Tag: 100 ದಿನ

  • 100 ದಿನ ಪೂರೈಸಿದ ‘ಕೆಜಿಎಫ್ 2’ ಸಿನಿಮಾ: ಯಶ್ ಹೊಸ ಸಿನಿಮಾ ಅನೌನ್ಸ್ ಆಗಲೇ ಇಲ್ಲ

    100 ದಿನ ಪೂರೈಸಿದ ‘ಕೆಜಿಎಫ್ 2’ ಸಿನಿಮಾ: ಯಶ್ ಹೊಸ ಸಿನಿಮಾ ಅನೌನ್ಸ್ ಆಗಲೇ ಇಲ್ಲ

    ಕೆಜಿಎಫ್ 2 ಸಿನಿಮಾ ಇದೀಗ ನೂರು ದಿನಗಳ ಪೂರೈಸಿದೆ. ಹೀಗಾಗಿ ಅಭಿಮಾನಿಗಳಿಗೆ ಮತ್ತು ಸಿನಿಮಾ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದೆ ಹೊಂಬಾಳೆ ಫಿಲ್ಮ್ಸ್‍. ನೂರು ದಿನಗಳನ್ನು ಪೂರೈಸಿರುವ ಸಂದರ್ಭದಲ್ಲಿ ಚಿತ್ರತಂಡದಿಂದ ಹೊಸ ಸುದ್ದಿ ಏನಾದರೂ ಸಿಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈ ಸಾರಿಯೂ ಚಿತ್ರತಂಡ ನಿರಾಸೆ ಮೂಡಿಸಿದೆ.

    kgf 2

    ಕೆಜಿಎಫ್ 2 ಸಿನಿಮಾ ಐವತ್ತು ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ಯಶ್  ನಟನೆಯ ಹೊಸ ಸಿನಿಮಾದ ಘೋಷಣೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಅಂದು ಯಾವುದೇ ಮಾಹಿತಿ ಕೊಡಲಿಲ್ಲ. ಹಾಗಾಗಿ ಶತದಿನ ಸಂದರ್ಭದಲ್ಲಾದರೂ ಸಿಹಿ ಸುದ್ದಿ ಸಿಗಲಿದೆ ಎಂದು ಅಭಿಮಾನಿಗಳು ಕಾಯುತ್ತಿದ್ದರು. ಈ ಬಾರಿಯೂ ಯಶ್ ಸಿನಿಮಾ ಬಗ್ಗೆಯಾಗಲಿ ಅಥವಾ ಕೆಜಿಎಫ್ 3 ಸಿನಿಮಾ ಬಗ್ಗೆಯಾಗಲಿ ಯಾವುದೇ ಮಾಹಿತಿಯನ್ನು ನಿರ್ಮಾಣ ಸಂಸ್ಥೆ ನೀಡಿಲ್ಲ. ಇದನ್ನೂ ಓದಿ:`ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

    ತೆಲುಗಿನ ಪುಷ್ಪಾ ಸಿನಿಮಾದ ಭಾಗ 3 ಬಗ್ಗೆ ಸುದ್ದಿ ಹರಡುತ್ತಿದ್ದಂತೆಯೇ ಕೆಜಿಎಫ್ 3 ಸಿನಿಮಾದ ಬಗ್ಗೆಯೂ ಚರ್ಚೆ ನಡೆದಿದೆ. ಆದಷ್ಟು ಬೇಗ ಈ ಸುದ್ದಿಯನ್ನು ನಿರ್ದೇಶಕರಾಗಲಿ ಅಥವಾ ನಿರ್ಮಾಪಕರಾಗಲಿ ಹೇಳಲಿ ಎಂದು ನಿರೀಕ್ಷೆ ಮಾಡಲಾಗುತ್ತಿದೆ. ಆದರೆ, ಇನ್ನೆರಡು ವರ್ಷ ಈ ಸಿನಿಮಾ ಬರುವುದು ಅಸಾಧ್ಯ ಎನ್ನಲಾಗುತ್ತಿದೆ. ಆದರೆ, ಭಾಗ 3 ಬರುವುದು ಪಕ್ಕಾ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಪಿಕ್ಚರ್ ಅಭಿ ಬಾಕಿ ಹೈ – ಭ್ರಷ್ಟಾಚಾರಿಗಳ ವಿರುದ್ಧ ಮೋದಿ ಗುಡುಗು

    ಪಿಕ್ಚರ್ ಅಭಿ ಬಾಕಿ ಹೈ – ಭ್ರಷ್ಟಾಚಾರಿಗಳ ವಿರುದ್ಧ ಮೋದಿ ಗುಡುಗು

    – ಮೋದಿ ಸರ್ಕಾರಕ್ಕೆ ನೂರರ ಸಂಭ್ರಮ

    ರಾಂಚಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ಅವಧಿಯ ಆಡಳಿತ 100 ದಿನಗಳನ್ನು ಪೂರೈಸಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ರಾಂಚಿಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

    ಇದೇ ವೇಳೆ ಭ್ರಷ್ಟಾಚಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಭ್ರಷ್ಟಾಚಾರಿಗಳಿಗೆ ತಕ್ಕ ಶಾಸ್ತಿ ಕಾದಿದೆ. ಅವರಿಗೆ ಸೂಕ್ತ ಸ್ಥಳವನ್ನು ತೋರಿಸಲಾಗುವುದು ಎಂದು ಹೇಳುವ ಮೂಲಕ ಭ್ರಷ್ಟಾಚಾರ ಮುಕ್ತ ಸರ್ಕಾರದ ಭರವಸೆಯನ್ನು ಪುನರುಚ್ಚರಿಸಿದ್ದಾರೆ.

    ಭ್ರಷ್ಟಾಚಾರದ ವಿರುದ್ಧ ಈಗಾಗಲೇ ದಾಳಿಗಳು ನಡೆಯುತ್ತಿದ್ದು, ಸಾರ್ವಜನಿಕರನ್ನು ಲೂಟಿ ಮಾಡುವವರಿಗೆ ಸೂಕ್ತ ಸ್ಥಳವನ್ನು ತೋರಿಸಲಾಗುವುದು. ಮೋದಿಯ 2.0 ಸರ್ಕಾದ ಅವಧಿಯಲ್ಲಿ ಇನ್ನೂ ಹೆಚ್ಚು ಉತ್ತಮ ಕೆಲಸಗಳು ಆಗಬೇಕಿದ್ದು, ಈ 100 ದಿನಗಳು ಕೇವಲ ಟ್ರೈಲರ್ ಮಾತ್ರ, ಪಿಕ್ಚರ್ ಅಭಿ ಬಾಕಿ ಹೈ ಎಂದು ಗುಡುಗಿದ್ದಾರೆ.

    ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ರೈತರ ಪಿಂಚಣಿ ಯೋಜನೆಗೆ ಚಾಲನೆ ನೀಡಿ, ‘ಪ್ರಧಾನ ಮಂತ್ರಿ ಕಿಸಾನ್ ಮನ್ ಧನ್ ಯೋಜನೆ’ ಅಡಿಯಲ್ಲಿ 18ರಿಂದ 40 ವರ್ಷದೊಳಗಿನ ರೈತರು 60 ವರ್ಷಗಳ ನಂತರ ಮಾಸಿಕ 3,000 ರೂ. ಪಿಂಚಣಿ ಪಡೆಯಬಹುದಾಗಿದೆ ಎಂದರು.

    ಮುಂದಿನ ಮೂರು ವರ್ಷಗಳವರೆಗೆ ಈ ಯೋಜನೆಗೆ 10,774 ಕೋಟಿ ರೂ. ಹಣವನ್ನು ಮೀಸಲಿರಿಸಲಾಗಿದೆ. ಪ್ರಸ್ತುತ 18 ರಿಂದ 40 ವರ್ಷದೊಳಗಿನ ಎಲ್ಲ ಸಣ್ಣ ಹಾಗೂ ಮಧ್ಯಮ ವರ್ಗದ ರೈತರು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮೋದಿ ತಿಳಿಸಿದರು. ಈ ವರ್ಷದ ಕೊನೆಯಲ್ಲಿ ಜಾರ್ಖಂಡ್‍ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರ್ಯಾಲಿಗಳು ಹಾಗೂ ವಿವಿಧ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ.

  • ಹೋದಲ್ಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು: ಸಮ್ಮಿಶ್ರ ಸರ್ಕಾರದ ನೂರು ದಿನದ ಸಂಭ್ರಮಕ್ಕೆ ಬಿಜೆಪಿ ವ್ಯಂಗ್ಯ

    ಹೋದಲ್ಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು: ಸಮ್ಮಿಶ್ರ ಸರ್ಕಾರದ ನೂರು ದಿನದ ಸಂಭ್ರಮಕ್ಕೆ ಬಿಜೆಪಿ ವ್ಯಂಗ್ಯ

    ಬೆಂಗಳೂರು: ಸಮ್ಮಿಶ್ರ ಸರ್ಕಾರ 100 ದಿನಗಳನ್ನು ಪೂರೈಸಿರುವುದಕ್ಕೆ ರಾಜ್ಯ ಬಿಜೆಪಿಯು ವ್ಯಂಗ್ಯವಾದ ಹೇಳಿಕೆಗಳನ್ನು ನೀಡುವ ಮೂಲಕ ಸಿಎಂ ಕುಮಾರಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿಯೊಂದಿಗೆ ರಚನೆಯಾದ ಸಮ್ಮಿಶ್ರ ಸರ್ಕಾರಕ್ಕೆ ಗುರುವಾರ 100 ದಿನಗಳನ್ನು ಪೂರ್ಣಗೊಳಿಸಿದೆ. ಇದರ ಸಂಭ್ರಮದಲ್ಲಿರುವ ಮೈತ್ರಿ ಪಕ್ಷಗಳಿಗೆ ರಾಜ್ಯ ಬಿಜೆಪಿಯು ವ್ಯಂಗ್ಯವಾಗಿ ಅಭಿನಂದನೆ ಸಲ್ಲಿಸಿ, ಆಡಳಿತಾರೂಢ ಸಿಎಂ ಕುಮಾರಸ್ವಾಮಿ ಸರ್ಕಾರದ ಕಾಲೆಳೆದಿದ್ದಾರೆ.

    ಬಿಜೆಪಿಯು ತನ್ನ ಟ್ವಿಟ್ಟರಿನಲ್ಲಿ, ದಿನಗಳು ನೂರು, ಹೋದಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು ಎಂದು ಬರೆದು ಕೊಂಡು ಸಮ್ಮಿಶ್ರ ಸರ್ಕಾರವನ್ನು ಕವನದ ರೂಪದಲ್ಲಿ ಕಿಚಾಯಿಸಿದೆ. ಅಪವಿತ್ರ ಮೈತ್ರಿಯಲ್ಲಿ ತೀವ್ರ ಭಿನ್ನಮತದ ನಡುವೆಯೂ ನಿಮ್ಮ ಸರ್ಕಾರ 100 ದಿನಗಳನ್ನು ಪೂರೈಸಿರುವುದಕ್ಕೆ ಅಭಿನಂದನೆಗಳು. ಇನ್ನಾದರೂ ನಿಮ್ಮ ಸರ್ಕಾರ ಟೇಕ್ ಆಫ್ ಆಗಲಿ, ಸ್ಥಗಿತಗೊಂಡಿರುವ ರಾಜ್ಯದ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಸಿಗಲಿ ಎಂದು ಬರೆದುಕೊಳ್ಳುವ ಮೂಲಕ ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿಯವರಿಗೆ ಟಾಂಗ್ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv