ಹಾಗೆಯೇ ಉಳಿದುಕೊಂಡಿದ್ದಾರೆ. ಈಗ ಪಡಿತರ ನೀಡಿ ಗುಲಾಮರನ್ನಾಗಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ದಾರಾ ಸಿಂಗ್ ಚೌಹಾಣ್ ಕಿಡಿಕಾರಿದರು.

    Dara Singh Chauhan

    ಬಿಜೆಪಿಯನ್ನು ಬೆಂಬಲಿಸಿದ ನಂತರವೂ ಹಿಂದುಳಿದ ವರ್ಗದವರಿಗೆ ಬಿಜೆಪಿಯಲ್ಲಿ ಸರಿಯಾದ ಸ್ಥಾನ ಸಿಕ್ಕಿಲ್ಲ. ಐದು ವರ್ಷಗಳಿಂದ ನೀವು ಏನು ಮಾಡಿದ್ದೀರಾ ಎಂದು ಜನರು ಕೇಳುತ್ತಿದ್ದಾರೆ. ನಾವು ಸಮಯಕ್ಕಾಗಿ ಕಾಯುತ್ತಿದ್ದೇವು, ಹಿಂದುಳಿದ ಸಮುದಾಯದವರು ತಾಳ್ಮೆಯಿಂದ ಇದ್ದರು. ಆದರೆ ಹಿಂದುಳಿದ ಸಮಾಜದವರ ಹಿತಾಸಕ್ತಿಗಳನ್ನು ನಿರ್ಲಕ್ಷಿಸುತ್ತಿರುವುದನ್ನು ಕಂಡು ನಾವು ಇದೀಗ ಸಮಾಜವಾದಿ ಪಕ್ಷಕ್ಕೆ ಸೇರಲು ನಿರ್ಧರಿಸಿದೇವು ಎಂದು ಹೇಳಿದರು. ಇದನ್ನೂ ಓದಿ: ಉನ್ನತ ಶಿಕ್ಷಣ ಸಚಿವರು ನಮಗೆ ಕೊಟ್ಟಿದ್ದು ಸಿಹಿಯಲ್ಲ, ಕಹಿ: ಅತಿಥಿ ಉಪನ್ಯಾಸಕರ ಆಕ್ರೋಶ

    ಉತ್ತರಪ್ರದೇಶದಲ್ಲಿ 15-18 ವಯಸ್ಸಿನ 51,37,909 ಮಕ್ಕಳಿಗೆ ಕೋವಿಡ್ ಲಸಿಕೆ ಡೋಸ್‍ಗಳನ್ನು ನೀಡಲಾಗಿದೆ. ಆದರೆ, ಹಿಂದುಳಿದ ಸಮುದಾಯಗಳ ಮಕ್ಕಳಿಗೆ ನೀಡಲಾಗಿಲ್ಲ. ಆದರೆ ಸಮಾಜವಾದಿ ಪಕ್ಷ ಆಡಳಿತಕ್ಕೆ ಬಂದರೆ ಪ್ರಾತಿನಿಧ್ಯದ ವಿಷಯದಲ್ಲಿ ರಾಜ್ಯದ ಜನರಿಗೆ ಸಮಾನ ಪಾಲು ನೀಡುತ್ತದೆ ಎಂದರು. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಕ್ಯಾಬಿನೆಟ್‍ನಲ್ಲಿ ದಾರಾ ಸಿಂಗ್ ಚೌಹಾಣ್ ಅರಣ್ಯ, ಪರಿಸರ ಮತ್ತು ಪ್ರಾಣಿ ಉದ್ಯಾನ ಸಚಿವರಾಗಿದ್ದರು.

  • ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ

    ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ

    ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಹಿಂದುಳಿದ ಸಮುದಾಯದ ನಾಯಕರು ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರುತ್ತಿದ್ದಾರೆ. ಇದರ ನಡುವೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದಲಿತರ ಮನೆಯಲ್ಲಿ ಊಟ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.

    ಬಿಜೆಪಿ ವಿರುದ್ಧ ಬಂಡಾಯ ಎದ್ದ ಇಬ್ಬರು ಮಾಜಿ ಸಚಿವ ಪಕ್ಷಕ್ಕೆ ರಾಜೀನಾಮೆ ನೀಡಿ ಅಖಿಲೇಶ್‌ ಯಾದವ್‌ ಅವರ ಎಸ್‌ಪಿ ಪಕ್ಷ ಸೇರಿದ್ದಾರೆ. ಹಿಂದುಳಿದ ನಾಯಕರೆಲ್ಲ ಬಿಜೆಪಿ ತೊರೆಯುತ್ತಿರುವುದರಿಂದ ಒಬಿಸಿ ಮತದಾರರ ವೋಟುಗಳು ಕೈತಪ್ಪಬಹುದು ಎಂಬ ಆತಂಕ ಬಿಜೆಪಿಯಲ್ಲಿ ಮೂಡಿದೆ. ಈ ಮಧ್ಯೆಯೇ ಯೋಗಿ ಆದಿತ್ಯನಾಥ್‌ ಅವರು ಗೋರಖ್‌ಪುರದಲ್ಲಿ ದಲಿತರ ಮನೆಯಲ್ಲಿ ಊಟ ಮಾಡಿದ್ದಾರೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಮತ್ತೊಂದು ದಿಕ್ಕಿನ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಹೂವಿನ ಮಾರುಕಟ್ಟೆಯಲ್ಲಿ ಇಟ್ಟಿದ್ದ ಬ್ಯಾಗ್‌ನಲ್ಲಿ ಬಾಂಬ್ ಪತ್ತೆ – ಜನರಲ್ಲಿ ಆತಂಕ

    ಈ ಕುರಿತು ಸಿಎಂ ಯೋಗಿ ಆದಿತ್ಯನಾಥ್‌ ಟ್ವಿಟರ್‌ನಲ್ಲಿ, ಸಾಮಾಜಿಕ ಸೌಹಾರ್ದತೆಯ ಗುರಿಯು ಬೆಳೆಯುತ್ತಲೇ ಇದೆ. ಇಂದು ಗೋರಖ್‌ಪುರದ ಜುಂಗಿಯಾದಲ್ಲಿರುವ ಅಮೃತ್‌ ಲಾಲ್‌ ಭಾರತೀಜಿಯವರ ಮನೆಯಲ್ಲಿ ಕಿಚಡಿ ಮತ್ತು ಪ್ರಸಾದ ಸ್ವೀಕರಿಸುವ ಸೌಭಾಗ್ಯ ನನಗೆ ಸಿಕ್ಕಿತು. ತುಂಬಾ ಧನ್ಯವಾದಗಳು ಭಾರತೀಜಿ ಎಂದು ತಿಳಿಸಿದ್ದಾರೆ.

    ಬಿಜೆಪಿ ಸರ್ಕಾರ ಯಾವುದೇ ತಾರತಮ್ಯವಿಲ್ಲದೇ ಸಮಾಜದ ಪ್ರತಿಯೊಂದು ವರ್ಗದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅಖಿಲೇಶ್‌ ಯಾದವ್‌ ಅವರ ಐದು ವರ್ಷದ ಆಡಳಿತದಲ್ಲಿ ಪಿಎಂ ಆವಾಸ್‌ ಯೋಜನೆಯಡಿ ಕೇವಲ 18,000 ಮನೆಗಳನ್ನು ಮಾತ್ರ ನಿರ್ಮಿಸಿಕೊಟ್ಟಿದ್ದರು. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 45 ಲಕ್ಷ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಎಸ್‌ಪಿ ಅವಧಿಯಲ್ಲಿ ಸಾಮಾಜಿಕ ಶೋಷಣೆಯಾಗಿದೆ, ಸಾಮಾಜಿಕ ನ್ಯಾಯ ಸಿಕ್ಕಿಲ್ಲ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನೊವಾಕ್ ಜೊಕೊವಿಕ್ ವೀಸಾ 2ನೇ ಬಾರಿ ರದ್ದು – 3 ವರ್ಷ ಆಸ್ಟ್ರೇಲಿಯಾಗೆ ಪ್ರವೇಶವಿಲ್ಲ

    ಸ್ವಾಮಿ ಪ್ರಸಾದ್‌ ಮೌರ್ಯ, ಧರಮ್‌ ಸಿಂಗ್‌ ಸೈನಿ ಅವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರಿದ್ದಾರೆ. ಬಿಜೆಪಿ ತೊರೆದ ನಾಯಕರು, ಯೋಗಿ ಆದಿತ್ಯನಾಥ್‌ ನೇತೃತ್ವದ ಆಡಳಿತವು ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಆಲಿಸದೇ ಕಿವುಡಾಗಿದೆ. ಈ ಹಿನ್ನೆಲೆಯಲ್ಲಿ ನಾವು ಪಕ್ಷವನ್ನು ತೊರೆದಿದ್ದೇವೆ ಎಂದು ದೂರಿದ್ದರು.

  • ಬಿಜೆಪಿಯಲ್ಲಿ ಪ್ರತಿದಿನ ಒಬ್ಬೊಬ್ಬರು ರಾಜೀನಾಮೆ ನೀಡುತ್ತಾ ಹೋಗ್ತಾರೆ: ಧರಂ ಸಿಂಗ್ ಸೈನಿ

    ಬಿಜೆಪಿಯಲ್ಲಿ ಪ್ರತಿದಿನ ಒಬ್ಬೊಬ್ಬರು ರಾಜೀನಾಮೆ ನೀಡುತ್ತಾ ಹೋಗ್ತಾರೆ: ಧರಂ ಸಿಂಗ್ ಸೈನಿ

    ಲಕ್ನೋ: ಬಿಜೆಪಿ ನೇತೃತ್ವದ ಉತ್ತರ ಪ್ರದೇಶದಲ್ಲಿ ಪ್ರತಿದಿನ ಒಬ್ಬ ಸಚಿವ, 2 ಅಥವಾ 3 ಬಿಜೆಪಿ ಶಾಸಕರು ಜನವರಿ 20 ರವರೆಗೆ ರಾಜೀನಾಮೆ ನೀಡುತ್ತಾರೆ ಎಂದು ಧರಂ ಸಿಂಗ್ ಸೈನಿ ಹೇಳಿದರು.

    ಬಿಜೆಪಿ ತೊರೆದ ವಿಚಾರವನ್ನು ಮಾಧ್ಯಮಗಳೊಂದಿಗೆ ಬಹಿರಂಗಪಡಿಸಿದ ಅವರು, ಬಿಜೆಪಿಯಲ್ಲಿ ನಾನು ಹೇಳುವುದನ್ನು ಕೇಳುವವರು ಯಾರೂ ಇರಲಿಲ್ಲ. ಹೀಗಾಗಿ ಒಂದು ದಿನ ಸರ್ಕಾರದ ವಿರುದ್ಧ ರಾಜ್ಯದ 140 ಶಾಸಕರು ಧರಣಿ ಕುಳಿತು ಬೆದರಿಕೆ ಹಾಕುವ ಸಮಯ ಬಂದಿದೆ ಎಂದು ಸಿಡಿದರು. ಇದನ್ನೂ ಓದಿ: ಖಾಸಗಿ ಲ್ಯಾಬ್‍ಗಳಲ್ಲೂ ಉಚಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಎಎಪಿ ಆಗ್ರಹ

    ಇದೇ ವೇಳೆ ಸಮಾಜವಾದಿ ಪಕ್ಷವನ್ನು ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ್ದು, ಶುಕ್ರವಾರ ಹೆಚ್ಚಿನ ಚರ್ಚೆ ನಡೆಸುವುದಾಗಿ ತಿಳಿಸಿದರು. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ

    ಯುಪಿಯಲ್ಲಿ ಮೊದಲ ಹಂತದ ಅಸೆಂಬ್ಲಿ ಚುನಾವಣೆಗೆ ಇನ್ನೂ 1 ತಿಂಗಳು ಬಾಕಿ ಉಳಿದಿದೆ. ಆದರೆ ಬಿಜೆಪಿಯಿಂದ ಜಿಗಿದ 9ನೇ ಶಾಸಕ ಸೈನಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.