Tag: c t ravi

  • ಕಾಫಿನಾಡಿನಲ್ಲಿ ಚರ್ಚೆಗೆ ಗ್ರಾಸವಾಗಿದ್ದ ವಿವೇಕಾನಂದ ಮೂರ್ತಿಗೆ ಮುಕ್ತಿ

    ಕಾಫಿನಾಡಿನಲ್ಲಿ ಚರ್ಚೆಗೆ ಗ್ರಾಸವಾಗಿದ್ದ ವಿವೇಕಾನಂದ ಮೂರ್ತಿಗೆ ಮುಕ್ತಿ

    ಚಿಕ್ಕಮಗಳೂರು: ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನಗರದ ದಂಟರಮಕ್ಕಿ ಕೆರೆ ಮಧ್ಯೆಯಲ್ಲಿದ್ದ ಸ್ವಾಮಿ ವಿವೇಕಾನಂದರ ಮೂರ್ತಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

    ಸ್ವಾಮಿ ವಿವೇಕಾನಂದ ಮೂರ್ತಿ ನಿರ್ಮಾಣಗೊಂಡು ವರ್ಷಗಳೇ ಕಳೆದಿದ್ದರೂ ವಿರೂಪಗೊಂಡಿದ್ದ ಮೂರ್ತಿಯನ್ನು ಬದಲಿಸಲು ಯಾರೂ ಮುಂದಾಗಿರಲಿಲ್ಲ. ಅಲ್ಲಲ್ಲೇ ಪ್ಯಾಚ್ ವರ್ಕ್ ಮೂಲಕ ಅದೇ ಮೂರ್ತಿಯನ್ನು ಪುನಃ ಸರಿ ಮಾಡಿದ್ದರು. ಆದರೆ ಆ ಮೂರ್ತಿಯ ಬಣ್ಣ, ನಿಂತ ಭಂಗಿ ನೋಡಿ ವಿವೇಕಾನಂದರದ್ದು ಎಂದಷ್ಟೇ ಹೇಳಬಹುದಿತ್ತೋ ವಿನಃ. ಅದನ್ನು ಯಾರೂ ಕೂಡ ವಿವೇಕಾನಂದರು ಎಂದು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ.

    ಈ ಮೂರ್ತಿಯನ್ನು ಕಂಡ ಸ್ಥಳೀಯರು ಹಾಗೂ ಪ್ರವಾಸಿಗರು ವಿವೇಕಾನಂದರ ಮೂರ್ತಿಗೆ ಮನಬಂದತೆ ವಿಶ್ಲೇಷಿಸಿದ್ದರು. ಕಳೆದೊಂದು ವಾರದಿಂದಂತೂ ಸಾಮಾಜಿಕ ಜಾಲತಾಣದಲ್ಲಿ ಯುವಸಮೂಹ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಹಾಗಾಗಿ ಇಂದು ಆ ಮೂರ್ತಿಯನ್ನು ನೆಲಸಮಗೊಳಿಸಿದ್ದು ಫೈಬರ್ ನಿಂದ ಸಿದ್ಧಗೊಂಡಿರೋ ಹೊಸ ಮೂರ್ತಿಯನ್ನು ಅದೇ ಜಾಗದಲ್ಲಿ ಪ್ರತಿಷ್ಠಾಪಿಸುವುದಾಗಿ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ವಿವೇಕಾನಂದರ ಮೂರ್ತಿ ನಿರ್ಮಾಣದಲ್ಲಿ ಮುಂದಾಳತ್ವ ವಹಿಸಿದ್ದ ಮುತ್ತಯ್ಯ ಸ್ಪಷ್ಟಪಡಿಸಿದ್ದಾರೆ.

    ಸರ್ಕಾರದ ಹಣ ಬಳಸಿಲ್ಲ ಸಿ.ಟಿ.ರವಿ: ಯಾವಾಗ ಸಾಮಾಜಿಕ ಜಾಲತಾಣದಲ್ಲಿ ವಿವೇಕಾನಂದರ ಮೂರ್ತಿ ಬಗ್ಗೆ ಯುವಸಮೂಹ ತೀವ್ರ ಆಕ್ರೋಶ ವ್ಯಕ್ತಪಡಿಸಲು ಮುಂದಾದರೋ ಸಚಿವ ಸಿ.ಟಿ.ರವಿ ಕೂಡ ಫೇಸ್‍ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದರು. ಈ ಪ್ರತಿಮೆ ಖಾಸಗಿ ಸಹಭಾಗಿತ್ವ ಹಾಗೂ ಸ್ಥಳೀಯ ದಾನಿಗಳಿಂದ ನಿರ್ಮಾಣಗೊಂಡಿದ್ದು. ಇದಕ್ಕೆ ಸರ್ಕಾರದ ಒಂದೇ ಒಂದು ರೂಪಾಯಿ ಕೂಡ ಬಳಸಿಲ್ಲ. ಕಳಪೆ ಕಾಮಗಾರಿ ಹಾಗೂ ಮೂರ್ತಿಯ ರೂಪದ ಬಗ್ಗೆ ಎಲ್ಲರಲ್ಲೂ ಅಸಮಾಧಾನವಿದೆ. ಆದರೆ ಕೆಲಸ ಮಾಡಲು ಬಂದ ಗುತ್ತಿಗೆದಾರ ಹಣ ಪಡೆದು ಪರಾರಿಯಾಗಿದ್ದಾನೆ. ಕಂಟ್ರಾಕ್ಟರ್, ಸಬ್ ಕಂಟ್ರಾಕ್ಟರ್ ಗಳು ಕೆಲಸ ಮಾಡಿಲ್ಲ. ಹಾಗಾಗಿ ಇಂದು ಮೂರ್ತಿ ಈ ಹಂತ ತಲುಪಿದೆ. ಇದರಲ್ಲಿ ಸರ್ಕಾರದ ಹಣ ನಯಾ ಪೈಸೆಯೂ ಖರ್ಚಾಗಿಲ್ಲ. ಅಷ್ಟೆ ಅಲ್ಲದೆ ಮೂರ್ತಿಯ ಬಗೆಗಿನಿ ನಿಮ್ಮ ಮನದಾಳದ ಸೂಕ್ಷ್ಮತೆ ನನಗೂ ಗೊತ್ತು ಎಂದಿದ್ದರು.

    ಮೂರ್ತಿ ನಿರ್ಮಾಣದಲ್ಲಿ ಸಿ.ಟಿ.ರವಿ ಪಾತ್ರವಿಲ್ಲ: ಪ್ರವಾಸೋದ್ಯಮ ಸಚಿವರ ತವರಲ್ಲಿ ಊರ ಮಧ್ಯೆ ಇರೋ ಕೆರೆಯಲ್ಲಿನ ಮೂರ್ತಿಗೆ ಬಗ್ಗೆ ಸ್ಥಳಿಯರು ಹಾಗೂ ಪ್ರವಾಸಿಗರು ಸರ್ಕಾರ ಹಾಗೂ ಸಚಿವ ಸಿ.ಟಿ.ರವಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಯೂಥ್ ಐಕಾನ್ ವಿವೇಕಾನಂದರ ವಿರೂಪ ನಿರ್ಮಾಣದ ವಿರುದ್ಧ ಸಚಿವರ ವಿರುದ್ಧವೂ ಜನ ಆಕ್ರೋಶ ಹೊರಹಾಕಿದ್ದರು. ಆದರೆ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯ, ಈ ಮೂರ್ತಿ ನಿರ್ಮಾಣದಲ್ಲಿ ಸಚಿವರ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಊರಿಗೆ ಒಳ್ಳೆಯದಾಗಿ ಎಂದು ನಾನೇ ಈ ಮೂರ್ತಿ ನಿರ್ಮಾಣಕ್ಕೆ ಮುಂದಾಗಿದ್ದು. ಮೂರ್ತಿಯ ಸ್ಥಿತಿ ಕಂಡು ನನಗೂ ನೋವಾಗಿದೆ. ಇದರಿಂದ ನಾನು ವೈಯಕ್ತಿಕವಾಗಿಯೂ ಸಾಕಷ್ಟು ಹಣ ಕಳೆದುಕೊಂಡಿದ್ದೇನೆ. ಶೀಘ್ರದಲ್ಲೇ ಆ ಜಾಗದಲ್ಲಿ ಹೊಸ ಮೂರ್ತಿ ಪ್ರತಿಷ್ಠಾಪಿಸುದುವುದಾಗಿ ಸ್ಪಷ್ಟನೆ ನೀಡಿದ್ದಾರೆ.

  • ಜಾನಪದ ಹಾಡಿಗೆ ಸಚಿವ ಸಿ.ಟಿ ರವಿ ಭರ್ಜರಿ ಸ್ಟೆಪ್ಸ್

    ಜಾನಪದ ಹಾಡಿಗೆ ಸಚಿವ ಸಿ.ಟಿ ರವಿ ಭರ್ಜರಿ ಸ್ಟೆಪ್ಸ್

    ಚಿಕ್ಕಮಗಳೂರು: 21 ವರ್ಷಗಳ ಬಳಿಕ ಕಾಫಿನಾಡಲ್ಲಿ ನಡೆಯುತ್ತಿರುವ ಜಿಲ್ಲಾ ಉತ್ಸವದಲ್ಲಿ ಸಚಿವ ಸಿ.ಟಿ ರವಿ ಮನಸ್ಸೋ ಇಚ್ಛೆ ಭರ್ಜರಿ ಕುಣಿದು ಕುಪ್ಪಳಿಸಿದ್ದಾರೆ.

    ಶುಕ್ರವಾರ ಸಂಜೆ 6.30ಕ್ಕೆ ಆರಂಭವಾದ ಕಾರ್ಯಕ್ರಮ 10.30ರ ವೇಳೆಗೆ ಮುಗಿಯುತ್ತಿದ್ದಂತೆ ಕೊನೆಗೆ ಸಚಿವರು ಮಕ್ಕಳು ಹಾಗೂ ಸ್ಥಳಿಯರ ಜೊತೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಡೊಳ್ಳಿನ ಒಂದೊಂದು ಹೊಡೆತಕ್ಕೂ ಒಂದೊಂದು ಸ್ಟೆಪ್ ಹಾಕ್ತಾ ಡೊಳ್ಳಿನ ಸದ್ದು ಜೋರಾಗ್ತಿದ್ದಂತೆ ಸಿ.ಟಿ ರವಿಯ ಕುಣಿತವೂ ಜೋರಾಗಿದೆ.

    ಸಿ.ಟಿ.ರವಿ ಸಾಕಷ್ಟು ಜಾಗದಲ್ಲಿ ಹಲವು ಬಾರಿ ಕುಣಿದಿದ್ದಾರೆ. ಆದರೆ ಡೊಳ್ಳಿನ ಒಂದೊಂದು ಶಬ್ಧಕ್ಕೂ ಒಂದೊಂದು ಸ್ಟೆಪ್ ಹಾಕಿ ಮನಸ್ಸೋ ಇಚ್ಛೆ ಕುಣಿದಿದ್ದು ಇದೇ ಮೊದಲು ಎಂದು ಅನಿಸುತ್ತೆ. ಸಾವಿರಾರು ಜನರ ಎದುರೇ ಸಿ.ಟಿ ರವಿ ಎದ್ದು ಕುಣಿದು ಕುಪ್ಪಳಿಸಿದ್ದಾರೆ.

    ಸಚಿವರ ಕುಣಿತ ನೋಡ್ತಿದ್ದಂತೆ ಸುಮ್ಮನೆ ಕೂರಲಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಕೂಡ ಸಚಿವರಿಗೆ ಸಾಥ್ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಲ್ಮುರುಡಪ್ಪ ಸೇರಿದಂತೆ ಸ್ಥಳಿಯರು ಹಾಗೂ ಬಿಜೆಪಿ ಕಾರ್ಯಕರ್ತರು ಸಚಿವ ಸಿ.ಟಿ ರವಿಯೊಂದಿಗೆ ಕುಣಿದಿದ್ದಾರೆ.

  • ಕೆಸರು ಗದ್ದೆಯಲ್ಲಿ ಎರಡು ಬಾರಿ ಬಿದ್ದರೂ ಎದ್ದು ಓಡಿದ ಸಿ.ಟಿ ರವಿ

    ಕೆಸರು ಗದ್ದೆಯಲ್ಲಿ ಎರಡು ಬಾರಿ ಬಿದ್ದರೂ ಎದ್ದು ಓಡಿದ ಸಿ.ಟಿ ರವಿ

    – ಹಗ್ಗಜಗ್ಗಾಟ ಕ್ರೀಡೆಯಲ್ಲಿ ಕಿತ್ತುಕೊಂಡ ಬಂದ ಹೆಬ್ಬರಳಿನ ಉಗುರು

    ಚಿಕ್ಕಮಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಕೆಸರು ಗದ್ದೆಯಲ್ಲಿ ಎರಡು ಬಾರಿ ಜಾರಿ ಬಿದ್ದು ಮತ್ತೆ ಎದ್ದು ಓಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಚಿಕ್ಕಮಗಳೂರಿನ ನಲ್ಲೂರಿನಲ್ಲಿ ಮೂರು ದಿನಗಳ ಕಾಲ ಉತ್ಸವದ ಅಂಗವಾಗಿ ಗ್ರಾಮೀಣ ಕ್ರೀಡೆ ಆಯೋಜನೆಗೊಂಡಿದೆ. ಇಂದು ಈ ಕ್ರೀಡೆಗೆ ಸಚಿವ ಸಿ.ಟಿ ರವಿ ಚಾಲನೆ ನೀಡಿದರು. ಸುಮಾರು ಅರ್ಧ ಅಡಿ ಆಳ ಇರುವಷ್ಟು ಕೆಸರು ಗದ್ದೆಯಲ್ಲಿ ಸಿ.ಟಿ ರವಿ ಓಡಿದ್ದಾರೆ.

    ಸಿ.ಟಿ ರವಿ ಓಡುವಾಗ ಹಿಂದೆ ಮುಂದೆ ಇದ್ದ ಸ್ಪರ್ಧಿಗಳು ಕೂಗಿ ಕೇಕೆ ಹಾಕಿದರು. ಓಡುವಾಗ ಸಿ.ಟಿ ರವಿ ಜಾರಿ ಬಿದ್ದಿದ್ದಾರೆ. ಜಾರಿ ಬಿದ್ದ ನಂತರ ಅವರು ಅಲ್ಲಿಂದ ಹೋಗದೇ ಮತ್ತೆ ಓಡಿದ್ದಾರೆ. ಸಿ.ಟಿ ರವಿ ಮತ್ತೊಮ್ಮೆ ಓಡುವಾಗ ಎರಡನೇ ಬಾರಿಯೂ ಜಾರಿ ಬಿದ್ದಿದ್ದಾರೆ. ಆದರು ಸಹ ಹಿಂತಿರುಗದೇ ಮತ್ತೆ ಓಡಿದ್ದಾರೆ.

    ಎರಡು ಬಾರಿ ಬಿದ್ದರೂ ಸಿ.ಟಿ ರವಿ ನಗುತ್ತಾ ತಮ್ಮ ಓಟವನ್ನು ಪೂರ್ಣಗೊಳಿಸಿದ್ದಾರೆ. ಫೆ.29 ಹಾಗೂ ಮಾರ್ಚ್ 1ರಂದು ಚಿಕ್ಕಮಗಳೂರು ಹಬ್ಬ ನಡೆಯಲಿದೆ. ಇಂದಿನಿಂದ ವಿವಿಧ ಗ್ರಾಮೀಣ ಕ್ರೀಡಾಕೂಟ ಆರಂಭವಾಗಿದೆ. ಕೇವಲ ಓಟ ಅಲ್ಲದೆ ಸಿ.ಟಿ ರವಿ ಹಗ್ಗಜಗ್ಗಾಟ ಸೇರಿದಂತೆ ಬೇರೆ ಬೇರೆ ಕ್ರೀಡೆಗಳಲ್ಲಿ ಭಾಗವಹಿಸಿದರು.

    ಕೆಸರುಗದ್ದೆಯ ಹಗ್ಗಜಗ್ಗಾಟ ಕ್ರೀಡೆಯಲ್ಲಿ ಭಾಗವಹಿಸಿದ ವೇಳೆ ಸಿ.ಟಿ ರವಿ ಕಾಲಿನ ಹೆಬ್ಬರಳಿನ ಉಗುರು ಕಿತ್ತುಕೊಂಡಿದೆ. ಹೆಬ್ಬರಳಿನ ಉಗುರು ಬಂದರು ಅರಿವಿಲ್ಲದೆ ಸಿ.ಟಿ ರವಿ ಆಟದಲ್ಲಿ ಮೈ ಮರೆತ್ತಿದ್ದರು. ಬಳಿಕ ಕೆಸರು ಗದ್ದೆಯಿಂದ ಮೇಲೆ ಬಂದು ಕಾಲು ತೊಳೆಯುವಾಗ ಅರಿವಿಗೆ ಬಂದಿದೆ.

  • ಸಿ.ಟಿ ರವಿ ನೋಡಿ ನನಗೆ ಹೊಟ್ಟೆ ಕಿಚ್ಚು: ಗೋವಿಂದ ಕಾರಜೋಳ

    ಸಿ.ಟಿ ರವಿ ನೋಡಿ ನನಗೆ ಹೊಟ್ಟೆ ಕಿಚ್ಚು: ಗೋವಿಂದ ಕಾರಜೋಳ

    ಚಿಕ್ಕಮಗಳೂರು: ಸಚಿವ ಸಿ.ಟಿ.ರವಿ ನೋಡಿ ನನಗೆ ಹೊಟ್ಟೆ ಕಿಚ್ಚು ಬಂದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ. ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ವಿವಿಧ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಸಿಎಂ ಈ ಮಾತನಾಡಿದ್ದಾರೆ.

    ನಾನು ಸಮಾಜ ಕಲ್ಯಾಣ ಸಚಿವನಾಗಿ ನನ್ನ ಜಿಲ್ಲೆಗೆ ಇಷ್ಟೊಂದು ಹಣ ಅನುದಾನ ತೆಗೆದುಕೊಂಡಿಲ್ಲ, ಆದರೆ ಸಿ.ಟಿ ರವಿ ಅವರು ಜಿಲ್ಲೆಯ ಅಭಿವೃದ್ಧಿಗೆ 959 ಕೋಟಿ ರೂ. ಹಣ ಅನುದಾನ ತಂದಿದ್ದಾರೆ. ನನಗೆ ಅವರನ್ನ ನೋಡಿ ಹೊಟ್ಟೆ ಕಿಚ್ಚು ಬಂದಿದೆ ಎಂದು ಗೋವಿಂದ ಕಾರಜೋಳ ಅವರು ಹೇಳಿದರು.

    ಇಂದು ಚಿಕ್ಕಮಗಳೂರಿನಲ್ಲಿ ಸಮಾಜ ಕಲ್ಯಾಣ ಹಾಗೂ ಲೊಕೋಪಯೋಗಿ ಇಲಾಖೆ ವ್ಯಾಪ್ತಿಯ 90 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ನಾನು ಇವತ್ತು ಬರುತ್ತಿರಲಿಲ್ಲ. ಸಾಕಷ್ಟು ಕೆಲಸ ಇತ್ತು. ರೈಲ್ವೆ ಇಲಾಖೆ ಸಭೆಗೆ ಹೋಗಬೇಕಿತ್ತು. ಆದರೆ ಸೋಮವಾರ ಸಿ.ಟಿ ರವಿಯವರು ಬೈದದ್ದನ್ನ ನೋಡಿ ಇವತ್ತು ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿ ಕೆಲಸಕ್ಕೆ ಸರ್ಕಾರದ ಸಂಪೂರ್ಣ ಸಹಮತ ಇರುತ್ತೆ ಎಂದು ಡಿಸಿಎಂ ತಿಳಿಸಿದರು.

    ಕಾರ್ಯಕ್ರಮದಲ್ಲಿ ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಶಾಸಕ ಬೋಜೇಗೌಡ, ಪ್ರಾಣೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಸೇರಿ ವಿವಿಧ ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು.

  • ಕುಮಾರಸ್ವಾಮಿ ಸಿಗ್ನಲ್ ಇಲ್ಲದೇ ಯೂಟರ್ನ್ ಹೊಡೆಯುತ್ತಾರೆ: ಸಿಟಿ ರವಿ

    ಕುಮಾರಸ್ವಾಮಿ ಸಿಗ್ನಲ್ ಇಲ್ಲದೇ ಯೂಟರ್ನ್ ಹೊಡೆಯುತ್ತಾರೆ: ಸಿಟಿ ರವಿ

    ಬಳ್ಳಾರಿ: ಮಂಗಳೂರು ಗಲಬೆಗೆ ಪೊಲೀಸ್ ಇಲಾಖೆಯೇ ಕಾರಣ ಎಂದು ಮಂಗಳೂರು ಎಸ್‍ಪಿ ಹರ್ಷ ಅವರನ್ನು ಅಮಾನತ್ತು ಮಾಡಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಸಚಿವ ಸಿಟಿ ರವಿ ಅವರು ತಿರುಗೇಟು ನೀಡಿದ್ದಾರೆ.

    ಹಂಪಿ ಉತ್ಸವದ ಮಳಿಗೆಗಳ ಉದ್ಘಾಟನೆ ಮಾಡಿ ಮಾತನಾಡಿದ ಸಿ.ಟಿ ರವಿ, ಪೊಲೀಸರು ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಎಂದು ಇರಲ್ಲಾ ಅವರೆಲ್ಲಾ ಈ ರಾಜ್ಯದ ಪೊಲೀಸರು. ಕುಮಾರಸ್ವಾಮಿ ಅವರು ಎರಡು ಸಾರಿ ಮುಖ್ಯಮಂತ್ರಿ ಆದವರು ಹೀಗಾಗಿ ಮಾತನಾಡುವ ಮುನ್ನ ಒಂದು ಸಾರಿ ವಿಚಾರ ಮಾಡಬೇಕು ಎಂದರು.

    ಅಲ್ಲದೆ ಪೊಲೀಸರ ಬಗ್ಗೆ ಹಗುರವಾಗಿ ಮಾತನಾಡಿ ಅವರ ನೈತಿಕ ಸ್ಥೈರ್ಯ ಕಡಿಮೆ ಮಾಡಿದ್ದಾರೆ. ಮಂಗಳೂರಿನಲ್ಲಿ ಕಲ್ಲು ಹೊಡೆದವರು ಪೊಲೀಸರಾ? ಬೆಂಕಿ ಹಚ್ಚಿದ್ದು ಪೊಲೀಸರಾ? ಎಂದು ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಮಾಡಿದ್ದಾರೆ.

    ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಾಂಗ್ಲಾ ವಲಸಿಗರನ್ನು ಹೊರ ಹಾಕಬೇಕು ಎನ್ನುತ್ತಿದ್ದರು. ಆದರೆ ಆದ್ರೆ ಈಗ ಯಾಕೆ ಈ ವಿರೋಧ. ಕುಮಾರಸ್ವಾಮಿ ಅವರ ಈ ನಡೆಯನ್ನು ನೋಡಿದರೆ ಸಿಗ್ನಲ್ ಇಲ್ಲದೇ ಯೂಟರ್ನ್ ಹೊಡೆಯುತ್ತಾರೆ ಎಂದು ಎನಿಸುತ್ತದೆ. ಜೆಡಿಎಸ್ ಒಂದು ಸೆಕ್ಯೂಲರ್ ಪಾರ್ಟಿ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ಹೇಳಿಕೆಯಿಂದ ಇದು ಅಪ್ಪ-ಮಕ್ಕಳ ಪಕ್ಷ ಎನಿಸತ್ತೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ಜಮ್ಮು- ಕಾಶ್ಮೀರದಲ್ಲಿ ಕರ್ನಾಟಕ ಭವನ?

    ಜಮ್ಮು- ಕಾಶ್ಮೀರದಲ್ಲಿ ಕರ್ನಾಟಕ ಭವನ?

    ನವದೆಹಲಿ: ಕೇಂದ್ರ ಸರ್ಕಾರ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕ ಭವನ ನಿರ್ಮಿಸಲು ರಾಜ್ಯ ಸರ್ಕಾರ ಉತ್ಸಾಹ ತೋರಿದೆ. ಈ ಸಂಬಂಧ ಜಮ್ಮು-ಕಾಶ್ಮೀರ ಅಧಿಕಾರಿಗಳ ಜೊತೆ ರಾಜ್ಯ ಸರ್ಕಾರದ ಅಧಿಕಾರಿಗಳು ನಿರಂತರ ಮಾತುಕತೆ ನಡೆಯುತ್ತಿದ್ದಾರೆ.

    ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಕೇಂದ್ರವು ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೂಡಲೇ ರಾಜ್ಯ ಸರ್ಕಾರವು ಜಮ್ಮು-ಕಾಶ್ಮೀರದಲ್ಲಿ ಐಷಾರಾಮಿ ಹೋಟೆಲ್ ನಿರ್ಮಾಣ ಮಾಡಲು ಪ್ರಸ್ತಾಪಿಸಿತ್ತು. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅಂದಿನ ಜಮ್ಮು-ಕಾಶ್ಮೀರ ಗವರ್ನರ್ ಸತ್ಯಪಾಲ್ ಮಲಿಕ್ ಅವರಿಗೆ ಪತ್ರ ಬರೆದು ರಾಜ್ಯ ಸರ್ಕಾರದ ಆಶಯವನ್ನು ವಿವರಿಸಿದ್ದರು.

    ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ಭವನ ನಿರ್ಮಿಸಲು ಚಿಂತಿಸಿದ್ದು 10ರಿಂದ 15 ಎಕರೆ ಭೂಮಿಯನ್ನು ಖರೀದಿಸಲು ಸರ್ಕಾರ ಯೋಚಿಸಿದೆ. ಅಮರನಾಥ ಯಾತ್ರೆಯಂತಹ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಪದೇಪದೇ ತೆರಳುವ ಕರ್ನಾಟಕ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲು ಕರ್ನಾಟಕ ಭವನ ನಿರ್ಮಿಸಲು ಚಿಂತಿಸಲಾಗುತ್ತಿದ್ದು. ವಾಣಿಜ್ಯ ಉದ್ದೇಶಕ್ಕಿಂತ ಹೆಚ್ಚಾಗಿ, ಸಾರ್ವಜನಿಕರ ಸೇವೆ ಉದ್ದೇಶದಿಂದ ಭವನ ನಿರ್ಮಿಸಲಾಗುತ್ತಿದೆ. ಇಲ್ಲಿ ಗಣ್ಯರು ಸೇರಿದಂತೆ ರಾಜ್ಯಪಾಲರಿಗೂ ಕೊಠಡಿ ನಿರ್ಮಿಸುವ ಚಿಂತನೆಯಲ್ಲಿ ಪ್ರವಾಸೋದ್ಯಮ ಇಲಾಖೆ ಚಿಂತಿಸಿದೆ.

    ಜಮ್ಮು-ಕಾಶ್ಮೀರದಲ್ಲಿ ಕೆಲ ತಿಂಗಳ ಕಾಲ ಇಂಟರ್‌ನೆಟ್ ಸ್ಥಗಿತಗೊಳಿಸಿದ ಹಿನ್ನೆಲೆ ಅಧಿಕಾರಿಗಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ಪಸ್ತಾಪ ನೆನೆಗುದಿಗೆ ಬಿದ್ದಿದ್ದೆ. ಮಾಹಿತಿಗಳ ಪ್ರಕಾರ ರಾಜ್ಯ ಸರ್ಕಾರದ ಪ್ರಸ್ತಾವನೆ ರಾಜ್ಯಪಾಲರ ಕಚೇರಿ ತಲುಪಿದ್ದು, ಆ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಹೀಗಾಗಿ ಪ್ರವಾಸೋದ್ಯಮ ಇಲಾಖೆ ಅಧಿಕಾರಗಳ ತಂಡ ಜಮ್ಮು-ಕಾಶ್ಮೀರಕ್ಕೆ ಭೇಟಿ ಮಾಡಲು ಚಿಂತಿಸಿದ್ದು ಕೇಂದ್ರಾಡಳಿತ ಪ್ರದೇಶವಾಗಿ ಬದಲಾದ ಹಿನ್ನೆಲೆ ಹೊಸ ಪತ್ರವನ್ನು ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

  • “ಏಸು ಪ್ರತಿಮೆ ನಿರ್ಮಾಣಕ್ಕೆ ವಿರೋಧಿಸಲ್ಲ, ಕೃಷ್ಣನೂ ಒಂದೇ, ಏಸುವೂ ಒಂದೇ, ಆದರೆ..”

    “ಏಸು ಪ್ರತಿಮೆ ನಿರ್ಮಾಣಕ್ಕೆ ವಿರೋಧಿಸಲ್ಲ, ಕೃಷ್ಣನೂ ಒಂದೇ, ಏಸುವೂ ಒಂದೇ, ಆದರೆ..”

    – ವಿಧಾನ ಸೌಧದಲ್ಲಿ ಅಶೋಕ್, ಸಿಟಿ ರವಿ ಪ್ರತಿಕ್ರಿಯೆ
    – ಇಷ್ಟು ದಿನ ಸುಮ್ಮನೆ ಇದ್ದದ್ದನ್ನ ಕೆಣಕಿದ್ದು ಯಾಕೆ?

    ಬೆಂಗಳೂರು: ಏಸು ಪ್ರತಿಮೆ ನಿರ್ಮಾಣದ ಬಗ್ಗೆ ನಮ್ಮ ವಿರೋಧ ಇಲ್ಲ. ಡಿಕೆ ಶಿವಕುಮಾರ್ ಏನಾದ್ರೂ ಮಾಡಿಕೊಳ್ಳಲಿ. ಆದರೆ ಜಾಗ ಯಾವುದು ಎನ್ನುವುದನ್ನು ನೋಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

    ವಿಧಾನ ಸೌಧದಲ್ಲಿ ಕ್ಯಾಬಿನೆಟ್ ಸಭೆಗೂ ಮುನ್ನ ಮಾತನಾಡಿದ ಅವರು, ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ಸಂಬಂಧಿಸಿದಂತೆ ಇವತ್ತು ಅಥವಾ ನಾಳೆ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಲಿದ್ದಾರೆ. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬೆಟ್ಟ ಇದೆ, ಪಕ್ಕದಲ್ಲಿ ಡ್ಯಾಮ್ ಇದೆ. ಆದರೆ ಜಾಗ ಯಾವುದು ಎನ್ನುವುದನ್ನು ನೋಡಬೇಕು. ಇಷ್ಟು ದಿನ ಸುಮ್ಮನೆ ಇದ್ದದ್ದನ್ನ ಕೆಣಕಿದ್ದು ಯಾಕೆ ಎನ್ನುವುದು ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದರು.

    ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿ, ಇಸ್ಕಾನ್‍ನವರು ಥೀಮ್ ಪಾರ್ಕ್ ಮಾಡಲು ಹೊರಟಾಗ ಡಿ.ಕೆ.ಶಿವಕುಮಾರ್ ಇಲ್ಲ ಸಲ್ಲದ ಕಿರುಕುಳ ನೀಡಿ ಆ ಯೋಜನೆ ನಿಲ್ಲುವ ಹಾಗೆ ಮಾಡಿದ್ದರು. ಆದರೆ ನಾವು ಹಾಗೆ ಮಾಡುವುದಿಲ್ಲ. ನಮಗೆ ಕೃಷ್ಣನೂ ಒಂದೇ ಏಸುವೂ ಒಂದೇ. ಆದರೆ ಗೋಮಾಳ ಜಮೀನು ದುರುಪಯೋಗದ ಬಗ್ಗೆ ಈಗಾಗಲೇ ಕಂದಾಯ ಸಚಿವರು ತನಿಖೆಗೆ ಆದೇಶಿಸಿದ್ದಾರೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

    ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲ ಬೆಟ್ಟದಲ್ಲಿ 114 ಅಡಿಯ ಏಕಶಿಲಾ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಶಿವಕುಮಾರ್ ಡಿ.25ರ ಕ್ರಿಸ್‍ಮಸ್ ದಿನದಂದು ಶಂಕುಸ್ಥಾಪನೆ ಮಾಡಿದ್ದಾರೆ. ಕ್ರಿಸ್ ಮಸ್ ಶುಭ ದಿನದ ಹಿನ್ನೆಲೆಯಲ್ಲಿ ಪ್ರತಿಮೆಗೆ ಸಿದ್ಧವಾಗಿರುವ ಕಲ್ಲಿಗೆ ಉಳಿ ಪೆಟ್ಟು ಹಾಕುವ ಮೂಲಕ ಶಿಲಾನ್ಯಾಸ ನೆರವೇರಿಸಿದ್ದರು.

    ಅದರಲ್ಲಿ 13 ಅಡಿ ಮೆಟ್ಟಿಲುಗಳು ಇದ್ದು, ಅದರ ನಿರ್ಮಾಣ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಹಾರೋಬೆಲೆ ಗ್ರಾಮದಲ್ಲಿ ಶೇಕಡಾ 99 ರಷ್ಟು ಮಂದಿ ಕ್ರೈಸ್ತ ಸಮುದಾಯದವರಿದ್ದಾರೆ. ಪ್ರತಿಮೆ ನಿರ್ಮಾಣಕ್ಕೆ ಭೂಮಿ ನೀಡಿದ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಸಹೋದರರಿಗೆ ಕ್ರಿಶ್ಚಿಯನ್ನರು ಕೃತಜ್ಞತೆ ಸಲ್ಲಿಸಿದ್ದರು.

    ಬಿಜೆಪಿ ವಿರೋಧ: ಇತ್ತ ಏಸು ಪ್ರತಿಮೆ ಸ್ಥಾಪನೆ ಬಗ್ಗೆ ಬಿಜೆಪಿ ಕಟು ಟೀಕೆ ಮಾಡಿದೆ. ಯಾವುದೋ ಆಸೆಗಾಗಿ ತಿಹಾರ್ ಜೈಲಿನಲ್ಲಿದ್ದು ಬಂದಿರೋ ಡಿಕೆಶಿ, ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು ಇಂತಹ ಕೆಲಸ ಮಾಡಿದ್ದಾರೆ ಎಂದು ಉತ್ತರ ಕನ್ನಡ ಸಂಸದ ಅನಂತ್‍ಕುಮಾರ್ ಹೆಗ್ಡೆ ಟೀಕಿಸಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಕೆಂಪೇಗೌಡರ ಅನುಯಾಯಿ ಅಂತಾರೆ. ನಿರ್ಮಾಲಾನಂದ ಸ್ವಾಮಿಗಳ ಭಕ್ತ ಅಂತಾರೆ. ಯೇಸು ಪ್ರತಿಮೆ ಮಾಡೋವಾಗ ಕೇಂಪೆಗೌಡರ ನೆನಪು ಯಾಕೆ ಆಗಿಲ್ಲ? ಸ್ವಾಮೀಜಿಗಳ ನೆನಪು ಯಾಕೆ ಆಗಿಲ್ಲ. ಡಿಕೆ ಶಿವಕುಮಾರ್ ಹಿಂದೂ ಸಮಾಜದ ದೇವರ ಬಗ್ಗೆಯೂ ಚಿಂತಿಸಲಿ ಅಂತ ಮಂಗಳೂರಲ್ಲಿ ಸಚಿವ ಕೆಎಸ್ ಈಶ್ವರಪ್ಪ ಪ್ರಶ್ನಿಸಿದ್ದರು.

  • ಮಂಗಳೂರಿನಲ್ಲಿ ಆಸ್ತಿಪಾಸ್ತಿ ಹಾನಿಗೈದವರ ಆಸ್ತಿ ಜಪ್ತಿ ಮಾಡಿ: ಸಿಟಿ ರವಿ

    ಮಂಗಳೂರಿನಲ್ಲಿ ಆಸ್ತಿಪಾಸ್ತಿ ಹಾನಿಗೈದವರ ಆಸ್ತಿ ಜಪ್ತಿ ಮಾಡಿ: ಸಿಟಿ ರವಿ

    ಮಂಗಳೂರು: ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡಿದವರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕುತ್ತಿದೆ. ಅದೇ ರೀತಿಯಲ್ಲಿ ಮಂಗಳೂರಿನ ಹಿಂಸಾಚಾರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡಿದವರಿಗೆ ಪುಂಡು ಕಂದಾಯ ಹೇರಿ. ಆಸ್ತಿಯನ್ನು ಜಪ್ತಿ ಮಾಡುವ ಕಾನೂನು ತರಬೇಕೆಂದು ಸಚಿವ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪೌರತ್ವ ಮಸೂದೆಯನ್ನು ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಆಸ್ತಿಪಾಸ್ತಿ ಹಾನಿ ಮಾಡಿದವರನ್ನು ಗುರುತಿಸಿ ಅವರ ಆಸ್ತಿಗಳನ್ನು ಜಪ್ತಿ ಮಾಡಲಾರಂಭಿಸಿದ್ದಾರೆ. ಹೀಗಾಗಿ ನಮ್ಮ ರಾಜ್ಯ ಸರ್ಕಾರವೂ ಇಂತಹ ಕ್ರಮಕ್ಕೆ ಮುಂದಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ನಡೆಯುವ ಗಲಭೆಯನ್ನು ನಿಯಂತ್ರಿಸಬಹುದು ಎಂದು ಹೇಳಿದರು.

    ಯಾವುದೇ ಚಳುವಳಿ ಇರಬಹುದು, ಯಾವುದೇ ಪಕ್ಷದ ಚಟುವಟಿಕೆ ಇರಬಹುದು. ಬೆಂಕಿ ಹಾಕುತ್ತೇವೆ ಎನ್ನುವವರ ಮತ್ತು ಬೆಂಕಿ ಹಾಕುವ ಗಲಭೆಕೋರರಿಗೆ ಈ ಮೂಲಕ ಮೂಗುದಾರ ತೊಡಿಸಬಹುದು. ಈ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ಹೇಳಿದರು.

    ಇದಲ್ಲದೆ ಗಲಭೆ ಪ್ರಕರಣದಲ್ಲಿ ಅಮಾಯಕರು ಸತ್ತರೆ ಪರಿಹಾರ ನೀಡೋದು ಸಹಜ. ಆದರೆ ಕ್ರಿಮಿನಲ್ ಚಟುವಟಿಕೆ ಮಾಡಿದ್ದರೂ ಪರಿಹಾರ ನೀಡಬೇಕೇ ಎಂದು ಕಾಂಗ್ರೆಸ್ಸಿಗರನ್ನು ಪ್ರಶ್ನೆ ಮಾಡಿದ ಸಿಟಿ ರವಿ, ಸರ್ಕಾರವನ್ನು ಅಸ್ಥಿರ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಚುನಾವಣೆ ಸೋತಾಗ ಇವಿಎಂ ಮೇಲೆ ಅನುಮಾನ. ಈಗ ಪೊಲೀಸರ ಮೇಲೆ ಅನುಮಾನ ಬಂದಿದೆ ಎಂದು ವ್ಯಂಗ್ಯವಾಡಿದರು.

  • ವೃಕ್ಷಮಾತೆಗೆ ಮತ್ತೊಂದು ಗರಿ – ಮಾನಸ ಪ್ರಶಸ್ತಿ ಸನ್ಮಾನ

    ವೃಕ್ಷಮಾತೆಗೆ ಮತ್ತೊಂದು ಗರಿ – ಮಾನಸ ಪ್ರಶಸ್ತಿ ಸನ್ಮಾನ

    ಚಾಮರಾಜನಗರ: ಮಾನಸ ಶಿಕ್ಷಣ ಸಂಸ್ಥೆಯ ಆರ್. ಸಿದ್ದೇಗೌಡ – ಲಿಂಗಮ್ಮ ಸ್ಮರಣಾರ್ಥ ಮಾನಸ ಪ್ರಶಸ್ತಿ 2019 ಅನ್ನು ಸಾಲುಮರದ ತಿಮ್ಮಕ್ಕ ಅವರಿಗೆ ನೀಡಲಾಗುತ್ತಿದೆ.

    ಈ ಬಾರಿ ಮಾನಸ ಪ್ರಶಸ್ತಿ ಕೊಳ್ಳೇಗಾಲದ ಮಾನಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಇದೇ 27ರಿಂದ 29ರವರೆಗೆ ಮಾನಸೋತ್ಸವ ಕಾರ್ಯಕ್ರಮ ನಡೆಯಲಿದೆ. 27ರ ಬೆಳಗ್ಗೆ 10ಕ್ಕೆ ಸಚಿವ ಸಿ.ಟಿ.ರವಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

    ಈ ಬಾರಿ 25 ಸಾವಿರ ರೂ. ನಿಂದ 50 ಸಾವಿರ ರೂ.ಗೆ ಪ್ರಶಸ್ತಿ ಮೊತ್ತ ಹೆಚ್ಚಿಸಲಾಗಿದೆ. ಈ ಹಿಂದೆ ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ, ಕವಿ ನಿಸಾರ್ ಅಹಮ್ಮದ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ, ರೈತ ಹೋರಾಟಗಾರ ಜಿ. ಮಾದೇಗೌಡ, ಭತ್ತದ ವಿಜ್ಞಾನಿ ಮಹಾದೇವಪ್ಪ, ಸಂಸದ ವಿ. ಶ್ರೀನಿವಾಸಪ್ರಸಾದ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

    ಉಳಿದಂತೆ 3 ದಿನಗಳ ಕಾಲ ಕಾಲೇಜಿನ ವಿದ್ಯಾರ್ಥಿಗಳು, ಚಿತ್ರನಟರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

  • ದತ್ತಪೀಠಕ್ಕೆ ಸರ್ಕಾರಿ ಬಸ್ – ಪೂಜೆ ಮಾಡಿ ಸ್ವಾಗತಿಸಿಕೊಂಡ ಕಾಫಿನಾಡಿಗರು

    ದತ್ತಪೀಠಕ್ಕೆ ಸರ್ಕಾರಿ ಬಸ್ – ಪೂಜೆ ಮಾಡಿ ಸ್ವಾಗತಿಸಿಕೊಂಡ ಕಾಫಿನಾಡಿಗರು

    ಚಿಕ್ಕಮಗಳೂರು: ದತ್ತಪೀಠಕ್ಕೆ ಸರ್ಕಾರಿ ಬಸ್ ಬಿಡಬೇಕೆಂಬ ಸ್ಥಳೀಯರು ಹಾಗೂ ಪ್ರವಾಸಿಗರ ಬಹುದಿನದ ಬೇಡಿಕೆ ಕೊನೆಗೂ ಈಡೇರಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಕೂಡ ಚಿಕ್ಕಮಗಳೂರಿನಿಂದ ದತ್ತಪೀಠ ಬಸ್ ಸೌಲಭ್ಯ ಇರಲಿಲ್ಲ. ಈ ಭಾಗದ ಜನ ಹಾಗೂ ಪ್ರವಾಸಿಗರು ಈ ಭಾಗಕ್ಕೆ ಬಸ್ ಬಿಡಬೇಕೆಂದು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಆದರೆ ಕಿರಿದಾದ ಹಾಗೂ ಹಾವು-ಬಳುಕಿನ ಮೈಕಟ್ಟಿನ ರಸ್ತೆಯಾಗಿರುವುದರಿಂದ ಸರ್ಕಾರ ಬಸ್ ಸೌಲಭ್ಯ ಕಲ್ಪಿಸಿರಲಿಲ್ಲ.

    ಗಿರಿ ಭಾಗದ ಅತ್ತಿಗುಂಡಿ, ಪಂಡರವಳ್ಳಿ, ಎನ್‍ಎಂಡಿಸಿ, ಬ್ಯಾಗದಹಳ್ಳಿ, ಮಹಲ್, ತಿಪ್ಪನಹಳ್ಳಿ ಎಸ್ಟೇಟ್ ಸೇರಿದಂತೆ ಹಲವು ಗ್ರಾಮದ ಜನ ಆಗೊಮ್ಮೆ-ಈಗೊಮ್ಮೆ ಬರುವ ಖಾಸಗಿ ಬಸ್ ಹಾಗೂ ಆಟೋ, ಜೀಪ್ ಗಳನ್ನೇ ಆಶ್ರಯಿಸಿದ್ದರು. ದೈನಂದಿನ ಕೆಲಸಕ್ಕೆ ನಗರ ಪ್ರದೇಶಗಳಿಗೆ ಬರುವ ಈ ಭಾಗದ ಜನ ತೀವ್ರ ಸಮಸ್ಯೆ ಎದುರಿಸುತ್ತಿದ್ದರು. ಗ್ರಾಮೀಣ ಭಾಗದಿಂದ ಶಾಲಾ-ಕಾಲೇಜಿಗೆ ಬರುವ ಮಕ್ಕಳು ತೀವ್ರ ಸಂಕಷ್ಟಕ್ಕೀಡಾಗುತ್ತಿದ್ದರು. ಆದ್ದರಿಂದ ಈ ಭಾಗದ ಜನ ಬಸ್‍ಗಾಗಿ ಸರ್ಕಾರಕ್ಕೆ ಹತ್ತಾರು ಮನವಿ ಸಲ್ಲಿಸಿದ್ದರು. ದತ್ತಪೀಠದ ಮಾರ್ಗದಲ್ಲಿ ಕಿರಿದಾಗಿದ್ದ ರಸ್ತೆಯನ್ನು ಸರ್ಕಾರ ಅಗಲೀಕರಣ ಮಾಡಿದ್ದು, ಈಗ ದತ್ತಪೀಠಕ್ಕೆ ಬಸ್ ಸೌಲಭ್ಯ ಕಲ್ಪಿಸಿದ್ದು ಸ್ಥಳೀಯರಲ್ಲಿ ಸಂತಸ ಮೂಡಿದೆ. ದಿನಕ್ಕೆ ಮೂರರಿಂದ ನಾಲ್ಕು ಬಾರಿ ಸಂಚರಿಸುವ ಬಸ್ಸಿಗೆ ಸಚಿವ ಸಿ.ಟಿ ರವಿ ಚಾಲನೆ ನೀಡಿದ್ದಾರೆ.

    ತಮ್ಮ ಮಾರ್ಗಕ್ಕೆ ಬಸ್ ಬಂದ ಖುಷಿಗೆ ಈ ಮಾರ್ಗದ ಗ್ರಾಮಸ್ಥರೆಲ್ಲಾ ಬಸ್ಸಿಗೆ ಪೂಜೆ ಮಾಡಿ ಸ್ವಾಗತಿಸಿಕೊಂಡಿದ್ದು, ಬಳಿಕ ದತ್ತಪೀಠದಲ್ಲೂ ಪೂಜೆ ಸಲ್ಲಿಸಲಾಗಿದೆ. ತಮ್ಮ ಮಾರ್ಗಕ್ಕೆ ಬಸ್ ಬಂದಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಭಾಗದಲ್ಲಿ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರೇ ಹೆಚ್ಚಿದ್ದರು. ಅವರ ನಗರ ಪ್ರದೇಶಕ್ಕೆ ಬರಬೇಕಂದರೆ ಖಾಸಗಿ ಜೀಪ್, ಆಟೋಗಳಿಗೆ ಅವರು ಕೇಳಿದಷ್ಟು ಹಣವನ್ನು ನೀಡಬೇಕಿತ್ತು. ಈಗ ಸರ್ಕಾರ ಬಸ್ ಬಿಟ್ಟಿರುವುದರಿಂದ ಸ್ಥಳೀಯರಲ್ಲಿ ಸಂತಸ ಮನೆ ಮಾಡಿದೆ.