Tag: AAP Protest

  • ಹೋಳಿ ಹಬ್ಬಕ್ಕೆ ಉಚಿತ ಸಿಲಿಂಡರ್ ನೀಡದ ಬಿಜೆಪಿ: ಜುಮ್ಲಾ ಪಾರ್ಟಿ ಎಂದು ಕುಟುಕಿದ ಆಪ್

    ಹೋಳಿ ಹಬ್ಬಕ್ಕೆ ಉಚಿತ ಸಿಲಿಂಡರ್ ನೀಡದ ಬಿಜೆಪಿ: ಜುಮ್ಲಾ ಪಾರ್ಟಿ ಎಂದು ಕುಟುಕಿದ ಆಪ್

    ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನದಂದು ಮಹಿಳೆಯರ ಖಾತೆಗೆ 2500 ರೂ. ಹಾಗೂ ಹೋಳಿಯಂದು ಉಚಿತ ಸಿಲಿಂಡರ್ ನೀಡುವ ಭರವಸೆ ನೀಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಮಾತು ಮರೆತಿದ್ದು ಮಹಿಳೆಯರ ಖಾತೆಗೆ ಹಣವೂ ಹಾಕಿಲ್ಲ. ಇತ್ತ ಹೋಳಿ ಹಬ್ಬಕ್ಕೆ ಉಚಿತ ಸಿಲಿಂಡರ್ ಕೂಡಾ ನೀಡಿಲ್ಲ. ಬಿಜೆಪಿಯು ಜುಮ್ಲಾ ಪಾರ್ಟಿ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

    ಉಚಿತ ಸಿಲಿಂಡರ್ ನೀಡದ ವಿಚಾರವನ್ನು ಮುಂದಿಟ್ಟುಕೊಂಡು ದೆಹಲಿಯ 40ಕ್ಕೂ ಅಧಿಕ ಸ್ಥಳಗಳಲ್ಲಿ ಆಪ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಐಟಿಒದಲ್ಲಿ ಬ್ಯಾನರ್‌ಗಳನ್ನು ಹಾಕಿ, ಪ್ರತಿಭಟಿಸಿದರು. ಸಂಚಾರಕ್ಕೆ ಸಮಸ್ಯೆಯಾದ ಹಿನ್ನೆಲೆ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಇದನ್ನೂ ಓದಿ: ನನ್ನ ಹತ್ರ ಇಂಟೆಲಿಜೆನ್ಸ್ ಇಲ್ಲ, ಗೃಹ ಸಚಿವರು, ಸಿಎಂ ಸಾಹೇಬ್ರಿಗೆ ಗೊತ್ತು – ಲಕ್ಷ್ಮೀ ಹೆಬ್ಬಾಳ್ಕರ್

    ಹೋಳಿಯಂದು ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವ ಭರವಸೆಯನ್ನು ಈಡೇರಿಸದ ಬಿಜೆಪಿ ನೇತೃತ್ವದ ದೆಹಲಿ ಸರ್ಕಾರವನ್ನು ಎಎಪಿ ನಾಯಕ ಪ್ರವೀಣ್ ಕುಮಾರ್ ತರಾಟೆಗೆ ತೆಗೆದುಕೊಂಡರು. ಬಿಜೆಪಿಯ ಪ್ರತಿಯೊಂದು ಭರವಸೆಯನ್ನು ಜುಮ್ಲಾವಾಗಿದೆ. ಬಿಜೆಪಿಗೆ ಮತ ಹಾಕಿದ ಮಹಿಳೆಯರು ಉಚಿತ ಸಿಲಿಂಡರ್‌ಗಳು ಸಿಗುತ್ತವೆ. ಆದರೆ ಇನ್ನೂ ಸಿಲಿಂಡರ್‌ಗಳು ಸಿಕ್ಕಿಲ್ಲ ಎಂಬುದು ತುಂಬಾ ದುಃಖಕರ ಎಂದು ಹೇಳಿದರು. ಇದನ್ನೂ ಓದಿ: ರನ್ಯಾರಾವ್ ಕೇಸ್; ಸಿಬಿಐ ತನಿಖೆ ಮುಗಿಯುವ ತನಕ ಬಿಜೆಪಿಯವರು ಕಾಯಬೇಕು: ಸತೀಶ್ ಜಾರಕಿಹೊಳಿ

    ಗುರುವಾರ ಹೋಳಿ ಹಬ್ಬವಾಗಿದೆ ಆದರೆ ಜನರಿಗೆ ಇನ್ನೂ ಉಚಿತ ಸಿಲಿಂಡರ್‌ಗಳು ಸಿಕ್ಕಿಲ್ಲ. ಅವರು ಇನ್ನೂ 1000 ರೂ. ಪಾವತಿಸಬೇಕಾಗಿದೆ. ಬಿಜೆಪಿಯ ಪ್ರತಿಯೊಂದು ಭರವಸೆಯೂ ಮಹಿಳೆಯರಿಗೆ 2500 ರೂ. ನೀಡುವುದಾಗಲಿ ಅಥವಾ ಉಚಿತ ಸಿಲಿಂಡರ್‌ಗಳನ್ನು ನೀಡುವುದಾಗಲಿ `ಜುಮ್ಲಾ’ ಆಗಿ ಬದಲಾಗುತ್ತಿದೆ. ಈ ಎರಡೂ ಭರವಸೆಗಳು `ಜುಮ್ಲಾ’ ಆಗಿ ಮಾರ್ಪಟ್ಟಿವೆ ಎಂದು ಹೇಳಿದರು. ಇದನ್ನೂ ಓದಿ: ಡೆಲ್ಲಿ ಅಂಗಳ ತಲುಪಿದ ನಟಿ ರನ್ಯಾ ರಾವ್ ಕೇಸ್: ಇಬ್ಬರು ಸಚಿವರು ಸೇಫ್

    ವಿರೋಧ ಪಕ್ಷದ ನಾಯಕಿ ಅತಿಶಿ ಮಾತನಾಡಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಚುನಾವಣೆಗೆ ಮುನ್ನ ದೆಹಲಿಯ ಮಹಿಳೆಯರಿಗೆ ಹಲವು ಭರವಸೆಗಳನ್ನು ನೀಡಿದ್ದರು. ಮಾ. 8ರೊಳಗೆ ಮಹಿಳೆಯರಿಗೆ 2500 ರೂ. ನೀಡುವ ಭರವಸೆ ಕೇವಲ ಘೋಷಣೆ ಹಾಗೂ ವಂಚನೆಯಾಗಿ ಉಳಿದಿದೆ. ಹೋಳಿ, ದೀಪಾವಳಿಯಂದು ಪ್ರತಿ ಮಹಿಳೆಗೆ ಉಚಿತ ಸಿಲಿಂಡರ್ ನೀಡುವುದಾಗಿ ಮತ್ತೊಂದು ಭರವಸೆ ನೀಡಲಾಗಿತ್ತು. ದೆಹಲಿಯ ಮಹಿಳೆಯರು ಉಚಿತ ಸಿಲಿಂಡರ್‌ಗಳಿಗಾಗಿ ಕಾಯುತ್ತಿದ್ದಾರೆ ಎಂದರು. ಇದನ್ನೂ ಓದಿ: ‘ಟಾಕ್ಸಿಕ್’ ಅದ್ಭುತವಾಗಿದೆ: ಯಶ್ ಕುರಿತು ಹಾಲಿವುಡ್ ಸ್ಟಂಟ್ ಮಾಸ್ಟರ್ ಗುಣಗಾನ

    ರಾಜ್ಯ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಪ್ರತಿಕ್ರಿಯಿಸಿ, ಆಪ್ ಪತನದತ್ತ ಸಾಗುತ್ತಿದೆ. ಮುಂದೆ ಅದು ವಿರೋಧ ಪಕ್ಷದ ಸ್ಥಾನಮಾನವನ್ನೂ ಕಳೆದುಕೊಳ್ಳುವ ದಿನ ದೂರವಿಲ್ಲ. ಮಹಿಳಾ ಸಮೃದ್ಧಿ ಯೋಜನೆಯ ಬಗ್ಗೆ ಅವರು ದೆಹಲಿಯ ಜನರ ದಾರಿ ತಪ್ಪಿಸುತ್ತಿದ್ದಾರೆ. ಮಾ. 8ರಂದು ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಈ ಯೋಜನೆಯ ಕುರಿತು ಬಜೆಟ್ ಮತ್ತು ಕಾಲಮಿತಿಯ ಘೋಷಣೆ ಮಾಡಿದ್ದರು ಎಂದು ಆಮ್ ಆದ್ಮಿ ಹೋರಾಟಕ್ಕೆ ತಿರುಗೇಟು ನೀಡಿದರು. ಇದನ್ನೂ ಓದಿ: ಉಪಗ್ರಹಗಳ ಅನ್‌ಡಾಕ್ ಕಾರ್ಯ ಯಶಸ್ವಿ – ಇಸ್ರೋ ಮತ್ತೊಂದು ಸಾಧನೆ; ಚಂದ್ರಯಾನ-4ಕ್ಕೆ ದಾರಿ

    ಇದರ ಬಳಿಕ ಈಗ ಹೋಳಿಯಂದು ಗ್ಯಾಸ್ ಸಿಲಿಂಡರ್‌ಗಳ ಬಗ್ಗೆ ದಾರಿತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ಉಚಿತ ಅನಿಲ ಸಿಲಿಂಡರ್‌ನಂತಹ ದೊಡ್ಡ ಯೋಜನೆಯನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆಗಳು ಮತ್ತು ನಿಯಮಗಳನ್ನು ರೂಪಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಬಿಜೆಪಿ ಆಡಳಿತವಿರುವ ಇತರೇ ರಾಜ್ಯಗಳಲ್ಲಿ ನಿಯಮಿತವಾಗಿ ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡಲಾಗುತ್ತಿದ್ದು, ಶೀಘ್ರದಲ್ಲೇ ದೆಹಲಿಯಲ್ಲೂ ನೀಡಲಾಗುವುದು ಎಂದರು.

  • ನಿರ್ಭಯಾಗೆ ನ್ಯಾಯ ಕೊಡಿಸಲು ಬೀದಿಗಿಳಿದ ಕಾಲವಿತ್ತು – ಈಗ ಯಾರಿಗಾಗಿ ಬೀದಿಗಿಳಿದಿದ್ದೀರಿ?- ಮಲಿವಾಲ್‌ ಕಿಡಿ

    ನಿರ್ಭಯಾಗೆ ನ್ಯಾಯ ಕೊಡಿಸಲು ಬೀದಿಗಿಳಿದ ಕಾಲವಿತ್ತು – ಈಗ ಯಾರಿಗಾಗಿ ಬೀದಿಗಿಳಿದಿದ್ದೀರಿ?- ಮಲಿವಾಲ್‌ ಕಿಡಿ

    – ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ಬಂಧನ – ಬಿಜೆಪಿ ಪ್ರಧಾನ ಕಚೇರಿ ಎದುರು ಪ್ರತಿಭಟನೆಗೆ ಆಪ್‌ ಸಜ್ಜು

    ನವದೆಹಲಿ: ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ಬಂಧನ (Bibhav Kumar Arrest) ಖಂಡಿಸಿ ಆಪ್‌ ಬೃಹತ್‌ ಪ್ರತಿಭಟನೆಗೆ ಸಜ್ಜಾಗಿದೆ.

    ದೆಹಲಿ ಸಿಎಂ & ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಸುತ್ತಲೂ ಬಿಗಿ ಭದ್ರೆತೆಯನ್ನು ನಿಯೋಜಿಸಲಾಗಿದೆ. ದೆಹಲಿಯ ಟಾಪ್‌ ಅಧಿಕಾರಿಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ಹಾಗೂ ವಿವಿಧ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

    ಈ ನಡುವೆ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸ್ವಾತಿ ಮಲಿವಾಲ್‌, ಆಪ್‌ ಪ್ರತಿಭಟನೆಗೆ (AAP Protest) ವಿರೋಧ ವ್ಯಕ್ತಪಡಿಸಿದ್ದಾರೆ. ನಿರ್ಭಯಾಗೆ ನ್ಯಾಯ ಕೊಡಿಸಲು ನಾವೆಲ್ಲ ಬೀದಿಗಿಳಿದ ಕಾಲವೊಂದಿತ್ತು. ಆದರಿಂದು 12 ವರ್ಷಗಳ ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಕಣ್ಮರೆಯಾಗುವಂತೆ ಮಾಡಿ ಫೋನ್ ಫಾರ್ಮಾಟ್ ಮಾಡಿದ ಆರೋಪಿಗಳನ್ನು ಉಳಿಸಲು ಬೀದಿಗಿಳಿದಿದ್ದೇವೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

    ಇದೇ ವೇಳೆ ಸಚಿವ ಮನಿಷ್‌ ಸಿಸೋಡಿಯಾ ಪರ ಮಾತನಾಡಿರುವ ಮಲಿವಾಲ್‌, ಮನೀಶ್ ಸಿಸೋಡಿಯಾಜಿ (Manish Sisodia) ಅವರಿಗಾಗಿ ಇಷ್ಟು ಬಲಪ್ರಯೋಗ ಮಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದೆ. ಅವರು ಇಲ್ಲಿ ಇದ್ದಿದ್ದರೆ ಬಹುಶಃ ನನ್ನ ಮೇಲೆ ಹಲ್ಲೆ ನಡೆಯುತ್ತಿರಲಿಲ್ಲ ಎಂದು ಭಾವುಕರಾಗಿದ್ದಾರೆ.

    ನಿನ್ನೆಯಷ್ಟೇ ಬಂಧನ:
    ಸ್ವಾತಿ ಮಲಿವಲ್‌ ಮೇಲೆ ದೌರ್ಜನ್ಯ ಎಸಗಿದ ದೆಹಲಿ ಸಿಎಂ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅವರನ್ನು ಪೊಲೀಸರು ಶನಿವಾರವಷ್ಟೇ ಬಂಧಿಸಿದ್ದರು. ಇದೇ ಮೇ 13 ರಂದು ಸಿಎಂ ನಿವಾಸದಲ್ಲಿ ತನ್ನ ಮೇಲೆ ಬಿಭವ್‌ ಕುಮಾರ್‌ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಲಿವಾಲ್‌ ದೂರು ನೀಡಿದ್ದರು. ಸ್ವಾತಿ ಮಲಿವಾಲ್‌ ದೂರಿನ ಬೆನ್ನಲ್ಲೇ ವಿಧಿವಿಜ್ಞಾನ ತಜ್ಞರು, ಪೊಲೀಸರ ತಂಡ ಶುಕ್ರವಾರ ಸಂಜೆ ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿತ್ತು. ತನಿಖೆಯ ಭಾಗವಾಗಿ ವಿಡಿಯೋ ಸೆರೆ ಹಿಡಿದ ನಂತರ ಶನಿವಾರ ನಸುಕಿನ ಜಾವ 2:15ಕ್ಕೆ ತಂಡ ಸಿಎಂ ನಿವಾಸದಿಂದ ಹೊರಬಂದಿತ್ತು.

    ಎಲ್ಲರನ್ನೂ ಜೈಲಿಗೆ ಹಾಕಿ:
    ಆಪ್ತನ ಬಂಧನದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಅರವಿಂದ್‌ ಕೇಜ್ರಿವಾಲ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ನಾಯಕರು ಆಪ್ ಪಕ್ಷದ ಹಿಂದೆ ಬಿದ್ದಿದ್ದಾರೆ. ಒಬ್ಬರಾದ ಬಳಿಕ ಒಬ್ಬರಂತೆ ನಮ್ಮ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ. ಮನೀಶ್ ಸಿಸೋಡಿಯ, ಸತ್ಯೇಂದ್ರ ಜೈನ್, ಸಂಜಯ್ ಸಿಂಗ್ ಮತ್ತು ನನ್ನನ್ನು ಜೈಲಿಗೆ ಹಾಕಲಾಯಿತು. ಈಗ ನನ್ನ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ. ನಾವು ಸಹ ಬಿಜೆಪಿ ಕಚೇರಿಗೆ ಬರಲಿದ್ದೇವೆ. ಯಾರ‍್ಯಾರನ್ನು ಜೈಲಿಗೆ ಹಾಕಬೇಕು ಒಟ್ಟಿಗೆ ಹಾಕಿ. ಹೀಗೆ ಜೈಲಿಗೆ ಹಾಕಿ ಆಪ್ ಪಕ್ಷವನ್ನು ನಾಶ ಮಾಡಬೇಕು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ಆಪ್ ಪಕ್ಷ ಒಂದೇ ಚಿಂತನೆಯಾಗಿದೆ. ಇದನ್ನು ನಾಶ ಮಾಡಲು ಪ್ರಯತ್ನಿಸಿದಷ್ಟು ಈ ಚಿಂತನೆ ದೇಶದಲ್ಲಿ ಹೆಚ್ಚಲಿದೆ ಎಂದು ಬಿಜೆಪಿಗೆ ಸವಾಲು ಹಾಕಿದ್ದರು.