Tag: A.T.Ramaswamy

  • ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಎ.ಟಿ.ರಾಮಸ್ವಾಮಿ ಮನವಿ

    ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಎ.ಟಿ.ರಾಮಸ್ವಾಮಿ ಮನವಿ

    ಹಾಸನ: ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ. ನನಗೆ ಟಿಕೆಟ್ ಕೈತಪ್ಪಿದೆ ಎಂದು ಅಪ್ರಚಾರ ಮಾಡುತ್ತಿರುವುದಕ್ಕೆ ಯಾರೂ ಕಿವಿಗೊಡಬೇಡಿ ಎಂದು ಮಾಜಿ ಶಾಸಕ ಎ.ಟಿ.ರಾಮಸ್ವಾಮಿಯವರು (A.T.Ramaswamy) ತಮ್ಮ ಅಭಿಮಾನಿಗಳು ಹಾಗೂ ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ.

    ಬುಧವಾರ ಹಾಸನದಲ್ಲಿ (Hassan) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಸೇರಿದ್ದು ಯಾವುದೇ ಅಧಿಕಾರದ ಆಸೆಗಾಗಿ ಅಲ್ಲ ಎಂದು ಎಲ್ಲೆಡೆ ಹೇಳಿದ್ದೇನೆ. ನಾನು ಟಿಕೆಟ್ ಅಪೇಕ್ಷಿತ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ವರಿಷ್ಠರೂ ಕೂಡ ಬಹಳ ಒತ್ತಡ ಹಾಕಿ ಅಭ್ಯರ್ಥಿ ಆಗಲು ಹೇಳಿದ್ದರು. ನಾನು ಯಾವುದೇ ಕಾರಣದಿಂದ ಸ್ಪರ್ಧೆ ಮಾಡಲ್ಲ ಎಂದು ಅವರಿಗೆ ಹೇಳಿದ್ದೆ. ನಾನು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ರಾಮಸ್ವಾಮಿ ಅವರು ಬಿಜೆಪಿಗೆ ಹೋದರೂ ಟಿಕೆಟ್ ಸಿಗಲಿಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು ಎಂದರು. ಇದನ್ನೂ ಓದಿ: ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಎಡವಟ್ಟು 

    ನಾನು ಆಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ನನ್ನ ನಡೆಯಿಂದ ಯಾರಿಗಾದರೂ ಬೇಜಾರಾಗಿದ್ದರೆ ಕ್ಷಮಿಸಿ. ಈಗ ರಾಜಕಾರಣದಲ್ಲಿ ಮೌಲ್ಯ ಇಲ್ಲದಾಗಿದೆ. ರಾಜಕೀಯ (Politics) ಈಗ ವ್ಯಾಪಾರವಾಗಿದೆ. ಕೆಲವರು 50 ಕೋಟಿಯವರೆಗೂ ಬಂಡವಾಳ ಹೂಡಲು ಹೊರಟಿದ್ದಾರೆ. ರಾಜಕಾರಣದಲ್ಲಿ ಮೌಲ್ಯ ಉಳಿಸಬೇಕಾಗಿದೆ. ಒಳ್ಳೆಯವರು, ಪ್ರಾಮಾಣಿಕರು, ಯೋಗ್ಯರು ರಾಜಕಾರಣಕ್ಕೆ ಬರಲು ಕಷ್ಟವಾಗುತ್ತಿವೆ. ಏಕೆಂದರೆ ಬಂಡವಾಳ ಹೂಡಿದ ಮೇಲೆ ಅದನ್ನು ವಾಪಸ್ ಪಡೆಯಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಜೆಡಿಎಸ್‌ ಬಾಗಿಲು ತಟ್ಟಿದ ದತ್ತಾ

    ಈ ರಾಜಕೀಯ ವ್ಯವಸ್ಥೆ ಬದಲಾಗಬೇಕಿದೆ. ಚುನಾವಣಾ ಆಯೋಗ ಸಹ ಕಟ್ಟುನಿಟ್ಟಿನ ಕ್ರಮ ವಹಿಸಬೇಕಿದೆ. ಇಲ್ಲವಾದರೆ ಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತದೆ. ಸತ್ಯ, ಧರ್ಮ, ನ್ಯಾಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಅದರ ಆಚರಣೆ ಮಾಡಲು ಹಿಂದೆ ಸರಿಯುತ್ತಾರೆ. ಹಿತೈಷಿಗಳಿಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಭಿನ್ನಮತ- ಶೆಟ್ಟರ್‌ಗೆ ನಡ್ಡಾ ಬುಲಾವ್ 

    ಮಾಜಿ ಸಿಎಂ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ನನಗೆ ಟಿಕೆಟ್ ಕೊಡುತ್ತೇವೆ ಎಂದು ಹೇಳಿದ್ದರು. ಕೆಲವರು ನನಗೆ ಕೊಡಿ, ಮಕ್ಕಳಿಗೂ ಕೊಡಿ ಎಂದು ಕೇಳುತ್ತಾರೆ. ಆದರೆ ನಿಮ್ಮದು ವಿಶೇಷ ಎಂದು ಅವರು ಹೇಳಿದ್ದರು. ನಾನು ರಾಜಕೀಯದಿಂದ ತಟಸ್ಥನಾಗಿರಬೇಕು ಎನ್ನುವ ಭಾವನೆ ಇತ್ತು. ಆದರೆ ನನ್ನ ಹಿತೈಷಿಗಳು, ಬೆಂಬಲಿಗರ ರಕ್ಷಣೆಗಾಗಿ ಕೆಲಸ ಮಾಡಲು ಒಂದು ಪಕ್ಷ ಬೇಕು ಎಂದು ಈ ನಿರ್ಧಾರ ಕೈಗೊಂಡಿದ್ದೇನೆ. ನಾನು ಭ್ರಷ್ಟಾಚಾರದ (Corruption) ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ ಎಂದು ನುಡಿದರು. ಇದನ್ನೂ ಓದಿ: ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ 

    ಚುನಾವಣೆಯಲ್ಲಿ (Election) ಕ್ಯಾಸ್ಟ್ (Caste) ಮತ್ತು ಕ್ಯಾಶ್ (Cash) ಎಂಬ ಎರಡು ಸಿಸಿಗಳು ಕೆಲಸ ಮಾಡಲಿವೆ. ಈ ಎರಡೂ ಪ್ರಭಾವ ಬೀರದಂತೆ ಕೆಲಸ ಮಾಡಿದರೆ ಪ್ರಜಾಪ್ರಭುತ್ವ ಮತ್ತಷ್ಟು ಎತ್ತರಕ್ಕೆ ಹೋಗಲಿದೆ ಎಂದರು. ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನ ಬಳಸಿಕೊಂಡ್ರೆ ಕಠಿಣ ಶಿಕ್ಷೆ – ಖಡಕ್‌ ಸೂಚನೆ

  • ಎ.ಮಂಜು ಜೊತೆ ಅಡ್ಜಸ್ಟ್ ಸಾಬೀತುಪಡಿಸಿದ್ರೆ ರಾಮಸ್ವಾಮಿ ಹೇಳುವ ಶಿಕ್ಷೆಗೆ ಗುರಿಯಾಗ್ತೀನಿ: ರೇವಣ್ಣ

    ಎ.ಮಂಜು ಜೊತೆ ಅಡ್ಜಸ್ಟ್ ಸಾಬೀತುಪಡಿಸಿದ್ರೆ ರಾಮಸ್ವಾಮಿ ಹೇಳುವ ಶಿಕ್ಷೆಗೆ ಗುರಿಯಾಗ್ತೀನಿ: ರೇವಣ್ಣ

    ಹಾಸನ: ಮಾಜಿ ಶಾಸಕ ಎ.ಮಂಜು (A.Manju) ಜೊತೆ ಅಡ್ಜಸ್ಟ್ ಮಾಡಿಕೊಂಡು ಪಕ್ಷಕ್ಕೆ ಸೇರಿಸಿಕೊಂಡಿದ್ದೇನೆ ಎಂದು ಶಾಸಕ ಎ.ಟಿ ರಾಮಸ್ವಾಮಿ (A.T.Ramaswamy) ಸಾಬೀತು ಪಡೆಸಿದರೆ ನಾನು ಅವರು ಹೇಳುವ ಶಿಕ್ಷೆಗೆ ಗುರಿಯಾಗುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D.Revanna) ವಾಗ್ದಾಳಿ ನಡೆಸಿದ್ದಾರೆ.

    ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ.ಟಿ ರಾಮಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಮಗನ ಮೇಲೆ ಕೇಸ್ ದಾಖಲಿಸಿದವನ ಜೊತೆ ರಾಜಿ ಮಾಡಿಕೊಂಡು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ರಾಮಸ್ವಾಮಿ ಹೇಳಿದ್ದಾರೆ. ಅವರು ಸೀನಿಯರ್ ಅಡ್ವಕೇಟ್ ಇಟ್ಟುಕೊಂಡರು ಸಹ ಹೈಕೋರ್ಟ್‍ನಲ್ಲಿ ನಮ್ಮ ಪರವೇ ಆಗಿದೆ. ಸುಪ್ರೀಂ ಕೋರ್ಟ್‍ನಲ್ಲಿ ನಮ್ಮ ಅಡ್ವಕೇಟ್ ಬಾರದ ಕಾರಣ ರಿಮೆಂಟ್ ಆಯ್ತು. ಅದರ ಪ್ರತಿಯನ್ನು ರಾಮಸ್ವಾಮಿ ಓದಿಕೊಳ್ಳಲಿ. ನಮ್ಮ ಸಂಪೂರ್ಣ ಆಸ್ತಿಯನ್ನು ಐಟಿಗೆ ನೀಡಿದ್ದೇನೆ ಇಡಿ ಮೂಲಕ ತನಿಖೆ ನಡೆಸಿಕೊಳ್ಳಲಿ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಕುಸಿದ ಅದಾನಿ

    ರಾಮಸ್ವಾಮಿಯವರು ಎರಡು ವರ್ಷದಿಂದ ಯಾವ್ಯಾವ ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿದ್ದರು ಎಂದು ಹೇಳಲಿ. ಹಾಸನ ಮತ್ತು ಬೆಂಗಳೂರಿನಲ್ಲಿ ನಡೆದ ಜಲಧಾರೆ ಯಾತ್ರೆಗೆ ಯಾಕೆ ಬರಲಿಲ್ಲ? ಅವರಿಗೆ ಸೀಟ್ ಕೊಡದೆ ಒದ್ದು ಓಡಿಸಿದ್ದಕ್ಕೆ ನಿಮ್ಮ ಹತ್ರ ಬಂದಿದ್ದಾರೆ ಎಂದು ಶಿವಲಿಂಗೇಗೌಡರು ಹೇಳಿದ್ರಾ? ಹಾಗಾದರೆ ಶಿವಲಿಂಗೇಗೌಡರು ಧರ್ಮಸ್ಥಳದ ಮೇಲೆ ಆಣೆ ಮಾಡಲಿ ಎಂದು ಸವಾಲು ಹಾಕಿದರು.

    ಎರಡು ವರ್ಷದಿಂದ ಕಾಂಗ್ರೆಸ್ ಕದ ತಟ್ಟುತ್ತಿದ್ದರು. ಅಲ್ಲಿ ಸೋಲ್ತಾರೆ ಎಂದ ಮೇಲೆ ನಮ್ಮ ಬಳಿ ಬಂದಿದ್ದಾರೆ. ನಾವು ಯಾರ ಹತ್ರವೂ ಅಡ್ಜಸ್ಟ್ ಆಗಿಲ್ಲ. ಎ. ಮಂಜು ಬರ್ತೀನಿ ಅಂದ್ರೆ ಪಕ್ಷ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.

    ಶಿವಲಿಂಗೇಗೌಡ (K.L.Shivalinge Gowda) ಪಕ್ಷ ತೊರೆದ ವಿಚಾರವಾಗಿ, ನಾವು ರಾಜಕೀಯವಾಗಿ ಆತ್ಮಹತ್ಯೆ ಮಾಡಿಕೊಳ್ಳುವವರು. ಅವರು ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.

    ದೇವರಾಣೆ ಪಕ್ಷ ಬಿಡಲ್ಲ ಎಂದು ಕೆ.ಎಂ ಶಿವಲಿಂಗೇಗೌಡ ಅಂದಿದ್ರು, ಆದರೂ ಪಕ್ಷ ತೊರೆದಿದ್ದಾರೆ. ಕುಮಾರಸ್ವಾಮಿಯವರ (H.D.Kumaraswamy) ಮನೆಯಲ್ಲಿ ಈ ಮಾತು ಹೇಳಿಲ್ಲ ಎಂದರೆ ಅವರು ಧರ್ಮಸ್ಥಳದ ಮಂಜುನಾಥಸ್ವಾಮಿಯ ಮೇಲೆ ಆಣೆಮಾಡಲಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸವಾಲು ಹಾಕಿದ್ದಾರೆ.

    ಶಿವಲಿಂಗೇಗೌಡರು ಹೇಳಿದ ಕೆಲಸಗಳನ್ನೆಲ್ಲ ಮಾಡಿಕೊಟ್ಟಿದ್ದೇವೆ. ಜೆಡಿಎಸ್ (JDS) ಗೆ ದುಡ್ಡು ಕೊಟ್ಟು ವೋಟು ತೆಗೆದುಕೊಳ್ಳುವ ಶಕ್ತಿ ಇಲ್ಲ. ಕೆಪಿಸಿಸಿ ಅಧ್ಯಕ್ಷರ ಬಳಿ ಖಜಾನೆಯಿದೆ ಎಂದಿದ್ದಾರೆ.

    ಅರಸಿಕೆರೆಯಲ್ಲಿ ಬಿಜೆಪಿಯವನು ನಿಂತರೆ ಸೋಲುತ್ತೇನೆ. ಲಿಂಗಾಯತರೆಲ್ಲ ಒಂದೇ ಕಡೆ ಓಟು ಹಾಕುತ್ತಾರೆ ಎಂದು ಶಿವಲಿಂಗೇಗೌಡರು ಹೇಳಿದ್ದರು. ಕಳೆದ ಬಾರಿ ಐದು ಶಾಸಕರು ಕಾಂಗ್ರೆಸ್ (Congress) ತೊರೆದಿದ್ದರು. ಅರಸಿಕೆರೆ ಜನ ದುಡ್ಡಿಗೆ ಮತ ಹಾಕುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್, ಬಿಜೆಪಿಗೆ ಕಾಂಗ್ರೆಸ್ ಗಾಳ- ಡಿ.ಕೆ.ಶಿವಕುಮಾರ್ ಸ್ಪಷ್ಟನೆ

  • ಡಿಕೆಶಿ ಭೇಟಿಯಾದ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ – ಕಾಂಗ್ರೆಸ್‌ ಸೇರಲು ಸಿದ್ಧತೆ

    ಡಿಕೆಶಿ ಭೇಟಿಯಾದ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ – ಕಾಂಗ್ರೆಸ್‌ ಸೇರಲು ಸಿದ್ಧತೆ

    ಹಾಸನ: ಚುನಾವಣೆ ಹೊತ್ತಲ್ಲೇ ಜೆಡಿಎಸ್‌ (JDS) ಭದ್ರಕೋಟೆಯಲ್ಲಿ ಈಗ ತಳಮಳ ಶುರುವಾಗಿದೆ. ಹಾಲಿ ಶಾಸಕರ ಪಕ್ಷಾಂತರ ಹಾಗೂ ಟಿಕೆಟ್ ಗೊಂದಲದಿಂದ ಈ ಭಾರಿ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತದೆಯೇ ಎಂಬ ಚರ್ಚೆಗಳು ಶುರುವಾಗಿವೆ.

    ಅರಸೀಕೆರೆಯ ಜೆಡಿಎಸ್‌ ಶಾಸಕ ಕೆ.ಎಂ.ಶಿವಲಿಂಗೇಗೌಡ (Shivalinge Gowda) ಅವರು ಕಾಂಗ್ರೆಸ್ (Congress) ಪಕ್ಷ ಸೇರಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಸಿಟಿ ರವಿ ಆಪ್ತ ಹೆಚ್‌ಡಿ ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆ

    ಶೀಘ್ರದಲ್ಲಿಯೇ ತಮ್ಮ ಬೆಂಬಲಿಗರು, ಅಭಿಮಾನಿಗಳ ಸಭೆ ಕರೆದು ಶಿವಲಿಂಗೇಗೌಡ ಅವರು ಚರ್ಚಿಸಲಿದ್ದಾರೆ. ಆನಂತರ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕ್ರಿಯೆಗಳ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಿವಲಿಂಗೇಗೌಡರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

    ಇನ್ನೊಂದೆಡೆ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ಬಿಜೆಪಿ-ಕಾಂಗ್ರೆಸ್ ಮುಖಂಡರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತ ಎನ್ನಲಾಗಿದೆ. ಕಾಂಗ್ರೆಸ್‌ನಲ್ಲೇ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಇದರಿಂದ ರಾಮಸ್ವಾಮಿ ಅವರಿಗೆ ಟಿಕೆಟ್ ಸಿಗುವುದು ಅನುಮಾನ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಜೊತೆಯೂ ರಾಮಸ್ವಾಮಿ ಅವರು ಚರ್ಚೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ತಮ್ಮನ್ನು ನರಕದಲ್ಲಿಟ್ಟಿದ್ದಕ್ಕೆ ಕಾಂಗ್ರೆಸ್‍ನ್ನು ಜನ ಮನೆಗೆ ಕಳಿಸಿದ್ರು: ಬೊಮ್ಮಾಯಿ ಕಿಡಿ

    ಪಕ್ಷದ ಟಿಕೆಟ್ ಆಕಾಂಕ್ಷಿಗಳ ಮನವೊಲಿಸಿ ರಾಮಸ್ವಾಮಿ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕುತ್ತಾ ಎನ್ನುವುದು ಪ್ರಶ್ನೆಯಾಗಿದೆ. ಈ ವಿಚಾರದಲ್ಲಿ ರಾಮಸ್ವಾಮಿ ನಡೆಯೂ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ತಮ್ಮ ಬೆಂಬಲಿಗರು ಹಾಗೂ ಅಭಿಮಾನಿಗಳ ಜೊತೆ ರಾಮಸ್ವಾಮಿ ಅವರು ಎರಡು ಸುತ್ತಿನ ಸಭೆ ನಡೆಸಿದ್ದಾರೆ. ಜೆಡಿಎಸ್‌ ವಿರುದ್ಧ ಸೆಣಸಲು ಇಬ್ಬರು ಹಾಲಿ ಶಾಸಕರು ರಣತಂತ್ರ ರೂಪಿಸುತ್ತಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ: ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

    ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ: ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

    ಹಾಸನ: ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ (H.D Revanna) ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ (A.T Ramaswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹೊಳೆನರಸೀಪುರ ತಾಲ್ಲೂಕಿನ ಜೋಗಿಕೊಪ್ಪಲು ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾವಣನಿಗೆ ಸಕಲ ಐಶ್ವರ್ಯ, ಈಶ್ವರನಿಂದ ಪಡೆದ ಶಕ್ತಿಶಾಲಿ ಅಸ್ತ್ರ ಇದ್ದು ಸಹ ನಾಶವಾದ. ಲಂಕೆ ಕೂಡ ಬೂದಿ ಆಯಿತು. ಯಾವುದಕ್ಕೆ ಆರಂಭ ಇರುತ್ತದೆಯೋ ಅದಕ್ಕೆ ಅಂತ್ಯ ಕೂಡ ಇರುತ್ತದೆ ಎಂದು ರೇವಣ್ಣ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರಾಚಿಯಲ್ಲಿ ಪೊಲೀಸ್ ಮುಖ್ಯಸ್ಥರ ಕಚೇರಿಗೆ ನುಗ್ಗಿದ ಉಗ್ರರು – ಗುಂಡಿನ ದಾಳಿ

    ನನ್ನಂತಹವನಿಗೆ ಹೀಗೆ ಮಾಡಿದ್ದಾರೆ. ನಿಮ್ಮನ್ನು ಬಿಡುತ್ತಾರಾ? ಎಂದು ಕಾರ್ಯಕರ್ತರಿಗೆ ಕರೆಕೊಟ್ಟ ಅವರು, ನೀವೆಲ್ಲಾ ಸ್ವಾಭಿಮಾನಿಗಳಾಗಬೇಕು. ಆತ್ಮಗೌರವದಿಂದ ನಿಲ್ಲಬೇಕು. ಯಾರ ಮುಂದು ಕೈಕಟ್ಟಿ ನಿಲ್ಲಬಾರದು. ಎಲ್ಲಿ ಜೊತೆಗೆ ಕುಳಿತುಕೊಳ್ಳುವ ಸ್ಥಾನಮಾನ ಇರುತ್ತದೆಯೋ ಅಲ್ಲಿಗೆ ಹೋಗಿ ಎಂದಿದ್ದಾರೆ.

    ಅವರಿಗೆ ಒಳ್ಳೆಯವರು ಬೇಕಾಗಿಲ್ಲ. ಕೆಲವು ಜನ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡಲು ತಯಾರಿದ್ದಾರೆ. ಸತ್ಯವನ್ನೇ ಸಾಯಿಸುತ್ತಾರೆ. ಅದನ್ನು ಎದುರಿಸುವ ಶಕ್ತಿ ನನಗೆ ಜನ ಕೊಟ್ಟಿದ್ದಾರೆ. ರಾಜಕೀಯವಾಗಿ ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

    ದೇವೇಗೌಡರು (H.D. Deve Gowda) ಪ್ರಧಾನಿ ಆಗಿದ್ದವರು. ಈ ದೇಶದ ದೊಡ್ಡ ಹುದ್ದೆಗೆ ಏರಿದ್ದವರು. ಅಂತವರನ್ನೇ ಮನೆಯಿಂದ, ಜಿಲ್ಲೆಯಿಂದ ಹೊರಹಾಕಿದಂತವರು ನನ್ನನ್ನು ಬಿಡುತ್ತಾರಾ? ಅವರು ಎಂಪಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದರೆ ಸರಿ, ಬೇರೆಯವರು ನಿಂತುಕೊಳ್ಳಬಹುದಿತ್ತು. ಆದರೆ ಅವರನ್ನು ತುಮಕೂರಿನಿಂದ ನಿಲ್ಲಿಸಿ ಸೋಲಿಸಿದ್ದನ್ನು ಯಾರು ಮರೆಯುವಂತಿಲ್ಲ ಎಂದು ರೇವಣ್ಣ ವಿರುದ್ಧ ಹರಿಹಾಯ್ದಿದ್ದಾರೆ.

    ದೇವೇಗೌಡರನ್ನು ಕೇವಲ ಉತ್ಸವ ಮೂರ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಅಂತಹ ಮುತ್ಸದ್ಧಿ ರಾಜಕಾರಣಿಯನ್ನು ಮೂಲೆಗುಂಪು ಮಾಡಿ ಅವರ ಮಾತನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸರಿಯಾಗಿ ಆಸ್ತಿ ಘೋಷಣೆ ಮಾಡದೆ, ಕೋರ್ಟ್‍ನಲ್ಲಿ ವಿಚಾರಣೆ ನಡೆದು ಶಿಕ್ಷಯಾಗುವ ಸಂದರ್ಭ ಬಂದಾಗ ರಾಜಿ ಮಾಡಿಕೊಳ್ಳಲು ಸ್ವಾರ್ಥಕ್ಕಾಗಿ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರು ಎಂದಿದ್ದಾರೆ.

    ನನ್ನ ಪಕ್ಷದ ಕಾರ್ಯಕರ್ತರು ನನ್ನ ಕುಟುಂಬದವರಿಗಿಂತಲೂ ಹೆಚ್ಚು. ನನ್ನ ಮಕ್ಕಳು ಬೇರೆ ಅಲ್ಲ, ನನ್ನ ಕಾರ್ಯಕರ್ತರು ಬೇರೆ ಅಲ್ಲ ಎಂಬ ಭಾವನೆಯಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನ ಕುಟುಂಬ ಮನೆಗೆ ಮಾತ್ರ ಸೀಮಿತ. ಗಟ್ಟಿ ತಳಪಾಯ ಹಾಕಿಕೊಂಡು ಮುಂದಿನ ರಾಜಕೀಯ ನಿರ್ಧಾರ ತಿಳಿಸುತ್ತೇನೆ. ಮತ್ತೆ ವಿಧಾನಸೌಧಕ್ಕೆ ಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.

    ರೇವಣ್ಣ ಅಧಿವೇಶನದಲ್ಲಿ, ರಾಮಸ್ವಾಮಿ ಪ್ರಾಮಾಣಿಕರು ಅದರಲ್ಲಿ ಬೇರೆ ಮಾತಿಲ್ಲ ಎಂದಿದ್ದಾರೆ. ಅವರ ಒಳಗೊಂದು ಹೊರಗೊಂದು ಇದ್ದರೆ ನಾನೇನು ಮಾಡಲಿ ಎಂದು ಪ್ರತಿಕ್ರಿಸಿದ್ದಾರೆ.

    ರೈತರ ಪಕ್ಷ ಎಂದು ಕಟ್ಟಿರುವ ಪಕ್ಷ ಕ್ಷೀಣಿಸುತ್ತಿದೆ ಎಂದು ಮೂರು ವರ್ಷಗಳ ಹಿಂದೆ ಸದನದಲ್ಲಿ ಹೇಳಿದ್ದೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಬಲಗೊಳ್ಳುತ್ತಿವೆ. ಹಿಂದಿನಿಂದ ಇದ್ದ ಪ್ರಾದೇಶಿಕ ಪಕ್ಷ ಯಾಕೆ ಕ್ಷೀಣಿಸುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

    ರೈತರ ಹೆಸರು ಹೇಳುತ್ತಾರೆ. ರೈತರಿಗೆ ಜಮೀನು ಮಂಜೂರು ಮಾಡಲು ಹೋದರೆ, ಮಾಡಿಕೊಡಬೇಡಿ ಎಂದು ಅಧಿಕಾರಿಗಳಿಗೆ ಹೇಳುತ್ತಾರೆ ಇದು ರೈತರ ಪಕ್ಷನಾ? ರೈತರ ಪರವಾಗಿ ಕೆಲಸ ಮಾಡುತ್ತಿದೆಯಾ? ರೈತರ ಹಿತ ಕಾಪಾಡುವ ಕೆಲಸ ಆಗಿದೆಯೇ? ರೈತರು ತಿನ್ನುವ ಅನ್ನಕ್ಕೆ ಕಲ್ಲು ಹಾಕುವ ಜನ ಇದ್ದಾರೆ. ಅದನ್ನು ಎದುರಿಸುವ ಶಕ್ತಿ ನನಗಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು.

    ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದುಕೊಂಡಿದ್ದಾರೆ ಅದು ಸಾಧ್ಯವಿಲ್ಲ. ನಾನು ಮತ್ತೆ ಶಾಸಕನಾಗುತ್ತೇನೆ. ನೆಲ ಹಾಗೂ ಜನರ ರಕ್ಷಣೆಗೆ ನನ್ನ ತಲೆ ಬೇಕಾದ್ರೂ ತೆಗೆಯಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಕಿಡ್ನಿ ಮಾರಿ ದುಡ್ಡು ಕೊಡ್ತೀನಿ.. ನಮ್ಮ ನಾಯಕರಿಗೆ ಟಿಕೆಟ್ ಕೊಡಿ – ಯುವಕನ ಹುಚ್ಚಾಟ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k