Tag: aap

  • ಆಪ್‍ನಿಂದ `ಮಾಫಿಯಾ ಮುಕ್ತವಾಗಲಿದೆ ಪಂಜಾಬ್’: ಕಾಂಗ್ರೆಸ್ ಮುಖಭಂಗಕ್ಕೆ ಕಾರಣವಾಯ್ತು ಸಿಧು ಹೇಳಿಕೆ

    ಆಪ್‍ನಿಂದ `ಮಾಫಿಯಾ ಮುಕ್ತವಾಗಲಿದೆ ಪಂಜಾಬ್’: ಕಾಂಗ್ರೆಸ್ ಮುಖಭಂಗಕ್ಕೆ ಕಾರಣವಾಯ್ತು ಸಿಧು ಹೇಳಿಕೆ

    ನವದೆಹಲಿ: ಪಂಜಾಬ್‍ನಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನವಜೋತ್ ಸಿಂಗ್ ಸಿಧು ಅವರು ಆಮ್ ಆದ್ಮಿ ಪಕ್ಷವನ್ನು ಹಾಡಿ ಹೊಗಳಿದ್ದಾರೆ. ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್‍ಗೆ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

    ಮಾನ್ ಅವರು `ಮಾಫಿಯಾ ಮುಕ್ತ ಯುಗ ಆರಂಭಿಸಿದ್ದಾರೆ’ ಎಂಬ ಹೇಳಿಕೆ ನೀಡಿರುವುದು ಮತ್ತೊಮ್ಮೆ ಕಾಂಗ್ರೆಸ್ ಮುಖಭಂಗಕ್ಕೆ ಕಾರಣವಾಗಿದೆ. ತನ್ನ ಪಕ್ಷದ ಸೋಲಿನ ನಂತರ, ಆಪ್ ಅನ್ನು ಆಯ್ಕೆ ಮಾಡುವ ಅತ್ಯುತ್ತಮ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಪಂಜಾಬ್‍ನ ಜನರನ್ನು ಅಭಿನಂದಿಸುತ್ತೇನೆ ಎಂದೂ ಅವರು ಶ್ಲಾಘಿಸಿದ್ದಾರೆ. ಭಗವಂತ್ ಮಾನ್ ಪಂಜಾಬ್‍ನ್ನು ಮಾಫಿಯಾ ಮುಕ್ತ ಮಾಡುತ್ತಾರೆ ಎಂಬ ನಿರೀಕ್ಷೆಯಿದೆ. ಜೊತೆಗೆ ಪಂಜಾಬ್ ಅನ್ನು ಪುನರುಜ್ಜೀವನ ಹಾದಿಯಲ್ಲಿ ಮುನ್ನಡೆಸಲಿದ್ದು, ಜನರ ನಿರ್ಧಾರ ಯಾವಾಗಲೂ ಉತ್ತಮವಾಗಿಯೇ ಇರುತ್ತದೆ ಎಂದು ಅವರು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ಪಂಜಾಬ್‍ನಲ್ಲಿ ತಮ್ಮದೇ ಸರ್ಕಾರ ಇದ್ದರೂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿತು. 2017ರ ಚುನಾವಣೆಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದ ಎಎಪಿಗೆ ಕಾಂಗ್ರೆಸ್ ನಾಯಕರ ಒಳಜಗಳ, ಕಾಂಗ್ರೆಸ್ ಮೇಲಿನ ಜನರ ನಿರಾಸಕ್ತಿ, ದೆಹಲಿ ಮಾದರಿಯೆಡೆಗೆ ಜನರ ಆಕರ್ಷಣೆ ಮೊದಲಾದ ವಿಚಾರಗಳು ವರದಾನವಾಗಿ ಪರಿಣಮಿಸಿತು. ಇದನ್ನೂ ಓದಿ: ರಷ್ಯಾದ ಪಡೆಯಿಂದ ಕಿಡ್ನಾಪ್ ಆಗಿದ್ದ ಉಕ್ರೇನ್‍ ಮೇಯರ್ ಬಿಡುಗಡೆ

    ಸಿಧು ಅವರು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರೊಂದಿಗೆ ಮುಖಾಮುಖಿಯಾಗಿದ್ದರು. ಅವರು ಡ್ರಗ್ ಮಾಫಿಯಾವನ್ನು ರಕ್ಷಿಸುತ್ತಿದ್ದಾರೆ. ಸೂಕ್ಷ್ಮವಾದ ಪ್ರಕರಣದಲ್ಲಿ ಆರೋಪಿತರಾದ ರಾಜಕೀಯ ಪ್ರತಿಸ್ಪರ್ಧಿಗಳ ಬಗ್ಗೆ ಮೃದು ಸ್ವಭಾವದಿಂದ ವರ್ತಿಸುತ್ತಿದ್ದು, ಕ್ರಮ ಕೈಗೊಳ್ಳುವಲ್ಲಿಯೂ ಹಿಂದೇಟು ಹಾಕುತ್ತಿದ್ದಾರೆ ಎಂದು ಕ್ಯಾಪ್ಟನ್ ವಿರುದ್ಧ ಆರೋಪಿಸಿದ್ದರು. ಈ ಒಳಜಗಳ ಅಮರೀಂದರ್ ರಾಜೀನಾಮೆಗೆ ಕಾರಣವಾಯಿತು. ನಂತರ ಕ್ಯಾಪ್ಟನ್ ಕಾಂಗ್ರೆಸ್ ತೊರೆದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರು. ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳ ಮುಂಚಿತವಾಗಿ ಚರಣ್‍ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. ಅಮರೀಂದರ್ ಸಿಂಗ್ ಅವರ ಪದಚ್ಯುತಿಯ ನಂತರ ಮುಖ್ಯಮಂತ್ರಿ ಸ್ಥಾನ ಗಳಿಸುವಲ್ಲಿಯೂ ವಿಫಲರಾಗಿದ್ದ ಸಿಧು ಅವರು ತಮ್ಮದೇ ಪಕ್ಷದ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ಪ್ರಾರಂಭಿಸಿದ್ದರು.

    ಪಕ್ಷದ ಸೋಲಿನ ನಂತರ ಮಾಧ್ಯಮಗಳೊಂದಿಗೆ ನಡೆಸಿದ ಮೊದಲ ಸಂವಾದದಲ್ಲಿ, `ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಜನರು ಬದಲಾವಣೆ ಬಯಸಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಜನರ ನಿರ್ಧಾರ ದೇವರ ನಿರ್ಧಾರ. ಅದನ್ನು ವಿನಯದಿಂದ ಸ್ವಾಗತಿಸುತ್ತೇನೆ ಎಂದು ಸಿಧು ಹೇಳಿದ್ದರು.

    ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಪಕ್ಷ ಎಎಪಿ ವಿರುದ್ಧ ಹೀನಾಯ ಸೋಲನುಭವಿಸಿತು. 117 ಕ್ಷೇತ್ರಗಳಲ್ಲಿ 98 ಸ್ಥಾನಗಳನ್ನು ಆಪ್ ಗೆದ್ದಿದ್ದು, ಕಾಂಗ್ರೆಸ್‍ಗೆ ತೀವ್ರ ಮುಖಭಂಗವಾಯಿತು.

  • ಚನ್ನಿ ಪ್ರಮಾಣ ವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ: ಎಎಪಿಗೆ ಧನ್ಯವಾದ ತಿಳಿಸಿದ ಮನಿಶ್‌ ತಿವಾರಿ

    ಚನ್ನಿ ಪ್ರಮಾಣ ವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ: ಎಎಪಿಗೆ ಧನ್ಯವಾದ ತಿಳಿಸಿದ ಮನಿಶ್‌ ತಿವಾರಿ

    ಚಂಡೀಗಢ: ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಕ್ಕೆ ಪಂಜಾಬ್‌ ನೂತನ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರಿಗೆ ಕಾಂಗ್ರೆಸ್‌ ಸಂಸದ ಮನಿಶ್‌ ತಿವಾರಿ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ ಅಚ್ಚರಿದಾಯಕ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ.

    ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ ತಮ್ಮ ಪಕ್ಷದವರೇ ಆದ ಚರಣ್‌ಜಿತ್‌ ಸಿಂಗ್‌ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ ಎಂದು ಇದೇ ವೇಳೆ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಉಡ್ತಾ ಪಂಜಾಬ್‌ ಅಲ್ಲ, ಪ್ರಗತಿಪರ ಪಂಜಾಬ್‌: ಭಗವಂತ್‌ ಮಾನ್‌

    ಈ ಕುರಿತು ಟ್ವೀಟ್‌ ಮಾಡಿರುವ ತಿವಾರಿ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್ ಅವರನ್ನು ನಾನು ಅಭಿನಂದಿಸುತ್ತೇನೆ. ಅವರ ಪ್ರಮಾಣ ವಚನಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸುತ್ತೇನೆ. ಚರಣ್‌ಜಿತ್‌ ಸಿಂಗ್‌ ಚನ್ನಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸದಿರುವುದು ವಿಪರ್ಯಾಸ ಎಂದು ತಿಳಿಸಿದ್ದಾರೆ. ಇದೇ ವೇಳೆ ಸಮಾರಂಭದ ಆಮಂತ್ರಣ ಪತ್ರವನ್ನೂ ಟ್ಟಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

    ಈಚೆಗೆ ನಡೆದ ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ 92 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿತು. ಆದರೆ ಕಾಂಗ್ರೆಸ್‌ ಪಕ್ಷ ಕೇವಲ 18 ಸ್ಥಾನಗಳನ್ನು ಮಾತ್ರ ಜಯಿಸಲು ಶಕ್ತವಾಯಿತು. ಇದನ್ನೂ ಓದಿ: ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ

    ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ಭಗವಂತ್ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ನಿರ್ಗಮಿತ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಆಹ್ವಾನಿಸಿರಲಿಲ್ಲ.

  • ಉಡ್ತಾ ಪಂಜಾಬ್‌ ಅಲ್ಲ, ಪ್ರಗತಿಪರ ಪಂಜಾಬ್‌: ಭಗವಂತ್‌ ಮಾನ್‌

    ಉಡ್ತಾ ಪಂಜಾಬ್‌ ಅಲ್ಲ, ಪ್ರಗತಿಪರ ಪಂಜಾಬ್‌: ಭಗವಂತ್‌ ಮಾನ್‌

    ಚಂಡೀಗಢ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ನಡೆದ ಸಮಾರಂಭದಲ್ಲಿ ಭಗವಂತ್ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

    ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ (AAP) ಇತರ ಹಿರಿಯ ನಾಯಕರು ಪಾಲ್ಗೊಂಡಿದ್ದರು. ಪಂಜಾಬ್‌ ಸಂಸ್ಕೃತಿ ಪ್ರತೀಕವಾಗಿ ಎಲ್ಲರೂ ಹಳದಿ ಪೇಟವನ್ನು ಧರಿಸಿ ಗಮನ ಸೆಳೆದರು. ಇದನ್ನೂ ಓದಿ: ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ

    ಈ ವೇಳೆ ಮಾತನಾಡಿದ ಭಗವಂತ್‌ ಮಾನ್‌, ರಾಜ್ಯದ ಇತಿಹಾಸದಲ್ಲಿ ಸುವರ್ಣ ಅಧ್ಯಯವೊಂದು ಪ್ರಾರಂಭವಾಗಿದೆ. ಇದು ಉಡ್ತಾ ಪಂಜಾಬ್‌ ಬದಲಿಗೆ ಪ್ರಗತಿಪರ ಪಂಜಾಬ್‌ ಆಗಲಿದೆ ಎಂದು ಅಭಿಪ್ರಾಯಪಟ್ಟರು. ʻಉಡ್ತಾ ಪಂಜಾಬ್‌ʼ ಎನ್ನುವ ಮೂಲಕ 2016ರಲ್ಲಿ ಪಂಜಾಬ್‌ನಲ್ಲಿ ವ್ಯಾಪಿಸಿದ್ದ ಡ್ರಗ್‌ ದಂಧೆ ಕುರಿತು ಉಲ್ಲೇಖಿಸಿದರು.

    ನಾನು ಇಂದು ಯಾರನ್ನೂ ತಿರಸ್ಕರಿಸಲು ಬಂದಿಲ್ಲ. ನಾನು ಪಂಜಾಬ್‌ನಲ್ಲಿ ಪ್ರತಿಯೊಬ್ಬರಿಗೂ ಮುಖ್ಯಮಂತ್ರಿಯಾಗಿದ್ದೇನೆ. ನಮ್ಮ ಪಕ್ಷಕ್ಕೆ ಮತ ಹಾಕದವರಿಗೂ ನಾನು ಮುಖ್ಯಮಂತ್ರಿ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೃದಯಸ್ಪರ್ಶಿ ಫೋಟೋ ಜೊತೆಗೆ ಭಗವಂತ ಮಾನ್‌ಗೆ ಶುಭಕೋರಿದ ಹರ್ಭಜನ್ ಸಿಂಗ್

    ಅಹಂಕಾರಕ್ಕೆ ಒಳಗಾಗಬೇಡಿ ಎಂದು ನಾನು ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ. ನಮಗೆ ಮತ ಹಾಕದವರನ್ನೂ ನಾವು ಗೌರವಿಸಬೇಕು ಎಂದು ಪಕ್ಷದ ಶಾಸಕರಿಗೆ ಕರೆ ನೀಡಿದರು.

    ಪ್ರೀತಿ ನಮ್ಮ ಜನ್ಮಸಿದ್ಧ ಹಕ್ಕು. ನಮ್ಮ ತಾಯ್ನಾಡನ್ನು ನಾವು ಯಾಕೆ ಪ್ರೀತಿಸಬಾರದು? ಹಿಂದೆ ಅರಮನೆಗಳಲ್ಲಿ ಪ್ರಮಾಣ ವಚನ ಸಮಾರಂಭಗಳು ನಡೆಯುತ್ತಿದ್ದವು. ನನ್ನ ಹೃದಯದಲ್ಲಿ ಭಗತ್‌ಸಿಂಗ್‌ ಅವರಿಗೆ ವಿಶೇಷ ಸ್ಥಾನವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಲ್ಲಿ ಝೆಲೆನ್ಸ್ಕಿ ಇಲ್ಲಿ ಮಾನ್ – ಒಂದೇ ಹಿನ್ನೆಲೆಯ ರಾಜಕಾರಣಿಗಳು ಟ್ವಿಟ್ಟರ್‌ನಲ್ಲಿ ಟ್ರೆಂಡ್

    48 ವರ್ಷ ವಯಸ್ಸಿನ ಭಗವಂತ್‌ ಮಾನ್‌ ಅವರು 1970ರ ನಂತರ ರಾಜ್ಯದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿದ್ದಾರೆ. ಅವರು ಮಂಗಳವಾರ ಲೋಕಸಭೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

  • ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ, ರಾಜಧಾನಿಯಲ್ಲಿ ಅಲ್ಲ: ಭಗವಂತ್ ಮಾನ್

    ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ, ರಾಜಧಾನಿಯಲ್ಲಿ ಅಲ್ಲ: ಭಗವಂತ್ ಮಾನ್

    ಚಂಡೀಗಢ: ಸಚಿವರು, ಎಂಎಲ್‍ಎಗಳು ತಮ್ಮ – ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕು. ರಾಜಧಾನಿ ಚಂಡೀಗಢದಲ್ಲಿ ಅಲ್ಲ ಎಂದು ಚುನಾವಣೆ ಗೆದ್ದ ಒಂದು ದಿನದ ನಂತರ ಶಾಸಕರನ್ನು ಪಂಜಾಬ್ ಸಿಎಂ ಆಗಿ ಆಯ್ಕೆಯಾಗಿರುವ ಭಗವಂತ್ ಮಾನ್ ತರಾಟೆಗೆ ತೆಗೆದುಕೊಂಡರು.

    ಎಎಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಭಗವಂತ್ ಮಾನ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು, ಮತ ಕೇಳಲು ಹೋದ ಎಲ್ಲ ಸ್ಥಳಗಳಿಗೆ ನಾವು ಕೆಲಸ ಮಾಡಬೇಕು. ಎಲ್ಲ ಶಾಸಕರು ಚಂಡೀಗಢದಲ್ಲಿ ಉಳಿಯದೆ ಅವರು ಆಯ್ಕೆಯಾದ ಪ್ರದೇಶಗಳಲ್ಲಿ ಕೆಲಸ ಮಾಡಬೇಕು. ಎಂಎಲ್‍ಎಗಳು ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಸರಿಯಾಗಿ ಕೆಲಸ ಮಾಡಬೇಕು ಎಂದು ಖಡಕ್ ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ:  ಭೂದಾಖಲೆಗಳನ್ನು ‘ರೈತನ ಮನೆ ಬಾಗಿಲಿಗೆ’ ತಲುಪಿಸುವುದು ಒಂದು ಅತ್ಯುತ್ತಮ ಸೇವೆ: ಆರ್.ಅಶೋಕ್

    ಮುಖ್ಯಮಂತ್ರಿ ಹೊರತುಪಡಿಸಿ 17 ಮಂದಿ ಕ್ಯಾಬಿನೆಟ್ ಮಂತ್ರಿಗಳನ್ನು ಹೊಂದಬಹುದು. ಇದರಿಂದ ಯಾರೂ ಅಸಮಾಧಾನಗೊಳ್ಳಬೇಕಾಗಿಲ್ಲ. ನೀವೆಲ್ಲರೂ ಕ್ಯಾಬಿನೆಟ್ ಮಂತ್ರಿಗಳು ಎಂದು ಅವರು ತಮ್ಮನ್ನು ಒಳಗೊಂಡಂತೆ 92 ಶಾಸಕರ ಸಭೆಯಲ್ಲಿ ಹೇಳಿದರು.

    'Spend Time In Your Constituencies, Not...': AAP's Bhagwant Mann To MLAs

    ಕೆಲಸ ಮಾಡಬೇಕಾದರೆ ಯಾವುದೇ ರೀತಿಯ ದುರಹಂಕಾರ ಬೇಡ ಎಂದು ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ. ನಿಮಗೆ ಮತ ಹಾಕದವರಿಗಾಗಿ ಕೆಲಸ ಮಾಡಿ. ನೀವು ಪಂಜಾಬಿ ಶಾಸಕರು. ನಮ್ಮ ಸರ್ಕಾರವನ್ನು ಅವರು ಆಯ್ಕೆ ಮಾಡಿದ್ದಾರೆ ಎಂದು ಸ್ಫೂರ್ತಿ ತುಂಬಿದರು.

    ನಿನ್ನೆ ಪಂಜಾಬ್ ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದಿದ್ದು, ಈ ಚುನಾವಣೆಯಲ್ಲಿ ಎಎಪಿ ಭರ್ಜರಿ ಜಯವನ್ನು ಗಳಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವನ್ನು ಸೋಲಿತು. ಎಎಪಿಗೆ 117 ಸ್ಥಾನಕ್ಕೆ 92 ಸ್ಥಾನ ಗೆಲ್ಲುವ ಮೂಲಕ ಭರ್ಜರಿ ಜಯವನ್ನು ಗಳಿಸಿತ್ತು. ಇದನ್ನೂ ಓದಿ: ಚುನಾವಣೆಯಲ್ಲಿ ಸೋಲು- ಪಂಜಾಬ್, ಮಣಿಪುರ ಸಿಎಂ ರಾಜೀನಾಮೆ

  • ಗೋವಾದಲ್ಲಿ ಕಾಂಗ್ರೆಸ್ ಸೋಲಿನ ಅಸಲಿಯತ್ತು ಬಹಿರಂಗ

    ಗೋವಾದಲ್ಲಿ ಕಾಂಗ್ರೆಸ್ ಸೋಲಿನ ಅಸಲಿಯತ್ತು ಬಹಿರಂಗ

    ಪಣಜಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್‍ಗೆ ತೀವ್ರ ಹಿನ್ನಡೆ ಉಂಟಾಗಿದೆ. ಇದೀಗ ಪಂಚರಾಜ್ಯಗಳ ಪೈಕಿ ಒಂದಾಗಿರುವ ಗೋವಾದಲ್ಲಿ ಕಾಂಗ್ರೆಸ್ ಸೋಲಿನ ಅಸಲಿಯತ್ತು ಬಹಿರಂಗವಾಗಿದೆ.

     

    ಕೊನೆಯ ಕ್ಷಣದ ವರೆಗೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ ಅಂತಿಮ ಫಲಿತಾಂಶ ಕಂಡು ನಿರಾಸೆ ಅನುಭವಿಸಿದೆ. ಬಳಿಕ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ ಏನು ಎಂದು ಹುಡುಕಿದಾಗ ಕಾಂಗ್ರೆಸ್‍ನ ಜಯದ ಓಟಕ್ಕೆ ಬ್ರೇಕ್ ಹಾಕಿದ್ದು ಎಎಪಿ ಮತ್ತು ಟಿಎಂಸಿ ಎಂಬ ಅಸಲಿಯತ್ತು ಹೊರಬಿದ್ದಿದೆ. ಇದನ್ನೂ ಓದಿ: ಗೋವಾದಲ್ಲಿ ಅತಂತ್ರ ಫಲಿತಾಂಶ – ಕುದುರೆ ವ್ಯಾಪಾರಕ್ಕೆ ವೇದಿಕೆ ಸಜ್ಜು

    ಅದಲ್ಲದೆ ಗೋವಾದಲ್ಲಿ ಜಾತ್ಯಾತೀತ ಮತಗಳ ವಿಭಜನೆಯಿಂದ ಕಾಂಗ್ರೆಸ್‍ಗೆ ಭಾರೀ ಪೆಟ್ಟು ಬಿದ್ದಿದೆ. ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್-ಎಎಪಿ, ಟಿಎಂಸಿ ಹೊಂದಾಣಿಕೆ ಮಾಡಿಕೊಳ್ಳಲು ಚರ್ಚೆ ನಡೆದಿತ್ತು. ಕೊನೆಯ ಘಳಿಗೆಯಲ್ಲಿ ಮೈತ್ರಿ ಮುರಿದು ಬಿದ್ದಿದ್ದರಿಂದ ಸ್ವತಂತ್ರ್ಯವಾಗಿ ಸ್ಪರ್ಧೆ ಮಾಡಲು ಮೂರು ಪಕ್ಷಗಳು ನಿರ್ಧರಿಸಿದ್ದವು ಇದು ಸೋಲಿಗೆ ಪ್ರಮುಖ ಕಾರಣವಾಗಿದೆ.

    ಕಾಂಗ್ರೆಸ್ ಜೊತೆಗಿನ ಮೈತ್ರಿ ಮುರಿದು ಬಿದ್ದ ಬಳಿಕ ಟಿಎಂಸಿ ಪಕ್ಷ ಮಹಾರಾಷ್ಟ್ರ ಗೋಮಾಂತಕ ಪಾರ್ಟಿ ಜೊತೆ ಹೊಂದಾಣಿಕೆ ಮಾಡಿಕೊಂಡಿತ್ತು. ಇದು ಕಾಂಗ್ರೆಸ್‍ಗೆ ಹಿನ್ನಡೆ ಆಗುವಂತೆ ಮಾಡಿದೆ. ಟಿಎಂಸಿ ಸ್ಪರ್ಧೆ ಮಾಡಿದ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋತಿದೆ. ಈ ಎಲ್ಲಾ ಕಾರಣಗಳು ಇದೀಗ ಕಾಂಗ್ರೆಸ್ ಪಕ್ಷಕ್ಕೆ ಮನವರಿಕೆ ಆಗಿದ್ದು, ಸೋಲಿನ ಅಸಲಿ ಕಾರಣದ ವರದಿಯನ್ನು ಹೈಕಮಾಂಡ್‍ಗೆ ಸಲ್ಲಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಇದನ್ನೂ ಓದಿ: 17 ರಾಜ್ಯಗಳಲ್ಲಿ ಬಿಜೆಪಿ, 2 ಕಡೆ ಕಾಂಗ್ರೆಸ್ – ಯಾವ ರಾಜ್ಯದಲ್ಲಿ ಯಾರಿಗೆ ಅಧಿಕಾರ? 

    ಪಕ್ಷಗಳು ಪಡೆದ ಶೇಕಡಾವರು ಮತಗಳ ವಿವರ:
    ಬಿಜೆಪಿ – 33.03%
    ಕಾಂಗ್ರೆಸ್ – 23.5%
    ಆಫ್ – 6.8%
    ಎಂಎಜಿ + ಟಿಎಂಸಿ – 7.6%
    ಪಕ್ಷೇತರರರು -28.08%

    ಗೋವಾದ ಚುನಾವಣಾ ಫಲಿತಾಂಶವನ್ನು ಗಮನಹರಿಸಿದರೆ, ಕಾಂಗ್ರೆಸ್ – 11, ಬಿಜೆಪಿ – 20, ಎಎಪಿ – 02, ಎಂಜಿಪಿ – 02, ಟಿಎಂಸಿ – 00, ಜಿಎಫ್‍ಪಿ – 01, ಎನ್‍ಸಿಪಿ – 00, ಆರ್‌ಜಿಪಿ – 01, ಇತರರು – 03 ಸ್ಥಾನ ಗೆದ್ದುಕೊಂಡಿದೆ. ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಎಂಜಿಪಿ ಬೆಂಬಲ ಇದೆ. ಕಳೆದ ಬಾರಿ ಬಿಜೆಪಿ ಅಭಿವೃದ್ಧಿ ಕೆಲಸ ಕೈ ಹಿಡಿದಿದೆ. ಸಮರ್ಥ ಅಭ್ಯರ್ಥಿಗಳ ಆಯ್ಕೆ ಈ ಬಾರಿ ಮಾಡಲಾಗಿದೆ. ಕ್ಯಾಥೋಲಿಕ್ ಪ್ರಾಬಲ್ಯದ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್‍ಗೆ ಸಮರ್ಥ ನಾಯಕತ್ವ, ಅಭ್ಯರ್ಥಿಗಳ ಕೊರತೆ ಕಾಡಿದೆ. ಕಾಂಗ್ರೆಸ್ ಮತ ಬ್ಯಾಂಕ್‍ಗೆ ಟಿಎಂಸಿ, ಎಎಪಿ ಕನ್ನ ಹಾಕಿದೆ.

  • ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್

    ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್

    – ಪ್ರತಿಯೊಬ್ಬ ನಾಗರಿಕನೂ ನಮ್ಮ ಪಕ್ಷ ಸೇರಿಕೊಳ್ಳಬಹುದು

    ನವದೆಹಲಿ: ಗೆಲುವಿಗೆ ಕಾರಣರಾದ ನನ್ನ ಎಲ್ಲ ಕಾರ್ಯಕರ್ತರಿಗೂ ಧನ್ಯವಾದಗಳು. ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಂತೋಷ ವ್ಯಕ್ತಪಡಿಸಿದರು.

    ಪಂಜಾಬ್‍ನಲ್ಲಿ ಎಎಪಿ ಪಕ್ಷದ ಅಭೂತಪೂರ್ವ ಗೆಲುವಿನಿಂದ ಕೇಜ್ರಿವಾಲ್ ಖುಷಿಯಾಗಿದ್ದಾರೆ. ಈ ಗೆಲುವಿನ ಖುಷಿಯಲ್ಲಿ ಕೇಜ್ರಿವಾಲ್ ಕಾರ್ಯಕರ್ತರನ್ನು ಮತ್ತು ಪಂಜಾಬ್ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ರಾಜ್ಯದ ಜನರೆ ನಮಗೆ ಮತ ಹಾಕುವುದರ ಮೂಲಕ ನಾನು ಆತಂಕವಾದಿ ಅಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಕೇಜ್ರಿವಾಲ್ ದೇಶದ ಸಜ್ಜನ ವ್ಯಕ್ತಿ, ದೇಶಭಕ್ತ ಎಂದು ನಿರೂಪಿಸಿದ್ದಾರೆ ಎಂದು ಹೇಳಿ ಆಪ್ ಪರ ಮತ ಹಾಕಿದ ಮತದಾರರಿಗೆ ಜನರಿಗೆ ಧನ್ಯವಾದ ಅರ್ಪಿಸಿದರು. ಇದನ್ನೂ ಓದಿ: ಮೌನವಾಗಿರುವ ಬಿಜೆಪಿ ಮತದಾರರು ದೊಡ್ಡ ಸಂದೇಶ ಕೊಟ್ಟಿದ್ದಾರೆ: ತೇಜಸ್ವಿ ಸೂರ್ಯ 

    ನಮಗೆ ಮತಹಾಕುವ ಮೂಲಕ ಜನರು ಕೇಜ್ರಿವಾಲ್ ಆತಂಕವಾದಿಯಲ್ಲ. ಯಾರು ಜನರನ್ನು ಲೂಟಿ ಮಾಡುತ್ತಿದ್ದಾರೆ ಅವರು ನಿಜವಾದ ಆತಂಕವಾದಿಗಳು ಎಂದು ನಿರೂಪಿಸಿದ್ದಾರೆ. ಸ್ನೇಹಿತರೇ, ಇಂದು ನಾವು ನಮ್ಮ ಭಾರತವನ್ನು ನವಭಾರತವನ್ನಾಗಿ ಮಾಡಲು ಸಂಕಲ್ಪ ಮಾಡೋಣ ಎಂದು ಜನರಿಗೆ ಕರೆಕೊಟ್ಟರು.

    ನಾವು ನಿರ್ಮಾಣ ಮಾಡುವ ಭಾರತದಲ್ಲಿ ಯಾರು ಯಾರನ್ನು ದ್ವೇಷ ಮಾಡದೆ ಎಲ್ಲರನ್ನು ಪ್ರೀತಿ ಮಾಡಬೇಕು. ಯಾರು ಯಾರ ಮೇಲೆ ಕೋಪ ಮಾಡಿಕೊಳ್ಳದಂತಹ ದೇಶವನ್ನು ನಾವು ಕಟ್ಟಬೇಕು. ನಮ್ಮ ದೇಶದ ಒಬ್ಬರೂ ಹಸಿವಿನಿಂದ ಮಲಗದಂತೆ ಸಂಕಲ್ಪ ಮಾಡೋಣ. ನಮ್ಮ ದೇಶದ ಶ್ರೀಮಂತರಿಗೆ ಸರಿಸಮನಾಗಿ ಬಡ ಮಕ್ಕಳಿಗೂ ಶಿಕ್ಷಣ ಸಿಗುವಂತೆ ಮಾಡಬೇಕು ಎಂದರು.

    ನನಗೆ ಈ ವಿಷಯ ಹೇಳಲು ದುಃಖವಾಗುತ್ತೆ. ನಮಗೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಮೆಡಿಕಲ್ ಶಿಕ್ಷಣ ಪಡೆಯಲು ಉಕ್ರೇನ್‍ನಂತಹ ಚಿಕ್ಕ ದೇಶಕ್ಕೆ ಹೋಗುವಂತಹ ಪರಿಸ್ಥಿತಿ ಇದೆ. ಇದು ಮತ್ತೆ ನಿರ್ಮಾಣವಾಗದಂತೆ ನೋಡಿಕೊಳ್ಳಬೇಕು. ನಾವು ನಮ್ಮ ಮಕ್ಕಳನ್ನು ನಮ್ಮ ದೇಶವನ್ನು ಬಿಟ್ಟು ಬೇರೆ ದೇಶಕ್ಕೆ ಹೋಗದಂತೆ ನೋಡಿಕೊಳ್ಳಬೇಕು. ಇಲ್ಲಿ ಸಾಕಷ್ಟು ಮೆಡಿಕಲ್ ಕಾಲೇಜ್ ಮತ್ತು ಎಂಜಿನಿಯರ್ ಕಾಲೇಜುಗಳನ್ನು ತೆರೆಯೋಣ. ಬೇರೆ ದೇಶದ ಮಕ್ಕಳು ನಮ್ಮ ದೇಶಕ್ಕೆ ಬರುವಂತೆ ಮಾಡಬೇಕು ಎಂದು ಭರವಸೆಯನ್ನು ಕೊಟ್ಟರು.

    ನನ್ನನ್ನು ಟಿವಿಯಲ್ಲಿ ಮಹಿಳೆಯರು, ರೈತರು, ಮಕ್ಕಳು, ಇಂಡಸ್ಟ್ರಿಯವರು, ಯುವಕರು, ವ್ಯಾಪಾರಿಗಳು ನೋಡುತ್ತಿದ್ದಾರೆ. ಇವರೆಲ್ಲರಿಗೂ ದೇಶಕ್ಕಾಗಿ ಏನಾದರೂ ಮಾಡಬೇಕು ಎಂದುಕೊಳ್ಳುತ್ತಿರುತ್ತಾರೆ. ಅವರೆಲ್ಲರಿಗೂ ಈ ಮೂಲಕ ಒಂದು ಕರೆಕೊಡುತ್ತಿದ್ದೇನೆ. ನೀವು ನೋಡಿದ್ದಿರಾ ಹೇಗೆ ಪ್ರತಿಪಕ್ಷಗಳು ನಮ್ಮ ದೇಶವನ್ನು ಲೂಟಿ ಮಾಡುತ್ತಿದೆ ಎಂದು. ನಿಮಗೂ ಇವರನ್ನು ನೋಡಿ ದುಃಖವಾಗುತ್ತೆ ಮತ್ತು ಇವರನ್ನು ನೋಡಿ ಕೋಪ ಬರುತ್ತೆ ಎಂದು ನನಗೆ ಗೊತ್ತು ಎಂದು ಹೇಳಿದರು.

    ಇದನ್ನು ನೋಡಿ ನಿಮಗೂ ಏನಾದರೂ ಮಾಡಬೇಕು ಎನಿಸುತ್ತೆ. ಮೊದಲು ನಮ್ಮ ಗೆಲುವು ದೆಹಲಿಯಲ್ಲಿ ಆಯ್ತು, ಈಗ ಪಂಜಾಬ್ ನಲ್ಲಿ ನಾವು ಗೆಲುವನ್ನು ಸಾಧಿಸಿದ್ದೇವೆ. ಈಗ ಈ ಗೆಲುವನ್ನು ಇಡೀ ಭಾರತದಲ್ಲಿ ಹಬ್ಬಿಸಬೇಕು. ಯಾರು ಟಿವಿ ನೋಡುತ್ತಿದ್ದಾರೆ ಎಲ್ಲ ಯುವಕರು, ಉದ್ಯೋಗಿಗಳು, ಮಹಿಳೆಯರು, ರೈತರು, ಎಲ್ಲರೂ ನಮ್ಮ ಪಕ್ಷವನ್ನು ಸೇರಿಕೊಳ್ಳಬಹುದು ಎಂದು ಕರೆಕೊಟ್ಟರು. ಇದನ್ನೂ ಓದಿ:  ಈ ಕ್ರಾಂತಿಗಾಗಿ ಪಂಜಾಬ್ ಜನತೆಗೆ ಧನ್ಯವಾದಗಳು: ಕೇಜ್ರಿವಾಲ್

    ನಿಮಗೆ ಅನಿಸುತ್ತೆ ನಾವು ಏನೂ ಮಾಡಬಹುದು ಎಂದು, ನೀವು ಯೋಚನೆ ಮಾಡಬೇಡಿ. ಮಾಬೈಲ್ ರಿಪೇರಿ ಮಾಡುವ ಕೆಲಸ ಮಾಡುವವನೂ ಸಹ ನಮ್ಮ ಪಕ್ಷಕ್ಕೆ ಬರಬಹುದು. ಸಿಧುವನ್ನು ಸೋಲಿಸಿದ್ದು, ಒಬ್ಬ ಮಹಿಳೆ. ಎಲ್ಲರಿಗೂ ನಿಮ್ಮದೇ ಶಕ್ತಿ ಇದೆ. ನಮ್ಮ ಭಾರತದಲ್ಲಿ ಬದಲಾವಣೆಯ ಹೆಜ್ಜೆ ಇದಾಗಿದೆ. ಈ ಮೂಲಕ ನವಭಾರತವನ್ನು ಕಟ್ಟೋಣ. ಇಷ್ಟು ದೊಡ್ಡ ಬಹುಮತವನ್ನು ನಾವು ನಿರೀಕ್ಷೆಯನ್ನು ಮಾಡಿರಲಿಲ್ಲ. ಇನ್ನೊಮುಂದೆ ನಮ್ಮ ಸಮಯವನ್ನು ವ್ಯಾರ್ಥ ಮಾಡುವುದಿಲ್ಲ ಎಂದು ತಿಳಿಸಿದರು.

  • ಆಪ್‍ಗೆ ಅಭಿನಂದನೆ ಕೋರಿದ ನವಜೋತ್ ಸಿಂಗ್ ಸಿಧು

    ಆಪ್‍ಗೆ ಅಭಿನಂದನೆ ಕೋರಿದ ನವಜೋತ್ ಸಿಂಗ್ ಸಿಧು

    ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಶುಭಕೋರಿದ್ದಾರೆ.

    ಈ ಕುರಿತಂತೆ ನವಜೋತ್ ಸಿಂಗ್ ಸಿಧು ಅವರು, ಜನರ ಧ್ವನಿ ದೇವರ ಧ್ವನಿ. ಪಂಜಾಬ್ ಜನತೆಯ ಆದೇಶವನ್ನು ವಿನಮ್ರವಾಗಿ ಸ್ವೀಕರಿಸಿ. ಆಪ್‍ಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಪಂಜಾಬ್‍ನಲ್ಲಿ ಕಾಂಗ್ರೆಸ್ ಸೋತಿದ್ದು, ಈ ಮಧ್ಯೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಪ್‍ನಿಂದ ಸರ್ಧಿಸಿದ್ದ ಜೀವನ್ ಜ್ಯೋತ್ ಕೌರ್ ಮುನ್ನಡೆಯಲ್ಲಿದ್ದರೆ, ಶಿರೋಮಣಿ ಅಕಾಲಿ ದಳದ ಬಿಕ್ರಾಂ ಸಿಂಗ್ ಎರಡನೇ ಸ್ಥಾನ ಪಡೆದಿದ್ದಾರೆ ಮತ್ತು ಮೂರನೇ ಸ್ಥಾನದಲ್ಲಿ ನವಜೋತ್ ಸಿಂಗ್ ಸಿಧು ಇದ್ದಾರೆ. ಇದನ್ನೂ ಓದಿ:  ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

    ಮಧ್ಯಾಹ್ನ 1 ಗಂಟೆಯ ಟ್ರೆಂಡ್ ಪ್ರಕಾರ ಆಪ್ 91, ಕಾಂಗ್ರೆಸ್ 17, ಶಿರೋಮಣಿ ಅಖಾಲಿ ದಳ 06, ಬಿಜೆಪಿ 2, ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈಗಾಗಲೇ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಇದನ್ನೂ ಓದಿ: ಪಂಜಾಬ್ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ಸಿಧು

  • ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಪಕ್ಷವು ಮುನ್ನಡೆ ಸಾಧಿಸುತ್ತಿದೆ.

    ಭಗವಂತ್ ಮಾನ್ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಧುರಿ ಕ್ಷೇತ್ರದಿಂದ ಮುನ್ನಡೆ ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ದಲ್ವಿರ್ ಸಿಂಗ್ ಗೋಲ್ಡಿ ಅವರಿಗಿಂತ ಮುಂದಿದ್ದಾರೆ. ಇದೀಗ ಸಂಗ್ರೂರ್‍ನಲ್ಲಿರುವ ಭಗವಂತ್ ಮಾನ್ ಅವರ ನಿವಾಸದಲ್ಲಿ ಎಎಪಿ ಕಾರ್ಯಕರ್ತರು ನೃತ್ಯ ಮಾಡುವ ಮೂಲಕ ಪಕ್ಷದ ಮುನ್ನಡೆಯನ್ನು ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ:  ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

    ಈ ಮುನ್ನ ಎಎಪಿಯ ರಾಜ್ಯ ಘಟಕದ ಮುಖ್ಯಸ್ಥ ಭಗವಂತ್ ಮಾನ್ ಅವರು, ರಾಜ್ಯದಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆಯಿಂದ ಪಂಜಾಬ್‍ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ. 66 ಸ್ಥಳಗಳಲ್ಲಿ 117 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, 93 ಮಹಿಳೆಯರು ಮತ್ತು ಇಬ್ಬರು ತೃತೀಯಲಿಂಗಿಗಳು ಸೇರಿದಂತೆ ಒಟ್ಟು 1,304 ಅಭ್ಯರ್ಥಿಗಳು ಕಣಕ್ಕಿಳಿದ್ದಿದ್ದರು. ಇದನ್ನೂ ಓದಿ: ಪಂಜಾಬ್ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ಸಿಧು

  • ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ: ಸಚಿವ ಅಶ್ವಥ್ ನಾರಾಯಣ

    ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ: ಸಚಿವ ಅಶ್ವಥ್ ನಾರಾಯಣ

    ಧಾರವಾಡ: ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದರು.

    ಪಂಚ ರಾಜ್ಯ ಚುನಾವಣೆಯ ಮತ ಏಣಿಕೆಯಲ್ಲಿ ಪಂಜಾಬ್‍ನಲ್ಲಿ ಆಮ್ ಆದ್ಮಿ ಮುನ್ನಡೆ ಸಾಧಿಸಿದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಮ್ ಆದ್ಮಿ ದೆಹಲಿಯಂತಹ ಸಿಟಿಯಲ್ಲಿ ರಾಜಕೀಯ ಮಾಡಿದೆ. ಅದು ಕೂಡಾ ನಮ್ಮ ರಾಜಧಾನಿ ಬೆಂಗಳೂರಿನಂತಹ ಸಿಟಿ ಇದ್ದ ಹಾಗೇ ಎಂದು ಹೇಳಿದರು.

    ಉಚಿತ ವಿದ್ಯುತ್, ಶಾಲೆ, ಮೌಲಾ ಕ್ಲಿನ್ ಮಾಡಿದ್ದೇವೆ ಎಂದು ಆಪ್ ನವರು ಹೇಳುತ್ತಾರೆ. ಅದೆಲ್ಲವೂ ನಗರ ಪ್ರದೇಶದಲ್ಲಿ ನಡೆದಿರುವುದು. ಪಂಜಾಬ್‍ದಂತಹ ರಾಜ್ಯದಲ್ಲಿ ಅವರಿಗೆ ಪ್ರಾರಂಭ ಅಷ್ಟೇ. ಸರ್ಕಾರ ಬಂದರೂ ಅದು ಒಂದೇ ಸರ್ಕಾರದಲ್ಲಿ ಕೊನೆಯಾಗುತ್ತದೆ. ಪ್ರಾರಂಭವೇ ಅವರಿಗೆ ಕೊನೆ ಆಗುತ್ತದೆ ಎಂದರು.

    ಆಮ್ ಆದ್ಮಿ ಅಂತ ಪಕ್ಷಗಳು ಅಲ್ಲಿ ನೆಲ ಊರಲು ಸಾಧ್ಯವಿಲ್ಲ. ಇಂತಹ ಪಕ್ಷಗಳು ಬರುತ್ತವೆ, ಹೋಗುತ್ತವೆ, ಆ ಪಕ್ಷಕ್ಕೆ ಮಾನ್ಯತೆ ಕೊಡುವ ಅವಶ್ಯಕತೆ ಇಲ್ಲ. ಈ ಪಕ್ಷಕ್ಕೆ ಭವಿಷ್ಯವಿಲ್ಲ, ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ, ಸಣ್ಣ ಮಟ್ಟದಲ್ಲಿ ನಗರದ ಪ್ರದೇಶದಲ್ಲಿ ಕೆಲಸ ಮಾಡಿದೆಯಷ್ಟೇ ಎಂದು ವ್ಯಂಗ್ಯವಾಡಿದರು.

  • ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

    ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

    ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷ (Aam Aadmi Party) 88 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಲೀನ್ ಸ್ವೀಪ್ ಸಾಧನೆಯತ್ತ ಸಾಗಿದೆ. ಕಳೆದ 70 ವರ್ಷಗಳಿಂದ ಪಂಜಾಬ್ ರಾಜ್ಯವನ್ನು ಆಳಿದ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ (SDA) ಸಾಂಪ್ರದಾಯಿಕ ಪಕ್ಷಗಳಿಗಿಂತ ಈಗ ಎಎಪಿ ಮುನ್ನಡೆ ಸಾಧಿಸಲು ಐದು ಪ್ರಮುಖ ಕಾರಣಗಳಿವೆ.

    ಪಂಜಾಬ್‌ನಲ್ಲಿ ಬಿಜೆಪಿ-ಅಕಾಲಿದಳ, ಕಾಂಗ್ರೆಸ್ ಸರ್ಕಾರಗಳ ಆಡಳಿತವನ್ನು ನೋಡಿದ್ದರು. ಹೊಸ ಪಕ್ಷಕ್ಕೆ ಅಧಿಕಾರ ನೀಡುವ ಬಯಕೆಯನ್ನು ಹೊಂದಿದ್ದರು. ಇದಕ್ಕೆ ಪೂರಕ ಎನ್ನುವಂತೆ ಒಂದು ಅವಕಾಶವನ್ನು ಎಎಪಿ ಕೇಳಿತ್ತು. ದೆಹಲಿ ಸರ್ಕಾರದ ಜನಪ್ರಿಯ ಯೋಜನೆಗಳು ಪಂಜಾಬ್ ಜನರ ಗಮನ ಸೆಳೆದಿವೆ. ಶಾಲೆಗಳ ಅಭಿವೃದ್ಧಿ, ಉಚಿತ ವಿದ್ಯುತ್ – ನೀರು ಜನರನ್ನು ಸೆಳೆಯಲು ಮತ್ತೊಂದು ಕಾರಣವಾಗಿದೆ. ಬಿಜೆಪಿಗೆ ಅಸ್ತಿತ್ವ ಇಲ್ಲ, ಮಾಜಿ ಸಿಎಂ ಅಮರೀಂದರ್ ಸಿಂಗ್ ವಯಸ್ಸಿನ ಕಾರಣ ಪಂಜಾಬ್ ಜನರು ಕೈ ಬಿಟ್ಟರು ಎಂದು ವಿಶ್ಲೇಷಿಸಲಾಗಿದೆ.

    ಅಕಾಲಿದಳ ಬಿಜೆಪಿ ಜೊತೆಗಿದ್ದ ಕಾರಣ ಮತ್ತು ಈಗಾಗಲೇ ಆಡಳಿತ ನೋಡಿರುವ ಕಾರಣ ಜನ ತಿರಸ್ಕರಿಸಿದ್ದಾರೆ. ಇನ್ನು ಕಾಂಗ್ರೆಸ್ ಒಳ ಬಂಡಾಯ, ನಾಯಕರ ನಡುವಿನ ಜಗಳ, ಸಿಎಂ ಅಭ್ಯರ್ಥಿ ಘೋಷಣೆ ವಿಳಂಬವೂ ಆಪ್‌ಗೆ ನೆರವುವಾಗಿದೆ. ಕಳೆದ ಬಾರಿ ಎರಡನೇ ಅತಿದೊಡ್ಡ ಪಕ್ಷವಾಗಿದ್ದ ಆಪ್ ಈ ಬಾರಿ ಅದ್ಭುತವಾಗಿ ಆಗಿ ಪ್ರಚಾರ ನಡೆಸಿತ್ತು. ಗೊಂದಲಗಳಿಗೆ ಅವಕಾಶ ನೀಡದೇ ಅಭಿವೃದ್ಧಿಯ ಮೇಲೆ ಚುನಾವಣೆಗೆ ತೆರಳಿತ್ತು.

    AAP ಮುನ್ನಡೆಗೆ ಪ್ರಮುಖ ಕಾರಣಗಳೇನು?
    1.ಬದಲಾವಣೆಯ ಕೂಗು
    ಪಂಜಾಬ್‌ನಲ್ಲಿ 1997ರಿಂದ 2001ರವರೆಗೆ ಅಂದರೆ ಸುಮಾರು 24 ವರ್ಷಗಳು ಬಿಜೆಪಿಯೊಂದಿಗೆ ಎಸ್‌ಡಿಎ ಪಾಲುದಾರಿಕೆಯೊಂದಿಗೆ ಸಾಂಪ್ರದಾಯಿಕವಾಗಿ ಅಧಿಕಾರ ನಡೆಸಿತ್ತು. 2007 ಮತ್ತು 2012 ಗೆದ್ದಿದ್ದ ಕಾಂಗ್ರೆಸ್‌ಗೆ ಪರ್ಯಾಯವಾಗಿದೆ. ಈ ಬಾರಿ ಪಂಜಾಬ್‌ನಲ್ಲಿ ಮತದಾರರು ಬದಲಾವಣೆಗೆ ಮತ ಹಾಕಿದ್ದಾರೆ. ಎರಡು ದೊಡ್ಡ ಪಕ್ಷಗಳ 70 ವರ್ಷಗಳ ಆಡಳಿತವನ್ನು ಮತದಾರರು ನೋಡಿದ್ದಾರೆ. ಹೀಗಾಗಿ ಬೇರೆ ಪಕ್ಷಕ್ಕೆ ಅವಕಾಶ ನೀಡುವ ಕಾಲ ಬಂದಿದೆ. ಈ ಬಾರಿ ನಾವು ಮೂರ್ಖರಾಗುವುದಿಲ್ಲ. ಭಗವಂತ್ ಮಾನ್ ಮತ್ತು ಕೇಜ್ರಿವಾಲ್‌ಗೆ ಅವಕಾಶ ನೀಡುತ್ತೇವೆ’ ಎಂಬ ಎಎಪಿ ಘೋಷಣೆಯು ರಾಜ್ಯಾದ್ಯಂತ ಪ್ರತಿಧ್ವನಿಸಿತು.

    ದೆಹಲಿ ಮಾದರಿ
    ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ದೆಹಲಿ ಮಾದರಿಯ ಆಡಳಿತದ ಮೂಲಕ ಪಂಜಾಬ್ ಮತದಾರರ ಗಮನ ಸೆಳೆದರು. ಗುಣಮಟ್ಟದ ಸರ್ಕಾರಿ ಶಿಕ್ಷಣ, ಆರೋಗ್ಯ, ವಿದ್ಯುತ್ ಮತ್ತು ಅಗ್ಗದ ದರದಲ್ಲಿ ನೀರು ಪೂರೈಕೆ ಅವರ ಪ್ರಮುಖ ಸಾಧನೆಗಳಾಗಿವೆ. ಹಾಲಿ ಮತ್ತು ಹಿಂದಿನ ಸರ್ಕಾರಗಳ ಅಧಿಕಾರ ದಾಹ, ವಿವಿಧ ವಲಯಗಳಲ್ಲಿ ಮಿತಿ ಮೀರಿದ್ದ ದರಗಳು, ಆರೋಗ್ಯ ಮತ್ತು ಶಿಕ್ಷಣದ ಖಾಸಗೀಕರಣ ಜನರಲ್ಲಿ ಬೇಸರ ಮೂಡಿಸಿತ್ತು.

    ಯುವಸಮುದಾಯ ಮತ್ತು ಮಹಿಳೆಯರು
    ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶ ಬಯಸುವ ಯುವಜನರು ಮತ್ತು ಮಹಿಳಾ ಮತದಾರರಿಂದ ಎಎಪಿ ಬೆಂಬಲ ಪಡೆದಿದೆ. ರಾಜ್ಯದಲ್ಲಿ ಮಿತಿಮೀರಿರುವ ಭ್ರಷ್ಟಾಚಾರವನ್ನು ಬೇರುಸಮೇತ ಕಿತ್ತೊಗೆಯುವ ಕೇಜ್ರಿವಾಲ್ ಅವರ ಭರವಸೆ ಈ ಎರಡು ಸಮುದಾಯಗಳನ್ನು ಆಕರ್ಷಿಸಿತು. ಶಿಕ್ಷಣ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡುವುದನ್ನು ಕೇಜ್ರಿವಾಲ್ ಅವರು ಒತ್ತಿ ಹೇಳಿದ್ದರು. ರಾಜ್ಯದ ಮಹಿಳೆಯರ ಖಾತೆಗಳಿಗೆ ತಿಂಗಳಿಗೆ 1,000 ರೂಪಾಯಿ ಜಮೆ ಮಾಡುವ ಭರವಸೆಯನ್ನೂ ನೀಡಿದ್ದರು. ಆ ಮೂಲಕ ಯುವಜನತೆ ಮತ್ತು ಮಹಿಳೆಯರನ್ನು ಓಲೈಸುವಲ್ಲಿ ಎಎಪಿ ಯಶಸ್ವಿಯಾಗಿದೆ.

    ಭಗವಂತ್ ಮಾನ್ ಸಿಎಂ ಅಭ್ಯರ್ಥಿಯಾಗಿದ್ದು
    ಭಗವಂತ್ ಮಾನ್ (Bhagwant Mann) ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು ಪಂಜಾಬ್‌ನಲ್ಲಿ ಎಎಪಿ ಮುನ್ನಡೆಗೆ ಸಹಾಯವಾಗಿದೆ. ರಾಜಕೀಯ ಮತ್ತು ಸಾಮಾಜಿಕ ವಿಡಂಬನೆಗಳ ಮೂಲಕವೇ ಪಂಜಾಬ್ ಜನತೆಯ ಹೃದಯದಲ್ಲಿ ಭಗವಂತ್ ಮಾನ್ ಸ್ಥಾನ ಪಡೆದಿದ್ದಾರೆ. ಇತರೆ ರಾಜಕಾರಣಿಗಳಿಗಿಂತ ಭಿನ್ನ ಧ್ವನಿ ಮತ್ತು ಮಣ್ಣಿನ ಮಗ ಎಂಬ ಖ್ಯಾತಿಯನ್ನು ಹೊಂದಿದ್ದಾರೆ. ವ್ಯಕ್ತಿತ್ವದಲ್ಲಿ ಸರಳವಾಗಿ ಗುರುತಿಸಿಕೊಂಡಿದ್ದಾರೆ. ಇದು ಕೂಡ ಪಂಜಾಬ್ ಜನತೆ ಎಎಪಿ ಕಡೆ ಮುಖಮಾಡಲು ಕಾರಣವಾಗಿದೆ.

    ಕೃಷಿ ಕಾಯ್ದೆಗಳ ವಿರುದ್ಧದ ಆಂದೋಲನ
    ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪಂಜಾಬ್ ರೈತರು ಭಾರೀ ಸಂಖ್ಯೆಯಲ್ಲಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಹೋರಾಟಕ್ಕೆ ಎಎಪಿ ಕೂಡ ಸಹಕಾರ ನೀಡಿತ್ತು. ಇಂತಹ ಪ್ರಮುಖ ಬೆಳವಣಿಗೆಗಳು ಪಂಜಾಬ್ ರಾಜಕೀಯ ವಲಯದಲ್ಲಿ ಬದಲಾವಣೆ ಗಾಳಿ ಬೀಸಲು ಕಾರಣವಾಗಿವೆ.