Tag: c t ravi

  • ಬಿಜೆಪಿಯನ್ನ ಮೆಚ್ಚಿಸಲು ಸಿ.ಟಿ. ರವಿ, ಯತ್ನಾಳ್ ಹೇಳಿಕೆ: ಶ್ರೀನಿವಾಸ್ ಬಿವಿ

    ಬಿಜೆಪಿಯನ್ನ ಮೆಚ್ಚಿಸಲು ಸಿ.ಟಿ. ರವಿ, ಯತ್ನಾಳ್ ಹೇಳಿಕೆ: ಶ್ರೀನಿವಾಸ್ ಬಿವಿ

    ನವದೆಹಲಿ: ಬಿಜೆಪಿ ನಾಯಕರಾದ ಸಿ.ಟಿ.ರವಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಆಗಬೇಕೆಂದು ಬಟ್ಟೆ ಹೊಲಿಸಿಕೊಂಡಿದ್ದರು. ಆದರೀಗ ಮುಖ್ಯಮಂತ್ರಿ ಸ್ಥಾನ ಸಿಗದೆ ಅವರಿಗೆ ಬುದ್ಧಿ ಭ್ರಮಣೆ ಆಗಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಹುಚ್ಚ ಎನ್ನುವ ಬಗ್ಗೆ ನಾವು ಸರ್ಟಿಫಿಕೇಟ್ ಕೊಡಬೇಕಾದ ಅಗತ್ಯ ಇಲ್ಲ. ಬಿಜೆಪಿ ನಾಯಕರೇ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಹುಚ್ಚ ಎಂದು ಹೇಳುತ್ತಾರೆ. ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬುದ್ಧಿ ಭ್ರಮಣೆ ಆಗಿರುವ ಬಿಜೆಪಿ ನಾಯಕರಿಗೆ ಕೌನ್ಸೆಲಿಂಗ್ ಮಾಡಿಸಲಿ ಎಂದು ಮನವಿ ಮಾಡಿದರು. ಹಾಗಾಗಿ ಹತಾಶರಾಗಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿ ನಾಯಕರನ್ನು ಮೆಚ್ಚಿಸಲು ಆ ಮೂಲಕ ಪದವಿ ಗಳಿಸಲು ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ದೂರಿದರು.

    Srinivas B V

    ಸಿ.ಟಿ.ರವಿಯದ್ದು ಕುಟುಂಬ ರಾಜಕಾರಣ ಅಲ್ವಾ?: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ ಚಿಕ್ಕಮಗಳೂರು ಮಹಿಳಾ ಮೋರ್ಚಾ ಉಪಾಧ್ಯಕ್ಷರನ್ನಾಗಿ ಸಿ.ಟಿ. ರವಿ ಅವರ ಮಡದಿ ಪಲ್ಲವಿ ಅವರನ್ನು ನೇಮಕ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿಯಲ್ಲಿ ಸಮರ್ಥ ಮಹಿಳಾ ಕಾರ್ಯಕರ್ತರು ಇರಲಿಲ್ಲವೇ? ಸಿ.ಟಿ.ರವಿ ಪತ್ನಿ ನೇಮಕ ಕುಟುಂಬ ರಾಜಕಾರಣ ಅಲ್ಲವೇ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಗಣೇಶೋತ್ಸವ ಆಚರಿಸ್ತೇವೆ, ಗುಂಡು ಹೊಡೆಯೋದಾದ್ರೆ ಹೊಡೆಯಿರಿ

    c t ravi

    ಸಿ.ಟಿ.ರವಿ ಕಾಂಗ್ರೆಸ್ ಪಕ್ಷ ದೇಶದಲ್ಲಿ 70 ವರ್ಷದಿಂದ ಏನೂ ಮಾಡಿಲ್ಲ ಎಂದು ಹೇಳುತ್ತಾರೆ. ಇದೇ ವೇಳೆ 217 ಯೋಜನೆಗಳಿಗೆ ಕಾಂಗ್ರೆಸ್ ನಾಯಕರ ಹೆಸರನ್ನು ಇಡಲಾಗಿದೆ ಎಂದು ಕೂಡ ಹೇಳುತ್ತಾರೆ. ಕಾಂಗ್ರೆಸ್ ಯೋಜನೆಗಳನ್ನು ನೆನಪಿಸಿಕೊಂಡ ಸಿ.ಟಿ ರವಿ ಅವರಿಗೆ ಧನ್ಯವಾದಗಳು. ಆದರೆ ಸಿ.ಟಿ. ರವಿ ಅವರು ಸೇರಿದಂತೆ ಬಿಜೆಪಿ ನಾಯಕರಿಗೆ ಮಾಜಿ ಪ್ರಧಾನ ಮಂತ್ರಿ ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇಂದಿರಾ ಗಾಂಧಿ ಅವರು ‘ಉಳುವವನೇ ಒಡೆಯ’ ಎಂಬ ಯೋಜನೆ ತಂದರು. ಉಳುವವನೇ ಒಡೆಯ ಯೋಜನೆಯ ಫಲಾನುಭವಿಗಳಲ್ಲಿ ಬಿಜೆಪಿಯವರೂ ಇದ್ದಾರೆ. ಇದು ಇಂದಿರಾ ಗಾಂಧಿ ಅವರು ನೀಡಿದ ಕೊಡುಗೆ ಎಂದು ಹೇಳಿದರು. ಇದನ್ನೂ ಓದಿ: ರಾಷ್ಟ್ರಧ್ವಜದ ಧ್ವಜದ ಮೇಲೆ ಬಿಜೆಪಿ ಬಾವುಟ – ಕಾಂಗ್ರೆಸ್, ಟಿಎಂಸಿ ಪ್ರಶ್ನೆ

    Basanagowda Patil Yatnal

    ಬಿಜೆಪಿ ಎಂದರೆ ಬೆಲೆ ಏರಿಕೆ!: ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆ ಆಗಿದ್ದಾರೆ. ಆದರೆ ಅವರು ಎಂದಾದರೂ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದಾರಾ ಅಥವಾ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಜಿಎಸ್ ಟಿ ದುಡ್ಡು ಬಂದಿಲ್ಲದಿರುವ ಬಗ್ಗೆ ಧ್ವನಿ ಎತ್ತಿದ್ದಾರಾ? ಕೇಂದ್ರ ಸರ್ಕಾರದ ಕಳಪೆ ನಿರ್ವಹಣೆಯಿಂದ ಕೊರೋನಾ ಸಂದರ್ಭದಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಧ್ವನಿ ಎತ್ತಿದ್ದಾರಾ? ಅಲ್ಲದೆ ದೇಶಾದ್ಯಂತ ಈಗ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100 ರೂಪಾಯಿಗಳ ಗಡಿ ದಾಟಿದೆ. ಅಡುಗೆ ಅನಿಲದ ಬೆಲೆ ಏರಿಕೆ ಆಗಿದ್ದು, ಬಿಜೆಪಿ ಎಂದರೆ ಬೆಲೆ ಏರಿಕೆ ಎನ್ನುವಂತಾಗಿದೆ. ಬಿಜೆಪಿ ನಾಯಕರು ಈ ವಿಷಯಗಳ ಬಗ್ಗೆ ಚರ್ಚೆ ಮಾಡಲಿ ಎಂದು ಶ್ರೀನಿವಾಸ್ ಬಿ.ವಿ. ತಾಕೀತು ಮಾಡಿದರು.

  • ರವಿಗೆ ನೆಹರು ಬಗ್ಗೆ ಏನು ಗೊತ್ತು, ಪ್ರಿಯಾಂಕ್ ಖರ್ಗೆಗೆ ವಾಜಪೇಯಿ ಆಡಳಿತ ಗೊತ್ತಾ : ವಿಶ್ವನಾಥ್ ಕಿಡಿ

    ರವಿಗೆ ನೆಹರು ಬಗ್ಗೆ ಏನು ಗೊತ್ತು, ಪ್ರಿಯಾಂಕ್ ಖರ್ಗೆಗೆ ವಾಜಪೇಯಿ ಆಡಳಿತ ಗೊತ್ತಾ : ವಿಶ್ವನಾಥ್ ಕಿಡಿ

    ಮೈಸೂರು: ಮಾಜಿ ಪ್ರಧಾನಿಗಳಾದ ನೆಹರು ಮತ್ತು ವಾಜಪೇಯಿ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ಕೊಟ್ಟ ಬಿಜೆಪಿ, ಕಾಂಗ್ರೆಸ್ ಮುಖಂಡರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹರಿಹಾಯ್ದಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನೆಹರು ಅಧಿಕಾರದ ಅವಧಿಗಿಂತ ಹೆಚ್ಚಿನ ಅವಧಿ ಜೈಲಿನಲ್ಲಿ ಕಳೆದರು. ಅವರ ಇಡೀ ಕುಟುಂಬವೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿತ್ತು. ಅವರ ಬಗ್ಗೆ ಸಿ.ಟಿ. ರವಿ ಅವರು ಅವಹೇಳನಕಾರಿ ಮಾತು ಯಾರು ಮೆಚ್ಚುವಂಥದಲ್ಲ. ಸಿ.ಟಿ. ರವಿಗೂ ಮತ್ತು ಬಿಜೆಪಿಗೂ ಈ ಮಾತು ಶೋಭೆ ತರುವುದಿಲ್ಲ ಎಂದಿದ್ದಾರೆ.

    ಸಿ.ಟಿ.ರವಿ ಅವರು ನೆಹರು ಬಗ್ಗೆ ಓದಿಕೊಳ್ಳಬೇಕು. ವಾಜಪೇಯಿ ಅವರು ನೆಹರು ನಿಧಾನರಾದಾಗ ಏನೂ ಭಾಷಣ ಮಾಡಿದ್ದರು ಎಂಬುದನ್ನು ಸಿ.ಟಿ. ರವಿ ಓದಿಕೊಳ್ಳಬೇಕು. ನೆಹರು ಅವರ ಬಗ್ಗೆ ವಾಜಪೇಯಿ ಅವರು ಚರಿತ್ರಾರ್ಹ ಭಾಷಣ ಮಾಡಿದ್ದಾರೆ. ನೆಹರು ಅವರ ಬಗ್ಗೆ ಇಷ್ಟು ಲಘುವಾಗಿ ಮಾತಾಡಬಾರದು. ನಿಮಗೆ ನೆಹರು ಬಗ್ಗೆ ಏನೂ ಗೊತ್ತಿದೆ? ಏನೂ ತಿಳಿದು ಕೊಂಡಿದ್ದೀರಿ? ಭಾರತದ ಆಸ್ಮಿತೆ ನೆಹರು. ಭಾರತದ ಗರ್ವದ ಸಂಕೇತ ನೆಹರು. ಇಂತಹ ನೆಹರು ಬಗ್ಗೆ ನೀವು ಕೀಳಾಗಿ ಮಾತಾಡುವುದು ತಪ್ಪು. ಪ್ರಚಾರಕ್ಕಾಗಿ, ಯಾರನ್ನೋ ಓಲೈಸಲು ನೀವು ರೀತಿ ಮಾತಾಡಬೇಡಿ ಎಂದು ತಿಳಿ ಹೇಳಿದ್ದಾರೆ.

    ವಾಜಪೇಯಿ ಅವರನ್ನು ಕಾಂಗ್ರೆಸ್ ನಾಯಕರು ಕುಡುಕ ಎಂದಿದ್ದಾರೆ. ಇದು ಖಂಡನೀಯ. ನೆಹರು, ವಾಜಪೇಯಿ ಇಬ್ಬರು ಈ ದೇಶದ ಶ್ರೇಷ್ಠ ಆಡಳಿಗಾರರು. ಪ್ರಿಯಾಂಕ್ ಖರ್ಗೆ ತಮ್ಮ ತಂದೆ ನೋಡಿ ಮಾತಾಡುವುದು ಕಲಿಯಲಿ ಎಂದಿದ್ದಾರೆ. ಕರ್ನಾಟಕದಲ್ಲಿ ಐದು ಜನ ಮಾಜಿ ಸಿಎಂಗಳಿದ್ದಾರೆ. ನೀವು ಯಾಕೆ ಇದನ್ನು ಖಂಡಿಸುತ್ತಿಲ್ಲ? ನಿಮ್ಮ ಪಕ್ಷದ ನಾಯಕರಿಗೆ ಬಾಯಿ ಮುಚ್ಚಿಕೊಂಡಿರಿ ಎಂದು ಹೇಳುವಷ್ಟು ನೈತಿಕತೆ ಕಳೆದು ಕೊಂಡಿದ್ದೀರಾ. ರಾಜಕಾರಣವನ್ನು ಎಲ್ಲಿಗೆ ತಂದು ನಿಲ್ಲಿಸುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:ಸಂವಿಧಾನದತ್ತ ಸಂಸದ ಸ್ಥಾನಕ್ಕೆ ಬೆಲೆ ಕೊಡದ ಶ್ರೀನಿವಾಸ್‍ರದ್ದು ವಿಕೃತ ಮನಸ್ಥಿತಿ: ಬಿಜೆಪಿ ಟೀಕೆ

    ನೆಹರು ಅವರ ತಂದೆ ತಮ್ಮ ಇಡೀ ಆಸ್ತಿಯನ್ನು ದೇಶಕ್ಕೆ ಬರೆದು ಕೊಟ್ಟರು. ಸಿ.ಟಿ. ರವಿ ಏನೂ ಕೊಟ್ಟಿದ್ದಾರೆ. ಐದು ಪೈಸೆಯನ್ನು ದೇಶಕ್ಕೆ ಕೊಟ್ಟಿದ್ದೀರಾ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

  • ಸಿದ್ದರಾಮಯ್ಯ ಕಾಲಜ್ಞಾನಿಯಲ್ಲ, ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ: ಸಿ.ಟಿ.ರವಿ ವ್ಯಂಗ್ಯ

    ಸಿದ್ದರಾಮಯ್ಯ ಕಾಲಜ್ಞಾನಿಯಲ್ಲ, ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ: ಸಿ.ಟಿ.ರವಿ ವ್ಯಂಗ್ಯ

    ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲಜ್ಞಾನಿಯಲ್ಲ. ಅವರು ಏನನ್ನ ಹೇಳಿದರೂ ಅದು ಉಲ್ಟಾ ಆಗುತ್ತೆ. ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

    ನಗರದ ಪ್ರೆಸ್ ಕ್ಲಬ್‍ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಅಪ್ಪನಾಣೆ ಮೋದಿ ಪ್ರಧಾನಿ ಆಗಲ್ಲ ಅಂತ ಹೇಳಿದ್ದರು. ಆದರೆ ಮೋದಿ ಎರಡು ಬಾರಿ ಪ್ರಧಾನಿ ಆದರು. ಅವರು ಏನು ಹೇಳಿದ್ರು. ಅಪ್ಪನಾಣೆ ಆಗಲ್ಲ ಅಂತ ಹೇಳಿದ್ದರು. ಅವರು ಏನು ಹೇಳುತ್ತಾರೋ ಅದು ಉಲ್ಟಾ ಆಗುತ್ತೆ. ನಾನು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇನೆ ಎಂದು ಹೇಳಿದ್ದರು. ಬಂದರಾ ಎಂದು ಮರು ಪ್ರಶ್ನೆ ಹಾಕಿದರು. 2018ರ ಚುನಾವಣೆಯ ಭಾಷಣವನ್ನ ನೀವು ನೆನಪಿಸಿಕೊಳ್ಳಿ ಎಂದರು.

    ಸಿದ್ದರಾಮಯ್ಯನವರು ಏನು ಹೇಳುತ್ತಾರೋ ಅದಕ್ಕೆ ತದ್ವಿರುದ್ಧ ಆಗುತ್ತೆ. ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂದರೆ ನೂರಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ. ಅವರು ಬಿಜೆಪಿ ಉಳಿಯಲ್ಲ ಅಂದರೆ ಈ ಅವಧಿ ಮುಗಿಸಿ ಮುಂದಿನ ಐದು ವರ್ಷಕ್ಕೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದರು. ಹಾಗಾಗಿ ಕೆಲವರ ಬಾಯಲ್ಲಿ ಮಚ್ಚೆ ಇರುತ್ತೆ ಎಂದು ಹೇಳುತ್ತಾರೆ. ಯಾಕಂದರೆ, ಅವರು ಹೇಳಿದ್ದು ನಿಜವಾಗುತ್ತೆ ಎಂದು ಹೇಳುತ್ತಾರೆ. ಸಿದ್ದರಾಮಯ್ಯನವರು ಏನು ಹೇಳುತ್ತಾರೋ ಅದು ಉಲ್ಟಾ ಆಗುತ್ತೆ ಅಂದರೆ ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ ಅದಕ್ಕೆ ಎಲ್ಲವೂ ಉಲ್ಟಾ ಆಗುತ್ತೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ತಂದೆ ಯಾರೆಂದು ಅನುಮಾನ ಇರೋರು ಸಾವರ್ಕರ್ ಯಾರೆಂದು ಕೇಳುತ್ತಾರೆ: ಸಿ.ಟಿ.ರವಿ

  • ಕಾಂಗ್ರೆಸ್ ಮರಿಮೊಮ್ಮಕ್ಕಳಿಗೆ ಸಾವರ್ಕರ್ ಅಂದ್ರೆ ಗೌರವ ಇಲ್ಲ- ಸುನಿಲ್ ಕುಮಾರ್

    ಕಾಂಗ್ರೆಸ್ ಮರಿಮೊಮ್ಮಕ್ಕಳಿಗೆ ಸಾವರ್ಕರ್ ಅಂದ್ರೆ ಗೌರವ ಇಲ್ಲ- ಸುನಿಲ್ ಕುಮಾರ್

    ಉಡುಪಿ: ವೀರ ಸಾವರ್ಕರ್‌ಗೆ ಕಾಂಗ್ರೆಸ್ ಯಾವತ್ತೂ ಗೌರವ ಕೊಟ್ಟಿಲ್ಲ. ಕಾಂಗ್ರೆಸ್‍ನ ಮರಿಮೊಮ್ಮಕ್ಕಳು ಕೂಡ ಅವರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

    ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಅಂಡಮಾನ್ ನಿಕೋಬಾರ್‌ನಲ್ಲಿರುವ ಸಾವರ್ಕರ್ ಹೆಸರನ್ನು ತೆಗೆದು ಹಾಕಲು ಕಾಂಗ್ರೆಸ್ ನಿರ್ಧರಿಸಿತ್ತು. ಮಣಿಶಂಕರ್ ಅಯ್ಯರ್ ಈ ಕೃತ್ಯಕ್ಕೆ ಮುಂದಾಗಿದ್ದರು. ಹೋರಾಟದಲ್ಲಿ ನೂರಾರು ದಿನಗಳ ಕಾಲ ಜೈಲಿನಲ್ಲಿದ್ದ ವ್ಯಕ್ತಿ ಸಾವರ್ಕರ್. ಸಾವರ್ಕರ್‌ಗೆ ಕಾಂಗ್ರೆಸ್ ಯಾವತ್ತೂ ಗೌರವ ಕೊಟ್ಟಿಲ್ಲ. ಕಾಂಗ್ರೆಸ್‍ನ ಮರಿಮೊಮ್ಮಕ್ಕಳು ಕೂಡ ಅವರಿಗೆ ಅಪಮಾನ ಮಾಡುತ್ತಿದ್ದಾರೆ. ಸ್ವಾತಂತ್ರ ಹೋರಾಟಗಾರರಿಗೆ ಇವರು ಗೌರವ ಕೊಡಲ್ಲ. ದೇಶ ಮೊದಲು ಎಂಬ ಕಲ್ಪನೆಯನ್ನು ಇವರಿಂದ ನಿರೀಕ್ಷಿಸಲು ಸಾಧ್ಯವೇ ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.  ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

    ಸಿಟಿ ರವಿ, ಪ್ರಿಯಾಂಕ್ ಖರ್ಗೆ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಯಾವುದೇ ಟೀಕೆಗಳು ಎಲ್ಲೆಯನ್ನು ಮೀರಬಾರದು. ಟೀಕಿಸುವಾಗ ಬಳಸುವ ಶಬ್ದ ಪ್ರಯೋಗಗಳನ್ನು ಜನ ಗಮನಿಸುತ್ತಾರೆ. ಮಾತಿನಿಂದ ನಮ್ಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ವಾಜಪೇಯಿ ವ್ಯಕ್ತಿತ್ವ ಯಾವ ರೀತಿಯದ್ದು ಎಲ್ಲರಿಗೂ ಗೊತ್ತಿದೆ. ಅಜಾತಶತ್ರು ಎಂದು ಅವರೇ ಅವರನ್ನು ಕರೆಸಿಕೊಂಡದ್ದಲ್ಲ. ಜನ ಅವರನ್ನು ಅಜಾತ ಶತ್ರು ಎಂದು ಕರೆಯುತ್ತಿದ್ದರು. ವಾಜಪೇಯಿ ಬಗ್ಗೆ ಮಾತನಾಡಿದರೆ ಅವರ ವ್ಯಕ್ತಿತ್ವ ತೋರಿಸುತ್ತದೆ. ವಾಜಪೇಯಿಗೆ ಇದರಿಂದ ಯಾವುದೇ ನಷ್ಟವಿಲ್ಲ. ಟೀಕಿಸುವ ಪ್ರತಿಯೊಬ್ಬರಿಗೂ ಈ ಮಾತು ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ವಾಜಪೇಯಿ ಹೆವೀ ಡ್ರಿಂಕರ್ – ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

  • ಕುಮಾರಸ್ವಾಮಿ ಅತ್ತೆ ಸಿಟ್ಟನ್ನು ಬೆಕ್ಕಿನ ಮೇಲೆ ತೋರಿಸುತ್ತಿದ್ದಾರೆ: ಸಿ.ಟಿ.ರವಿ

    ಕುಮಾರಸ್ವಾಮಿ ಅತ್ತೆ ಸಿಟ್ಟನ್ನು ಬೆಕ್ಕಿನ ಮೇಲೆ ತೋರಿಸುತ್ತಿದ್ದಾರೆ: ಸಿ.ಟಿ.ರವಿ

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅತ್ತೆ ಸಿಟ್ಟನ್ನು ಕೊತ್ತಿ ಮೇಲೆ ತೋರಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಅಧಿಕಾರ ಬಿಟ್ಟು ಪಕ್ಷದ ಕೆಲಸಕ್ಕೆ ಹೋಗಿದ್ದೇನೆ. ಅಧಿಕಾರದ ಸ್ವಾರ್ಥ ಇದ್ದಿದ್ದರೆ ಮಂತ್ರಿಯಾಗಿಯೇ ಇರುತ್ತಿದ್ದೆ. ಅವರು ಅನುದಾನ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ಅನುದಾನವನ್ನು ಮುಖ್ಯಮಂತ್ರಿ ಬಳಿ ಕೇಳಲಿ. ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಕೇಳಲಿ. ಆದರೆ ಅವರು ನನ್ನ ಹೆಸರನ್ನು ಏಕೆ ಬಳಸುತ್ತಿದ್ದಾರೆ ನನಗೆ ಅರ್ಥ ಆಗುತ್ತಿಲ್ಲ ಎಂದಿದ್ದಾರೆ.

    ಅವರ ಗೆಲುವಿಗೆ ನಮ್ಮ ಶ್ರಮವೂ ಸ್ವಲ್ಪ ಇದೆ. ನನ್ನ ಕುಟುಂಬದ ವೋಟು ಇರುವುದು ಮೂಡಿಗೆರೆ ಕ್ಷೇತ್ರದಲ್ಲಿಯೇ. ನಾವು ಬಿಜೆಪಿ ಬಿಟ್ಟು ಬೇರೆಯವರಿಗೆ ವೋಟು ಹಾಕಿಲ್ಲ. ಅವರು ಅಂಕಿ-ಅಂಶ ತೆಗೆಸಿ ನೋಡಲಿ. ನಾವು ಮತ್ರಿಯಾಗಿದ್ದಾಗ ಅತೀ ಹೆಚ್ಚು ಅತಿವೃಷ್ಠಿಯ ಅನುದಾನ ಅವರಿಗೆ ನೀಡಿದ್ದು. ನಾನೇ ಅಂಕಿ-ಅಂಶ ತೆಗೆಸಿ ಕೊಡಿಸುತ್ತೇನೆ. ಅತೀ ಹೆಚ್ಚು ಅನುದಾನ ಮೂಡಿಗೆರೆ ಹಾಗೂ ಶೃಂಗೇರಿಗೆ ನೀಡಲಾಗಿದ್ದು, ನಂತರ ಚಿಕ್ಕಮಗಳೂರಿಗೆ ನೀಡಲಾಗಿದೆ. ನಾನು ಹೇಳಿದ್ದು ಸುಳ್ಳಾದರೆ ಆಮೇಲೆ ಪ್ರಶ್ನೆ ಮಾಡಲಿ. ಇತ್ತೀಚೆಗೆ ಆರ್.ಡಿ.ಪಿ.ಆರ್.ನಲ್ಲೂ ಅತೀ ಹೆಚ್ಚು ಗ್ರ್ಯಾಂಟ್ ಕೊಟ್ಟಿದ್ದು ಮೂಡಿಗೆರೆಗೆ. ಅದು ಅಧಿಕೃತವಾಗಿರುವ ಅಂಶ. ಅವರು ಮನಸಲ್ಲಿ ಬೇರೆ ಏನೋ ಇಟ್ಟುಕೊಂಡು ಈಗ ಇಲ್ಲಿ ಏನೋ ಮಾತನಾಡುತ್ತಿದ್ದಾರೆ ಎಂದು ಅನ್ನಿಸುತ್ತಿದೆ ಎಂದು ಹೇಳಿದ್ದಾರೆ.

    ಚಿಕ್ಕಮಗಳೂರಿಗಿಂತ ಹೆಚ್ಚು ಫ್ಲಡ್, ಆರ್.ಡಿ.ಪಿ.ಆರ್. ಹಾಗೂ ಲೋಕೋಪಯೋಗಿಯಲ್ಲಿ ಹೆಚ್ಚು ಫಂಡ್ ಹೋಗಿದ್ದರೆ ಅವರು ಎಂಎಲ್‍ಎ ಗಿರಿಗೆ ಏನು ಮಾಡುತ್ತಾರೆ ಎಂದು ಪ್ರಶ್ನಿಸುತ್ತಾರೆ. ನನಗೆ ಸಣ್ಣತನದ ರಾಜಕಾರಣ ಮಾಡಿ ಗೊತ್ತಿಲ್ಲ. ಅವರಿಗೆ ಕ್ಷೇತ್ರದ ವ್ಯಾಪ್ತಿಯೇ ಗೊತ್ತಿಲ್ಲ. ತಿಳಿದುಕೊಳ್ಳಲಿ. ನನಗಿದ್ದ ಸಣ್ಣ ಖಾತೆಯಲ್ಲಿ ನನ್ನ ಶಕ್ತಿ ಮೀರಿ ಅವರಿಗೆ ಎಲ್ಲಾ ಕಡೆ ಕೊಡುವ ಕೆಲಸ ಮಾಡಿದ್ದೇನೆ. ಅತಿವೃಷ್ಟಿ ಮೂಡಿಗೆರೆ ಕ್ಷೇತ್ರಕ್ಕೆ ಹೆಚ್ಚು ಹೋಗದಿದ್ದರೆ ನಾನು ರಾಜೀನಾಮೆ ಕೊಡುತ್ತೇನೆ. ಹೋಗಿದರೆ ಅವರು ನೀಡುತ್ತಾರಾ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ:ಹೊಟ್ಟೆಗೆ ಊಟವಿಲ್ಲದೆ ಗಂಟೆಗಟ್ಲೆ ಶಾಸಕರ ಮನೆ ಬಳಿ ಕಾದ್ವಿ – ಕಾರುಗಳಿಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಟ್ವಿಸ್ಟ್

  • ಇಂದಿರಾ ಕ್ಯಾಂಟೀನ್ ಹೆಸ್ರು ಬದಲಾಯಿಸಿ ಅನ್ನೋದು ಬಿಜೆಪಿಯ ಚಿಲ್ಲರೆ ವಿಚಾರ: ಎಸ್.ಆರ್.ಪಾಟೀಲ್

    ಇಂದಿರಾ ಕ್ಯಾಂಟೀನ್ ಹೆಸ್ರು ಬದಲಾಯಿಸಿ ಅನ್ನೋದು ಬಿಜೆಪಿಯ ಚಿಲ್ಲರೆ ವಿಚಾರ: ಎಸ್.ಆರ್.ಪಾಟೀಲ್

    – ಆನಂದ್ ಸಿಂಗ್ ಭಿನ್ನಮತಕ್ಕೆ ತ್ಯಾಪೆ ಹಾಕಲಾಗಿದೆ

    ಯಾದಗಿರಿ: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು ಎನ್ನುವುದು ಬಿಜೆಪಿಯವರ ಚಿಲ್ಲರೆ ವಿಚಾರ. ಇಂದಿರಾ ಗಾಂಧಿಯವರನ್ನು ಸ್ವತಃ ಅಟಲ್ ಬಿಹಾರಿ ವಾಜಪೇಯಿಯವರೇ ಸಾಕ್ಷಾತ್ ದುರ್ಗೆ ಎಂದು ಕರೆದಿದ್ದರು. ಇಂತಹ ಸಣ್ಣ ಕೆಲಸಕ್ಕೆ ಬಿಜೆಪಿಯವರು ಇಳಿಯಬಾರದು ಎಂದು ಬಿಜೆಪಿ ನಾಯಕರ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿಯವರ ಹೆಸರಿನಲ್ಲಿ ಕ್ರೀಡಾಂಗಣ, ಮೇಲ್ಸೇತುವೆಗಳಿವೆ ಅವರ ಹೆಸರನ್ನು ತೆಗೆಯಿರಿ ಎಂದು ನಾವು ಹೇಳಲ್ಲ. ಸಚಿವ ಈಶ್ವರಪ್ಪನವರ ಮಾತು ಅವರ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ, ಅವರ ನಾಲಿಗೆಗೆ ಮತ್ತು ಮೆದುಳಗೆ ಕನೆಕ್ಷನ್ ಕಟ್ ಆಗಿದೆ. ಸಚಿವ ಆನಂದ್ ಸಿಂಗ್ ಗೆ ತ್ಯಾಪೆ ಹಚ್ಚಿದ್ದಾರೆ. ನನ್ನ 24 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಹಲೋ ಎಲ್ಲಿದ್ದೀಯಾ? ನಿನ್ನ ಮೇಲೆ ಡೌಟ್ ಇಲ್ಲ, ಬಾ ಮನೆಗೆ ಮಾತಾಡೋಣ: ಜಮೀರ್​​​ಗೆ ಸಿದ್ದರಾಮಯ್ಯ ಬುಲಾವ್

    ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ:
    ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ನಾನು ಮೊದಲು ಕನ್ನಡಿಗ, ಅಮೇಲೆ ಭಾರತೀಯ: ಸಿ.ಟಿ.ರವಿಗೆ ಹೆಚ್‍ಡಿಕೆ ಟಾಂಗ್

  • ನಾನು ಮೊದಲು ಕನ್ನಡಿಗ, ಅಮೇಲೆ ಭಾರತೀಯ: ಸಿ.ಟಿ.ರವಿಗೆ ಹೆಚ್‍ಡಿಕೆ ಟಾಂಗ್

    ನಾನು ಮೊದಲು ಕನ್ನಡಿಗ, ಅಮೇಲೆ ಭಾರತೀಯ: ಸಿ.ಟಿ.ರವಿಗೆ ಹೆಚ್‍ಡಿಕೆ ಟಾಂಗ್

    – ನಾವೇನು ಪಾಕಿಸ್ತಾನದವರಾ? ಚೀನಾದವರಾ?

    ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ಬಿಜೆಪಿಯದ್ದು ದ್ವಿಮುಖ ನೀತಿ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾವೇನು ಪಾಕಿಸ್ತಾನದವರಾ? ಚೀನಾದವರಾ? ಅಮೆರಿಕಾದವರಾ? ನಾವು ಭಾರತೀಯರೇ. ಬಿಜೆಪಿಯವರಿಗೆ ಮಾತ್ರ ಭಾರತೀಯರು ಅನ್ನೋ ಗುತ್ತಿಗೆ ಕೊಟ್ಟಿಲ್ಲ. ನಾವು ಹುಟ್ಟಿರೋದು ಈ ಮಣ್ಣಿನಲ್ಲಿ ಅಂತ ಕಿಡಿಕಾರಿದರು.

    ನಾನು ಭಾರತೀಯ ಅನ್ನೋದಕ್ಕಿಂತ ಮುಂಚೆ ನಾನು ಮೊದಲು ಕನ್ನಡಿಗ. ಕನ್ನಡಿಗನಾಗಿ ಕರ್ನಾಟಕಕ್ಕೆ ಆಗಿರೋ ಅನ್ಯಾಯದ ವಿರುದ್ಧ ಧ್ವನಿ ಎತ್ತೋದು ನನ್ನ ಕರ್ತವ್ಯ. ಅದನ್ನ ನಾನು ಮೇಕೆದಾಟು ವಿಚಾರದಲ್ಲಿ ಎತ್ತಿದ್ದೇನೆ ಅಂತ ಸಿ.ಟಿ.ರವಿಗೆ ತಿರುಗೇಟು ಕೊಟ್ಟರು.

    ಸಿ.ಟಿ.ರವಿ ಅವರು ಭಾರತೀಯರು ಇರಬಹುದು. ಮೊದಲು ಕರ್ನಾಟಕ, ನನ್ನ ತಾಯಿ ನನಗೆ ಮೊದಲು ಮುಖ್ಯ. ನನ್ನ ತಾಯಿ ಕಾಪಾಡಬೇಕಾದದ್ದು ನನ್ನ ಕರ್ತವ್ಯ. ಅವರು ಭಾರತೀಯರ ರೋಲ್ ಮಾಡೋದು ಬೇರೆ. ನನ್ನ ತಾಯಿ ಉಳಿದುಕೊಂಡ್ರೆ ತಾನೇ ಭಾರತೀಯರ ತಾಯಿ ಉಳಿಸಿಕೊಳ್ಳೋದು. ಸಿ.ಟಿ.ರವಿ ಇದನ್ನ ಅರ್ಥ ಮಾಡಿಕೊಳ್ಳಲಿ ಅಂತ ಕುಮಾರಸ್ವಾಮಿ ಕೆಂಡಾಮಂಡಲವಾದ್ರು. ಇದನ್ನೂ ಓದಿ: 2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ‘ಮಿಷನ್ 123’: ಕುಮಾರಸ್ವಾಮಿ

    ಮೇಕೆದಾಟು ವಿಚಾರದಲ್ಲಿ ಬಿಜೆಪಿಯದ್ದು ಇಬ್ಭಾಗ ನೀತಿ ಮಾಡುತ್ತಿದ್ದು, ಇದರಲ್ಲಿ ಸಂಶಯವೇ ಇಲ್ಲ. ಬಿಜೆಪಿ, ಕಾಂಗ್ರೆಸ್ ಎರಡು ಪಕ್ಷದ ನಡವಳಿಕೆ ನೋಡಿದ್ದೇವೆ. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡಿರೋದು ನೋಡಿದ್ದೇನೆ. ಹಾಸನದಲ್ಲಿ ಒಬ್ಬರು ನಮ್ಮ ಬಗ್ಗೆ ಮಾತಾಡಿದ್ದಾರೆ. ಅವರ ಪಕ್ಷ ಉಳಿಸಿಕೊಳ್ಳಲು ನಮ್ಮ ಪಕ್ಷವನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಬಹಳ ದಿನ ನಡೆಯೋದಿಲ್ಲ ಅಂತ ಬಿಜೆಪಿ ವಿರುದ್ದ ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಇಂದಿರಾ ಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್‍ಗೆ ಕೋಪ ಬಂದಿದೆ: ಸಿ.ಟಿ.ರವಿ

  • ಇಂದಿರಾ ಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್‍ಗೆ ಕೋಪ ಬಂದಿದೆ: ಸಿ.ಟಿ.ರವಿ

    ಇಂದಿರಾ ಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್‍ಗೆ ಕೋಪ ಬಂದಿದೆ: ಸಿ.ಟಿ.ರವಿ

    ಬೆಂಗಳೂರು: ಇಂದು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

    ದೇಶಭಕ್ತ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ಸಿಗರಿಗೆ ನಾನು ಇಂದಿರಾಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಭಾರೀ ಕೋಪ ಬಂದಿದೆ. ಒಂದು ಕುಟುಂಬದ ಓಲೈಕೆಯೇ ನಿಮ್ಮ ಸಂಸ್ಕೃತಿಯೇ? ಇಂದಿರಾ ಕ್ಯಾಂಟೀನ್ ಬದಲು ನಾಡಿನ ಅನ್ನದ ದೇವತೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಯಾಕಾಗಬಾರದು? ಇಲ್ಲಿನ ಮಣ್ಣಿನ ಮಗನ ಹೆಸರಿಡಬಹುದಿತ್ತಲ್ಲವೇ? ರಾಷ್ಟ್ರವಾದಿ ವೀರ್ ಸವರ್ಕರ್ ಅವರನ್ನು ನಿಂದಿಸುವ ಕಾಂಗ್ರೆಸ್ಸಿಗರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಸರ್ವಾಧಿಕಾರಿಯನ್ನು ನಾಡಿನ ಅಧಿ ದೇವತೆಯಂತೆ ಪೂಜಿಸುತ್ತಿದ್ದಾರೆ. ಇಂದಿರಾ ಗಾಂಧಿಯವರು ನಿಜವಾಗಲೂ ಗರೀಬಿ ಹಟಾವೋ ಮಾಡಿದ್ದಿದ್ದರೆ “ಇಂದಿರಾ ಕ್ಯಾಂಟೀನ್” ಸ್ಥಾಪಿಸುವ ಅವಶ್ಯಕತೆ ಏನಿತ್ತು?

    ಕಾಂಗ್ರೆಸ್ಸಿಗರು ಉತ್ತರಿಸುವರೇ? ತಮಗೆ ತಾವೇ ಭಾರತ ರತ್ನ ಕರುಣಿಸಿಕೊಂಡ ನೆಹರು ಮತ್ತು ಇಂದಿರಾ ಗಾಂಧಿ, ಡಾ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಬದಲಾಗಿ ಅವರು ಬದುಕಿರುವವರೆಗೂ ಅವರನ್ನು ವಿರೋಧಿಸಿದರು. ಸಂವಿಧಾನ ಶಿಲ್ಪಿಯನ್ನು ವಿರೋಧಿಸಿದ ಕಾಂಗ್ರೆಸ್ ಸಂಸ್ಕೃತಿ ಜಗತ್ತಿಗೇ ತಿಳಿದಿದೆ. ಕಾಂಗ್ರೆಸ್ಸಿಗರು ಅಪಾತ್ರರ ಪೂಜೆ ಮಾಡಿಕೊಂಡಿರಲಿ ನಮ್ಮ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

    ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?:
    ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ.ರವಿ ಸಂಸ್ಕೃತಿ: ರಾಮಲಿಂಗಾರೆಡ್ಡಿ ಕಿಡಿ

     

  • ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ.ರವಿ ಸಂಸ್ಕೃತಿ: ರಾಮಲಿಂಗಾರೆಡ್ಡಿ ಕಿಡಿ

    ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ.ರವಿ ಸಂಸ್ಕೃತಿ: ರಾಮಲಿಂಗಾರೆಡ್ಡಿ ಕಿಡಿ

    ಬೆಂಗಳೂರು: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ಎಚ್ಚರಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ ಹಾಗೂ ಬಿಜೆಪಿಯವರ ಸಂಸ್ಕೃತಿ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಪಕ್ಷ ಬಡವರಿಗಾಗಿ ಹಸಿವು ನೀಗಿಸಲು ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಮಾಡಲಾಗಿದೆ. ಆದರೆ ಸಿ.ಟಿ. ರವಿ ಅವರು ಇಂದಿರಾಗಾಂಧಿ ಅವರ ಹೆಸರಲ್ಲಿ ಹುಕ್ಕಾ ಬಾರ್ ಬೇಕಾದರೆ ಮಾಡಿಕೊಳ್ಳಲಿ ಎಂದು ಆಡಿರುವ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಆಚಾರವಿಲ್ಲದ ನಾಲಿಗೆ ಏನುಬೇಕಾದರೂ ಮಾತನಾಡುತ್ತದೆ. ಇಂದಿರಾ ಗಾಂಧಿ ಅವರ ಹೆಸರನ್ನು ಹೇಳುವ ಯೋಗ್ಯತೆ ಬಿಜೆಪಿ ನಾಯಕರಿಗಿಲ್ಲ ಎಂದರು.

    ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಮಾತನಾಡಿ, ಸಿ.ಟಿ ರವಿ ಅವರ ಮಾತುಗಳನ್ನು ಕೇಳಿದರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವಂತೆ ಕಾಣುತ್ತಿದೆ. ಅವರ ಭಾಷೆ ಬಳಕೆ ಇದಕ್ಕೆ ಸಾಕ್ಷಿ. ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಗ್ಗೆ ಅವರ ಮಾತುಗಳು ಅವರ ಆಚಾರ ವಿಚಾರವನ್ನು ತಿಳಿಸುತ್ತದೆ ಎಂದರು. ಇದನ್ನೂ ಓದಿ: ಸುಲಭ್ ಶೌಚಾಲಯ ಯೋಜನೆಗೆ ಮೋದಿಯ ಹೆಸರನ್ನು ಇಡಲಿ: ಹರಿಪ್ರಸಾದ್ ವ್ಯಂಗ್ಯ

    ಸಿ.ಟಿ.ರವಿ ಹೇಳಿದ್ದೇನು?: ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಇದನ್ನೂ ಓದಿ: ಮೂತ್ರ ವಿಸರ್ಜನೆ ಮಾಡ್ತಿದ್ದವರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ- ಇಬ್ಬರ ದುರ್ಮರಣ

  • ಆಡಳಿತ ಪಕ್ಷದ ವಿರುದ್ಧವೇ ಧರಣಿ ಕುಳಿತ ಬಿಜೆಪಿ ಶಾಸಕ ಕುಮಾರಸ್ವಾಮಿ

    ಆಡಳಿತ ಪಕ್ಷದ ವಿರುದ್ಧವೇ ಧರಣಿ ಕುಳಿತ ಬಿಜೆಪಿ ಶಾಸಕ ಕುಮಾರಸ್ವಾಮಿ

    ಬೆಂಗಳೂರು: ಮೂಡಿಗೆರೆ ತಾಲೂಕನ್ನು ಅತಿವೃಷ್ಟಿಯ ಪಟ್ಟಿಗೆ ಸೇರಿಸದೇ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧವೇ ಶಾಸಕ ಎಂಪಿ ಕುಮಾರಸ್ವಾಮಿಯವರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದ್ದಾರೆ.

    ನಮ್ಮ ಧ್ವನಿಗೆ ನಮ್ಮ ಸರ್ಕಾರದಲ್ಲಿ ಯಾಕೋ ಬೆಲೆ ಸಿಗುತ್ತಿಲ್ಲ. ಮೀಸಲು ಕ್ಷೇತ್ರ ಎನ್ನುವ ಕಾರಣಕ್ಕೊ ಯಾಕೋ ಕಡೆಗಣಿಸುತ್ತಿದ್ದಾರೆ. ನಮ್ಮ ಸರ್ಕಾರವೇ ಈ ರೀತಿ ತಾರತಮ್ಯ ಮಾಡಬಾರದು. ಆದಷ್ಟು ಬೇಗ ಜನರಲ್ ಕ್ಷೇತ್ರ ಆಗಲಿ ಅಂತ ಅನಿಸುತ್ತಿದೆ. ಏಕಾಏಕಿ ನಿನ್ನೆ ಕಂದಾಯ ಇಲಾಖೆ ಪಟ್ಟಿ ಮಾಡಿ ಮೂಡಿಗೆರೆ ಕ್ಷೇತ್ರ ಕೈಬಿಡಲಾಗಿದೆ. ಆರ್. ಅಶೋಕ್ ಈ ತರಹ ಮಾಡಿದ್ದಾರೆ ಎಂದು ಅನಿಸುವುದಿಲ್ಲ. ಎಲ್ಲ ಉಸ್ತುವಾರಿ ಮಂತ್ರಿಗಳು ಬರುತ್ತಾರೆ. ಆದರೆ ಏನೂ ಮಾಡಲ್ಲ. ಇವರಿಗೆ ಬರಿ ಮಾತಲ್ಲಿ ಹೇಳಿದರೆ ಅರ್ಥ ಆಗುವುದಿಲ್ಲ. ಎನ್‍ಡಿಆರ್‍ಎಫ್ ಪಟ್ಟಿಯಲ್ಲಿ ಮೂಡಿಗೆರೆ ಸೇರಿಸಬೇಕು. ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಹಾರ ಕೊಡಬೇಕು ಅದಕ್ಕಾಗಿ ನಾನು ಇಲ್ಲಿಯೇ ಕೂರುತ್ತೇನೆ ಎಂದು ಎಂ.ಪಿ ಕುಮಾರಸ್ವಾಮಿ ಪ್ರತಿಭಟನೆ ನಡೆಸಿದರು.

    2019 ರಲ್ಲಿ ಅತಿವೃಷ್ಟಿ ಆಗಿತ್ತು. ಈ ವೇಳೆ ಮನೆಗಳು ಕಾಫಿತೋಟ ಕೊಚ್ಚಿಕೊಂಡು ಹೋಗಿತ್ತು. ಅಲ್ಲದೇ 6 ಜನ ಮನೆ ಸಮೇತ ಕೊಚ್ಚಿಕೊಂಡು ಹೋಗಿದ್ದರು. ಆದರೂ ಪರಿಹಾರ ನೀಡದೇ ನಿರ್ಲಕ್ಷ್ಯ ಮಾಡಲಾಗಿತ್ತು. ಶಿವಮೊಗ್ಗ ನಗರ ಎನ್‌ಡಿಆರ್‌ಎಫ್‌ ವ್ಯಾಪ್ತಿಗೆ ಸೇರುತ್ತದೆ. ಮೂಡಿಗೆರೆಯಲ್ಲಿ 900 ಸೆಂಟಿ ಮೀಟರ್ ಮಳೆಯಾಗಿದೆ. ನಾನು 2018 ರಲ್ಲಿ ಶಾಸಕನಾದಾಗ ಕುಮಾರಸ್ವಾಮಿ ಸಿಎಂ ಆಗಿದ್ದರು. ಕುಮಾರಸ್ವಾಮಿ ಸಿಎಂ ಆದಾಗ ನಮಗೆ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಆಗಿತ್ತು. ಆದರೆ ನಮ್ಮದೇ ಸರ್ಕಾರ ಇದ್ದರೂ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

    ಶಾಸಕ ಎಂಪಿ ಕುಮಾರಸ್ವಾಮಿ ಪ್ರತಿಭಟನೆ ಹಿನ್ನೆಲೆ ಕಂದಾಯ ಸಚಿವ ಆರ್ ಅಶೋಕ್ ತಮ್ಮ ಆಪ್ತ ಕಾರ್ಯದರ್ಶಿಯನ್ನು ಸಂಧಾನಕ್ಕೆ ಕಳುಹಿಸಿದರು. ಅಶೋಕ್ ತಮ್ಮ ಪಿಎಸ್ ಪ್ರಶಾಂತ್ ರಿಂದ ಫೋನ್ ಮೂಲಕ ಸಂಪರ್ಕಿಸಿ ಎಂಪಿ ಕುಮಾರಸ್ವಾಮಿ ಜೊತೆ ಮಾತನಾಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಎಂ.ಪಿ ಕುಮಾರಸ್ವಾಮಿಯವರು ಕರೆಯನ್ನು ನಿರಾಕರಿಸಿ ಹೇಳಿದ ಒಂದು ಕೆಲಸವನ್ನೂ ಮಾಡಿಕೊಡಲ್ಲ, ಅಶೋಕ್‍ರವರೇ ಸ್ಥಳಕ್ಕೆ ಬರಲಿ ಎಂದು ಹೇಳಿದರು.

    ಅಶೋಕ್ ಸಂಧಾನ:
    ನಂತರ ಎಂಪಿ ಕುಮಾರಸ್ವಾಮಿ ಸಿಟ್ಟಿಗೆ ಬೆದರಿ ಪ್ರತಿಭಟನಾ ಸ್ಥಳಕ್ಕೆ ಆರ್. ಅಶೋಕ್ ಆಗಮಿಸಿದ್ದಾರೆ. ಈ ವೇಳೆ ಕುಮಾರಸ್ವಾಮಿಯವರು ನಾನು ಹಿರಿಯ ಶಾಸಕ, ನನಗೆ ಹೀಗೆ ಮಾಡೋದು ಸರಿಯಾ? ಎಷ್ಟು ಬೇಜಾರಾಗಲ್ಲ ನಮಗೆ ಹೇಳಿ ಮಂತ್ರಿ ಸ್ಥಾನ ಕೊಡದೇ ಇದ್ದಾಗಲೂ ನಾನು ನಿಮ್ಮೆಲ್ಲರ ಮಾತು ಕೇಳಿಲ್ವಾ? ನಾನು ಪಕ್ಷಕ್ಕೆ ಲಾಯಲ್ ಆಗಿಲ್ವಾ? ಯಾವತ್ತಾದ್ದರೂ ಬ್ಲ್ಯಾಕ್ ಮೇಲ್ ಮಾಡಿದ್ದೀನಾ? ನೀವೆಲ್ಲ ಹೇಳಿದ್ದು ಕೇಳಿಕೊಂಡಿಲ್ವಾ? ನನ್ನ ಮಾತಿಗೆ ತೂಕ ಇಲ್ಲ ಅಂದರೆ ಹೇಗೆ? ಎಂದು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

    ಈ ವೇಳೆ ಅವರ ಹೆಗಲ ಮೇಲೆ ಕೈ ಹಾಕಿ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿ ಕುಮಾರಸ್ವಾಮಿ ಮನವೊಲಿಸಿ ಆರ್. ಅಶೋಕ್ ಧರಣಿಯನ್ನು ಅಂತ್ಯಗೊಳಿಸಿದ್ದಾರೆ. ನಾನು ಕುಮಾರಸ್ವಾಮಿ 20 ವರ್ಷದಿಂದ ಸ್ನೇಹಿತರು. ಅನುದಾನ ಸಮಸ್ಯೆ ಆಗಿದೆ. ಬೆಳೆ ಪರಿಹಾರ ವಿನಂತಿ ಇದೆ. ಸಿಎಂ ಬಳಿ ಮಾತನಾಡಿ ಬೆಳೆ ಪರಿಹಾರ ಕೊಡಬೇಕಾಗಿದ್ದನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

    ತಾರತಮ್ಯಕ್ಕೂ ಸಿಟಿ. ರವಿ ಕಾರಣ ಎಂಬ ಆರೋಪಕ್ಕೆ, ಸಿಟಿ ರವಿ ನನಗೆ 10-12 ದಿನದಿಂದ ಯಾವುದೇ ಕರೆ ಮಾಡಿಲ್ಲ. ಸಿಟಿ ರವಿ ಜೀವರಾಜ್ ಬೆಳ್ಳಿ ಪ್ರಕಾಶ್ ಸುರೇಶ್ ಮಧ್ಯೆ ಯಾವುದೇ ರೀತಿ ಭಿನ್ನಾಭಿಪ್ರಾಯ ಇಲ್ಲ. ಮೂಡಿಗೆರೆ ಚಿಕ್ಕಮಗಳೂರಿಗೆ ಬಹಳ ಬಾರಿ ಪ್ರೀತಿ ವಿಶ್ವಾಸದಿಂದ ಹೋಗಿದ್ದೇನೆ. ಚಿಕ್ಕಮಗಳೂರು ಹೊಸದೇನಲ್ಲ. ನಮ್ಮ ಪಾರ್ಟಿ ಹೇಗೆ ಅಂದರೆ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಂ ಬಗ್ಗೆ ಪ್ರಶ್ನೆಗಳನ್ನು ಕೇಳ್ಬೇಡಿ, ಅಷ್ಟು ಕೆಳಮಟ್ಟಕ್ಕೆ ನನ್ನ ಇಳಿಸ್ಬೇಡಿ: ಹೆಚ್‍ಡಿಡಿ