Tag: 100 Days

  • ಬೆಳಕು, ಆದರೆ ಇದು ಬೆಳಕಲ್ಲ 100 ದಿನದ ದರ್ಶನ: ಸಕ್ಸಸ್ ಬಗ್ಗೆ ರಿಷಬ್ ಸ್ಪೆಷಲ್ ನೋಟ್

    ಬೆಳಕು, ಆದರೆ ಇದು ಬೆಳಕಲ್ಲ 100 ದಿನದ ದರ್ಶನ: ಸಕ್ಸಸ್ ಬಗ್ಗೆ ರಿಷಬ್ ಸ್ಪೆಷಲ್ ನೋಟ್

    ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ಕನ್ನಡದ `ಕಾಂತಾರ’ (Kantara Film) ಸಿನಿಮಾ ಶತದಿನೋತ್ಸವ ಆಚರಿಸಿದೆ. `ಕಾಂತಾರ’ ಸಿನಿಮಾದ ಸಕ್ಸಸ್‌ಫುಲ್ ಜರ್ನಿಯ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್‌ ಮೀಡಿಯಾದಲ್ಲಿ ಸ್ಪೆಷಲ್ ನೋಟ್ ಬರೆದುಕೊಂಡಿದ್ದಾರೆ.

    ಹೊಂಬಾಳೆ ಫಿಲ್ಮ್ಸ್‌ (Hombale Films) ನಿರ್ಮಾಣದ, ರಿಷಬ್‌ ಶೆಟ್ಟಿ (Rishab Shetty) ನಿರ್ದೇಶನದ `ಕಾಂತಾರ’ 100 ದಿನಗಳನ್ನ ಪೂರೈಸಿದೆ. ಸೆಪ್ಟೆಂಬರ್ 30ರಂದು `ಕಾಂತಾರ’ ಸಿನಿಮಾ ತೆರೆಕಂಡಿತ್ತು. 2022ರ ವರ್ಷದ ಬ್ಲ್ಯಾಕ್ ಬಸ್ಟರ್ ಹಿಟ್ ಸಿನಿಮಾ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ರಿಲೀಸ್ ಆಗಿ ಸಿನಿಮಾ ಸಕ್ಸಸ್ ಕಂಡಿದೆ. 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಹೀಗಿರುವಾಗ `ಕಾಂತಾರ’ 100 ದಿನಗಳನ್ನ ಪೂರೈಸಿರುವ ಬಗ್ಗೆ ರಿಷಬ್ ಶೆಟ್ಟಿ ಸ್ಪೆಷಲ್ ಪೋಸ್ಟ್ ಹಂಚಿಕೊಂಡಿದ್ದಾರೆ.

    ʻಬೆಳಕು.. ಆದರೆ ಇದು ಬೆಳಕಲ್ಲ 100 ದಿನದ ದರ್ಶನʼ ಎಂದು ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಪ್ರಯಾಣದ ಉದ್ದಕ್ಕೂ ನಮ್ಮನ್ನು ಹಿಡಿದಿಟ್ಟುಕೊಂಡು ದೈವತ್ವವನ್ನು ಕಂಡುಕೊಂಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ. ಕಾಂತಾರ ಸಿನಿಮಾ ಡಿವೈನ್ ಬ್ಲ್ಯಾಕ್ ಬಸ್ಟರ್, 100 ದಿನಗಳನ್ನ ಪೂರೈಸಿದೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಕೊನೆಗೂ ಸಿಹಿ ಸುದ್ದಿ ಕೊಟ್ರು ವಿಕ್ಕಿ ಕೌಶಲ್-‌ ಕತ್ರಿನಾ ಕೈಫ್‌ ದಂಪತಿ

     

    View this post on Instagram

     

    A post shared by Rishab Shetty (@rishabshettyofficial)

    ʻಕಾಂತಾರʼ ಸಿನಿಮಾ ತುಳುನಾಡಿನ ದೈವದ ಕಥೆಯಾಗಿದ್ದು, ಚಿತ್ರಮಂದಿರದ ನಂತರ ಒಟಿಟಿಯಲ್ಲಿ ಕೂಡ ಚಿತ್ರ ಪ್ರಸಾರವಾಗಿತ್ತು. ಇದೀಗ ಶತ ದಿನಗಳನ್ನ(100 Days) ಪೂರೈಸಿರುವ ರಿಷಬ್ ಶೆಟ್ಟಿ ಸಿನಿಮಾ ಈಗ ಕಿರುತೆರೆಗೆ ಲಗ್ಗೆ ಇಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 100 ದಿನ ಪೂರೈಸಿದ ‘ಕೆಜಿಎಫ್ 2’ ಸಿನಿಮಾ: ಯಶ್ ಹೊಸ ಸಿನಿಮಾ ಅನೌನ್ಸ್ ಆಗಲೇ ಇಲ್ಲ

    100 ದಿನ ಪೂರೈಸಿದ ‘ಕೆಜಿಎಫ್ 2’ ಸಿನಿಮಾ: ಯಶ್ ಹೊಸ ಸಿನಿಮಾ ಅನೌನ್ಸ್ ಆಗಲೇ ಇಲ್ಲ

    ಕೆಜಿಎಫ್ 2 ಸಿನಿಮಾ ಇದೀಗ ನೂರು ದಿನಗಳ ಪೂರೈಸಿದೆ. ಹೀಗಾಗಿ ಅಭಿಮಾನಿಗಳಿಗೆ ಮತ್ತು ಸಿನಿಮಾ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದೆ ಹೊಂಬಾಳೆ ಫಿಲ್ಮ್ಸ್‍. ನೂರು ದಿನಗಳನ್ನು ಪೂರೈಸಿರುವ ಸಂದರ್ಭದಲ್ಲಿ ಚಿತ್ರತಂಡದಿಂದ ಹೊಸ ಸುದ್ದಿ ಏನಾದರೂ ಸಿಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈ ಸಾರಿಯೂ ಚಿತ್ರತಂಡ ನಿರಾಸೆ ಮೂಡಿಸಿದೆ.

    kgf 2

    ಕೆಜಿಎಫ್ 2 ಸಿನಿಮಾ ಐವತ್ತು ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ಯಶ್  ನಟನೆಯ ಹೊಸ ಸಿನಿಮಾದ ಘೋಷಣೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಅಂದು ಯಾವುದೇ ಮಾಹಿತಿ ಕೊಡಲಿಲ್ಲ. ಹಾಗಾಗಿ ಶತದಿನ ಸಂದರ್ಭದಲ್ಲಾದರೂ ಸಿಹಿ ಸುದ್ದಿ ಸಿಗಲಿದೆ ಎಂದು ಅಭಿಮಾನಿಗಳು ಕಾಯುತ್ತಿದ್ದರು. ಈ ಬಾರಿಯೂ ಯಶ್ ಸಿನಿಮಾ ಬಗ್ಗೆಯಾಗಲಿ ಅಥವಾ ಕೆಜಿಎಫ್ 3 ಸಿನಿಮಾ ಬಗ್ಗೆಯಾಗಲಿ ಯಾವುದೇ ಮಾಹಿತಿಯನ್ನು ನಿರ್ಮಾಣ ಸಂಸ್ಥೆ ನೀಡಿಲ್ಲ. ಇದನ್ನೂ ಓದಿ:`ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

    ತೆಲುಗಿನ ಪುಷ್ಪಾ ಸಿನಿಮಾದ ಭಾಗ 3 ಬಗ್ಗೆ ಸುದ್ದಿ ಹರಡುತ್ತಿದ್ದಂತೆಯೇ ಕೆಜಿಎಫ್ 3 ಸಿನಿಮಾದ ಬಗ್ಗೆಯೂ ಚರ್ಚೆ ನಡೆದಿದೆ. ಆದಷ್ಟು ಬೇಗ ಈ ಸುದ್ದಿಯನ್ನು ನಿರ್ದೇಶಕರಾಗಲಿ ಅಥವಾ ನಿರ್ಮಾಪಕರಾಗಲಿ ಹೇಳಲಿ ಎಂದು ನಿರೀಕ್ಷೆ ಮಾಡಲಾಗುತ್ತಿದೆ. ಆದರೆ, ಇನ್ನೆರಡು ವರ್ಷ ಈ ಸಿನಿಮಾ ಬರುವುದು ಅಸಾಧ್ಯ ಎನ್ನಲಾಗುತ್ತಿದೆ. ಆದರೆ, ಭಾಗ 3 ಬರುವುದು ಪಕ್ಕಾ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಹೋದಲ್ಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು: ಸಮ್ಮಿಶ್ರ ಸರ್ಕಾರದ ನೂರು ದಿನದ ಸಂಭ್ರಮಕ್ಕೆ ಬಿಜೆಪಿ ವ್ಯಂಗ್ಯ

    ಹೋದಲ್ಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು: ಸಮ್ಮಿಶ್ರ ಸರ್ಕಾರದ ನೂರು ದಿನದ ಸಂಭ್ರಮಕ್ಕೆ ಬಿಜೆಪಿ ವ್ಯಂಗ್ಯ

    ಬೆಂಗಳೂರು: ಸಮ್ಮಿಶ್ರ ಸರ್ಕಾರ 100 ದಿನಗಳನ್ನು ಪೂರೈಸಿರುವುದಕ್ಕೆ ರಾಜ್ಯ ಬಿಜೆಪಿಯು ವ್ಯಂಗ್ಯವಾದ ಹೇಳಿಕೆಗಳನ್ನು ನೀಡುವ ಮೂಲಕ ಸಿಎಂ ಕುಮಾರಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿಯೊಂದಿಗೆ ರಚನೆಯಾದ ಸಮ್ಮಿಶ್ರ ಸರ್ಕಾರಕ್ಕೆ ಗುರುವಾರ 100 ದಿನಗಳನ್ನು ಪೂರ್ಣಗೊಳಿಸಿದೆ. ಇದರ ಸಂಭ್ರಮದಲ್ಲಿರುವ ಮೈತ್ರಿ ಪಕ್ಷಗಳಿಗೆ ರಾಜ್ಯ ಬಿಜೆಪಿಯು ವ್ಯಂಗ್ಯವಾಗಿ ಅಭಿನಂದನೆ ಸಲ್ಲಿಸಿ, ಆಡಳಿತಾರೂಢ ಸಿಎಂ ಕುಮಾರಸ್ವಾಮಿ ಸರ್ಕಾರದ ಕಾಲೆಳೆದಿದ್ದಾರೆ.

    ಬಿಜೆಪಿಯು ತನ್ನ ಟ್ವಿಟ್ಟರಿನಲ್ಲಿ, ದಿನಗಳು ನೂರು, ಹೋದಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು ಎಂದು ಬರೆದು ಕೊಂಡು ಸಮ್ಮಿಶ್ರ ಸರ್ಕಾರವನ್ನು ಕವನದ ರೂಪದಲ್ಲಿ ಕಿಚಾಯಿಸಿದೆ. ಅಪವಿತ್ರ ಮೈತ್ರಿಯಲ್ಲಿ ತೀವ್ರ ಭಿನ್ನಮತದ ನಡುವೆಯೂ ನಿಮ್ಮ ಸರ್ಕಾರ 100 ದಿನಗಳನ್ನು ಪೂರೈಸಿರುವುದಕ್ಕೆ ಅಭಿನಂದನೆಗಳು. ಇನ್ನಾದರೂ ನಿಮ್ಮ ಸರ್ಕಾರ ಟೇಕ್ ಆಫ್ ಆಗಲಿ, ಸ್ಥಗಿತಗೊಂಡಿರುವ ರಾಜ್ಯದ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಸಿಗಲಿ ಎಂದು ಬರೆದುಕೊಳ್ಳುವ ಮೂಲಕ ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿಯವರಿಗೆ ಟಾಂಗ್ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv