Tag: c t ravi

  • ಬಡವರಿಗೆ ಬೇಕಾಗಿರುವುದು ಅಕ್ಕಿ, ದುಡ್ಡಲ್ಲ: ಸಿಟಿ ರವಿ ವಿರುದ್ಧ ಜಾರ್ಜ್ ವಾಗ್ದಾಳಿ

    ಬಡವರಿಗೆ ಬೇಕಾಗಿರುವುದು ಅಕ್ಕಿ, ದುಡ್ಡಲ್ಲ: ಸಿಟಿ ರವಿ ವಿರುದ್ಧ ಜಾರ್ಜ್ ವಾಗ್ದಾಳಿ

    ಚಿಕ್ಕಮಗಳೂರು: ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಜನ ಕೊಂಡುಕೊಳ್ಳುತ್ತಾರೆ. ನೀವು ಮೊದಲು ಅವರ ಖಾತೆಗೆ ಹಣ ಹಾಕಿ ಎಂದು ಹೇಳಿಕೆ ನೀಡಿದ್ದ ಶಾಸಕ ಸಿ.ಟಿ ರವಿಗೆ (C.T.Ravi) ಇಂಧನ ಸಚಿವ, ಚಿಕ್ಕಮಗಳೂರು (Chikkamagaluru) ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ (K.J.George) ತಿರುಗೇಟು ನೀಡಿದ್ದಾರೆ.

    ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ನಾವು ಅಕ್ಕಿಯನ್ನು ಉಚಿತವಾಗಿ ಕೇಳುತ್ತಿಲ್ಲ. ದುಡ್ಡು ಕೊಡುತ್ತೇವೆ ಕೊಡಿ ಎಂದು ಕೇಳಿದ್ದೇವೆ. ಜನರಿಗೆ ಬೇಕಾಗಿರುವುದು ಅಕ್ಕಿ, ದುಡ್ಡಲ್ಲ. ಭಾರತೀಯ ಆಹಾರ ನಿಗಮದವರೇ ಸ್ಟಾಕ್ ಇದೆ, ಕೊಡುತ್ತೇವೆ ಎಂದು ಲೆಟರ್ ಕೊಟ್ಟಿದ್ದಾರೆ. ಈಗ ಅಕ್ಕಿ ವಾಪಸ್ ಹೋಗಿದೆ. ಕೊಳೆಯಲು ಬಿಟ್ಟಿದ್ದೀರಾ ರವಿಯವರೇ ಎಂದು ಕಿಡಿಕಾರಿದರು. ಇದನ್ನೂ ಓದಿ: ತಾರಕಕ್ಕೇರಿದ ಅಕ್ಕಿ ರಾಜಕೀಯ, ಬಿಜೆಪಿ ನಾಯಕರಿಗೆ ಸಾಕ್ಷಿ ಸಮೇತ ಸಿದ್ದು ತಿರುಗೇಟು

    ಪಾಪ ಸಿ.ಟಿ ರವಿ ಒಬ್ಬ ಪಾರ್ಟಿ ಮ್ಯಾನ್. ಅವರು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಅವರಿಗೆ ಇದೆಲ್ಲಾ ಹೇಗೆ ಗೊತ್ತಾಗುತ್ತದೆ. ಅಕ್ಕಿ ಇರುವುದೇ ಬಡವರಿಗೆ ಕೊಡುವುದಕ್ಕೆ. ದುಡ್ಡು ಕೊಡಿ ಎಂದರೆ ಹೇಗೆ? ಜನರಿಗೆ ಬೇಕಾಗಿರುವುದು ಅಕ್ಕಿ, ದುಡ್ಡಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಿಯೋನಿಕ್ಸ್ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಪ್ರಿಯಾಂಕ್ ಖರ್ಗೆ ನಿರ್ದೇಶನ

    ಮತಾಂತರ ನಿಷೇಧ ಕಾಯ್ದೆ (Anti Conversion Law) ಹಿಂಪಡೆದ ಕಾರಣ ಬಿಜೆಪಿಯವರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರ ಕೆಲಸವೇ ವಿರೋಧ ಮಾಡುವುದು. ಕಾಂಗ್ರೆಸ್‌ನ (Congress) ಅಭಿವೃದ್ಧಿ ಹೆಜ್ಜೆಗೆ ವಿರೋಧವೇ ಅವರ ಕೆಲಸ. ಅವರು ಪ್ರತಿಪಕ್ಷ ಅಲ್ಲ. ವಿರೋಧ ಪಕ್ಷ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಫ್ರೀ ಬಸ್ ಸೇವೆ, ನಮ್ಮ ಸಂಸ್ಥೆಗಳ ಮೇಲೆ ಯಾವುದೇ ಹೊರೆಯಾಗಲ್ಲ: ರಾಮಲಿಂಗಾ ರೆಡ್ಡಿ

    ಮತಾಂತರ ನಿಷೇಧ ಕಾಯ್ದೆ ಮೊದಲೇ ಇತ್ತು. ಬಲವಂತ ಹಾಗೂ ಆಶ್ವಾಸನೆ ಕೊಟ್ಟು ಮತಾಂತರ ಮಾಡುವುದು ತಪ್ಪು. ಅದು ಹಳೇಯ ಕಾಯ್ದೆ. ಅದನ್ನು ನಾವು ಒಪ್ಪುತ್ತೇವೆ. ಆದರೆ ಅವರು ಕೆಲವು ತಪ್ಪು ಮಾಡಿದ್ದಾರೆ. ಆರೋಪ ಮಾಡಿದವರು ಅದನ್ನು ಸಾಬೀತು ಮಾಡಬೇಕು. ಸಾಕ್ಷಿ ಕೊಟ್ಟು ಹೇಳಬೇಕು. ನನ್ನ ಮೇಲೆ ಆರೋಪ ಮಾಡಿದರೆ ನಾನೇ ಪ್ರೂವ್ ಮಾಡಬೇಕಾ? ಇದು ಯಾವ ಕಾನೂನಿನಲ್ಲಿ ಇದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಶಿವಕುಮಾರ್ ಅಣ್ಣ.. ಭರವಸೆ ಕೊಟ್ಟಿರೋದು ನೀವು, ಮೋದಿ ಅಲ್ಲ: ಅಶೋಕ್ ಕಿಡಿ

    ಬಿಜೆಪಿಯವರು ಈ ರೀತಿ ತುಂಬಾ ತಪ್ಪು ಮಾಡಿದ್ದಾರೆ. ಅದನ್ನು ನಾವು ಸರಿ ಮಾಡುತ್ತೇವೆ. ಇಷ್ಟು ದಿನ ಅವರ ಆಡಳಿತ ಇದ್ದಾಗ ಹೊಸದಾಗಿ ಏನು ಕಂಡುಹಿಡಿದಿದ್ದಾರೆ? ನಮಗೆ ಜವಾಬ್ದಾರಿ ಇದೆ. ಎಲ್ಲರಿಗೂ ಸರಿ ಆಗುವ ಕಾಯ್ದೆ ಜಾರಿ ಮಾಡುತ್ತೇವೆ ಎಂದರು. ಇದನ್ನೂ ಓದಿ: ಎಳಸು ಅಂದ್ರೆ ಬೇಸರವಿಲ್ಲ, ಚೈಲ್ಡ್ ಆಗಿಯೇ ಪ್ರಶ್ನೆ ಕೇಳ್ತೀನಿ – ಪ್ರತಾಪ್ ಸಿಂಹ

  • ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ; ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ – ಸಿ.ಟಿ ರವಿಗೆ ಗುಂಡೂರಾವ್ ತಿರುಗೇಟು

    ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ; ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ – ಸಿ.ಟಿ ರವಿಗೆ ಗುಂಡೂರಾವ್ ತಿರುಗೇಟು

    ಬೆಂಗಳೂರು: ಬಿಜೆಪಿಗೆ (BJP) ಕರ್ನಾಟಕದ ಜನರ ಮೇಲೆ ಕಾಳಜಿ ಇದ್ದರೆ ರಾಜ್ಯಕ್ಕೆ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದನ್ನ ವಾಪಸ್ ಪಡೆಯಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸವಾಲು ಹಾಕಿದರು.

    ಈ ಕುರಿತಂತೆ ಬೆಂಗಳೂರಿನಲ್ಲಿ ಗುರುವಾರ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗುಂಡೂರಾವ್, ಕೇಂದ್ರ ಸರ್ಕಾರದ ಆಹಾರ ನಿಗಮ ಅಕ್ಕಿ ಮಾರಾಟ ಸ್ಥಗಿತಗೊಳಿಸಿದ್ದು ಏಕೆ ಎಂದು ಪ್ರಶ್ನಿಸಿದರು.‌ ಇದನ್ನೂ ಓದಿ: ಜು.1 ರಿಂದ 10 ಕೆಜಿ ಉಚಿತ ಅಕ್ಕಿ ಕೊಡದಿದ್ರೆ ಹೋರಾಟ: ಸರ್ಕಾರದ ವಿರುದ್ಧ ಬೊಮ್ಮಾಯಿ ಗುಡುಗು

    ಸಿ.ಟಿ ರವಿಯವರು (C.T.Ravi) ಕಾಂಗ್ರೆಸ್ ಮೇಲೆ ಗೂಬೆ ಕೂರಿಸೋದನ್ನ ಬಿಟ್ಟು ಅವರ ಕೇಂದ್ರ ನಾಯಕರ ಜೊತೆ ಮಾತಾಡುವ ಧೈರ್ಯ ತೋರಿಸಲಿ. 10 ಕೆಜಿ ಅಕ್ಕಿ ಬಡವರಿಗೆ ಕೊಡಲು ಕಾಂಗ್ರೆಸ್ ಬದ್ಧವಾಗಿದೆ. ಆದರೆ ನಮಗೆ ಅಕ್ಕಿ ಸಿಕ್ತಿಲ್ಲ ಅಂತ ಬಿಜೆಪಿ ನಾಯಕರು ಖುಷಿಯಾಗಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಪ್ರಶ್ನೆಯಲ್ಲ. ಬಡವರ ಹಸಿವನ್ನ ನೀಗಿಸುವ ಪ್ರಶ್ನೆ. ಬಿಜೆಪಿಗೆ ಮತ ಹಾಕಿದ 35% ರಷ್ಟು ಜನರಲ್ಲಿ ಬಿಪಿಎಲ್ ಕಾರ್ಡ್ ಹೊಂದಿದವರಿಗೂ ನಾವು ಅಕ್ಕಿ ಕೊಡ್ತೇವೆ. ಇದನ್ನ ಅರಿತುಕೊಂಡು ಸಿ.ಟಿ ರವಿ ಮಾತಾಡಬೇಕು ಎಂದು ತಿರುಗೇಟು ನೀಡಿದರು.

    ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿ ದೊರೆಯುತ್ತಿರುವುದು ಮೋದಿ ಅವರಿಂದಲ್ಲ. ಯುಪಿಎ – 2 ಸರ್ಕಾರವಿದ್ದಾಗ ಆಹಾರ ಭದ್ರತೆ ಬಿಲ್ ತಂದಿದ್ದರಿಂದ ಇಂದು ಬಡವರಿಗೆ ಅಕ್ಕಿ ದೊರೆಯುತ್ತಿದೆ. ಸಿ.ಟಿ ರವಿ ಅವರಿಗೆ ರಾಜ್ಯದ ಜನರ ಮೇಲೆ ಕಾಳಜಿ ಇದ್ದರೆ ಕೇಂದ್ರ ನಾಯಕರ ಜೊತೆ ಮಾತಾಡಲಿ. ಕರ್ನಾಟಕದ 25 ಸಂಸದರು ಏನು ಮಾಡ್ತಿದ್ದಾರೆ. ಮೋದಿ ಅವರು ಒಪ್ಪುತ್ತಾರೋ ಇಲ್ವೋ. ಆದರೆ ರಾಜ್ಯದ ಪರ ಒಂದು ಪ್ರಯತ್ನವನ್ನಾದ್ರೂ ಬಿಜೆಪಿ ನಾಯಕರು ಮಾಡಬೇಕಲ್ವಾ ಎಂದು ಕುಟುಕಿದರು. ಇದನ್ನೂ ಓದಿ: ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ – ಸುನೀಲ್‌ ಕುಮಾರ್‌ ಲೇವಡಿ

    ಅಗತ್ಯ ಪ್ರಮಾಣದ ಅಕ್ಕಿ ಖರೀದಿಗೆ ಕಾಂಗ್ರೆಸ್ ಸರ್ಕಾರ ತನ್ನ ಶಕ್ತ ಮೀರಿ ಪ್ರಯತ್ನಿಸಲಿದೆ. ಖಾಸಗಿ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸುವುದು ಅಷ್ಟು ಸುಲಭವಲ್ಲ. ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ವಿಸ್ತೃವಾಗಿ ಚರ್ಚೆ ನಡೆದಿದೆ. ಬಡವರ ಪರವಾಗಿ ನ್ಯಾಯ ದೊರಕಿಸಲು ನಮ್ಮ ಪ್ರಯತ್ನ ಮುಂದುವರಿಸಲು ನಿರ್ಧರಿಸಲಾಗಿದೆ. ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಚರ್ಚೆ ನಡೆದಿದೆ. ಛತ್ತೀಸಗಢ, ತೆಲಂಗಾಣ, ಆಂಧ್ರಪ್ರದೇಶದ ಜೊತೆ ಚರ್ಚೆ ನಡೆಸಲಿದ್ದೇವೆ ಎಂದು ಗುಂಡೂರಾವ್ ತಿಳಿಸಿದರು.

  • ಸೂಲಿಬೆಲೆಯವರ ಪ್ರಖ್ಯಾತಿ ಕುಗ್ಗಿಸಲು ಸಾಧ್ಯವಿಲ್ಲ: ಸಿ.ಟಿ.ರವಿ

    ಸೂಲಿಬೆಲೆಯವರ ಪ್ರಖ್ಯಾತಿ ಕುಗ್ಗಿಸಲು ಸಾಧ್ಯವಿಲ್ಲ: ಸಿ.ಟಿ.ರವಿ

    ನವದೆಹಲಿ: ದೇಶಭಕ್ತಿಯ ಕಾರಣಕ್ಕೆ ಸೂಲಿಬೆಲೆ (Chakravarti Sulibele) ಪ್ರಖ್ಯಾತರಾಗಿದ್ದಾರೆ. ಅವರ ಪ್ರಖ್ಯಾತಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಹೇಳಿಕೆ ನೀಡಿದ್ದಾರೆ.

    ದೆಹಲಿಯಲ್ಲಿ (New Delhi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೂಲಿಬೆಲೆ ಬೆಂಬಲಿಗರು ತುಂಬಾ ಜನರಿದ್ದಾರೆ. ಕಾಂಗ್ರೆಸ್‌ನವರು (Congress) ದ್ವೇಷ, ಮತ್ಸರ ಹೊರ ಹಾಕುತ್ತಿದ್ದಾರೆ. ಅವರ ಅಧಿಕಾರದ ಮದವನ್ನು ಜನರು ಇಳಿಸುತ್ತಾರೆ ಎಂದರು. ಇದನ್ನೂ ಓದಿ: ಬೆಲೆ ಏರಿಕೆ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ – ಕಾಂಗ್ರೆಸ್ ಗ್ಯಾರಂಟಿ ಸೈಡ್ ಎಫೆಕ್ಟ್ ಎಂದು ಟೀಕೆ

    ಪಠ್ಯದಿಂದ ಹೆಗಡೆವಾರು ಪಾಠ ತೆಗೆಯಲು ಕಾಂಗ್ರೆಸ್ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೆಗಡೆವಾರು ಅವರನ್ನು ಪಠ್ಯದಿಂದ ಹೊರಹಾಕಬಹುದು, ಹೃದಯದಿಂದ ಹೊರಹಾಕಲು ಸಾಧ್ಯವಿಲ್ಲ. ಅವರು ಅಧಿಕಾರದಲ್ಲಿ ಇದ್ದಾರೆ, ಏನು ಬೇಕಾದರೂ ಮಾಡಬಹುದು. ಆದರೆ ಅವರ ಸಿದ್ಧಾಂತ ಜನರ ಮನಸ್ಸಿನಲ್ಲಿದೆ. ಅದನ್ನು ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಗಂಡ ತೆರಿಗೆ ಪಾವತಿ ಮಾಡಿದ್ರೆ ಮಾತ್ರ ಗೃಹಲಕ್ಷ್ಮಿ ಭಾಗ್ಯ ಇಲ್ಲ – ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

    ನೆಹರು, ಇಂದಿರಾ ಇದನ್ನು ಮಾಡಲು ಹೋಗಿ ಸೋತಿದ್ದಾರೆ. ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು. ಆರ್‌ಎಸ್‌ಎಸ್ (RSS) ನಾಯಕರದ್ದು ಬೇಡವೇ? ಇವರ ನೆರವು ಇಲ್ಲದೆ ಸಂಘದ ಶಾಖೆಯ ಮೂಲಕವೇ ವಿಚಾರ ಬೆಳೆಯಲಿದೆ. ಸುಳ್ಳು ಮತ್ತು ಕಾಂಗ್ರೆಸ್ ನಾಣ್ಯದ ಎರಡು ಮುಖಗಳು. ಕಾಂಗ್ರೆಸ್ ನಾಯಕರು ಕುರ್ಚಿಗೆ ಅಂಗಲಾಚಿದ್ದರು. ಕಾಂಗ್ರೆಸ್‌ನವರನ್ನು ಯಾಕೆ ಅಂಡಮಾನ್ ಜೈಲಿಗೆ ಹಾಕಲಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ: ಪ್ರಿಯಾಂಕ್ ಖರ್ಗೆ

    ಅತ್ತೆ ಆಸ್ತಿಯನ್ನು ಅಳಿಯ ದಾನ ಮಾಡಿದಂತೆ ಸದ್ದಿಲ್ಲದೆ ವಿದ್ಯುತ್ ಬಿಲ್ ಏರಿಸುತ್ತಿದ್ದಾರೆ. ಹಾಲಿನ ದರವನ್ನೂ ಏರಿಸುತ್ತಿದ್ದಾರೆ. ಕೆಕೆಆರ್‌ಡಿಬಿ (KKRDB) ಅಕ್ರಮ ಆಗಿದ್ದರೆ ಕ್ರಮ ತೆಗೆದುಕೊಳ್ಳಿ. ಅರ್ಕಾವತಿ ಹಣವನ್ನು ತನಿಖೆ ಮಾಡಿ. 8,000 ಕೋಟಿ ನಷ್ಟದ ಬಗ್ಗೆಯೂ ತನಿಖೆ ಮಾಡಲಿ. ತೆರಿಗೆ ಕಟ್ಟುವವರ ಮೇಲೆ ಯಾಕೆ ಬರೆ ಹಾಕುತ್ತೀರಿ? ಸೋಲಾರ್ ಪವರ್ ಪ್ಲಾಂಟ್‌ನಲ್ಲಿರುವ ಅಕ್ರಮದ ಬಗ್ಗೆಯೂ ತನಿಖೆ ನಡೆಯಲಿ. ಇದರ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿಲ್ವಾ? ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಭಯವೇ ಎಂದು ಕೇಳಿದರು. ಇದನ್ನೂ ಓದಿ: ಸಿದ್ದು ಪ್ರಮಾಣವಚನ ವೇಳೆ ವೇದಿಕೆಯಲ್ಲಿ ಕ್ರಿಮಿನಲ್‌ ಹಿನ್ನಲೆಯುಳ್ಳ ವ್ಯಕ್ತಿ – ತನಿಖೆಗೆ ರಾಜ್ಯಪಾಲರ ಪತ್ರ

    ಸೋಲಿಗೆ ಕಾರಣವಾದ ಹತ್ತಾರು ಅಂಶಗಳ ಬಗ್ಗೆ ಚರ್ಚೆಯಾಗಿದೆ. ಹೊರಗಡೆ ಏನು ಹೇಳಬೇಕು ಅದನ್ನು ಹೇಳಿದ್ದೇವೆ. ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ. ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ. ಇವತ್ತು ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಬಹಿರಂಗ ಅಸಮಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಅತ್ತೆ, ಸೊಸೆ ಇಬ್ಬರಿಗೂ ಎರಡು ಸಾವಿರ ಹಣ ನೀಡಿ: ರೇಣುಕಾಚಾರ್ಯ

  • ಸಿ.ಟಿ.ರವಿ ಸೋಲಿಗೆ ನಾಲಿಗೆ ಕಾರಣ: ಭೋಜೇಗೌಡ

    ಸಿ.ಟಿ.ರವಿ ಸೋಲಿಗೆ ನಾಲಿಗೆ ಕಾರಣ: ಭೋಜೇಗೌಡ

    ಚಿಕ್ಕಮಗಳೂರು: ಸಿ.ಟಿ.ರವಿ (C.T.Ravi) ಸೋಲಿಗೆ ಅವರ ನಾಲಿಗೆಯೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ (S.L.Bhojegowda) ವ್ಯಾಖ್ಯಾನಿಸಿದ್ದು, ಸೋಲಿಸಿದ ಬಳಿಕ ಸಿ.ಟಿ.ರವಿ ಬುದ್ಧಿವಂತ ಎಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.

    ನಗರದ ಹೊಸಮನೆ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ ಬಹಳ ದೊಡ್ಡ ಮಟ್ಟದಲ್ಲಿ ಬೆಳೆದಿದ್ದರು. ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ಯೋಗ ಅವರಿಗೆ ಲಭಿಸಿತ್ತು. ಆದರೆ ಅವರ ನಾಲಿಗೆಯೇ ಅವರನ್ನು ಸೋಲಿಸಿದೆ. ರಾಜಕೀಯದಲ್ಲಿ ಟೀಕೆ ಮಾಡುವುದು ತಪ್ಪಲ್ಲ. ಆದರೆ ಅದಕ್ಕೊಂದು ಇತಿಮಿತಿ ಇರುತ್ತದೆ ಮತ್ತು ಇರಬೇಕು. ರಾಜಕೀಯವಾಗಿ ರಾಜಕೀಯ ಅಸ್ತ್ರದ ಟೀಕೆ ಮಾಡಿದರೆ ಸರಿ. ಆದರೆ ಅದು ವೈಯಕ್ತಿಕ ಟೀಕೆಯಾಗಬಾರದು. ಅದು ಸರಿಯೂ ಅಲ್ಲ. ಸಿ.ಟಿ.ರವಿ ಸದನದ ಒಳಗೆ-ಹೊರಗೆ ಎರಡೂ ಕಡೆ ರಾಜಕೀಯ ಟೀಕೆಯನ್ನು ಬಿಟ್ಟು ವೈಯಕ್ತಿಕ ಟೀಕೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ

    ಟೀಕೆ ಮಾಡುವಾಗ ಅವರ ವ್ಯಕ್ತಿತ್ವ ಮತ್ತು ರಾಜಕೀಯ ಮುತ್ಸದ್ದಿತನದ ಬಗ್ಗೆ ಯೋಚನೆ ಮಾಡಬೇಕು. ಯೋಚಿಸಿ ಮಾತನಾಡಬೇಕು. ಯಾರನ್ನೋ ಮೆಚ್ಚಿಸುವ ಸಲುವಾಗಿ, ಕ್ಷಣಿಕ ಸುಖಕ್ಕೆ ಅಥವಾ ಕಾರ್ಯಕರ್ತರನ್ನು ಮೆಚ್ಚಿಸುವುದಕ್ಕೆ ವೈಯಕ್ತಿಕ ಟೀಕೆ ಸರಿಯಲ್ಲ. ದೇವೇಗೌಡರಿಗೆ (H.D.Deve Gowda) ಸಾಬರಾಗಿ ಹುಟ್ಟಲಿ ಎನ್ನುವುದು, ಸಿದ್ದರಾಮಯ್ಯಗೆ (Siddaramaiah) ಸಿದ್ರಾಮುಲ್ಲಾ ಖಾನ್ ಎನ್ನುವುದು. ಸಿ.ಟಿ.ರವಿ ಯಾರನ್ನು ಬಿಟ್ಟಿದ್ದಾರೆ. ಯಾರನ್ನೂ ಬಿಟ್ಟಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೌನ್ ಬನೇಗಾ ರಾಜ್ಯದ ಮುಖ್ಯಮಂತ್ರಿ? ಹೈಕಮಾಂಡ್ ಲೆಕ್ಕಾಚಾರ ಏನು?

    ಟೀಕೆ ಮಾಡುವಾಗಲು ರಾಜಕೀಯ ಸ್ಟ್ಯಾಂಡರ್ಡ್‌ನಲ್ಲಿ ಟೀಕೆ ಮಾಡಬೇಕು. ಕುಲದ ಕುತ್ತಿಗೆ ಉದ್ದ. ಅಷ್ಟು ಸುಲಭ ಇಲ್ಲ. “ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್”. ಕುಲದ ಬಗ್ಗೆ ಮಾತನಾಡಿದರೆ ನಮ್ಮ ಕುಲದ ಬಗ್ಗೆ ಮಾತನಾಡುತ್ತಾನೆ. ಇವನಿಗೆ ಎಷ್ಟು ಹಮ್ಮಿರಬೇಕು ಎಂದು ಹಮ್ಮಿನ ಬಗ್ಗೆ ಯೋಚಿಸುತ್ತಾರೆ. ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ. ದುರಾಡಳಿತ, ದುರಂಹಂಕಾರ ಎಲ್ಲವೂ ಸೇರಿ ಸಿ.ಟಿ.ರವಿಯನ್ನು ಸೋಲಿಸಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಮೇ 18 ರಂದು ಪ್ರಮಾಣ ವಚನ?

    ಇದೇ ವೇಳೆ ಭೋಜೇಗೌಡರ ಮನೆ ಮುಂದೆ ಜೆಡಿಎಸ್ (JDS) ಕಾರ್ಯಕರ್ತರು ಸಿ.ಟಿ.ರವಿ ಸೋಲಿನಲ್ಲಿ ಮಾಸ್ಟರ್ ಮೈಂಡ್ ಆಗಿದ್ದ ಎಸ್.ಎಲ್.ಭೋಜೇಗೌಡರಿಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ಅವರ ಮನೆ ಮುಂದೆ ಟ್ರ‍್ಯಾಕ್ಟರ್ ಮೇಲೆ ನಿಲ್ಲಿಸಿ ಬಕೆಟ್‌ನಲ್ಲಿ ಹಾಲನ್ನು ಸುರಿದು ಹಾಲಿನ ಅಭಿಷೇಕ ಮಾಡಿದ್ದಾರೆ. ಇದನ್ನೂ ಓದಿ: ಉಡುಪಿ ಬೈಂದೂರಿನಲ್ಲಿ ಗೆದ್ದ ಬರಿಗಾಲ ಸಂತ – ಜಿದ್ದಾಜಿದ್ದಿ ಹೇಗಿತ್ತು?

    20 ವರ್ಷಗಳಿಂದ ಸೋಲಿಲ್ಲದ ಸರದಾರನಂತೆ ಇದ್ದ ಸಿ.ಟಿ.ರವಿಗೆ ಈ ಬಾರಿ ಜೆಡಿಎಸ್ ಅಭ್ಯರ್ಥಿ ಇದ್ದರೂ ಕೂಡ ಎಸ್.ಎಲ್.ಭೋಜೇಗೌಡ ನೇರವಾಗಿ ಅಖಾಡಕ್ಕಿಳಿದು ಜೆಡಿಎಸ್‌ಗೆ ಮತ ಹಾಕಬೇಡಿ, ಕಾಂಗ್ರೆಸ್ಸಿಗೆ ಹಾಕಿ ಎಂದು ಸಮರ ಸಾರಿದ್ದರು. ಅದರ ಫಲವಾಗಿ ಈ ಬಾರಿ ಸಿ.ಟಿ.ರವಿ ಕೇವಲ ಐದು ಸಾವಿರ ಮತಗಳ ಅಂತರದಲ್ಲಿ ಸೋತಿದ್ದಾರೆ. ಇದನ್ನೂ ಓದಿ: ಮತ್ತೆ ಎದ್ದು ಓಡುತ್ತೇನೆ, ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ – ನಿಖಿಲ್‌

  • ಸರ್‌.. ಭಯ ಪಡಬೇಡಿ, ನಿಮ್ಮ ಜೊತೆ ನಾವಿದ್ದೇವೆ: ಸೋತು ಮಂಕಾಗಿದ್ದ ಸಿ.ಟಿ.ರವಿ ಸಂತೈಸಿದ ಬಾಲಕ

    ಸರ್‌.. ಭಯ ಪಡಬೇಡಿ, ನಿಮ್ಮ ಜೊತೆ ನಾವಿದ್ದೇವೆ: ಸೋತು ಮಂಕಾಗಿದ್ದ ಸಿ.ಟಿ.ರವಿ ಸಂತೈಸಿದ ಬಾಲಕ

    ಚಿಕ್ಕಮಗಳೂರು: ವಿಧಾನಸಭೆ ಚುನಾವಣೆಯಲ್ಲಿ ಆಪ್ತನ ಎದುರೇ ಸೋಲನುಭವಿಸಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿಗೆ (C.T.Ravi) ಪುಟ್ಟ ಬಾಲಕ ಸಾಂತ್ವನ ಹೇಳುತ್ತಿರುವ ದೃಶ್ಯದ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

    ಸೋತು ಮಂಕಾಗಿ ಕುಳಿತಿದ್ದ ಸಿ.ಟಿ.ರವಿಗೆ “ಸರ್…. ನಿಮ್ಮ ಜೊತೆ ನಾವಿರ್ತೇವೆ. ನಾವು ಬಿಜೆಪಿ ಜೊತೆ ಇರ್ತೇವಿ, ನೀವು ಭಯ ಪಡಬೇಡಿ” ಎಂದು ಬಾಲಕ ಸಂತೈಸಿದ್ದಾನೆ. ಕೊನೆಯಲ್ಲಿ ಬಾಲಕ “ಜೈ ಹಿಂದ್‌” ಅಂತ ಹೇಳುತ್ತಾನೆ. ಸಿ.ಟಿ.ರವಿ ಕೂಡ ಬಾಲಕನಿಗೆ ಪ್ರತಿಯಾಗಿ “ಜೈ ಹಿಂದ್‌” ಎಂದು ಹೇಳುತ್ತಾರೆ. ಇದನ್ನೂ ಓದಿ: ನನಗೆ ಅಧಿಕಾರದ ಆಸೆಯಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಚಿಕ್ಕಮಗಳೂರು ಕ್ಷೇತ್ರದಲ್ಲಿ 20 ವರ್ಷಗಳ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಸೋಲನುಭವಿಸಿದರು. ಪರಾಭವದಿಂದಾಗಿ ಬೇಸರಗೊಂಡು ಮನೆಯಲ್ಲೇ ಇದ್ದರು. ಈ ವೇಳೆ ಬಾಲಕ ಸಿ.ಟಿ.ರವಿ ಅವರನ್ನು ಸಮಾಧಾನಪಡಿಸಿದ್ದಾನೆ.

    ಸಿ.ಟಿ.ರವಿ ಆಪ್ತರೇ ಆಗಿದ್ದ ತಮ್ಮಯ್ಯ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದರು. ಸಿ.ಟಿ.ರವಿ ಮಣಿಸಲು ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ತಮ್ಮಯ್ಯಗೆ ಟಿಕೆಟ್‌ ನೀಡಿತ್ತು. ಇದನ್ನೂ ಓದಿ: ಸಿಎಂ ಕುರ್ಚಿ ಫೈಟ್‌; 50-50 ಪ್ಲಾನ್‌ ಡಿಕೆಶಿ ಮುಂದಿಡ್ತಾರಾ ಸಿದ್ದು?

  • ಗುರುವನ್ನು ಸೋಲಿಸಿದ ಶಿಷ್ಯ: ಸಿಟಿ ರವಿ ಸೋತಿದ್ದು ಎಲ್ಲಿ?

    ಗುರುವನ್ನು ಸೋಲಿಸಿದ ಶಿಷ್ಯ: ಸಿಟಿ ರವಿ ಸೋತಿದ್ದು ಎಲ್ಲಿ?

    ಚಿಕ್ಕಮಗಳೂರು: ಯಾವುದೇ ಜಾತಿ ಮತಗಳ ಬಲವೂ ಇಲ್ಲದೇ 19ನೇ ಸುತ್ತಿನವರೆಗೂ ಪೈಪೋಟಿ ಕೊಟ್ಟು ಸೋತಿರುವ ಸಿ.ಟಿ.ರವಿ (C.T.Ravi) ಅವರದ್ದು ಸೋಲೇ ಅಲ್ಲ. ಸಿ.ಟಿ.ರವಿ ಸೋಲಿನಲ್ಲೂ ಗೆಲುವನ್ನು ಕಂಡಿದ್ದಾರೆ ಎನ್ನುತ್ತಿದ್ದಾರೆ ತಾಲೂಕಿನ ಮತದಾರರು.

    20 ವರ್ಷಗಳಿಂದ ವಿಧಾನಸೌಧಕ್ಕೆ ಖಾಯಂ ಸದಸ್ಯನಾಗಿದ್ದ ಸಿ.ಟಿ.ರವಿಗೆ ಐದನೇ ಬಾರಿ ವಿಧಾನಸೌಧ ಪ್ರವೇಶಿಸುವ ಕನಸಿಗೆ ಮತದಾರರು ತಣ್ಣೀರೆರಚಿದ್ದಾರೆ. 20 ವರ್ಷಗಳಿಂದ ಹಿಡಿತ ಸಾಧಿಸಿದ್ದ ಅವರಿಗೆ ಈ ಸೋಲನ್ನು ಅರಗಿಸಿಕೊಳ್ಳುವುದು ಕಷ್ಟಸಾಧ್ಯ. ಈ ಸೋಲನ್ನು ಸ್ವತಃ ಸಿ.ಟಿ.ರವಿಯವರೇ ಊಹಿಸಿರಲಿಲ್ಲ. ಮತದಾರರೇ ಮೋಸ ಮಾಡಿದ್ದಾರೋ, ನಂಬಿಕಸ್ಥರು ಮೋಸ ಮಾಡಿದ್ದಾರೋ ಅಥವಾ ಬದಲಾವಣೆಯ ಗಾಳಿ ಬೀಸಿದೆಯೋ ಗೊತ್ತಿಲ್ಲ. ಆದರೆ ಎರಡು ದಶಕಗಳಿಂದ ಚಿಕ್ಕಮಗಳೂರಿನಲ್ಲಿ (Chikkamagaluru) ಸೋಲಿಲ್ಲದ ಸರದಾರನಂತೆ ಪಾರುಪಥ್ಯ ಮೆರೆದಿದ್ದ ಅವರು ಮೊದಲ ಸೋಲನ್ನು ಕಂಡಿದ್ದಾರೆ. ಇದನ್ನೂ ಓದಿ: ನನ್ನ ಜೊತೆಗೇ ಇದ್ದು ಬೆನ್ನಿಗೆ ಚೂರಿ ಹಾಕಿದ್ರು: ಪರಾಜಿತ ಬಿಜೆಪಿ ಅಭ್ಯರ್ಥಿ ಈಶ್ವರ್ ಸಿಂಗ್ ಸ್ವ ಪಕ್ಷದ ವಿರುದ್ಧ ಕಿಡಿ

    ಗುರುವನ್ನು ಸೋಲಿಸಿದ ಶಿಷ್ಯ:
    ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಪಕ್ಷದಿಂದ 6 ಜನ ಸ್ಪರ್ಧಿಸಿದ್ದರು. ಅವರೆಲ್ಲಾ 20 ವರ್ಷಗಳಿಂದಲೂ ಸಿ.ಟಿ.ರವಿ ವಿರೋಧಿಗಳೇ. ಅವರ ಎದುರು ಸೋತಿದ್ದರೆ ಬಿಜೆಪಿಯವರಿಗೆ (BJP) ಅಷ್ಟೇನು ನೋವಾಗುತ್ತಿರಲಿಲ್ಲ. ಆದರೆ ಅದೇ 20 ವರ್ಷಗಳಿಂದ ಸ.ಟಿ.ರವಿ ಜೊತೆಗಿದ್ದು, ಅವರ ಆಪ್ತರೆಂದೇ ಗುರುತಿಸಿಕೊಂಡಿದ್ದ ತಮ್ಮಯ್ಯನೆದುರು (H.D.Thammaiah) ಸೋತಿದ್ದು ಬಿಜೆಪಿಗೆ ಬಿಸಿ ತುಪ್ಪವಾಗಿದೆ. ಸಿ.ಟಿ.ರವಿ ಜೊತೆಗಿದ್ದು ರಾಜಕೀಯವನ್ನು ಕರಗತ ಮಾಡಿಕೊಂಡಿದ್ದ ತಮ್ಮಯ್ಯ ನಂತರ ಮಾಡಿದ ಒಳ ರಾಜಕೀಯವೇ ಇಂದು ಬಿಜೆಪಿ ಸೋಲಿಗೆ ಕಾರಣವಾಗಿದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಇದನ್ನೂ ಓದಿ: ಸಮುದಾಯದ ಐವರಿಗೆ ಸಚಿವ ಸ್ಥಾನ, 1 ಡಿಸಿಎಂ ಕೊಡಿ – ಮುಸ್ಲಿಂ ಮುಖಂಡರ ಆಗ್ರಹ

    ಭೋಜೇಗೌಡರ ಲೀಡ್ ರೋಲ್?
    ಸಿ.ಟಿ.ರವಿ ಸೋಲಿಗೆ ಜೆಡಿಎಸ್ (JDS) ಎಂಎಲ್ಸಿ ಭೋಜೇಗೌಡರದ್ದು ಲೀಡ್ ರೋಲ್ ಇದೆ ಎನ್ನುತ್ತಾರೆ ಮತದಾರರು. ಯಾಕೆಂದರೆ ತಾನೇ ಜೆಡಿಎಸ್ ಟಿಕೆಟ್ ಕೊಡಿಸಿ ನಿಲ್ಲಿಸಿದ್ದ ತಿಮ್ಮಶೆಟ್ಟಿ ಜೆಡಿಎಸ್ ಅಭ್ಯರ್ಥಿಯಾಗಿ ಅಧಿಕೃತವಾಗಿ ಕಣಕ್ಕಿಳಿದಿದ್ದರೂ ಕೂಡಾ ರಾಜಾರೋಷವಾಗಿ ಜೆಡಿಎಸ್‌ಗೆ ಮತ ಹಾಕಬೇಡಿ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ಹಳ್ಳಿಹಳ್ಳಿ ಸುತ್ತಿ ಪಂಚಾಯಿತಿ ಕಟ್ಟೆ ಮೇಲೆ ಭಾಷಣ ಮಾಡಿದ್ದರು. ಸಖರಾಯಪಟ್ಟಣ ಹಾಗೂ ಲಕ್ಯಾ ಭಾಗದಲ್ಲಿ ಒಂದಷ್ಟು ಹಿಡಿತವಿರುವ ಭೋಜೇಗೌಡ ಕೂಡಾ ಸಿ.ಟಿ.ರವಿ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರೆ ತಪ್ಪಾಗಲಾರದು. ಇದನ್ನೂ ಓದಿ: ಸೋತಿರೋದಕ್ಕೆ ಕುಂಟು ನೆಪ ಹೇಳೋದು ಸರಿಯಲ್ಲ: ಕೈ ನಾಯಕರಿಗೆ ಸೂರ್ಯ ತಿರುಗೇಟು

    ಯಡಿಯೂರಪ್ಪ ಕೈಕೊಟ್ರಾ?
    ಇಂತಹದ್ದೊಂದು ಜಿಜ್ಞಾಸೆ ಚಿಕ್ಕಮಗಳೂರು ಮತದಾರರನ್ನು ಕಾಡುತ್ತಲೇ ಇದೆ. ಯಡಿಯೂರಪ್ಪ ಒಮ್ಮೆ ಚಿಕ್ಕಮಗಳೂರಿಗೆ ಭೇಟಿ ನೀಡಿ ಎಂ.ಜಿ.ರಸ್ತೆಯಲ್ಲಿ ಬಂದು ಒಮ್ಮೆ ಕೈಬೀಸಿ ಹೋಗಿದ್ದರೆ ಸಾಕಿತ್ತು. ಇಂದು ಅದೇ 5 ಸಾವಿರ ಮತಗಳ ಅಂತರದಲ್ಲಿ ಸಿ.ಟಿ.ರವಿ ಗೆಲ್ಲುತ್ತಿದ್ದರು ಎನ್ನುವುದು ಮತದಾರರ ಮನದಾಳದ ಮಾತು. ಇದರ ಜೊತೆಗೆ, ಜಿಲ್ಲೆಗೆ ಯಾವುದೇ ಸ್ಟಾರ್ ಕ್ಯಾಂಪೇನರ್ ಕೂಡ ಬರಲಿಲ್ಲ. 4 ಪಕ್ಷ ಹಾಗೂ 3 ಬಲಿಷ್ಠ ಸಮುದಾಯಗಳ ಜೊತೆ ಹೋರಾಡಿ, ಹೊಡೆದಾಡಿದ್ದು ಎಂದರೇ ಅದು ಸಿ.ಟಿ.ರವಿ ಮಾತ್ರ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಜೊತೆಗೆ ಇಡೀ ವ್ಯವಸ್ಥೆ ವಿರುದ್ಧವಾಗಿದ್ದರೂ ಕಾರ್ಯಕರ್ತರ ಜೊತೆ ಏಕಾಂಗಿಯಾಗಿ ಹೋರಾಡಿದ ಸಿ.ಟಿ.ರವಿ ಸೋಲನ್ನು ಅವರ ಅಭಿಮಾನಿಗಳು ಗೆಲುವು ಎಂದೇ ಬಣ್ಣಿಸಿದ್ದಾರೆ. ನಾವು ಸೋತಿದ್ದೇವೆ ಅಷ್ಟೇ, ಸತ್ತಿಲ್ಲ ಎಂದು ಸೋಲನ್ನು ಸವಾಲಾಗಿ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಗದ್ದುಗೆ ಏರಿದ ಕೈಗೆ ಅಣ್ಣಾಮಲೈ ಅಭಿನಂದನೆ

    ಸಿ.ಟಿ.ರವಿ ಸೋಲಿಗೆ ಪ್ರಮುಖ ಕಾರಣಗಳು :
    1. ಲಿಂಗಾಯುತ, ಕುರುಬ, ಮುಸ್ಲಿಂ ಸಮುದಾಯದ ವಿರುದ್ಧದ ಹೇಳಿಕೆಗಳು.
    2. ಸಿದ್ದರಾಮಯ್ಯ ವಿರುದ್ಧ ನಿರಂತರ ಹೇಳಿಕೆ ನೀಡುತ್ತಾ ಸಿದ್ದರಾಮಯ್ಯನನ್ನು ಸಿದ್ರಾಮುಲ್ಲಾ ಖಾನ್ ಎಂದು ಹೇಳಿದ್ದು.
    3. ರಾಷ್ಟ್ರ ರಾಜಕಾರಣಕ್ಕೆ ಹೋಗಿ ಕ್ಷೇತ್ರದಲ್ಲಿ ಒಂದಷ್ಟು ಹಿಡಿತ ಹಾಗೂ ಸಂಪರ್ಕ ಕಳೆದುಕೊಂಡದ್ದು.
    4. ಲಿಂಗಾಯುತ ಪ್ರಾಬಲ್ಯದ ಕ್ಷೇತ್ರದಲ್ಲಿ ಬಿಎಸ್‌ವೈ ಕೈಕೊಟ್ಟದ್ದು ಹಾಗೂ ಸ್ಟಾರ್ ಪ್ರಚಾರಕರ ಕೊರತೆ.
    5. ವ್ಯವಸ್ಥೆಯ ವಿರುದ್ಧ ಏಕಾಂಗಿಯಾಗಿ ಹೋರಾಡಿದ್ದು.
    6. ಸಿ.ಟಿ.ರವಿಯನ್ನು ಸೋಲಿಸಲೇಬೇಕೆಂದು ಸ್ವಪಕ್ಷೀಯರ ಜೊತೆ ವಿಪಕ್ಷೀಯರು ಕೈಜೋಡಿಸಿದ್ದು.
    7. 4 ಬಾರಿ ಶಾಸಕರಾಗಿದ್ದಾರೆ, ಸಾಕು ಎಂದು ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು.
    8. ಮೂಡಿಗೆರೆ ಕ್ಷೇತ್ರದಲ್ಲಿ ಎಂ.ಪಿ.ಕುಮಾರಸ್ವಾಮಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದರಿಂದ ದಲಿತ ವಿರೋಧಿ ಎಂಬ ಹಣೆಪಟ್ಟಿಯ ಆರೋಪ. ಇದನ್ನೂ ಓದಿ: ಸಿಎಂ ಕುರ್ಚಿ ಫೈಟ್‌; 50-50 ಪ್ಲಾನ್‌ ಡಿಕೆಶಿ ಮುಂದಿಡ್ತಾರಾ ಸಿದ್ದು?

  • ಕಾಂಗ್ರೆಸ್ ಗೆದ್ದರೆ ತಾಲಿಬಾನ್‌ಗಳಿಗೆ ಬಿರಿಯಾನಿ ಕೊಟ್ಟು ಸಾಕುತ್ತಾರೆ: ಸಿ.ಟಿ.ರವಿ ವಾಗ್ದಾಳಿ

    ಕಾಂಗ್ರೆಸ್ ಗೆದ್ದರೆ ತಾಲಿಬಾನ್‌ಗಳಿಗೆ ಬಿರಿಯಾನಿ ಕೊಟ್ಟು ಸಾಕುತ್ತಾರೆ: ಸಿ.ಟಿ.ರವಿ ವಾಗ್ದಾಳಿ

    ಮಡಿಕೇರಿ: ಕಾಂಗ್ರೆಸ್ (Congress) ಗೆದ್ದರೆ ಮತ್ತೆ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿ ತಾಲಿಬಾನ್‌ಗಳಿಗೆ ಬಿರಿಯಾನಿ ಕೊಟ್ಟು ಸಾಕುತ್ತಾರೆ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಶನಿವಾರಸಂತೆಯಲ್ಲಿ (Shanivarasanthe) ಶಾಸಕ, ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ (Appachu Ranjan) ಪರವಾಗಿ ಮತಯಾಚನೆ ಮಾಡಿ ಮಾತನಾಡಿದ ಅವರು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನು ಮತ್ತೆ ಪ್ರಕಟಿಸಿದೆ. ಹನುಮನ ನಾಡಿನಲ್ಲಿ ಹನುಮನ ಸೈನಿಕನನ್ನೇ ನಿಷೇಧಿಸುವ ದುಸ್ಸಾಹಸ ಮಾಡುತ್ತಿದೆ. ಕಾಂಗ್ರೆಸ್ ಇದಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಹನುಮನಿಗೆ ನಮಸ್ಕರಿಸಿದ ಮೋದಿ

    ಬಜರಂಗದಳ (Bajarang Dal) ಎಂದರೆ ಹನುಮನ ಆರಾಧಕರು, ರಾಷ್ಟ್ರಭಕ್ತರು. ಅವರನ್ನು ನಿಷೇಧಿಸುತ್ತೇವೆ ಎನ್ನುವುದು ದರ್ಪದ ಮಾತು. ಆ ಮಾತಿಗೆ ಕಾಂಗ್ರೆಸ್ ದೊಡ್ಡ ಬೆಲೆ ತೆರಬೇಕು. ಕಾಂಗ್ರೆಸ್‌ನದ್ದು ನಾಯಿ ಬಾಲ ಇದ್ದಂತೆ. ಯಾವತ್ತೂ ನೆಟ್ಟಗಾಗುವುದಿಲ್ಲ. ಅವರು ಸೋತಾಗ ಸರಿ ಇರುತ್ತಾರೆ. ಗೆದ್ದರೆ ಮತ್ತೆ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಾರೆ. ಅವರು ತಾಲಿಬಾನ್‌ಗಳಿಗೆ ಬಿರಿಯಾನಿ ಕೊಟ್ಟು ಸಾಕುತ್ತಾರೆ. ಇಂತಹ ಬೌದ್ಧಿಕ ದಿವಾಳಿತನ ಅವರಿಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ದಾಖಲೆ ಬರೆದ ಮೋದಿ ಬೆಂಗಳೂರು ರೋಡ್ ಶೋ

  • ಜೆಡಿಎಸ್‌ನದ್ದು ಅಧಿಕೃತ ಹೊಂದಾಣಿಕೆಯೋ ಅಥವಾ ರಾಜಕೀಯ ವ್ಯಭಿಚಾರವೋ: ಸಿ.ಟಿ.ರವಿ ವ್ಯಂಗ್ಯ

    ಜೆಡಿಎಸ್‌ನದ್ದು ಅಧಿಕೃತ ಹೊಂದಾಣಿಕೆಯೋ ಅಥವಾ ರಾಜಕೀಯ ವ್ಯಭಿಚಾರವೋ: ಸಿ.ಟಿ.ರವಿ ವ್ಯಂಗ್ಯ

    ಚಿಕ್ಕಮಗಳೂರು: ಜೆಡಿಎಸ್ (JDS) ಪಕ್ಷದ್ದು ಕಾಂಗ್ರೆಸ್ (Congress) ಜೊತೆ ಅಧಿಕೃತ ಹೊಂದಾಣಿಕೆಯೋ ಅಥವಾ ರಾಜಕೀಯ ವ್ಯಭಿಚಾರವೋ ಎಂದು ಶಾಸಕ ಹಾಗೂ ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಜೆಡಿಎಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ತಾಲೂಕಿನಲ್ಲಿ ಅಧಿಕೃತ ಜೆಡಿಎಸ್ ಅಭ್ಯರ್ಥಿ ಇದ್ದರೂ ಕೂಡ ಅವರನ್ನು ಬಿಟ್ಟು ಕಾಂಗ್ರೆಸ್‌ಗೆ ಮತ ಹಾಕಿ ಎಂದು ಹೇಳುತ್ತಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡರ (S.L.Bhojegowda) ವಿರುದ್ಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮದು ಚುನಾವಣಾ ಪೂರ್ವ ಮೈತ್ರಿಯಾದರೆ ಘೋಷಣೆ ಮಾಡಿ. ಹಾಗಾದರೆ, ಜೆಡಿಎಸ್ ಅಧಿಕೃತ ಅಭ್ಯರ್ಥಿ ತಿಮ್ಮಶೆಟ್ಟಿ ಮನೆಯನ್ನು ಏಕೆ ಹಾಳು ಮಾಡುತ್ತೀರಾ? ಆತ ಫ್ಲೆಕ್ಸ್ ಹಾಕೋಕೆ ಅಷ್ಟೆ ಸೀಮಿತನಾ? ಇದೇ ರೀತಿ ಮಾಡಿ ಕಳೆದ ಬಾರಿ ಹರೀಶನ ಮನೆ ಹಾಳು ಮಾಡಿದ್ದೀರಾ. ಭೋಜೇಗೌಡರು ಈ ಬಾರಿ ತಿಮ್ಮಶೆಟ್ಟಿ ಮನೆ ಹಾಳು ಮಾಡಿದ್ದಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಮತ್ತೊಬ್ಬರ ಮನೆಹಾಳು ಮಾಡುವ ರಾಜಕಾರಣ ಎಷ್ಟು ದಿನ ನಡೆಯುತ್ತದೆ? ಬೇರೆಯವರ ಮನೆ ಹಾಳು ಮಾಡಿದರೆ ಒಂದು ದಿನ ಅದು ನಮ್ಮ ಮನೆಯನ್ನು ಹಾಳು ಮಾಡುತ್ತದೆ ಎಂಬ ಅರಿವಿರಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೀಸಲಾತಿ ಶೇ.75ರವರೆಗೆ ಹೆಚ್ಚಳ, NEP ರದ್ದು, ಭಜರಂಗದಳ ನಿಷೇಧ- ಕಾಂಗ್ರೆಸ್‍ನಿಂದ ಪ್ರಣಾಳಿಕೆ ರಿಲೀಸ್

    ತಾಲೂಕಿನಲ್ಲಿ ಸಿ.ಟಿ.ರವಿಯನ್ನು ಸೋಲಿಸಲು ಎಸ್‌ಡಿಪಿಐ, ಪಿಎಫ್‌ಐ, ಸಿಪಿಐ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದಿದ್ದಾರೆ. ಸಿ.ಟಿ.ರವಿ ಬಾಲ ಕತ್ತರಿಸಬೇಕು. ಸಿದ್ದರಾಮಯ್ಯರಿಗೆ ಸಿದ್ರಾಮುಲ್ಲಾ ಖಾನ್ ಎಂದು ಹೇಳಿದ್ದಾರೆ. ಹಾಲುಮತದ ಕುರುಬರು ಅವರಿಗೆ ಮತ ಹಾಕಬೇಡಿ ಎಂದು ಹೇಳಿದ್ದ ಭೋಜೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಾಲು ಮತದ ಸಮಾಜ ಹಾಲಿನಂತ ಮನಸ್ಸು ಇರುವವರು. ಹುಳಿ ಹಿಂಡುವ ರಾಜಕಾರಣಿಗಳಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡಲ್ಲ. ಕಳೆದ ಬಾರಿಯೂ ಕುರುಬರು ಹೆಚ್ಚಿರುವ ಊರುಗಳಲ್ಲಿ ನನಗೆ ಹೆಚ್ಚಿನ ಲೀಡ್ ಬಂದಿತ್ತು. ಈ ಬಾರಿಯೂ ನನಗೇ ಹೆಚ್ಚು ಲೀಡ್ ಬರೋದು ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು

    ಬಸವರಾಜ ಬೊಮ್ಮಾಯಿ (Basavarj Bommai) ಅವರೇ ನಮ್ಮ ಮುಖ್ಯಮಂತ್ರಿಗಳು. ಬೊಮ್ಮಾಯಿಯವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತಿರುವುದು. ಸಿ.ಟಿ.ರವಿ ಸಿಎಂ ಆಗಬೇಕು ಎಂಬುದು ಜನರ ಅಪೇಕ್ಷೆ. ಅದು ಪಕ್ಷದ ನಿರ್ಣಯ ಅಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಹೇಳಿದ್ದನ್ನು ಮಾಡುತ್ತೇನೆ. ಆದರೆ ಸಿಎಂ ನನ್ನ ಅಪೇಕ್ಷೆ ಅಲ್ಲ. ಅದು ಜನರ ಅಪೇಕ್ಷೆ. ಕಾಲ ಈಗ ನನ್ನದಲ್ಲ. ನನ್ನ ಕಾಲ ಒಂದಲ್ಲ ಒಂದು ದಿನ ಬರಬಹುದು ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗ್ಬೇಕು – ತುಳುನಾಡಿನ ದೈವ, ದೇವರ ಮೊರೆ ಹೋದ ಹೆಚ್‌ಡಿಡಿ

  • ಜಾತಿ ರಾಜಕಾರಣಕ್ಕೆ ಮಾನ್ಯತೆಯಿಲ್ಲ, ನೀತಿ ರಾಜಕಾರಣಕ್ಕೆ ಬೆಲೆ: ಸಿ.ಟಿ.ರವಿ

    ಜಾತಿ ರಾಜಕಾರಣಕ್ಕೆ ಮಾನ್ಯತೆಯಿಲ್ಲ, ನೀತಿ ರಾಜಕಾರಣಕ್ಕೆ ಬೆಲೆ: ಸಿ.ಟಿ.ರವಿ

    ಚಿಕ್ಕಮಗಳೂರು: ಚಿಕ್ಕಮಗಳೂರು (Chikkamagaluru) ವಿಧಾನಸಭಾ ಕ್ಷೇತ್ರದಲ್ಲಿ ಜಾತಿ ರಾಜಕಾರಣಕ್ಕೆ ಮಾನ್ಯತೆ ಇಲ್ಲ. ಇಲ್ಲಿ ಈವರೆಗೆ ಗೆದ್ದಿರುವುದು ನೀತಿ ರಾಜಕಾರಣವೇ ಎಂದು ಬಿಜೆಪಿ (BJP) ಅಭ್ಯರ್ಥಿ ಶಾಸಕ ಸಿ.ಟಿ.ರವಿ (C.T.Ravi) ಹೇಳಿದ್ದಾರೆ.

    ನಗರದ ಪ್ರೆಸ್ ಕ್ಲಬ್‌ನಲ್ಲಿ (Press Club) ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ (Election) ಕೆಲವರು ಜಾತಿ ಹೆಸರಲ್ಲಿ ನನ್ನ ವಿರುದ್ಧ ಎತ್ತಿಕಟ್ಟುವ ಯತ್ನ ಮಾಡುತ್ತಿದ್ದಾರೆ. ಅದು ಫಲಿಸುವುದಿಲ್ಲ. ಇಲ್ಲಿ ಈವರೆಗೆ ಅಭಿವೃದ್ಧಿ ಪರ ಹಾಗೂ ಸಿದ್ಧಾಂತಕ್ಕೆ ಬದ್ಧವಾದ ರಾಜಕಾರಣ ಮಾಡಿದ್ದೇನೆ. ಜಾತಿ ಮತ್ತು ಪಕ್ಷ ಕೇಳದೆ ನನ್ನ ಕೈಯಲ್ಲಾದ ಒಳ್ಳೆಯ ಕೆಲಸ ಮಾಡಿದ್ದೇನೆ. ಈಗಿನ ವಾತಾವರಣದಲ್ಲಿ ಜಿಲ್ಲೆಯಲ್ಲಿ ಐದಕ್ಕೆ ಐದೂ ಕ್ಷೇತ್ರದಲ್ಲೂ ಬಿಜೆಪಿ ಉತ್ತಮ ಅಂತರದಿಂದಲೇ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: 10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ ನಾಮಪತ್ರ ಸಲ್ಲಿಕೆ – ನಾಣ್ಯ ಎಣಿಸಿ ಸುಸ್ತಾದ ಅಧಿಕಾರಿಗಳು 

    ಸಣ್ಣ ಜಾತಿ ಮತ್ತು ಜನಾಂಗಗಳಿಗೂ ರಾಜಕೀಯ ಹಾಗೂ ಸಾಮಾಜಿಕವಾಗಿ ಆದ್ಯತೆ ಕೊಡುವ ಕೆಲಸ ನಮ್ಮ ಕ್ಷೇತ್ರದಲ್ಲಿ ಮಾಡಿದ್ದೇವೆ. ನಿಗಮ ಮಂಡಳಿಗಳಿಗೆ ನೇಮಕಾತಿ ಸಂದರ್ಭದಲ್ಲಿ ಇದೇ ಮಾದರಿಯನ್ನು ಅನುಸರಿಸುವಂತೆ ನಾವು ರಾಜ್ಯ ನಾಯಕರಿಗೆ ತಿಳಿಸಿದ್ದೇವೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಸ್ಥಾನವನ್ನು ಪರಿಶಿಷ್ಟರಿಗೆ ಒದಗಿಸಿಕೊಡುವ ಕೆಲಸವನ್ನು ನಗರಸಭೆ ಹಾಗೂ ಎಪಿಎಂಸಿಗಳಲ್ಲಿ ಮಾಡಿ ತೋರಿಸಿದ್ದೇವೆ ಎಂದರು. ಇದನ್ನೂ ಓದಿ: ಮತ್ತೊಂದು ವಿಕೆಟ್ ಪತನ – ಆಯನೂರು ಮಂಜುನಾಥ್ ಬಿಜೆಪಿಗೆ ಗುಡ್ ಬೈ

    ನಾನು ಶಾಸಕನಾಗಿದ್ದ ಅವಧಿಯಲ್ಲಿ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ-ಸಾಧನೆಗೆ ಸಂಬಂಧಿಸಿದ ರಿಪೋರ್ಟ್ ಕಾರ್ಡನ್ನು ಕ್ಷೇತ್ರದ 55 ಸಾವಿರ ಮನೆಗಳಿಗೆ ತಲುಪಿಸಿದ್ದೇನೆ. ಯಾವುದೇ ಲೋಪ, ಅಭಿವೃದ್ಧಿ ಮತ್ತು ವೈಯಕ್ತಿಕ ನಡವಳಿಕೆ ಕಾರಣಕ್ಕೆ ಸಿ.ಟಿ.ರವಿಗೆ ಮತ ಹಾಕುವುದಿಲ್ಲ ಎಂದು ಹೇಳಲು ಸಾಧ್ಯವೇ ಇಲ್ಲದ ರೀತಿ ನಡೆದುಕೊಂಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಬೊಮ್ಮಾಯಿ ಪರ ಕಿಚ್ಚ ಸುದೀಪ್ ಕ್ಯಾಂಪೇನ್ – ಶಿಗ್ಗಾಂವಿ ಕ್ಷೇತ್ರದಲ್ಲಿ ಇಂದು ಮಿಂಚಿನ ಸಂಚಾರ 

    ಈ ಬಾರಿ ಚುನಾವಣೆಯಲ್ಲಿ 1 ಲಕ್ಷ ಮತಗಳನ್ನು ಗಳಿಸುವ ಗುರಿ ಇದೆ. ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಭೇಟಿ ನೀಡಿ ಪ್ರಚಾರ ನಡೆಸಿದ್ದೇವೆ. ನಮ್ಮ ಗುರಿ ಸಾಧಿಸಲಿದ್ದೇವೆ ಎನ್ನುವ ವಿಶ್ವಾಸವಿದೆ. ಎಲ್ಲಾ ಪಕ್ಷದ ಅಭ್ಯರ್ಥಿಗಳು ಅಂತಿಮವಾದ ನಂತರ ಎಷ್ಟು ಅಂತರದಲ್ಲಿ ಗೆಲ್ಲುತ್ತೇವೆ ಎನ್ನುವುದನ್ನು ಹೇಳುತ್ತೇವೆ ಎಂದರು. ಇದನ್ನೂ ಓದಿ: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಹತ್ಯೆ 

    ನಾಮಪತ್ರ (Nomination Papers) ಸಲ್ಲಿಕೆ ವೇಳೆ ಕಾರ್ಯಕರ್ತರು ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿ ಎಂದು ಕೂಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಕಾರ್ಯಕರ್ತರ ಅಪೇಕ್ಷೆ. ನಾನು ಪಕ್ಷದ ಕಟ್ಟಾಳು. ಪಕ್ಷ ಏನು ಹೇಳುತ್ತದೆ ಅದನ್ನು ಕೇಳುವವನು ಎಂದರು. ಇದನ್ನೂ ಓದಿ: ಎನ್‌ಸಿಪಿ ಲೋಗೋ ತೆಗೆದ ಅಜಿತ್‌ ಪವಾರ್‌ – ಮಹಾ ಬಿಜೆಪಿ ಜತೆ ಮೈತ್ರಿಗೆ 40 ಶಾಸಕರ ಸಮ್ಮತಿ? 

    ಹೆಚ್.ಡಿ.ತಮ್ಮಯ್ಯ (H.D.Thammaiah) ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಕುರಿತು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅಂದರೆ 2008ರಲ್ಲಿ ತಮ್ಮಯ್ಯ ಬಿಜೆಪಿಗೆ ಬಂದವರು. ಪಕ್ಷ ಅವರಿಗೆ ಎಲ್ಲಾ ರೀತಿಯ ಸ್ಥಾನಮಾನ ನೀಡಿತ್ತು. ಈಗ ಹೆಚ್ಚಿನ ಆಸೆ ಇಟ್ಟುಕೊಂಡು ಕಾಂಗ್ರೆಸ್‌ಗೆ (Congress) ಹೋಗಿದ್ದಾರೆ. ಅದು ರಾಜಕೀಯ ಸೈದ್ಧಾಂತಿಕ ಬದ್ಧತೆ ಇರುವ ರಾಜಕಾರಣವಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ – ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

  • ಆಕಾಶದಲ್ಲಿ ಜಾಗ ಸಿಕ್ಕಿಲ್ಲ, ಸಿಕ್ಕಿದ್ರೆ ಅಲ್ಲೂ ಭ್ರಷ್ಟಚಾರ ಮಾಡುತ್ತಿದ್ದರು: ಸಿ.ಟಿ.ರವಿ ವಿರುದ್ಧ ತಮ್ಮಯ್ಯ ವಾಗ್ದಾಳಿ

    ಆಕಾಶದಲ್ಲಿ ಜಾಗ ಸಿಕ್ಕಿಲ್ಲ, ಸಿಕ್ಕಿದ್ರೆ ಅಲ್ಲೂ ಭ್ರಷ್ಟಚಾರ ಮಾಡುತ್ತಿದ್ದರು: ಸಿ.ಟಿ.ರವಿ ವಿರುದ್ಧ ತಮ್ಮಯ್ಯ ವಾಗ್ದಾಳಿ

    ಚಿಕ್ಕಮಗಳೂರು: ಶಾಸಕ ಸಿ.ಟಿ.ರವಿ (C.T.Ravi) ಭ್ರಷ್ಟಾಚಾರದ (Corruption) ಪಿತಾಮಹ. ಅವರಿಗೆ ಆಕಾಶದಲ್ಲಿ ಜಾಗ ಸಿಕ್ಕಿಲ್ಲ. ಸಿಕ್ಕಿದ್ದರೆ ಅಲ್ಲೂ ಭ್ರಷ್ಟಾಚಾರ ಮಾಡುತ್ತಿದ್ದರು ಎಂದು ಚಿಕ್ಕಮಗಳೂರು (Chikkamagaluru) ತಾಲೂಕು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ತಮ್ಮಯ್ಯ (H.D.Tammaiah) ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ.ರವಿ ಇತ್ತೀಚಿಗೆ ದೆಹಲಿಯಲ್ಲಿ (Delhi) ರಾಜ್ಯದ ರೈತ ಹೆಣ್ಣು ಮಕ್ಕಳಿಗೆ ಅವಮಾನವಾಗುವ ರೀತಿ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇನೆ. ಶಾಸಕರು ಈ ಕೂಡಲೇ ದೇಶ ಹಾಗೂ ರಾಜ್ಯದ ರೈತ ಕುಟುಂಬದ ಹೆಣ್ಣು ಮಕ್ಕಳನ್ನು ಕ್ಷಮೆ ಕೇಳಬೇಕು. ಇಲ್ಲವಾದರೆ ರೈತ ಮಹಿಳೆಯರನ್ನೊಳಗೊಂಡು ಶಾಸಕರ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 2018ರ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ಒಡ್ಡಿದ್ದ ಅಭ್ಯರ್ಥಿಯ ಜಾತಿ ಪ್ರಮಾಣಪತ್ರ ರದ್ದು 

    ನಗರದ ಎಂ.ಜಿ.ರಸ್ತೆಯ ಫುಟ್‌ಪಾತ್‌ನಲ್ಲಿ ಮತ್ತೆ ಇಂಟರ್ ಲಾಕ್ ಕೆಲಸ ಮಾಡುತ್ತಿದ್ದಾರೆ. ಇದು ಹೊಸ ಬಿಲ್ ಅಥವಾ ದುರಸ್ತಿ ಬಿಲ್ ಗೊತ್ತಿಲ್ಲ. ಇನ್ನೂ ಬಿಲ್ ಆಗಿಲ್ಲ. ಜನ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಯಾವ ಬಿಲ್ ಮಾಡುತ್ತಾರೆ ನೋಡೋಣ. ನಗರದ ಐ.ಜಿ. ರಸ್ತೆ ಕಾಮಗಾರಿ ಬಗ್ಗೆಯೂ ಎಲ್ಲಾ ಮಾಹಿತಿ ಗೊತ್ತಿದೆ. ಇದನ್ನ ಪ್ರಶ್ನೆ ಮಾಡಲು ಎಲ್ಲರಿಗೂ ಭಯವಿದೆ ಎಂದರು. ಇದನ್ನೂ ಓದಿ: DMK ಸರ್ಕಾರಕ್ಕೆ ಹಿನ್ನಡೆ – ತಮಿಳುನಾಡಿನಲ್ಲಿ RSSಗೆ ರ‍್ಯಾಲಿ ಅನುಮತಿ

    ಯುಪಿಎ ಅಧಿಕಾರದಲ್ಲಿ ಇದ್ದಾಗ ಸಿ.ಟಿ.ರವಿಯವರಷ್ಟು ವಾಕ್ಚಾತುರ್ಯದಿಂದ ಎಲ್ಲರನ್ನೂ ಆಕರ್ಷಿಸುತ್ತಿದ್ದವರು ಬೇರೆ ಯಾರೂ ಇರಲಿಲ್ಲ. ಆಕಾಶದ ಮೇಲೂ ಭ್ರಷ್ಟಾಚಾರ ಎಂದು ಹೇಳುತ್ತಿದ್ದರು. ಈಗ ನೀವು ಮಾಡುತ್ತಿರುವುದು ಏನು ಸ್ವಾಮಿ ಎಂದು ಪ್ರಶ್ನಿಸಿದ್ದಾರೆ. ನೀವು ಕೆರೆ ಅಗೆದು ಕೆರೆ ಆಳದಲ್ಲೂ ಭ್ರಷ್ಟಾಚಾರ ಮಾಡುತ್ತಿದ್ದೀರಿ. ನಿಮಗೆ ಆಕಾಶದಲ್ಲಿ ಜಾಗ ಸಿಕ್ಕಿಲ್ಲ. ಸಿಕ್ಕಿದ್ದರೆ ಅಲ್ಲೂ ಭ್ರಷ್ಟಾಚಾರ ಮಾಡುತ್ತಿದ್ದೀರಿ. ತಾಲೂಕಿನ ಕೆಲ ಭಾಗದಲ್ಲಿ ಸಿ.ಟಿ.ರವಿ ಅವರ ಬಾವ ಹೋಗಿ ರಾತ್ರಿ ಆಶ್ವಾಸನೆ ಕೊಡುತ್ತಾರೆ. ಬೆಳಗ್ಗೆ ಕಾಮಗಾರಿ ಆರಂಭಗೊಳ್ಳುತ್ತದೆ. ಇದು ಹೇಗೆ ಸಾಧ್ಯ? ಜಿಲ್ಲಾಧಿಕಾರಿ ಇತ್ತ ಗಮನ ಹರಿಸಬೇಕು. ಡಿಸಿ-ಎಸ್ಪಿ ದಕ್ಷರಿದ್ದಾರೆ. ಆಡಳಿತ ಪಕ್ಷದ ಪರ ಕೆಲಸ ಮಾಡಬೇಡಿ. ಸರ್ಕಾರ ಶಾಶ್ವತವಲ್ಲ. ಒಂದು ತಿಂಗಳಲ್ಲಿ ಹೊಸ ಸರ್ಕಾರ ಬರುತ್ತದೆ. ನೀವು ದುರ್ಬಳಕೆಗೆ ಒಳಗಾಗಬೇಡಿ. ನಿಮ್ಮ ಕೆಲಸ ನೀವು ಮಾಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣಾ ರಾಜಕಾರಣಕ್ಕೆ ಈಶ್ವರಪ್ಪ ಗುಡ್‍ಬೈ 

    ಸಿ.ಟಿ.ರವಿ ಸೋಲಿನ ಭೀತಿಯಿಂದ ಹಣ, ಹೆಂಡ, ಸೀರೆ ಸೇರಿದಂತೆ ಮತ್ತಿತ್ತರ ವಸ್ತುಗಳನ್ನು ಹಂಚುವ ಮೂಲಕ ವಾಮಾ ಮಾರ್ಗದಲ್ಲಿ ಚುನಾವಣೆ (Election) ಎದುರಿಸಲು ಮುಂದಾಗಿದ್ದಾರೆ. ಕಳೆದ 20 ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಅದರ ಆಧಾರದ ಮೇಲೆ ಈಗ ಮತ ಕೇಳಬಹುದಿತ್ತು. ಅದನ್ನು ಬಿಟ್ಟು ಸೋಲಿನ ಭೀತಿಯಿಂದ ಮತದಾರರಿಗೆ ಹಣದ ಆಮಿಷ ತೋರಿಸಿ ಮತ ಸೆಳೆಯುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಪಕ್ಷೇತರನಿಗೆ ಬಿದ್ದ ಅನಿರೀಕ್ಷಿತ ಮತ ಸಿದ್ದು ಪಾಲಿಗೆ ವರವಾಯ್ತು! 

    ನಗರದ ಎಂ.ಜಿ.ರಸ್ತೆ, ಮಾರ್ಕೆಟ್ ರಸ್ತೆ ಹಾಗೂ ಐ.ಜಿ ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆಸಿರುವ ಬಗ್ಗೆ ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಕಾಮಗಾರಿ ಬಗ್ಗೆ ತನಿಖೆ ನಡೆಯುತ್ತಿದ್ದು, ಇದು ಮುಕ್ತಾಯವಾಗುವ ಮುನ್ನವೇ ಎಂ.ಜಿ.ರಸ್ತೆಯಲ್ಲಿ ಮರುಕಾಮಗಾರಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಐ.ಜಿ ರಸ್ತೆ ಫುಟ್‌ಪಾತ್ ಸಂಪೂರ್ಣ ಕಳಪೆ ಕಾಮಗಾರಿಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡುವವರೇ ಇಲ್ಲದಂತಾಗಿದೆ. ಬಿಳೆಕಲ್ಲು, ಕುರುವಂಗಿ ರಸ್ತೆಗೆ ಡಾಂಬರೀಕರಣ ಆಗಿ ಮೂರು ತಿಂಗಳಾಗಿದ್ದು, ಕಳಪೆ ಕಾಮಗಾರಿಯಿಂದಾಗಿ ಸದರಿ ರಸ್ತೆಯಲ್ಲಿ ಡಾಂಬರ್ ಹುಡುಕಬೇಕಾಗಿದೆ ಎಂದರು. ಇದನ್ನೂ ಓದಿ: ಸರ್ಕಾರದ ಒಳ ಮೀಸಲಾತಿ ವಿರುದ್ಧ ಹೋರಾಟ: ಸಿ.ಎಸ್‌.ದ್ವಾರಕನಾಥ್‌