Tag: aadyaveer

  • ಅಪ್ಪನ ತೊಡೆ ಮೇಲೆ ಯುವರಾಜ – ವರ್ಧಂತಿಗೆ ಯದುವೀರ್ ವಿಶ್

    ಅಪ್ಪನ ತೊಡೆ ಮೇಲೆ ಯುವರಾಜ – ವರ್ಧಂತಿಗೆ ಯದುವೀರ್ ವಿಶ್

    ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತನ್ನ ಮಗ ಯುವರಾಜ ಆಧ್ಯವೀರ್ ಗೆ ವರ್ಧಂತಿಯ(ಹುಟ್ಟುಹಬ್ಬ) ಶುಭಾಶಯವನ್ನು ಕೋರಿದ್ದಾರೆ.

    ಯದುವೀರ್ ಅವರು ಫೇಸ್‍ಬುಕ್ ನಲ್ಲಿ ಮಗ ತೊಡೆಯ ಮೇಲೆ ಕುಳಿತಿರುವ ಫೋಟೋ ಹಾಕಿ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. ಫೋಟೋದಲ್ಲಿ  ಆಧ್ಯವೀರ್ ತುಂಟತನದಿಂದ ಕ್ಯಾಮೆರಾಗೆ ಪೋಸ್ ಕೊಟ್ಟಿರುವ ರೀತಿಯಲ್ಲಿ ಕಂಡು ಬಂದಿದೆ.

    ಅರಮನೆಯ ಸಂಪ್ರದಾಯದ ಪ್ರಕಾರ ಹುಟ್ಟುಹಬ್ಬವನ್ನು ಆಧ್ಯವೀರ್ ಹುಟ್ಟಿದ ಸ್ವಲ್ಪ ದಿನಗಳ ನಂತರ ಆಚರಿಸಲಾಗುತ್ತದೆ. ಅದರಂತೆಯೇ ವರ್ಧಂತಿಯು ಡಿಸೆಂಬರ್ 26 ರಂದು ಇದ್ದರೂ ಇಂದು ಆಚರಿಸಿದ್ದಾರೆ. ಈ ಬಗ್ಗೆ ಯದುವೀರ್ ಅವರು ಫೇಸ್‍ಬುಕ್ ನಲ್ಲಿ ತಿಳಿಸಿದ್ದಾರೆ.

    ಪೋಸ್ಟ್:
    “ಯುವರಾಜ ಶ್ರೀ ಆಧ್ಯವೀರ್ ನರಸಿಂಹರಾಜ ಒಡೆಯರ್ ಅವರ ವರ್ಧಂತಿಯಂದು ಅವರಿಗೆ ಶುಭ ಕೋರುತ್ತೇವೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಅವರಿಗೆ ಉತ್ತಮ ಆರೋಗ್ಯ ಹಾಗು ಐಶ್ವರ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ. ಯುವರಾಜರ ವರ್ಧಂತಿಯು 26 ಡಿಸೆಂಬರ್ 2018 ರಂದು ಇದ್ದರೂ, ಮೈಸೂರು ಅರಮನೆಯ ಸಂಪ್ರದಾಯದ ಪ್ರಕಾರ ಮೊದಲನೆಯ ವರ್ಧಂತಿಯನ್ನು ಹೆಚ್ಚಿಸುವ ಪದ್ಧತಿ ಇರುವುದರಿಂದ, ಅವರ ವರ್ಧಂತಿಯನ್ನು ಇಂದು ಆಚರಿಸಲಾಗುತ್ತಿದೆ” ಎಂದು ಬರೆದು ಮಗನ ಜೊತೆಯಿರುವ ಫೋಟೋ ಹಾಕಿ ಪೋಸ್ಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪುತ್ರನ ಜೊತೆಗಿದ್ದ ಪತ್ನಿಯ ಫೋಟೋ ಹಾಕಿ ವರ್ಧಂತಿಯ ಶುಭ ಕೋರಿದ್ರು ಯದುವೀರ್

    ಪುತ್ರನ ಜೊತೆಗಿದ್ದ ಪತ್ನಿಯ ಫೋಟೋ ಹಾಕಿ ವರ್ಧಂತಿಯ ಶುಭ ಕೋರಿದ್ರು ಯದುವೀರ್

    ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಕಾ ಮತ್ತು ಮಗ ಆದ್ಯವೀರ್ ನ ಮುದ್ದಾದ ಫೋಟೋ ಹಾಕಿ ಶುಭಾಶಯ ಕೋರಿದ್ದಾರೆ.

    ಪ್ರುತನ ಜೊತೆ ಪತ್ನಿ ತ್ರಿಶಿಕಾ ಕುಮಾರಿ ಇರುವ ಫೋಟೋವನ್ನು ಪೋಸ್ಟ್ ಮಾಡಿ ಅವರಿಗೆ ವರ್ಧಂತಿಯ ಶುಭಾಶಯವನ್ನು ಯದುವೀರ್ ಕೋರಿದ್ದಾರೆ. ಪತ್ನಿ ಮತ್ತು ಆದ್ಯವೀರ್ ಮಾತ್ರವಲ್ಲದೇ ಫೋಟೋದಲ್ಲಿ ಆನೆ ಅರ್ಜುನ ಕೂಡ ಇದ್ದಾನೆ.

    ಯದುವೀರ್ ಅವರು, “ನನ್ನ ಧರ್ಮಪತ್ನಿಯಾದ, ಸನ್ನಿಧಾನ ಸವಾರಿಯವರು ಮಹಾರಾಣಿ ಶ್ರೀಮತಿ ತ್ರಿಶಿಕಾ ಕುಮಾರಿ ಒಡೆಯರ್ ಅವರ ವರ್ಧಂತಿಯಂದು ಶುಭ ಕೋರುತ್ತೇನೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಅವರಿಗೆ ಸಮಸ್ತ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ” ಅಂತ ಬರೆದುಕೊಂಡಿದ್ದಾರೆ.

    ಅರ್ಜುನ ಆನೆಯ ಮುಂದೆ ತ್ರಿಶಿಕಾ ಅವರು ಅವರು ಮಗ ಆದ್ಯವೀರ್ ಜೊತೆ ಇದ್ದ ಸಂತಸದ ಕ್ಷಣದಲ್ಲಿ ಈ ಫೋಟೋವನ್ನು ಸೆರೆ ಹಿಡಿಯಲಾಗಿದೆ. ಈ ಫೋಟೋದಲ್ಲಿ ಆದ್ಯವೀರ್ ಮುದ್ದಾಗಿ ನಗುತ್ತಿರುವುದು ಸೆರೆಯಾಗಿದೆ. ಇವರಿಬ್ಬರ ನಗುವನ್ನು ಆನೆ ಅರ್ಜುನ ಕೂಡ ನೋಡುತ್ತಾ ನಿಂತಿರುವ ರೀತಿ ಕಾಣುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೊದಲ ದಸರಾಗೆ ಸಜ್ಜಾದ ಆದ್ಯವೀರ್ – ಈಗ ಅರಮನೆ ಒಡೆಯರ್ ಹೀಗಿದ್ದಾರೆ

    ಮೊದಲ ದಸರಾಗೆ ಸಜ್ಜಾದ ಆದ್ಯವೀರ್ – ಈಗ ಅರಮನೆ ಒಡೆಯರ್ ಹೀಗಿದ್ದಾರೆ

    ಮೈಸೂರು: ಐತಿಹಾಸಿಕ ಹಬ್ಬ ದಸರಾಗೆ ನಾಡಿನ ಜನತೆ ಸಿದ್ಧರಾಗುತ್ತಿದ್ದಾರೆ. ಇತ್ತ ಗಜಪಡೆಗಳು ಕೂಡ ಸಜ್ಜಾಗುತ್ತಿದ್ದು, ಯದುವಂಶದ ಆದ್ಯವೀರ್ ನರಸಿಂಹರಾಜ ಒಡೆಯರ್ ಕೂಡ ತನ್ನ ಮೊದಲ ದಸರಾ ಹಬ್ಬಕ್ಕೆ ತಯಾರಾಗುತ್ತಿದ್ದಾರೆ.

    ಆದ್ಯವೀರ್ ಡಿಸೆಂಬರ್ 6 2017ರಲ್ಲಿ ಜನಿಸಿದ್ದರು. ಆದ್ದರಿಂದ ಆದ್ಯವೀರ್ ಗೆ ಇದೇ ಮೊದಲ ದಸರವಾಗಿದೆ. ಈ ಬಾರಿಯ ದಸರಾ ವಿಶೇಷವಾಗಿದೆ. ಆದ್ದರಿಂದ ಮೈಸೂರಿನ ಸಂಸ್ಥಾನದ ಯದುವಂಶಕ್ಕೆ ಸುಮಾರು 6 ದಶಕಗಳಿಂದ ಸಂತಾನ ಇರಲಿಲ್ಲ. ಆದರೆ ಕಳೆದ ವರ್ಷ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಗೆ ಆದ್ಯವೀರ್ ಜನಿಸುವ ಮೂಲಕ ರಾಜಮನೆತನಕ್ಕೆ ಸಂತಾನ ಪ್ರಾಪ್ತಿಯಾಗಿತ್ತು. ಈ ಸಂತಸವನ್ನು ಇಡೀ ನಾಡಿನ ಜನತೆಯೂ ಸಂಭ್ರಮಿಸಿತ್ತು.

    ಆದ್ಯವೀರ್ ಜನಿಸಿ ಸುಮಾರು ಒಂಭತ್ತು ತಿಂಗಳಾಗಿದೆ. ಇದುವರೆಗೂ ಅವರ ಫೋಟೋ ಎಲ್ಲಿಯೂ ಲಭ್ಯವಾಗಿರಲಿಲ್ಲ. ಆದರೆ ಈಗ ಅವರು ಹೇಗಿದ್ದಾರೆ ಎಂಬುದನ್ನು ಈ ಫೋಟೋ ಮೂಲಕ ತಿಳಿಯಬಹುದು. ಆದ್ಯವೀರ್ ಅವರು ತಮ್ಮ ತಾಯಿ ತ್ರಿಷಿಕಾ ಅವರ ಆರೈಕೆಯಲ್ಲಿದ್ದಾರೆ.

    ಈಗಾಗಲೇ ದಸರಾಗೆ ಅರ್ಜುನ ಮತ್ತು ತಂಡ ಅರಮನೆಗೆ ಬಂದಿದ್ದು, ಅವುಗಳಿಗೆ ಪೌಷ್ಠಿಕ ಆಹಾರ ನೀಡುವ ಮೂಲಕ ಆರೈಕೆ ಮಾಡಲಾಗುತ್ತಿದೆ. ಪ್ರತಿದಿನ ಆನೆಗಳಿಗೆ ರಸ್ತೆಗಳಲ್ಲಿ ತಾಲೀಮು ನಡೆಯುತ್ತಿದೆ. ತೂಕವನ್ನು ಕೂಡ ಅಳತೆ ಮಾಡಲಾಗಿದೆ. ಇತ್ತೀಚೆಗಷ್ಟೆ ಅರ್ಜುನ ಮತ್ತು ತಂಡದ ಆನೆಗಳು ಅರಮನೆ ಮುಂದೆ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದವು. ನಾಡಿನ ಹಬ್ಬವಾದ ದಸರಾಗೆ ಸಕಲ ಸಿದ್ಧತೆ ಕೂಡ ನಡೆಯುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv