Tag: aap

  • ಬಿಜೆಪಿಯಿಂದ ಕನ್ನಡಿಗರಿಗೆ ಮಹಾದ್ರೋಹ: ಎಎಪಿ

    ಬಿಜೆಪಿಯಿಂದ ಕನ್ನಡಿಗರಿಗೆ ಮಹಾದ್ರೋಹ: ಎಎಪಿ

    ಬೆಂಗಳೂರು: ಸಿಲಿಕಾನ್ ಸಿಟಿಯ ಅನೇಕ ವಾರ್ಡ್‍ಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಕೊರತೆಯಿದ್ದು, ಭವಿಷ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾಹಾಕಾರ ಸೃಷ್ಟಿಯಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿದೆ. ಆಡಳಿತಾರೂಢ ಬಿಜೆಪಿ ಬಳಿ ಇದಕ್ಕೆ ಮೇಕೆದಾಟು ಯೋಜನೆಯಲ್ಲದೇ ಬೇರೇನು ಪರಿಹಾರವಿದೆ ಎಂದು ಎಎಪಿಯ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಪ್ರಶ್ನಿಸಿದರು.

    ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. 13 ವರ್ಷಗಳ ಹಿಂದೆ ಕೇವಲ 100 ವಾರ್ಡ್‍ಗಳನ್ನು ಹೊಂದಿದ್ದ ಬಿಬಿಎಂಪಿಯು 2007ರಲ್ಲಿ 110 ಹಳ್ಳಿಗಳು ಸೇರಿದ ಬಳಿಕ 198 ವಾರ್ಡ್‍ಗಳನ್ನು ಹೊಂದಿದೆ. ಈಗ 45 ವಾರ್ಡ್‍ಗಳನ್ನು ಸೇರಿಸಿ 243 ವಾರ್ಡ್ ಮಾಡಲು ಸಿದ್ಧತೆ ನಡೆಯುತ್ತಿದೆ. 2007ರಲ್ಲಿ ಸೇರಿದ 110 ವಾರ್ಡ್‍ಗಳಿಗೇ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಮೇಕೆದಾಟು ಅಣೆಕಟ್ಟು ನಿರ್ಮಾಣವಾಗದೇ 243 ವಾರ್ಡ್‍ಗಳಿಗೆ ಕುಡಿಯುವ ನೀರು ಪೂರೈಕೆ ಅಸಾಧ್ಯ ಎಂಬ ಅರಿವೂ ಕೂಡ ಬಿಜೆಪಿ ನಾಯಕರಿಗೆ ಇಲ್ಲವೇ ಎಂದು ಪ್ರಶ್ನಿಸಿದರು.

    ಮೇಕೆದಾಟು ವಿಚಾರದಲ್ಲಿ ಕೇಂದ್ರ ಸರ್ಕಾರವು ಬೆಂಗಳೂರಿನ ಜನತೆಗೆ ಮಾಡುತ್ತಿರುವ ಮಹಾದ್ರೋಹವನ್ನು ಖಂಡಿಸುವ ಬದಲು, ತಮಿಳುನಾಡಿನ ಪರವಾಗಿ ನಿಲುವು ತಳೆಯುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈರವರು ಮೇಕೆದಾಟು ವಿರುದ್ಧ ಟ್ವೀಟ್ ಮಾಡಿದರೆ, ಕರ್ನಾಟಕದ ಸಿ.ಟಿ.ರವಿಯವರು ಅದನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಅಧಿಕಾರಕ್ಕಾಗಿ ಸ್ವಾಭಿಮಾನವನ್ನು ಬಿಟ್ಟು ಸಿ.ಟಿ.ರವಿ ಬದುಕುತ್ತಿರುವುದು ದುರಂತ. ಬಿಜೆಪಿಯ ರಾಜ್ಯಾಧ್ಯಕ್ಷ ಕಟೀಲ್‍ರವರಿಗೆ ಸ್ವಲ್ಪವಾದರೂ ನಾಡಿನ ಬಗ್ಗೆ ಕಾಳಜಿಯಿದ್ದರೆ, ಕ್ಷಮೆ ಯಾಚಿಸುವಂತೆ ಸಿ.ಟಿ.ರವಿಗೆ ನೋಟಿಸ್ ಜಾರಿ ಮಾಡಲಿ. ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಹೊಂದಿರುವ ಸಾವಿರಾರು ಕೋಟಿ ಮೊತ್ತದ ಆಸ್ತಿಗಳಿಗೆ ಕುಡಿಯುವ ನೀರಿನ ಸಂಪರ್ಕ ಬೇಡವೇ ಎಂದು ಮೋಹನ್ ದಾಸರಿ ಪ್ರಶ್ನಿಸಿದರು.

    ಮೇಕೆದಾಟು ಯೋಜನೆಗೆ ಕರ್ನಾಟಕವು ತಮಿಳುನಾಡಿನ ಅನುಮತಿ ಪಡೆಯಬೇಕೆಂದು ಲೋಕಸಭೆಯಲ್ಲಿ ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ನೀಡಿರುವ ಹೇಳಿಕೆ ಅಪ್ರಬುದ್ಧವಾಗಿದೆ. ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಆಗುವುದಿಲ್ಲವಾದ್ದರಿಂದ ಯಾರ ಅಪ್ಪಣೆಯೂ ರಾಜ್ಯಕ್ಕೆ ಬೇಕಾಗಿಲ್ಲ. ಸುಪ್ರೀಂಕೋರ್ಟ್ ಹಾಗೂ ಕಾವೇರಿ ನ್ಯಾಯಮಂಡಳಿ ಕೂಡ ತೀರ್ಪಿನಲ್ಲಿ ಇದನ್ನೇ ಹೇಳಿದೆ. ರಾಜ್ಯದ ಯಾವೊಬ್ಬ ಬಿಜೆಪಿ ನಾಯಕರೂ ಶೇಖಾವತ್ ಹೇಳಿಕೆಯನ್ನು ಖಂಡಿಸದಿರುವುದು ದುರಂತ. ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಆಡಳಿತ ನೀಡಿದ ಮೊದಲ ರಾಜ್ಯ ನಮ್ಮ ಕರ್ನಾಟಕ. ಇದಕ್ಕಾಗಿ ಬಿಜೆಪಿಯು ಎಂದೆಂದಿಗೂ ಕರ್ನಾಟಕಕ್ಕೆ ರುಣಿಯಾಗಿರಬೇಕಿತ್ತು. ಆದರೆ ಉಂಡ ಮನೆಗೆ ದ್ರೋಹ ಬಗೆಯುವುದು ಬಿಜೆಪಿಯ ಸಂಸ್ಕೃತಿ ಎಂಬುದು ಮೇಕೆದಾಟು ವಿಚಾರದಲ್ಲಿ ಸ್ಪಷ್ಟವಾಗಿದೆ. ತಮಿಳುನಾಡಿಗೆ ಒಳಗೊಳಗೆ ಬೆಂಬಲ ನೀಡುತ್ತಿರುವ ಬಿಜೆಪಿ ನಾಯಕರಿಗೆ ತಾಕತ್ತಿದ್ದರೆ, ಕೇಂದ್ರ ಸರ್ಕಾರದ ನಡೆ ಬಗ್ಗೆ ತಮ್ಮ ನಿಜವಾದ ನಿಲುವು ಏನೆಂದು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

  • ಮೇಕೆದಾಟು ಯೋಜನೆಯ ತ್ವರಿತಗತಿಗೆ ಆಗ್ರಹಿಸಿ ಎಎಪಿಯಿಂದ ಉಪವಾಸ ಸತ್ಯಾಗ್ರಹ

    ಮೇಕೆದಾಟು ಯೋಜನೆಯ ತ್ವರಿತಗತಿಗೆ ಆಗ್ರಹಿಸಿ ಎಎಪಿಯಿಂದ ಉಪವಾಸ ಸತ್ಯಾಗ್ರಹ

    ಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥರಾದ ಫಣಿರಾಜ್ ಎಸ್.ವಿ ಅವರು, ಬೆಂಗಳೂರಿನಲ್ಲಿ ಈಗಾಗಲೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ಭವಿಷ್ಯದಲ್ಲಿ ಭಾರೀ ತೊಂದರೆ ಎದುರಾಗುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಮೇಕೆದಾಟು ಯೋಜನೆ ಶೀಘ್ರದಲ್ಲೇ ಪೂರ್ಣಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ರಾಜ್ಯವನ್ನಾಳಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರಗಳು ಕುಂಟುನೆಪ ಹೇಳಿ ಯೋಜನೆಯನ್ನು ಮುಂದೂಡುವ ಮೂಲಕ ಜನರನ್ನು ವಂಚಿಸಿದವು. ಈಗ ಕೇಂದ್ರ ಪರಿಸರ ಇಲಾಖೆಯ ಅನುಮೋದನೆ ಸಿಕ್ಕಿದ್ದರೂ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ಹೊಂದಿರುವ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ವಿಳಂಬನೀತಿ ಅನುಸರಿಸುತ್ತಿದೆ. ಕ್ಷುಲ್ಲಕ ರಾಜಕೀಯ ಹಾಗೂ ಆಡಳಿತ ಪಕ್ಷದ ಇಚ್ಛಾಶಕ್ತಿಯ ಕೊರತೆಯಿಂದಾಗಿ ಮೇಕೆದಾಟು ಎಂಬ ಅತ್ಯುತ್ತಮ ಯೋಜನೆ ನೆನೆಗುದಿಗೆ ಬಿದ್ದಿರುವುದು ವಿಪರ್ಯಾಸ ಎಂದು ಫಣಿರಾಜ್ ಎಸ್ ವಿ ರವರು ಆಕ್ರೋಶ ವ್ಯಕ್ತಪಡಿಸಿದರು.

    2021ರ ಆಗಸ್ಟ್ 5, ಗುರುವಾರದಂದು ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಸಮೀಪದ ಮೌರ್ಯ ಹೋಟೆಲ್ ಹತ್ತಿರವಿರುವ ಗಾಂಧಿ ಪ್ರತಿಮೆ ಎದುರು ನಮ್ಮ ಹೋರಾಟ ನಡೆಯಲಿದೆ. ಪಕ್ಷದ ಸಂಚಾಲಕರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಎಎಪಿಯ ನೂರಾರು ಕಾರ್ಯಕರ್ತರು ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ. 12 ತಿಂಗಳ ಡೆಡ್‍ಲೈನ್ ಇಟ್ಟುಕೊಂಡು ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂಬುದು ನಮ್ಮ ಆಗ್ರಹ. ನಾಡಿನ ಒಳಿತಿಗಾಗಿ ನಡೆಯುತ್ತಿರುವ ಹೋರಾಟವನ್ನು ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬೇಕು” ಎಂದು ಮನವಿ ಮಾಡಿದರು. ಇದನ್ನೂ ಓದಿ: ಆಗಸ್ಟ್ 10 ರಂದು ದೇಶಾದ್ಯಂತ ವಿದ್ಯುತ್ ನೌಕರರ ಮುಷ್ಕರ

    ಮೇಕೆದಾಟುಗೆ ಅವಕಾಶ ನೀಡುವುದೇ ಇಲ್ಲವೆಂದು ತಮಿಳುನಾಡಿನ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಎರಡೂ ಪಕ್ಷಗಳಿಗೆ ಮೇಕೆದಾಟು ಯೋಜನೆಯ ಅಗತ್ಯವಿಲ್ಲವೆಂದು ಇದರಿಂದಲೇ ತಿಳಿಯುತ್ತದೆ. ದ್ವಂದ್ವನೀತಿಯನ್ನು ಬಿಟ್ಟು, ಮೇಕೆದಾಟು ವಿಷಯದಲ್ಲಿ ತಮ್ಮ ನಿಲುವು ಏನೆಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸ್ಪಷ್ಟಪಡಿಸಬೇಕು. ಇದೊಂದು ಕೇವಲ ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ತಮಿಳುನಾಡಿಗೆ ಯಾವುದೇ ತೊಂದರೆ ಆಗುವುದಿಲ್ಲ. ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ತಮಿಳುನಾಡಿನ ತಮ್ಮ ಪಕ್ಷದ ಮುಖಂಡರಿಗೆ ಇದನ್ನು ಮನವರಿಕೆ ಮಾಡಿಕೊಡಲಿ ಎಂದು ಪಕ್ಷದ ಮಹಿಳಾ ಘಟಕದ ನಾಯಕಿ ಉಷಾ ಮೋಹನ್ ಹೇಳಿದರು.

  • ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಚುನಾವಣೆ ಮುಂದೂಡಿಕೆಗೆ ಕಾರಣ: ಎಎಪಿ

    ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಚುನಾವಣೆ ಮುಂದೂಡಿಕೆಗೆ ಕಾರಣ: ಎಎಪಿ

    ಬೆಂಗಳೂರು: ರಾಜ್ಯದ ಜನತೆಗೆ ಲಸಿಕೆ ನೀಡಲು ಸರ್ಕಾರ ನಿರ್ಲಕ್ಷ್ಯ ತೋರಿರುವುದೇ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಮುಂದೂಡಲು ಕಾರಣ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

    ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಎಪಿಯ ರಾಜ್ಯ ಉಪಸಂಚಾಲಕಿ ಶಾಂತಲಾ ದಾಮ್ಲೆರವರು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ಬರುವುದೇ ಚುನಾವಣೆಗಳಿಂದ. ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಿದ್ದರಿಂದ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಸರ್ಕಾರವು ಸರಿಯಾಗಿ ಕೋವಿಡ್ ಲಸಿಕೆ ನೀಡಿದ್ದರೆ ಇಂದು ಚುನಾವಣೆಯನ್ನು ಮುಂದೂಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಅಧಿಕಾರ ಉಳಿಸಿಕೊಳ್ಳಲು, ಕುರ್ಚಿಗಾಗಿ ಲಾಬಿ ಮಾಡಲು ಪದೇಪದೇ ದೆಹಲಿಗೆ ಹೋಗುವ ಸಿಎಂ ಹಾಗೂ ಸಚಿವರು ಕೇಂದ್ರದಿಂದ ಲಸಿಕೆ ತರಿಸಿ ವಿತರಿಸಲು ನಿರ್ಲಕ್ಷ್ಯ ತೋರುತ್ತಿರುವುದು ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ – ಪಿಯುಸಿ ಬೋರ್ಡ್

    ಜೂನ್ 21ರಂದು ರಾಜ್ಯದ 11 ಲಕ್ಷ ಜನರಿಗೆ ಲಸಿಕೆ ನೀಡಲಾಗಿತ್ತು. ನಂತರ ಅದು ನಿಧಾನವಾಗಿ ಕಡಿಮೆಯಾಗಿ ಈಗ 1 ಲಕ್ಷಕ್ಕೆ ಬಂದು ನಿಂತಿದೆ. ಈವರೆಗೆ ಕೇವಲ 30% ಜನರಿಗೆ ಮಾತ್ರ ಲಸಿಕೆ ನೀಡಲಾಗಿದ್ದು, ಇದೇ ರೀತಿ ಲಸಿಕೆ ನೀಡುವ ಪ್ರಮಾಣವನ್ನು ಕಡಿಮೆ ಮಾಡುತ್ತಾ ಹೋದರೆ ಮೂರು ವರ್ಷವಾದರೂ ಎಲ್ಲರಿಗೂ ಲಸಿಕೆ ಸಿಗುವುದಿಲ್ಲ. ದಿನಕ್ಕೆ 11 ಲಕ್ಷ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದ್ದರೂ ಕೇವಲ ಒಂದು ಲಕ್ಷ ಲಸಿಕೆ ನೀಡುತ್ತಿರುವುದಕ್ಕೆ ಕಾರಣವೇನು? ಲಸಿಕೆ ಕೊರತೆಯಿಲ್ಲ ಎಂದು ಸುಳ್ಳು ಹೇಳಿ ಜನತೆಯನ್ನು ವಂಚಿಸುತ್ತಿರುವ ಆರೋಗ್ಯ ಸಚಿವರಿಗೆ ನಾಚಿಕೆಯಾಗಬೇಕು ಎಂದು ಶಾಂತಲಾ ದಾಮ್ಲೆಯವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

    ಎಎಪಿಯ ರಾಜ್ಯ ಯುವಘಟಕದ ಅಧ್ಯಕ್ಷರಾದ ಮುಕುಂದ್ ಗೌಡರವರು ಮಾತನಾಡಿ, ರಾಜ್ಯದ ಜನರು ಈಗಲೂ ಕೊರೊನಾ ಆತಂಕದಲ್ಲಿ ಬದುಕುತ್ತಿರುವುದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ. ಕೊರೊನಾ ರೋಗಿಗಳಿಗೆ ಬೆಡ್, ಆಕ್ಸಿಜನ್ ಕಲ್ಪಿಸುವುದರಲ್ಲಿ ವಿಫಲವಾಗಿದ್ದ ಸರ್ಕಾರವು ಈಗ ಲಸಿಕೆ ನೀಡುವುದರಲ್ಲಿಯೂ ವಿಫಲವಾಗಿದೆ. ಕಮಿಷನ್ ಆಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಯನ್ನು ಮಾರಿಕೊಂಡು ಸರ್ಕಾರಿ ಆಸ್ಪತ್ರೆಗಳಲ್ಲಿ ಕೃತಕ ಅಭಾವ ಸೃಷ್ಟಿಸಿದೆ. ಇವೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವ ರಾಜ್ಯದ ಜನರು ಆಡಳಿತದ ವಿರುದ್ಧ ನಿಲುವು ಹೊಂದಿದ್ದಾರೆ ಎಂಬುದು ಸರ್ಕಾರಕ್ಕೆ ಗೊತ್ತಿದೆ. ಸೋಲಿನ ಭಯದಿಂದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಮುಂದೂಡಿದೆ. ಮಾರ್ಕೆಟ್, ಮಾಲ್ ಮುಂತಾದ ಜನಸಂದಣಿ ಪ್ರದೇಶಗಳಿಗೆ ಅವಕಾಶ ನೀಡಿರುವಾಗ, ಚುನಾವಣೆ ನಡೆಸಲು ಮಾತ್ರ ಕೋವಿಡ್ ನೆಪ ಹೇಳುತ್ತಿರುವುದು ಆಶ್ಚರ್ಯಕರವಾಗಿದೆ ಎಂದು ಹೇಳಿದರು.

  • ಮೈಶುಗರ್ ಖಾಸಗೀಕರಣದಲ್ಲಿ ಅಂಧ್ರದ ಕಂಪನಿಯೊಂದಿಗೆ ಬಿಎಸ್‍ವೈ ಕುಟುಂಬ ಶಾಮೀಲು: ಎಎಪಿ

    ಮೈಶುಗರ್ ಖಾಸಗೀಕರಣದಲ್ಲಿ ಅಂಧ್ರದ ಕಂಪನಿಯೊಂದಿಗೆ ಬಿಎಸ್‍ವೈ ಕುಟುಂಬ ಶಾಮೀಲು: ಎಎಪಿ

    – ಖಾಸಗೀಕರಣದ ನೆಪದಲ್ಲಿ ಕಪ್ಪು ಹಣ ಹೂಡಿಕೆಗೆ ಯತ್ನ

    ಬೆಂಗಳೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ನಾಡಿನ ರೈತರಿಗಾಗಿ ಆರಂಭಿಸಿದ ಮೈಶುಗರ್ ಸಂಸ್ಥೆಯನ್ನು ಖಾಸಗೀಕರಣ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡದಿದ್ದರೆ ಭಾರೀ ವಿರೋಧ ಎದುರಿಸಬೇಕಾಗುತ್ತದೆ ಎಂದು ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡರವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಕಾಳೇಗೌಡರವರು, ಮೈಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡುವುದಿಲ್ಲ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುತ್ತೇವೆ ಎಂದು ವಿಧಾನಸಭಾ ಅಧಿವೇಶನದಲ್ಲಿ ಸಿ.ಎಂ.ಯಡಿಯೂರಪ್ಪನವರು ಹೇಳಿದ್ದರು. ಆದರೆ ಈಗ ಅವರೇ ಉಲ್ಟಾ ಹೊಡೆದಿದ್ದಾರೆ. ಯಡಿಯೂರಪ್ಪನವರ ಮಕ್ಕಳು, ಮೊಮ್ಮಕಳು ಆಂಧ್ರ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ್ದು, ಖಾಸಗೀಕರಣದ ನಂತರ ಭಾರೀ ಪ್ರಮಾಣದ ಕಪ್ಪುಹಣವನ್ನು ಇದರಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಮೈಶುಗರ್‍ಗಾಗಿ ಎಎಪಿಯು 2016ರಲ್ಲೇ ಬೃಹತ್ ರ್ಯಾಲಿ ನಡೆಸಿದ್ದು, ಈಗ ಅದರ ಖಾಸಗೀಕರಣವನ್ನು ನೋಡಿ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

    ಒಡೆಯರ್‍ರವರು ವಿಶೇಷ ಶ್ರಮವಹಿಸಿ 1933ರಲ್ಲಿ ಮೈಶುಗರ್ ಕಾರ್ಖಾನೆಯನ್ನು ಆರಂಭಿಸಿದರು. ಇದನ್ನು ರಾಜ್ಯದ ಮೊದಲ ಕಾರ್ಖಾನೆ ಎಂದು ಗೌರವದಿಂದ ಕಾಣಲಾಗುತ್ತದೆ. ಸ್ವಾತಂತ್ರ್ಯ ಬಂದು 73 ವರ್ಷವಾದರೂ ರಾಜ್ಯವನ್ನು ಆಳಿದ ಯಾವ ಮುಖ್ಯಮಂತ್ರಿಗೂ ಇಂತಹ ಮತ್ತೊಂದು ಕಾರ್ಖಾನೆಯನ್ನು ಆರಂಭಿಸಲು ಸಾಧ್ಯವಾಗಿಲ್ಲ. ನಾಡಿನ ರೈತರ ಬದುಕನ್ನು ಸುಧಾರಿಸುವುದರಲ್ಲಿ ಮೈಶುಗರ್ ಪಾತ್ರ ಮಹತ್ವದ್ದಾಗಿದೆ. ಕಾರ್ಖಾನೆಯ ನೌಕರರು ಹಾಗೂ ಕಬ್ಬು ಬೆಳೆಗಾರರು ಮೈಶುಗರ್ ಸಂಸ್ಥೆಯೊಂದಿಗೆ ಆರ್ಥಿಕ ಸಂಬಂಧ ಮಾತ್ರವಲ್ಲದೇ ಭಾವನಾತ್ಮಕ ಸಂಬಂಧವನ್ನೂ ಹೊಂದಿದ್ದಾರೆ ಎಂದು ಕಾಳೇಗೌಡರವರು ತಿಳಿಸಿದರು. ಇದನ್ನೂ ಓದಿ: ಮೈಶುಗರ್ ಆರಂಭಕ್ಕೆ ಆಸಕ್ತಿ ತೋರಿಸದ ಸರ್ಕಾರದ ವಿರುದ್ಧ ಆಕ್ರೋಶ

    ಪ್ರತಿದಿನವೂ 5 ಟನ್ ಸಕ್ಕರೆ ಅರೆಯುವ ಸಾಮರ್ಥ್ಯವನ್ನು ಮೈಶುಗರ್ ಕಾರ್ಖಾನೆ ಹೊಂದಿದೆ. 14 ಸಾವಿರಕ್ಕೂ ಹೆಚ್ಚು ರೈತರು ಇದರ ಷೇರುದಾರರಾಗಿದ್ದಾರೆ. ಈ ಹಿಂದೆ 18ಕ್ಕೂ ಹೆಚ್ಚು ವರ್ಷಗಳ ಕಾಲ ಮೈಶುಗರ್ ಕಂಪನಿಯು ಶೇ. 20ರಿಂದ ಶೇ. 30ರಷ್ಟು ಡಿವಿಡೆಂಡ್ ನೀಡಿದ ಕೀರ್ತಿ ಹೊಂದಿದೆ. 14ಕ್ಕೂ ಹೆಚ್ಚು ಫಾರ್ಮ್‍ಗಳು, ವಿದ್ಯಾಸಂಸ್ಥೆಗಳು ಮತ್ತು ರೈತ ಸಮುದಾಯ ಭವನಗಳು ಸೇರಿ 207 ಎಕರೆಗಿಂತ ಹೆಚ್ಚಿನ ಭೂಮಿಯು ಮೈಶುಗರ್ ಸಂಸ್ಥೆಯ ಬಳಿಯಲ್ಲಿದೆ. ಇಷ್ಟು ಸಮೃದ್ಧವಾದ ಇತಿಹಾಸ ಹೊಂದಿರುವ ಸಂಸ್ಥೆಯು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಸ್ಥಗಿತಗೊಂಡಿದೆ. ಸರ್ಕಾರವು ಬಂಡವಾಳ ಹೂಡಿ ಸಂಸ್ಥೆಯನ್ನು ಆಧುನೀಕರಣಗೊಳಿಸಬೇಕೇ ಹೊರತು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡಬಾರದು ಎಂದು ನಂಜಪ್ಪ ಕಾಳೇಗೌಡ ಹೇಳಿದರು. ಇದನ್ನೂ ಓದಿ: ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಬೆಂಬಲ

  • ಬಿಜೆಪಿ ಮಾಜಿ ಶಾಸಕ ಎಚ್.ಡಿ ಬಸವರಾಜು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

    ಬಿಜೆಪಿ ಮಾಜಿ ಶಾಸಕ ಎಚ್.ಡಿ ಬಸವರಾಜು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

    ಬೆಂಗಳೂರು: ಆಮ್ ಆದ್ಮಿ ಪಕ್ಷದ ತತ್ವ, ಸಿದ್ಧಾಂತಗಳು ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ರವರ ಜನಪರ ಆಡಳಿತವನ್ನು ಮೆಚ್ಚಿ, ಸ್ವಪಕ್ಷ ಬಿಜೆಪಿಯಲ್ಲಿನ ಭ್ರಷ್ಟಾಚಾರ, ಆಂತರಿಕ ಕಿತ್ತಾಟದಿಂದ ಬೇಸತ್ತು ವಿರಾಜಪೇಟೆ ಕ್ಷೇತ್ರದ ಮಾಜಿ ಬಿಜೆಪಿ ಶಾಸಕರಾದ ಎಚ್.ಡಿ ಬಸವರಾಜುರವರು ಇಂದು ಎಎಪಿಯನ್ನು ಸೇರಿದ್ದಾರೆ.

    ಆಮ್ ಆದ್ಮಿ ಪಾರ್ಟಿಯು ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರಣದಿಂದ ಅನೇಕರು ಎಎಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಬಸವರಾಜು ತಿಳಿಸಿದರು.

    ಎಚ್.ಡಿ ಬಸವರಾಜುರವರು 1994 ಮತ್ತು 2004ರಲ್ಲಿ ವಿರಾಜಪೇಟೆಯ ಶಾಸಕರಾಗಿ ಉತ್ತಮ ಕೆಲಸಗಳನ್ನು ಮಾಡಿದ ಅನುಭವ ಹೊಂದಿದ್ದಾರೆ. 2005ರಿಂದ 2007ರವರೆಗೆ ಕರ್ನಾಟಕ ಸರ್ಕಾರ ಭರವಸೆಗಳ ಸಮಿತಿಯ ಅಧ್ಯಕ್ಷರಾಗಿ, 2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಸ್ಕುಲಾರ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿ ಹಾಗೂ ಚಿಕ್ಕಮಗಳೂರು ಮತ್ತು ಕೊಡಗು ಗ್ರಾಮೀಣ ಬ್ಯಾಂಕಿನ ನಿರ್ದೇಶಕರಾಗಿ ಕೂಡ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ನಮ್ಮ ತಂದೆಯ ಸಾವನ್ನು ರಾಜಕೀಯ ಮಾಡಬೇಡಿ: ಅಭಿಷೇಕ್ ಅಂಬರೀಶ್ 

    ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಕರ್ನಾಟಕ ಅಹಿಂದ ಪರಿಷತ್‍ನ ಅಧ್ಯಕ್ಷರಾಗಿ ಬಸವರಾಜುರವರು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಮಸ್ತ ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಆಶಾಕಿರಣವಾಗಿದ್ದಾರೆ. ದಲಿತರು, ಶೋಷಿತರು, ಬಡವರು, ನೊಂದವರ ಸಹಾಯಕ್ಕಾಗಿ ಜೀವನವನ್ನು ಮುಡಿಪಾಗಿಟ್ಟಿರುವ ಇಂತಹ ಅನುಭವಿ ಹಾಗೂ ಪ್ರಾಮಾಣಿಕ ನಾಯಕ ಎಎಪಿಯನ್ನು ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಎಎಪಿ ಪಕ್ಷದ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

  • ಬಿಜೆಪಿಗೆ ಬಿಗ್ ಶಾಕ್- ನಾಳೆ ಎಎಪಿ ಸೇರಲಿದ್ದಾರೆ ಕಮಲ ಶಾಸಕ

    ಬಿಜೆಪಿಗೆ ಬಿಗ್ ಶಾಕ್- ನಾಳೆ ಎಎಪಿ ಸೇರಲಿದ್ದಾರೆ ಕಮಲ ಶಾಸಕ

    ಬೆಂಗಳೂರು: ಬಿಜೆಪಿಗೆ ಬಿಗ್ ಶಾಕ್ ಎದುರಾಗುತ್ತಿದ್ದು, ಬಿಜೆಪಿ ಶಾಸಕ ನಾಳೆ ಆಮ್ ಆದ್ಮಿ ಪಕ್ಷ ಸೇರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಯಾವ ಶಾಸಕ ಎಂಬುದನ್ನು ಎಎಪಿ ತಿಳಿಸಿಲ್ಲ.

    ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಆಮ್ ಆದ್ಮಿ ಪಕ್ಷ, ಬಿಜೆಪಿ ಶಾಸಕ ಪಕ್ಷ ಸೇರುತ್ತಿರುವ ಕುರಿತು ತಿಳಿಸಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರೆಸ್ ಕ್ಲಬ್ ನಲ್ಲಿ ನಡೆಯಲಿರುವ ಆಮ್ ಆದ್ಮಿ ಪಕ್ಷದ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ. ಎಎಪಿ ಸೇರ್ಪಡೆಯಾಗಲಿರುವ ಬಿಜೆಪಿ ಶಾಸಕ ಯಾರೆಂದು ನಾಳೆ ಹೇಳುತ್ತೇವೆ. ಈಗಾಗಲೇ ಅವರ ಜೊತೆ ಮಾತುಕತೆ ನಡೆದಿದೆ. ಶಾಸಕ ಯಾರು ಎಂಬ ಕುತೂಹಲಕ್ಕೆ ನಾಳೆ ಉತ್ತರ ಸಿಗಲಿದೆ ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್.ವಿ.ಸದಂ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸನ್ ಸ್ಟ್ರೋಕ್, ಫ್ಯಾಮಿಲಿ ಸ್ಟ್ರೋಕ್‍ನಲ್ಲಿ ಬಿಜೆಪಿ ಹಾಳಾಗ್ತಿದೆ : ಹೆಚ್.ವಿಶ್ವನಾಥ್

    ಎಎಪಿ ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
    ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಪಕ್ಷದ ಆಂತರಿಕ ಒಳ ಜಗಳಗಳು, ಸ್ವ ಹಿತಾಸಕ್ತಿಯ ರಾಜಕಾರಣ, ಸಾಂವಿಧಾನಿಕ ಅಧಿಕಾರ ದುರ್ಬಳಕೆ, ಕುಟುಂಬ ಭ್ರಷ್ಟಾಚಾರ ಇವೆಲ್ಲವುಗಳಿಂದ ಬೇಸತ್ತಿರುವ ಬಿಜೆಪಿ ಶಾಸಕರು, ದೇಶದ ಪ್ರಸ್ತುತ ಏಕೈಕ ಆಶಾಕಿರಣವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪಾರದರ್ಶಕ, ಪ್ರಾಮಾಣಿಕ, ಭ್ರಷ್ಟಮುಕ್ತ ಆಡಳಿತವನ್ನು ಮೆಚ್ಚಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಕರ್ನಾಟಕ ರಾಜಕೀಯದಲ್ಲಿ ಒಂದು ಮಹತ್ವದ ಬೆಳವಣಿಗೆಯಾಗಿದೆ.

    ಪರ್ಯಾಯ ರಾಜಕಾರಣದ ನಮ್ಮ ಪ್ರಯತ್ನದಲ್ಲಿ ಈ ಬೆಳವಣಿಗೆ ಸಂತಸದ ವಿಷಯವಾಗಿದೆ. ಈ ಮಹತ್ವದ ಕಾರ್ಯಕ್ರಮವು ಜುಲೈ 9, ಶುಕ್ರವಾರದಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ನಡೆಯಲಿದೆ. ಆಮ್ ಆದ್ಮಿ ಪಾರ್ಟಿಯ ಕರ್ನಾಟಕದ ಉಸ್ತುವಾರಿ ರೋಮಿ ಭಾಟಿ ಹಾಗೂ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಈ ಕಾರ್ಯಕ್ರಮವು ನಡೆಯಲಿದೆ.

    ಅಕ್ರಮ ಕಲ್ಲು ಗಣಿಗಾರಿಕೆ ರೂವಾರಿ ಎಚ್‍ಡಿಕೆ
    ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ. ಹಳೆ ಮೈಸೂರು ಭಾಗದ ವಿವಿಧೆಡೆ ಎಚ್‍ಡಿಕೆ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ. ರಾಜ್ಯ ಬಿಜೆಪಿ ಸರ್ಕಾರ ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಜಗದೀಶ್ ವಿ. ಸದಂ ಆರೋಪಿಸಿದ್ದಾರೆ.

    ಕೆಆರ್‍ಎಸ್ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ.ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಕೆಆರ್‍ಎಸ್ ಸಮೀಪ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಅಣೆಕಟ್ಟೆ ಒಡೆದು ಹೋದರೆ ಭಾರೀ ಅನಾಹುತ ಸಂಭವಿಸಲಿದೆ. ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಎಚ್‍ಡಿಕೆ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಾಚಿಕೆಗೇಡು. ಕೆಆರ್‍ಎಸ್‍ನಿಂದ ಕೇವಲ 10 ಕಿ.ಮೀ. ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಸದ್ಯ 80ಕ್ಕೂ ಹೆಚ್ಚು ಕ್ರಷರ್ ಗಳಿವೆ. ಈ ಪೈಕಿ 50 ಕ್ರಷರ್ ಅನಧಿಕೃತ ಎಂದು ಆರೋಪಿಸಿದ್ದಾರೆ.

    ಹಂಗರಹಳ್ಳಿಯಿಂದ ಪ್ರತಿದಿನ 500ಕ್ಕೂ ಹೆಚ್ಚು ಲಾರಿಗಳಲ್ಲಿ ಕಲ್ಲುಗಳು ಹೋಗುತ್ತಿವೆ. ಅಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ನ ಅನೇಕ ಮುಖಂಡರು ಶಾಮೀಲಾಗಿದ್ದಾರೆ. ದಂಧೆಯ ಪ್ರಮುಖ ರೂವಾರಿಯಾಗಿ ಎಚ್.ಡಿ.ಕುಮಾರಸ್ವಾಮಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಎಚ್ ಡಿಕೆಗೆ ಸಹಾಯಕರಾಗಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪುಟ್ಟರಾಜು ಇದ್ದಾರೆ. ಇವರೆಲ್ಲರಿಗೂ ಸಪೋರ್ಟ್ ಮಾಡುತ್ತಿರುವ ಸಿಎಂ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

  • ಅಕ್ರಮ ಕಲ್ಲು ಗಣಿಗಾರಿಕೆಗೆ ಹೆಚ್‍ಡಿಕೆಯೇ ಪ್ರಮುಖ ರೂವಾರಿ: ಎಎಪಿ ಆರೋಪ

    ಅಕ್ರಮ ಕಲ್ಲು ಗಣಿಗಾರಿಕೆಗೆ ಹೆಚ್‍ಡಿಕೆಯೇ ಪ್ರಮುಖ ರೂವಾರಿ: ಎಎಪಿ ಆರೋಪ

    ಬೆಂಗಳೂರು: ರಾಜ್ಯದ ಹಳೇ ಮೈಸೂರು ಭಾಗದ ವಿವಿಧೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಇಂದಿಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು.

    ಕೆಆರ್‍ಎಸ್ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಲಕ್ಷ ಎಕರೆಗೂ ಅಧಿಕ ಭೂಮಿಗೆ ಕೆಆರ್‍ಎಸ್ ನೀರುಣಿಸುತ್ತಿದೆ. ಕೆಆರ್‍ಎಸ್ ಸಮೀಪ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದರಿಂದ ಅಣೆಕಟ್ಟೆ ಒಡೆದು ಹೋದರೆ ಭಾರೀ ಅನಾಹುತ ಸಂಭವಿಸಲಿದೆ. ಇದನ್ನು ಅರ್ಥ ಮಾಡಿಕೊಳ್ಳದ ಕುಮಾರಸ್ವಾಮಿಯವರು ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಾಚಿಕೆಗೇಡು.

    ಕೆಆರ್‍ಎಸ್‍ನಿಂದ ಕೇವಲ ಹತ್ತು ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಸದ್ಯ 80ಕ್ಕೂ ಹೆಚ್ಚು ಕ್ರಷರ್ ಗಳಿದ್ದು, ಈ ಪೈಕಿ 50 ಕ್ರಷರ್ ಅನಧಿಕೃತ. ಹಂಗರಹಳ್ಳಿಯಿಂದ ಪ್ರತಿದಿನ 500ಕ್ಕೂ ಹೆಚ್ಚು ಲಾರಿಗಳಲ್ಲಿ ಕಲ್ಲುಗಳು ಹೋಗುತ್ತಿವೆ. ಅಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ನ ಅನೇಕ ಮುಖಂಡರು ಶಾಮೀಲಾಗಿದ್ದಾರೆ. ದಂಧೆಯ ಪ್ರಮುಖ ರೂವಾರಿಯಾಗಿ ಕುಮಾರಸ್ವಾಮಿ ಇವೆಲ್ಲದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಅವರಿಗೆ ಸಹಾಯಕರಾಗಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪುಟ್ಟರಾಜು ಇದ್ದಾರೆ ಎಂದು ಜಗದೀಶ್ ವಿ .ಸದಂ ಆರೋಪಿಸಿದರು.

    ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಪಕ್ಷದ ಕಾನೂನು ವಿಭಾಗದ ರಾಜ್ಯಾಧ್ಯಕ್ಷ ನಂಜಪ್ಪ ಕಾಳೇಗೌಡ ರವರು ಮಾತನಾಡಿ ಬೆಂಗಳೂರು ಗ್ರಾಮಾಂತರ, ರಾಮನಗರ, ಚೆನ್ನಪಟ್ಟಣ, ಮಂಡ್ಯ, ಮೈಸೂರು, ಕನಕಪುರ ಭಾಗಗಳಲ್ಲಿ ರಾಜ್ಯದ ನೈಸರ್ಗಿಕ ಸಂಪತ್ತು ಅವ್ಯಾಹತವಾಗಿ ಲೂಟಿಯಾಗುತ್ತಿದ್ದು, ಸರ್ಕಾರದ ಬೊಕ್ಕಸ ಸೇರಬೇಕಾಗಿದ್ದ ಸಾವಿರಾರು ಕೋಟಿ ರೂಪಾಯಿ ರಾಜಸ್ವ ಧನವು ರಾಜಕಾರಣಿಗಳು ಹಾಗೂ ಉದ್ಯಮಿಗಳ ಪಾಲಾಗುತ್ತಿದೆ. ಇದನ್ನೂ ಓದಿ: ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ

    ಈ ಹಿಂದೆ ಎಎಪಿಯ ತಂಡವು ಸ್ವತಃ ಬೇಬಿ ಬೆಟ್ಟಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ನಮ್ಮ ಒತ್ತಡಕ್ಕೆ ಮಣಿದು ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಗೆ ಸರ್ಕಾರ ತಕ್ಷಣವೇ ಬ್ರೇಕ್ ಹಾಕಿತ್ತು. ಆದರೆ ಕೆಲ ದಿನಗಳ ನಂತರ ಮತ್ತೆ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದೆ. ನಾವು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಕ್ರಮಕ್ಕೆ ಸಹಕಾರ ನೀಡುತ್ತಾ ಆಡಳಿತ ನಡೆಸುವ ಬದಲು ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು. ಇದನ್ನೂ ಓದಿ: ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್

  • ಎಎಪಿಯಿಂದ ಫೀಸ್ ಇಳಿಸಿ – ಮಕ್ಕಳ ಭವಿಷ್ಯ ಉಳಿಸಿ ಅಭಿಯಾನಕ್ಕೆ ಚಾಲನೆ

    ಎಎಪಿಯಿಂದ ಫೀಸ್ ಇಳಿಸಿ – ಮಕ್ಕಳ ಭವಿಷ್ಯ ಉಳಿಸಿ ಅಭಿಯಾನಕ್ಕೆ ಚಾಲನೆ

    ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರ ಕುಲಗೆಟ್ಟು ಹೋಗುತ್ತಿದ್ದು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಮಕ್ಕಳ ಭವಿಷ್ಯ ಅಪಾಯದಲ್ಲಿದೆ. ಕೊರೊನಾ ಸೋಂಕಿನ ಮಧ್ಯೆ ಪೋಷಕರು ಮಕ್ಕಳ ಫೀಸ್ ಭರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ತಿಳಿಸಿದರು.

    ಆಮ್ ಆದ್ಮಿ ಪಾರ್ಟಿಯ ನಡೆಸುತ್ತಿರುವ “ಫೀಸ್ ಇಳಿಸಿ ಮಕ್ಕಳ ಭವಿಷ್ಯ ಉಳಿಸಿ” ರಾಜ್ಯವ್ಯಾಪಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡಿದ ಇವರು ಪೋಷಕರು ಮಕ್ಕಳ ಫೀಸ್ ಭರಿಸಲಾಗದೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಗೆ ಒಳಗಾಗಿದ್ದಾರೆ. ತಮ್ಮ ಉಳಿತಾಯದ ಹಣ, ಚಿನ್ನ ಎಲ್ಲವನ್ನೂ ಅಡಮಾನ ಇಟ್ಟು ಹಣ ಹೊಂದಿಸಿ ಫೀಸ್ ತುಂಬುತ್ತಿದ್ದಾರೆ. ಶಾಲೆಗಳು ಫೀಸ್ ಭರಿಸಲಾಗದ ಮಕ್ಕಳನ್ನು ಆನ್‍ಲೈನ್ ತರಗತಿಗಳಿಗೆ ಸೇರಿಸುತ್ತಿಲ್ಲ. ಜನತೆಯ ಜೀವ ಉಳಿಸಬೇಕಾದ ಸರ್ಕಾರ ಖಾಸಗಿ ಶಾಲೆಗಳ ಜೊತೆಗೆ ಕೈಜೋಡಿಸಿ ಪೋಷಕರ ಪ್ರಾಣ ಹಿಂಡುತ್ತಿದೆ. ಜನತೆಯ ಕಷ್ಟ ಆಲಿಸಲು ಆಗದ ತಾಳ್ಮೆ ಇಲ್ಲದ ಶಿಕ್ಷಣ ಸಚಿವರು ರಾಜೀನಾಮೆ ಕೊಟ್ಟು ಮನೆಗೆ ನಡೆಯಲಿ ಎಂದು ಟೀಕಿಸಿದರು. ಇದನ್ನೂ ಓದಿ: ಅಕ್ರಮ ಹಣ ಮಾಡಲು BDA ಅಧ್ಯಕ್ಷರಿಂದ ಹೊಸ ಹೊಸ ಯೋಜನೆ: ಆಪ್

    ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಸರ್ಕಾರಕ್ಕೆ ಕಣ್ಣಲ್ಲಿ ನೆತ್ತರಿಲ್ಲ. ಪೋಷಕರ ಕಷ್ಟಗಳು ಕಾಣುತ್ತಿಲ್ಲ. ಖಾಸಗಿ ಶಾಲೆಗಳ ಮಕ್ಕಳ ಪೋಷಕರು ಫೀಸ್ ಭರಿಸಲಾಗದೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಗೆ ಒಳಗಾಗಿದ್ದಾರೆ. ಹೀಗೆ ಮುಂದುವರಿದರೆ ರಾಜ್ಯದ ಶಿಕ್ಷಣ ಕ್ಷೇತ್ರದ ಭವಿಷ್ಯ ನೆಲಕ್ಕಚ್ಚಲಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಖಾಸಗಿ ಶಿಕ್ಷಣ ಸಂಸ್ಥೆಗಳ ಫೀಸ್ ಬಗ್ಗೆ ಮೌನವಾಗಿದ್ದಾರೆ. ಇವರೇ ಈ ಸಂಸ್ಥೆಗಳ ಜೊತೆಗೆ ಕೈ ಜೋಡಿಸಿದ್ದಾರೆ. ಮಕ್ಕಳ ಕಷ್ಟಕ್ಕೆ ಬಾರದ ಶಿಕ್ಷಣ ಸಚಿವ ಇದ್ದು ಫಲವೇನು? ತಕ್ಷಣ ರಾಜೀನಾಮೆ ನೀಡಿ ಮನೆಗೆ ನಡೆಯಲಿ ಎಂದು ಮೋಹನ್ ದಾಸರಿ ಆಗ್ರಹಿಸಿದರು. ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ದಂಧೆಯ ಪಾತ್ರಧಾರಿ ಸತೀಶ್ ರೆಡ್ಡಿ ಯನ್ನು ಕೂಡಲೇ ಬಂಧಿಸಿ – AAP ಆಗ್ರಹ

    ಅಭಿಯಾನದ ಅಂಗವಾಗಿ ಮನೆ ಮನೆ ಬೇಟಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ನೂರಾರು ಪೋಷಕರು ಮತ್ತು ಆಮ್ ಆದ್ಮಿ ಪಾರ್ಟಿಯ ನಾಯಕರು ಹಾಗೂ  ಕಾರ್ಯಕರ್ತರು ಭಾಗವಹಿಸಿದ್ದರು. ಅಭಿಯಾನವನ್ನು ಬೆಂಬಲಿಸಿ 7669100500 ಸಂಖ್ಯೆಗೆ ಮಿಸ್ಡ್ ಕಾಲ್ ನೀಡಲು ಕರೆ ನೀಡಲಾಯಿತು. ಇದನ್ನೂ ಓದಿ: ಭ್ರಷ್ಟಾಚಾರಿಗಳ ಪರ ಸಿಎಂ ನಿಂತಿದ್ದಾರೆ: ಎಎಪಿ ಆರೋಪ

  • ಭ್ರಷ್ಟಾಚಾರಿಗಳ ಪರ ಸಿಎಂ ನಿಂತಿದ್ದಾರೆ: ಎಎಪಿ ಆರೋಪ

    ಭ್ರಷ್ಟಾಚಾರಿಗಳ ಪರ ಸಿಎಂ ನಿಂತಿದ್ದಾರೆ: ಎಎಪಿ ಆರೋಪ

    ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ರವರ ಆಪ್ತ ಸಹಾಯಕನನ್ನು ಕೋಟ್ಯಾಂತರ ರೂಪಾಯಿಗಳ ಆರ್ಥಿಕ ಅಪರಾಧದಲ್ಲಿ ಬಂಧಿಸಿ ನಂತರ ಮುಖ್ಯಮಂತ್ರಿಗಳ ಒತ್ತಡದಿಂದ ಆರೋಪಿಯನ್ನು ಗೃಹ ಇಲಾಖೆಯ ಬಿಡುಗಡೆ ಮಾಡಿದೆ ಎಂದು ಆಮ್ ಆದ್ಮಿ ಪಕ್ಷ ಸಿಸಿಬಿ ಕಚೇರಿ ಎದುರು ಪ್ರತಿಭಟನೆ ಮಾಡಿದೆ.

    ಮುಖ್ಯಮಂತ್ರಿಗಳು ಹಾಗೂ ಪ್ರಭಾವಿ ಮಂತ್ರಿಗಳು ತಮ್ಮ ಸ್ವೇಚ್ಛಾಚಾರಕ್ಕೆ ಗೃಹ ಇಲಾಖೆಯನ್ನು ದುರ್ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಸಿಸಿಬಿ ಎದುರು ನಡೆಸಿದ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಯಿತು.

    ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಅವರು ಮಾತನಾಡಿ, ರಾಜ್ಯದಲ್ಲಿ ಜನಸಾಮಾನ್ಯರಿಗೊಂದು ನ್ಯಾಯ ಅಧಿಕಾರಸ್ಥರಿಗೆ ಒಂದು ನ್ಯಾಯ. ಭ್ರಷ್ಟರನ್ನು ಬಂಧಿಸಬೇಕಾದ ಪೊಲೀಸ್ ಇಲಾಖೆಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡು ಸಾಂವಿಧಾನಿಕವಾಗಿ ಪ್ರತಿಭಟನೆ ಮಾಡುವ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದು ಖಂಡನೀಯ ಎಂದು ಕಿಡಿಕಾರಿದರು.

    ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದ ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಅವರು ಮಾತನಾಡಿ, ಆರೋಪಿ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಮರು ಬಂಧನ ಆಗಲೇಬೇಕು, ಇದರ ಜೊತೆಗೆ ಮುಖ್ಯಮಂತ್ರಿಗಳ ಮಗ ವಿಜಯೇಂದ್ರರವರ ವಿಚಾರಣೆಯು ಸಹ ಮಾಡಬೇಕು. ನಾವು ಶಾಂತಿಯುತವಾದ ಪ್ರತಿಭಟನೆಯ ಮೂಲಕ ಅಗ್ರಹಿಸಿದರೆ ರಾಜ್ಯ ಸರ್ಕಾರ ಸರ್ವಾಧಿಕಾರಿ ನೀತಿಯನ್ನು ಅನುಸರಿಸಿ ನಾಚಿಕೆ ಬಿಟ್ಟು ಪ್ರತಿಭಟನಾಕಾರರನ್ನು ಬಂಧಿಸಿದೆ ಎಂದು ಆರೋಪಿಸಿದರು. ಇದನ್ನೂ ಓದಿ : ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಆದಾಯ ತೆರಿಗೆ ಇಲಾಖೆ ಜಾರಿ ನಿರ್ದೇಶನಾಲಯಗಳ ಮೂಲಕವೂ ಸಹ ಪ್ರಭಾವಿಗಳ ಅಕ್ರಮಗಳು ಹೊರಬರಬೇಕಿದೆ. ಈ ರೀತಿಯ ಬೃಹತ್ ಹಗರಣವನ್ನು ಮುಚ್ಚಿಹಾಕಲು ಪ್ರಭಾವಿಗಳು ಯತ್ನಿಸುತ್ತಿದ್ದಾರೆ. ಈ ಹಗರಣವದ ನಿಷ್ಪಕ್ಷಪಾತವಾದ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಘಟಕದ ಅಧ್ಯಕ್ಷ ಬಿ.ಟಿ ನಾಗಣ್ಣ ಆಗ್ರಹಿಸಿದರು.

    ಬೆಂಗಳೂರು ನಗರದ ಮೈಸೂರು ರಸ್ತೆಯಲ್ಲಿ ಇರುವ ಸಿಸಿಬಿ (ಕೇಂದ್ರ ಅಪರಾಧ ದಳ) ಕಚೇರಿಯ ಎದುರು ನಡೆದ ಈ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಮುಖ್ಯ ವಕ್ತಾರ ಶರತ್ ಖಾದ್ರಿ , ಉಷಾ ಮೋಹನ್, ಪ್ರಕಾಶ್ ನಾಗರಾಜ್, ಶಿಲ್ಪ ಬಿ, ಗೋಪಿನಾಥ್ ಮೊದಲಾದ ಮುಖಂಡರ ಜೊತೆಗೆ ನೂರಾರು ಮಂದಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನಾಕಾರರನ್ನು ಈ ಸಂದರ್ಭದಲ್ಲಿ ಬಂಧಿಸಲಾಯಿತು.

  • ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ

    ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ

    – ಬೃಹತ್ ಜನಜಾಗೃತಿ ಕಾರ್ಯಕ್ರಮ

    ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಶುಲ್ಕಗಳು, ಸರ್ಕಾರಿ ಶಾಲೆಗಳ ದುವ್ರ್ಯವಸ್ಥೆ, ಖಾಸಗಿ ಶಿಕ್ಷಕರ ಸಮಸ್ಯೆ, ಶುಲ್ಕ ನಿಯಂತ್ರಣ ಪ್ರಾಧಿಕಾರದ ರಚನೆ ಸೇರಿದಂತೆ ಹಲವಾರು ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರವು ಸಂಪೂರ್ಣ ವೈಫಲ್ಯಗೊಂಡಿದೆ. ಈ ಗೊಂದಲ ನಿವಾರಣೆಗಾಗಿ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ ಮತ್ತು ಜನಗಾಗೃತಿ ಕಾರ್ಯಕ್ರಮ ನಡೆಯಲಿದೆ.

    ಸರ್ಕಾರದ ಹೊಣೆಗೇಡಿತನದ ಪರಿಣಾಮವಾಗಿ ಇಂದು ರಾಜ್ಯದಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ವ್ಯವಸ್ಥೆ ಸಾಕಷ್ಟು ಸಂಕಷ್ಟಕ್ಕೀಡಾಗಿದೆ. ಶಾಲಾ ಶುಲ್ಕ ಗಳ ವಿಚಾರದಲ್ಲಿಯೂ ಸಹ ಪೋಷಕ ವರ್ಗ ಸಮಸ್ಯೆಗೀಡಾಗಿದೆ. ಈ ಎಲ್ಲ ಗೊಂದಲಗಳಿಂದಾಗಿ ಲಕ್ಷಾಂತರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಸರ್ಕಾರದ ಈ ಎಲ್ಲಾ ವೈಫಲ್ಯಗಳನ್ನು ಬಗೆಹರಿಸಲು ಒತ್ತಾಯಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಸಾವಿರಾರು ಕಾರ್ಯಕರ್ತರು ಸತತ 15 ದಿನಗಳ ಕಾಲ ರಾಜ್ಯದಾದ್ಯಂತ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕನಿಷ್ಠ 5 ಲಕ್ಷ ಮನೆಗಳಿಗೆ ತೆರಳಿ ಸಹಿ ಸಂಗ್ರಹಣೆ ಹಾಗೂ ಬೃಹತ್ ಜನಾಂದೋಲನ ಕಾರ್ಯ ಕ್ರಮವನ್ನು ನಡೆಸುವವರಿದ್ದಾರೆ ಎಂದು ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಪತ್ರಿಕಾಗೋಷ್ಠಿ ನಡೆಸಿ ಸಮಗ್ರ ಚಿತ್ರಣ ನೀಡಿದರು. ಇದನ್ನೂ ಓದಿ: ಕರ್ನಾಟಕ ನಂಬರ್ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುತ್ತೆ: ಜಗದೀಶ್ ಶೆಟ್ಟರ್

    ಕರಪತ್ರ, ಎಲ್.ಇ.ಡಿ ವಾಹನ, ವಿಚಾರಗೋಷ್ಠಿಗಳು, ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಈ ಅಭಿಯಾನವನ್ನು ಯಶಸ್ವಿಯಾಗಿಸಲು ಈಗಾಗಲೇ ಹಲವು ರೂಪುರೇಷೆಗಳನ್ನು ಪಕ್ಷವು ಕೈಗೊಂಡಿದೆ ಎಂದು ಮಾಹಿತಿ ಹಂಚಿಕೊಂಡರು.