Tag: 12ನೇ ತರಗತಿ

  • 12ನೇ ತರಗತಿ ಪಾಸ್‌ ಮಾಡಿದ ಸಿಎಂ ಸಿದ್ದರಾಮಯ್ಯ ಮೊಮ್ಮಗ

    12ನೇ ತರಗತಿ ಪಾಸ್‌ ಮಾಡಿದ ಸಿಎಂ ಸಿದ್ದರಾಮಯ್ಯ ಮೊಮ್ಮಗ

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕುಟುಂಬಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

    ಸಿದ್ದರಾಮಯ್ಯ ಅವರ ಮೊಮ್ಮಗ, ದಿ. ರಾಕೇಶ್ ಸಿದ್ದರಾಮಯ್ಯ ಅವರ ಪುತ್ರ ಧವನ್ ರಾಕೇಶ್ (Dhavan Rakesh) 12ನೇ ತರಗತಿ ಪಾಸ್‌ ಮಾಡಿದ್ದು, ಸಿದ್ದರಾಮಯ್ಯ ಅವರಿಂದಲೇ ಪ್ರಮಾಣಪತ್ರ ಸ್ವೀಕರಿಸಿರುವುದು ವಿಶೇಷ. ಇದನ್ನೂ ಓದಿ: ನನಗೆ ಜೀರೋ ಟ್ರಾಫಿಕ್‌ ಸೌಲಭ್ಯ ಬೇಡ; ಸಾರ್ವಜನಿಕರಿಗೆ ತೊಂದರೆಯಾಗುತ್ತೆ ಅಂತ ಈ ನಿರ್ಧಾರ: ಸಿಎಂ

    ಈ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ನನ್ನ ಮೊಮ್ಮಗ 12ನೇ ತರಗತಿ ಪೂರ್ಣಗೊಳಿಸಿದ್ದಾನೆ. ಬೆಂಗಳೂರಿನ ಕೆನಡಿಯನ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು. ಅಲ್ಲದೇ ಈ ಕಾರ್ಯಕ್ರಮದ ಭಾಗವಾಗಿದ್ದು, ನನಗೆ ತುಂಬಾ ಸಂತೋಷವಾಯಿತು. 12ನೇ ತರಗತಿ ಪೂರ್ಣಗೊಳಿಸಿದ್ದಕ್ಕಾಗಿ ಧವನ್‌ ರಾಕೇಶ್‌ನನ್ನ ಅಭಿನಂದಿಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.

    ಕೆಲವು ದಿನಗಳ ಹಿಂದೆಯಷ್ಟೇ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಚುನಾವಣಾ ಪ್ರಚಾರ ಸಭೆಯಲ್ಲಿ ಧವನ್‌ ರಾಕೇಶ್‌ ಭಾಗಿಯಾಗಿದ್ದರು. ಈ ವೇಳೆ ಧವನ್‍ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವತಃ ಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ ಎಂದು ಹೇಳಿದ್ದರು. ಇದನ್ನೂ ಓದಿ: ಪತಿ ಹೆಸರನ್ನ ಹಣೆ ಮೇಲೆ ಹಚ್ಚೆ ಹಾಕಿಸಿಕೊಂಡ ಬೆಂಗ್ಳೂರು ಮಹಿಳೆ – ಓವರ್ ಆಕ್ಷನ್ ಅಂತಾ ನೆಟ್ಟಿಗರಿಂದ ತರಾಟೆ

    ಜೊತೆಗೆ ವಿದ್ಯಾಭ್ಯಾಸ ಮುಗಿಸಿದ ಬಳಿಕ ರಾಜಕೀಯಕ್ಕೆ ಬರುತ್ತಾನೆ ಎಂದಿದ್ದರು. ಧವನ್‌ ಸಹ ತಾತನಂತೆ ಕಾನೂನು ಪದವಿ ಪಡೆದು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿದ್ದರು.

  • ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ರದ್ದು

    ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ರದ್ದು

    ನವದೆಹಲಿ: ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿ ನಿರ್ಧಾರ ಕೈಗೊಳ್ಳಲಾಗಿದೆ.

    ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ರಾಜ್‍ನಾಥ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಪರೀಕ್ಷೆ ನಡೆಸುವ ಬಗ್ಗೆ ಸಾಧ್ಯಾಸಾಧ್ಯತೆ ಹಾಗೂ ಪರ್ಯಾಯ ಮಾರ್ಗಗಳ ಬಗ್ಗೆ ಪ್ರಧಾನಿ ಮೋದಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಆದರೆ ಕೊರೊನಾದ ಕಠಿಣ ಪರಿಸ್ಥಿತಿ ಸಮಯದಲ್ಲಿ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳು ಹಿತದೃಷ್ಟಿಯಿಂದ ಸುರಕ್ಷಿತವಲ್ಲ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

    ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ಕೇಂದ್ರ ಸರ್ಕಾರ ಜೂನ್ 3ರೊಳಗೆ ಸುಪ್ರೀಂ ಕೋರ್ಟ್‍ಗೆ ಪ್ರತಿಕ್ರಿಯೆ ನೀಡಲಿದೆ. ಹೀಗಾಗಿ ಇಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪರೀಕ್ಷೆ ನಡೆಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು. ಸಧ್ಯದ ಕೊರೊನಾ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ರದ್ದುಪಡಿಸಲಾಗಿದೆ.

    ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸಹ ಕೊರೊನಾ ನಂತರದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಈ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿಲ್ಲ.

    ಪರೀಕ್ಷೆ ರದ್ದುಗೊಳಿಸುವ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜೂನ್ 3ರಂದು ವಿಚಾರಣೆ ನಡೆಸಲಿದೆ. ಈ ವೇಳೆ ಪರೀಕ್ಷೆ ರದ್ದು ಕುರಿತು ಕೇಂದ್ರ ಸರ್ಕಾರ ತನ್ನ ನಿರ್ಧಾರ ತಿಳಿಸಬೇಕಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಿದ್ದಾರೆ.

    ಪರೀಕ್ಷೆ ನಡೆಸುವ ಕುರಿತು ಕೇಂದ್ರ ಸಚಿವ ರಾಜ್‍ನಾಥ್ ಸಿಂಗ್ ಸಭೆಯಲ್ಲಿ ಮಾಹಿತಿ ನೀಡಿದ್ದು, ಹಲವು ರಾಜ್ಯಗಳು ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ನಡೆಸುವ ಕುರಿತು ಇಂಗಿತ ವ್ಯಕ್ತಪಡಿಸಿವೆ. ಇನ್ನೂ ಹಲವು ರಾಜ್ಯಗಳು ರದ್ದುಗೊಳಿಸಲು ಮನವಿ ಮಾಡಿವೆ. ಕೆಲ ರಾಜ್ಯಗಳು ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಬಳಿಕ ಪರೀಕ್ಷೆ ನಡೆಸುವಂತೆ ಹೇಳಿವೆ ಎಂದು ರಾಜನಾಥ್ ಸಿಂಗ್ ಸಭೆಯಲ್ಲಿ ವಿವರಿಸಿದರು. ಅಲ್ಲದೆ ಬಹುಪಾಲು ಜನ ಪರೀಕ್ಷೆ ನಡೆಸುವುದರ ಪರವಾಗಿದ್ದು, ಜುಲೈ 15 ಹಾಗೂ ಆಗಸ್ಟ್ 26ರ ನಡುವೆ ಪರೀಕ್ಷೆಗಳನ್ನು ನಡೆಸಲು ಸಿಬಿಎಸ್‍ಇ ಸೂಚಿಸಿತ್ತು.

  • 12ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸೈರಾಟ್ ಬೆಡಗಿ

    12ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸೈರಾಟ್ ಬೆಡಗಿ

    ಮುಂಬೈ: ಮರಾಠಿಯ ‘ಸೈರಾಟ್’ ಚಿತ್ರದ ಮೂಲಕ ಖ್ಯಾತರಾಗಿರುವ ನಟಿ ರಿಂಕು ರಾಜ್‍ಗುರು ಈಗ 12ನೇ ತರಗತಿ ಕಲಾ ವಿಭಾಗದಲ್ಲಿ ಶೇ. 82ರಷ್ಟು ಅಂಕಗಳಿಸಿ ತೇರ್ಗಡೆಯಾಗಿದ್ದಾರೆ.

    ಮಂಗಳವಾರ ಮಹಾರಾಷ್ಟ್ರದ 12ನೇ ತರಗತಿ ಫಲಿತಾಂಶ ಹೊರಬಂದಿದ್ದು, ನಟಿ ರಿಂಕು 650ಕ್ಕೆ 533 ಅಂಕಗಳಿಸಿದ್ದಾರೆ. ರಿಂಕು ಇಂಗ್ಲಿಷ್‍ನಲ್ಲಿ 54, ಮರಾಠಿ ಹಾಗೂ ಇತಿಹಾಸದಲ್ಲಿ 86, ಭೂಗೋಳಶಾಸ್ತ್ರದಲ್ಲಿ 98, ರಾಜಕೀಯ ವಿಜ್ಞಾನದಲ್ಲಿ 83, ಅರ್ಥಶಾಸ್ತ್ರದಲ್ಲಿ 77 ಹಾಗೂ ಪರಿಸರ ಶಿಕ್ಷಣದಲ್ಲಿ 50ಕ್ಕೆ 49 ಅಂಕ ಪಡೆದಿದ್ದಾರೆ.

    ಎಸ್‍ಎಸ್‍ಎಲ್‍ಸಿಯಲ್ಲಿ ಫಲಿತಾಂಶದಲ್ಲಿ ರಿಂಕು ಶೇ.66ರಷ್ಟು ಅಂಕಗಳಿಸಿದ್ದರು. ಈಗ ರಿಂಕು ಅವರು ಎಸ್‍ಎಸ್‍ಎಲ್‍ಸಿ ಪರೀಕ್ಷೆಗಿಂತಲೂ 12ನೇ ತರಗತಿಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

    2016ರಲ್ಲಿ ಬಿಡುಗಡೆಯಾದ ಸೈರಾಟ್ ಚಿತ್ರದಿಂದ ರಿಂಕು ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಸೈರಾಟ್ ಚಿತ್ರ ಸೂಪರ್ ಡೂಪರ್ ಹಿಟ್ ಆಗಿ ಮರಾಠಿ ಚಿತ್ರ ಉದ್ಯಮದಲ್ಲಿ ಎಲ್ಲ ದಾಖಲೆಯನ್ನು ಮುರಿದಿತ್ತು. ಅಲ್ಲದೆ ಈ ಚಿತ್ರಕ್ಕಾಗಿ ರಿಂಕು ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದರು.

    ಸೈರಾಟ್ ಚಿತ್ರ ಕನ್ನಡ, ಹಿಂದಿ, ಬೆಂಗಾಲಿ, ಒಡಿಯಾ ಹಾಗೂ ಪಂಜಾಬಿ ಭಾಷೆಯಲ್ಲಿ ರಿಮೇಕ್ ಮಾಡಲಾಗಿತ್ತು. ಅಲ್ಲದೇ ಹಲವು ಭಾಷೆಗಳಲ್ಲಿ ಡಬ್‍ ಕೂಡ ಮಾಡಲಾಗಿತ್ತು. ಕನ್ನಡದಲ್ಲಿ ‘ಮನಸ್ಸು ಮಲ್ಲಿಗೆ’ ಆಗಿ ರಿಮೇಕ್ ಮಾಡಲಾಗಿತ್ತು. ಈ ಚಿತ್ರದಲ್ಲೂ ರಿಂಕು ನಾಯಕಿಯಾಗಿ ನಟಿಸಿದ್ದರು. ಈ ಚಿತ್ರವನ್ನು ಎಸ್. ನಾರಾಯಣ್ ನಿರ್ದೇಶನ ಮಾಡಿದ್ದರು.