Tag: 76th Republic Day

  • 139 ಸಾಧಕರಿಗೆ ಪದ್ಮ ಪ್ರಶಸ್ತಿ – ಕರ್ನಾಟಕದ ನವತಾರೆಗಳಿಗೂ ಗೌರವ

    139 ಸಾಧಕರಿಗೆ ಪದ್ಮ ಪ್ರಶಸ್ತಿ – ಕರ್ನಾಟಕದ ನವತಾರೆಗಳಿಗೂ ಗೌರವ

    ನವದೆಹಲಿ: 76ನೇ ಗಣರಾಜ್ಯೋತ್ಸವಕ್ಕೆ ಮುನ್ನಾದಿನ ಪದ್ಮ ಪ್ರಶಸ್ತಿಗಳನ್ನು(Padma awards 2025) ಕೇಂದ್ರ ಸರ್ಕಾರ ಪ್ರಕಟಿಸಲಾಗಿದೆ. ತೆರೆಮರೆಯಲ್ಲಿದ್ದ 30 ಸಾಧಕರೂ ಸೇರಿ 139 ಸಾಧಕರ ಪಟ್ಟಿಯನ್ನು ಪಟ್ಟಿಯನ್ನು ಪ್ರಕಟಿಸಲಾಗಿದೆ.

    ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌ ಖೇಹರ್, ಸುಜುಕಿ ಮುಖ್ಯಸ್ಥ ಒಸಾಮು ಸುಜುಕಿ, ಮಾಜಿ ಕ್ರಿಕೆಟಿಗ ಆರ್‌. ಅಶ್ವಿನ್‌ ಸೇರಿದಂತೆ 139 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. 7 ಜನರಿಗೆ ಪದ್ಮವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಶಸ್ತಿ ಪಟ್ಟಿ ಹೊಂದಿದೆ.

    ಭಾರತಕ್ಕೆ ಮಾರುತಿ ಸುಝುಕಿ ಕಾರು ಪರಿಚಯಿಸಿದ ಜಪಾನ್‌ ಉದ್ಯಮಿ ಒಸಾಮು ಸುಜುಕಿ, ಮಲಯಾಳಂ ಸಾಹಿತ್ಯದ ದಂತಕಥೆ ಎಂ.ಟಿ ವಾಸುದೇವನ್ ನಾಯರ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ.

    30 ತೆರೆಮರೆ ಸಾಧಕರಿಗೆ ಪದ್ಮಶ್ರೀ
    2025ರ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಎಲೆಮರೆ ಕಾಯಿಯಂತಿದ್ದ 30 ಮಂದಿ ಸಾಧಕರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬ್ರೆಜಿಲ್‌ನ ಹಿಂದೂ ಆಧ್ಯಾತ್ಮಿಕ ನಾಯಕ ಜೋನಾಸ್ ಮಾಸೆಟ್ಟಿ, ಭಾರತದ ಪರಂಪರೆಯ ಬಗ್ಗೆ ಸಾಹಿತ್ಯ ಕೃಷಿ ಮಾಡಿರುವ ಹಗ್ ಮತ್ತು ಕೊಲೀನ್ ಗ್ಯಾಂಟ್ಜರ್ ದಂಪತಿಗಳು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಭಕ್ತಿ ಗಾಯಕ ಭೇರು ಸಿಂಗ್ ಚೌಹಾಣ್, ಪತ್ರಕರ್ತ ಭೀಮ್ ಸಿಂಗ್ ಭವೇಶ್, ಕಾದಂಬರಿಕಾರ ಜಗದೀಶ್ ಜೋಶಿಲಾ, ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ನೀರ್ಜಾ ಭಟ್ಲಾ ಮತ್ತು ಕುವೈತ್‌ನ ಯೋಗಪಟು ಶೈಖಾ ಎಜೆ ಅಲ್ ಸಬಾ ಕೂಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಗೋವಾದಲ್ಲಿ ಪೋರ್ಚುಗೀಸರ ವಿರುದ್ಧ ಹೋರಾಡಿದ 100 ವರ್ಷದ ಲಿಬಿಯಾ ಲೋಬೋ, ಪುರುಷ ಪ್ರಧಾನವಾಗಿದ್ದ ಢಾಕ್ ವಾದ್ಯದಲ್ಲಿ 150 ಮಹಿಳೆಯರಿಗೆ ತರಬೇತಿ ನೀಡಿ ಕ್ರಾಂತಿ ಮಾಡಿದ ಪಶ್ಚಿಮ ಬಂಗಾಳದ ಢಾಕ್ ವಾದಕ ಗೋಕುಲ ಚಂದ್ರ ಡೇ (57), ಅಳಿವಿನಂಚಿನಲ್ಲಿದ್ದ ಮಾಹೇಶ್ವರಿ ಕ್ರಾಫ್ಟ್ ಅನ್ನು ಉಳಿಸುವುದಕ್ಕೋಸ್ಕರ ಮಧ್ಯಪ್ರದೇಶದ ಮಹೇಶ್ವರದಲ್ಲಿ ಕೈಮಗ್ಗ ಶಾಲೆಯನ್ನು ಪ್ರಾರಂಭಿಸಿ, ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡಿದ ಸೈಲಿ ಹೋಳ್ಕರ್ (82) ಅವರು ಸಹ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ಕರ್ನಾಟಕದ ನವತಾರೆಗಳಿಗೆ ಪ್ರಶಸ್ತಿ
    ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದ್ದು, ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.

    ಪದ್ಮವಿಭೂಷಣ: ಪಿಟೀಲು ವಾದಕ ಲಕ್ಷ್ಮೀನಾರಾಯಣ ಸುಬ್ರಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ.

    ಪದ್ಮಭೂಷಣ: ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತನಾಗ್‌, ಶಿಕ್ಷಣ ತಜ್ಞ ಹಾಗೂ ಅಂಕಣಕಾರ ಎ.ಸೂರ್ಯಪ್ರಕಾಶ್‌ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ

    ಪದ್ಮಶ್ರೀ: ಗ್ರಾಮಿ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್‌, ವೈದ್ಯಕೀಯ ಕ್ಷೇತ್ರದ ವಿಜಯಲಕ್ಷ್ಮಿ ದೇಶಮಾನೆ, ಕಲಾ ಕ್ಷೇತ್ರದಲ್ಲಿ ವೆಂಕಪ್ಪ ಅಂಬಾಜಿ, ಹಾಸನ ರಘು, ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ, ಕೈಗಾರಿಕಾ ಕ್ಷೇತ್ರದಲ್ಲಿ ಪ್ರಶಾಂತ್‌ ಪ್ರಕಾಶ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.

  • ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ

    ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ

    ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ. ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.

    ಪದ್ಮವಿಭೂಷಣ
    ಪಿಟೀಲು ವಾದಕ ಲಕ್ಷ್ಮೀನಾರಾಯಣ ಸುಬ್ರಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ.

    ಪದ್ಮಭೂಷಣ
    ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತನಾಗ್‌, ಶಿಕ್ಷಣ ತಜ್ಞ ಹಾಗೂ ಅಂಕಣಕಾರ ಎ.ಸೂರ್ಯಪ್ರಕಾಶ್‌ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಪದ್ಮಶ್ರೀ
    ಗ್ರಾಮಿ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್‌, ವೈದ್ಯಕೀಯ ಕ್ಷೇತ್ರದ ವಿಜಯಲಕ್ಷ್ಮಿ ದೇಶಮಾನೆ, ಕಲಾ ಕ್ಷೇತ್ರದಲ್ಲಿ ವೆಂಕಪ್ಪ ಅಂಬಾಜಿ, ಹಾಸನ ರಘು, ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ, ಕೈಗಾರಿಕಾ ಕ್ಷೇತ್ರದಲ್ಲಿ ಪ್ರಶಾಂತ್‌ ಪ್ರಕಾಶ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.

  • 76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ – ಭದ್ರತೆ ಹೇಗಿದೆ?

    76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ – ಭದ್ರತೆ ಹೇಗಿದೆ?

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಳೆ ನಡೆಯಲಿರುವ ಗಣರಾಜೋತ್ಸವಕ್ಕೆ (Republic Day) ಸಕಲ ಸಿದ್ಧತೆ ನಡೆದಿದ್ದು, ಕರ್ತವ್ಯ ಪಥ್‌ನಲ್ಲಿ ಪರೇಡ್‌ಗೆ ತಯಾರಿ ಕೂಡ ಮಾಡಲಾಗುತ್ತಿದೆ.

    ಜನವರಿ 26 ಭಾನುವಾರದಂದು 76ನೇ ಗಣರಾಜೋತ್ಸವ ಆಚರಣೆ ಹಿನ್ನೆಲೆ ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜೋತ್ಸವ ಸಂಭ್ರಮಕ್ಕಾಗಿ ಸಕಲ ಸಿದ್ಧತೆ ನಡೆದಿದ್ದು, ಅಂತಿಮ ಹಂತದ ತಯಾರಿಯೂ ಪೂರ್ಣಗೊಂಡಿದೆ. ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ.ಇದನ್ನೂ ಓದಿ: Republic Day | ನಾಳೆ ಬೆಳಗ್ಗೆ 6 ರಿಂದಲೇ ಮೆಟ್ರೋ ಸಂಚಾರ

    ಪರೇಡ್‌ನಲ್ಲಿ 15 ರಾಜ್ಯಗಳು, ಕೇಂದ್ರಾಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಂದ ಸ್ತಬ್ಧಚಿತ್ರ ಪ್ರದರ್ಶನ, ಹತ್ತು ಸಾವಿರಕ್ಕೂ ಅಧಿಕ ವಿಶೇಷ ಅತಿಥಿಗಳು, ಒಂದು ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗಲಿದ್ದಾರೆ.

    ಕಾರ್ಯಕ್ರಮದ ಹಿನ್ನೆಲೆ ಕರ್ತವ್ಯ ಪಥ್ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, 15,000ಕ್ಕೂ ಅಧಿಕ ಪೊಲೀಸರು, 70 ಪ್ಯಾರಾ ಮಿಲಿಟರಿ ಕಂಪನಿಗಳ ನಿಯೋಜನೆ ಮಾಡಲಾಗಿದೆ. ಒಟ್ಟು ಆರು ಹಂತಗಳಲ್ಲಿ ಭದ್ರತೆಯನ್ನು ಮಾಡಿಕೊಳ್ಳಲಾಗಿದ್ದು, ಎಲ್ಲ ಕಡೆಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ, 500 ಎಐ ಕ್ಯಾಮೆರಾಗಳ ಅಳವಡಿಸಲಾಗಿದೆ. 40 ಅಧಿಕ ಕಂಟ್ರೋಲ್ ರೂಂಗಳಿಂದ ಇಡೀ ಕಾರ್ಯಕ್ರಮದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.ಇದನ್ನೂ ಓದಿ: ಭಾರತಕ್ಕೆ ಜಯ – ಮುಂಬೈ ದಾಳಿಕೋರ ತಹಾವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಅನುಮತಿ