Tag: c t ravi

  • ಸಿ.ಟಿ ರವಿ ಹೆಸರಲ್ಲಿ ಸುಳ್ಳು ಪೋಸ್ಟ್- ಮೂವರ ವಿರುದ್ಧ ಎಫ್‍ಐಆರ್

    ಸಿ.ಟಿ ರವಿ ಹೆಸರಲ್ಲಿ ಸುಳ್ಳು ಪೋಸ್ಟ್- ಮೂವರ ವಿರುದ್ಧ ಎಫ್‍ಐಆರ್

    ಚಿಕ್ಕಮಗಳೂರು: ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ ರವಿಯವರ (C.T Ravi) ವರ್ಚಸ್ಸಿಗೆ ಧಕ್ಕೆ ತರುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ದಾವಣಗೆರೆ ಹಾಗೂ ತುಮಕೂರು ಮೂಲದ ಮೂವರ ವಿರುದ್ಧ ಬಸವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರಾಜಕೀಯ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಾದೇಶಿಕ ಜಾತಿಗಳ ನಡುವೆ ಹಾಗೂ ವಿವಿಧ ವರ್ಗಗಳ ನಡುವೆ ವೈರತ್ವ ಮೂಡುವ ರೀತಿಯಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ. ಪೋಸ್ಟ್ ಹಾಕಿದವರ ವಿರುದ್ಧ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ದೂರು ದಾಖಲಿಸಿದ್ದು, ದಾವಣಗೆರೆಯ ಹರೀಶ್ ಕೆಂಗನಹಳ್ಳಿ, ಗುರುಪಾಟೀಲ್ ಹಾಗೂ ತುಮಕೂರು ಮೂಲದ ಸುವರ್ಣಗಿರಿ ಕುಮಾರ್ ಎಂಬ ಮೂವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ: ಹೆಚ್‌ಡಿ ಕುಮಾರಸ್ವಾಮಿ

    ಪೋಸ್ಟ್‌ನಲ್ಲಿ, ಲಿಂಗಾಯಿತ ಸಮುದಾಯ ಬಿಜೆಪಿಯಿಂದ ದೂರ ಸರಿಯುತ್ತಿದೆ. ಈ ಸಮುದಾಯದ ನಾಯಕರಿಗೆ ಪ್ರಾಮುಖ್ಯತೆ ನೀಡುವ ಅವಶ್ಯಕತೆ ಇಲ್ಲ. ಯಡಿಯೂರಪ್ಪ (B.S Yediyurappa) ಅವರ ತಂಡ ಕೂಡ ಹೈಕಮಾಂಡ್ ಹೇಳಿದಂತೆ ನಡೆಯಬೇಕು. ಟಿಕೆಟ್ ವಿಚಾರದಲ್ಲೂ ಯಡಿಯೂರಪ್ಪನವರ ವಿರುದ್ಧ ಸಿ.ಟಿ ರವಿ ಮಾತನಾಡಿದ್ದಾರೆಂದು ಪತ್ರಿಕೆಯಲ್ಲಿ ಪ್ರಕಟವಾದಂತೆ ಮುದ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ಸಿ.ಟಿ.ರವಿ ಮಾಧ್ಯಮಕ್ಕೆ ನೀಡಿದ್ದ ಹೇಳಿಕೆಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಿಡಿಗೇಡಿಗಳು ಹರಿಬಿಟ್ಟ ಸುದ್ದಿಗೆ ಹಲವಾರು ಜನ ನಾನಾ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಪೋಸ್ಟ್ ಅಪ್‍ಲೋಡ್ ಮಾಡಿರುವ ಲಿಂಕ್ ಕೂಡ ದಾಖಲಿಸಿದ್ದು ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

    ಸಿ.ಟಿ.ರವಿ ಹೇಳಿದ್ದಾರೆಂಬ ಆ ಹೇಳಿಕೆ ರಾಜ್ಯ ರಾಜಕೀಯ ಹಾಗೂ ಲಿಂಗಾಯಿತ ಸಮುದಾಯದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಈ ಬಗ್ಗೆ ಶಾಸಕ ಸಿ.ಟಿ.ರವಿ ಕೂಡ ಪ್ರತಿಕ್ರಿಯಿಸಿ ಮೂರ್ನಾಲ್ಕು ದಶಕಗಳಿಂದ ರಾಜಕೀಯದಲ್ಲಿದ್ದೇನೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದೇನೆ. ಯಾವ ಹೇಳಿಕೆ ಕೊಡಬೇಕು, ಯಾವುದನ್ನ ಕೊಡಬಾರದು ಎಂಬುದು ನನಗೆ ಗೊತ್ತಿದೆ. ಅದರಲ್ಲೂ ಜಾತಿ ವಿಚಾರದಲ್ಲಿ ಅಂತಹ ಹೇಳಿಕೆ ಕೊಡುವಷ್ಟು ದಡ್ಡನಲ್ಲ. ನನ್ನನ್ನ ಗೆಲ್ಲಿಸಿರುವುದೇ ಲಿಂಗಾಯಿತ ಸಮುದಾಯದವರು ಎಂದಿದ್ದರು. ಇದನ್ನೂ ಓದಿ: ಕೋಲಾರ ಕೈ ನಾಯಕ ಶೇಷಾಪುರ ಗೋಪಾಲ್ ಜೆಡಿಎಸ್ ಖಾಸಗಿ ಸಭೆಯಲ್ಲಿ ಭಾಗಿ: ಪಕ್ಷಾಂತರ ಗೊಂದಲಕ್ಕೆ ಸ್ಪಷ್ಟನೆ

  • ಬಾದಾಮಿ, ಚಾಮುಂಡೇಶ್ವರಿ, ಕೋಲಾರ ಯಾವುದೂ ಸ್ಪಷ್ಟತೆ ಇಲ್ಲ ಎನ್ನುವುದು ಗೊತ್ತಾಯಿತು: ಸಿ.ಟಿ.ರವಿ

    ಬಾದಾಮಿ, ಚಾಮುಂಡೇಶ್ವರಿ, ಕೋಲಾರ ಯಾವುದೂ ಸ್ಪಷ್ಟತೆ ಇಲ್ಲ ಎನ್ನುವುದು ಗೊತ್ತಾಯಿತು: ಸಿ.ಟಿ.ರವಿ

    ಹಾವೇರಿ: ಸಿದ್ದರಾಮಯ್ಯ (Siddaramaiah) ವರುಣಾದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ  ಕಾರ್ಯದರ್ಶಿ ಸಿ.ಟಿ ರವಿ (C.T.Ravi) ಲೇವಡಿ ಮಾಡಿದ್ದಾರೆ.

    ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ (Shiggaon) ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಈಗ ಅದರ ಬಗ್ಗೆ ಮಾತನಾಡಿದರೆ ವ್ಯಕ್ತಿಗತವಾಗಿ ತೆಗೆದುಕೊಳ್ಳುತ್ತಾರೆ. ಅದು ತಪ್ಪಾಗುತ್ತದೆ. ಆದರೆ ಒಂದಂತೂ ಸ್ಪಷ್ಟವಾಯಿತು. ಸಿದ್ದರಾಮಯ್ಯನವರಿಗೆ ಬಾದಾಮಿ (Badami), ಚಾಮುಂಡೇಶ್ವರಿ (Chamundeshwari), ಕೋಲಾರ (Kolar) ಯಾವುದೂ ಸ್ಪಷ್ಟತೆ ಇಲ್ಲ ಎನ್ನುವುದು ಗೊತ್ತಾಯಿತು ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ: ಆರ್.ಅಶೋಕ್ 

    ಮಾರ್ಚ್ 1ರಿಂದ ಆರಂಭವಾದ ರಥಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. 150 ಕ್ಷೇತ್ರಗಳಲ್ಲಿ ಯಾತ್ರೆ ಪೂರ್ಣಗೊಂಡಿದೆ. ಮಾ.21ರೊಳಗೆ ಎಲ್ಲಾ ಕ್ಷೇತ್ರಗಳಲ್ಲಿ ಯಾತ್ರೆ ಹಾಯ್ದು ಬರುತ್ತದೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ (Davanagere) ಪ್ರಧಾನಿ ಮೋದಿಯವರ (Narendra Modi) ನೇತೃತ್ವದಲ್ಲಿ ಮಹಾ ಸಂಗಮವಾಗಲಿದೆ. ದೇಶ ಮೊದಲು ಎನ್ನುವುದು ನಮ್ಮ ನೀತಿ. ದೇಶ ಮೊದಲು ಎನ್ನುವ ನಂಬಿಕೆ ಕಾಂಗ್ರೆಸ್‌ಗೆ (Congress) ಇಲ್ಲ. ಜಾತಿ ಮೊದಲು, ಕುಟುಂಬ ಮೊದಲು, ಮತ ಮೊದಲು ಎನ್ನುವ ತತ್ವ ಕಾಂಗ್ರೆಸ್‌ನದ್ದು. ವಿಭಜಿಸಿ ಆಳುವುದು ಕಾಂಗ್ರೆಸ್ ಪಕ್ಷದ ನೀತಿ. ಬಿಜೆಪಿ (BJP) ಯಾವುದೇ ಯೋಜನೆಗಳಲ್ಲಿ ಜಾತಿ ತಾರತಮ್ಯ ಮಾಡಲಿಲ್ಲ. ಎಲ್ಲಾ ಅರ್ಹರಿಗೆ ಯೋಜನೆ ಲಾಭವಾಗುವಂತೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಚಾಲಕರ ಮುಷ್ಕರ – ರಾತ್ರಿಯಿಡೀ ನಡೆದುಕೊಂಡೇ ಹೋಗಿ ವಧು ಮನೆ ಸೇರಿದ ವರನ ಕುಟುಂಬ 

    ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ಜಿಲೇಬಿ ಕಂಡರೆ ಆಗುವುದಿಲ್ಲ ಎನ್ನುವ ಮಾತಿತ್ತು. ಜಿಲೇಬಿ ಕಂಡರೆ ಅವರಿಗೆ ಅಲರ್ಜಿ. ಜನಮನ್ನಣೆ ಪಡೆದ ನೇತೃತ್ವ ನಮ್ಮದು. ಬಡವರಿಗೆ ನಿಯತ್ತಿರುವ ಕಾರಣಕ್ಕೆ ಬಡವರಿಗೆ ಆದ್ಯತೆ ನೀಡಿದೆವು. ಹೀಗಾಗಿ ಕಿಸಾನ್ ಸಮ್ಮಾನ್ (Kisan Samman) ತಂದಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: `ಕೈ’ ಟಿಕೆಟ್ ಆಕಾಂಕ್ಷಿಯಿಂದ ಸೀರೆ, ತವಾ ವಿತರಣೆ- ಉಡುಗೊರೆ ಸಿಗದ ಮಹಿಳೆಯರು ಗರಂ

  • ಕಾಂಗ್ರೆಸ್, ಜೆಡಿಎಸ್‌ನಲ್ಲಿ ಲೀಡರ್‌ಶಿಪ್ ಡಿಎನ್‌ಎ ಮೂಲಕ ಬರುತ್ತದೆ: ಸಿ.ಟಿ ರವಿ

    ಕಾಂಗ್ರೆಸ್, ಜೆಡಿಎಸ್‌ನಲ್ಲಿ ಲೀಡರ್‌ಶಿಪ್ ಡಿಎನ್‌ಎ ಮೂಲಕ ಬರುತ್ತದೆ: ಸಿ.ಟಿ ರವಿ

    ವಿಜಯಪುರ: ಕಾಂಗ್ರೆಸ್ (Congress)  ಮತ್ತು ಜೆಡಿಎಸ್‌ನಲ್ಲಿ (JDS) ಲೀಡರ್‌ಶಿಪ್ ಡಿಎನ್‌ಎ ಮೂಲಕ ಬರುತ್ತದೆ. ಈ ಎರಡೂ ಪಕ್ಷದಲ್ಲೂ ಅನುವಂಶೀಯ ನಾಯಕತ್ವವಿದೆ. ಈ ಎರಡೂ ಪಕ್ಷಗಳಿಗೂ ಪ್ರಜಾಪ್ರಭುತ್ವದ (Democracy) ಮೇಲೆ ನಂಬಿಕೆ ಇಲ್ಲ. ಆದರೆ ಬಿಜೆಪಿಗೆ (BJP) ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿದೆ ಎಂದು ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಹೇಳಿದರು.

    ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿಯಲ್ಲಿ ಸೋಮವಾರ ಬಿಜೆಪಿ ವಿಜಯಸಂಕಲ್ಪ ಯಾತ್ರೆ (Vijaya Sankalpa Yatra) ಕೈಗೊಂಡಿದ್ದು, ಯಾತ್ರೆಗೂ ಮುನ್ನ ಬಿಜೆಪಿ ನಾಯಕರ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಬಿಜೆಪಿ ಪಕ್ಷವು ಜನ ಸಾಮಾನ್ಯರ ನೇತೃತ್ವದಿಂದ ಬೆಳೆದು ಬಂದಿದ್ದು, ನೀತಿಗೆ ಅಂಟಿಕೊಂಡಿದೆ. ರಾಜೀವ್ ಗಾಂಧಿ (Rajiv Gandhi) ಇದ್ದ ಸಂದರ್ಭದಲ್ಲಿ ಕಳ್ಳರೆಲ್ಲಾ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಇದು ರಾಜೀವ್ ಗಾಂಧಿಯವರಿಗೂ ಗೊತ್ತಿತ್ತು. ನಮಗೆ ನಿಯತ್ತಿದೆ. ನಾವು ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ಮತಗಳನ್ನು ಕೇಳುತ್ತೇವೆ. ಪ್ರಣಾಳಿಕೆಯಲ್ಲಿ ಹೇಳದೇ ಇರುವಂತಹ ಯೋಜನೆಗಳನ್ನು ನಾವು ಕೊಟ್ಟಿದ್ದೇವೆ. ಅಲ್ಲದೇ ಅದರ ಕೆಲಸಗಳನ್ನು ಯಾರಿಗೂ ಹೇಳದೆ ಮಾಡಿ ತೋರಿಸಿದ್ದೇವೆ ಎಂದರು. ಇದನ್ನೂ ಓದಿ: ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ 

    ಇದೇ ವೇಳೆ ಮಾಜಿ ಸಚಿವ ಎಂ.ಬಿ ಪಾಟೀಲ್ (M.B.Patil) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಹಿಂದೆ ಕೆರೆ ತುಂಬುವ ಯೋಜನೆಯನ್ನು ನಿಮ್ಮದೇ ಸರ್ಕಾರ ತಿರಸ್ಕಾರ ಮಾಡಿತ್ತು. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೀರಾವರಿ ಸಚಿವರಾಗಿದ್ದಾಗ ಕೆರೆ ತುಂಬುವ ಯೋಜನೆಗೆ ಅನುಮತಿ ನೀಡಿರಲಿಲ್ಲ. ಬಿಜೆಪಿ ಸರ್ಕಾರ ಕೆರೆ ತುಂಬುವ ಯೋಜನೆಯನ್ನು ಜಾರಿಗೆ ತಂದಿದೆ. ಇದೀಗ ನೀವೂ ಅದೇ ಯೋಜನೆಯ ಹೆಸರಿನಲ್ಲಿ ಫೋಟೋ ಹಾಕಿಕೊಳ್ಳುತ್ತೀರಿ ಎಂದು ಹೇಳಿದರು. ಇದನ್ನೂ ಓದಿ: Special- ‘ಆಸ್ಕರ್’ ಪ್ರಶಸ್ತಿ ಪಡೆದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದ ವಿಶೇಷತೆ ಏನು?

    ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರೆಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟ್ ಅವಧಿ ಮುಗಿದಿದೆ. ಇನ್ನು ವಾರೆಂಟಿ ಕಾರ್ಡ್ ನೀಡಿ ಏನು ಪ್ರಯೋಜನ? ಎಲ್ಲಾ ಕಡೆಯೂ ಕಾಂಗ್ರೆಸ್ ಪಕ್ಷ ತಿರಸ್ಕಾರಕ್ಕೆ ಒಳಗಾಗುತ್ತಿದೆ. ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು. ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದು ಕಿಡಿಕಾರಿದರು. ಇದನ್ನೂ ಓದಿ: `ಕಾಂತಾರ 2’ಗೆ ಚಾಲನೆ ಸಿಗುವ ಮುನ್ನವೇ ಹೊಸ ಸಿನಿಮಾ ನಿರ್ಮಾಣದತ್ತ ರಿಷಬ್ ಶೆಟ್ಟಿ 

    ಸಿದ್ದರಾಮಯ್ಯ (Siddaramaiah) ಏನು ಹೇಳುತ್ತಾರೋ ಅದು ಉಲ್ಟಾ ಆಗುತ್ತದೆ. ಈ ಹಿಂದೆ ಮೋದಿ ಪ್ರಧಾನಿ ಆಗುವುದಿಲ್ಲ ಎಂದಿದ್ದರು, ಆದರೆ ಮೋದಿ (Narendra Modi) ಪ್ರಧಾನಿಯಾದರು. ಯಡಿಯೂರಪ್ಪ (Yediyurappa) ಸಿಎಂ ಆಗುವುದಿಲ್ಲ ಎಂದರು, ಆದರೆ ಯಡಿಯೂರಪ್ಪ ಸಿಎಂ ಆದರು. ಹೀಗಾಗಿ ಇನ್ನುಮುಂದೆ ಸಿದ್ದರಾಮಯ್ಯನವರು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಪ್ರಚಾರ ಮಾಡಬೇಕು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ರಾಜಕೀಯದಿಂದ ದೂರವಿರಲು ಕಾರಣರಾದ ಆ ವ್ಯಕ್ತಿ ಬಗ್ಗೆ ಬಹಿರಂಗಪಡಿಸಿದ ರಜನಿಕಾಂತ್

    ಮಂಡ್ಯದಲ್ಲಿ ಉರಿಗೌಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾದ್ವಾರ ತೆರವು ಮಾಡಿದ್ದು ಅಕ್ಷಮ್ಯ ಅಪರಾಧ. ದೊಡ್ಡ ನಂಜೇಗೌಡ ಹಾಗೂ ಉರಿಗೌಡ ಅವರು ಟಿಪ್ಪುವನ್ನು ಹತ್ಯೆ ಮಾಡಿದರು. ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು. ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ(Mandya) ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ದೆಹಲಿ ಶಾಸಕರ ಸಂಬಳ ಭರ್ಜರಿ ಹೆಚ್ಚಳ

  • ಭಾರತ ಎಂದು ಹೆಸರು ಕೊಟ್ಟದ್ದೇ ಮುಸಲ್ಮಾನ ದೊರೆಗಳು ಎಂದು ಕಾಂಗ್ರೆಸ್ ಹೇಳಿದರೂ ಅಚ್ಚರಿಯಿಲ್ಲ: ಸಿ.ಟಿ.ರವಿ ವ್ಯಂಗ್ಯ

    ಭಾರತ ಎಂದು ಹೆಸರು ಕೊಟ್ಟದ್ದೇ ಮುಸಲ್ಮಾನ ದೊರೆಗಳು ಎಂದು ಕಾಂಗ್ರೆಸ್ ಹೇಳಿದರೂ ಅಚ್ಚರಿಯಿಲ್ಲ: ಸಿ.ಟಿ.ರವಿ ವ್ಯಂಗ್ಯ

    ಚಿಕ್ಕೋಡಿ: ಭಾರತ (Bharatha) ಎಂದು ಹೆಸರು ಕೊಟ್ಟದ್ದೇ ಮುಸಲ್ಮಾನ ದೊರೆಗಳು ಎಂದು ಕಾಂಗ್ರೆಸ್ ಮುಖಂಡರು (Congress Leaders) ಹೇಳಿದರೂ ಅಚ್ಚರಿಯಿಲ್ಲ ಎಂದು ಶಾಸಕ ಹಾಗೂ ಬಿಜೆಪಿ (BJP) ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ವ್ಯಂಗ್ಯವಾಡಿದರು.

    ಉಡುಪಿ ಕೃಷ್ಣ ಮಠ (Udupi Krishna Math) ಜಾಗ ಕೊಟ್ಟದ್ದು ಮುಸ್ಲಿಂ ರಾಜರು ಎಂಬ ಕಾಂಗ್ರೆಸ್ ಮುಖಂಡ ಮಿಥುನ್ ರೈ(Mithun Rai) ಹೇಳಿಕೆಗೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಅಂಕಲಿ (Ankali) ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು: ಮಿಥುನ್ ರೈ ವಿವಾದ

    ಬರೀ ಕೃಷ್ಣ ಮಠ ಅಲ್ಲ, ಭಾರತ ಎಂದು ಹೆಸರು ಕೊಟ್ಟದ್ದು ಮುಸಲ್ಮಾನ ದೊರೆಗಳು. ಮುಸಲ್ಮಾನ ದೊರೆಗಳೇ ರಾಮ ಮಂದಿರ ನಿರ್ಮಾಣ ಮಾಡಿದ್ದು. ಮುಸಲ್ಮಾನ ದೊರೆಗಳೇ ಕಾಶಿ ವಿಶ್ವನಾಥನ ಪ್ರತಿಷ್ಠಾಪನೆ ಮಾಡಿದ್ದು ಎಂದು ಹೇಳಿದರೂ ಅಚ್ಚರಿ ಪಡಬೇಕಿಲ್ಲ. ಸುಳ್ಳು ಮತ್ತು ಕಾಂಗ್ರೆಸ್ (Congress) ಒಂದೇ ನಾಣ್ಯದ ಮುಖಗಳು. ಸುಳ್ಳನ್ನು ಸತ್ಯದ ರೀತಿಯಲ್ಲಿ ಹೇಳುವುದು ಅವರಿಗಿರುವ ಕಾಯಿಲೆ ಎಂದು ಟೀಕೆ ಮಾಡಿದರು. ಇದನ್ನೂ ಓದಿ: ಮಾನವ ಹಕ್ಕುಗಳನ್ನು ಬಳಸಿ ನಮ್ಮಲ್ಲಿ ಇರಲು ಸಾಧ್ಯವಿಲ್ಲ: ಅಕ್ರಮ ವಲಸಿಗರ ನಿಯಂತ್ರಣಕ್ಕೆ ಮುಂದಾದ ಬ್ರಿಟನ್

    ಸಿ.ಟಿ.ರವಿ ನೀಡಿದ್ದ ಸೀರೆ ಸುಟ್ಟು ಹಾಕಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರೆಲ್ಲಾ ಡ್ರಾಮಾ (Drama) ಮಾಡುತ್ತಾರೆ. ಆ ರೀತಿ ನಾವು ಸೀರೆ ಕೊಡುತ್ತಿಲ್ಲ. ಅವೆಲ್ಲಾ ಕಾಂಗ್ರೆಸ್‌ನವರ ಹಳೇ ಡ್ರಾಮಾ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಹೆಂಡತಿ ಕೋಪ ಮಾಡಿಕೊಂಡಿದ್ದಾಳೆ – ಅತ್ತೆ ಮನೆಯಲ್ಲಿ ಹೋಳಿ ಆಚರಿಸೋಕೆ 10 ದಿನ ರಜೆ ಕೇಳಿದ ಇನ್ಸ್‌ಪೆಕ್ಟರ್‌

  • ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಮೌನವಹಿಸಿದ್ದು ಯಾಕೆ: ಸಿದ್ದು ಪ್ರಶ್ನೆ

    ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಮೌನವಹಿಸಿದ್ದು ಯಾಕೆ: ಸಿದ್ದು ಪ್ರಶ್ನೆ

    ಬೆಂಗಳೂರು: ಮಾಂಸಹಾರ ತಿಂದು ದೇವಸ್ಥಾನಕ್ಕೆ ಹೋದ ಸಿ.ಟಿ.ರವಿ (C.T.Ravi) ವಾವದವನ್ನ ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಈಗ ಮೌನವಾಗಿರುವುದಕ್ಕೆ ಅವರು ಗರಂ ಆಗಿದ್ದಾರೆ.

    ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ” ಎಂಬ ಸಿ.ಟಿ.ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಕುಟುಕಿದ್ದಾರೆ.  ಇದನ್ನೂ ಓದಿ: ಕೊರೊನಾಕ್ಕೆ ಹೆದರಿ 3 ವರ್ಷದಿಂದ ಮನೆಯೊಳಗೆ ಅಪ್ರಾಪ್ತ ಮಗನೊಂದಿಗೆ ತಾನು ಬಂಧಿಯಾದ ತಾಯಿ

    ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಬೇಕು. ಬೇರೆಯವರ ದೂಷಣೆಯಲ್ಲಿ ನಿರತರಾಗಿರುವ ಸಿ.ಟಿ.ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ವ್ಯಂಗ್ಯವಾಡಿದ್ದಾರೆ.

    ನಾನು ಮೀನು ತಿಂದು ದೇವಸ್ಥಾನಕ್ಕೆ (Temple) ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ರಾಜ್ಯ ಬಿಜೆಪಿ (BJP) ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ.ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ.

    ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ರಾಜ್ಯ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಪಾಲಿಕೆಯಲ್ಲಿ ಹೈಡ್ರಾಮಾ – ಪರಸ್ಪರ ಹೊಡೆದಾಡಿಕೊಂಡ ಬಿಜೆಪಿ, ಆಪ್ ಸದಸ್ಯರು

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭವಾನಿಯವರಿಗೆ ಬಿಜೆಪಿ ಸೇರಲು ಆಹ್ವಾನಿಸಿದ್ದು ತಮಾಷೆಗೆ; ಅವರಿಗೆ ಹಾಸನ ಸುರಕ್ಷಿತ ಅಲ್ಲ – ಸಿ.ಟಿ.ರವಿ

    ಭವಾನಿಯವರಿಗೆ ಬಿಜೆಪಿ ಸೇರಲು ಆಹ್ವಾನಿಸಿದ್ದು ತಮಾಷೆಗೆ; ಅವರಿಗೆ ಹಾಸನ ಸುರಕ್ಷಿತ ಅಲ್ಲ – ಸಿ.ಟಿ.ರವಿ

    ಬೆಂಗಳೂರು: ಭವಾನಿ (Bhavani Revanna) ಅವರಿಗೆ ಬಿಜೆಪಿ (BJP) ಸೇರಲು ಆಹ್ವಾನಿಸಿದ್ದು ತಮಾಷೆಗೆ. ಅವರಿಗೆ ಹಾಸನ (Hassan) ಸುರಕ್ಷಿತ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಸ್ಪಷ್ಟಪಡಿಸಿದ್ದಾರೆ.

    ನಾನು ಹೇಳಿದ್ದು ತಮಾಷೆಗೆ, ಸೀರಿಯಸ್ ಆಗ್ಬೇಡಿ. ಇದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಇವತ್ತಿನ ವರ್ಷನ್. ಭವಾನಿ ರೇವಣ್ಣ ವರ್ಸಸ್ ಹೆಚ್.ಪಿ.ಸ್ವರೂಪ್ ಮಧ್ಯೆ ನಡೆಯುತ್ತಿರುವ ಜೆಡಿಎಸ್ ಟಿಕೆಟ್ ಫೈಟ್ ಬಗ್ಗೆ ನಿನ್ನೆಯಷ್ಟೇ ಹಾಸನದಲ್ಲಿ ಮಾತಾಡಿದ್ದ ಸಿ.ಟಿ.ರವಿ, ಭವಾನಿ ರೇವಣ್ಣ ಅವರನ್ನು ಬಿಜೆಪಿಗೆ ಆಹ್ವಾನ ಕೊಟ್ಟಿದ್ರು. ಭವಾನಿ ರೇವಣ್ಣ ಅವರು ಒಪ್ಪಿದರೆ ಹೊಳೆನರಸೀಪುರದಲ್ಲಿ ಬಿಜೆಪಿ ಟಿಕೆಟ್ ಕೊಡೋದಾಗಿ ಸಿ.ಟಿ.ರವಿ ಹೇಳಿಕೆ ಕೊಟ್ಟಿದ್ರು. ಆದ್ರೆ ಇಂದು ಬೆಂಗಳೂರಿನಲ್ಲಿ ಮಾತಾಡಿರುವ ಸಿ.ಟಿ.ರವಿ, ನಾನು ಹೇಳಿದ್ದು ಶುದ್ಧ ತಮಾಷೆಗಾಗಿ. ಹಾಗಂತ ಅದನ್ನು ಗಂಭೀರವಾಗಿ ತೆಗೆದುಕೊಂಡು ಟಿಕೆಟ್ ಕೊಡಿ ಅಂತಾ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ನಾನೇ ಅಭ್ಯರ್ಥಿ ಅಂತಾರೆ, ಅವ್ರಿಗೇನು ಹೇಳೋರು ಕೇಳೋರಿಲ್ವಾ: ಈಶ್ವರಪ್ಪ ಪ್ರಶ್ನೆ

    ಮುಂದುವರೆದು ಮಾತಾಡಿದ ಅವರು, ನಾನು ಹೇಳಿದ್ದು ತಮಾಷೆಗೆ. ಆದರೆ ನನ್ನನ್ನು ಮನೆ ಮುರುಕ ಎಂದು ಬಿಂಬಿಸುತ್ತಿದ್ದಾರೆ. ನನ್ನ ಹೇಳಿಕೆಯನ್ನು ಯಾರೂ ಗಂಭೀರವಾಗಿ ಪರಿಗಣಿಸಬಾರದು. ಭವಾನಿಯವರಿಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ಕೂಡ ನಡೆದಿಲ್ಲ. ನಾನು ಜೆಡಿಎಸ್ ಹೈಕಮಾಂಡ್ ಅಲ್ಲ, ಅವರ ಮನೆಯಲ್ಲಿಯೇ ಅವರ ಹೈಕಮಾಂಡ್ ಇದ್ದಾರೆ. ಕುಮಾರಸ್ವಾಮಿ ಬೇಕಾದರೆ ಇದು ಮನೆ ಜಗಳ ಎಂದು ಹೇಳಬಹುದು. ನಾನು ಹಾಗೆ ಹೇಳಕ್ಕಾಗಲ್ಲ ಅಂತ ಸಿ.ಟಿ.ರವಿ ಹೇಳಿದ್ದಾರೆ.

    ಭವಾನಿ ರೇವಣ್ಣ ಅವರಿಗೆ ಹಾಸನ ಕ್ಷೇತ್ರ ಸುರಕ್ಷಿತವಲ್ಲ
    ಭವಾನಿ ಅಕ್ಕ ಅವರಿಗೆ ಹಾಸನ ಕ್ಷೇತ್ರ ಸುರಕ್ಷಿತವಲ್ಲ‌ ಎಂದು ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ. ಪ್ರೀತಂ ಗೌಡ ವಿರುದ್ಧ ಯಾರೇ ಸ್ಪರ್ಧಿಸಿದರೂ ಪ್ರೀತಂ ಗೆಲುವು ನಿಶ್ಚಿತ. ಹಾಸನದಲ್ಲಿ ಪ್ರೀತಂ ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಪ್ರೀತಂ ಜನಪ್ರಿಯತೆ ಇತ್ತೀಚೆಗೆ ಹೆಚ್ಚಾಗಿದೆ. ಜನರ ಬೆಂಬಲ ಪ್ರೀತಂ ಪರ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಭಯ ಹುಟ್ಟಿದೆ, ಹೀಗಾಗಿ ರಾಜ್ಯಕ್ಕೆ ಮೋದಿ-ಶಾರನ್ನು ಕರೆಸುತ್ತಿದ್ದಾರೆ : ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿ.ಟಿ ರವಿ ಒಬ್ಬ ಕುಡುಕ, ಗಾಂಜಾನೂ ಹೊಡಿತಾರೆ: ಬಿ.ಕೆ ಹರಿಪ್ರಸಾದ್

    ಸಿ.ಟಿ ರವಿ ಒಬ್ಬ ಕುಡುಕ, ಗಾಂಜಾನೂ ಹೊಡಿತಾರೆ: ಬಿ.ಕೆ ಹರಿಪ್ರಸಾದ್

    ಕಾರವಾರ: ಸಿ.ಟಿ ರವಿ (C.T Ravi) ಕುಡಿದಾಗ ಸ್ಪಲ್ಪ ಮಾತನಾಡುತ್ತಾರೆ. ಗಾಂಜಾನೂ ಹೊಡಿತಾರೆ ಅವರ ಬಗ್ಗೆ ಟಿಪ್ಪಣಿ ಮಾಡೋದು ತಪ್ಪಾಗುತ್ತೆ. ಕುಡಿದು ನಮ್ಮ ಪಕ್ಷಕ್ಕೆ ಸೇರಿದರೂ ಸೇರಬಹುದು ಎಂದು ಕಾಂಗ್ರೆಸ್ (Congress) ಮುಖಂಡ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ (B.K Hariprasad) ವ್ಯಂಗ್ಯವಾಡಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಿಜೆಪಿಯವರಿಗೆ ಪ್ರಜಾಪಭುತ್ವದಲ್ಲಿ ಖರೀದಿ ಮಾಡುವ ಕೆಪಾಸಿಟಿ ಇದೆ. ಎಮ್‍ಎಲ್‍ಎಗಳನ್ನು ಖರೀದಿ ಮಾಡ್ತಾರೆ. ಹಾಗಾಗಿ ಜನರ ಆಶೀರ್ವಾದ ಬಿಜೆಪಿಗೆ ಇಲ್ಲ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    ಜೆಡಿಎಸ್ ಜಾಯಿಂಟ್ ಫ್ಯಾಮಿಲಿ ಇದ್ದ ಹಾಗೆ ಹಾಗಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ಕೆಲವು ಪ್ರಕ್ರಿಯೆಗಳು ಇವೆ. ಆ ಪ್ರಕ್ರಿಯೆ ಮುಗಿದ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: `ನಂದಿನಿ’ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ HDK ಎಚ್ಚರಿಕೆ

    Live Tv
    [brid partner=56869869 player=32851 video=960834 autoplay=true]

  • ಕಾಫಿನಾಡಲ್ಲಿ ಮನೆ-ಮನೆಗೆ ತೆರಳಿ ಸಿ.ಟಿ.ರವಿ ಭಿಕ್ಷಾಟನೆ

    ಕಾಫಿನಾಡಲ್ಲಿ ಮನೆ-ಮನೆಗೆ ತೆರಳಿ ಸಿ.ಟಿ.ರವಿ ಭಿಕ್ಷಾಟನೆ

    ಚಿಕ್ಕಮಗಳೂರು: ದತ್ತಜಯಂತಿ (Datta Jayanti) ಹಿನ್ನೆಲೆ ಶಾಸಕ, ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T Ravi) ಮನೆ-ಮನೆಗೆ ತೆರಳಿ ಭಿಕ್ಷಾಟನೆ (Ritual Begging) ನಡೆಸಿದ್ದಾರೆ.

    ನಗರದ ನಾರಾಯಣಪುರ, ರಾಘವೇಂದ್ರ ಮಠ, ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ್ದಾರೆ. ಪಡಿ ಸಂಗ್ರಹಕ್ಕೆ ಮನೆಗೆ ಬಂದ ದತ್ತಮಾಲಾಧಾರಿಗಳಿಗೆ ಸಾರ್ವಜನಿಕರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವೀಳ್ಯದೆಲೆ ಅಡಿಕೆ-ಬೆಲ್ಲ ನೀಡಿದರು. ಇಂದು ಮನೆಮನೆಗೆ ತೆರಳಿ ಪಡಿ ಸಂಗ್ರಹಿಸಿದ ದತ್ತಮಾಲಾಧಾರಿಗಳು ನಾಳೆ ಇರುಮುಡಿ ರೂಪದಲ್ಲಿ ಅದನ್ನು ದತ್ತಪೀಠಕ್ಕೆ ಕೊಂಡೊಯ್ದು ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್ ಸಿಬ್ಬಂದಿ ಉದ್ಧಟತನ – ಗಾಯಾಳುವನ್ನು ಅಪಘಾತದ ಸ್ಥಳದಲ್ಲೇ ಬಿಟ್ಟು ವಾಪಸ್

    ಪಡಿ ಸಂಗ್ರಹಕ್ಕೆ ಶಾಸಕ ಸಿ.ಟಿ. ರವಿಗೆ 20ಕ್ಕೂ ಹೆಚ್ಚು ಮಾಲಾಧಾರಿಗಳು ಸಾಥ್ ನೀಡಿದ್ದಾರೆ. ದತ್ತಪೀಠಕ್ಕೆ ಸಚಿವ ಸುನಿಲ್ ಕುಮಾರ್ (Sunil Kumar) ಭೇಟಿ ನೀಡಿ ದತ್ತಪಾದುಕೆ ದರ್ಶನ ಮಾಡಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷದ ದತ್ತಜಯಂತಿ ಅತ್ಯಂತ ಸಂತೋಷ ಹಾಗೂ ಸಂಭ್ರಮದಿಂದ ಕೂಡಿದೆ. ಇಷ್ಟು ದಿನ ದತ್ತಾತ್ರೇಯರ ಪಾದುಕೆ ದರ್ಶನ ಮಾಡಿಕೊಂಡು ಹೋಗುತ್ತಿದ್ದೇವು. ಆದರೆ, ಈ ವರ್ಷ ದತ್ತಪಾದುಕೆ ದರ್ಶನದ ಜೊತೆ ಹಿಂದೂ ಅರ್ಚಕರಿಂದ ಪೂಜೆ, ಮಂಗಳಾರತಿಯನ್ನು ನೋಡುವ ಭಾಗ್ಯ ಲಭಿಸಿದೆ. ಹಾಗಾಗಿ, ಈ ವರ್ಷದ ದತ್ತಜಯಂತಿ ಹಿಂದೂ ಸಮುದಾಯ ಮತ್ತು ದತ್ತಭಕ್ತರಿಗೆ ಅತ್ಯಂತ ಸಂತಸದ ದಿನ. ಹಲವು ವರ್ಷಗಳಿಂದ ನಮ್ಮ ಬೇಡಿಕೆ ಇದ್ದದ್ದೆ ದತ್ತಾತ್ರೇಯರ ಪಾದುಕೆಗಳಿಗೆ ಹಿಂದೂ ಅರ್ಚಕರಿಂದ ಪೂಜೆ ಜೊತೆ, ತ್ರಿಕಾಲ ಪೂಜೆ ಆಗಬೇಕು ಎಂದು ಬೇಡಿಕೆ ಇಟ್ಟಿದ್ದೆವು. ಅದರಿಂದ ಬಿಜೆಪಿ ಸರ್ಕಾರ ಇಂದು ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಿಸಿ ಹಿಂದೂ ಅರ್ಚಕರಿಂದ ಪೂಜೆ ನೋಡಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಹಿಂದೂ ಹುಲಿನೇ, ಮುಲ್ಲಾ ಅಂತ ಕರೆಯೋಕ್ಕಾಗಲ್ಲ: ಸಿ.ಟಿ ರವಿ

    ಇದು ಹಿಂದೂಬಾಂಧವರಿಗೆ ಅತ್ಯಂತ ಸಂಭ್ರಮದ ದಿನ. ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರಕ್ಕೂ ಅಧಿಕ ದತ್ತಭಕ್ತರಿಂದ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಹಾಗಾಗಿ, ಮುಂಜಾಗೃತ ಕ್ರಮವಾಗಿ ಶೋಭಾಯಾತ್ರೆ ತೆರಳುವ ಮಾರ್ಗದಲ್ಲಿ ಪಾರ್ಕಿಂಗ್ ಕ್ಯಾನ್ಸಲ್ ಮಾಡಿದ್ದು, ಬೆಳಗ್ಗೆಯಿಂದಲೂ ಪೊಲೀಸರು ಕಾವಲಿದ್ದು, ಖಾಕಿ ಪಡೆ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ರಾಮುಲ್ಲಾ ಖಾನ್‌ ಬಿರುದು ನಾವಲ್ಲ, ಜನರೇ ನೀಡಿದ್ದಾರೆ – ಸಿದ್ದುಗೆ ಬಿಜೆಪಿ ಟಾಂಗ್‌

    ಸಿದ್ರಾಮುಲ್ಲಾ ಖಾನ್‌ ಬಿರುದು ನಾವಲ್ಲ, ಜನರೇ ನೀಡಿದ್ದಾರೆ – ಸಿದ್ದುಗೆ ಬಿಜೆಪಿ ಟಾಂಗ್‌

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರನ್ನು ಸಿದ್ರಾಮುಲ್ಲಾ ಖಾನ್‌ (Sidramulla Khan) ಎಂದು ಕರೆದಿರುವ ಸಿ.ಟಿ.ರವಿ (C.T.Ravi) ಅವರ ಹೇಳಿಕೆಯನ್ನು ಬಿಜೆಪಿ (BJP) ಸಮರ್ಥಿಸಿಕೊಂಡಿದೆ. ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ ಎಂದು ಸರಣಿ ಟ್ವೀಟ್‌ಗಳ ಮೂಲಕ ಸಿದ್ದು ವಿರುದ್ಧ ಬಿಜೆಪಿ ಕಿಡಿಕಾರಿದೆ.

    ಬಿಜೆಪಿ ಟ್ವೀಟ್‌ನಲ್ಲೇನಿದೆ?
    ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ ಸಿದ್ದರಾಮಯ್ಯ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಇದನ್ನೂ ಓದಿ: ಸಿದ್ರಾಮುಲ್ಲಾ ಖಾನ್ ಹೇಳಿಕೆಯಿಂದ ಇಷ್ಟು ಉರಿಯುತ್ತೆ ಅಂದಿದ್ರೆ 10 ವರ್ಷದ ಮೊದಲೇ ಹೇಳ್ತಿದ್ದೆ – CT ರವಿ

    26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್‌ ಉನ್ನಿಕೃಷ್ಣನ್‌‌ರವರ ವೀರಗಾಥೆಯುಳ್ಳ “ಕರಾಳ ರಾತ್ರಿ” ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ಸಿದ್ದರಾಮಯ್ಯ, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ?

    ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್‌ ಭಯೋತ್ಪಾದನೆ ಎಂಬುದನ್ನು ಒಪ್ಪದ ಸಿದ್ದರಾಮಯ್ಯ, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್‌ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್‌ ಬ್ರಾಂಡ್ ಮಾಡಿರುವುದು. ಇದನ್ನೂ ಓದಿ: ಮೈದಾನ ಖಾಲಿ ಇದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ – ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ

    ಟಿಪ್ಪು ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’‌ ಎಕ್ಸ್‌ಪ್ರೆಸ್‌ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ ಸಿದ್ದರಾಮಯ್ಯ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ?

    ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ.

    ಕ್ಷಣವೂ ವಿವೇಚಿಸದೆ ತಲಾಖ್‌ ಎಂದು ಮಹಿಳೆಯರ ಬದುಕು ಬರ್ಬಾದ್‌ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ. ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೆ ಮತ್ತೇನೆಂದು ಕರೆದಾರು? ಇದನ್ನೂ ಓದಿ: ದೇಶದ್ರೋಹಿ ಚಟುವಟಿಕೆ ಮಾಡುವವರಿಗೆ ಮುಸ್ಲಿಂ ಮುಖಂಡರೇ ಬುದ್ಧಿ ಹೇಳಬೇಕು: ಬಿ.ವೈ.ರಾಘವೇಂದ್ರ

    ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ ಕಾಂಗ್ರೆಸ್‌ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು & ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ.

    ಕನ್ನಡಿಗರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್‌ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಮಾನವೀಯತೆ ಮೆರೆದ ಸಚಿವ ಬೈರತಿ ಬಸವರಾಜ್‌, ಸಿ.ಟಿ ರವಿ

    ಮಾನವೀಯತೆ ಮೆರೆದ ಸಚಿವ ಬೈರತಿ ಬಸವರಾಜ್‌, ಸಿ.ಟಿ ರವಿ

    ಹಾಸನ: ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದವರನ್ನು ಸಚಿವ ಬೈರತಿ ಬಸವರಾಜ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಹಾಸನ ಜಿಲ್ಲೆ ಚನ್ನರಾಯಪಟ್ಟಣದ ತಾಲ್ಲೂಕಿನ ಸಕಟಹಗೆರೆ ಗ್ರಾಮದ ಬಳಿ ಅಪರಿಚಿತ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿತ್ತು. ಇದೇ ವೇಳೆ ಬೆಂಗಳೂರಿನಿಂದ ಚನ್ನರಾಯಪಟ್ಟಣ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಯ ದೇವನೂರು ಕೆರೆಗೆ ಬಾಗಿನ ಅರ್ಪಿಸಲು ಸಚಿವ ಬೈರತಿ ಬಸವರಾಜ್‌ ತೆರಳುತ್ತಿದ್ದರು. ಸಚಿವರೊಂದಿಗೆ ಸಿ.ಟಿ.‌ರವಿ ಕೂಡ ಇದ್ದರು. ಇದನ್ನೂ ಓದಿ: ಮುಂಬೈ ತಾಜ್ ಹೋಟೆಲ್ ಮಾದರಿಯಲ್ಲೇ ಭೀಕರ ಗುಂಡಿನ ದಾಳಿ – 8 ನಾಗರಿಕರ ಬಲಿ

    ರಸ್ತೆಯಲ್ಲಿ ಅಪಘಾತ ನಡೆದಿರುವುದನ್ನು ಕಂಡ ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲು ತಮ್ಮ ಬೆಂಗಾವಲು ವಾಹನ ಕಳುಹಿಸಿಕೊಟ್ಟರು. ಗಾಯಾಳುಗಳನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು.

    ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]