Tag: Aadujeevitham

  • ಮೂರು ದಿನಕ್ಕೆ 50 ಕೋಟಿ ರೂ. ಗಳಿಕೆ ಮಾಡಿದ ಆಡುಜೀವಿತಂ

    ಮೂರು ದಿನಕ್ಕೆ 50 ಕೋಟಿ ರೂ. ಗಳಿಕೆ ಮಾಡಿದ ಆಡುಜೀವಿತಂ

    ಗುರುವಾರವಷ್ಟೇ ಪೃಥ್ವಿರಾಜ್ ಸುಕುಮಾರನ್ ನಟನೆಯ ಆಡುಜೀವಿತಂ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿತ್ತು. ಸಿನಿಮಾ ರಿಲೀಸ್ ಆಗಿ ಮೂರೇ ಮೂರು ದಿನಕ್ಕೆ 50 ಕೋಟಿ ರೂಪಾಯಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಜೊತೆಗೆ ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಾಗುತ್ತಿದೆ.  ಈ ಸಿನಿಮಾ ನೋಡಿದ ಪ್ರೇಕ್ಷಕರು ಸೇರಿದಂತೆ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಸೌತ್‌ನ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ (Maniratnam) ಅವರು ‘ಆಡುಜೀವಿತಂ’ (Aadujeevitham) ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

    ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು ಆ ಪಾತ್ರವೇ ತಾವಾಗಿ ನಟಿಸುವ ಪ್ರತಿಭಾನ್ವಿತ ಕಲಾವಿದ. ಅದಕ್ಕೆ ತಾಜಾ ಉದಾಹರಣೆಯಾಗಿ ಆಡುಜೀವಿತಂ ಸಿನಿಮಾದಲ್ಲಿನ ಅವರ ನಟನೆಯೇ ಸಾಕ್ಷಿ. ಇದೀಗ ಅವರ ನಟನೆ, ಚಿತ್ರದ ಬಗ್ಗೆ ಮಣಿರತ್ನಂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸಿನಿಮಾಗೆ ಅಭಿನಂದನೆಗಳು, ನೀವು ಇದನ್ನು ಹೇಗೆ ನಿಭಾಯಿಸಿದ್ದೀರಿ ನನಗೆ ತಿಳಿದಿಲ್ಲ. ನಿಮ್ಮೆಲ್ಲರ ಶ್ರಮ ತೆರೆಯ ಮೇಲೆ ಕಾಣುತ್ತಿದೆ. ಸಿನಿಮಾವನ್ನು ಸುಂದರವಾಗಿ ಚಿತ್ರೀಸಲಾಗಿದೆ ಎಂದು ಮಣಿರತ್ನಂ ಸಿನಿಮಾವನ್ನು ಬಣ್ಣಿಸಿದ್ದಾರೆ.  ಬಳಿಕ ಮರುಭೂಮಿಯಲ್ಲಿ ಎದುರಿಸುವ ವಿವಿಧ ಕಷ್ಟಗಳನ್ನು ತೋರಿಸಿದ್ದೀರಿ. ನಿಮ್ಮ ಮತ್ತು ಸುನೀಲ್ ಕೆಲಸ ಅದ್ಭುತವಾಗಿದೆ ಎಂದು ಮಣಿರತ್ನಂ ತಂಡಕ್ಕೆ ಭೇಷ್ ಎಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಟನೆ ನೋಡಿ ಕೊಂಡಾಡಿದ್ದಾರೆ. ಇದು ನಿಜವಾಗಿಯೂ ಸಂಭವಿಸಿದೆ ಎಂದು ಯೋಚಿಸಲು ಭಯಾನಕವಾಗಿದೆ ಎಂದಿದ್ದಾರೆ. ಈ ಚಿತ್ರವು ಸೆಂಟಿಮೆಂಟಲ್ ಆಗಿ ಮೂಡಿ ಬಂದಿದೆ. ಚಿತ್ರದ ಫಿನಿಶಿಂಗ್ ತುಂಬಾ ಇಷ್ಟವಾಯಿತು. ಚಿತ್ರತಂಡಕ್ಕೆ ಶುಭವಾಗಲಿ ಎಂದು ಮಣಿರತ್ನಂ ತಿಳಿಸಿದ್ದಾರೆ.

    ಮಣಿರತ್ನಂ ಅವರ ಬೆಂಬಲಕ್ಕೆ ಆಡುಜೀವಿತಂ ನಿರ್ದೇಶಕ ಬ್ಲೆಸ್ಸಿ ಕೂಡ ಪ್ರತಿಕ್ರಿಯಿಸಿ, ಧನ್ಯವಾದಗಳು ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಬ್ಲೆಸ್ಸಿ ಶೇರ್‌ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ `ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು. ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

     

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ಪೃಥ್ವಿರಾಜ್ ಸುಕುಮಾರನ್ ನಟನೆಯನ್ನು ಕೊಂಡಾಡಿದ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ

    ಪೃಥ್ವಿರಾಜ್ ಸುಕುಮಾರನ್ ನಟನೆಯನ್ನು ಕೊಂಡಾಡಿದ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ

    ಪೃಥ್ವಿರಾಜ್ ಸುಕುಮಾರನ್, ಅಮಲಾ ಪೌಲ್ (Amala Paul) ನಟನೆಯ ‘ಆಡುಜೀವಿತಂ’ ಸಿನಿಮಾ ಮಾ.28ರಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಸೇರಿದಂತೆ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಸೌತ್‌ನ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ (Maniratnam) ಅವರು ‘ಆಡುಜೀವಿತಂ’ (Aadujeevitham) ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

    ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು ಆ ಪಾತ್ರವೇ ತಾವಾಗಿ ನಟಿಸುವ ಪ್ರತಿಭಾನ್ವಿತ ಕಲಾವಿದ. ಅದಕ್ಕೆ ತಾಜಾ ಉದಾಹರಣೆಯಾಗಿ ಆಡುಜೀವಿತಂ ಸಿನಿಮಾದಲ್ಲಿನ ಅವರ ನಟನೆಯೇ ಸಾಕ್ಷಿ. ಇದೀಗ ಅವರ ನಟನೆ, ಚಿತ್ರದ ಬಗ್ಗೆ ಮಣಿರತ್ನಂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸಿನಿಮಾಗೆ ಅಭಿನಂದನೆಗಳು, ನೀವು ಇದನ್ನು ಹೇಗೆ ನಿಭಾಯಿಸಿದ್ದೀರಿ ನನಗೆ ತಿಳಿದಿಲ್ಲ. ನಿಮ್ಮೆಲ್ಲರ ಶ್ರಮ ತೆರೆಯ ಮೇಲೆ ಕಾಣುತ್ತಿದೆ. ಸಿನಿಮಾವನ್ನು ಸುಂದರವಾಗಿ ಚಿತ್ರೀಸಲಾಗಿದೆ ಎಂದು ಮಣಿರತ್ನಂ ಸಿನಿಮಾವನ್ನು ಬಣ್ಣಿಸಿದ್ದಾರೆ.

    ಬಳಿಕ ಮರುಭೂಮಿಯಲ್ಲಿ ಎದುರಿಸುವ ವಿವಿಧ ಕಷ್ಟಗಳನ್ನು ತೋರಿಸಿದ್ದೀರಿ. ನಿಮ್ಮ ಮತ್ತು ಸುನೀಲ್ ಕೆಲಸ ಅದ್ಭುತವಾಗಿದೆ ಎಂದು ಮಣಿರತ್ನಂ ತಂಡಕ್ಕೆ ಭೇಷ್ ಎಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಟನೆ ನೋಡಿ ಕೊಂಡಾಡಿದ್ದಾರೆ. ಇದು ನಿಜವಾಗಿಯೂ ಸಂಭವಿಸಿದೆ ಎಂದು ಯೋಚಿಸಲು ಭಯಾನಕವಾಗಿದೆ ಎಂದಿದ್ದಾರೆ. ಈ ಚಿತ್ರವು ಸೆಂಟಿಮೆಂಟಲ್ ಆಗಿ ಮೂಡಿ ಬಂದಿದೆ. ಚಿತ್ರದ ಫಿನಿಶಿಂಗ್ ತುಂಬಾ ಇಷ್ಟವಾಯಿತು. ಚಿತ್ರತಂಡಕ್ಕೆ ಶುಭವಾಗಲಿ ಎಂದು ಮಣಿರತ್ನಂ ತಿಳಿಸಿದ್ದಾರೆ.

    ಮಣಿರತ್ನಂ ಅವರ ಬೆಂಬಲಕ್ಕೆ ಆಡುಜೀವಿತಂ ನಿರ್ದೇಶಕ ಬ್ಲೆಸ್ಸಿ ಕೂಡ ಪ್ರತಿಕ್ರಿಯಿಸಿ, ಧನ್ಯವಾದಗಳು ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಬ್ಲೆಸ್ಸಿ ಶೇರ್‌ ಮಾಡಿದ್ದಾರೆ.

     

    View this post on Instagram

     

    A post shared by Blessy (@blessyofficial)

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ `ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.

    ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ಚಿರಂಜೀವಿ ಚಿತ್ರದಲ್ಲಿ ಯಾಕೆ ನಟಿಸಲಿಲ್ಲ?: ಪೃಥ್ವಿರಾಜ್ ಪ್ರತಿಕ್ರಿಯೆ

    ಚಿರಂಜೀವಿ ಚಿತ್ರದಲ್ಲಿ ಯಾಕೆ ನಟಿಸಲಿಲ್ಲ?: ಪೃಥ್ವಿರಾಜ್ ಪ್ರತಿಕ್ರಿಯೆ

    ಅಂದುಕೊಂಡಂತೆ ಆಗಿದ್ದರೆ, ತೆಲುಗಿನ ಹೆಸರಾಂತ ನಟ ಚಿರಂಜೀವಿ (Chiranjeevi) ಅವರ ಎರಡು ಸಿನಿಮಾದಲ್ಲಿ ಪೃಥ್ವಿರಾಜ್ ಸುಕುಮಾರನ್ ನಟಿಸಬೇಕಿತ್ತು. ಆದರೆ, ಅವರು ನಟಿಸಲಿಲ್ಲ. ಅದಕ್ಕೆ ನಾನಾ ರೀತಿಯ ಅರ್ಥಗಳನ್ನು ಕಲ್ಪಿಸಲಾಗಿತ್ತು. ಇದೀಗ ಸ್ವತಃ ಪೃಥ್ವಿರಾಜ್  ಅವರೇ ಉತ್ತರ ಕೊಟ್ಟಿದ್ದಾರೆ. ತಾವು ಆ ಎರಡು ಸಿನಿಮಾಗಳಲ್ಲಿ ನಟಿಸದೇ ಇರುವ ಕಾರಣ ಆಡು ಜೀವತಂ ಸಿನಿಮಾ ಎಂದಿದ್ದಾರೆ. ನಟಿಸಲು ಅವಕಾಶ ಸಿಕ್ಕಾಗೆಲ್ಲ ಈ ಸಿನಿಮಾದಲ್ಲಿ ಅವರು ಬ್ಯುಸಿ ಇದ್ದೆ ಎಂದಿದ್ದಾರೆ.

    ಈ ನಡುವೆ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ (Prithviraj) ನಾಯಕರಾಗಿ ನಟಿಸಿರುವ  ಬಹು ನಿರೀಕ್ಷಿತ ‘ಆಡುಜೀವಿತಂ’(ಗೋಟ್ ಲೈಫ್) (Aadujeevitham) ಚಿತ್ರ ಇದೇ ಮಾರ್ಚ್ 28 ರಂದು ತೆರೆಗೆ ಬರಲಿದೆ. ಹೆಸರಾಂತ ಹೊಂಬಾಳೆ ಫಿಲಂಸ್ (Hombale Films) ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ಅವರು ಈ ಚಿತ್ರವನ್ನು  ಅರ್ಪಿಸಿ,ಬಿಡುಗಡೆ ಮಾಡುತ್ತಿದ್ದಾರೆ.

    ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರು ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಅವರು ಆತ್ಮೀಯ ಸ್ನೇಹಿತರು. ಹೊಂಬಾಳೆ ಫಿಲಂಸ್ ನ ಕೆ.ಜಿ.ಎಫ್, ಕಾಂತಾರದಂತಹ ಜನಪ್ರಿಯ ಚಿತ್ರಗಳನ್ನು ಕೇರಳದಲ್ಲಿ ಪೃಥ್ವಿರಾಜ್ ಸುಕುಮಾರನ್ ಅವರು ಬಿಡುಗಡೆ ಮಾಡಿದ್ದರು. ಈಗ ಪೃಥ್ವಿರಾಜ್ ಅವರ ನಟನೆಯ, ವಿಭಿನ್ನ ಕಥಾಹಂದರ ಹೊಂದಿರುವ “ಆಡುಜೀವಿತಂ” ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡುತ್ತಿದೆ. ಈ ಚಿತ್ರದ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

    ನನಗೆ ವಿಜಯ್ ಕಿರಗಂದೂರ್ ಅವರು ಆತ್ಮೀಯ ಸ್ನೇಹಿತರು ಎಂದು ಮಾತು ಆರಂಭಿಸಿದ ನಟ ಪೃಥ್ವಿರಾಜ್, ನಮ್ಮ ಆಡುಜೀವಿತಂ ಚಿತ್ರವನ್ನು  ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ, ಕೆಜಿಎಫ್, ಕಾಂತಾರ ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ತುಂಬಾ ಸಂತೋಷವಾಗಿದೆ. ಇನ್ನು ಬ್ಲೆಸ್ಸಿ ಅವರು ಗೋಟ್ ಲೈಫ್ ಚಿತ್ರ ಮಾಡಬೇಕೆಂದುಕೊಂಡಿದ್ದು 2008 ರಲ್ಲಿ. ಚಿತ್ರೀಕರಣ ಆರಂಭವಾಗಿದ್ದು 2018 ರಲ್ಲಿ. ಈ ಚಿತ್ರಕ್ಕಾಗಿ ಹದಿನಾರು ವರ್ಷಗಳ ಪರಿಶ್ರಮವಿದೆ. ನಾನು ಈ ಚಿತ್ರಕ್ಕಾಗಿ 31 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಇದು ಬೆನ್ಯಾಮಿನ್ ಅವರು ಬರೆದಿರುವ “ಆಡುಜೀವಿತಂ” ಕಾದಂಬರಿ ಆಧಾರಿತ ಚಿತ್ರ. ಈ ಜನಪ್ರಿಯ ಕಾದಂಬರಿ ಈವರೆಗೂ 251 ಬಾರಿ ಮುದ್ರಣವಾಗಿದೆ. ನಜೀಬ್ ಎಂಬುವವರ ಜೀವನದ ನೈಜ ಕಥೆ ಆಧರಿಸಿದೆ. ಅಮಲಾ ಪೌಲ್, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಸಂಗೀತ ನೀಡಿದ್ದಾರೆ ಎಂದರು.

     

    ಚಿತ್ರ ಮಾರ್ಚ್ 28 ರಂದು ಮಲಯಾಳಂ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ಎಲ್ಲರೂ ನೋಡಿ ಎಂದರು ನಿರ್ದೇಶಕ ಬ್ಲೆಸ್ಸಿ. ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಸಹ ಈ ಚಿತ್ರದಲ್ಲಿ ನಟಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

  • ಹೊಂಬಾಳೆ ಫಿಲ್ಮ್ಸ್ ತೆಕ್ಕೆಗೆ ಆಡುಜೀವಿತಂ

    ಹೊಂಬಾಳೆ ಫಿಲ್ಮ್ಸ್ ತೆಕ್ಕೆಗೆ ಆಡುಜೀವಿತಂ

    ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ (Prithviraj) ನಾಯಕರಾಗಿ ನಟಿಸಿರುವ  ಬಹು ನಿರೀಕ್ಷಿತ ‘ಆಡುಜೀವಿತಂ’(ಗೋಟ್ ಲೈಫ್) (Aadujeevitham) ಚಿತ್ರ ಇದೇ ಮಾರ್ಚ್ 28 ರಂದು ತೆರೆಗೆ ಬರಲಿದೆ. ಹೆಸರಾಂತ ಹೊಂಬಾಳೆ ಫಿಲಂಸ್ (Hombale Films) ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ಅವರು ಈ ಚಿತ್ರವನ್ನು  ಅರ್ಪಿಸಿ,ಬಿಡುಗಡೆ ಮಾಡುತ್ತಿದ್ದಾರೆ.

    ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರು ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಅವರು ಆತ್ಮೀಯ ಸ್ನೇಹಿತರು. ಹೊಂಬಾಳೆ ಫಿಲಂಸ್ ನ ಕೆ.ಜಿ.ಎಫ್, ಕಾಂತಾರದಂತಹ ಜನಪ್ರಿಯ ಚಿತ್ರಗಳನ್ನು ಕೇರಳದಲ್ಲಿ ಪೃಥ್ವಿರಾಜ್ ಸುಕುಮಾರನ್ ಅವರು ಬಿಡುಗಡೆ ಮಾಡಿದ್ದರು. ಈಗ ಪೃಥ್ವಿರಾಜ್ ಅವರ ನಟನೆಯ, ವಿಭಿನ್ನ ಕಥಾಹಂದರ ಹೊಂದಿರುವ “ಆಡುಜೀವಿತಂ” ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡುತ್ತಿದೆ. ಈ ಚಿತ್ರದ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

    ನನಗೆ ವಿಜಯ್ ಕಿರಗಂದೂರ್ ಅವರು ಆತ್ಮೀಯ ಸ್ನೇಹಿತರು ಎಂದು ಮಾತು ಆರಂಭಿಸಿದ ನಟ ಪೃಥ್ವಿರಾಜ್, ನಮ್ಮ ಆಡುಜೀವಿತಂ ಚಿತ್ರವನ್ನು  ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ, ಕೆಜಿಎಫ್, ಕಾಂತಾರ ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ತುಂಬಾ ಸಂತೋಷವಾಗಿದೆ. ಇನ್ನು ಬ್ಲೆಸ್ಸಿ ಅವರು ಗೋಟ್ ಲೈಫ್ ಚಿತ್ರ ಮಾಡಬೇಕೆಂದುಕೊಂಡಿದ್ದು 2008 ರಲ್ಲಿ. ಚಿತ್ರೀಕರಣ ಆರಂಭವಾಗಿದ್ದು 2018 ರಲ್ಲಿ. ಈ ಚಿತ್ರಕ್ಕಾಗಿ ಹದಿನಾರು ವರ್ಷಗಳ ಪರಿಶ್ರಮವಿದೆ. ನಾನು ಈ ಚಿತ್ರಕ್ಕಾಗಿ 31 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಇದು ಬೆನ್ಯಾಮಿನ್ ಅವರು ಬರೆದಿರುವ “ಆಡುಜೀವಿತಂ” ಕಾದಂಬರಿ ಆಧಾರಿತ ಚಿತ್ರ. ಈ ಜನಪ್ರಿಯ ಕಾದಂಬರಿ ಈವರೆಗೂ 251 ಬಾರಿ ಮುದ್ರಣವಾಗಿದೆ. ನಜೀಬ್ ಎಂಬುವವರ ಜೀವನದ ನೈಜ ಕಥೆ ಆಧರಿಸಿದೆ. ಅಮಲಾ ಪೌಲ್, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಸಂಗೀತ ನೀಡಿದ್ದಾರೆ ಎಂದರು.

    ಚಿತ್ರ ಮಾರ್ಚ್ 28 ರಂದು ಮಲಯಾಳಂ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ಎಲ್ಲರೂ ನೋಡಿ ಎಂದರು ನಿರ್ದೇಶಕ ಬ್ಲೆಸ್ಸಿ. ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಸಹ ಈ ಚಿತ್ರದಲ್ಲಿ ನಟಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

  • ‘ಆಡು ಜೀವತಂ’ ಸಿನಿಮಾ ನನ್ನ ಕನಸಾಗಿತ್ತು: ಪೃಥ್ವಿರಾಜ್ ಸುಕುಮಾರನ್

    ‘ಆಡು ಜೀವತಂ’ ಸಿನಿಮಾ ನನ್ನ ಕನಸಾಗಿತ್ತು: ಪೃಥ್ವಿರಾಜ್ ಸುಕುಮಾರನ್

    ‘ಆಡು ಜೀವಿತಂʼ (Aadujeevitham Movie) ಸದ್ಯ ದೇಶದ ಸಿನಿ ರಸಿಕರ ಗಮನ ಸೆಳೆದ ಮಲಯಾಳಂ ಚಿತ್ರ. ಮಾಲಿವುಡ್‌ ಸೂಪರ್‌ ಸ್ಟಾರ್‌, ʼಸಲಾರ್‌ʼ ಚಿತ್ರದ ಮೂಲಕ ಮಿಂಚಿದ ಪೃಥ್ವಿರಾಜ್‌ ಸುಕುಮಾರನ್ (Prithviraj Sukumaran) ಅಭಿನಯದ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅಕಾಡೆಮಿ ಪ್ರಶಸ್ತಿ ವಿಜೇತ ಎ.ಆರ್.ರೆಹಮಾನ್ (A.R.Rahman) ಈ ಸಿನಿಮಾಕ್ಕೆ ಸಂಗೀತ ನೀಡಿರುವುದು ವಿಶೇಷ.

    ಈ ಚಲನಚಿತ್ರವು ಮಲಯಾಳಂ ಸಾಹಿತ್ಯ ಪ್ರಪಂಚದಲ್ಲಿ ಅತ್ಯಂತ ಜನಪ್ರಿಯವಾದ, ಬೆಸ್ಟ್ ಸೆಲ್ಲರ್‌ಗಳಲ್ಲಿ ಒಂದಾದ ‘ಆಡು ಜೀವಿತಂ’ ಕಾದಂಬರಿಯನ್ನು ಆಧರಿಸಿದೆ. ಹೆಸರಾಂತ ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಥೆ 90ರ ದಶಕದ ಆರಂಭದಲ್ಲಿ ಕೇರಳದ ಹಚ್ಚ ಹಸಿರಿನ ತೀರದಿಂದ ಅದೃಷ್ಟವನ್ನು ಹುಡುಕುತ್ತಾ ವಿದೇಶಕ್ಕೆ ವಲಸೆ ಹೋದ ಯುವಕ ನಜೀಬ್‌ನ ಜೀವನದ ಮೇಲೆ ಬೆಳಕು ಚೆಲ್ಲುತ್ತದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ  ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಈಗಾಗಲೇ ಬಿಡುಗಡೆಯಾದ ಪೋಸ್ಟರ್‌, ಟೀಸರ್‌ ಕುತೂಹಲ ಮೂಡಿಸಿದೆ.

    ವಿಷುಯಲ್ ರೊಮ್ಯಾನ್ಸ್ ನಿರ್ಮಿಸಿದ ಈ ಚಿತ್ರದಲ್ಲಿ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಹೆಸರಾಂತ ಅರಬ್ ನಟರಾದ ತಾಲಿಬ್ ಅಲ್ ಬಲುಶಿ ಮತ್ತು ರಿಕಾಬಿ ಪ್ರಮುಖ ಪಾತ್ರಗಳಲ್ಲಿದ್ದಾರೆ.  ಈ ಚಿತ್ರ ಮಲಯಾಳಂ ಜತೆಗೆ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಇದೇ ತಿಂಗಳ28ರಂದು ದೇಶಾದ್ಯಂತ  ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಿ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನ ವಿಜಯ್ ಕಿರಂಗದೂರು ರಿಲೀಸ್ ಮಾಡುತ್ತಿದ್ದಾರೆ. ಆಡು ಜೀವಿತಂ ಚಿತ್ರದ ಪ್ರಚಾರಕ್ಕಾಗಿ‌ ಬೆಂಗಳೂರಿಗೆ ಆಗಮಿಸಿದ  ನಾಯಕನಟ ಪೃಥ್ವಿರಾಜ್‌ ಸುಕುಮಾರನ್ ಹಾಗೂ ನಿರ್ದೇಶಕ ಬ್ಲೆಸ್ಸಿ ಹಾಗು ನಟ ಜಿಮ್ಮಿ ಜೀನ್ ಲೂಯಿಸ್‌ ಭಾನುವಾರ ಸಂಜೆ ಮಾಧ್ಯಮಗಳ ಮುಂದೆ ಹಾಜರಾಗಿ ಗೋಟ್ ಲೈಫ್ ಚಿತ್ರದ ಕುರಿತಂತೆ ಒಂದಷ್ಟು ‌ಮಾಹಿತಿಗಳನ್ನು ಹಂಚಿಕೊಂಡರು.

    2018ರಲ್ಲಿ ಈ ಚಿತ್ರದ ಶೂಟಿಂಗ್ ಶುರುವಾಗಿದ್ದು ನಂತರ ಕೋವಿಡ್ ಸೇರಿ ಅನೇಕ ಕಾರಣದಿಂದ ಚಿತ್ರ ತಡವಾಗಿದೆ. ಗ್ರೇಟೆಸ್ಟ್ ಸರ್ವೈವಲ್  ಅಡ್ವೆಂಚರ್‌ ಸಿನಿಮಾ ಇದಾಗಿದ್ದೂ ಒಂದು ಇನ್ ಸ್ಪಿರೇಷನ್ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಾಯಕ ನಟ ಪೃಥ್ವಿ ರಾಜ್ ಸುಕುಮಾರನ್  ನಜೀಬ್ ಮೊಹಮ್ಮದ್ ಅವರ ನೈಜ ಕಥೆಯನ್ನು ಈ ಚಿತ್ರದಲ್ಲಿ ಈ ಚಿತ್ರದ ಮೂಲಕ ತೆರೆಯಮೇಲೆ ತಂದಿದ್ದೇವೆ. ಇದು 16 ವರ್ಷಗಳ ಸುದೀರ್ಘ/ಪಯಣ ಈ ಮೊದಲು ಬೆನ್ನಿಮನ್ ಅವರು ನಜೀಮ್ ಕಥೆಯನ್ನು ಪುಸ್ತಕ ರೂಪದಲ್ಲಿ ತಂದರು, ಆ ಪುಸ್ತಕ ಮಾರಾಟ ದಾಖಲೆಯನ್ನೆ ಬರೆಯಿತು. ನಂತರ ಅದನ್ನೇ ಇಟ್ಟುಕೊಂಡು ಗೋಟ್ ಲೈಫ್ ಚಿತ್ರ ಮಾಡಿದ್ದೇವೆ. ಕೋವಿಡ್ ಸಮಯದಲ್ಲಿ ಸ್ವಲ್ಪ ಬ್ರೇಕ್ ಆಯ್ತು, ಈ ಚಿತ್ರ ಪಾತ್ರಕ್ಕಾಗಿ ನಾನು 31 ಕೆಜಿ ತೂಕ ಕಳೆದಿಕೊಂಡಿದ್ದೆ. ಒಂದುವರೆಯಿಂದ  ಎರಡು ವರ್ಷ ಶೂಟಿಂಗ್ ಸ್ಟಾಪ್ ಆಗಿದ್ದು ವೇಟ್ ಲಾಸ್ ಮಾಡಿಕೊಳ್ಳಲು ಸಮಯ ಸಿಕ್ಕಿತು ಎಂದು ಹೇಳಿದರು.

    ನಂತರ  ಚಿತ್ರದ ನಿರ್ದೇಶಕ ಬ್ಲೆಸ್ಸಿ ಮಾತಾನಾಡಿ ಈ ಸಿನಿಮಾ 16 ವರ್ಷಗಳ ಕನಸು. ಇದೊಂದು ನೈಜಕಥೆಯಾಗಿದ್ದು‌ ಫಿಷರ್‌ ಮ್ಯಾನ್ ನಜೀಬ್ ನ ಕಥೆಯಾಗಿದೆ. ಇದೇ 28ಕ್ಕೆ ಬಿಡುಗಡೆಯಾಗಿತ್ತಿದೆ ಅಂತ ಹೇಳಿದರು.

  • ‘ಆಡು ಜೀವಿತಂ’ ಟ್ರೈಲರ್ ನೋಡಿ ಪೃಥ್ವಿರಾಜ್‌ರನ್ನು ಹಾಡಿ ಹೊಗಳಿದ ಪ್ರಭಾಸ್

    ‘ಆಡು ಜೀವಿತಂ’ ಟ್ರೈಲರ್ ನೋಡಿ ಪೃಥ್ವಿರಾಜ್‌ರನ್ನು ಹಾಡಿ ಹೊಗಳಿದ ಪ್ರಭಾಸ್

    ಹುಮುಖ ಪ್ರತಿಭೆ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ‘ಸಲಾರ್’ (Salaar) ಸಿನಿಮಾದ ಸಕ್ಸಸ್ ನಂತರ ‘ಆಡು ಜೀವಿತಂ’ (Aadujeevitham) ಚಿತ್ರದ ಟ್ರೈಲರ್ ಮೂಲಕ ಸದ್ದು ಮಾಡ್ತಿದ್ದಾರೆ. ಟ್ರೈಲರ್‌ನಲ್ಲಿ ಪೃಥ್ವಿರಾಜ್ ಬೆಚ್ಚಿ ಬೀಳಿಸುವ ಅವತಾರ ಮತ್ತು ಅವರ ನಟನೆ ನೋಡಿ ಪ್ರಭಾಸ್ (Prabhas) ಭೇಷ್ ಎಂದಿದ್ದಾರೆ. ಇದನ್ನೂ ಓದಿ:‘ಗೂಗ್ಲಿ’ ನಟಿ ಕೃತಿ ಕರಬಂಧ ಮದುವೆ ಯಾವಾಗ, ಎಲ್ಲಿ?

    ‘ಆಡು ಜೀವಿತಂ’ ಇದೇ ಮಾರ್ಚ್ 28ಕ್ಕೆ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಪೃಥ್ವಿರಾಜ್- ಅಮಲಾ ಪೌಲ್ (Amala Paul) ನಟಿಸಿರುವ ಈ ಚಿತ್ರದಲ್ಲಿ ಈ ಹಿಂದೆ ಎಂದೂ ಕಾಣಿಸಿಕೊಂಡಿರದ ಶೇಡ್‌ನಲ್ಲಿ ಪೃಥ್ವಿರಾಜ್ ನಟಿಸಿದ್ದಾರೆ. ಅವರ ಲುಕ್ ಭಯಂಕರವಾಗಿದೆ. ಸಲಾರ್ ನಟನ ನಯಾ ಲುಕ್ ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

    ಇನ್ನೂ ಟ್ರೈಲರ್‌ನಲ್ಲಿ ಪೃಥ್ವಿರಾಜ್ ಅಲಿಯಾಸ್ ‘ಸಲಾರ್’ ಚಿತ್ರದ ವರದರಾಜ್ ಮನ್ನಾರ್ ಅವರ ಈ ಗೆಟಪ್ ಕಂಡು ಪ್ರಭಾಸ್ ಶಾಕ್ ಆಗಿದ್ದಾರೆ. ವರದರಾಜ ಮನ್ನಾರ್ ಪಾತ್ರ ಮಾಡಿದ್ದು, ಇದೇ ವ್ಯಕ್ತಿನಾ ಅಂತ ನಂಬಲಾಗುತ್ತಿಲ್ಲ ಎಂದಿದ್ದಾರೆ. ಪೃಥ್ವಿರಾಜ್ ಅವರಿಗೆ ಮನಪೂರ್ವಕವಾಗಿ ಶುಭಾಶಯವನ್ನೂ ಕೋರಿದ್ದಾರೆಕ್ಸಿನಿಮಾ ಬ್ಲ್ಯಾಕ್ ಬಸ್ಟರ್ ಗ್ಯಾರಂಟಿ ಎಂದು ಪ್ರಭಾಸ್ ಭವಿಷ್ಯ ನುಡಿದಿದ್ದಾರೆ.

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ `ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

     

    View this post on Instagram

     

    A post shared by Amala Paul (@amalapaul)

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ ‘ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.

    ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.