Tag: Aam Admi

  • ಭ್ರಷ್ಟ ತಿಮಿಂಗಿಲಗಳನ್ನು ರಕ್ಷಿಸಲೆಂದೇ ಸಿಐಡಿ ಗಾಳ: ಭಾಸ್ಕರ್ ರಾವ್

    ಭ್ರಷ್ಟ ತಿಮಿಂಗಿಲಗಳನ್ನು ರಕ್ಷಿಸಲೆಂದೇ ಸಿಐಡಿ ಗಾಳ: ಭಾಸ್ಕರ್ ರಾವ್

    ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿರುವುದರ ಹಿಂದೆ ಸತ್ಯ ಹೊರಬರುವುದನ್ನು ತಡೆಯುವ ಹುನ್ನಾರವಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು.

    ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರೇ ಆರೋಪಿಗಳಾಗಿರುವ ಹಗರಣವನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಐಡಿಯಿಂದಲೇ ತನಿಖೆ ಮಾಡಿಸುವುದು ಹಾಸ್ಯಾಸ್ಪದ. ಈ ತನಿಖೆಗೆ ಯಾವ ಬೆಲೆಯೂ ಇಲ್ಲ. ಅನುಮಾನಾಸ್ಪದ ಅಭ್ಯರ್ಥಿಯ ತನಿಖೆ ವೇಳೆ ಬಿಜೆಪಿ ನಾಯಕರ ಹೆಸರು ಕೇಳಿಬಂದರೆ, ಆ ಅಭ್ಯರ್ಥಿಯ ವಿಚಾರಣೆಯನ್ನೇ ಕೈಬಿಡಲಾಗುತ್ತಿದೆ. ಇಡೀ ಹಗರಣವನ್ನು ಮುಚ್ಚಿ ಹಾಕಿ, ಬಿಜೆಪಿ ನಾಯಕರನ್ನು ಬಚಾವ್ ಮಾಡಲೆಂದೇ ಸಿಐಡಿ ಮೂಲಕ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

    SUPREME COURT

    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯವರ ಮೇಲ್ವಿಚಾರಣೆಯಲ್ಲಿ ಪಿಎಸ್‍ಐ ಹಗರಣದ ಸಮಗ್ರ ತನಿಖೆ ನಡೆಯಬೇಕು. ಆಗ ಮಾತ್ರ ನಿಷ್ಪಕ್ಷಪಾತ ತನಿಖೆ ನಡೆದು, ಸತ್ಯಾಂಶ ಹೊರಬರುತ್ತದೆ. ಆಗ ಅಕ್ರಮದಲ್ಲಿ ಭಾಗಿಯಾದ ಎಲ್ಲ ರಾಜಕಾರಣಿಗಳ ಮುಖವಾಡ ಕಳಚಿ ಬೀಳುತ್ತದೆ. ಇಲ್ಲದಿದ್ದರೆ, ಸಿಐಡಿ ತನಿಖೆಯ ಗಾಳಕ್ಕೆ ಕೇವಲ ಸಣ್ಣಪುಟ್ಟ ಮೀನುಗಳು ಬಲಿಯಾಗಿ, ದೊಡ್ಡ ತಿಮಿಂಗಿಲಗಳು ತಪ್ಪಿಸಿಕೊಂಡು ಬಿಡುತ್ತವೆ ಎಂದು ಭಾಸ್ಕರ್ ರಾವ್ ಹೇಳಿದರು.

    ಬಿಜೆಪಿ ಸರ್ಕಾರದ ಸಚಿವ ಡಾ. ಅಶ್ವತ್ಥ್ ನಾರಾಯಣ್‍ರವರ ಸಹೋದರನೇ ಹಗರಣದಲ್ಲಿ ಭಾಗಿಯಾಗಿರುವ ಆರೋಪವಿದೆ. ಸಚಿವರ ಸಹಕಾರವಿಲ್ಲದೇ ಅವರ ಸಹೋದರನಿಗೆ ಅಕ್ರಮವೆಸಗಲು ಸಾಧ್ಯವೇ? ಬಹುತೇಕ ಬಿಡಿಎ ಕಾಮಗಾರಿಗಳನ್ನು ಅಶ್ವತ್ಥ್ ನಾರಾಯಣ್ ಸಹೋದರರ ಮಾಲೀಕತ್ವದ ಹೊಂಬಾಳೆ ಕನ್‍ಸ್ಟ್ರಕ್ಷನ್ ನಿರ್ವಹಿಸುತ್ತಿದ್ದು, ಪಿಎಸ್‍ಐ ನೇಮಕಾತಿಯಲ್ಲೂ ಅವರು ಮೂಗು ತೂರಿಸಿರುವುದು ಆತಂಕಕಾರಿ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಸಿಐಡಿ ಮೂರು ನೋಟಿಸ್ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಒದಗಿಸಿಲ್ಲ ಎಂದರು.

    ಸತ್ಯ ಹೊರಬರುವುದು ಕಾಂಗ್ರೆಸ್‍ಗೂ ಇಷ್ಟವಿಲ್ಲ ಎನ್ನುವುದು ಇದರಿಂದಲೇ ಸ್ಪಷ್ಟವಾಗುತ್ತದೆ. ಇನ್ನು, ಅಶ್ವತ್ಥ್ ನಾರಾಯಣ್‍ರವರು ಈ ಹಿಂದೆಯೂ ನಕಲಿ ಸರ್ಟಿಫಿಕೇಟ್ ನೀಡಿದ್ದರೆಂದು ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿಯವರು ಬಹಿರಂಗಪಡಿಸಿದ್ದು, ಅವರು ಕೂಡ ಸಾಕ್ಷಿ ಬಹಿರಂಗ ಪಡಿಸುತ್ತಿಲ್ಲ. ಮೂರೂ ಭ್ರಷ್ಟ ಪಕ್ಷಗಳು ಒಳಒಪ್ಪಂದ ಮಾಡಿಕೊಂಡು ಹಗರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿವೆ ಎಂದು ಹೇಳಿದರು.

    ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನು ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ಮಾಡಿದ್ದಾರೆಂದು ವಕೀಲ ನಿಯೋಗವು ಸಿಐಡಿಗೆ ದೂರು ನೀಡಿದೆ. ಆ ಮುಖ್ಯಮಂತ್ರಿ ಹಾಗೂ ಅವರ ಮಗ ಯಾರೆಂದು ಬಹಿರಂಗವಾಗಬೇಕು. ಪಿಎಸ್‍ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ಕರ್ನಾಟಕ ಸ್ಟೇಟ್ ನರ್ಸಿಂಗ್ ಕೌನ್ಸಿಲ್‍ನಲ್ಲಿನ ಅಕ್ರಮದಲ್ಲೂ ಭಾಗಿಯಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ವೈದ್ಯಕೀಯ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಭಾವಿ ಸಚಿವರು ಕೂಡ ಅಕ್ರಮದ ಪಾಲುದಾರರಾಗಿರಬಹುದು. ಸೂಕ್ತ ತನಿಖೆ ನಡೆದರೆ ಸತ್ಯಾಂಶ ಹೊರಬರಲಿದೆ. ಪಿಎಸ್‍ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ಕರ್ನಾಟಕ ಸ್ಟೇಟ್ ನರ್ಸಿಂಗ್ ಕೌನ್ಸಿಲ್‍ನಲ್ಲಿನ ಅಕ್ರಮದಲ್ಲೂ ಭಾಗಿಯಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ವೈದ್ಯಕೀಯ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಭಾವಿ ಸಚಿವರು ಕೂಡ ಅಕ್ರಮದ ಪಾಲುದಾರರಾಗಿರಬಹುದು. ಸೂಕ್ತ ತನಿಖೆ ನಡೆದರೆ ಸತ್ಯಾಂಶ ಹೊರಬರಲಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಎರಡೂವರೆ ಸಾವಿರ ಕೋಟಿ ಬೇಕು ಯತ್ನಾಳ್ ಹೇಳಿಕೆ ತನಿಖೆ ಆಗಲಿ: ಡಿ.ಕೆ. ಶಿವಕುಮಾರ್

    ಪಿಎಸ್‍ಐ ನೇಮಕಾತಿ ಪರೀಕ್ಷೆ ಮಾತ್ರವಲ್ಲದೇ ಇತರೆ ಹುದ್ದೆಗಳ ನೇಮಕಾತಿಯಲ್ಲೂ ಭಾರೀ ಆಕ್ರಮ ನಡೆದಿದೆ. ಕೆಪಿಎಸ್‍ಸಿ ಪರೀಕ್ಷೆ ಪಾಸ್ ಮಾಡಿಸುವುದಾಗಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಲಂಚ ಪಡೆದು ವಂಚಿಸಿ, ನಂತರ ಹಣ ವಾಪಸ್ ಕೇಳಿದಾಗಿ ಅಭ್ಯರ್ಥಿ ಮೇಲೆ ಗೂಂಡಾಗಿರಿ ಮಾಡಿದ್ದಾರೆಂದು ಅಭ್ಯರ್ಥಿಯೇ ಆರೋಪ ಮಾಡಿದ್ದಾರೆ. ಸಹಾಯಕ ಉಪನ್ಯಾಸಕರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮವೂ ಬಯಲಾಗಿದೆ. ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮವಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‍ರವರೇ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ ಯಾವುದೇ ಅಕ್ರಮವಾಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರವರು ಕಳೆದ ವಿಧಾನಸಭಾ ಅಧಿವೇಶನದಲ್ಲಿ ತಪ್ಪು ಮಾಹಿತಿ ನೀಡಿದರು. ಬೆಂಗಳೂರಿನ 20 ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿದೆ ಎಂದು ಸಿಐಡಿ ಅಧಿಕಾರಿಗಳು ಹೇಳುತ್ತಿದ್ದಾರೆ. ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಅಮೃತ್ ಪಾಲ್ ಅಕ್ರಮದಲ್ಲಿ ಭಾಗಿಯಾಗಿರುವುದು ದುರಂತ ಎಂದು ಭಾಸ್ಕರ್ ರಾವ್ ಹೇಳಿದರು.

    ಅದಾನಿ ಜೇಬು ತುಂಬಿಸಲು ಸಾಮಾನ್ಯರ ಲೂಟಿ: ಜೀರೋ ಪರ್ಸೆಂಟ್ ಕಮಿಷನ್ ಆಡಳಿತ ನೀಡುವ ಆಮ್ ಆದ್ಮಿ ಪಾರ್ಟಿಯಿಂದ ಮಾತ್ರ ಕಡಿಮೆ ದರದಲ್ಲಿ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತದೆ. 40 ಪರ್ಸೆಂಟ್ ಬಿಜೆಪಿ ಸರ್ಕಾರವು ಅದಾನಿ ಜೇಬು ತುಂಬಿಸಿ ಕಮಿಷನ್ ಪಡೆಯುವ ಬಿಜೆಪಿ ಸರ್ಕಾರದಿಂದ ಇದು ಸಾಧ್ಯವೇ ಇಲ್ಲ ಎಂದು ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರವು ಕಲ್ಲಿದ್ದಲು ಗುತ್ತಿಗೆಯನ್ನು ಅದಾನಿ ಕಂಪನಿಗೆ ನೀಡಿ, ಅಧಿಕ ಬೆಲೆಗೆ ಅದರಿಂದ ವಿದ್ಯುತ್ ಖರೀದಿಸುತ್ತಿದೆ. ಇದರಿಂದ ಸರ್ಕಾರಕ್ಕಾಗುವ ನಷ್ಟವನ್ನು ಭರಿಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಭಾಸ್ಕರ್ ರಾವ್ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿ ಮುಖಂಡರಾದ ಚನ್ನಪ್ಪಗೌಡ ನೆಲ್ಲೂರು ವಿಜಯ್ ಶಾಸ್ತ್ರಿಮಠ್, ಸುರೇಶ್ ರಾಥೋಡ್ ಭಾಗವಹಿಸಿದ್ದರು.

  • `ಬೆಳಗಾವಿ ಫೈಲ್ಸ್’ ಕಾರ್ಟೂನ್ ಹಂಚಿಕೊಂಡ ರಾವತ್- `ಶಿವಸೇನಾ ಫೈಲ್ಸ್’ ನೋಡುವಂತೆ ಆಪ್ ತಿರುಗೇಟು

    `ಬೆಳಗಾವಿ ಫೈಲ್ಸ್’ ಕಾರ್ಟೂನ್ ಹಂಚಿಕೊಂಡ ರಾವತ್- `ಶಿವಸೇನಾ ಫೈಲ್ಸ್’ ನೋಡುವಂತೆ ಆಪ್ ತಿರುಗೇಟು

    ಬೆಳಗಾವಿ: ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರ ಕುರಿತು ರಾಷ್ಟ್ರವ್ಯಾಪಿ ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ ಇಲ್ಲಿನ ಶಿವಸೇನಾ ಸಂಸದ ಸಂಜಯ್ ರಾವತ್ `ಬೆಳಗಾವಿ ಫೈಲ್ಸ್’ ವ್ಯಂಗ್ಯಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಟೀಕಿಸಿದ್ದಾರೆ. ಜೊತೆಗೆ ಮತ್ತೆ ಬೆಳಗಾವಿಯ ಗಡಿ ವಿವಾದವನ್ನು ಕೆಣಕಿದ್ದಾರೆ.

    ವ್ಯಂಗ್ಯಚಿತ್ರವೊಂದನ್ನು ಪೋಸ್ಟ್ ಮಾಡಿ `ಬೆಳಗಾಂ ಫೈಲ್ಸ್’ ಎಂದು ಬರೆದಿದ್ದಾರೆ. ಬೆಳಗಾಂ ಫೈಲ್ಸ್ ಏನು ಕಡಿಮೆ ಇದೆಯೇ ಎಂದು ಪ್ರಶ್ನಿಸಲಾಗಿದೆ. ಪ್ರಜಾಪ್ರಭುತ್ವದ ಹತ್ಯೆ ನಡೆದಿದೆ ಎಂದು ಬಿಂಬಿಸಲಾಗಿದೆ. ಮರಾಠಿ ಯುವಕರು ಅಸಹಾಯಕರಾಗಿದ್ದಾರೆ ಎಂದು ಚಿತ್ರಿಸಲಾಗಿದೆ. ಗಡಿ ಬೆಳಗಾವಿಯಲ್ಲಿ ಮರಾಠಿ ಭಾಷಿಗರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ ಎಂದು ಬಿಂಬಿಸುವ ಯತ್ನವನ್ನು ವ್ಯಂಗ್ಯಚಿತ್ರದ ಮೂಲಕ ಮಾಡಲಾಗಿದೆ. ಬೆಳಗಾವಿ ಮರಾಠಿಗರ ಮೇಲೆ ಕರ್ನಾಟಕ ಸರ್ಕಾರ ಹಾಗೂ ಪೋಲಿಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರತಿಬಿಂಬಿಸುವ ಪೋಸ್ಟ್ ಹಾಕುವ ಮೂಲಕ ಪುಂಡಾಟಿಕೆ ಮೆರೆದಿದ್ದಾರೆ.

    ಎಂಎಸ್‍ಎಂಇ ಹಾಗೂ ಶೀವಸೇನೆ ನಾಯಕರು ಹಲವು ಬಾರಿ ಬೆಳಗಾವಿ ಗಡಿ ವಿಚಾರ ಕೆಣಕಿ ಮುಖಭಂಗ ಅನುಭವಿಸಿದ್ದರು. ಇದೀಗ `ದಿ ಕಾಶ್ಮೀರ್ ಫೈಲ್ಸ್’ ಗಿಂತಲೂ ಬೆಳಗಾವಿ ಫೈಲ್ಸ್ ಭಯಾನಕವಾಗಿದೆ ಎನ್ನುವ ಮೂಲಕ ಉದ್ಧಟತನ ಮೆರೆದಿದ್ದಾರೆ. ಇದರ ವಿರುದ್ಧ ಬೆಳಗಾವಿ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇದನ್ನೂ ಓದಿ: ಜನರೇ ಬಿಜೆಪಿ ಆಡಳಿತ ಮೆಚ್ಚಿದ್ದಾರೆ, ಅದ್ಕೆ ನಾವು ಜಾಸ್ತಿ ಮಾತಾಡಲ್ಲ: ಡಿ.ಕೆ ಸುರೇಶ್ ವ್ಯಂಗ್ಯ

    ಸಂಜಯ್ ರಾವತ್ ಟ್ವೀಟ್‍ಗೆ ಕಿಡಿಕಾರಿರುವ ಕನ್ನಡಪರ ಹೋರಾಟಗಾರರು, ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುತ್ತೇವೆ ಅನ್ನೋರಿಗೆ ದೇಶದ್ರೋಹಿ ಅಂತೀವಿ. ಇನ್ನೂ ಕರ್ನಾಟಕದ ಅವಿಭಾಜ್ಯ ಅಂಗವಾಗಿರೋ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಅನ್ನುವವರಿಗೆ ಏನೆಂದು ಕರೆಯಬೇಕು? ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಗಾದೆಮಾತು ಶಿವಸೇನೆ ಮುಖಂಡರಿಗೆ ಸರಿಯಾಗಿಯೇ ಅನ್ವಯಿಸುತ್ತದೆ. ಎಷ್ಟು ಬಾರಿ ಮುಖಭಂಗ ಅನುಭವಿಸಿದರೂ ಕ್ಯಾತೆ ತೆಗೆಯೋದು ಮಾತ್ರ ನಿಲ್ಲಿಸುತ್ತಿಲ್ಲ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    SUPREME COURT

    2004ರಿಂದಲೂ ಸುಪ್ರೀಂ ಕೋರ್ಟ್ ಎದುರು ಬಾಕಿಯಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಮಹಾರಾಷ್ಟ್ರ ಸರ್ಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿನ ವಿಧಾನಮಂಡಲ ಅಧಿವೇಶನದಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ. ಅಲ್ಲದೇ ಕರ್ನಾಟಕ ಸರ್ಕಾರ ಮತ್ತು ಕನ್ನಡಿಗರ ವಿರುದ್ಧ ವಾಗ್ದಾಳಿ ನಡೆಸಲಾಗಿದೆ. ಈ ಮೂಲಕ ನ್ಯಾಯಾಂಗ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹಲವು ಪಾಕಿಸ್ತಾನಗಳನ್ನು ಹುಟ್ಟುಹಾಕಲು ಬಿಜೆಪಿ ಬಯಸುತ್ತಿದೆ: ಮೆಹಬೂಬಾ ಮುಫ್ತಿ

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷದ ಮುಖಂಡ ರಾಜಕುಮಾರ್ ಟೋಪಣ್ಣ, ಶಿವಸೇನಾದವರು ಗಡಿ ವಿವಾದವನ್ನು ಜೀವಂತವಿಡಲು ಯತ್ನಿಸುತ್ತಿದ್ದಾರೆ. ಪದೇ ಪದೇ ಕೆಣಕುತ್ತಿದೆ. ಬೆಳಗಾವಿಯಲ್ಲಿ ಕನ್ನಡಿಗರು- ಮರಾಠಿಗರು ಒಗ್ಗಟ್ಟಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಭಾಗಿಯಾಗಿರುವ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಂಜಯ್ ರಾವತ್ ಮೊದಲು `ಶಿವಸೇನಾ ಫೈಲ್ಸ್’ ನೋಡಲಿ ಎಂದು ತಿರುಗೇಟು ನೀಡಿದ್ದಾರೆ.

  • ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ

    ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ

    ಚಂಡೀಗಢ: ಸಿಖ್ಖರ ನಾಡಿನಲ್ಲಿ ಇದೇ ಮೊದಲ ಬಾರಿ ಆಮ್ ಆದ್ಮಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದು, ಇಂದು ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹುಟ್ಟೂರಾದ ಖಾಟ್ಕರ್ ಕಲಾನ್‍ನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಆಪ್ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ರಾಜಧಾನಿಯ ಹೊರಗೆ ಪ್ರಮಾಣ ವಚನ ನಡೀತಿರೋದು ವಿಶೇಷವಾಗಿದ್ದು, ಸಿಎಂ ಜೊತೆ 18 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 3 ಲಕ್ಷ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಹೃದಯಸ್ಪರ್ಶಿ ಫೋಟೋ ಜೊತೆಗೆ ಭಗವಂತ ಮಾನ್‌ಗೆ ಶುಭಕೋರಿದ ಹರ್ಭಜನ್ ಸಿಂಗ್

    ಭಗವಂತ್ ಮಾನ್ ದುರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್‍ನ ದಲ್ವಿರ್ಸಿಂಗ್ ಗೋಲ್ಡಿ 24,306 ಮತಗಳಿಸಿದ್ದು, ಭಗವಂತ್ ಮಾನ್‍ಗೆ 82,023 ಮತಗಳನ್ನು ಗಳಿಸಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದರು. ಅಧಿಕಾರ ವಹಿಸಿಕೊಂಡ ನಂತರ ಅವರ ಮೊದಲ ವ್ಯವಹಾರದ ಆದೇಶವೆಂದರೆ ಶಾಲೆಗಳು, ಆರೋಗ್ಯ, ಉದ್ಯಮ, ಕೃಷಿಯನ್ನು ಲಾಭದಾಯಕವಾಗಿಸುವುದಾಗಿದೆ ಎಂದು ಗೆಲುವಿನ ಬಳಿಕ ಘೋಷಿಸಿದ್ದರು. ಇದನ್ನೂ ಓದಿ: ಅಲ್ಲಿ ಝೆಲೆನ್ಸ್ಕಿ ಇಲ್ಲಿ ಮಾನ್ – ಒಂದೇ ಹಿನ್ನೆಲೆಯ ರಾಜಕಾರಣಿಗಳು ಟ್ವಿಟ್ಟರ್‌ನಲ್ಲಿ ಟ್ರೆಂಡ್

    ಜೊತೆಗೆ ಮಹಿಳೆಯರ ಸುರಕ್ಷತೆ ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಸುಧಾರಿಸುವುದಾಗಿದೆ. ಅಲ್ಲದೆ ಒಂದು ತಿಂಗಳೊಳಗೆ ಪಂಜಾಬ್‍ನಲ್ಲಿ ಬದಲಾವಣೆಯನ್ನು ಕಾಣುತ್ತೀರಿ ಎಂದು ಭರವಸೆ ನೀಡಿದ್ದರು. ಆಮ್ ಆದ್ಮಿ ಪಕ್ಷವು ಪಂಜಾಬ್‍ನಲ್ಲಿ 117 ವಿಧಾನಸಭಾ ಸ್ಥಾನಗಳ ಪೈಕಿ 91 ರಲ್ಲಿ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಮಾಡಿತ್ತು.

    ಇತ್ತ ಗೋವಾದಲ್ಲಿ ಇಂದು ಶಾಸಕಾಂಗ ಸಭೆ ನಡೆಯಲಿದ್ದು, ಮುಂದಿನ ಸಿಎಂ ಆಯ್ಕೆ ನಡೆಯಲಿದೆ. ಹಾಲಿ ಸಿಎಂ ಪ್ರಮೋದ್ ಸಾವಂತ್ ಹಾಗೂ ಸಚಿವ ವಿಶ್ವಜಿತ್ ರಾಣೆ ರೇಸ್‍ನಲ್ಲಿದ್ದಾರೆ. ಇದನ್ನೂ ಓದಿ: ದೇಶದ ಭದ್ರತೆಗಾಗಿ ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡುತ್ತೇವೆ: ಕೇಜ್ರಿವಾಲ್‌

  • ಭಗವಂತ್ ಮಾನ್ ಭರ್ಜರಿ ಜಯ- ಭಗತ್ ಸಿಂಗ್ ಹುಟ್ಟೂರಲ್ಲಿ ಪ್ರಮಾಣ ವಚನ

    ಭಗವಂತ್ ಮಾನ್ ಭರ್ಜರಿ ಜಯ- ಭಗತ್ ಸಿಂಗ್ ಹುಟ್ಟೂರಲ್ಲಿ ಪ್ರಮಾಣ ವಚನ

    ಚಂಡೀಗಢ: ಪಂಜಾಬ್‍ನ ಎಎಪಿಯ ಸಿಎಂ ಅಭ್ಯರ್ಥಿಯಾಗಿರುವ ಭಗವಂತ್ ಮಾನ್ 58,206 ಮತದ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

    ಪಂಜಾಬ್‍ನ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪಕ್ಷ ಸ್ಪಷ್ಟ ಬಹುಮತ ಗಳಿಸಿದ್ದು, ಪಂಜಾಬ್‍ನಲ್ಲಿ ಅಧಿಕಾರ ಹಿಡಿಯಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಭಗವಂತ್ ಮಾನ್ ದುರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್‍ನ ದಲ್ವಿರ್‍ಸಿಂಗ್ ಗೋಲ್ಡಿ 24,306 ಮತಗಳಿಸಿದ್ದು, ಭಗವಂತ್ ಮಾನ್‍ಗೆ 82,023 ಮತಗಳನ್ನು ಗಳಿಸಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.

    ಈ ಬಗ್ಗೆ ಮಾತನಾಡಿದ ಅವರು, ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭವು ರಾಜಭವನದಲ್ಲಿ ನಡೆಯುವುದಿಲ್ಲ. ಬದಲಿಗೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ನವಾನ್‍ಶಹರರ ಜಿಲ್ಲೆಯ ಖಟ್ಕರ್ಕಲನ್‍ನಲ್ಲಿ ನಡೆಸಲಾಗುವುದು. ದಿನಾಂಕವನ್ನು ನಂತರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಉತ್ತರಾಖಂಡ್‌ನಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ?

    ಯಾವುದೇ ಸರ್ಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಚಿತ್ರವಿರುವುದಿಲ್ಲ, ಬದಲಿಗೆ ಭಗತ್ ಸಿಂಗ್ ಮತ್ತು ಬಿಆರ್ ಅಂಬೇಡ್ಕರ್ ಅವರ ಚಿತ್ರಗಳು ಇರುತ್ತವೆ ಎಂದು ಘೋಷಿಸಿದರು.

    ಅಧಿಕಾರ ವಹಿಸಿಕೊಂಡ ನಂತರ ಅವರ ಮೊದಲ ವ್ಯವಹಾರದ ಆದೇಶವೆಂದರೆ ಶಾಲೆಗಳು, ಆರೋಗ್ಯ, ಉದ್ಯಮ, ಕೃಷಿಯನ್ನು ಲಾಭದಾಯಕವಾಗಿಸುವುದಾಗಿದೆ. ಜೊತೆಗೆ ಮಹಿಳೆಯರ ಸುರಕ್ಷತೆ ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಸುಧಾರಿಸುವುದಾಗಿದೆ ಎಂದ ಅವರು, ಒಂದು ತಿಂಗಳೊಳಗೆ ಪಂಜಾಬ್‍ನಲ್ಲಿ ಬದಲಾವಣೆಯನ್ನು ಕಾಣುತ್ತೀರಿ ಎಂದು ಭರವಸೆ ನೀಡಿದರು. ಇದನ್ನೂ ಓದಿ: ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್

    ಆಮ್ ಆದ್ಮಿ ಪಕ್ಷವು ಪಂಜಾಬ್‍ನಲ್ಲಿ 117 ವಿಧಾನಸಭಾ ಸ್ಥಾನಗಳ ಪೈಕಿ 91 ರಲ್ಲಿ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಮಾಡಿದೆ.

  • ಉತ್ತರ ಪ್ರದೇಶ ಚುನಾವಣೆ – ಎಸ್‍ಪಿ ಜೊತೆಗೆ ಕೈ ಜೋಡಿಸಲಿರುವ ಆಮ್ ಆದ್ಮಿ

    ಉತ್ತರ ಪ್ರದೇಶ ಚುನಾವಣೆ – ಎಸ್‍ಪಿ ಜೊತೆಗೆ ಕೈ ಜೋಡಿಸಲಿರುವ ಆಮ್ ಆದ್ಮಿ

    ಲಕ್ನೋ: ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ರಾಜಕೀಯ ಪಕ್ಷಗಳು ಮೈತ್ರಿ ಲೆಕ್ಕಾಚಾರದಲ್ಲಿ ಮಗ್ನವಾಗಿದೆ. ಆಡಳಿತರೂಢ ಬಿಜೆಪಿಯನ್ನು ಸೋಲಿಸಲು ಈ ಬಾರಿಯೂ ಘಟಬಂಧನ್ ಮಾಡಿಕೊಳ್ಳಲು ಸಿದ್ಧತೆಗಳು ನಡೆಯುತ್ತಿದ್ದು, ಸದ್ಯ ಉತ್ತರ ಪ್ರದೇಶದಲ್ಲಿ ಚುನಾವಣಾ ಪೂರ್ವ ಭಾರೀ ತಯಾರಿಗಳು ನಡೆಯುತ್ತಿದೆ.

    ಈ ಬಾರಿ ಸಮಾಜವಾದಿ ಪಾರ್ಟಿ ಆಮ್ ಅದ್ಮಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿದ್ದು, ಮಾಜಿ ಸಿಎಂ ಸಮಾಜವಾದಿ ಪಕ್ಷದ ನಾಯಕರ ಅಖಿಲೇಶ್ ಯಾದವ್ ಅವರನ್ನು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಮಹತ್ವದ ಚರ್ಚೆಯ ಬಳಿಕ ಸಂಜಯ್ ಸಿಂಗ್, ಎಸ್‍ಪಿ ಜೊತೆಗೆ ಮಾಡಿಕೊಳ್ಳುತ್ತಿರುವ ಮೈತ್ರಿಯ ಬಹಿರಂಗವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ: ಕತ್ರಿನಾ ಕೈಫ್‌ ಕೆನ್ನೆಯಷ್ಟು ರಸ್ತೆ ನೈಸ್‌ ಆಗಿರಬೇಕು: ರಾಜೇಂದ್ರ ಸಿಂಗ್ ಗುಧಾ

    ಆಮ್ ಆದ್ಮಿ ಸಮಾಜವಾದಿ ಪಕ್ಷದ ಜೊತೆಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮೈತ್ರಿಕೊಳ್ಳುತ್ತಿದ್ದು, ಸೀಟು ಹಂಚಿಕೆಯ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಹಿಂದೆಯೂ ಮೈತ್ರಿಯ ಬಗ್ಗೆ ಚರ್ಚೆ ನಡೆದಿತ್ತು ಅದನ್ನು ಮುಚ್ಚಿಡಲಾಗಿದೆ ಎಂದ ಅವರು, ಬಿಜೆಪಿಯ ದುರಾಡಳಿತ ಅಂತ್ಯಗೊಳಿಸುವುದು ನಮ್ಮ ಗುರಿ ಎಂದು ಅವರು ಹೇಳಿದ್ದಾರೆ.

    ಸೀಟು ಹಂಚಿಕೆಯ ಬಗ್ಗೆ ಗುಟ್ಟು ಬಿಟ್ಟುಕೊಡದ ಅವರು, ಆ ಬಗ್ಗೆ ಈಗಲೇ ಸ್ಪಷ್ಟವಾಗಿ ಹೇಳುವುದಿಲ್ಲ ಎಂದಿದ್ದಾರೆ. ಅಲ್ಲದೇ ಇದೇ ವೇಳೆ ಬಿಜೆಪಿ ವಿರುದ್ಧ ಎಲ್ಲ ಪಕ್ಷಗಳು ಒಂದಾಗಬೇಕಿದೆ ಎಂದು ಕರೆ ಕೊಟ್ಟಿದ್ದಾರೆ. ಎಸ್‍ಪಿ(SP) ಮತ್ತು ಆರ್‍ಎಲ್‍ಡಿ(RLD) ಎರಡು ಪಕ್ಷಗಳ ನಡುವಿನ ಸೀಟು ಹಂಚಿಕೆ ಮಾತುಕತೆ ಕೊನೆಯ ಹಂತಕ್ಕೆ ತಲುಪಿದೆ ಮತ್ತು ಶೀಘ್ರದಲ್ಲೇ ಒಪ್ಪಂದವನ್ನು ಪ್ರಕಟಿಸಲಾಗುವುದು ಎಂದು ಸೂಚಿಸಿದ ಒಂದು ದಿನದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ತಾಯಿಯಾಗ್ತಿದ್ದಾರಾ ಪ್ರಿಯಾಂಕಾ ಚೋಪ್ರಾ?

    2017 ರ ಚುನಾವಣೆಯಲ್ಲಿ ಬಿಜೆಪಿ ಮಿತ್ರ ಪಕ್ಷವಾದ ಓಂ ಪ್ರಕಾಶ್ ರಾಜ್‍ಭರ್ ಅವರ ಸುಹೇಲ್‍ದೇವ್ ಭಾರತೀಯ ಸಮಾಜ ಪಕ್ಷ (SBSP) ನೊಂದಿಗೆ SP ಈಗಾಗಲೇ ಮೈತ್ರಿ ಮಾಡಿಕೊಂಡಿದೆ. ಎಸ್‍ಬಿಎಸ್‍ಪಿ ಜೊತೆಗೆ, ಭಾಗಿದರಿ ಸಂಕಲ್ಪ್ ಮೋರ್ಚಾ, ರಾಜ್‍ಭರ್ ನೇತೃತ್ವದ ಸಣ್ಣ ಸಣ್ಣ ಪಕ್ಷಗಳ ಗುಂಪು, ಎಸ್‍ಪಿ ನೇತೃತ್ವದ ಮೈತ್ರಿಕೂಟದ ಭಾಗವಾಗಲಿದೆ.

  • ಲಸಿಕೆ ದುರ್ಬಳಕೆ ಮಾಡುತ್ತಿರೋ ಅಶ್ವಥ್ ನಾರಾಯಣರನ್ನು ಕೂಡಲೇ ವಜಾಗೊಳಿಸಿ: ಮೋಹನ್ ದಾಸರಿ ಆಗ್ರಹ

    ಲಸಿಕೆ ದುರ್ಬಳಕೆ ಮಾಡುತ್ತಿರೋ ಅಶ್ವಥ್ ನಾರಾಯಣರನ್ನು ಕೂಡಲೇ ವಜಾಗೊಳಿಸಿ: ಮೋಹನ್ ದಾಸರಿ ಆಗ್ರಹ

    ಬೆಂಗಳೂರು: ಕೊರೊನಾ ನಿಯಂತ್ರಣ ಕಾರ್ಯಪಡೆಯ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ್ ನಾರಾಯಣ್ ಪ್ರಾರಂಭದಿಂದಲೂ ಲಸಿಕೆ ವಿತರಣೆಯಲ್ಲಿ ದುರ್ಬಳಕೆ, ಸ್ವಜನಪಕ್ಷಪಾತ, ಗೊಂದಲಗಳು, ತಾರತಮ್ಯ ಧೋರಣೆಯನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಬೆಂಗಳೂರಿನ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲೂ ಇಂದು ಲಸಿಕೆ ವಿತರಣೆಯನ್ನು ಬಿಜೆಪಿಯ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ. ತಮ್ಮ ಸಾಂವಿಧಾನಿಕ ಹುದ್ದೆಯನ್ನು ಸಂಪೂರ್ಣ ದುರುಪಯೋಗ ಪಡಿಸಿಕೊಳ್ಳುತ್ತಿರುವ ಅಶ್ವಥ್ ನಾರಾಯಣ್ ಅವರನ್ನು ಈ ಕೂಡಲೇ ಕಾರ್ಯಪಡೆ ಅಧ್ಯಕ್ಷ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ರಾಜ್ಯಪಾಲರಿಗೆ ಒತ್ತಾಯಿಸಿದ್ದಾರೆ.

    ಉಪ ಮುಖ್ಯಮಂತ್ರಿಗಳು ತಾವು ಸಮಸ್ತ ಕರ್ನಾಟಕ ರಾಜ್ಯಕ್ಕೆ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ಕಾರ್ಯಪಡೆಯ ಅಧ್ಯಕ್ಷರು ಎಂಬುದನ್ನು ಮರೆತು ಕೇವಲ ತಾವು ಪ್ರತಿನಿಧಿಸುವ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಡಾ. ಸಿ. ಎನ್. ಅಶ್ವತ್ಥನಾರಾಯಣ ಫೌಂಡೇಷನ್ ಹೆಸರಿನಲ್ಲಿ ತಮ್ಮ ಬೆಂಬಲಿಗರು ಇರುವ ಪ್ರದೇಶಗಳಲ್ಲಿ ಮಾತ್ರ ಟೋಕನ್ ಗಳನ್ನು ಮೊದಲೇ ವಿತರಿಸಿ ಲಸಿಕೆಯನ್ನು ಹಾಕುತ್ತಿರುವುದು ಎಲ್ಲೆಡೆ ಕಂಡುಬರುತ್ತಿದೆ.

    ಫ್ರಂಟ್ ಲೈನ್ ವಾರಿಯರ್ಸ್ ಗಳ ನೆಪದಲ್ಲಿ ಆದ್ಯತೆಯ ನಿಯಮ ಹಾಗೂ ಕಂಪನಿಗಳ ಸಾಮಾಜಿಕ ಜವಾಬ್ದಾರಿಯ ನಿಧಿ ಅಡಿಯಲ್ಲಿ ದುರ್ಬಳಕೆ ಮಾಡಿಕೊಂಡು ಈ ರೀತಿಯ ಲಸಿಕೆ ವಿತರಣೆಯನ್ನು ಬಿಜೆಪಿ ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದೆ. ನಗರದ 27 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಈ ಅನೈತಿಕ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದು ಇದಕ್ಕೆ ಉಪ ಮುಖ್ಯಮಂತ್ರಿಗಳು ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು ಸಾಕಷ್ಟು ಇಂಬು ನೀಡುತ್ತಿದ್ದಾರೆ. ಜನತೆ ಬೆಳ್ಳಂಬೆಳಗ್ಗೆ 8 ಗಂಟೆಗೆ ಲಸಿಕಾ ಕೇಂದ್ರಗಳಿಗೆ ಹೋದರೂ ಯಾರಿಗೂ ಲಸಿಕೆ ಸಿಗುವುದಿಲ್ಲ. ಕೇವಲ ಟೋಕನ್ ಹೊಂದಿರುವವರಿಗೆ ಮಾತ್ರ ಲಸಿಕೆ ನೀಡುತ್ತಿರುವದು ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ಕಾಣಸಿಗುತ್ತದೆ.

    ಈಗಾಗಲೇ ಆಮ್ ಆದ್ಮಿ ಪಕ್ಷವು ಈ ರೀತಿಯ ಲಸಿಕೆ ವಿತರಣೆ ಯಲ್ಲಿನ ಬಿಜೆಪಿಗರ ರಾಜಕಾರಣ, ಅಸಮಾನತೆ ತಾರತಮ್ಯ ಧೋರಣೆಯ ವಿರುದ್ಧ ವಿರುದ್ಧ ಸರ್ ಸಿ.ವಿ.ರಾಮನ್ ನಗರ, ಜಯನಗರ, ಬಸವನಗುಡಿ, ಬೊಮ್ಮನಹಳ್ಳಿ, ಗೋವಿಂದರಾಜನಗರ ಮುಂತಾದ ವಿಧಾನಸಭಾ ಕ್ಷೇತ್ರಗಳಲ್ಲಿ ಜನಸಾಮಾನ್ಯರೊಂದಿಗೆ ಜೊತೆಗೂಡಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ತಮ್ಮ ಅಸಮಾಧಾನವನ್ನು, ಪ್ರತಿಭಟನೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

    ಜನಸಾಮಾನ್ಯನಿಗೆ ನ್ಯಾಯೋಚಿತವಾಗಿ ಸಿಗಬೇಕಿದ್ದ ಲಸಿಕೆಗಳು ಇಂದು ಕೇವಲ ರಾಜಕೀಯ ಉದ್ದೇಶಗಳಿಗಾಗಿ ಸಿಗದೆ ವಂಚಿತರಾಗುತ್ತಿದ್ದಾರೆ. ಈ ಗೊಂದಲಗಳಿಗೆ ನೇರ ವಾಗಿ ಕಾರಣಕರ್ತರಾಗಿರುವ ಕಾರ್ಯಪಡೆ ಅಧ್ಯಕ್ಷರನ್ನು ಈ ಕೂಡಲೇ ವಜಾಗೊಳಿಸಬೇಕೆಂದು ರಾಜ್ಯಪಾಲರಲ್ಲಿ ದೂರನ್ನು ಸಹ ನೀಡಲಾಗುವುದೆಂದು ಎಂದು ಮೋಹನ್ ದಾಸರಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ರಾಜಶೇಖರ ದೊಡ್ಡಣ್ಣ ಹಾಗೂ ಬೆಂಗಳೂರು ನಗರ ಎಸ್‍ಸಿ, ಎಸ್ ಟಿ ವಿಭಾಗದ ಅಧ್ಯಕ್ಷ ಜಯಕುಮಾರ್ ಅವರು ಸಹ ಭಾಗವಹಿಸಿದ್ದರು.

  • ದೆಹಲಿಯಲ್ಲಿ ಕಾಂಗ್ರೆಸ್ ಸೊನ್ನೆ ಸುತ್ತಲು ಕಾರಣವೇನು?

    ದೆಹಲಿಯಲ್ಲಿ ಕಾಂಗ್ರೆಸ್ ಸೊನ್ನೆ ಸುತ್ತಲು ಕಾರಣವೇನು?

    ನವದೆಹಲಿ: 15 ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದ ಕಾಂಗ್ರೆಸ್ ಇಂದು ದೆಹಲಿಯಲ್ಲಿ ನೆಲೆ ಕಳೆದುಕೊಂಡಿದೆ. ಈ ಬಾರಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯಲ್ಲಿ ಖಾತೆ ತೆರೆಯಲು ಕಷ್ಟಪಡುವ ಪರಿಸ್ಥಿತಿಗೆ ಕಾಂಗ್ರೆಸ್ ಬಂದಿದೆ.

    ದೆಹಲಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ಆರಂಭವಾಗಿದೆ. ಆಮ್ ಆದ್ಮಿ, ಕಾಂಗ್ರೆಸ್, ಬಿಜೆಪಿ ಈ ಬಾರಿ ದೆಹಲಿ ಗದ್ದುಗೆ ಏರಲು ಸಿದ್ಧತೆ ನಡೆಸಿಕೊಂಡಿದೆ. ಆಮ್ ಆದ್ಮಿ ಮತ್ತು ಬಿಜೆಪಿ ನಡುವೆ ನೇರಾ ಹಣಾಹಣಿ ವಾತಾವರಣ ಸೃಷ್ಟಿಯಾಗಿದ್ದು, ಕಾಂಗ್ರೆಸ್ ಲೆಕ್ಕಕ್ಕುಂಟು ಆಟಕ್ಕಿಲ್ಲ ಎನ್ನುವ ಪರಿಸ್ಥಿತಿ ಬಂದಿದೆ.

    ಮೂರು ಅವಧಿಗೆ ಆಡಳಿತ ನಡೆಸಿದ್ದ ಕಾಂಗ್ರೆಸ್ ದೆಹಲಿಯಲ್ಲಿ ಕಳೆದ ಬಾರಿ ಖಾತೆ ತೆರೆದಿಲ್ಲ ಹೀಗೆ ನೆಲೆ ಕಳೆದುಕೊಂಡಿದ್ದು ಯಾಕೆ ಎನ್ನುವ ಕಾರಣ ಹುಡುಕಿದರೆ ಅಲ್ಲಿ ಉತ್ತರ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಸೃಷ್ಟಿಸಿದ್ದ ಸಂಚಲನ. 2013ಕ್ಕೆ ಚುನಾವಣಾ ಕಣಕ್ಕಿಳಿದ ಆಮ್ ಆದ್ಮಿ 2015ರ ಚುನಾವಣಾ ಬಳಿಕ ಇಡೀ ಕಾಂಗ್ರೆಸ್ ವೋಟ್ ಬ್ಯಾಂಕ್ ಅನ್ನು ಕಸಿದುಕೊಂಡಿದೆ. ಕಾಂಗ್ರೆಸ್ ಬಹುತೇಕ ವೋಟ್ ಬ್ಯಾಂಕ್ ಆಪ್‍ಗೆ ಶಿಫ್ಟ್ ಆಗಿದ್ದು, ಕಾಂಗ್ರೆಸ್ ಮತ್ತು ಆಪ್ ಒಂದೇ ಮತ ಬ್ಯಾಂಕಿಗೆ ಕೈ ಹಾಕಿದೆ.

    2013ರ ಚುನಾವಣೆಯಲ್ಲಿ ಎಎಪಿ 70ರಲ್ಲಿ 28 ಸ್ಥಾನಗಳನ್ನು ಗೆದ್ದು ಶೇ. 29.49 ರಷ್ಟು, 2015ರಲ್ಲಿ 67 ಸ್ಥಾನಗಳನ್ನು ಗಳಿಸಿ ಶೇ. 54.3ರಷ್ಟು ಮತಗಳನ್ನು ಗಳಿಸಿತ್ತು. ಕಾಂಗ್ರೆಸ್ 2013ರಲ್ಲಿ ಎಂಟು ಸ್ಥಾನಗಳನ್ನು ಗೆದ್ದು 24.55ರಷ್ಟು ಮತಗಳನ್ನು ಗಳಿಸಿತ್ತು. ಆದರೆ 2015ರಲ್ಲಿ ಶೇ 9.8ಕ್ಕೆ ಕುಸಿಯಿತು. 2013ರಲ್ಲಿ ಬಿಜೆಪಿ 31 ಸ್ಥಾನಗಳನ್ನು ಗೆದ್ದಿದ್ದು, ಶೇ. 33.07ರಷ್ಟು ಮತಗಳನ್ನು ಗಳಿಸಿದೆ. 2015ರಲ್ಲಿ ಕೇವಲ ಒಂದು ಶೇ. ಕಡಿಮೆಯಾಗಿದೆ ಮತ್ತು ಶೇಕಡಾ 32.1 ರಷ್ಟಿತ್ತು ಆದರೆ ಪಕ್ಷವು ಕೇವಲ ಮೂರು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.

    ದೆಹಲಿಯಲ್ಲಿ ಕಾಂಗ್ರೆಸ್ ಸಾಂಪ್ರದಾಯಿಕ ಎದುರಾಳಿ ಬಿಜೆಪಿ ಬದಲು ಆಡಳಿತರೂಢಿ ಆಮ್ ಆದ್ಮಿ ವಿರುದ್ಧ ಹೋರಾಟ ನಡೆಸಬೇಕಿತ್ತು. ಆದರೆ ಆಪ್ ಜೊತೆಗೆ ಮೃದು ಧೋರಣೆ ಹೊಂದಿದ್ದು ಸರ್ಕಾರದ ವಿರುದ್ಧ ದೊಡ್ಡ ಹೋರಾಟಗಳೇನು ನಡೆಯುತ್ತಿಲ್ಲ. ಇವೆರಡು ಪಕ್ಷಗಳ ನಡುವೆ ಪ್ರತಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಿದ್ದರೂ ಶೇಕಡವಾರು ಮತಗಳಿಕೆಯಲ್ಲಿ ಬಿಜೆಪಿ ಉತ್ತಮವಾಗಿದೆ.

    ಈ ನಡುವೆ ಮತ್ತೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಕ್ಯಾಂಪೇನ್ ಆರಂಭಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‍ಆರ್ ಸಿ) ವಿರೋಧವನ್ನು ಬಳಸಿಕೊಂಡು ಕಳೆದುಕೊಂಡ ಮತಗಳನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡಿದೆ. ಅಲ್ಲದೇ ಬಿಹಾರಿ ಮತದಾರರನ್ನು ಸೆಳೆದುಕೊಳ್ಳಲು ಆರ್‍ಜೆಡಿ ಜೊತೆಗೂ ಮೈತ್ರಿ ಮಾಡಿಕೊಂಡಿದೆ. ಇದಕ್ಕೆ ತದ್ವಿರುದ್ಧವಾಗಿ ಆಪ್ ಸಿಎಎ ಮತ್ತು ಎನ್‍ಆರ್‍ಸಿ ವಿಚಾರದಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು ಚದುರಿ ಹೋಗಿದ್ದ ವೋಟ್ ಕಾಂಗ್ರೆಸ್‍ಗೆ ಮರಳುತ್ತಾ, ಈ ಬಾರಿ ಖಾತೆ ಓಪನ್ ಆಗುತ್ತಾ ಎನ್ನವುದು ಫೆಬ್ರವರಿ 11ಕ್ಕೆ ತಿಳಿಯಲಿದೆ.

  • ಎರಡೂವರೆ ದಶಕಗಳ ಬಳಿಕ ರಾಷ್ಟ್ರ ರಾಜಧಾನಿ ಚುಕ್ಕಾಣಿ ಹಿಡಿಯಲಿದಿಯಾ ಬಿಜೆಪಿ?

    ಎರಡೂವರೆ ದಶಕಗಳ ಬಳಿಕ ರಾಷ್ಟ್ರ ರಾಜಧಾನಿ ಚುಕ್ಕಾಣಿ ಹಿಡಿಯಲಿದಿಯಾ ಬಿಜೆಪಿ?

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚುನಾವಣಾ ಕಾವು ಜೋರಾಗಿದೆ. ದಿಲ್ಲಿ ಗದ್ದುಗೆ ಏರಲು ಆಮ್ ಆದ್ಮಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೊಟಿ ಶುರುವಾಗಿದೆ. ಮೇಲ್ನೊಟಕ್ಕೆ ಮೂರು ಪಕ್ಷಗಳು ಚುನಾವಣಾ ಕಣದಲ್ಲಿದ್ದರೂ ಆಪ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆದಿದೆ.

    ಮತ್ತೊಮ್ಮೆ ಗದ್ದುಗೆ ಏರಲು ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ಆಪ್ ಸಿದ್ದವಾಗಿದ್ದರೇ, ಇತ್ತ ಬಿಜೆಪಿ 27 ವರ್ಷಗಳ ಬಳಿಕ ಚುನಾವಣೆ ಗೆಲ್ಲಲು ತಂತ್ರ ರೂಪಿಸಿದೆ. ಈ ಬಾರಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನೇ ಘೋಷಿಸದೇ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ಸಜ್ಜಾಗಿದೆ.

     1993ರಿಂದ ಇದುವರೆಗೆ ದೆಹಲಿ ವಿಧಾನಸಭೆಗೆ 6 ಚುನಾವಣೆಗಳು ನಡೆದಿದ್ದು, ಈ ಪೈಕಿ ಬಿಜೆಪಿ ಒಮ್ಮೆ ಮಾತ್ರ ಅಧಿಕಾರದ ಚುಕ್ಕಾಣಿ ಹಿಡಿದಿದೆ. 1993ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಸ್ಪರ್ಧಿಸಿ 49 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. 1993ರ ಬಳಿಕ ದೆಹಲಿಯಲ್ಲಿ ಒಟ್ಟು 5 ಬಾರಿ ವಿಧಾನಸಭಾ ಚುನಾವಣೆ ನಡೆದಿದ್ದು, ಯಾವ ಚುನಾವಣೆಯಲ್ಲೂ ಬಿಜೆಪಿ ಇಷ್ಟೊಂದು ಸ್ಥಾನಗಳನ್ನು ಪಡೆದಿಲ್ಲ. 1993ರ ಚುನಾವಣೆಯಲ್ಲಿ ಬಿಜೆಪಿ ಸರ್ವಶ್ರೇಷ್ಠ ಸಾಧನೆ ಮಾಡಿತ್ತು.

    ಇದಾದ ಬಳಿಕ ಮೂರು ಅವಧಿ ಕಾಂಗ್ರೆಸ್ ದೆಹಲಿಯಲ್ಲಿ ಗಟ್ಟಿಯಾಗಿ ನೆಲೆಯೂರಿತ್ತು. ಶೀಲಾ ದೀಕ್ಷಿತ್ ಮುಖ್ಯಮಂತ್ರಿ ಆಗಿ 15 ವರ್ಷಗಳ ಆಡಳಿತ ನಡೆಸಿದ್ದರು. ಶೀಲಾ ಆಡಳಿತದ ಮುಂದೆ ಮಂಕಾಗಿದ್ದು ಬಿಜೆಪಿ 15 ವರ್ಷಗಳ ಕಾಲ ಅಧಿಕಾರ ಹಿಡಿಯಲು ಸಾಧ್ಯವಾಗಿರಲಿಲ್ಲ. 2013ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 31 ಸ್ಥಾನಗಳನ್ನ ಪಡೆದಿತ್ತು. ಆದರೆ ಬಹುಮತ ಸಾಬೀತುಪಡಿಸಲು ಇನ್ನೂ 4 ಶಾಸಕರ ಬೆಂಬಲ ಸಿಗದೆ ಅಧಿಕಾರದಿಂದ ದೂರ ಉಳಿದಿತ್ತು. ಕಾಂಗ್ರೆಸ್ ಆಪ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. 1998ರಲ್ಲಿ 15 ಸ್ಥಾನ, 2003ರಲ್ಲಿ 20 ಸ್ಥಾನ, 2008ರಲ್ಲಿ 23 ಸ್ಥಾನ ಹಾಗೂ 2015ರಲ್ಲಿ ಕೇವಲ 3 ಸ್ಥಾನ ಪಡೆಯುವಲ್ಲಿ ಮಾತ್ರ ಬಿಜೆಪಿ ಯಶಸ್ವಿಯಾಗಿತ್ತು.

    ಬಿಜೆಪಿ ಉತ್ಸಾಹಕ್ಕೆ ಕಾರಣವೇನು?
    ಈ ಬಾರಿಯ ಚುನಾವಣೆ ಬಿಜೆಪಿಗೆ ಬಹುಮುಖ್ಯವಾಗಿದ್ದು ಗೆಲ್ಲಲೇಬೇಕು ಎನ್ನುವ ಹಠಕ್ಕೆ ಬಿದ್ದಿದೆ. ಬಿಜೆಪಿ ಈ ಉತ್ಸಾಹಕ್ಕೆ ಮತ್ತೊಂದು ಕಾರಣ ಮತ ಪ್ರಮಾಣ. ಕಳೆದ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಮತ್ತು ಹೆಚ್ಚು ವೋಟ್ ಶೇರ್ ನ್ನು ಪಡೆದಿತ್ತು. 2008ರಲ್ಲಿ ಶೇ. 36.3 ರಷ್ಟು, 2003ರಲ್ಲಿ ಶೇ. 35.2ರಷ್ಟು, 1998ರಲ್ಲಿ ಶೇ. 34.0, 2013ರಲ್ಲಿ ಶೇ. 33.3ರಷ್ಟು ಹಾಗೂ 2015ರಲ್ಲಿ ಶೇ. 32.3ರಷ್ಟು ಮತಗಳಿಕೆ ಮಾಡಿತ್ತು. ಅಲ್ಲದೆ 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ 7 ಕ್ಷೇತ್ರಗಳಲ್ಲಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಬಿಜೆಪಿ ಪತಾಕೆ ಹಾರಿಸಿತ್ತು.

    ಹೀಗಾಗಿ ಬಿಜೆಪಿ ಈ ಬಾರಿ ಹೆಚ್ಚು ಆಸಕ್ತಿ ಈ ಚುನಾವಣೆ ತೋರಿದ್ದು ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೊಂದಣಿ ಈ ಎರಡು ಕಾಯ್ದೆಗಳ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಬಳಸಿಕೊಂಡು ಚುನಾವಣಾ ಕಣಕ್ಕೆ ಇಳಿದಿದ್ದು ಆಪ್ ಕೂಡ ಕೊಂಚ ಹೆಚ್ಚೇ ಪ್ರತಿಸ್ಪರ್ಧೆ ನೀಡಿದೆ. ಈ ಹೋರಾಟ ನಡುವೆ ಗೆಲುವು ಸಾಧಿಸುವ ಮೂಲಕ ದೆಹಲಿಯಲ್ಲಿ 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲು ಎಲ್ಲಿಲ್ಲದ ಪ್ರಯತ್ನ ನಡೆಸಿದೆ.

  • ದೆಹಲಿ ಚುನಾವಣೆ – ಸಿಎಎ, ಎನ್.ಆರ್.ಸಿ ವಿಚಾರದಲ್ಲಿ ಆಪ್ ಗಪ್ ಚುಪ್

    ದೆಹಲಿ ಚುನಾವಣೆ – ಸಿಎಎ, ಎನ್.ಆರ್.ಸಿ ವಿಚಾರದಲ್ಲಿ ಆಪ್ ಗಪ್ ಚುಪ್

    ನವದೆಹಲಿ: ದೇಶದ್ಯಾಂತ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿಚಾರದಲ್ಲಿ ಆಮ್ ಆದ್ಮಿ ಪಕ್ಷ ಅಂತರ ಕಾಯ್ದುಕೊಳ್ಳುತ್ತಿದೆ. ವಿಪಕ್ಷಗಳ ಸಭೆಯಿಂದ ದೂರ ಉಳಿದಿದ್ದ ಆಮ್ ಅದ್ಮಿ ಚುನಾವಣಾ ಪ್ರಚಾರಗಳಲ್ಲೂ ಈ ಬಗ್ಗೆ ಸೊಲ್ಲೇತ್ತುತ್ತಿಲ್ಲ.

    ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಆಪ್ ಎಚ್ಚರಿಕೆ ಹೆಜ್ಜೆ ಇಡಲು ಆರಂಭಿಸಿದೆ. ಸಿಎಎ ಮತ್ತು ಎನ್.ಆರ್.ಸಿ ವಿಚಾರದಲ್ಲಿ ತಟಸ್ಥವಾಗುವ ಮೂಲಕ ತನ್ನ ಮತಗಳನ್ನು ಕ್ರೋಡಿಕರಿಸುವ ಕೆಲಸಕ್ಕೆ ಮುಂದಾಗಿದೆ. ಬಿಜೆಪಿ ಸಿಎಎ ಎನ್.ಆರ್.ಸಿಯನ್ನೆ ಬಂಡವಾಳ ಮಾಡಿಕೊಂಡು ಮತ ಬೇಟೆಗೆ ಇಳಿದಿದೆ. ಇತ್ತ ಕಾಂಗ್ರೆಸ್ ಈ ಎರಡು ಅಂಶಗಳನ್ನು ತೀವ್ರವಾಗಿ ವಿರೋಧಿಸಿದೆ. ಆಪ್ ಮಾತ್ರ ತಟಸ್ಥ ನೀತಿ ಅನುಸರಿಸುವ ಮೂಲಕ ಎರಡು ಬದಿಯ ಮತಗಳನ್ನು ಸೆಳೆಯುವ ತಂತ್ರ ಮಾಡುತ್ತಿದೆ.

    ಸಿಎಎ ಮತ್ತು ಎನ್.ಆರ್.ಸಿ ವಿರೋಧದಿಂದ ದೆಹಲಿಯಲ್ಲಿರುವ ಹೆಚ್ಚಿನ ಸಂಖ್ಯೆಯ ಜಾಟ್, ಗುಜ್ಜರ್, ಪಂಜಾಬಿ ಮತ್ತು ಪೂರ್ವಾಂಚಲ ಮತಗಳಲ್ಲಾಗುವ ಬದಲಾವಣೆಗಳನ್ನು ಊಹಿಸಲು ಕ್ಲಿಷ್ಟವಾಗಿದ್ದರಿಂದ ಆಪ್ ಪಕ್ಷವು ಸಿಎಎ ಮತ್ತು ಎನ್.ಆರ್.ಸಿ ಕುರಿತು ಪರ-ವಿರೋಧದ ನಿಲುವು ತಾಳದೆ ತಟಸ್ಥವಾಗಿದೆ. ಸಿಎಎ ತಿದ್ದುಪಡಿ ಕಾಯ್ದೆ ಜಾರಿ ಆದ ನಂತರ ನಡೆದ ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡರು ಮತಗಳಿಕೆಯಲ್ಲಿ ಕಳೆದ ಬಾರಿಗಿಂತ ಈ ಚುನಾವಣೆಯಲ್ಲಿ ಏರಿಕೆ ಕಂಡಿದೆ. ಇದೇ ಕಾರಣದಿಂದ ಆಪ್ ಈ ನಿಲುವು ತಾಳಿದೆ ಎನ್ನಲಾಗಿದೆ.

    ಸಿಎಎ ಎನ್.ಆರ್.ಸಿ ತಟಸ್ಥ ನೀತಿಯಿಂದ ದೆಹಲಿಯಲ್ಲಿರುವ ಮುಸ್ಲಿಂ ಹಾಗೂ ಹಿಂದೂಳಿದ ವರ್ಗಗಳ ಮತಗಳನ್ನು ಸೆಳೆಯಬಹುದು. ಜೊತೆಗೆ ಆಪ್ ಸರ್ಕಾರವನ್ನು ಶ್ಲಾಘಿಸುವ ಮೇಲ್ವರ್ಗದ ವೋಟ್‍ಗಳು, ದೆಹಲಿ ಹೊರ ವಲಯದಲ್ಲಿರುವ ನಿರಾಶ್ರಿತರ ವೋಟ್‍ಗಳನ್ನು ಗಳಿಸಬಹುದು ಎಂಬುದು ಆಪ್ ಲೆಕ್ಕಾಚಾರ. ಸಿಎಎ ಅಥವಾ ಎನ್.ಆರ್.ಸಿ ವಿಚಾರದಲ್ಲಿ ಯಾವುದಾದರೂ ಒಂದು ನಿರ್ಧಾರಕ್ಕೆ ಬಂದಲ್ಲಿ ವೋಟ್ ಬ್ಯಾಂಕ್‍ಗೆ ಧಕ್ಕೆ ಆಗಬಹುದು ಎನ್ನುವ ಲೆಕ್ಕಾಚಾರದಲ್ಲಿ ಎಚ್ಚರಿಯ ಹೆಜ್ಜೆ ಇಡುತ್ತಿದೆ.

  • ನಾನು ಜಿಲೇಬಿ ತಿನ್ನುವುದರಿಂದ ದೆಹಲಿಯಲ್ಲಿ ಮಾಲಿನ್ಯವಾದ್ರೆ ತ್ಯಜಿಸುತ್ತೇನೆ: ಗಂಭೀರ್

    ನಾನು ಜಿಲೇಬಿ ತಿನ್ನುವುದರಿಂದ ದೆಹಲಿಯಲ್ಲಿ ಮಾಲಿನ್ಯವಾದ್ರೆ ತ್ಯಜಿಸುತ್ತೇನೆ: ಗಂಭೀರ್

    ನವದೆಹಲಿ: ನಾನು ಜಿಲೇಬಿ ತಿನ್ನುವುದರಿಂದ ದೆಹಲಿಯಲ್ಲಿ ಮಾಲಿನ್ಯವಾದರೆ ಅದನ್ನು ತ್ಯಜಿಸುತ್ತೇನೆ ಎಂದು ದೆಹಲಿ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ವೈರಲ್ ಆಗಿರುವ ಫೋಟೋ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

    ಕಳೆದ ವಾರ ಭಾರತ-ಬಾಂಗ್ಲಾ ಟೆಸ್ಟ ಕ್ರಿಕೆಟ್ ವೇಳೆ ಗಂಭೀರ್ ಮಾಜಿ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷಣ್ ಅವರ ಜೊತೆ ಜಿಲೇಬಿ ತಿನ್ನುತ್ತಿರುವ ಫೋಟೋ ವೈರಲ್ ಆಗಿತ್ತು. ಈಗ ಈ ಫೋಟೋ ಬಗ್ಗೆ ಗಂಭೀರ್ ಸಮರ್ಥನೆ ನೀಡಿದ್ದಾರೆ. “ನಾನು ಜಿಲೇಬಿ ತಿನ್ನುವುದರಿಂದ ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾದರೆ ನಾನು ಶಾಶ್ವತವಾಗಿ ಜಿಲೇಬಿ ತಿನ್ನುವುದನ್ನು ಬಿಟ್ಟು ಬಿಡುತ್ತೇನೆ. 10 ನಿಮಿಷಗಳಲ್ಲಿ ನನ್ನನ್ನು ಟ್ರೋಲ್ ಮಾಡಲು ಶುರು ಮಾಡಿದ್ದೀರಿ, ಇದೇ ಪರಿಶ್ರಮವನ್ನು ಮಾಲಿನ್ಯ ಕಡಿಮೆ ಮಾಡಲು ಮಾಡಿದ್ದರೆ ನಾವು ಉಸಿರಾಡಬಹುದಿತ್ತು” ಎಂದು ಗಂಭೀರ್ ಹೇಳಿದ್ದಾರೆ.

    ನಾನು ಮಾಲಿನ್ಯಕ್ಕಾಗಿ 5 ತಿಂಗಳು ಕೆಲಸ ಮಾಡಿದ್ದೇನೆ. ನಾನು ಮಾಲಿನ್ಯಕ್ಕಾಗಿ ಸ್ಪ್ರಿಂಕ್ಲರ್ ಮಿಶೀನ್, ವಾಕ್ಯೂಂ ಕ್ಲೀನರ್ ಖರೀದಿಸಿದ್ದೇನೆ. ಮಾಲಿನ್ಯ ವಿಷಯವನ್ನು ನಾನು ಹಾಗೂ ದೆಹಲಿ ಜನತೆ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಆದರೆ ಆಮ್ ಆದ್ಮಿ ಪಕ್ಷದವರು ಗಂಭೀರವಾಗಿ ತೆಗೆದುಕೊಂಡಿಲ್ಲ. ಮಾಲಿನ್ಯ ತಡೆಯಲು ಅವರು 5 ವರ್ಷದಲ್ಲಿ ಏನನ್ನೂ ಖರೀದಿಸಿದ್ದಾರೆ ಎಂದು ನೀವೇ ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಶ್ನಿಸಿ ಎಂದು ಗಂಭೀರ್ ಗರಂ ಆದರು.

    ಸಭೆಯಲ್ಲಿ ಏಕೆ ಭಾಗವಹಿಸಲಿಲ್ಲ ಎಂದು ಪ್ರಶ್ನಿಸಿದಾಗ, ನಿಮಗೆ ಸಭೆ ಮುಖ್ಯನಾ? ನನ್ನ ಕೆಲಸ ಮುಖ್ಯವೇ? ನಾನು 5 ತಿಂಗಳಲ್ಲಿ ಮಾಡಿದ ಕೆಲಸವನ್ನು ಹೇಳಿದ್ದೇನೆ. ಹಾಗೆಯೇ ನೀವು 5 ವರ್ಷದಲ್ಲಿ ಅವರು ಮಾಡಿದ ಕೆಲಸವನ್ನು ಕೇಳಿ. 11 ರಂದು ಸಭೆ ಇದೆ ಎಂದು ನನಗೆ ಮೇಲ್ ಬಂದಾಗ ನನ್ನ ಕಾಂಟ್ರ್ಯಾಕ್ಟ್ ಇದೆ ಹಾಗೂ ನಾನು ಜನರಿಗೆ ಮನರಂಜನೆ ನೀಡಬೇಕು ಎಂದು ನಾನು ಅದೇ ದಿನ ಹೇಳಿದೆ. ಎಲ್ಲರೂ ಟ್ರೋಲ್ ಮಾಡುವುದನ್ನು ಬಿಟ್ಟು 5 ತಿಂಗಳು ನಾನು ಮಾಡಿದ ಕೆಲಸದ ಬಗ್ಗೆ ಮಾತನಾಡಿ ಎಂದರು.

    ಇತ್ತೀಚೆಗೆ ಗೌತಮ್ ಗಂಭೀರ್ ಕಾಣೆಯಾಗಿದ್ದಾರೆ ಎಂಬ ಪೋಸ್ಟರ್ ನವದೆಹಲಿಯ ಐಟಿಒ ಇಲಾಖೆಯ ಗೋಡೆ ಹಾಗೂ ಮರಗಳ ಮೇಲೆ ಅಂಟಿಸಲಾಗಿತ್ತು. ಪೋಸ್ಟರ್ ನಲ್ಲಿ, “ನೀವು ಗೌತಮ್ ಗಂಭೀರ್ ಅವರನ್ನು ಎಲ್ಲಿಯಾದರೂ ನೋಡಿದ್ದೀರಾ. ಇವರು ಕೊನೆಯ ಬಾರಿಗೆ ಇಂದೋರ್‍ನಲ್ಲಿ ಜಿಲೇಬಿ ತಿನ್ನುವಾಗ ಕಾಣಿಸಿಕೊಂಡಿದ್ದರು. ಅದಾದ ಬಳಿಕ ಇವರು ಕಾಣೆಯಾಗಿದ್ದಾರೆ. ಇಡೀ ದೆಹಲಿಯಲ್ಲಿ ಇವರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ” ಎಂದು ಬರೆಯಲಾಗಿತ್ತು.