Tag: 79th Independence Day

  • Photo Gallery | ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ – ʻಆಪರೇಷನ್ ಸಿಂಧೂರʼ ಪ್ರತಿಬಿಂಬ

    Photo Gallery | ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ – ʻಆಪರೇಷನ್ ಸಿಂಧೂರʼ ಪ್ರತಿಬಿಂಬ

    ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಇದರೊಂದಿಗೆ ಕೆಂಪುಕೋಟೆಯಿಂದ ದೇಶವನ್ನು ಉದ್ದೇಶಿಸಿ ಸತತ 12ನೇ ಭಾಷಣ ಮಾಡಿದರು. ‘ನಯಾ ಭಾರತ್​’ (ನವ ಭಾರತ) ಘೋಷವಾಕ್ಯದೊಂದಿಗೆ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಪ್ರಧಾನಿ ಮೋದಿಯವರನ್ನ ಸರ್ಕಾರಿ ಮತ್ತು ಸೇನಾಧಿಕಾರಿಗಳು ಬರಮಾಡಿಕೊಳ್ಳುವ ಮೂಲಕ ಸಮಾರಂಭ ಶುರುವಾಯಿತು. ಬಳಿಕ ಸೇನಾ ಗೌರವ ವಂದನೆ ಸ್ವೀಕಾರ ನಡೆಯಿತು. ಅಲ್ಲದೇ ಪಾಕ್‌ ವಿರುದ್ಧ ಪ್ರತೀಕಾರ ತೀರಿಸಿಕೊಂಡ ಸಲುವಾಗಿ ʻಆಪರೇಷನ್‌ ಸಿಂಧೂರʼ ಕಾರ್ಯಾಚರಣೆಯನ್ನ ಇಲ್ಲಿ ಸ್ಮರಿಸಲಾಯಿತು. ಈ ಸಂಭ್ರಮದ ಕ್ಷಣ ಫೋಟೋದಲ್ಲಿ ಸೆರೆಯಾಗಿರುವುದನ್ನು ನೀವು ಕಾಣಬಹುದು.

  • 12 ಸ್ವಾತಂತ್ರ್ಯ ಸಂಭ್ರಮಗಳಲ್ಲಿ ಭಾಗಿ; 2014-2025ರ ವರೆಗೆ ಮೋದಿ ಪೇಟ, ವಿಭಿನ್ನ ಲುಕ್‌ ನೋಡಿ..

    12 ಸ್ವಾತಂತ್ರ್ಯ ಸಂಭ್ರಮಗಳಲ್ಲಿ ಭಾಗಿ; 2014-2025ರ ವರೆಗೆ ಮೋದಿ ಪೇಟ, ವಿಭಿನ್ನ ಲುಕ್‌ ನೋಡಿ..

    – ಪ್ರಧಾನಿ ಪೇಟಗಳ ವಿಶೇಷತೆ ಏನು?

    ನವದೆಹಲಿ: ಕೆಂಪು ಕೋಟೆಯಲ್ಲಿ ಸತತ 12 ಬಾರಿ ಸ್ವಾತಂತ್ರ್ಯೋತ್ಸವದಲ್ಲಿ ಭಾಷಣ ಮಾಡಿ ದಾಖಲೆ ಬರೆದ ಪ್ರಧಾನಿ ನರೇಂದ್ರ ಮೋದಿ (PM Modi) ಉಡುಗೆ-ತೊಡುಗೆ ವಿಚಾರಕ್ಕೂ ಸುದ್ದಿಯಲ್ಲಿದ್ದಾರೆ. ಪ್ರತಿ ವರ್ಷ ಅವರು ತೊಡುತ್ತಿದ್ದ ಉಡುಪು, ಧರಿಸುತ್ತಿದ್ದ ಪೇಟ ಗಮನ ಸೆಳೆದಿದೆ. ಪೇಟದ ಬಣ್ಣ ಮತ್ತು ಅದನ್ನು ಕಟ್ಟುವ ಶೈಲಿ ಅತ್ಯಂತ ಆಕರ್ಷಕ. 2014ರಿಂದ 2025 ರ ವರೆಗೆ ಪ್ರಧಾನಿ ಮೋದಿ ಅವರ ಉಡುಗೆ-ತೊಡುಗೆ ಶೈಲಿ ಬದಲಾಗುತ್ತಿದೆ. 12 ಬಾರಿಯೂ ಬಗೆ ಬಗೆಯ ಆಕರ್ಷಕ ಪೇಟಗಳನ್ನು ಧರಿಸಿದ್ದಾರೆ. ಆ ಪೇಟಗಳು ಯಾವುವು? ವಿಶೇಷತೆ ಏನು? ಎಂಬುದರ ವಿವರ ಇಲ್ಲಿದೆ.

    2014: ಈ ವರ್ಷದ ಸ್ವಾತಂತ್ರ್ಯ ದಿನದಂದು ನರೇಂದ್ರ ಮೋದಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದರು. ಆಗ ಬಿಳಿ ಖಾದಿ ಅರ್ಧ ತೋಳಿನ ಕುರ್ತಾ ಮತ್ತು ಚೂಡಿದಾರ್ ಪೈಜಾಮ ಧರಿಸಿದ್ದರು. ಇದರ ಜೊತೆಗೆ, ಕೇಸರಿ ಬಣ್ಣದ ಜೋಧಪುರಿ ಬಂದೇಜ್ ಪೇಟವನ್ನು ಧರಿಸಿದ್ದರು.

    2015: ಪ್ರಧಾನಿ ಮೋದಿ ಕ್ರೀಮ್ ಬಣ್ಣದ ಕುರ್ತಾ, ಬಿಳಿ ಚೂಡಿದಾರ್ ಪೈಜಾಮಾ ಮತ್ತು ಖಾದಿ ಜಾಕೆಟ್ ಧರಿಸಿದ್ದರು. ಕೆಂಪು ಮತ್ತು ಹಸಿರು ಪಟ್ಟೆಗಳನ್ನು ಹೊಂದಿದ್ದ ಕಿತ್ತಳೆ ಬಣ್ಣದ ಬಂಧಾನಿ ಪೇಟವನ್ನು ಧರಿಸಿದ್ದರು.

    2016: ಕೆಂಪು, ಗುಲಾಬಿ ಮತ್ತು ಹಳದಿ ರಾಜಸ್ಥಾನಿ ಪೇಟವನ್ನು ಸರಳ ಕುರ್ತಾ ಮತ್ತು ಚೂಡಿದಾರ್ ಪೈಜಾಮಾದೊಂದಿಗೆ ಮೋದಿ ಧರಿಸಿದ್ದು ವಿಶೇಷವಾಗಿತ್ತು.

    2017: ಪ್ರಧಾನಿ ಮೋದಿ ತಮ್ಮ ಟ್ರೇಡ್‌ಮಾರ್ಕ್ ಅರ್ಧ ತೋಳಿನ ಕುರ್ತಾ ಧರಿಸಿದ್ದರು. ಪ್ರಕಾಶಮಾನವಾದ ಕೆಂಪು ಮತ್ತು ಹಳದಿ ಬಣ್ಣದ ಪೇಟವನ್ನು ಧರಿಸಿದ್ದರು. ಪೇಟದ ಹಿಂಭಾಗದಲ್ಲಿ ಉದ್ದವಾದ ಬಟ್ಟೆಯ ಜೋಡಣೆ ಇತ್ತು.

    2018: ಪೂರ್ಣ ತೋಳಿನ ಕುರ್ತಾ-ಪೈಜಾಮ ಮತ್ತು ಉಪರ್ಣ ಧರಿಸಿದ್ದರು. ಗಾಢವಾದ ಕೇಸರಿ ಮತ್ತು ಕೆಂಪು ಪೇಟವನ್ನು ಮೋದಿ ಧರಿಸಿದ್ದು ಗಮನ ಸೆಳೆದಿತ್ತು.

    2019: ಅರ್ಧ ತೋಳಿನ ಕುರ್ತಾ, ಪೈಜಾಮಾ ಮತ್ತು ಕೇಸರಿ ಬಣ್ಣದ ಅಂಚುಳ್ಳ ಮೇಲ್ಭಾಗದಲ್ಲಿ ಹಳದಿ, ಕೆಂಪು ಮತ್ತು ಹಸಿರು ಬಣ್ಣದ ಲಹರಿಯಾ ಮಾದರಿಯ ಪೇಟವನ್ನು ಪ್ರಧಾನಿ ಧರಿಸಿದ್ದರು.

    2020: ಕೇಸರಿ ಮತ್ತು ಕ್ರೀಮ್ ಬಣ್ಣದ ಪೇಟವನ್ನು ಪ್ರಧಾನಿ ಧರಿಸಿದ್ದರು. ಅದು ಅರ್ಧ ತೋಳಿನ ಕುರ್ತಾಗೆ ಮ್ಯಾಚ್‌ ಆಗಿತ್ತು. ಕೇಸರಿ ಬಾರ್ಡರ್‌ ಇದ್ದ ಬಿಳಿ ದುಪಟ್ಟಾವನ್ನು ಮೋದಿ ಧರಿಸಿದ್ದರು.

    2021: 75ನೇ ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಸಾಂಪ್ರದಾಯಿಕ ಕುರ್ತಾ-ಚೂಡಿದಾರ್, ನೀಲಿ ಜಾಕೆಟ್ ಧರಿಸಿ ಕೇಸರಿ ಪೇಟದೊಂದಿಗೆ ಸ್ಟೋಲ್ ಧರಿಸಿ ಆಕರ್ಷಕ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು.

    2022: 76 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ‘ಹರ್ ಘರ್ ತಿರಂಗಾ’ ಅಭಿಯಾನದ ಉತ್ಸಾಹವನ್ನು ಪ್ರತಿಬಿಂಬಿಸುವ ತ್ರಿವರ್ಣ ಧ್ವಜದ ಆಕಾರದ ಬಿಳಿ ಪೇಟವನ್ನು ಧರಿಸಿದ್ದರು. ಈ ಪೇಟವನ್ನು ಬಿಳಿ ಕುರ್ತಾ ಮತ್ತು ನೀಲಿ ಜಾಕೆಟ್‌ನೊಂದಿಗೆ ಜೋಡಿಸಲಾಗಿತ್ತು.

    2023: ಹಳದಿ ಮತ್ತು ಕೆಂಪು ಬಣ್ಣದ ಸಫಾ ಧರಿಸಿದ್ದರು, ಅದರಲ್ಲಿ ಹಲವು ಬಣ್ಣಗಳ ಪಟ್ಟೆಗಳಿದ್ದವು. ಇದರ ಜೊತೆಗೆ ಮೋದಿ ಬಿಳಿ ಕುರ್ತಾ ಮತ್ತು ಕಪ್ಪು ಜಾಕೆಟ್ ಧರಿಸಿದ್ದರು.

    2024: 78ನೇ ವಾರ್ಷಿಕೋತ್ಸವದಂದು ಪ್ರಧಾನಿ ಮೋದಿ ಅವರು ಬಿಳಿ ಕುರ್ತಾ-ಪೈಜಾಮ ಮತ್ತು ನೀಲಿ ಸದ್ರಿ ಜೊತೆಗೆ ಕೇಸರಿ, ಹಸಿರು ಮತ್ತು ಹಳದಿ ಪೇಟವನ್ನು ಧರಿಸಿದ್ದರು.

    2025: ಈ ಬಾರಿ ಪ್ರಧಾನಿ ಮೋದಿಯವರ ಲುಕ್ ತುಂಬಾ ವಿಶಿಷ್ಟವಾಗಿದೆ. ವಿಶೇಷವಾಗಿ ಪೇಟ ಕಟ್ಟುವ ಶೈಲಿ ಅದ್ಭುತವಾಗಿದೆ. ಈ ಸಲ ಪ್ರಧಾನಿ ಮೋದಿಯವರ ಪೇಟ ಕೇಸರಿ ಬಣ್ಣದ್ದಾಗಿತ್ತು. ಇದರ ಜೊತೆಗೆ, ಅವರು ಕಿತ್ತಳೆ ಬಣ್ಣದ ನೆಹರೂ ಜಾಕೆಟ್ ಮತ್ತು ಬಿಳಿ ಕುರ್ತಾ ಧರಿಸಿದ್ದರು. ಅದರೊಂದಿಗೆ ಟವಲ್ ಕೂಡ ಹಾಕಿದ್ದರು.

  • ದೇಶದ ಜನತೆಗೆ ಮೋದಿ ದೀಪಾವಳಿ ಡಬಲ್‌ ಗಿಫ್ಟ್‌ – ತೆರಿಗೆ ಇಳಿಕೆ, ಯುವಜನತೆಗೆ ವಿಕಸಿತ ಭಾರತ ರೋಜ್‌ಗಾರ್‌ ಯೋಜನೆ

    ದೇಶದ ಜನತೆಗೆ ಮೋದಿ ದೀಪಾವಳಿ ಡಬಲ್‌ ಗಿಫ್ಟ್‌ – ತೆರಿಗೆ ಇಳಿಕೆ, ಯುವಜನತೆಗೆ ವಿಕಸಿತ ಭಾರತ ರೋಜ್‌ಗಾರ್‌ ಯೋಜನೆ

    – ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ ಯುವಕರಿಗೆ 15,000 ರೂ. ನೆರವು: ಪ್ರಧಾನಿ

    ನವದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ದೇಶದ ನಾಗರಿಕರಿಗೆ ದೀಪಾವಳಿ ಉಡುಗೊರೆಯ ಭರವಸೆ ನೀಡಿದ್ದಾರೆ.

    ಕೆಂಪು ಕೋಟೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡುವ ವೇಳೆ, ಮುಂದಿನ ಪೀಳಿಗೆಯ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸುಧಾರಣೆಗಳು ದೇಶಕ್ಕೆ ದೀಪಾವಳಿ ಉಡುಗೊರೆಯಾಗಿರುತ್ತವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ: ಪಾಕ್‌ಗೆ ಪ್ರಧಾನಿ ಮೋದಿ ತಿರುಗೇಟು

    ಈ ದೀಪಾವಳಿಗೆ, ನಾನು ನಿಮಗಾಗಿ ಡಬಲ್ ಧಮಾಕ ನೀಡಲಿದ್ದೇನೆ. ಈ ದೀಪಾವಳಿಯಲ್ಲಿ ನಾಗರಿಕರು ದೊಡ್ಡ ಉಡುಗೊರೆಯನ್ನು ಪಡೆಯಲಿದ್ದಾರೆ. ನಾವು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ತರುತ್ತಿದ್ದೇವೆ. ಇದು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡುತ್ತದೆ. ಇದು ದೀಪಾವಳಿ ಉಡುಗೊರೆಯಾಗಲಿದೆ ಎಂದು ಹೇಳಿದ್ದಾರೆ.

    ಎಂಟು ವರ್ಷಗಳ ಹಿಂದೆ ಸರ್ಕಾರವು ಪ್ರಮುಖ ಸುಧಾರಣೆಗಳನ್ನು ಕೈಗೊಂಡಿದೆ. ಸರ್ಕಾರವು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡಿ, ತೆರಿಗೆ ಪ್ರಕ್ರಿಯೆಯನ್ನು ಸರಳಗೊಳಿಸಿದೆ ಎಂದು ಭರವಸೆ ನೀಡಿದ್ದಾರೆ.

    ಇದು ಸಾಮಾನ್ಯ ಜನರಿಗೆ ವಸ್ತುಗಳ ಮೇಲಿನ ತೆರಿಗೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ನಮ್ಮ MSME ಗಳು ಭಾರಿ ಲಾಭ ಪಡೆಯುತ್ತವೆ. ದಿನನಿತ್ಯ ಬಳಸುವ ವಸ್ತುಗಳು ಅಗ್ಗವಾಗುತ್ತವೆ. ಇದು ನಮ್ಮ ಆರ್ಥಿಕತೆಯನ್ನು ಬಲಪಡಿಸುತ್ತದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

    2017 ರ ಜುಲೈನಲ್ಲಿ ಜಿಎಸ್‌ಟಿ ಜಾರಿಗೆ ತರಲಾಯಿತು. ಪರೋಕ್ಷ ತೆರಿಗೆ ಪದ್ಧತಿಯ ಎಂಟು ವರ್ಷಗಳು ಪೂರ್ಣಗೊಂಡ ನಂತರ, ಈ ಬದಲಾವಣೆಗಳನ್ನು ಪರಿಶೀಲಿಸುವ ಸಮಯ ಬಂದಿದೆ. ಪರಿಶೀಲನೆಗಾಗಿ ಉನ್ನತಾಧಿಕಾರ ಸಮಿತಿಯನ್ನು ರಚಿಸಲಾಯಿತು. ರಾಜ್ಯಗಳೊಂದಿಗೆ ಸಹ ಸಮಾಲೋಚಿಸಲಾಯಿತು. ಅದರ ನಂತರ ಸರ್ಕಾರವು ಹೊಸ ಜಿಎಸ್‌ಟಿ ಸುಧಾರಣೆಗಳನ್ನು ಸಿದ್ಧಪಡಿಸಿದೆ.

    ವಿಕಸಿತ ಭಾರತ ರೋಜ್‌ಗಾರ್ ಯೋಜನೆಯಡಿಯಲ್ಲಿ ಮೊದಲ ಬಾರಿಗೆ ಖಾಸಗಿ ವಲಯದ ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ ಯುವಕರಿಗೆ 15,000 ರೂ. ನೆರವನ್ನು ಮೋದಿ ಘೋಷಿಸಿದ್ದಾರೆ. ಈ ಯೋಜನೆಯಿಂದ 3.5 ಕೋಟಿಗೂ ಹೆಚ್ಚು ಯುವಜನರು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

    ನನ್ನ ದೇಶದ ಯುವಕರೇ, ಈ ದಿನವೇ ನಮ್ಮ ದೇಶದ ಯುವಕರಿಗಾಗಿ 1 ಲಕ್ಷ ಕೋಟಿ ಮೌಲ್ಯದ ಯೋಜನೆಯನ್ನು ನಾವು ಪ್ರಾರಂಭಿಸುತ್ತಿದ್ದೇವೆ. ಇಂದಿನಿಂದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್‌ಗಾರ್ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ಖಾಸಗಿ ವಲಯದಲ್ಲಿ ಮೊದಲ ಉದ್ಯೋಗ ಪಡೆಯುವ ಯುವಕ-ಯುವತಿಯರು ಸರ್ಕಾರದಿಂದ 15,000 ರೂ. ಪಡೆಯುತ್ತಾರೆ. ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕಂಪನಿಗಳಿಗೆ ಪ್ರೋತ್ಸಾಹ ಮೊತ್ತವನ್ನು ಸಹ ನೀಡಲಾಗುತ್ತದೆ. ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್‌ಗಾರ್ ಯೋಜನೆಯು ಯುವಕರಿಗೆ ಸುಮಾರು 3.5 ಕೋಟಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ತಿಳಿಸಿದ್ದಾರೆ.

  • ಜೈಲಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗದ ದರ್ಶನ್‌, ಪ್ರಜ್ವಲ್‌ ರೇವಣ್ಣ

    ಜೈಲಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗದ ದರ್ಶನ್‌, ಪ್ರಜ್ವಲ್‌ ರೇವಣ್ಣ

    ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದ್ದು, ನಟ ದರ್ಶನ್‌ ಮತ್ತು ಪ್ರಜ್ವಲ್‌ ರೇವಣ್ಣ ಗೈರಾಗಿದ್ದಾರೆ.

    ಪ್ರತಿ ವರ್ಷ ಜೈಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತದೆ. ವಿಚಾರಣಾಧೀನ ಆರೋಪಿಗಳು, ಸಜಾ ಬಂಧಿಗಳು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಅಂತೆಯೇ ಈ ಬಾರಿಗೂ ಸಮಾರಂಭ ಮಾಡಲಾಯಿತು. ಆದರೆ, ದರ್ಶನ್‌ ಮತ್ತು ಪ್ರಜ್ವಲ್‌ ರೇವಣ್ಣ ಭಾಗಿಯಾಗಿಲ್ಲ.

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಮತ್ತೆ ಜೈಲು ಪಾಲಾಗಿದ್ದಾರೆ. ಪವಿತ್ರಾ ಗೌಡ ಕೂಡ ಜೈಲು ಸೇರಿದ್ದಾರೆ. ಇಬ್ಬರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ನಟ ದರ್ಶನ್‌ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹೀಗಾಗಿ, ಸ್ವಾತಂತ್ರ್ಯೋತ್ಸವಕ್ಕೆ ಗೈರಾಗಿದ್ದಾರೆ.

    ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕೂಡ ಜೈಲಲ್ಲಿದ್ದಾರೆ. ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ.

  • ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ: ಪಾಕ್‌ಗೆ ಪ್ರಧಾನಿ ಮೋದಿ ತಿರುಗೇಟು

    ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ: ಪಾಕ್‌ಗೆ ಪ್ರಧಾನಿ ಮೋದಿ ತಿರುಗೇಟು

    – ಭಯೋತ್ಪಾದನೆ & ಅದರ ಪೋಷಕರನ್ನು ಪ್ರತ್ಯೇಕವಾಗಿ ನೋಡಲ್ಲ ಎಂದ ಪ್ರಧಾನಿ
    – ಆಪರೇಷನ್‌‌ ಸಿಂಧೂರ ಸ್ಮರಣೆ, ನಯಾ ಭಾರತ ಬಗ್ಗೆ ಮೋದಿ ಮಾತು

    ನವದೆಹಲಿ: ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ ಎಂದು ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ತಿರುಗೇಟು ನೀಡಿದ್ದಾರೆ.

    79ನೇ ಸ್ವಾತಂತ್ರ್ಯೋತ್ಸವ (Independence Day 2025) ಹಿನ್ನೆಲೆ ಕೆಂಪು ಕೋಟೆಯಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೋದಿ, ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಯಿತು. ಧರ್ಮ ಕೇಳಿ ಹತ್ಯೆ ಮಾಡಲಾಯಿತು. ಪತ್ನಿ ಎದುರು ಪತಿಯನ್ನು, ಮಗನ ಮುಂದೆ ತಂದೆಯನ್ನು ಹತ್ಯೆ ಮಾಡಲಾಯಿತು. ಇಡೀ ದೇಶದಲ್ಲಿ ಆಕ್ರೋಶ ಮಡುಗಟ್ಟಿತ್ತು. ಆಪರೇಷನ್ ಸಿಂಧೂರ ಈ ಆಕ್ರೋಶದ ಪ್ರತಿಬಿಂಬವಾಗಿತ್ತು. ನಾವು ನಮ್ಮ ಸೇನೆಗೆ ಪೂರ್ಣ ಸ್ವಾತಂತ್ರ‍್ಯ ನೀಡಿದೆವು. ದಾಳಿ, ಸಮಯ, ಗುರಿ ಎಲ್ಲವನ್ನು ನಿರ್ಧರಿಸಲು ಸ್ವಾತಂತ್ರ‍್ಯ ನೀಡಲಾಯಿತು. ಸೇನೆ ಹಿಂದೆ ಮಾಡದ ಸಾಹಸವನ್ನು ಮೊದಲ ಬಾರಿಗೆ ಮಾಡಿತು. ಪಾಕಿಸ್ತಾನದ ಒಳಗೆ ನುಗ್ಗಿ ದಾಳಿ ಮಾಡಿತು. ಪಾಕಿಸ್ತಾನದ ಆದ ನಷ್ಟ ಎಷ್ಟಿದೆ ಅಂದರೆ ನಿತ್ಯ ಹೊಸ ಮಾಹಿತಿ ಬರ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

    ನಮ್ಮ ದೇಶ ದಶಕಗಳಿಂದ ಭಯೋತ್ಪಾದನೆಯನ್ನು ಸಹಿಸಿಕೊಂಡಿದೆ. ಈಗ ನಾವು ಹೊಸ ನಿರ್ಧಾರ ತೆಗೆದುಕೊಂಡಿದ್ದೇವೆ. ಭಯೋತ್ಪಾದನೆ ಮತ್ತು ಅದರ ಪೋಷಕರನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅವರು ಮಾನವತವಾದದ ವಿರುದ್ಧ ವ್ಯಕ್ತಿಗಳು. ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗುವುದಿಲ್ಲ. ಇಂತಹ ಬೆದರಿಕೆ ಬಹಳ ವರ್ಷಗಳಿಂದ ನೋಡಿದ್ದೇವೆ. ಇದು ಮುಂದೆ ನಡೆಯುವುದಿಲ್ಲ. ಇಂತಹದೇ ಘಟನೆ ಮುಂದುವರಿದರೆ ಮತ್ತೆ ನಮ್ಮ ಸೇನೆ ಪ್ರತಿಕ್ರಿಯೆ ನಿರ್ಧಾರ ಮಾಡಲಿದೆ. ನಾವು ಸರಿಯಾದ ಪ್ರತಿಕ್ರಿಯೆ ನೀಡಲಿದ್ದೇವೆ. ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಸಿಂಧೂ ಜಲ ಒಪ್ಪಂದದಿಂದ ಭಾರತಕ್ಕೆ ಅನ್ಯಾಯವಾಗಿದೆ. ಭಾರತದಲ್ಲಿ ಹರಿಯುವ ನದಿ ನಮ್ಮ ಬಳಕೆಗೆ ಸಿಗುತ್ತಿಲ್ಲ. ನಮ್ಮ ಜನರು ನೀರಿದ್ದರೂ ಬಾಯಾರಿಕೊಂಡಿದ್ದಾರೆ. ಏಕಮುಖ ನ್ಯಾಯವನ್ನು ಈ ಒಪ್ಪಂದದಲ್ಲಿ ಮಾಡಿದೆ. ಭಾರತದ ನೀರಿನ ಮೇಲಿನ ಅಧಿಕಾರ ಭಾರತ ಮತ್ತು ನಮ್ಮ ರೈತರದ್ದು. ರೈತರ ಹಿತ, ರಾಷ್ಟ್ರದ ಹಿತದ ಕಾರಣ ಈ ಒಪ್ಪಂದಕ್ಕೆ ನಮ್ಮ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಸ್ವಾತಂತ್ರ‍್ಯಕ್ಕಾಗಿ ಕೋಟ್ಯಂತರ ಜನರು ಯಾವುದೇ ಆಪೇಕ್ಷೆ ಇಲ್ಲದೇ ತಮ್ಮ ಜೀವನವನ್ನು ಬಲಿದಾನ ಮಾಡಿದರು. ಗುಲಾಮಿ ಸ್ಥಿತಿಯಿಂದ ಹೊರಬರಲು ಹೋರಾಟ ಮಾಡಿದರು. ಸ್ವಾತಂತ್ರ‍್ಯದ ಬಳಿಕ ಕೋಟ್ಯಂತರ ಜನರ ಹೊಟ್ಟೆ ತುಂಬಿಸುವುದು ಕಷ್ಟವಾಗಿತ್ತು. ನಮ್ಮ ರೈತರು ದೇಶದ ಜನರ ಹೊಟ್ಟೆ ತುಂಬಿಸಿದರು. ಆತ್ಮ ನಿರ್ಭರ್ ಘೋಷಣೆ ಕೇವಲ ಆರ್ಥಿಕತೆಗೆ ಸೀಮಿತವಾಗಿಲ್ಲ. ಆತ್ಮ ನಿರ್ಭರ್ ನಮ್ಮ ಸಾಮರ್ಥ್ಯದೊಂದಿಗೆ ಸಂಪರ್ಕಿಸಿದೆ. ಆತ್ಮ ನಿರ್ಭರ್ ನಮ್ಮ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 79ನೇ ಸ್ವಾತಂತ್ರ‍್ಯ ದಿನ – ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಲಿರುವ ಮೋದಿ

    ಆಪರೇಷನ್ ಸಿಂಧೂರನಲ್ಲಿ ಭಾರತದ ಶಸ್ತ್ರಾಸ್ತ್ರಗಳು ಅದ್ಭುತವಾಗಿ ಕೆಲಸ ಮಾಡಿವೆ. ಶತ್ರು ದೇಶಗಳು ಇವು ಎಂತಹ ಶಸ್ತ್ರಾಸ್ತ್ರಗಳು ಅಂತ ಗೊಂದಲಕ್ಕೆ ಒಳಗಾದರು. ಯುದ್ಧದ ಸನ್ನಿವೇಶದಲ್ಲಿ ಶಸ್ತ್ರಾಸ್ತ್ರಗಳು ದೊರೆಯುವ ಗೊಂದಲ ಆತಂಕ ಇರುತ್ತದೆ. ಆದರೆ, ಭಾರತ ತನ್ನ ಶಸ್ತ್ರಾಸ್ತ್ರಗಳನ್ನು ತಾನೇ ಉತ್ಪಾದನೆ ಮಾಡುತ್ತಿದೆ ಎಂದು ಹೇಳಿದ್ದಾರೆ.

  • 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

    79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

    ನವದೆಹಲಿ: ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.

    ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಘೋಷವಾಕ್ಯ ‘ನಯ ಭಾರತ’. ಸಮೃದ್ಧ, ಸುರಕ್ಷಿತ ಮತ್ತು ದಿಟ್ಟ ನವ ಭಾರತದ ನಿರಂತರ ಉದಯವನ್ನು ಸ್ಮರಿಸುವ ಧ್ಯೇಯವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಧ್ವಜಾರೋಹಣಕ್ಕೂ ಮುನ್ನ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. ನಂತರ ರಾಷ್ಟ್ರದ ನೇತೃತ್ವ ವಹಿಸಿ ಸಂಭ್ರಮಿಸಲು ಕೆಂಪು ಕೋಟೆಗೆ ಆಗಮಿಸಿದರು. ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತಿಸಿದರು.

    ಬಳಿಕ ಪಿಎಂ ಮೋದಿ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆ ಮೊಳಗಿತು. ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಿದರು. ಈ ವೇಳೆ ಭಾರತೀಯ ವಾಯುಪಡೆಯ ಎರಡು Mi-17 ಹೆಲಿಕಾಪ್ಟರ್‌ಗಳು ಕೆಂಪು ಕೋಟೆಯ ಮೇಲೆ ಹಾರಾಟ ನಡೆಸಿ, ಪುಷ್ಪವೃಷ್ಟಿಗೈದವು. ಒಂದು ಹೆಲಿಕಾಪ್ಟರ್‌ ತಿರಂಗವನ್ನು ಹಾರಾಡಿಸಿತು. ಮತ್ತೊಂದು ಹೆಲಿಕಾಪ್ಟರ್‌, ಆಪರೇಷನ್ ಸಿಂಧೂರ್‌ನ ಬ್ಯಾನರ್ ಅನ್ನು ಪ್ರದರ್ಶಿಸಿತು. ಆ ಮೂಲಕ ಶತ್ರು ದೇಶಗಳಿಗೆ ದಿಟ್ಟ ಉತ್ತರ ಕೊಟ್ಟ ಆಪರೇಷನ್‌ ಸಿಂಧೂರ ಬಗ್ಗೆ ಅರಿವು ಮೂಡಿಸಿತು.