Tag: Aam Admi

  • ಬಿಜೆಪಿ ಸಂಸದ ಗೌತಮ್ ಗಂಭೀರ್ ಕಾಣೆ!

    ಬಿಜೆಪಿ ಸಂಸದ ಗೌತಮ್ ಗಂಭೀರ್ ಕಾಣೆ!

    ನವದೆಹಲಿ: ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್ ಕಾಣೆಯಾಗಿದ್ದಾರೆ ಎಂಬ ಪೋಸ್ಟರ್ ನವದೆಹಲಿಯ ಐಟಿಒ ಇಲಾಖೆಯ ಗೋಡೆ ಹಾಗೂ ಮರಗಳ ಮೇಲೆ ಅಂಟಿಸಲಾಗಿದೆ.

    ಪೋಸ್ಟರ್ ನಲ್ಲಿ, “ನೀವು ಗೌತಮ್ ಗಂಭೀರ್ ಅವರನ್ನು ಎಲ್ಲಿಯಾದರೂ ನೋಡಿದ್ದೀರಾ. ಇವರು ಕೊನೆಯ ಬಾರಿಗೆ ಇಂದೋರ್ ನಲ್ಲಿ ಜಿಲೇಬಿ ತಿನ್ನುವಾಗ ಕಾಣಿಸಿಕೊಂಡಿದ್ದರು. ಅದಾದ ಬಳಿಕ ಇವರು ಕಾಣೆಯಾಗಿದ್ದಾರೆ. ಇಡೀ ದೆಹಲಿಯಲ್ಲಿ ಇವರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ” ಎಂದು ಬರೆಯಲಾಗಿದೆ.

    ಇತ್ತೀಚೆಗೆ ಮಾಲಿನ್ಯ ನಿಯಂತ್ರಣ ಬಗ್ಗೆ ಸಭೆಯೊಂದು ನಡೆಯಿತು. ಈ ಸಭೆಯಲ್ಲಿ ಗೌತಮ್ ಗಂಭೀರ್ ಭಾಗವಹಿಸಬೇಕಿತ್ತು. ಆದರೆ ಅವರು ಆ ದಿನ ಇಂದೋರ್ ನಲ್ಲಿ ಇದ್ದರು. ಅಲ್ಲಿ ಅವರು ಭಾರತ ಮತ್ತು ಬಾಂಗ್ಲಾದೇಶದ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಕಾಮೆಂಟರಿ ನೀಡುತ್ತಿದ್ದರು.

    ಈ ನಡುವೆ ಗಂಭೀರ್ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಅವರ ಜೊತೆ ಜಿಲೇಬಿ ತಿನ್ನುತ್ತಿರುವ ಫೋಟೋ ವೈರಲ್ ಆಗಿತ್ತು. ಇದಾದ ಬಳಿಕ, ಮಾಲಿನ್ಯಕ್ಕೆ ಸಂಬಂಧಿಸಿದ ಉನ್ನತ ಮಟ್ಟದ ಸಭೆಗೆ ಗೈರಾದ ಕಾರಣ ಆಮ್ ಆದ್ಮಿ ಪಕ್ಷ ಗೌತಮ್ ವಿರುದ್ಧ ಕಿಡಿಕಾರಿತ್ತು.

    ಅಲ್ಲದೆ ಮಾಲೀನ್ಯದ ಬಗ್ಗೆ ರಾಜಕೀಯ ಬಂದಾಗ ಗೌರಮ್ ಗಂಭೀರ್ ಯಾವಾಗಲೂ ಮುಂದಿರುತ್ತಾರೆ. ಆದರೆ ಮಾಲೀನ್ಯವನ್ನು ನಿಭಾಯಿಸುವ ಕ್ರಮಗಳ ಚರ್ಚೆಯಲ್ಲಿ ಅವರು ಭಾಗವಹಿಸುವುದಿಲ್ಲ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.