Tag: 5 States

  • ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ –   ಇಂದು ಮಧ್ಯಾಹ್ನ 3.30ಕ್ಕೆ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟ

    ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ – ಇಂದು ಮಧ್ಯಾಹ್ನ 3.30ಕ್ಕೆ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟ

    ನವದೆಹಲಿ: ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆಗೆ ಇಂದು ಚುನಾವಣಾ ದಿನಾಂಕ ನಿಗಧಿಯಾಗಲಿದೆ. ಮಧ್ಯಾಹ್ನ 3:30 ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದ್ದು ಐದು ರಾಜ್ಯಗಳಿಗೆ ಚುನಾವಣಾ ದಿನಾಂಕ ಪ್ರಕಟಿಸಲಿದೆ.

    ಫೆಬ್ರವರಿ ಮಾರ್ಚ್ ವೇಳೆಗೆ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತಾರಖಂಡ್‍ಗೆ ಚುನಾವಣೆ ನಡೆಯಬೇಕಿದೆ. ಈಗಾಗಲೇ ಕೇಂದ್ರ ಚುನಾವಣಾ ಆಯೋಗವು ಕೂಡಾ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್

    ಕೊರೊನಾ ಮೂರನೇ ಅಲೆ ಹೆಚ್ಚುತ್ತಿರುವ ಹಿನ್ನಲೆ ಚುನಾವಣೆ ಮುಂದೂಡಬೇಕು ಎನ್ನುವ ಒತ್ತಡ ಕೇಳಿ ಬಂದಿತ್ತು. ಈ ಸಂಬಂಧ ರಾಜಕೀಯ ಪಕ್ಷಗಳ ಜೊತೆಗೆ ಆಯೋಗ ಸಭೆ ನಡೆಸಿತ್ತು. ಅಲ್ಲದೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಚುನಾವಣೆ ನಡೆಸುವ ಸಾಧ್ಯತೆಗಳ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮತ್ತು ಗೃಹ ಇಲಾಖೆಯ ಜೊತೆಗೂ ಮುಖ್ಯ ಆಯುಕ್ತ ಸುಶೀಲ್ ಚಂದ್ರ ಸಭೆ ನಡೆಸಿದ್ದರು. ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿ ಹೋರಾಟ ಮಾಡ್ಬೇಡಿ – ಕಾಂಗ್ರೆಸ್‍ಗೆ ಕಾರಜೋಳ ಮನವಿ

    ಸಭೆಯಲ್ಲಿ ರಾಜಕೀಯ ಪಕ್ಷಗಳು ನಿಗಧಿತ ಅವಧಿಯಲ್ಲಿ ಚುನಾವಣೆ ನಡೆಯಬೇಕು ಎಂದು ಮನವಿ ಮಾಡಿವೆ. ಅಲ್ಲದೇ ವ್ಯಾಕ್ಸಿನೇಷನ್ ಹೆಚ್ಚಿಸುವ ಮೂಲಕ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಚುನಾವಣೆ ನಡೆಸಲು ಸಾಧ್ಯವಿದೆ ಎಂದು ಆರೋಗ್ಯ ಮತ್ತು ಗೃಹ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಆಯೋಗ ದಿನಾಂಕ ಪ್ರಕಟಿಸಲು ತಿರ್ಮಾನಿಸಿದೆ.

    ಉತ್ತರ ಪ್ರದೇಶದಲ್ಲಿ 403 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 6-7 ಹಂತಗಳಲ್ಲಿ ಮತದಾನ ನಡೆಯಬಹುದು ಎನ್ನಲಾಗಿದೆ. ಪಂಜಾಬ್ ನ 117, ಉತ್ತರಾಖಂಡ 70, ಗೋವಾದ 40 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಬಹುದು ಎನ್ನಲಾಗಿದ್ದು, ಮಣಿಪುರದ 60 ಸ್ಥಾನಗಳಿಗೆ ಭದ್ರತೆ ಕಾರಣಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಬಹುದು ಎಂದು ಮೂಲಗಳು ಹೇಳಿವೆ.

  • 5 ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟ – ಮೇ 2ಕ್ಕೆ ಫಲಿತಾಂಶ

    5 ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟ – ಮೇ 2ಕ್ಕೆ ಫಲಿತಾಂಶ

    – ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಪುದುಚೇರಿಯಲ್ಲಿ ಚುನಾವಣೆ
    – ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ

    ನವದೆಹಲಿ: ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದ್ದು, ಮತ ಎಣಿಕೆ ಮೇ 2 ರಂದು ನಡೆಯಲಿದೆ.

    ಚುನಾವಣಾ ಆಯೋಗದ ಆಯುಕ್ತ ಸುನಿಲ್ ಅರೋರಾ ಸುದ್ದಿಗೋಷ್ಠಿ ನಡೆಸಿ ದಿನಾಂಕವನ್ನು ಪ್ರಕಟಿಸಿದ್ದು, ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

    ಕೇರಳ ಹಾಗೂ ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 6ರಂದು ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಮಾರ್ಚ್ 27, ಏಪ್ರಿಲ್ 1 ರಂದು 2ನೇ ಹಂತ, ಏಪ್ರಿಲ್ 6ರಂದು 3ನೇ ಹಂತದ ಮತದಾನ ನಡೆಯಲಿದೆ. ಎಲ್ಲ ರಾಜ್ಯಗಳ ಚುನಾವಣೆಗಳ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ.

    ಕೇರಳದ 140, ತಮಿಳುನಾಡು 234, ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಕ್ಷೇತ್ರಗಳಿವೆ. ಇತ್ತೀಚೆಗಷ್ಟೇ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡಿದ್ದರಿಂದ ಪುದುಚೇರಿ ಕೇಂದ್ರಾಡಳಿತ ಪ್ರದೇಶದ 30 ಕ್ಷೇತ್ರಗಳಲ್ಲಿ ಸಹ ಚುನಾವಣೆ ನಡೆಯಲಿದೆ.

    ಮತಗಟ್ಟೆಗಳಲ್ಲಿನ ಸಿದ್ಧತೆ, ಭದ್ರತೆ ಸೇರಿದಂತೆ ಕೊರೊನಾ ನಿಯಮಗಳ ಪಾಲನೆ ಕುರಿತು ಚುನಾವಣೆ ಆಯೋಗದ ಅಧಿಕಾರಿಗಳು ಸಭೆ ನಡೆಸಿ ಚರ್ಚಿಸಿದ್ದು, ಭಾರೀ ಬಂದೋಬಸ್ತ್ ನೊಂದಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

    ಒಟ್ಟು 824 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 18.6 ಕೋಟಿ ಮತದಾರರು ಮತದಾನ ಮಾಡುತ್ತಿದ್ದು, 2.7 ಲಕ್ಷ ಬೂತ್‍ಗಳನ್ನು ಸ್ಥಾಪಿಸಲಾಗುತ್ತದೆ. ವ್ಯಾಕ್ಸಿನೇಷನ್ ಆಗಿರುವುದರಿಂದ ಸಕಾರಾತ್ಮಕ ವಾತಾವರಣ ಉಂಟಾಗಿದೆ. ಚುನಾವಣೆ ಪ್ರಚಾರದ ವೇಳೆ ರೋಡ್ ಶೋಗಳನ್ನು ನಡೆಸಬಹುದು ಎಂದು ಚುನಾವಣಾ ಆಯೋಗ ಅನುಮತಿ ನೀಡಿದೆ. ಹಿರಿಯ ನಾಗರಿಕರು, ಅನಾರೋಗ್ಯ ಪೀಡಿತರು ಹಾಗೂ ಅಗತ್ಯ ವಸ್ತುಗಳ ಉದ್ಯೋಗಿಗಳಿಗೆ ಮಾತ್ರ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ನೀಡಲಾಗಿದೆ.

  • ಮೇ 3ರ ಬಳಿಕ ಲಾಕ್‍ಡೌನ್ ವಿಸ್ತರಿಸಿ – ದೆಹಲಿ ಬಳಿಕ ಐದು ರಾಜ್ಯಗಳಿಂದ ಕೇಂದ್ರಕ್ಕೆ ಮನವಿ

    ಮೇ 3ರ ಬಳಿಕ ಲಾಕ್‍ಡೌನ್ ವಿಸ್ತರಿಸಿ – ದೆಹಲಿ ಬಳಿಕ ಐದು ರಾಜ್ಯಗಳಿಂದ ಕೇಂದ್ರಕ್ಕೆ ಮನವಿ

    ನವದೆಹಲಿ: ಮೇ 3ರ ಬಳಿಕ ಲಾಕ್‍ಡೌನ್ ವಿಸ್ತರಣೆ ಮಾಡುವಂತೆ ದೆಹಲಿ ಬಳಿಕ ಐದು ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. ನಾಳೆ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸಭೆ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

    ಮೇ 3ರ ಬಳಿಕ ಲಾಕ್‍ಡೌನ್ ವಿಸ್ತರಣೆ ಬಗ್ಗೆ ಗೊಂದಲದಲ್ಲಿರುವ ಕೇಂದ್ರ ಸರ್ಕಾರ ಈ ಬಗ್ಗೆ ಎಲ್ಲ ರಾಜ್ಯಗಳ ಸಿಎಂಗಳ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ನಾಳೆ ಬೆಳಗ್ಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಈ ಸಭೆ ನಡೆಯಲಿದೆ.

    ನಾಳಿನ ಸಭೆಗೂ ಮುನ್ನ ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್, ಒಡಿಶಾ, ಪಶ್ಚಿಮ ಬಂಗಾಳ ಲಾಕ್‍ಡೌನ್ ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿವೆ. ನಾಳಿನ ಸಭೆಯಲ್ಲೂ ಇದೇ ಅಂಶವನ್ನು ಒತ್ತಿ ಹೇಳುವ ಪ್ರಯತ್ನವಾಗಲಿದೆ. ಲಾಕ್‍ಡೌನ್ ಮುಂದುವರಿಸುವುದು ಸೂಕ್ತ ಹಂತ ಹಂತವಾಗಿ ವಿನಾಯಿತಿ ನೀಡಬೇಕು. ರಾಜ್ಯದ ಹಲವು ಪ್ರದೇಶದಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದ್ದು ಲಾಕ್‍ಡೌನ್ ತೆರವು ಒಳಿತಲ್ಲ ಎಂದು ಆಯಾ ರಾಜ್ಯದ ಸಿಎಂಗಳು ಅಭಿಪ್ರಾಯಪಟ್ಟಿದ್ದಾರೆ.

    ಗುಜರಾತ್, ಆಂಧ್ರಪ್ರದೇಶ, ತಮಿಳುನಾಡು, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ಇತರ ಆರು ರಾಜ್ಯಗಳು ಕೇಂದ್ರ ಸರ್ಕಾರದ ನಿರ್ದೇಶನವನ್ನು ಅನುಸರಿಸುವುದಾಗಿ ಹೇಳಿದ್ದು, ಅಸ್ಸಾಂ, ಕೇರಳ ಮತ್ತು ಬಿಹಾರ ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ವಿಡಿಯೋ ಸಮಾವೇಶದ ನಂತರ ಮುಂದಿನ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ. ಈ ನಡುವೆ ತೆಲಂಗಾಣ ಮೇ 7ರವರೆಗೂ ಲಾಕ್‍ಡೌನ್ ವಿಸ್ತರಿಸಿದೆ.

    ಮಹಾರಾಷ್ಟ್ರ ಕೇಂದ್ರ ಸರ್ಕಾರ ನೀಡಿರುವ ವಿನಾಯಿತಿಗಳನ್ನು ರಾಜ್ಯದಲ್ಲಿ ನೀಡುವುದಿಲ್ಲ ಎಂದಿದ್ದು, ಉತ್ತರ ಪ್ರದೇಶ ಮತ್ತಷ್ಟು ದಿನ ಕಾದು ನೋಡುವ ಪ್ರಯತ್ನ ಮಾಡಿದೆ. ತುರ್ತು ಅವಶ್ಯಕ ಅಂಗಡಿಗಳು ಮತ್ತು 11 ಬಗೆಯ ಕೈಗಾರಿಗಳಿಗೆ ಮಾತ್ರ ಅವಕಾಶ ನೀಡಿದೆ. ಪಿಎಂ ಸಭೆಗೂ ಮುನ್ನ ಬಿಜೆಪಿ ಹೊರತಾದ ಪಶ್ಚಿಮ ಬಂಗಾಳ, ಪಂಜಾಬ್, ಮಹಾರಾಷ್ಟ್ರ ಮತ್ತು ಒಡಿಶಾ ಲಾಕ್‍ಡೌನ್ ವಿಸ್ತರಣೆಗೆ ಒಲವು ತೋರಿಸುವುದು ಮಹತ್ವ ಪಡೆದುಕೊಂಡಿದೆ.

  • ತಮಿಳುನಾಡು ಬಿಜೆಪಿ ಮುಖ್ಯಸ್ಥೆ ಈಗ ರಾಜ್ಯಪಾಲೆ – 5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ

    ತಮಿಳುನಾಡು ಬಿಜೆಪಿ ಮುಖ್ಯಸ್ಥೆ ಈಗ ರಾಜ್ಯಪಾಲೆ – 5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ

    ನವದೆಹಲಿ: ತಮಿಳುನಾಡು ಬಿಜೆಪಿ ಮುಖ್ಯಸ್ಥೆ ಡಾ.ತಮಿಳಿಸಾಯಿ ಸೌಂದರರಾಜನ್ ಹಾಗೂ ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಸೇರಿದಂತೆ ಐದು ರಾಜ್ಯಗಳಿಗೆ ರಾಜ್ಯಪಾಲರ ಹೆಸರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಪ್ರಕಟಿಸಿದ್ದಾರೆ.

    ಡಾ.ತಮಿಳಿಸಾಯಿ ಸೌಂದರರಾಜನ್ ಅವರನ್ನು ತೆಲಂಗಾಣ ರಾಜ್ಯಪಾಲೆಯನ್ನಾಗಿ ನೇಮಿಸಲಾಗಿದೆ. ತೆಲಂಗಾಣ ಹಾಗೂ ಆಂಧ್ರಪ್ರದೇಶ ಎರಡು ರಾಜ್ಯಗಳನ್ನಾಗಿ ಬೇರ್ಪಡಿಸಿದ ನಂತರ ತೆಲಂಗಾಣದ ಮೊದಲ ರಾಜ್ಯಪಾಲೆಯಾಗಿ ತಮಿಳಿಸಾಯಿ ನೇಮಕವಾಗಿದ್ದಾರೆ. ಬಂಡಾರು ದತ್ತಾತ್ರೇಯ ಅವರನ್ನು ಹಿಮಾಚಲ ಪ್ರದೇಶ ರಾಜ್ಯಪಾಲರನ್ನಾಗಿ ನೇಮಿಸಿದ್ದು, ಕಲ್ರಾಜ್ ಮಿಶ್ರಾ ಅವರ ಸ್ಥಾನಕ್ಕೆ ಇವರನ್ನು ಆಯ್ಕೆ ಮಾಡಲಾಗಿದೆ.

    ಉಳಿದಂತೆ ಮಾಜಿ ಕೇಂದ್ರ ಸಚಿವ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕೇರಳ ಹಾಗೂ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಮಹಾರಾಷ್ಟ್ರ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿದ್ದ ಕಲ್ರಾಜ್ ಮಿಶ್ರಾ ಅವರನ್ನು ರಾಜಸ್ಥಾನದಲ್ಲಿ ರಾಜ್ಯಪಾಲರಾಗಿರುವ ಕಲ್ಯಾಣ್ ಸಿಂಗ್ ಅವರ ಜಾಗಕ್ಕೆ ನೇಮಿಸಲು ಕೋರಲಾಗಿದೆ.

    ಇಲ್ಲಿಯವರೆಗೆ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಹಾಗೂ ಎಂ.ಕರುಣಾನಿಧಿ ಅವರ ಹಿಡಿತದಲ್ಲಿ ತಮಿಳುನಾಡು ಇತ್ತು. ಇದೀಗ ಅವರು ನಿಧನರಾದ ಬಳಿಕ ಅಸ್ತಿತ್ವ ಸ್ಥಾಪಿಸಲು ಭಾರೀ ಕಸರತ್ತು ನಡೆಸಲಾಗುತ್ತಿದೆ. ಬಿಜೆಪಿ ಸೇರಿದಂತೆ ನಟರಾದ ಕಮಲ್ ಹಸನ್, ರಜನಿಕಾಂತ್ ಅವರು ತಮ್ಮ ಬಲ ವೃದ್ಧಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ.

    ತೆಲಂಗಾಣ ರಾಜ್ಯಪಾಲರ ಹುದ್ದೆ ಇಎಸ್‍ಎಲ್ ನರಸಿಂಹನ್ ಅವರ ಉಭಯ ಉಸ್ತುವಾರಿಯಲ್ಲಿತ್ತು. ವಿಭಜನೆಗೂ ಮೊದಲು ಇವರೇ ರಾಜ್ಯಪಾಲರಾಗಿದ್ದರು.

    ಹೊಸ ರಾಜ್ಯಪಾಲರನ್ನು ಪಡೆದ 5 ರಾಜ್ಯಗಳಲ್ಲಿ ಈ ವರ್ಷದ ಕೊನೆಯಲ್ಲಿ ಮಹಾರಾಷ್ಟ್ರದಲ್ಲಿ ಮಾತ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ವಿದ್ಯಾಸಾಗರ್ ರಾವ್ ಅವರ ಜಾಗಕ್ಕೆ ಇದೀಗ ಕೊಶ್ಯರಿ ಅವರು ನೇಮಕವಾಗಿದ್ದಾರೆ.

    ಹಿರಿಯ ರಾಜಕಾರಣಿ ಆರಿಫ್ ಮೊಹಮ್ಮದ್ ಖಾನ್ ಕಾಂಗ್ರೆಸ್‍ನಲ್ಲಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. ಬಿಜೆಪಿಗೆ ಸೇರುವ ಮುನ್ನ ಮಾಯಾವತಿ ಅವರ ಬಹುಜನ ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳನ್ನು ಸೇರಿದ್ದರು. ಇವರೀಗ ರಾಜ್ಯಪಾಲರಾಗಿರುವ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಅವರ ಅಧಿಕಾರಾವಧಿ ಪೂರ್ಣಗೊಳ್ಳುತ್ತಿರುವುದರಿಂದ ಅವರ ಜಾಗವನ್ನು ತುಂಬಲಿದ್ದಾರೆ.