Tag: 3ನೇ ಅಲೆ

  • ಜನತೆಗೆ ಸಿಹಿಸುದ್ದಿ – ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳೋದು ಅನುಮಾನ

    ಜನತೆಗೆ ಸಿಹಿಸುದ್ದಿ – ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳೋದು ಅನುಮಾನ

    ಬೆಂಗಳೂರು: ಕೊರೊನಾ ಎರಡು ಅಲೆಗಳಿಂದ ಜನ ತತ್ತರಿಸಿ ಹೋಗಿ ಭಾರೀ ಸಾವು, ನೋವುಗಳು ಸಂಭವಿಸಿವೆ. ಈಗ ಜನ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಹೊತ್ತಲ್ಲಿ ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆಯನ್ನು ಸಹ ನೀಡಿದ್ದರು. ಆದರೆ ಇದೀಗ ಹೊಸ ಅಧ್ಯಯನದ ಪ್ರಕಾರ ಮೂರನೇ ಅಲೆ ಬರೋದು ಅನುಮಾನ ಎನ್ನಲಾಗುತ್ತಿದೆ.

    ಮೂರನೇ ಅಲೆ ಆಗಸ್ಟ್ ಮೂರನೇ ವಾರ ಇಲ್ಲವೇ ಕೊನೆಯ ವಾರ ಕಾಣಿಸಿಕೊಳ್ಳಬಹುದು. ಸೆಪ್ಟೆಂಬರ್ ಮೊದಲನೇ ವಾರ ಇಲ್ಲವೇ ಎರಡನೇ ವಾರ ಕಾಣಿಸಿಕೊಳ್ಳುತ್ತೆ ಎಂದು ಕೆಲ ಅಧ್ಯಯನಗಳು ಹೇಳಿದ್ದವು. ಅಧ್ಯಯನಗಳ ಈ ಊಹೆ ಈಗ ಉಲ್ಟಾ ಆಗಿದೆ. ಹೀಗಾಗಿ ಕೊರೊನಾ ಮೂರನೇ ಅಲೆ ಯಾವಾಗ ಬರುತ್ತೆ ಎಂದು ಹೇಳುವುದು ಅಸಾಧ್ಯವಾಗಿದೆ

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ, ಯಾವಾಗ ಹರಡುವಿಕೆ ಪ್ರಮಾಣ ಕಡಿಮೆಯಾಗುತ್ತದೆಯೋ ಆಗ ಸಹಜವಾಗಿಯೇ ರೂಪಾಂತರ ವೈರಸ್ ಪತ್ತೆ ಕಡಿಮೆಯಾಗುತ್ತದೆ. ಆದರೆ ಇದು ಬೂದಿ ಮುಚ್ಚಿದ ಕೆಂಡದ ರೀತಿಯ ಸ್ಥಿತಿ. ಹೀಗಾಗಿ ಮುಂಜಾಗೃತಾ ಕ್ರಮಗಳನ್ನು ಮರೆಯಬಾರದು ಎಂದು ತಿಳಿಸಿದರು. ಇದನ್ನೂ ಓದಿ: 39 ಕೋಟಿ ತೆರಿಗೆ ಬಾಕಿ- ಬಿಬಿಎಂಪಿಯಿಂದ ಮಂತ್ರಿ ಮಾಲ್‍ಗೆ ಬೀಗ

    ಈಗೀಗ ಶಾಲೆ, ಕಾಲೇಜುಗಳು ಪ್ರಾರಂಭವಾಗುತ್ತಿವೆ. ಬಿಸಿನೆಸ್ ವಲಯ ಚೇತರಿಸಿಕೊಳ್ಳುತ್ತಿದೆ. ಇದೆಲ್ಲದರ ಮಧ್ಯೆ ಕೊರೊನಾ ನಿಯಮಗಳನ್ನು ಮರೆಯಬಾರದು. ಪರಿಸರಕ್ಕೆ ಅನುಗುಣವಾಗಿ ವೈರಸ್ ರೂಪಾಂತರವಾಗುತ್ತದೆ. ನಾವು ಕೊರೊನಾ ನಿಯಮ ಪಾಲಿಸುವ ಮೂಲಕ, ನಮಗೆ ಬರದಂತೆ ನೋಡಿಕೊಂಡರೆ ವೈರಸ್ ರೂಪಾಂತರ ಹಾಗೂ 3ನೇ ಅಲೆಯನ್ನು ತಡೆಯಬಹುದು ಎಂದು ತಿಳಿಸಿದರು.

    ಕಾಣಿಸಿಕೊಂಡಿಲ್ಲ ಯಾಕೆ?
    ರಾಜ್ಯದಲ್ಲಿ ಈ ವರೆಗೆ ಹೊಸ ತಳಿ ಕಾಣಿಸಿಕೊಂಡಿಲ್ಲ. ಹೊಸ ತಳಿ ಕಾಣಿಸಿಕೊಂಡಾಗ ಮಾತ್ರ ಮೂರನೇ ಅಲೆ ಬರುವವುದರ ಬಗ್ಗೆ ಹೇಳಬಹುದಾಗಿದೆ. ಅಲ್ಲದೆ ಕೊರೊನಾ ವ್ಯಾಕ್ಸಿನೇಷನ್ ವೇಗ ಹೆಚ್ಚಾಗಿರುವುದು ಮೂರನೇ ಅಲೆ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ. ವ್ಯಾಕ್ಸಿನೇಷನ್ ಹೆಚ್ಚಾದಷ್ಟು ಮನುಷ್ಯನ ದೇಹದಲ್ಲಿ ಪ್ರತಿಕಾಯ ಸೃಷ್ಟಿಯಾಗಿ ರೂಪಾಂತರಿ ವೈರಸನ್ನು ತಡೆಗಟ್ಟಬಹುದಾಗಿದೆ. ಇದನ್ನೂ ಓದಿ: ಮೆಟ್ರೋ ಕಾಮಗಾರಿ – 30 ಅಡಿ ಮಣ್ಣು ಕುಸಿತ, ತಪ್ಪಿತು ಭಾರೀ ಅನಾಹುತ

    ಕೊರೊನಾ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಪ್ರಮಾಣ ಸಹ ಕಡಿಮೆಯಾಗಿದ್ದು, ಎರಡೆರಡು ಅಲೆಯ ಸಾವು, ನೋವು ನೋಡಿ ಜನ ಮನೆಗಳಲ್ಲಿ ಜಾಗೃತರಾಗಿದ್ದಾರೆ. ಇವು ಮೂರನೇ ಅಲೆ ಕಾಣಿಸಿಕೊಳ್ಳದಿರುವುದಕ್ಕೆ ಪ್ರಮುಖ ಕಾರಣಗಳಾಗಿವೆ.

    ಜನರ ದೇಹದಲ್ಲಿ ಆ್ಯಂಟಿ ಬಾಡಿ ಡೆವಲಪ್(ಪ್ರತಿಕಾಯ ಸೃಷ್ಟಿ) ಆಗಿರುವುದು ಮೂರನೇ ಅಲೆ ತಡವಾಗಿದೆ. ಕೊರೊನಾಗೆ ಮೃತಪಟ್ಟ ಕುಟುಂಬದಲ್ಲಿ ಮುನ್ನೆಚ್ಚರಿಕೆ ವಹಿಸಿರುವುದು. ಕೊರೊನಾ ಕೇಸ್ ಮತ್ತು ಸಾವು ಹೆಚ್ಚಾಗಿದ್ದ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಗಳು, ಲಾಕ್‍ಡೌನ್ ಮತ್ತು ಕಂಟೈನ್ಮೆಂಟ್ ಮಾಡಿ ವೈರಸ್ ಮ್ಯೂಂಟೆಟ್ ಆಗದಂತೆ ಮಾಡಿರುವುದು. ದೇಶದಲ್ಲಿ ಹೊಸ ಹೊಸ ವೆರಿಯಂಟ್ ಕಾಣಿಸಿಕೊಂಡರೂ ಅಷ್ಟೊಂದು ವೇಗವಾಗಿ ಹಬ್ಬುವ ವೈರಸ್ ಅಲ್ಲ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ವೈರಸ್ ತೀವ್ರತೆ ಕಡಿಮೆ ಆಗಿದೆ. ಇವು ಮೂರನೇ ಅಲೆ ವಿಳಂಬಕ್ಕೆ ಕಾರಣವಾಗಿವೆ.

    3ನೇ ಅಲೆ ಭೀಕರತೆ ಇರಲ್ವಾ?
    ಕೊರೊನಾ ಲಸಿಕೆ ಭಾಗಶಃ ಜನರಿಗೆ ಸಿಂಗಲ್ ಹಾಗೂ ಗಣನೀಯ ಪ್ರಮಾಣದಲ್ಲಿ ಡಬಲ್ ಡೋಸ್ ಮುಗಿದಿದೆ. ಚಿಕಿತ್ಸೆ ವಿಧಾನವೂ ಮತ್ತಷ್ಟು ಉನ್ನತೀಕರಣ ಕಂಡು ಕೊಂಡಿದೆ. ಜನರಲ್ಲಿ ಕೊರೊನಾ ಜಾಗೃತಿ ಸಹ ಹೆಚ್ಚಿನ ಪ್ರಮಾಣದಲ್ಲಿ ಪಸರಿಸಿದೆ. ಮಾಸ್ಕ್ ಹಾಕುವ ಪ್ರಮಾಣ ಹೆಚ್ಚಳವಾಗಿದೆ. ಎರಡನೇ ಅಲೆ ವೇಳೆ ಬಹುತೇಕರಿಗೆ ಸೋಂಕು ಹರಡಿದ ಹಿನ್ನೆಲೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳವಾಗಿದೆ. ಹೀಗಾಗಿ ಕೊರೊನಾ 3ನೇ ಅಲೆ ಬಂದರೂ 2ನೇ ಅಲೆಯಷ್ಟು ಭೀಕರತೆ ಇರುವುದಿಲ್ಲ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ:ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್

    ಕೊರೊನಾ ರೋಗ ಲಕ್ಷಣ ಪತ್ತೆ ಸಮಯದಲ್ಲೇ ತೀಕ್ಷ್ಣ ಕ್ರಮ ವಹಿಸಲಾಗುತ್ತಿದೆ. ಕ್ಲಸ್ಟರ್ ಗಳನ್ನು ಗುರುತಿಸಿ ಪ್ರಾಥಮಿಕ ಹಂತದಲ್ಲಿ ನಿಯಂತ್ರಣ ಮಾಡಲಾಗುತ್ತಿದೆ. ಕೊರೊನಾ ಕೇಸ್ ಕಡಿಮೆಯಾದರೂ ಟೆಸ್ಟ್ ಪ್ರಮಾಣ ಹೆಚ್ಚಿನ ಸಂಖ್ಯೆಯಲ್ಲಿದೆ. ಕೊರೊನಾ ಮುನ್ನಚ್ಚರಿಕೆಗಾಗಿ ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೇಸ್ ಕಂಡು ಬಂದರೂ ಶೀಘ್ರದಲ್ಲೇ ಕ್ರಮ ಜರುಗಿಸಲಾಗುತ್ತಿದೆ. ಇದರಿಂದಾಗಿ 3ನೇ ಅಲೆ ಅಪ್ಪಳಿಸುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ.

  • 1-10 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು

    1-10 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು

    ನವದೆಹಲಿ: ಕೊರೊನಾ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಾರದು ಎನ್ನುವ ಮಾತುಗಳ ನಡುವೆ ಈಗ 1-10 ವರ್ಷದೊಳಗಿನ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ವರದಿಗಳು ಲಭ್ಯವಾಗಿದ್ದು, ಈ ಅಂಕಿ ಅಂಶಗಳು ಆತಂಕವನ್ನು ಹೆಚ್ಚು ಮಾಡಿದೆ.

    ಮೂರನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಪ್ರತಿ ನೂರು ಮಂದಿ ಸೋಂಕಿತರ ಪೈಕಿ ಏಳು ಮಕ್ಕಳಿಗೆ ಕೊರೊನಾ ತಗುಲುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳು ಹೇಳುತ್ತಿವೆ.

    ಕಳೆದ ಮಾರ್ಚ್ ನಲ್ಲಿ 1-10 ವರ್ಷದ ಮಕ್ಕಳಲ್ಲಿ ಶೇ.2.80ರಷ್ಟು ಸೋಂಕು ಕಂಡು ಬಂದಿತ್ತು. ಅಗಸ್ಟ್ ನಲ್ಲಿ ಇದು ಶೇ.7.04ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಗೆ ತಜ್ಞರು ವರದಿ ನೀಡಿದ್ದಾರೆ. 1-10 ವರ್ಷದ ಮಕ್ಕಳಲ್ಲಿ ಸ್ಥಿರವಾಗಿ ಸೋಂಕು ಏರುತ್ತಿದ್ದು, ಮೂರನೇ ಅಲೆ ಹೆಚ್ಚಾದಲ್ಲಿ ಮಕ್ಕಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆ ಇದೆ: ಸಚಿವ ನಾಗೇಶ್

    2020 ಜೂನ್ ನಿಂದ 2021 ಪೆಬ್ರವರಿವರೆಗೂ ಅಂದರೆ ಒಂಭತ್ತು ತಿಂಗಳ ಅವಧಿಯಲ್ಲಿ ಶೇ.2.72 ರಿಂದ ಶೇ.3.59ರಷ್ಟು ವ್ಯಾಪ್ತಿಯಲ್ಲಿ ಮಕ್ಕಳಲ್ಲಿ ಸೋಂಕು ಕಂಡು ಬಂದಿತ್ತು. ಆದರೆ ಈ ವರ್ಷ ಐದು ತಿಂಗಳ ಅವಧಿಯಲ್ಲಿ ಶೇ.4, 5ರಷ್ಟು ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುವುದು ಹೆಚ್ಚಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಮಟ್ಟದಲ್ಲೂ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: ಸೆ.17 ರಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಆರಂಭ

    ಲಭ್ಯವಿರುವ ಮಾಹಿತಿಗಳ ಪ್ರಕಾರ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ, ಆಗಸ್ಟ್ ತಿಂಗಳಲ್ಲಿ ಮಕ್ಕಳಲ್ಲಿ ಕೊರೊನಾ ಪ್ರಕರಣಗಳು ಮಿಜೋರಾಂನಲ್ಲಿ ಅತಿ ಹೆಚ್ಚು ಅಂದರೆ ಶೇ.16.48ರಷ್ಟು ದಾಖಲಾಗಿವೆ. ದೆಹಲಿಯಲ್ಲಿ ಅತಿ ಕಡಿಮೆ ಅಂದರೆ ಶೇ.2.25ರಷ್ಟು ಪ್ರಕರಣ ದಾಖಲಾಗಿವೆ. ಮೇಘಾಲಯ ಶೇ.9.35, ಮಣಿಪುರ ಶೇ.8.74, ಕೇರಳ ಶೇ.8.62, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಶೇ.8.2, ಸಿಕ್ಕಿಂ ಶೇ.8.02, ದಾದ್ರಾ ಮತ್ತು ನಗರ ಹವೇಲಿ ಶೇ.7.69 ಹಾಗೂ ಅರುಣಾಚಲ ಪ್ರದೇಶದಲ್ಲಿ ಶೇ.7.38ರಷ್ಟು ಮಕ್ಕಳಲ್ಲಿ ಸೋಂಕು ಕಂಡು ಬಂದಿದೆ.

    ರಾಷ್ಟ್ರೀಯ ಸರಾಸರಿ ಪ್ರಮಾಣ ಶೇ.7.04ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿವೆ. ಆಗಸ್ಟ್ ನಲ್ಲಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಪ್ರಕರಣಗಳು ಪುದುಚೇರಿ ಶೇ.6.95, ಗೋವಾ ಶೇ.6.86, ನಾಗಾಲ್ಯಾಂಡ್ ಶೇ.5.48, ಅಸ್ಸಾಂ ಶೇ.5.04, ಕರ್ನಾಟಕ ಶೇ.4.59, ಆಂಧ್ರ ಪ್ರದೇಶ ಶೇ.4.53, ಒಡಿಶಾ ಶೇ.4.18, ಮಹಾರಾಷ್ಟ್ರ ಶೇ.4.08, ತ್ರಿಪುರ ಶೇ.3.54, ದೆಹಲಿ ಶೇ.2.25ರಷ್ಟು ದಾಖಲಾಗಿವೆ.

  • ಅಕ್ಟೋಬರ್, ನವೆಂಬರ್‍ನಲ್ಲಿ ಮೂರನೇ ಅಲೆ ಸಾಧ್ಯತೆ: ಡಾ. ಮಂಜುನಾಥ್

    ಅಕ್ಟೋಬರ್, ನವೆಂಬರ್‍ನಲ್ಲಿ ಮೂರನೇ ಅಲೆ ಸಾಧ್ಯತೆ: ಡಾ. ಮಂಜುನಾಥ್

    ಬೆಂಗಳೂರು: ಅಕ್ಟೋಬರ್‍ನಲ್ಲಿ 3ನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಹಾಗೂ ಮಕ್ಕಳಿಗಿಂತ ವ್ಯಾಕ್ಸಿನ್ ಹಾಕಿಸಿಕೊಳ್ಳದವರೇ ಟಾರ್ಗೆಟ್ ಆಗುತ್ತಾರೆ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಡಾ. ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

    ಈ ಕುರಿತಂತೆ ಮಾತನಾಡಿದ ಅವರು, ಮೂರನೇ ಅಲೆ ಯಾವ ರೀತಿ ಬರುತ್ತದೆ ಎಂಬುವುದನ್ನು ನಾವು ಈಗಲೇ ನಿಖರವಾಗಿ ಹೇಳುವುದಕ್ಕೆ ಆಗುವುದಿಲ್ಲ. ಎರಡನೇ ಅಲೆ ಕಡಿಮೆಯಾಗುತ್ತಾ, ಮೂರನೇ ಅಲೆಗೆ ಸೇರಿಕೊಳ್ಳುತ್ತದೆ. ಮೂರನೇ ಅಲೆ ಬಹುಶಃ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಬರುವ ಸಾಧ್ಯತೆಗಳಿದೆ. ಆದರೆ ಸಾರ್ವಜನಿಕರು ಯಾವ ರೀತಿ ವರ್ತಿಸುತ್ತಾರೆಯೋ ಅದರ ಮೇಲೆ ಅವಲಂಬಿತವಾಗಿರುತ್ತದೆ. ಜನರು ಸಹಕರಿಸದೇ ಇದ್ದರೆ, ಮೂರನೇ ಅಲೆಯನ್ನು ಬೇಗನೇ ಆಹ್ವಾನ ಮಾಡಿಕೊಂಡಂತೆ ಆಗುತ್ತದೆ. ಜನರಿಗೆ ಉಚಿತವಾಗಿ ಕೊರೊನಾ ಟೆಸ್ಟ್, ಚಿಕಿತ್ಸೆ, ಇದೀಗ ಉಚಿತವಾಗಿ ಲಸಿಕೆ ಹೀಗೆ ಸರ್ಕಾರ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಾಗಿ ಕೊರೊನಾ ಮೂರನೇ ಅಲೆಯನ್ನು ನಿಯಂತ್ರಿಸಬೇಕಾದರೆ ಸರ್ಕಾರದ ಜೊತೆಗೆ ಸಾರ್ವಜನಿಕರು ಸಹಕರಿಸಬೇಕಾಗುತ್ತದೆ.

    ಈಗಾಗಲೇ ಎರಡನೇ ಅಲೆಯಲ್ಲಿ ನಿಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದೀರಾ. ಹಾಗಾಗಿ ಈ ಎಲ್ಲಾವನ್ನು ಮನಗೊಂಡು ನಡೆದುಕೊಳ್ಳಬೇಕಾಗುತ್ತದೆ. ಇದೀಗ ಎರಡನೇ ಅಲೆಯಿಂದ ಮೂರನೇ ಅಲೆ ಬರುತ್ತದೆ. ಇನ್ನೂ ಕೆಲವರು ನಾಲ್ಕನೇ ಅಲೆ ಕೂಡ ಬರಬಹುದು ಎಂದು ಹೇಳುತ್ತಿದ್ದಾರೆ.

    ಇಷ್ಟೇಲ್ಲಾ ಮಾಹಿತಿ ಇರುವಾಗ ವರ್ಷಗಟ್ಟಲೇ ಲಾಕ್‍ಡೌನ್ ಮಾಡಲು ಸಾಧ್ಯವಿಲ್ಲ. ಹಾಗಾಗಿ ನಾವು ದಿನನಿತ್ಯದ ಕೆಲಸಗಳನ್ನು ಮಾಡುತ್ತಾ, ಲಸಿಕೆ ಪಡೆದು, ಮುನ್ನೆಚ್ಚರಿಕೆ ಕ್ರಮವನ್ನು ವಹಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ನರ್ಸ್ ಬದಲು ತಾನೇ ಲಸಿಕೆ ಕೊಟ್ಟ ಕೌನ್ಸಿಲರ್

  • ಕೋವಿಡ್ ಮೂರನೇ ಅಲೆ, ರಾಜ್ಯದಲ್ಲೇ ಮೊದಲು ಹಾವೇರಿಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ: ಬೊಮ್ಮಾಯಿ

    ಕೋವಿಡ್ ಮೂರನೇ ಅಲೆ, ರಾಜ್ಯದಲ್ಲೇ ಮೊದಲು ಹಾವೇರಿಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ: ಬೊಮ್ಮಾಯಿ

    ಹಾವೇರಿ: ಕೊರೊನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಬೇಕೆಂಬ ಉದ್ದೇಶದಿಂದ ರಾಜ್ಯದಲ್ಲೇ ಮೊದಲ ಬಾರಿಗೆ ಜಿಲ್ಲೆಯಲ್ಲಿ 16 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆಗೆ ಗೃಹ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು.

    ನಗರದ ನಾಗೇಂದ್ರನಮಟ್ಟಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಮಕ್ಕಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ತಪಾಸಣೆಗೆ ಒಳಗಾದ ಎಲ್ಲ ಮಕ್ಕಳ ಆರೋಗ್ಯ ಮಾಹಿತಿ ಸಂಗ್ರಹಿಸಲಾಗುವುದು. ಮೂರನೇ ಅಲೆಯ ಪರಿಣಾಮ ಕ್ಷೀಣಿಸುವವರೆಗೂ ಅವರಿಗೆ ಅಗತ್ಯ ವೈದ್ಯಕೀಯ ಉಪಚಾರದ ನಿರ್ವಹಣೆ ಮೂಲಕ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದರು.

    ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ತಜ್ಞರು ಪಾಲ್ಗೊಂಡು ತಪಾಸಣೆ ನಡೆಸಲಿದ್ದಾರೆ. ಜೂನ್ 25 ರಿಂದ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ಆರಂಭಗೊಳ್ಳಲಿದೆ. ಜುಲೈ 30ರೊಳಗೆ ಜಿಲ್ಲೆಯ 16 ವರ್ಷದೊಳಗಿನ 2.75 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಲಾಗುವುದು. ಮಕ್ಕಳೊಂದಿಗೆ ಶಿಕ್ಷಕರು ಹಾಗೂ ಮಕ್ಕಳ ಪಾಲಕರಿಗೂ ಆರೋಗ್ಯ ತಪಾಸಣೆ ಹಾಗೂ ಕೋವಿಡ್ ವ್ಯಾಕ್ಸಿನ್ ಹಾಕಲು ಕ್ರಮ ವಹಿಸಲಾಗಿದೆ. ಮಕ್ಕಳ ಆರೋಗ್ಯದ ರಕ್ಷಣೆ ಮಾಡಲು ಈ ಶಿಬಿರವನ್ನು ಆರಂಭಿಸಲಾಗಿದೆ ಎಂದು ಹೇಳಿದರು.

    ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಲು ಇನ್ನೂ ನಿರ್ಧಾರವಾಗಿಲ್ಲ. ಹೀಗಾಗಿ ಲಸಿಕೆ ನೀಡುವವರೆಗೂ ಅವರ ಆರೋಗ್ಯದ ಕಾಳಜಿ ಪ್ರಮುಖವಾಗಿದೆ. ಪ್ರತಿಯೊಂದು ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಅವರ ದಾಖಲೆಗಳನ್ನು ನಿರ್ವಹಿಸಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ ಪೌಷ್ಠಿಕ ಆಹಾರ, ಔಷಧಗಳನ್ನು ಒದಗಿಸುವುದರ ಮೂಲಕ ಆರೋಗ್ಯ ಸದೃಢರನ್ನಾಗಿಸಿ, ಕೋವಿಡ್‍ನಿಂದ ರಕ್ಷಿಸುವ ಕೆಲಸ ಮಾಡಲಾಗುವುದು. ತಪಾಸಣೆಯ ಸಂದರ್ಭದಲ್ಲಿ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಠಿಕ ಆಹಾರ ಕಿಟ್, ಪ್ರೋಟೀನ್ ಸೇರಿದಂತೆ ರೋಗನಿರೋಧ ಶಕ್ತಿ ಹೆಚ್ಚಿಸುವ ಪೂರಕ ಸಾಮಗ್ರಿಗಳನ್ನು ನೀಡಲಾಗುವುದು ಎಂದು ಹೇಳಿದರು.

    ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 30 ರಿಂದ 50 ಸಾವಿರ ಮಕ್ಕಳಿವೆ. ಅವರನ್ನು ತಪಾಸಣೆ ಮಾಡಿ, ಬಯೋಡಾಟಾ, ಆರೋಗ್ಯ ಸಮಸ್ಯೆಗಳ ಕುರಿತಂತೆ ಮಾಹಿತಿ ಸಂಗ್ರಹಿಸಿ ಮುಂದಿನ ನಾಲ್ಕೈದು ತಿಂಗಳು ಮಾನಿಟರ್ ಮಾಡಲಾಗುವುದು. ಶಿಕ್ಷಕರು, ಪಾಲಕರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ದಣಿವರಿಯದೆ ಕೆಲಸ ಮಾಡಿ, ಈ ಕಾರ್ಯಕ್ರಮವನ್ನು ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.

    ಶಾಸಕ ಹಾಗೂ ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡದ ಆಯೋಗದ ಅಧ್ಯಕ್ಷ ನೆಹರು ಓಲೇಕಾರ ಮಾತನಾಡಿ, ರಾಜ್ಯದಲ್ಲೇ ಪ್ರಥಮವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಕಾಳಜಿ ವಹಿಸಿ ಕೋವಿಡ್ ಮೂರನೇ ಅಲೆಯ ಪ್ರಭಾವದಿಂದ ಮಕ್ಕಳನ್ನು ರಕ್ಷಿಸಲು ಆರೋಗ್ಯ ತಪಾಸಣೆ ಮಾಡಿಸುತ್ತಿದ್ದಾರೆ. ಮಕ್ಕಳಿಗೆ ಸಣ್ಣ ಜ್ವರ, ಶೀತ ಬಂದರೂ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸೇರಿಸಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳಿಗೆ ಮಕ್ಕಳನ್ನು ತಪಾಸಣೆಗೆ ಕರೆದುಕೊಂಡು ಹೋಗಬೇಡಿ. ಮುಂದಿನ ಮೂರು ತಿಂಗಳವರೆಗೆ ಮಕ್ಕಳಿಗೆ ಯಾವುದೇ ಆರೋಗ್ಯ ಸಮಸ್ಯೆ ಇದ್ದರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ. ಬೇರೆಯವರ ಮನೆಗೆ ಮಕ್ಕಳನ್ನು ಕಳುಹಿಸಬೇಡಿ. ಶಿಕ್ಷಕರ ಬಳಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ, ಚಿಕಿತ್ಸೆಗೆ ನೆರವು ಪಡೆಯಿರಿ ಎಂದು ಮನವಿ ಮಾಡಿಕೊಂಡರು.

    ಮಕ್ಕಳ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಪೌಷ್ಠಿಕ ಆಹಾರದ ಕಿಟ್, ಅಕ್ಷರ ದಾಸೋಹದಡಿ ಆಹಾರದ ಕಿಟ್, ಅಂಗವಾಡಿ ಮಕ್ಕಳಿಗೆ ಔಷಧಿ ಕಿಟ್, ಕಡಿಮೆ ತೂಕದ ಮಕ್ಕಳಿಗೆ ಪೂರಕ ಪೌಷ್ಠಿಕ ಪ್ರೋಟಿನ್ ಕಿಟ್‍ಗಳನ್ನು ಗೃಹ ಸಚಿವರು ಹಾಗೂ ಶಾಸಕರು ವಿತರಿಸಿದರು.

  • ಕೊರೊನಾ 3ನೇ ಅಲೆ ಮಕ್ಕಳನ್ನು ಬಾಧಿಸುವ ಬಗ್ಗೆ ಪುರಾವೆಗಳಿಲ್ಲ: ಡಾ.ವಿ.ಕೆ.ಪೌಲ್

    ಕೊರೊನಾ 3ನೇ ಅಲೆ ಮಕ್ಕಳನ್ನು ಬಾಧಿಸುವ ಬಗ್ಗೆ ಪುರಾವೆಗಳಿಲ್ಲ: ಡಾ.ವಿ.ಕೆ.ಪೌಲ್

    ನವದೆಹಲಿ: ಕೊರೊನಾ 3ನೇ ಅಲೆ ಮಕ್ಕಳನ್ನು ಬಾಧಿಸುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಪ್ರಧಾನಿ ಮೋದಿಯವರ ಕೊರೊನಾ ನಿರ್ವಹಣೆ ತಂಡದ ಸದಸ್ಯ ಡಾ.ವಿ.ಕೆ.ಪೌಲ್ ಹೇಳಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ಅವರು, ಕಳೆದ 2 ಅಲೆಗಳಿಗಿಂತ ಕೊರೊನಾ 3ನೇ ಅಲೆ ಮಕ್ಕಳನ್ನು ಹೆಚ್ಚು ಬಾಧಿಸಲಿದೆ ಎಂಬ ಪೋಷಕರ ಆತಂಕದ ಕುರಿತು ಮಾತನಾಡಿದ್ದಾರೆ. ಮೂರನೇ ಅಲೆ ನಿರ್ದಿಷ್ಟವಾಗಿ ಮಕ್ಕಳ ಮೇಲೆಯೇ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಖಚಿತವಾಗಿಲ್ಲ. ಇಲ್ಲಿಯವರೆಗೆ ವಯಸ್ಕರಂತೆ ಮಕ್ಕಳಿಗೂ ಸಹ ಕೊರೊನಾ ಸೋಂಕು ತಗುಲಿದೆ. ಅಂದರೆ ವಯಸ್ಕರಿಗೆ ಹೆಚ್ಚು ಪರಿಣಾಮ ಬೀರಿದ ರೀತಿಯಲ್ಲೇ ಮಕ್ಕಳಿಗೂ ಬೀರಿದೆ ಎಂದು ಅವರು ವಿವರಿಸಿದ್ದಾರೆ.

    ಡಿಸೆಂಬರ್ 2020 ರಿಂದ ಜನವರಿ 2021ರ ಅವಧಿಯಲ್ಲಿ ವಿವಿಧ ವಯಸ್ಸಿನವರಲ್ಲಿ ಎಷ್ಟು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂಬುದರ ಕುರಿತು ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದೆ. ‘ಬ್ಲಡ್ ಸೀರಮ್ ಆಧರಿಸಿ ಜನಸಂಖ್ಯೆಯಲ್ಲಿ ರೋಗಕಾರಕದ ಮಟ್ಟ’ವನ್ನು ತಿಳಿಸಿದ್ದು, ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದೆ.

    ದೆಹಲಿಯ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ಸಹ ಈ ಬಗ್ಗೆ ತಿಳಿಸಿದ್ದು, ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಗೆ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತದೆ ಎಂಬುದರ ಬಗ್ಗೆ ಯಾವುದೇ ದೃಢೀಕೃತ ಪುರಾವೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಕೊರೊನಾ ಮೂರನೇ ಅಲೆ ಮಕ್ಕಳನ್ನು ಕಾಡುತ್ತದೆ ಎಂಬ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಈಗಾಲೇ ಕೊರೊನಾ ವ್ಯಾಕ್ಸಿನ್‍ನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ. ಈ ಟ್ರಯಲ್ ಪೂರ್ಣಗೊಳ್ಳುತ್ತಿದ್ದಂತೆ ಮಕ್ಕಳಿಗೂ ಸಹ ಲಸಿಕೆಯನ್ನು ನೀಡಲಾಗುತ್ತದೆ. ಇದಕ್ಕಾಗಿ ಸರ್ಕಾರ ಎಲ್ಲ ಸಿದ್ಧತೆಗಳನ್ನು ಸಹ ಮಾಡಿಕೊಂಡಿದೆ.

  • ತಜ್ಞರ ವರದಿ ಆಧರಿಸಿ ಕೋವಿಡ್ ಮೂರನೇ ಅಲೆ ತಡೆಯಲು ಕ್ರಮ: ಸುಧಾಕರ್

    ತಜ್ಞರ ವರದಿ ಆಧರಿಸಿ ಕೋವಿಡ್ ಮೂರನೇ ಅಲೆ ತಡೆಯಲು ಕ್ರಮ: ಸುಧಾಕರ್

    ಚಿಕ್ಕಬಳ್ಳಾಪುರ: ಸಂಭವನೀಯ ಕೋವಿಡ್ ಮೂರನೇ ಅಲೆ ತಡೆಯಲು ಸರ್ಕಾರ ಸರ್ವ ಸಿದ್ಧತೆಗಳನ್ನ ಮಾಡಿಕೊಳ್ಳಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಸಧ್ಯ ಬ್ಲ್ಯಾಕ್ ಫಂಗಸ್ ಗೆ ಔಷಧಿ ಕೊರತೆ ಇಲ್ಲ. ನಿನ್ನೆ 8,700 ವಯಲ್ಸ್ ಲೈಫೋಜೋಮಲ್ ಅಂಪಿಟೆರಿಸನ್ ರಾಜ್ಯಕ್ಕೆ ಬಂದಿದೆ. ಇದುವರೆಗೂ 18,000 ವಯಲ್ಸ್ ರಾಜ್ಯಕ್ಕೆ ಬಂದಿದೆ. 2-3 ದಿನದಿಂದ ಔಷಧಿ ಸರಬರಾಜು, ಪೂರೈಕೆ ಚೆನ್ನಾಗಿ ಆಗುತ್ತಿದೆ. ಈ ವಾರದಲ್ಲಿ ಸಹ ಹೆಚ್ಚು ಔಷಧ ಸರಬರಾಜು ಆಗಲಿದೆ. ರೆಮ್‍ಡಿಸಿವಿರ್ ನ ಸಮಸ್ಯೆ ಬಗೆಹರಿದಂತೆ ಈ ಸಮಸ್ಯೆ ಸಹ ಬಗೆಹರಿದು ಔಷಧಿ ಸಿಗಲಿದೆ. ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ- ಶಸ್ತ್ರಚಿಕಿತ್ಸೆ ಉಚಿತವಾಗಿ ಮಾಡಲಾಗುತ್ತಿದೆ ಎಂದರು.

    ಮತ್ತೊಂದೆಡೆ ಮೂರನೇ ಅಲೆ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮತಿ ರಚನೆ ಮಾಡಲಾಗಿದೆ. 12-13 ಮಂದಿ ಹೆಸರಾಂತ ವೈದ್ಯರು, ಮಕ್ಕಳ ಮಾನಸಿಕ ತಜ್ಞರು ಸಮತಿಯಲ್ಲಿ ಇದ್ದಾರೆ. 0-12-18 ವರ್ಷದವರಗೆ ಯಾವ ರೀತಿ ಕೊರೊನಾ ಭಾಧಿಸಲಿದೆ? ಯಾವ ರೀತಿ ಚಿಕಿತ್ಸೆ ಕೊಡಬೇಕು ಎಂದು ಎಲ್ಲಾ ಆಯಾಮಗಳಲ್ಲಿ ಅಧ್ಯಯನ ಮಾಡಿ ಶೀಘ್ರವೇ ವರದಿ ನೀಡಲಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರ ಕ್ರಮ, ಸಿದ್ಧತೆಗಳನ್ನ ಮಾಡಿಕೊಳ್ಳಲಿದೆ ಎಂದರು.