Tag: 8th Class

  • 5, 8ನೇ ತರಗತಿಗಳ  ಬೋರ್ಡ್ ಎಕ್ಸಾಂಗೆ ಸುಪ್ರೀಂ ಗ್ರೀನ್ ಸಿಗ್ನಲ್

    5, 8ನೇ ತರಗತಿಗಳ ಬೋರ್ಡ್ ಎಕ್ಸಾಂಗೆ ಸುಪ್ರೀಂ ಗ್ರೀನ್ ಸಿಗ್ನಲ್

    ನವದೆಹಲಿ: ರಾಜ್ಯ ಪಠ್ಯಕ್ರಮವಿರುವ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ (5th And 8th Class) ಮಕ್ಕಳಿಗೆ ಬೋರ್ಡ್ ಪರೀಕ್ಷೆ (Board Exam) ನಡೆಸಲು ಅನುಮತಿ ನೀಡಿದ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ನೊಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ (ಕುಸ್ಮಾ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ.

    ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ಕುಸ್ಮಾ ವಾದವನ್ನು ತಿರಸ್ಕರಿಸಿತು. ಕುಸ್ಮಾ ಪರ ವಾದ ಮಂಡಿಸಿದ ವಕೀಲರು, ಬೋರ್ಡ್ ಎಕ್ಸಾಂ ಅತಿ ಕಡಿಮೆ ಸಮಯದಲ್ಲಿ ಜಾರಿ ಮಾಡಲು ಹೊರಟಿದೆ. ಈ ಬಗ್ಗೆ ಪೊಷಕರಿಗೂ ಮಾಹಿತಿ ಇಲ್ಲ. ಮತ್ತು ಶಾಲೆಗಳ ಜೊತೆಗೂ ಇಲಾಖೆ ಚರ್ಚೆ ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ವಾದಿಸಿದರು. ಈ ವಾದವನ್ನು ಒಪ್ಪದ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ಅರ್ಜಿ ವಜಾ ಮಾಡಿತು.

    ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿ 5 ಮತ್ತು 8ನೇ ತರಗತಿಯ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದನ್ನೂ ಓದಿ: ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್ ಪಟ್ಟಿ ಔಟ್ – ಯಾರಿಗೆ ವರ್ಷಕ್ಕೆ ಎಷ್ಟು ಸಂಭಾವನೆ?

    ಇದರ ವಿರುದ್ಧ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸಿತ್ತು. ನಂತರ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಹೈಕೋರ್ಟ್ ದ್ವಿಸದಸ್ಯ ತೀರ್ಪು ನೀಡಿತ್ತು. ಈ ವೇಳೆ ಮಧ್ಯಪ್ರವೇಶ ಮಾಡಿದ ನೊಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್ ಆದೇಶಕ್ಕೆ ತಡೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸದ್ಯ ಸುಪ್ರೀಂಕೋರ್ಟ್ ಅರ್ಜಿ ವಜಾ ಮಾಡಿರುವ ಹಿನ್ನೆಲೆ ಬೋರ್ಡ್ ಪರೀಕ್ಷೆಗಳು ಸರಾಗವಾಗಿ ನಡೆಯಲಿವೆ. ಇದನ್ನೂ ಓದಿ: ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು

  • ಕೋರ್ಟ್‌ನಲ್ಲಿ ಇಂದು 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಅರ್ಜಿ ವಿಚಾರಣೆ

    ಕೋರ್ಟ್‌ನಲ್ಲಿ ಇಂದು 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಅರ್ಜಿ ವಿಚಾರಣೆ

    ಬೆಂಗಳೂರು: 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ (Public Exam) ರದ್ದುಗೊಳಿಸಿ ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಶೇಷ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು ಈ ಅರ್ಜಿಯ ವಿಚಾರಣೆ ಮಂಗಳವಾರ ನಡೆಯಲಿದೆ.

    ಈಗಾಗಲೆ 13ನೇ ತಾರೀಖಿನಿಂದ 5 ಮತ್ತು 8 ನೇ ತರಗತಿಯ ಪರೀಕ್ಷೆ ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳ ಪೋಷಕರಿಗೆ ಶಾಲೆಗಳಿಂದ ಸುತ್ತೋಲೆ ಹೋಗಿದೆ. ಏಕ ಸದಸ್ಯ ಪೀಠದ ಆದೇಶ ಪಾಲಿಸಿದರೆ ಮಕ್ಕಳಲ್ಲಿ ಅಷ್ಟೊಂದು ಗೊಂದಲವಾಗುತ್ತಿರಲಿಲ್ಲ. ಯಾವಾಗ ಸರ್ಕಾರದ ಮೇಲ್ಮನವಿ ಹೋಯಿತೋ ಅಲ್ಲಿಂದ ಪರೀಕ್ಷೆ ಇದೆಯೋ ಇಲ್ಲವೋ ಎನ್ನುವ ಗೊಂದಲ ಉಂಟಾಗಿದೆ. ಇದನ್ನೂ ಓದಿ: ಮೋದಿ ಬಂದ ಬೆನ್ನಲ್ಲೇ ಅಖಾಡಕ್ಕಿಳಿದ ಎಚ್‌ಡಿಡಿ – ಮಂಡ್ಯ ನಾಯಕರಿಗೆ ಖಡಕ್‌ ಸೂಚನೆ

    ಈಗಾಗಲೇ ಸರ್ಕಾರ ಈ ಆದೇಶಕ್ಕೆ ತಡೆ ಕೊಡುವಂತೆ ವಿಶೇಷ ಪೀಠದಲ್ಲಿ ಮನವಿ ಸಲ್ಲಿಸಿದರೂ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ಕೊಟ್ಟಿಲ್ಲ. ಸರ್ಕಾರ ಹಠಮಾರಿ ಧೋರಣೆ ತಾಳಿ ಪರೀಕ್ಷೆ ನಡೆಸಿದ್ದೇ ಆದಲ್ಲಿ ಕೋರ್ಟ್ ಆದೇಶದ ಉಲ್ಲಂಘನೆಯಾಗುತ್ತದೆ. ಹೀಗಾಗಿ ಇದೀಗ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಿರುವ ಸಾಧ್ಯತೆಯಿದೆ. ಇದನ್ನೂ ಓದಿ: ಚುನಾವಣೆಗೆ‌ ಸ್ಪರ್ಧಿಸಲು ಗೂಳಿಹಟ್ಟಿ ಶೇಖರ್‌ಗೆ ದೇಣಿಗೆ ನೀಡಿದ ಮತದಾರರು