Tag: Aaditya Thackeray

  • ಮಹಾರಾಷ್ಟ್ರದಲ್ಲಿ ಎಸ್‌ಪಿ ಬಿಜೆಪಿಯ ಬಿ ಟೀಂ – ಆದಿತ್ಯ ಠಾಕ್ರೆ ಆಕ್ರೋಶ

    ಮಹಾರಾಷ್ಟ್ರದಲ್ಲಿ ಎಸ್‌ಪಿ ಬಿಜೆಪಿಯ ಬಿ ಟೀಂ – ಆದಿತ್ಯ ಠಾಕ್ರೆ ಆಕ್ರೋಶ

    ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಸಮಾಜವಾದಿ ಪಕ್ಷ (SP) ಬಿಜೆಪಿಯ ಬಿ ಟೀಂ (BJP B Team) ಎಂದು ಶಿವಸೇನಾ ಉದ್ದವ್‌ ಠಾಕ್ರೆ ಬಣದ ಶಾಸಕ ಆದಿತ್ಯ ಠಾಕ್ರೆ (Aaditya Thackeray) ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಿದ್ದಾರೆ.

    ಪಕ್ಷದ ಮಹಾರಾಷ್ಟ್ರ ಘಟಕವು ಕೆಲವೊಮ್ಮೆ ಬಿಜೆಪಿ ಬಿ-ಟೀಂನಂತೆ ವರ್ತಿಸುತ್ತದೆ. ನಮ್ಮ ಹಿಂದುತ್ವ ಸ್ಪಷ್ಟವಾಗಿದೆ. ನಮ್ಮ ಹಿಂದುತ್ವ ಎಂದರೆ ‘ಹೃದಯ್ ಮೇ ರಾಮ್ ಔರ್ ಹಾಥ್ ಕೋ’ ಕಾಮ್’. ನಮ್ಮ ಹಿಂದುತ್ವ ಎಂದರೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವುದು ಎಂದರು.

    ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿಯನ್ನು (MVA) ಎಸ್‌ಪಿ ತೊರೆದ ಒಂದು ದಿನದ ನಂತರ ಠಾಕ್ರೆಯವರಿಂದ ಈ ಹೇಳಿಕೆ ಪ್ರಕಟವಾಗಿರುವುದು ವಿಶೇಷ. ಇದನ್ನೂ ಓದಿ: `ಮಹಾ’ ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ನಾಮಪತ್ರ ಸಲ್ಲಿಕೆ


    ಭಾನುವಾರ ಆದಿತ್ಯ ಠಾಕ್ರೆ, ನಾನಾ ಪಟೋಲೆ, ವಿಜಯ್ ವಾಡೆಟ್ಟಿವಾರ್, ನಿತಿನ್ ರಾವುತ್, ಸುನೀಲ್ ಪ್ರಭು, ಜಿತೇಂದ್ರ ಅವದ್ ಅವರಂತಹ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದರು.

    ಮಹಾರಾಷ್ಟ್ರ ಚುನಾವಣೆಯ (Maharashtra Election) ಒಟ್ಟು 288 ವಿಧಾನಸಭಾ ಸ್ಥಾನಗಳಲ್ಲಿ ಮಹಾಯುತಿ ಒಕ್ಕೂಟ 235 ಕ್ಷೇತ್ರಗಳನ್ನು ಗೆದ್ದರೆ ಮಹಾ ವಿಕಾಸ ಅಘಾಡಿ ಕೇವಲ 46 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿದೆ.

    ಈ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಮಾಡಲಾಗಿದೆ. ಹೀಗಾಗಿ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಎಂವಿಎ ಶಾಸಕರು ಪ್ರಮಾಣ ವಚನ ಸ್ವೀಕರಿಸದೇ ಇರುವ ನಿರ್ಧಾರಕ್ಕೆ ಬಂದಿದ್ದಾರೆ.

  • ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಆದಿತ್ಯ ಠಾಕ್ರೆ

    ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಆದಿತ್ಯ ಠಾಕ್ರೆ

    ಮುಂಬೈ: ಕಾಂಗ್ರೆಸ್ (Congress) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ಇಂದು ಮಹಾರಾಷ್ಟ್ರದ (Maharashtra) ನಂದೇಡ್ ಜಿಲ್ಲೆಯಲ್ಲಿ ಸಾಗುತ್ತಿದ್ದು, ಈ ವೇಳೆ ಶಿವಸೇನೆ ಮುಖಂಡ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ (Aaditya Thackeray) ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.

    ಭಾರತ್ ಜೋಡೋ ಯಾತ್ರೆ ನಗರದ ಹಿಂಗೋಲಿಯ ಕಳಮ್ನೂರಿನಲ್ಲಿ ಸಾಗುತ್ತಿದ್ದ ಸಂದರ್ಭ ಆದಿತ್ಯ ಠಾಕ್ರೆ ಪಾದಯಾತ್ರೆಗೆ ಸೇರ್ಪಡೆಗೊಂಡರು. ಆದಿತ್ಯ ಠಾಕ್ರೆ ಅವರನ್ನು ಪಕ್ಷದ ಸಹೋದ್ಯೋಗಿಗಳಾದ ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಅಂಬಾದಾಸ್ ದಾನ್ವೆ ಹಾಗೂ ಮಾಜಿ ಶಾಸಕ ಸಚಿನ್ ಅಹಿರ್ ಬರಮಾಡಿಕೊಂಡರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಗೆ ಟ್ರಕ್ ಗುದ್ದಿ ಸಾವು – ರಾಹುಲ್ ಸಂತಾಪ

    ಕಾಂಗ್ರೆಸ್ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆ 65ನೇ ದಿನಕ್ಕೆ ಕಾಲಿಟ್ಟಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಕೂಡಾ ಲೇಹ್‌ನಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ. ಈ ಮೂಲಕ ಈ 2 ಪಕ್ಷಗಳು ವಿಭಿನ್ನ ಸಿದ್ಧಾಂತಗಳೊಂದಿಗೆ ಒಟ್ಟಾಗಿ ಕಾರ್ಯಕ್ರಮಗಳನ್ನು ನಡೆಸಲು ಒಪ್ಪಿಕೊಂಡಿವೆ. ಇದನ್ನೂ ಓದಿ: ಧರ್ಮವೀರ ಸಂಭಾಜಿ ಮಹಾರಾಜರಿಗೆ ಸತೀಶ್ ಜಾರಕಿಹೊಳಿ ಅಪಮಾನ ಮಾಡಿದ್ದಾರೆ: ದೇವೇಂದ್ರ ಫಡ್ನವೀಸ್

    Live Tv

    [brid partner=56869869 player=32851 video=960834 autoplay=true]

  • ಬಾಳಾಸಾಹೇಬ್‌ ಮೇಲಿನ ಗೌರವಕ್ಕೆ ಆದಿತ್ಯ ಠಾಕ್ರೆ ವಿರುದ್ಧ ಕೈಮಕೈಗೊಂಡಿಲ್ಲ: ಶಿಂಧೆ ಬಣ

    ಬಾಳಾಸಾಹೇಬ್‌ ಮೇಲಿನ ಗೌರವಕ್ಕೆ ಆದಿತ್ಯ ಠಾಕ್ರೆ ವಿರುದ್ಧ ಕೈಮಕೈಗೊಂಡಿಲ್ಲ: ಶಿಂಧೆ ಬಣ

    ಮುಂಬೈ: ಶಿವಸೇನಾ ಸ್ಥಾಪಕ ಬಾಳಾಸಾಹೇಬ್‌ ಅವರ ಮೇಲಿನ ಗೌರವದಿಂದಾಗಿ ಆದಿತ್ಯ ಠಾಕ್ರೆ ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶಿವಸೇನಾದ ಏಕನಾಥ್‌ ಶಿಂಧೆ ಬಣ ತಿಳಿಸಿದೆ.

    ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಪರೀಕ್ಷೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣ ಗೆಲುವು ಸಾಧಿಸಿದ್ದು, ಸರ್ಕಾರವನ್ನು ಬೆಂಬಲಿಸಲು ವಿಪ್ ಧಿಕ್ಕರಿಸಿದ ಉದ್ಧವ್ ಠಾಕ್ರೆ ಬಣದ 16 ಶಾಸಕರನ್ನು ಅಮಾನತುಗೊಳಿಸುವಂತೆ ನೂತನವಾಗಿ ಆಯ್ಕೆಯಾದ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಮನವಿ ಸಲ್ಲಿಸಿದೆ. ಇದನ್ನೂ ಓದಿ: ಮಹಾ ಹೈಡ್ರಾಮಾ ಅಂತ್ಯ – ವಿಶ್ವಾಸ ಪರೀಕ್ಷೆ ಗೆದ್ದ ಏಕನಾಥ್‌ ಶಿಂಧೆ

    ಆದಿತ್ಯ ಠಾಕ್ರೆ ಹೊರತುಪಡಿಸಿ ನಮ್ಮ ವಿಪ್ ಧಿಕ್ಕರಿಸಿದಸಿದವರನ್ನು ಅನರ್ಹಗೊಳಿಸುವಂತೆ ನಾವು ನೋಟಿಸ್ ನೀಡಿದ್ದೇವೆ. ಬಾಳಾಸಾಹೇಬ್ ಠಾಕ್ರೆ ಅವರ ಮೇಲಿನ ಗೌರವದ ಕಾರಣದಿಂದ ನಾವು ಆದಿತ್ಯ ಠಾಕ್ರೆ ಹೆಸರನ್ನು ನೀಡಿಲ್ಲ ಎಂದು ಶಿಂಧೆ ಬಣದ ಶಾಸಕ ಭರತ್‌ ಗೊಗವಾಲೆ ತಿಳಿಸಿದ್ದಾರೆ.

    ಪಕ್ಷದ ಮೂರನೇ ಎರಡರಷ್ಟು ಶಾಸಕರ ಬೆಂಬಲದ ಆಧಾರದ ಮೇಲೆ ಶಿಂಧೆ ಬಣ ನಮ್ಮದು ನಿಜವಾದ ಶಿವಸೇನಾ ಎಂದು ಹೇಳಿಕೊಂಡಿದೆ. ಶಿವಸೇನಾದ 40 ಶಾಸಕರು ಬಂಡಾಯವೆದ್ದಿದ್ದ ಶಿಂಧೆ ಬಣವನ್ನು ಸೇರಿದ್ದಾರೆ. ಸೇನಾ ಬಂಡಾಯ ಶಾಸಕರೂ ಸೇರಿ ಶಿಂಧೆ ಬಣವನ್ನು ಒಟ್ಟು 55 ಶಾಸಕರು ಸೇರಿದ್ದರು. ಇದನ್ನೂ ಓದಿ: ಪಾಪುವಿನಂತೆ ರಾಹುಲ್ ಗಾಂಧಿಯನ್ನು ಮುದ್ದು ಮಾಡಿದ ಅಜ್ಜಿ

    ನಮ್ಮ ನಿಲುವು ಬಾಳಾಸಾಹೇಬ್ ಠಾಕ್ರೆಯವರ ಪರಂಪರೆಗೆ ಗೌರವ ಸಲ್ಲಿಸಿದೆ. ಉದ್ಧವ್ ಠಾಕ್ರೆ ಅವರು ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್‌ಸಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಪಕ್ಷವನ್ನು ದುರ್ಬಲಗೊಳಿಸಿದ್ದಾರೆ ಎಂದು ಶಿಂಧೆ ಬಣದವರು ವಾದಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೇಶದ್ರೋಹಿಗಳು ಎಂದಿಗೂ ಗೆಲ್ಲಲ್ಲ: ಆದಿತ್ಯ ಠಾಕ್ರೆ

    ದೇಶದ್ರೋಹಿಗಳು ಎಂದಿಗೂ ಗೆಲ್ಲಲ್ಲ: ಆದಿತ್ಯ ಠಾಕ್ರೆ

    ಮುಂಬೈ: ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ಶಿವಸೇನೆಯ ಬಂಡಾಯ ಶಾಸಕರಿಗೆ ಸರ್ಕಾರದಿಂದ ಏನು ತಪ್ಪಾಗಿದೆ ಎಂದು ನೇರವಾಗಿ ಉತ್ತರಿಸುವಂತೆ ಸವಾಲು ಎಸೆದಿದ್ದಾರೆ.

    ಆದಿತ್ಯ ಠಾಕ್ರೆ ತಂದೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಾಸಕರು ಬಂಡಾಯ ಎದ್ದಿರುವ ಹಿನ್ನೆಲೆಯಲ್ಲಿ ಆದಿತ್ಯ ಠಾಕ್ರೆ ಸವಾಲು ಎಸೆದಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆ ಸರ್ಕಾರ ಬಹುತೇಕ ಪತನ – ಸುಪ್ರೀಂ ಕೋರ್ಟ್‍ನಲ್ಲಿ ಬಹುಮತ ಕಳೆದುಕೊಂಡಿದೆ ಎಂದ ಬಂಡಾಯ ಶಾಸಕರು

    ಬಂಡಾಯ ಶಾಸಕರನ್ನು ಟೀಕಿಸಿದ ಆದಿತ್ಯ ಠಾಕ್ರೆ, ಅವರು ಬಂಡುಕೋರರಲ್ಲ, ದೇಶದ್ರೋಹಿಗಳು. ದೇಶ ದ್ರೋಹಿಗಳು ಎಂದಿಗೂ ಗೆಲ್ಲುವುದಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ: ಕಾರಜೋಳ

    ಮಹಾರಾಷ್ಟ್ರದ ರಾಜಕೀಯ ಹೈಡ್ರಾಮಾದ ನಡುವೆ ಬಂಡಾಯ ಶಾಸಕರು ಉಪಸಭಾಪತಿ ಹೊರಡಿಸಿದ್ದ ಅನರ್ಹತೆಯ ನೋಟಿಸ್‌ಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ, ಸಂಜಯ್ ರಾವತ್ ಸೇರಿದಂತೆ ಶಿವಸೇನೆಯ ಹಿರಿಯ ರಾಜಕಾರಣಿಗಳು ವಾಗ್ದಾಳಿ ನಡೆಸಿದ್ದಾರೆ

    Live Tv

  • ಸ್ಥಳಾಂತರವಾಗಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ಯಾವಾಗ್ಲೂ ತೆರೆದಿರುತ್ತದೆ: ಆದಿತ್ಯ ಠಾಕ್ರೆ

    ಸ್ಥಳಾಂತರವಾಗಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ಯಾವಾಗ್ಲೂ ತೆರೆದಿರುತ್ತದೆ: ಆದಿತ್ಯ ಠಾಕ್ರೆ

    ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಂದ ಕಾಶ್ಮೀರಿ ಪಂಡಿತರು ಆ ಸ್ಥಳವನ್ನೇ ತೊರೆಯುವ ಸ್ಥಿತಿ ಎದುರಾಗಿದೆ. ಈ ಕುರಿತು ಮಾತನಾಡಿದ ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ, ಅಲ್ಲಿಂದ ಸ್ಥಳಾಂತರಗೊಳ್ಳಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ತೆರೆದಿದೆ ಎಂದು ಹೇಳಿದರು.

    ನಾವು ಕಾಶ್ಮೀರಿ ಪಂಡಿತರನ್ನು ಬೆಂಬಲಿಸುತ್ತೇವೆ. ಅಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದೆ. ಇಂತಹ ಸಮಯದಲ್ಲಿ ಮತ್ತೆ ಪರಿಸ್ಥಿತಿ ಮರುಕಳಿಸುತ್ತಿರುವುದು ವಿಷಾದನೀಯ. ಅವರ ಸುರಕ್ಷತೆಗಾಗಿ ಭಾರತ ಸರ್ಕಾರ ಬಲವಾದ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ನಿರೀಕ್ಷಿಸುತ್ತೇವೆ. ಅವರಿಗಾಗಿ ನಮ್ಮ ಬಾಗಿಲು ಸದಾ ತೆರೆದಿರುತ್ತದೆ ಎಂದು ಹೇಳಿದರು. ಇದನ್ನೂ ಓದಿ: 20 ಮಂದಿಯ ರಾಜೀನಾಮೆಯ ಬೆನ್ನಲ್ಲೇ ನೂತನ ಸಚಿವ ಸಂಪುಟ ರಚನೆ- 13 ಮಂದಿ ಪ್ರಮಾಣವಚನ

    ಇತ್ತೀಚೆಗೆ ಕಾಶ್ಮೀರಿ ಪಂಡಿತರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಸರಣಿ ಹತ್ಯೆ ನಡೆಸುತ್ತಿದ್ದಾರೆ. ಶನಿವಾರ 177 ಕಾಶ್ಮೀರಿ ಪಂಡಿತ ಶಿಕ್ಷಕರನ್ನು ಶ್ರೀನಗರದಿಂದ ಇತರ ಪ್ರದೇಶಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್‍ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ

    ಗುರುವಾರ ಬ್ಯಾಂಕ್ ಮ್ಯಾನೇಜರ್ ಹಾಗೂ ಓರ್ವ ಇಟ್ಟಿಗೆ ಗೂಡು ಕಾರ್ಮಿಕನನ್ನು ಎರಡು ಪ್ರತ್ಯೇಕ ಘಟನೆಗಳಲ್ಲಿ ಹತ್ಯೆ ಮಾಡಲಾಗಿತ್ತು. ಮಂಗಳವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಶಾಲೆಯೊಂದರಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಶಿಕ್ಷಕಿ ಬಲಿಯಾಗಿದ್ದರು. ಮೇ 1 ರಿಂದ ಇಲ್ಲಿಯವರೆಗೆ ಕಾಶ್ಮೀರದಲ್ಲಿ ಉದ್ದೇಶಿತ ಹತ್ಯೆಗಳಿಂದ 9 ಜನ ಬಲಿಪಶುಗಳಾಗಿದ್ದಾರೆ.

  • ವಾಣಿಜ್ಯ ನಗರಿಯಲ್ಲಿ ಎಲೆಕ್ಟ್ರಿಕ್ ಐಕಾನಿಕ್ ಡಬಲ್ ಡೆಕ್ಕರ್ ಬಸ್‍ಗಳು ಸಂಚರಿಸಲಿವೆ: ಆದಿತ್ಯ ಠಾಕ್ರೆ

    ವಾಣಿಜ್ಯ ನಗರಿಯಲ್ಲಿ ಎಲೆಕ್ಟ್ರಿಕ್ ಐಕಾನಿಕ್ ಡಬಲ್ ಡೆಕ್ಕರ್ ಬಸ್‍ಗಳು ಸಂಚರಿಸಲಿವೆ: ಆದಿತ್ಯ ಠಾಕ್ರೆ

    ಮುಂಬೈ: ವಾಣಿಜ್ಯ ನಗರಿಯಲ್ಲಿ ಐಕಾನಿಕ್ ಡಬಲ್ ಡೆಕ್ಕರ್ ಬಸ್‍ಗಳು ಸಂಚರಿಸಲಿವೆ. ದಹನಕಾರಿ ಎಂಜಿನ್‍ಗಳ ಬದಲಿಗೆ ಎಲೆಕ್ಟ್ರಿಕ್ ಮೊಟಾರುಗಳು ಈ ಬಸ್‍ಗಳಿಗೆ ಶಕ್ತಿ ನೀಡುತ್ತವೆ. ಬೃಹತ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಕಂಪನಿಯು ಮುಂಬೈಗೆ 900 ಎಸಿ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್‍ಗಳನ್ನು ನೀಡಲಿದೆ ಎಂದು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ತಿಳಿಸಿದ್ದಾರೆ.

    ನಗರದಲ್ಲಿ ಐಕಾನಿಕ್ ಡಬಲ್ ಡೆಕ್ಕರ್ ಬಸ್‍ಗಳ ಸಂಚಾರವನ್ನು ಪ್ರಾರಂಭಿಸಲು ನಾನು ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವೈಯಕ್ತಿಕವಾಗಿ ಉತ್ಸುಕರಾಗಿದ್ದೇವೆ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ನೀಡಲಾಗುವ ಕೋವ್ಯಾಕ್ಸಿನ್‌ನ ಬೂಸ್ಟರ್ ಡೋಸ್ ಪ್ರಯೋಗಕ್ಕೆ ಒಪ್ಪಿಗೆ

    ಬೆಸ್ಟ್ ಕಂಪನಿಯ 900 ಎಲೆಕ್ಟ್ರಿಕ್ ಬಸ್‍ಗಳನ್ನು ರೋಡಿಗೆ ಇಳಿಸುವ ಯೋಜನೆಯಲ್ಲಿದ್ದೇವೆ. ನಗರವನ್ನು ಹೊಗೆ ರಹಿತ ಮಾಡುವ ಉದ್ದೇಶ ನಮ್ಮದಾಗಿದೆ. 10,000 ಎಲೆಕ್ಟ್ರಿಕ್/ಕ್ಲೀನ್ ಪರ್ಯಾಯ ಇಂಧನ ಬಸ್‍ಗಳನ್ನು ಹೆಚ್ಚಿಸುವುದು ಮತ್ತು ಗರಿಷ್ಠ ಡಬಲ್ ಡೆಕ್ಕರ್ ಬಸ್‍ಗಳನ್ನು ಹೊಂದುವುದು ನಮ್ಮ ಗುರಿಯಾಗಿದೆ. ಇದು ನಮ್ಮ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ ಎಂದರು. ಇದನ್ನೂ ಓದಿ: ಟಾಟಾ ಸಂಸ್ಥೆಗೆ ಏರ್‌ ಇಂಡಿಯಾ ಅಧಿಕೃತ ಹಸ್ತಾಂತರ

    ಬಿಡುವಿಲ್ಲದ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‍ಗಳು ಹೆಚ್ಚಾಗಿ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಇತರ ನಗರಗಳ ಮುನ್ಸಿಪಲ್ ಕಮಿಷನರ್‍ಗಳಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

  • ಆದಿತ್ಯಾ ಠಾಕ್ರೆಗೆ ಬೆದರಿಕೆ – ಬೆಂಗಳೂರು ವ್ಯಕ್ತಿ ಬಂಧನ

    ಆದಿತ್ಯಾ ಠಾಕ್ರೆಗೆ ಬೆದರಿಕೆ – ಬೆಂಗಳೂರು ವ್ಯಕ್ತಿ ಬಂಧನ

    ಮುಂಬೈ: ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಆದಿತ್ಯಾ ಠಾಕ್ರೆಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

    ಜೈ ಸಿಂಗ್ ರಜಪೂತ್ ಬಂಧಿತ ಆರೋಪಿ. ಡಿಸೆಂಬರ್ 18 ರಂದು ಆ ಆರೋಪಿಯನ್ನು ಬಂಧಿಸಿ ಮುಂಬೈಗೆ ಕರೆ ತಂದಿದ್ದೇವೆ ಎಂದು ಮುಂಬೈ ಅಪರಾಧ ವಿಭಾಗದ ಸೈಬರ್ ತಂಡ ತಿಳಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಓಮಿಕ್ರಾನ್‌ ಸ್ಫೋಟ – ಇಂದು ಒಂದೇ ದಿನ 12 ಪ್ರಕರಣ ದೃಢ

    ಮಹಾರಾಷ್ಟ್ರ ಕ್ಯಾಬಿನೆಟ್ ಮಂತ್ರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಡಿಸೆಂಬರ್ 23 ರಂದು ತಿಳಿಸಿದ್ದಾರೆ.

    ಆದಿತ್ಯಾ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಯವರ ಮಗನಾಗಿದ್ದು, ಆರೋಪಿಯು ಡಿಸೆಂಬರ್ 8 ರಂದು ಆದಿತ್ಯ ಠಾಕ್ರೆಗೆ ಕರೆ ಮಾಡಿದ್ದಾನೆ. ಆದರೆ ಆ ಕರೆಯನ್ನು ಅವರು ತೆಗೆದಿಲ್ಲ. ನಂತರದಲ್ಲಿ ಆರೋಪಿಯು ಸಚಿವರಿಗೆ ಬೆದರಿಕೆಯ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟಮಟ್ಟದ ಸ್ಕೇಟಿಂಗ್ – ಏಕಾಂಶ್ ಕುಮಾರ್‌ಗೆ 1 ಬೆಳ್ಳಿ, 1 ಕಂಚಿನ ಪದಕ

    ಸೈಬರ್ ಪೊಲೀಸ್ ತಂಡವು ತನಿಖೆ ನಡೆಸಿದಾಗ ಆರೋಪಿಯು ಬೆಂಗಳೂರಿನಿಂದ ಕರೆ ಮಾಡಿರುವುದು ಗೊತ್ತಾಗಿದೆ. ಈ ಆಧಾರದಲ್ಲಿ ಜಾಡು ಹಿಡಿದು ಬೆಂಗಳೂರಿನಲ್ಲಿ ಬಂಧಿಸಿದಾರೆ. ಆ ವ್ಯಕ್ತಿಯನ್ನು ಹುಡುಕಿಕೊಂಡು ಪೊಲೀಸರು ಬೆಂಗಳೂರಿಗೆ ಬಂದಿದ್ದಾರೆ ಎಂದರು.

    ಆರೋಪಿಯನ್ನು ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ. ವಿಚಾರಣೆಯ ಸಮಯದಲ್ಲಿ ಆರೋಪಿಯು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ರವರ ಅಭಿಮಾನಿಯಾಗಿರುವ ವಿಚಾರ ತಿಳಿದು ಬಂದಿದೆ.

  • ಆದಿತ್ಯ ಠಾಕ್ರೆ ಮುಂದಿನ ‘ಮಹಾ’ ಸಿಎಂ- ರಾರಾಜಿಸುತ್ತಿವೆ ಪೋಸ್ಟರ್

    ಆದಿತ್ಯ ಠಾಕ್ರೆ ಮುಂದಿನ ‘ಮಹಾ’ ಸಿಎಂ- ರಾರಾಜಿಸುತ್ತಿವೆ ಪೋಸ್ಟರ್

    ಮುಂಬೈ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸುದ್ದಾರೆ. ಅಷ್ಟೇ ಅಲ್ಲದೆ ಆದಿತ್ಯ ಠಾಕ್ರೆ ಮುಂದಿನ ಸಿಎಂ ಎಂಬ ಬ್ಯಾನರ್ ಗಳು ಮಹಾರಾಷ್ಟ್ರದಲ್ಲಿ ರಾರಾಜಿಸುತ್ತಿವೆ.

    ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಯು 161 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಈಗಾಗಲೇ ಅಧಿಕಾರದ ಚುಕ್ಕಾಣಿ ಹಿಡಿಯಲು ಕಸರತ್ತು ನಡೆದಿದ್ದು, 50:50 ಸೂತ್ರದ ಅಳವಡಿಕೆಗೆ ಶಿವಸೇನೆ ಬಿಗಿ ಪಟ್ಟು ಹಿಡಿದಿದೆ. ಈ ಮಧ್ಯೆ ಇದೇ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲವು ಸಾಧಿಸಿದ 29 ವರ್ಷದ ಆದಿತ್ಯ ಠಾಕ್ರೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿಬೇಕು ಎಂಬ ಕೂಗು ಕೇಳಿ ಬರುತ್ತಿದೆ.

    ಆದಿತ್ಯ ಠಾಕ್ರೆ ಸ್ಪರ್ಧಿಸಿದ್ದ ವರ್ಲಿ ಕ್ಷೇತ್ರದಲ್ಲಿ ಪೋಸ್ಟರ್ ಗಳು ರಾರಾಜಿಸುತ್ತಿದ್ದು, ಅದರಲ್ಲಿ ಶಿವಸೇನಾ ಸ್ಥಾಪಕ ಬಾಳ್ ಠಾಕ್ರೆ, ಅಧ್ಯಕ್ಷ ಉದ್ಧವ್ ಠಾಕ್ರೆ ಹಾಗೂ ಆದಿತ್ಯ ಠಾಕ್ರೆ ಫೋಟೋ ಹಾಕಲಾಗಿದೆ. ಜೊತೆಗೆ ಆದಿತ್ಯ ಠಾಕ್ರೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಎಂದು ಬರೆಯಲಾಗಿದೆ.

    ವರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶಿವಸೇನೆಯ ಎದುರಾಳಿ ಪಕ್ಷವಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸುರೇಶ್ ಮನೆ ವಿರುದ್ಧ ಆದಿತ್ಯ ಠಾಕ್ರೆ 67 ಸಾವಿರ ಮತಗಳಿಂದ ಜಯಗಳಿಸಿದ್ದಾರೆ. ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56, ಎನ್‍ಸಿಪಿ 54 ಹಾಗೂ ಕಾಂಗ್ರೆಸ್ 43 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

    ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಬಿಟ್ಟು ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತವಲ್ಲ. ಆದಿತ್ಯ ಠಾಕ್ರೆಗೆ ಮುಂದಿನ ದಿನಗಳಲ್ಲಿ ಅವಕಾಶ ನೀಡಬಹುದು. ಸದ್ಯ ಉದ್ಧವ್ ಠಾಕ್ರೆ ಅವರು ಸಿಎಂ ಸ್ಥಾನ ನಿರ್ವಹಿಸಬೇಕು ಎಂಬ ಮಾತುಗಳು ಪಕ್ಷದಲ್ಲಿ ಕೇಳಿ ಬರುತ್ತಿವೆ ಎನ್ನಲಾಗಿದೆ.