Tag: A.B.Malaka Reddy

  • ಕಮಲ ಬಿಟ್ಟು ‘ಕೈ’ ಹಿಡಿಯಲು ಮುಂದಾದ ಮಾಲಕರೆಡ್ಡಿ

    ಕಮಲ ಬಿಟ್ಟು ‘ಕೈ’ ಹಿಡಿಯಲು ಮುಂದಾದ ಮಾಲಕರೆಡ್ಡಿ

    ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ (BJP) ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ಎ.ಬಿ ಮಾಲಕರೆಡ್ಡಿ (A.B.Malaka Reddy) ಬಿಜೆಪಿ ತೊರೆದು ಕಾಂಗ್ರೆಸ್ (Congress) ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ.

    ಇಂದು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿರುವ ಅವರು, ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K.Shivakumar) ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಮಾಲಕರೆಡ್ಡಿ ಐದು ಬಾರಿ ಶಾಸಕರಾಗಿ, ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಆದರೆ 2019ರ ಲೋಕಸಭಾ ಚುನಾವಣೆ ವೇಳೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ಧ ಸಿಡಿದೆದ್ದು ಬಿಜೆಪಿ ಸೇರಿದರು. ಬಾಬುರಾವ್ ಚಿಂಚನಸೂರ್‌ ಜೊತೆ ಬಿಜೆಪಿ ಸೇರಿದ್ದ ಮಾಲಕರೆಡ್ಡಿ ಜಿದ್ದಿಗೆ ಬಿದ್ದು ಖರ್ಗೆಯವರನ್ನು ಸೋಲಿಸಿದರು. ಆದರೆ ಕಳೆದ ವಾರ ಬಾಬುರಾವ್ ಚಿಂಚನಸೂರ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಮಾಲಕರೆಡ್ಡಿ ಕೂಡಾ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಇದನ್ನೂ ಓದಿ: ಕೆ.ಎಸ್. ನಾಗರತ್ನಮ್ಮ ರಾಜ್ಯದ ಮೊದಲ ಮಹಿಳಾ ಸ್ಪೀಕರ್   

    ಮಾಲಕರೆಡ್ಡಿ ಬಿಜೆಪಿಯಲ್ಲಿದ್ದರೂ ತಮ್ಮ ಪುತ್ರಿ ಅನುರಾಗಾ ಮಾಲಕರೆಡ್ಡಿ (Anuraga Malaka Reddy) ಕಾಂಗ್ರೆಸ್‌ನಲ್ಲಿಯೇ ಉಳಿದಿದ್ದರು. ಹೀಗಾಗಿ ಅನುರಾಗಾ ಮಾಲಕರೆಡ್ಡಿಯವರ ಮೂಲಕ ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಹಾಕಿಸಿದರು. ಮಗಳಿಗೆ ಈ ಬಾರಿ ಶತಾಯಗತಾಯ ಕಾಂಗ್ರೆಸ್ ಟಿಕೆಟ್ ಕೊಡಿಸಬೇಕೆಂದುಕೊಂಡಿದ್ದ ಮಾಲಕರೆಡ್ಡಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಮಲ್ಲಿಕಾರ್ಜುನ ಖರ್ಗೆ ಹಿಂದೇಟು ಹಾಕಿದ್ದರಿಂದ ವಿಳಂಬವಾಗಿತ್ತು. ಕೊನೆಗೂ ಶುಕ್ರವಾರ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಲಕರೆಡ್ಡಿ ಭೇಟಿಯಾಗಿ ಮತ್ತೆ ಪಕ್ಷಕ್ಕೆ ವಾಪಸ್ ಬರುವ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಸೇರುವಂತೆ ಪಕ್ಷ ಗ್ರೀನ್ ಸಿಗ್ನಲ್ ಕೊಟ್ಟಿದ್ದರಿಂದ ಬಿಜೆಪಿಗೆ ರಾಜೀನಾಮೆ ನೀಡಲು ಮಾಲಕರೆಡ್ಡಿ ಮುಂದಾಗಿದ್ದಾರೆ. ಇದನ್ನೂ ಓದಿ: ಮಂಡ್ಯ ಜಿಲ್ಲೆಯ 6 ಕ್ಷೇತ್ರಗಳಲ್ಲಿ 3 ಪಕ್ಷಗಳಿಂದ ಒಕ್ಕಲಿಗರೇ ಅಭ್ಯರ್ಥಿಗಳು

    ಮಾಲಕರೆಡ್ಡಿ ಶನಿವಾರ ಮಧ್ಯಾಹ್ನದ ಹೊತ್ತಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ. ಕಾಂಗ್ರೆಸ್‌ನಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾಲಕರೆಡ್ಡಿ, ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ರೂವಾರಿಗಳಲ್ಲಿ ಮಾಲಕರೆಡ್ಡಿ ಕೂಡ ಒಬ್ಬರು. ಆದರೆ ಈಗ ಹಳೇಯ ದ್ವೇಷ ಮರೆತು ಮತ್ತೆ ಘರ್ ವಾಪಸಿ ಆಗಲು ಮಾಲಕರೆಡ್ಡಿ ಮುಂದಾಗಿದ್ದಾರೆ. ಇದನ್ನೂ ಓದಿ: ಖಲಿಸ್ತಾನ ಬೇಡಿಕೆಗೆ BJP, RSSನ ಹಿಂದೂ ರಾಷ್ಟ್ರದ ಹೇಳಿಕೆಯೇ ಕಾರಣ: ಅಶೋಕ್ ಗೆಹ್ಲೋಟ್    

     

     

    ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮದೇ ಹಿಡಿತ ಹೊಂದಿರುವ ಎಬಿ ಮಾಲಕರೆಡ್ಡಿ ಹಾಗೂ ಬಾಬುರಾವ್ ಚಿಂಚನಸೂರ್ ಬಿಜೆಪಿ ಸೇರಿದ ಮೇಲೆ ಬಿಜೆಪಿಗೆ ಒಂದಷ್ಟು ಆನೆ ಬಲ ಬಂದಂತಾಗಿತ್ತು. ಪ್ರಮುಖವಾಗಿ ಯಾದಗಿರಿ (Yadgiri) ಹಾಗೂ ಕಲಬುರಗಿ (Kalaburagi) ಜಿಲ್ಲೆಗಳಲ್ಲಿ ಸೋಲಿನ ಭೀತಿಯಲ್ಲಿದ್ದ ಒಂದಷ್ಟು ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದರು. ಆದರೆ ಈಗ ಇಬ್ಬರೂ ನಾಯಕರು ಕಮಲಕ್ಕೆ ಕೈ ಕೊಟ್ಟು, ಘರ್ ವಾಪಸಿ ಆಗಿರುವುದರಿಂದ ಕಮಲ ಪಡೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿನ್ನಡೆಯಾದಂತಾಗಿದೆ. ಇದನ್ನೂ ಓದಿ: ಶಾಸಕ ಮಹೇಶ್ ಕುಮಠಳ್ಳಿಗೆ ಟಿಕೆಟ್ ಟೆನ್ಶನ್- ವಲಸಿಗ ಶಾಸಕರಿಗೆ ಮೂಲ ಬಿಜೆಪಿಗರಿಂದ ಕಿರಿಕ್

     

     
  • ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ – ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಹೊಡೆತ

    ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ – ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಹೊಡೆತ

    ಯಾದಗಿರಿ: ವಿಧಾನಸಭೆ ಚುನಾವಣೆ (Election) ಸಮೀಪಿಸುತ್ತಿದ್ದು, ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ (BJP) ಪಕ್ಷಾಂತರದ ಪರ್ವ ತಲೆಬಿಸಿ ಉಂಟುಮಾಡಿದೆ. ಕಳೆದ ವಾರವಷ್ಟೇ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದ್ದ ಬಾಬುರಾವ್ ಚಿಂಚನಸೂರ್ (Baburao Chinchanasur) ಬಿಜೆಪಿಗೆ ಶಾಕ್ ನೀಡಿದ್ದರು. ಆದರೆ ಈಗ ಮತ್ತೊಬ್ಬ ಪ್ರಭಾವಿ ನಾಯಕ, ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿಯೂ (A.B.Malaka Reddy) ಬಿಜೆಪಿ ಬಿಟ್ಟು ಕಾಂಗ್ರೆಸ್ (Congress) ಸೇರುವುದಕ್ಕೆ ಮುಂದಾಗಿದ್ದಾರೆ.

    ಯಾದಗಿರಿ (Yadgiri) ಮತಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವ ತವಕದಲ್ಲಿರುವ ಹಿರಿಯ ರಾಜಕಾರಣಿ, ಮಾಜಿ ಸಚಿವ ಡಾ.ಎ.ಬಿ.ಮಾಲಕರೆಡ್ಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಸೇರುವ ಆಸೆಯಿಂದ ಡಿಕೆಶಿಯವರನ್ನು ಭೇಟಿಯಾಗಿ, ಈಗಾಗಲೇ ಒಂದು ಸುತ್ತಿನ ಮಾತುಕತೆಯನ್ನೂ ಆಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಾಲಕರೆಡ್ಡಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮತ್ತೇ ‘ಕೈ’ ಹಿಡಿದಿದ್ದರಿಂದ ಮಾಲಕರೆಡ್ಡಿಯೂ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದನ್ನೂ ಓದಿ: ನನ್ನ ತಂದೆ ಯಾವತ್ತೂ ರಾಜಕೀಯ ಪಾಠ ಹೇಳಿಕೊಡಲಿಲ್ಲ – ಸಾರ್ವಜನಿಕ ವೇದಿಕೆಯಲ್ಲಿ ದರ್ಶನ್ ಧ್ರುವನಾರಾಯಣ ಮೊದಲ ಭಾಷಣ 

    ಕಳೆದ ಎರಡು ತಿಂಗಳ ಹಿಂದೆಯೇ ಮಾಲಕರೆಡ್ಡಿ ಕಾಂಗ್ರೆಸ್ ಸೇರಲು ಪ್ರಯತ್ನ ನಡೆಸಿದ್ದರು. ಆದರೆ ಹೈಕಮಾಂಡ್ ಕೇರ್ ಮಾಡಿರಲಿಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೈ ತೊರೆದಿದ್ದ ನಾಯಕರೆಲ್ಲರೂ ಘರ್ ವಾಪ್ಸಿ ಆಗುತ್ತಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಎರಡು ದಿನಗಳ ಹಿಂದೆ ಬಾಬುರಾವ್ ಚಿಂಚನಸೂರ್ ಈ ವಿಚಾರ ಪ್ರಸ್ತಾಪ ಮಾಡಿದ್ದರು. ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕರು ಮತ್ತೆ ಕಾಂಗ್ರೆಸ್‌ಗೆ ವಾಪಾಸ್ ಬರುತ್ತಾರೆ ಎಂದಿದ್ದರು. ಅದರಂತೆ ಈಗ ಎ.ಬಿ.ಮಾಲಕರೆಡ್ಡಿ ʼಕೈʼ ಹಿಡಿಯುವುದು ಪಕ್ಕಾ ಆಗಿದೆ. ಇದರಿಂದಾಗಿ ಒಂದು ವಾರದ ಅಂತರದಲ್ಲಿ ಕಲ್ಯಾಣ ಕರ್ನಾಟಕದ ಬಿಜೆಪಿಯ ಎರಡನೇ ವಿಕೆಟ್ ಪತನ ಆಗೋದು ಗ್ಯಾರಂಟಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಭಾವಿ ಆಗಿರುವ ಮಾಲಕರೆಡ್ಡಿ ಬಿಜೆಪಿ ಬಿಡೋದ್ರಿಂದ ಇಡೀ ಕಲ್ಯಾಣ ಭಾಗದಲ್ಲಿ ಬಿಜೆಪಿಗೆ ಬಹುದೊಡ್ಡ ಹಿನ್ನೆಡೆಯಾಗುತ್ತದೆ ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ. ಇದನ್ನೂ ಓದಿ: ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ: ಸಿದ್ದರಾಮಯ್ಯ

    ಸದ್ಯ ವಯಸ್ಸಿನ ಕಾರಣದಿಂದ ಬಿಜೆಪಿಯಲ್ಲಿ ಮಾಲಕರೆಡ್ಡಿಗೆ ಟಿಕೆಟ್ ಸಿಗುವುದು ಅನುಮಾನ ಇರುವುದರಿಂದ ಹಲವು ತಿಂಗಳಿನಿಂದ ಅವರು ಪಕ್ಷದಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದಾರೆ. ಇನ್ನೂ ಯಾದಗಿರಿ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ದಾಳ್‌ಗೆ ಟಕ್ಕರ್ ಕೊಡಬಲ್ಲ ಏಕೈಕ ವ್ಯಕ್ತಿ ಮಾಲಕರೆಡ್ಡಿ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿವೆ. ಹೀಗಾಗಿ ಕಾಂಗ್ರೆಸ್‌ನಿಂದ ತಾವು ನಿಲ್ಲಬೇಕು ಅಥವಾ ಪುತ್ರಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಪ್ಯಾನ್‌ – ಆಧಾರ್‌ ಕಾರ್ಡ್‌ ಲಿಂಕ್‌; ಜೂನ್‌ 30 ರವರೆಗೆ ಅವಧಿ ವಿಸ್ತರಣೆ   

    ಕಾಂಗ್ರೆಸ್ ಮೂರು ದಿನಗಳ ಹಿಂದಷ್ಟೇ ರಾಜ್ಯದ 124 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದು, ಇದರಲ್ಲಿ ಜಿಲ್ಲೆಯ ಶಹಾಪುರಕ್ಕೆ ಹಾಲಿ ಶಾಸಕ ಶರಣಬಸಪ್ಪ ಗೌಡ ದರ್ಶನಾಪುರ, ಸುರಪುರಕ್ಕೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೆಸರು ಫೈನಲ್ ಮಾಡಿದೆ. ಆದರೆ ಗುರುಮಿಠಕಲ್ ಮತ್ತು ಯಾದಗಿರಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಸಸ್ಪೆನ್ಸ್‌ನಲ್ಲಿ ಇಟ್ಟಿದ್ದು, ಟಿಕೆಟ್‌ಗಾಗಿ ಟವೆಲ್ (ದಸ್ತಿ) ಹಾಕಿದ ಆಕಾಂಕ್ಷಿಗಳಲ್ಲಿ ಎದೆಬಡಿತ ಜೋರಾಗಿದೆ. ಇದನ್ನೂ ಓದಿ: ಮೀಸಲಾತಿ ವಿಚಾರಕ್ಕೆ ಜೈಲಿಗೋದರೂ ಚಿಂತೆಯಿಲ್ಲ ; SDPI ಎಚ್ಚರಿಕೆ