Tag: 107th Session of Indian Science Congress

  • ಎಂಟಿಬಿಗೆ ಇದೀಗ ಅವರ ತಪ್ಪು ಗೊತ್ತಾಗಿದೆ: ಪರಮೇಶ್ವರ್

    ಎಂಟಿಬಿಗೆ ಇದೀಗ ಅವರ ತಪ್ಪು ಗೊತ್ತಾಗಿದೆ: ಪರಮೇಶ್ವರ್

    ಮಡಿಕೇರಿ: ಎಂಟಿಬಿ ಅವರಿಗೆ ಅವರು ಮಾಡಿದ ತಪ್ಪು ಇದೀಗ ಗೊತ್ತಾಗಿದೆ. ಈಗ ಅವರಿಗೆ ಪಶ್ಚಾತ್ತಾಪ ಆಗಿದೆ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಹೇಳಿದರು.

    ಮಡಿಕೇರಿಯ ನಗರ ಸಮೀಪದ ಕರ್ಣಗೇರಿ ಗ್ರಾಮದಲ್ಲಿ ಇರುವ ರಾಜರಾಜೇಶ್ವರಿ ದೇಗುಲಕ್ಕೆ ಪರಮೇಶ್ವರ್ ದಂಪತಿ ಭೇಟಿ ನೀಡಿ ವಾರ್ಷಿಕ ಜಾತ್ರೋತ್ಸವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

    ಈ ವೇಳೆ  ಬಿಜೆಪಿಗೆ ಸೇರಿ ತಪ್ಪು ಮಾಡಿದೆವು ಎಂದು ಸಚಿವ ಎಂಟಿಬಿ ನಾಗರಾಜ್ ಬಹಿರಂಗ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಅನೇಕ ಬಾರಿ ಅವರ ಮನೆಗೆ ಹೋಗಿ ಮನವೊಲಿಸಲು ಪ್ರಯತ್ನಿಸಿದ್ದೆವು. ಎಂಟಿಬಿ ಅವರ ಮನೆಗೆ ಡಿಕೆಶಿ ಮತ್ತು ನಾನು ಹೋಗಿದ್ದೆವು. ಆದರೆ ಅಂದು ಮಾತು ಕೇಳಲಿಲ್ಲ. ಅವರು ಏನೇನೋ ನಿರೀಕ್ಷೆಗಳನ್ನು ಇಟ್ಟುಕೊಂಡು ಹೋಗಿರುತ್ತಾರೆ. ಆದರೆ ಪಾಪ ನಿರೀಕ್ಷೆಗಳು ಸುಳ್ಳಾಗಿರುತ್ತವೆ ಎಂದು ವ್ಯಂಗ್ಯವಾಡಿದರು.

    ಇದೀಗ ಎಂಟಿಬಿಗೆ ಪಶ್ಚಾತ್ತಾಪವೂ ಆಗಿರುತ್ತದೆ. ಹೀಗಾಗಿ ಆ ರೀತಿ ಬಹಿರಂಗವಾಗಿ ಮಾತನಾಡಿರುತ್ತಾರೆ. ಅವರು ಪಕ್ಷಕ್ಕೆ ಬರುವುದಾದರೆ ಸೇರಿಸಿಕೊಳ್ಳುವ ವಿಚಾರ ಅದನ್ನು ಹೈಕಮಾಂಡ್ ಚರ್ಚಿಸಿ ನಿರ್ಧಾರ ಮಾಡುತ್ತದೆ. ಆದರೆ ಈಗಾಗಲೇ ಸಿದ್ದರಾಮಯ್ಯ ಸೇರಿಸಿಕೊಳ್ಳಲ್ಲ ಎಂದಿದ್ದಾರೆ. ಆದರೆ ಸೇರಿಸಿಕೊಳ್ಳಬೇಕೆ ಬೇಡವೇ ಎಂದು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಮಿತ್ ಶಾ ಮಿಂಚಿನ ಸಂಚಾರ- ವಿದ್ಯಾರ್ಥಿಗಳಿಗೆ ಜೋಷ್ ತುಂಬಿದ ಕೇಂದ್ರ ಸಚಿವ

    ಧರ್ಮ ಸಂಘರ್ಷದಿಂದ ಯಾರಿಗೂ ಉಪಯೋಗ ಇಲ್ಲ. ವಸುದೈವ ಕುಟುಂಬಕಂ ಅಂತೆ ಎಲ್ಲರೂ ಬದುಕಬೇಕು. ನಾಡಿನ ಸುಭಿಕ್ಷೆ ಮತ್ತು ಕೊರೊನಾ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನೂ ಸದ್ಯದ ರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಬಿಜೆಪಿಗೆ ಬಿಟ್ಟದ್ದು. ಆದರೆ ಈಗ ಬದಲಾವಣೆ ಮಾಡುವುದು ಸೂಕ್ತವಲ್ಲ. ಜೊತೆಗೆ ಸಂಪುಟ ವಿಸ್ತರಣೆಗೆ ಮಾಡಬಾರದು. ಇದು ರಾಜ್ಯದ ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯ ಪಟ್ಟರು. ಇದನ್ನೂ ಓದಿ:ಸೀಬೆ ಹಣ್ಣು ಕೀಳಲು ಹೋಗಿ ಪ್ರಾಣ ಕಳೆದುಕೊಂಡ ಸಹೋದರಿಯರು

    ಪಿಎಸ್‌ಐ ನೇಮಕಾತಿ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದು ರಾಜಕೀಯ ನಾಯಕರ ನಡುವಿನ ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಗಿದೆ. ಪಿಎಸ್ಐ ನೇಮಕಾತಿಯಲ್ಲಿ ಹಗರಣದಲ್ಲಿ ಸಚಿವರು, ಸಂಬಂಧಿಕರ ಹೆಸರು ತಳುಕು ವಿಚಾರ ತನಿಖೆ ಪೂರ್ಣಗೊಂಡಾಗ ಎಲ್ಲವೂ ಗೊತ್ತಾಗಲಿದೆ‌. ಪಿಎಸ್ಐ ನೇಮಕಾತಿ ಬಗ್ಗೆ ಇದೀಗಾ ಹಗರಣ ಸಂಬಂಧ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡಾಗ ಎಲ್ಲವೂ ಗೊತ್ತಾಗಲಿದೆ. ಸಚಿವರು ಭಾಗಿಯಾಗಿದ್ದಾರಾ?, ಶಾಸಕರು ಭಾಗಿಯಾಗಿದ್ದಾರಾ? ಎನ್ನೋದು ಗೊತ್ತಾಗುತ್ತದೆ. ಈಗ ನಾವು ಊಹೆ ಮಾಡಬಹುದುಷ್ಟೇ ಎಂದು ಹೇಳಿದರು.

    ಈಗಾಗಲೇ ಉಗ್ರಪ್ಪ ಮತ್ತು ಡಿಕೆಶಿ ತಂಡ ಮಾಹಿತಿ ಕಲೆಹಾಕುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಡಳಿತ ಪಕ್ಷ ತಪ್ಪು ಮಾಡಿದಾಗ ವಿರೋಧ ಪಕ್ಷ ಎಚ್ಚರಿಸುವ ಕೆಲಸ ಮಾಡುತ್ತದೆ. ಹಾಗಾಗಿ ಮಾಹಿತಿ ಕಲೆಹಾಕಿ ತನಿಖಾ ತಂಡಕ್ಕೆ ನೀಡಿದರೆ ಅನುಕೂಲವಾಗಲಿದೆ. ತನಿಖೆ ತೀವ್ರಗೊಳಿಸಲು ತಂಡಕ್ಕೆ ಅನುಕೂಲವಾಗುತ್ತದೆ. ಆದ್ದರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅದರಲ್ಲಿ ತಪ್ಪೇನಿದೆ ಎಂದರು.

  • ದೇಶವನ್ನು ಒಗ್ಗೂಡಿಸಲು ತಂತ್ರಜ್ಞಾನದಿಂದ ಸಾಧ್ಯ: ವಿಜ್ಞಾನ ಹಬ್ಬದಲ್ಲಿ ಮೋದಿ ಮಾತು

    ದೇಶವನ್ನು ಒಗ್ಗೂಡಿಸಲು ತಂತ್ರಜ್ಞಾನದಿಂದ ಸಾಧ್ಯ: ವಿಜ್ಞಾನ ಹಬ್ಬದಲ್ಲಿ ಮೋದಿ ಮಾತು

    ಬೆಂಗಳೂರು: ದೇಶವನ್ನು ಒಗ್ಗೂಡಿಸಲು ತಂತ್ರಜ್ಞಾನದಿಂದ ಮಾತ್ರ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನವ ಭಾರತಕ್ಕೆ ತಂತ್ರಜ್ಞಾನ ಬೇಕಿದೆ. ಬೆಂಗಳೂರು ಮೊದಲು ಗಾರ್ಡನ್ ಸಿಟಿಯಾಗಿತ್ತು, ಇಂದು ಸ್ಟಾರ್ಟ್ ಅಪ್ ಕೇಂದ್ರವಾಗಿದೆ. ಜಗತ್ತು ಬೆಂಗಳೂರಿನತ್ತ ಮುಖ ಮಾಡುತ್ತಿದೆ. ಭಾರತವನ್ನು ಸಮಾಜದೊಂದಿಗೆ ಜೋಡಿಸುವ ಕೆಲಸವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮಾಡುವಲ್ಲಿ ಮೊದಲ ಸ್ಥಾನದಲ್ಲಿವೆ. ದೇಶದಲ್ಲಿ ಉತ್ಪಾದನೆಯಾಗುವ ಸ್ಮಾರ್ಟ್ ಫೋನ್‍ಗಳು ಜನರನ್ನು ತಂತ್ರಜ್ಞಾನದೊಂದಿಗೆ ಸಂಪರ್ಕಿಸುತ್ತಿವೆ. ಕಳೆದ ಐದು ವರ್ಷಗಳಲ್ಲಿ ಗ್ರಾಮೀಣ ಭಾಗಗಳು ಅಭಿವೃದ್ಧಿ ಹೊಂದುತ್ತಿವೆ. ಸ್ವಚ್ಛ ಭಾರತ್ ದಿಂದ ಇಂದಿನ ಆಯುಷ್ಮಾನ್ ಭಾರತ್ ಯೋಜನೆಗಳು ಜನರಿಗೆ ತಲುಪವಲ್ಲಿ ತಂತ್ರಜ್ಞಾನ ಪಾತ್ರವಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಏಕಕಾಲದಲ್ಲಿ ರೈತರ ಖಾತೆಗೆ ನಗದು ಜಮಾವಣೆ ತಂತ್ರಜ್ಞಾನದಿಂದ ಆಗಿದೆ. ಅಭಿವೃದ್ಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ನಿಂತಿದೆ ಎಂದರು.

    ತಂತ್ರಜ್ಞಾನದಿಂದಾಗಿ ಸರ್ಕಾರದ ಯೋಜನೆಗಳು ವೇಗ ಪಡೆದುಕೊಂಡಿದೆ. ಸರ್ಕಾರ ಮತ್ತು ಫಲಾನುಭವಿಗಳ ನಡುವಿನ ಅಂತರ ತಂತ್ರಜ್ಞಾನದಿಂದ ಕಡಿಮೆ ಆಗಿದೆ. ಇಂದು ಇ-ಕಾಮರ್ಸ್ ನಿಂದಾಗಿ ವ್ಯವಹಾರಗಳು ಕ್ಷಣಾರ್ಧದಲ್ಲಿ ಬೆರಳ ತುದಿಯಲ್ಲಿ ನಿಂತಿದೆ. ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೂ ತಂತ್ರಜ್ಞಾನ ಸೌಲಭ್ಯ ಸಿಗುವಂತಾಗಬೇಕಿದೆ. ಜಲ್ ಮಿಷನ್ ಅಭಿಯಾನ ಸಹ ತಂತ್ರಜ್ಞಾನದಿಂದ ಸಾಧ್ಯವಾಗಲಿದೆ. ಸುಧಾರಿತ ಮತ್ತು ಕಡಿಮೆ ಖರ್ಚಿನಲ್ಲಿ ಹೇಗೆ ಸಿಗಬೇಕು ಎಂಬುದರ ಬಗ್ಗೆ ನೀವು ಕೆಲಸ ಮಾಡಬೇಕಿದೆ. ಅದೇ ರೀತಿ ಸುಧಾರಿತ ಬೀಜ ಮತ್ತು ರಸಗೊಬ್ಬರ ಉತ್ಪಾದನೆ, ರೈತರಿಗೆ ಅನುಕೂಲವಾಗಿ ತಂತ್ರಜ್ಞಾನ ಮತ್ತು ಬಳಕೆಯಾದ ನೀರಿನ ಪುನರ್ ಬಳಕೆ ಕುರಿತ ಸುಧಾರಿತ ವ್ಯವಸ್ಥೆಗಳು ಮತ್ತು ಪರಿಕರಗಳು, ಮಣ್ಣಿನ ಫಲವತ್ತತೆ ಕಾಪಾಡುವ ಹೊಣೆಯೂ ನಿಮ್ಮ ಮೇಲಿದೆ ಎಮದು ತಿಳಿಸಿದರು.

    ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡೋದು, ಪ್ಲಾಸ್ಟಿಕ್ ಪರ್ಯಾಯ ವಸ್ತುಗಳ ಸಂಶೋಧನೆ ಸೇರಿದಂತೆ ಇನ್ನಿತರ ಅನ್ವೇಷನೆಗಳು ಇಂದು ನಡೆಯಬೇಕಿದೆ. ನಿಮ್ಮ ಸಂಶೋಧನೆಯಿಂದಾಗಿ ಗ್ರಾಮೀಣ ಭಾಗದ ಜನರು ಉದ್ಯೋಗ ಕಂಡುಕೊಳ್ಳುವಂತಾಗಬೇಕಿದೆ. ಪ್ಲಾಸ್ಟಿಕ್ ತ್ಯಾಜ್ಯದ ಪುನರ್ ಬಳಕೆಯ ಬಗ್ಗೆ ಚಿಂತಿಸಬೇಕಿದೆ. ಒಂದೇ ಬಾರಿ ಬಳಕೆಯಾಗುವ ಪ್ಲಾಸ್ಟಿಕ್ ನಿಂದ ಭಾರತ ಮುಕ್ತವಾಗಬೇಕಿದೆ. 2022ರ ವೇಳೆಗೆ ಕಚ್ಚಾತೈಲದ ಬಳಕೆ ಶೇ.10ರಷ್ಟು ಕಡಿಮೆಗೊಳಿಸುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಸ್ಟಾರ್ಟ್ ಅಪ್ ಆರಂಭವಾಗಬೇಕಿದೆ. ನಿಮ್ಮ ಸಮಾಜಮುಖಿ ಸಂಶೋಧನೆಗಳಿಂದಾಗಿ ಭಾರತ 5 ಟ್ರಿಲಿಯನ್ ಮಿಲಿಯನ್ ಅರ್ಥ ವ್ಯವಸ್ಥೆ ಆಗಲಿದೆ ಎಂದು ಅವರು ಹೇಳಿದರು.