Tag: aap

  • ಗಣರಾಜ್ಯೋತ್ಸವ ಪರೇಡ್‌ಗೆ ಮತ್ತೆ ದೆಹಲಿ ಟ್ಯಾಬ್ಲೋ ತಿರಸ್ಕಾರ – ಆಪ್‌, ಬಿಜೆಪಿ ನಡುವೆ ವಾಗ್ವಾದ

    ಗಣರಾಜ್ಯೋತ್ಸವ ಪರೇಡ್‌ಗೆ ಮತ್ತೆ ದೆಹಲಿ ಟ್ಯಾಬ್ಲೋ ತಿರಸ್ಕಾರ – ಆಪ್‌, ಬಿಜೆಪಿ ನಡುವೆ ವಾಗ್ವಾದ

    – ಶೀಷ್‌ ಮಹಲ್‌ ಟ್ಯಾಬ್ಲೋ ಪ್ರದರ್ಶನ ಮಾಡ್ತೀರಾ? – ಬಿಜೆಪಿ ವ್ಯಂಗ್ಯ

    ನವದೆಹಲಿ: ರಾಜಪಥದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಗಣರಾಜ್ಯೋತ್ಸವದ (Republic Day) ಪರೇಡ್‌ನಲ್ಲಿ ದೆಹಲಿಯ ಟ್ಯಾಬ್ಲೋ (Delhi Tableau) ಇರುವುದಿಲ್ಲ. ನಾಲ್ಕನೇ ಬಾರಿ ಈ ರೀತಿ ದೆಹಲಿಯ ಟ್ಯಾಬ್ಲೋ ತಿರಸ್ಕಾರಗೊಂಡಿದ್ದು, ಆಪ್‌ (AAP) ಹಾಗೂ ಬಿಜೆಪಿ (BJP) ನಡುವೆ ಮತ್ತೆ ಸಂಘರ್ಷಕ್ಕೆ ಕಾರಣವಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಆಪ್‌ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌, ಕಳೆದ ಕೆಲವು ವರ್ಷಗಳಿಂದ ದೆಹಲಿಯ ಟ್ಯಾಬ್ಲೋಗೆ ಪರೇಡ್‌ನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇದು ಯಾವ ರೀತಿಯ ರಾಜಕೀಯ? ಬಿಜೆಪಿಯವರು ದೆಹಲಿಯ ಜನರನ್ನು ಏಕೆ ದ್ವೇಷಿಸುತ್ತಾರೆ? ದೆಹಲಿಯ ಜನರು ಅವರಿಗೆ ಏಕೆ ಮತ ಹಾಕಬೇಕು? ಎಂದು ಕಿಡಿಕಾರಿದ್ದಾರೆ.

    ಬಿಜೆಪಿಗೆ ದೆಹಲಿಯ ಜನರ ಬಗ್ಗೆ ಯಾವುದೇ ದೂರದೃಷ್ಟಿ ಇಲ್ಲ. ಅವರು ಸುಮ್ಮನೆ ಕೇಜ್ರಿವಾಲ್‌ರನ್ನು ನಿಂದಿಸುತ್ತಾರೆ. ಇದಕ್ಕಾಗಿ ನಾವು ಅವರಿಗೆ ಮತ ಹಾಕಬೇಕೇ? ಜನವರಿ 26 ರ ಪರೇಡ್‌ನಲ್ಲಿ ಭಾಗವಹಿಸದಂತೆ ಟ್ಯಾಬ್ಲೋ ಮತ್ತು ದೆಹಲಿಯ ಜನರನ್ನು ಏಕೆ ತಡೆಯಲಾಗುತ್ತಿದೆ? ಎಂದು ಅವರು ಪ್ರಶ್ನಸಿದ್ದಾರೆ.

    ದೆಹಲಿಯು ಭಾರತದ ರಾಜಧಾನಿಯಾಗಿದೆ ಮತ್ತು ಪ್ರತಿ ವರ್ಷ ಜನವರಿ 26 ರ ಮೆರವಣಿಗೆಯಲ್ಲಿ ನಮ್ಮ ಟ್ಯಾಬ್ಲೋ ಪ್ರತಿನಿಧಿಸಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ್, ಕೇಜ್ರಿವಾಲ್‌ ಹೇಳಿಕೆಗಳು ಅರಾಜಕತಾವಾದಿ ಸ್ವಭಾವವನ್ನು ಸೂಚಿಸುತ್ತದೆ. ಏನನ್ನು ಪ್ರದರ್ಶಿಸಲು ಅವರು ಬಯಸಿದ್ದರು? ಪ್ರವಾಹದಲ್ಲಿ 60 ಕ್ಕೂ ಹೆಚ್ಚು ಜನರ ಸಾವನ್ನು ತೋರಿಸುತ್ತಾರೆಯೇ? ಅಥವಾ ಜನರ ಹಣವನ್ನು ಲೂಟಿ ಮಾಡಿ ಅವರು ಕಟ್ಟಿದ ʻಶೀಷ್‌ ಮಹಲ್‌ʼನ್ನು ತೋರಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

    ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಇಡೀ ದೇಶದ ಟ್ಯಾಬ್ಲೋವನ್ನು ಪ್ರದರ್ಶಿಸಲಾಗುತ್ತದೆ. ಸಮಿತಿಯು ಟ್ಯಾಬ್ಲೋ ಬಗ್ಗೆ ನಿರ್ಧರಿಸುತ್ತದೆ. ಈಗ, ಅರವಿಂದ್ ಕೇಜ್ರಿವಾಲ್ ಇದರಲ್ಲೂ ರಾಜಕೀಯ ಮಾಡಲು ಬಯಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

    2021ರ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಕೊನೆಯ ಬಾರಿಗೆ ದೆಹಲಿಯ ಟ್ಯಾಬ್ಲೋ ಕಾಣಿಸಿಕೊಂಡಿತ್ತು. ಇದು ಶಹಜಹಾನಾಬಾದ್ ನಗರಾಭಿವೃದ್ಧಿ ಯೋಜನೆಯನ್ನು ಪ್ರದರ್ಶಿಸಿತ್ತು.

  • ಅಮಿತ್ ಶಾ ಹೇಳಿಕೆಗೆ ತಿರುಗೇಟು – ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್

    ಅಮಿತ್ ಶಾ ಹೇಳಿಕೆಗೆ ತಿರುಗೇಟು – ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್

    ನವದೆಹಲಿ: ಡಾ. ಬಿ.ಆರ್ ಅಂಬೇಡ್ಕರ್ (BR Ambedkar) ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಗದ್ದಲಗಳು ನಡೆಯುತ್ತಿರುವ ಹೊತ್ತಲ್ಲೇ ದಲಿತ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಹೆಸರಿನ ವಿದ್ಯಾರ್ಥಿ ವೇತನ ಯೋಜನೆಯನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಘೋಷಿಸಿದ್ದಾರೆ.

    ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ನಡೆಸುತ್ತಿರುವ ಕೇಜ್ರಿವಾಲ್ ಹೊಸ ಯೋಜನೆ ಘೋಷಿಸಿದರು. ಸಂವಿಧಾನದ ಪಿತಾಮಹ ಬಾಬಾ ಸಾಹೇಬರ ವಿರುದ್ಧ ಅಮಿತ್ ಶಾ (Amit Shah) ಅವರ “ಅಗೌರವ” ಹೇಳಿಕೆಗೆ ಪ್ರತಿಕ್ರಿಯೆಯಾಗಿ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: 9/11 ದಾಳಿಯಂತೆ ರಷ್ಯಾ ಬಹುಮಹಡಿ ಕಟ್ಟಡಗಳ ಮೇಲೆ ಡ್ರೋನ್‌ ದಾಳಿ

    ವಿಧಾನಸಭಾ ಚುನಾವಣೆಯಲ್ಲಿ ಎಎಪಿ (AAP) ಗೆದ್ದರೆ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆದ ದಲಿತ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಧನಸಹಾಯ ನೀಡಲಿದೆ. ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಯು ಹಣದ ಕೊರತೆಯಿಂದಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಅಧ್ಯಯನವನ್ನು ತ್ಯಜಿಸಬಾರದು ಎಂದು ಕೇಜ್ರಿವಾಲ್ ತಮ್ಮ ಪ್ರಚಾರದಲ್ಲಿ ತಿಳಿಸಿದರು.

    ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅ್ಯಂಡ್ ಪೊಲಿಟಿಕಲ್ ಸೈನ್ಸ್‌ನಲ್ಲಿ ಓದುವಾಗ ಹಣದ ಕೊರತೆಯಿಂದ ತಮ್ಮ ಶಿಕ್ಷಣವನ್ನು ಮಧ್ಯದಲ್ಲಿ ನಿಲ್ಲಿಸಬೇಕಾಯಿತು. ಅವರು ಮನೆಗೆ ಹಿಂದಿರುಗಿ ಹಣದ ವ್ಯವಸ್ಥೆ ಮಾಡಿಕೊಂಡು ಹಿಂತಿರುಗಿ ಅವರ ಶಿಕ್ಷಣವನ್ನು ಪೂರ್ಣಗೊಳಿಸಿದರು ಎಂದರು.

    ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅಪಹಾಸ್ಯ ಮಾಡುತ್ತಿದ್ದಾರೆ. ಅವರ ಹೇಳಿಕೆಯಿಂದ ನನಗೂ ಸೇರಿ ಕೋಟ್ಯಂತರ ಅನುಯಾಯಿಗಳಿಗೆ ನೋವಾಗಿದೆ. ಸ್ವತಂತ್ರ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಯಾರಾದರೂ ಸಂಸತ್ತಿನಲ್ಲಿ ಅಪಹಾಸ್ಯ ಮಾಡುತ್ತಾರೆಂದು ಯಾರೂ ಊಹಿಸಿರಲಿಲ್ಲ. ಅಮಿತ್ ಶಾ ಅವರ ಅಗೌರವದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ನಾನು ಈ ಘೋಷಣೆ ಮಾಡುತ್ತಿದ್ದೇನೆ. ಯೋಜನೆಯಲ್ಲಿ ಸರ್ಕಾರಿ ನೌಕರರ ಮಕ್ಕಳನ್ನೂ ಸೇರಿಸಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ದೇವಾಲಗಳ ಮೇಲಿನ ದಾಳಿ – 2 ದಿನಗಳಲ್ಲಿ 8 ವಿಗ್ರಹ ಧ್ವಂಸ

  • Delhi Assembly Election | ಚುನಾವಣಾ ಆಯೋಗದಿಂದ ಪೂರ್ವಸಿದ್ಧತಾ ಸಭೆ – ಮುಂದಿನ ವಾರವೇ ದಿನಾಂಕ ಪ್ರಕಟ ಸಾಧ್ಯತೆ

    Delhi Assembly Election | ಚುನಾವಣಾ ಆಯೋಗದಿಂದ ಪೂರ್ವಸಿದ್ಧತಾ ಸಭೆ – ಮುಂದಿನ ವಾರವೇ ದಿನಾಂಕ ಪ್ರಕಟ ಸಾಧ್ಯತೆ

    ನವದೆಹಲಿ: ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ (Delhi Assembly Election) ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗ (Election Commission Of India) ಈ ವಾರ ಪೂರ್ವಸಿದ್ಧತಾ ಸಭೆಗೆ ಕರೆ ನೀಡಿದೆ. ಈ ಸಭೆಯ ಬಳಿಕ ಚುನಾವಣಾ ದಿನಾಂಕಗಳನ್ನು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

    ಈಗಾಗಲೇ ದೆಹಲಿ ವಿಧಾನಸಭಾ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷ (AAP) ಎಲ್ಲಾ 70 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಜೊತೆಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ.ಇದನ್ನೂ ಓದಿ: ಪ್ಯಾಲೆಸ್ತೀನ್ ಬಳಿಕ ಬಾಂಗ್ಲಾ ಅಲ್ಪಸಂಖ್ಯಾತರ ಪರ ಪ್ರಿಯಾಂಕಾ ಧ್ವನಿ

    ಇನ್ನೂ ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಶೀಲಾ ದೀಕ್ಷಿತ್ ಅವರ ಪುತ್ರ ಸಂದೀಪ್ ದೀಕ್ಷಿತ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಬಿಜೆಪಿಯು ಈ ತಿಂಗಳ ಕೊನೆಯ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಿದ್ದು, ಗಮನಾರ್ಹ ಸಂಖ್ಯೆಯಲ್ಲಿ ಹೊಸ ಮುಖಗಳನ್ನು ಹೊಂದಿರುವ ಸಾಧ್ಯತೆಯಿದೆ ಹಾಗೂ ಬಿಜೆಪಿ ದಿವಂಗತ ಮುಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ ಪರ್ವೇಶ್ ವರ್ಮಾ ಅವರನ್ನು ಕಣಕ್ಕಿಳಿಸಬಹುದು ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

    ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಮಾತನಾಡಿ, ಈಗಾಗಲೇ ಪಕ್ಷವು ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ಗಾಗಿ ಎಲ್ಲಾ 70 ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರಿಂದ 2,000ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಮುಂದುವರಿದ ಹಂತದಲ್ಲಿದ್ದು, ಪ್ರತಿ ಕ್ಷೇತ್ರದಲ್ಲಿ ಮೂರು ಸಂಭಾವ್ಯರನ್ನು ಈಗಾಗಲೇ ಶಾರ್ಟ್ಲಿಸ್ಟ್ ಮಾಡಲಾಗಿದೆ ಎಂದು ಹೇಳಿದರು.

    ಫೆಬ್ರವರಿಯಲ್ಲಿ ನಡೆಯಲಿರುವ 70 ಸದಸ್ಯರ ದೆಹಲಿ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ಬೃಹತ್ ಪ್ರಚಾರವನ್ನು ಆರಂಭಿಸಿದ್ದು, ಆಡಳಿತಾರೂಢ ಎಎಪಿಯ ಭದ್ರಕೋಟೆ ಎಂದು ಪರಿಗಣಿಸಲಾದ ನಗರಗಳಲ್ಲಿ ನೆಲೆಯೂರಲು ಸಿದ್ಧತೆಯನ್ನು ನಡೆಸಿದೆ.

    ಬಿಜೆಪಿಯು 1998 ರಿಂದ ದೆಹಲಿಯಲ್ಲಿ ಅಧಿಕಾರದಿಂದ ಹೊರಗುಳಿದಿದ್ದು, 2015 ರಿಂದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಬಲ್ಯ ಹೊಂದಿರುವ ಆಡಳಿತಾರೂಢ ಎಎಪಿಯನ್ನು ತಳ್ಳಿಹಾಕಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಎಎಪಿ 2015 ಮತ್ತು 2020ರಲ್ಲಿ ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಕ್ರಮವಾಗಿ 67 ಮತ್ತು 62 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.ಇದನ್ನೂ ಓದಿ: ಫಾಲೋ ಆನ್‌ನಿಂದ ಭಾರತ ಬಚಾವ್‌ – ಕೊನೆಯ ವಿಕೆಟ್‌ಗೆ 39 ರನ್‌ಗಳ ಜೊತೆಯಾಟ ಉಳಿಸಿತು ಮಾನ!

  • Delhi assembly polls: ಎಎಪಿ ಅಂತಿಮ ಪಟ್ಟಿ ರಿಲೀಸ್‌ – ನವದೆಹಲಿಯಿಂದ ಕೇಜ್ರಿವಾಲ್‌ ಕಣಕ್ಕೆ

    Delhi assembly polls: ಎಎಪಿ ಅಂತಿಮ ಪಟ್ಟಿ ರಿಲೀಸ್‌ – ನವದೆಹಲಿಯಿಂದ ಕೇಜ್ರಿವಾಲ್‌ ಕಣಕ್ಕೆ

    ನವದೆಹಲಿ: 2025 ರ ದೆಹಲಿ ವಿಧಾನಸಭಾ ಚುನಾವಣೆಗೆ (Delhi Assembly Election) ತನ್ನ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ (AAP) ಬಿಡುಗಡೆ ಮಾಡಿದೆ. ನವದೆಹಲಿಯಿಂದ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಕಲ್ಕಾಜಿಯಿಂದ ಮುಖ್ಯಮಂತ್ರಿ ಅತಿಶಿ ಅವರು ಸ್ಪರ್ಧಿಸಲಿದ್ದಾರೆ.

    38 ಅಭ್ಯರ್ಥಿಗಳ ಪಟ್ಟಿಯಲ್ಲಿ ಸೌರಭ್ ಭಾರದ್ವಾಜ್, ಗೋಪಾಲ್ ರೈ, ಸತ್ಯೇಂದ್ರ ಕುಮಾರ್ ಜೈನ್ ಮತ್ತು ದುರ್ಗೇಶ್ ಪಾಠಕ್ ಸೇರಿದಂತೆ ಪಕ್ಷದ ಇತರ ಪ್ರಮುಖ ನಾಯಕರು ಇದ್ದಾರೆ. ಇದನ್ನೂ ಓದಿ: 46 ವರ್ಷ ಹಳೆ ಕಾಲದ ಹಿಂದೂ ದೇವಾಲಯ ಪತ್ತೆ; ಸಂಭಲ್ ಮಸೀದಿ ಸುತ್ತ ಮುಂದುವರಿದ ತೆರವು ಕಾರ್ಯ

    ರಾಷ್ಟ್ರ ರಾಜಧಾನಿಯ 70 ಸದಸ್ಯರ ವಿಧಾನಸಭೆಗೆ ಫೆಬ್ರವರಿ 2025 ರಲ್ಲಿ ಚುನಾವಣೆ ನಡೆಯಲಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು, ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಸ್ವಂತ ಬಲದ ಮೇಲೆ ಪಕ್ಷ ಚುನಾವಣೆ ಎದುರಿಸಲಿದೆ ಎಂದಿದ್ದಾರೆ.

    ಸಚಿವ ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್‌ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಗೋಪಾಲ್ ರೈ ಅವರು ಬಾಬರ್‌ಪುರದಿಂದ ಕಣಕ್ಕಿಳಿದಿದ್ದಾರೆ. ಎಎಪಿಯ ಅಂತಿಮ ಪಟ್ಟಿಯು ಶಕುರ್ ಬಸ್ತಿಯಿಂದ ಸತ್ಯೇಂದ್ರ ಕುಮಾರ್ ಜೈನ್ ಮತ್ತು ರಾಜಿಂದರ್ ನಗರದಿಂದ ದುರ್ಗೇಶ್ ಪಾಠಕ್ ಸ್ಪರ್ಧೆಯಲ್ಲಿದ್ದಾರೆ. ಇದನ್ನೂ ಓದಿ: ಸಂಭಲ್‌ ಮಸೀದಿ ಸುತ್ತ ಒತ್ತುವರಿ ತೆರವು ವೇಳೆ ಹಳೇ ಹಿಂದೂ ದೇಗುಲ ಪತ್ತೆ

  • ಚುನಾವಣೆಗೂ ಮುನ್ನವೇ ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್ – ಈಗ ತಿಂಗಳಿಗೆ 1,000 ಮತ್ತೆ ಗೆದ್ದರೆ 2,100 ರೂ.!

    ಚುನಾವಣೆಗೂ ಮುನ್ನವೇ ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್ – ಈಗ ತಿಂಗಳಿಗೆ 1,000 ಮತ್ತೆ ಗೆದ್ದರೆ 2,100 ರೂ.!

    ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ ಹಣಕಾಸು ನೆರವು ನೀಡುವ ಪ್ರಸ್ತಾವನೆಗೆ ದೆಹಲಿ (Delhi) ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಘೋಷಿಸಿದ್ದಾರೆ. ನಾಳೆಯಿಂದಲೇ (ಶುಕ್ರವಾರ) ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ಇದರ ಹೊರತಾಗಿಯೂ, ಮುಂದಿನ 10 ರಿಂದ 15 ದಿನಗಳಲ್ಲಿ ದೆಹಲಿ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸಲಾಗುವುದರಿಂದ ಹಣವನ್ನು ತಕ್ಷಣವೇ ಠೇವಣಿ ಮಾಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಮುಂಬರುವ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ (AAP) ಅಧಿಕಾರಕ್ಕೆ ಬಂದರೆ, 1,000 ರೂ.ಗಳ ಸಹಾಯವನ್ನು 2,100 ರೂ.ಗಳಿಗೆ ಹೆಚ್ಚಿಸಲಾಗುವುದು. ಚುನಾವಣೆಯನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿರುವುದರಿಂದ ಹಣವನ್ನು ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದಿಲ್ಲ. ಆದರೆ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ ಹೆಸರಿನ ಯೋಜನೆಗೆ ನೋಂದಣಿ ನಾಳೆ ಪ್ರಾರಂಭವಾಗಲಿದೆ ಎಂದಿದ್ದಾರೆ.

    ಪ್ರತಿ ಮಹಿಳೆಗೆ 1,000 ರೂ. ನೀಡುವುದಾಗಿ ನಾನು ಹಿಂದೆ ಭರವಸೆ ನೀಡಿದ್ದೆ. ಆದರೆ ಕೆಲವು ಮಹಿಳೆಯರು ನನ್ನ ಬಳಿಗೆ ಬಂದು 1,000 ರೂ. ಸಾಕಾಗುವುದಿಲ್ಲ ಎಂದು ಹೇಳಿದ್ದರು. ಆದ್ದರಿಂದ ಎಲ್ಲಾ ಮಹಿಳೆಯರಿಗೂ 2,100 ರೂ. ನೀಡಲು ತೀರ್ಮಾನಿಸಿದ್ದೇವೆ. ಈ ಬಗ್ಗೆ ಸಿಎಂ ಅತಿಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಈ ಯೋಜನೆಯು ದೆಹಲಿ ಸರ್ಕಾರಕ್ಕೆ ವರದಾನವಾಗಿದೆ ಎಂದು ಸಾಬೀತುಪಡಿಸುತ್ತದೆ. ಏಕೆಂದರೆ ಇದು ಮಾಸಿಕ ಧನಸಹಾಯದಿಂದ ತಾಯಂದಿರು ಮತ್ತು ಸಹೋದರಿಯರಿಂದ ಆಶೀರ್ವಾದ ಪಡೆಯುತ್ತದೆ. ಮಹಿಳೆಯರು ನಮ್ಮ ದೇಶದ ಭವಿಷ್ಯವನ್ನು ನಿರ್ಮಿಸುತ್ತಾರೆ, ಅವರನ್ನು ಬೆಂಬಲಿಸುವುದು ನಮ್ಮ ಸುಯೋಗವೆಂದು ನಾವು ಪರಿಗಣಿಸುತ್ತೇವೆ. ಮೇ ತಿಂಗಳಿಗಾದರೂ ಈ ಯೋಜನೆ ಜಾರಿಗೆ ಬರಲಿದೆ ಎಂದಿದ್ದಾರೆ.

    ಬಿಜೆಪಿಯವರು ಸಂಚು ರೂಪಿಸಿ ನನ್ನನ್ನು ಜೈಲಿಗೆ ಕಳುಹಿಸಿದ್ದರು. ನಾನು ಜೈಲಿನಿಂದ ಮರಳಿದ ನಂತರ, ಅತಿಶಿ ಅವರೊಂದಿಗೆ ಈ ಯೋಜನೆಯನ್ನು ಜಾರಿಗೆ ತರಲು ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

  • ಮನೀಶ್ ಸಿಸೋಡಿಯಾ ಜಾಮೀನು ನಿಯಮ ಸಡಿಲಿಸಿದ ಸುಪ್ರೀಂ

    ಮನೀಶ್ ಸಿಸೋಡಿಯಾ ಜಾಮೀನು ನಿಯಮ ಸಡಿಲಿಸಿದ ಸುಪ್ರೀಂ

    ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ (Delhi) ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರ ಜಾಮೀನು ಷರತ್ತುಗಳನ್ನು ಸುಪ್ರೀಂಕೋರ್ಟ್ (Supreme Court) ಸಡಿಲಿಸಿದೆ. ಈ ಮೂಲಕ ವಾರಕ್ಕೆ ಎರಡು ಬಾರಿ ತನಿಖಾ ಸಂಸ್ಥೆಗಳಿಗೆ ಮುಂದೆ ಹಾಜರಾಗುವ ಷರತ್ತಿಗೆ ತಡೆ ನೀಡಿದೆ.ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಗುಲಾಬಿ ಜೊತೆಗೆ ತ್ರಿವರ್ಣ ಧ್ವಜ ನೀಡಿದ ವಿಪಕ್ಷಗಳು

    ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಮತ್ತು ಮನಿ ಲ್ಯಾಂಡರಿಂಗ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಆ.9 ರಂದು ಸಿಸೋಡಿಯಾ ಅವರ ಜಾಮೀನಿನಲ್ಲಿ ಷರತ್ತುಗಳನ್ನು ವಿಧಿಸಲಾಗಿತ್ತು. ಇದೀಗ ಷರತ್ತುಗಳ ಮಾರ್ಪಡಿಸುವ ಸಂದರ್ಭದಲ್ಲಿ ಷರತ್ತುಗಳ ಅಗತ್ಯವಿಲ್ಲ ಎಂದು ಪೀಠ ಆದೇಶ ಹೊರಡಿಸಿದೆ.

    ಸುಪ್ರೀಂಕೋರ್ಟ್ನ ತೀರ್ಪು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಪ್ರಕರಣಗಳೆರಡಕ್ಕೂ ಅನ್ವಯಿಸುತ್ತದೆ. ಆದಾಗ್ಯೂ, ಸಿಸೋಡಿಯಾ ಅವರು ನಿಯಮಿತವಾಗಿ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಇದನ್ನೂ ಓದಿ: ಪಿಎಂ ಮೋದಿರನ್ನು ಭೇಟಿಯಾದ ಕರೀನಾ ಕಪೂರ್ ಕುಟುಂಬ

     

  • ದೆಹಲಿ ಚುನಾವಣೆಗೆ ಕಾಂಗ್ರೆಸ್ ಜೊತೆ ಆಪ್ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್

    ದೆಹಲಿ ಚುನಾವಣೆಗೆ ಕಾಂಗ್ರೆಸ್ ಜೊತೆ ಆಪ್ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್

    ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ (Delhi Assembly Election) ತಮ್ಮ ಪಕ್ಷವು ಸ್ವಂತ ಬಲದಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ (Congress) ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಎಪಿ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಸ್ಪಷ್ಟಪಡಿಸಿದ್ದಾರೆ.

    ಕಾಂಗ್ರೆಸ್ ಜೊತೆಗೆ ಆಪ್ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವರದಿ ಬೆನ್ನಲ್ಲೇ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸ್ಪಷ್ಟಪಡಿಸಿದ ಅವರು, ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: BBK 11: ಮೋಕ್ಷಿತಾ ಹೇಳಿದ್ದು ಸರಿ- ಮಂಜು ಜೊತೆಗಿನ ಫ್ರೆಂಡ್‌ಶಿಪ್‌ ಕಟ್‌ ಎಂದ ಗೌತಮಿ

    ಇಂಡಿಯಾ ವಿರೋಧ ಪಕ್ಷದ ಭಾಗವಾಗಿದ್ದರೂ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಅರವಿಂದ್ ಕೇಜ್ರಿವಾಲ್ ತಳ್ಳಿಹಾಕಿದ್ದು ಇದೇ ಮೊದಲಲ್ಲ. ಈ ತಿಂಗಳ ಆರಂಭದಲ್ಲಿ, ಕೇಜ್ರಿವಾಲ್ ಪಕ್ಷವು ಸತತ ಮೂರನೇ ಅವಧಿಗೆ ಗಮಹರಿಸುತ್ತಿರುವುದರಿಂದ ದೆಹಲಿ ವಿಧಾನಸಭಾ ಚುನಾವಣೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಸ್ಸಂದಿಗ್ಧವಾಗಿ ಹೇಳಿದರು.

    2015 ರಿಂದ ದೆಹಲಿಯಲ್ಲಿ ಎಎಪಿ ಅಧಿಕಾರದಲ್ಲಿದೆ. ಈ ಚುನಾವಣೆ ಮೂಲಕ ದೆಹಲಿಯಲ್ಲಿ ಬಿಜೆಪಿ ತನ್ನ ಪ್ರಭಾವವನ್ನು ವಿಸ್ತರಿಸುವ ವಿಫಲ ಪ್ರಯತ್ನ ಮಾಡುತ್ತಿದೆ. ಆದರೆ ಇಂಡಿಯಾ ಒಕ್ಕೂಟ ಒಟ್ಟಾಗಿ ಚುನಾವಣೆಗೆ ಹೋಗುವ ಲೆಕ್ಕಾಚಾರದಲ್ಲಿದೆ.

    ಲೋಕಸಭೆ ಚುನಾವಣೆಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಿದ್ದವು ಆದರೆ ಬಿಜೆಪಿ ಎಲ್ಲಾ ಸ್ಥಾನಗಳನ್ನು ಗೆದ್ದಿತ್ತು. ಬಳಿಕ ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೆಂದರ್ ಯಾದವ್ ಅವರು ಎಎಪಿ ಜೊತೆಗಿನ ಮೈತ್ರಿಯನ್ನು “ತಪ್ಪು” ಎಂದು ಕರೆದರು ಮತ್ತು ನಗರದ ಎಲ್ಲಾ 70 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪ್ರತಿಪಾದಿಸಿದರು.

    ಈ ನಿರ್ಧಾರವು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆಗೆ ವೇದಿಕೆಯನ್ನು ಸಿದ್ಧಪಡಿಸಿದ್ದು, ಎಎಪಿ, ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿವೆ. 2015 ಮತ್ತು 2020ರಲ್ಲಿ ನಡೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ, ಎಎಪಿ ಕ್ರಮವಾಗಿ 67 ಮತ್ತು 62 ಸ್ಥಾನಗಳನ್ನು ಗೆದ್ದಿದ್ದರೆ, 70 ಸದಸ್ಯರ ಶಾಸಕಾಂಗದಲ್ಲಿ ಬಿಜೆಪಿ ಮೂರು ಮತ್ತು ಎಂಟು ಸ್ಥಾನಗಳನ್ನು ಪಡೆದುಕೊಂಡಿತ್ತು. ಎರಡೂ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿತ್ತು.ಇದನ್ನೂ ಓದಿ: ಭಾರತಕ್ಕೂ ಮೊದಲೇ ಚಾಂಪಿಯನ್ಸ್‌ ಟ್ರೋಫಿ ಬಾಯ್ಕಾಟ್‌ ಮಾಡ್ಬೇಕು – ಪಾಕ್ ಹೊಸ ಕ್ಯಾತೆ

  • Delhi Assembly Election | 20 ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಿದ ಆಪ್

    Delhi Assembly Election | 20 ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಿದ ಆಪ್

    – ಮನೀಷ್ ಸಿಸೋಡಿಯಾ ಕ್ಷೇತ್ರ ಬದಲಾವಣೆ

    ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ (Delhi Assembly Election) ಆಮ್ ಆದ್ಮಿ ಪಕ್ಷ (Aam Aadmi Party) 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮನೀಷ್ ಸಿಸೋಡಿಯಾ (Manisha Sisodia) ಅವರ ಕ್ಷೇತ್ರದಲ್ಲಿ ಬದಲಾವಣೆಯಾಗಿದೆ.

    70 ವಿಧಾನಸಭಾ ಕ್ಷೇತ್ರಗಳಿಗೆ 2025ರ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದ್ದು, ಇಂದು (ಡಿ.9) ಆಮ್ ಆದ್ಮಿ ಪಕ್ಷ 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದಕ್ಕೂ ಮುಂಚೆ ನ.21 ರಂದು 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು.ಇದನ್ನೂ ಓದಿ: 5 ದಿನಗಳ ವ್ರತ ಆಚರಣೆ – ಹನುಮ ಮಾಲೆ ಧರಿಸಿದ ಜನಾರ್ದನ ರೆಡ್ಡಿ

    ಮಾಜಿ ಡಿಸಿಎಂ ಹಾಗೂ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರು ದೆಹಲಿಯ ಪಟ್ಪರ್‌ಗಂಜ್ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಈ ಬಾರಿ ಜಂಗ್‌ಪುರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಇತ್ತೀಚೆಗೆ ಎಎಪಿ ಸೇರ್ಪಡೆಗೊಂಡಿದ್ದ ಅವಧ್ ಓಜಾ ಪಟ್ಪರ್‌ಗಂಜ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

    ಶಹದಾರದಿಂದ ಕ್ಷೇತ್ರದಿಂದ ಜಿಂಟೆಂಡರ್ ಸಿಂಗ್ ಶುಂಟಿ, ಇತ್ತೀಚೆಗೆ ಬಿಜೆಪಿ ತೊರೆದು ಆಪ್ ಸೇರಿದ್ದ ಸುರೀಂದರ್ ಪಾಲ್ ಸಿಂಗ್ ಬಿಟ್ಟು ಅವರು ತಿಮಾರ್‌ಪುರ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮೊದಲು ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಬಿಟ್ಟು ಎಎಪಿ ಸೇರಿದ್ದ 6 ನಾಯಕರು ಸೇರಿದಂತೆ ಒಟ್ಟು 11 ಅಭ್ಯರ್ಥಿಗಳ ಹೆಸರಿತ್ತು. ಬಿಜೆಪಿಯಿಂದ ಬ್ರಹ್ಮ ಸಿಂಗ್ ತನ್ವಾರ್, ಬಿಬಿ ತ್ಯಾಗಿ, ಅನಿಲ್ ಝಾ ಹಾಗೂ ಕಾಂಗ್ರೆಸ್‌ನಿಂದ ಜುಬೇರ್ ಚೌಧರಿ, ವೀರ್ ಸಿಂಗ್ ದಿಂಗನ್, ಸೋಮೇಶ್ ಶೋಕೀನ್ ಆಮ್ ಆದ್ಮಿ ಪಕ್ಷವನ್ನು ಸೇರಿದ್ದರು. ಇವರನ್ನು ಒಳಗೊಂಡಂತೆ ರಾಮ್ ಸಿಂಗ್ ನೇತಾಜಿ, ಗೌರವ್ ಶರ್ಮಾ, ಮನೋಜ್ ತ್ಯಾಗಿ, ದೀಪಕ್ ಸಿಂಘಾಲ್ ಹಾಗೂ ಸರಿತಾ ಸಿಂಗ್‌ರವರ ಹೆಸರು ಪಟ್ಟಿಯಲ್ಲಿದೆ.

    ಸದ್ಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ 31 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಇನ್ನೂ 39 ಕ್ಷೇತ್ರಗಳಿಗೆ ಘೋಷಣೆ ಮಾಡಬೇಕಿದೆ.ಇದನ್ನೂ ಓದಿ:ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಅವಿರೋಧ ಆಯ್ಕೆ

  • ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಮಿತ್ ಶಾ ವಿಫಲರಾಗಿದ್ದಾರೆ: ಕೇಜ್ರಿವಾಲ್ ಆರೋಪ

    ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಮಿತ್ ಶಾ ವಿಫಲರಾಗಿದ್ದಾರೆ: ಕೇಜ್ರಿವಾಲ್ ಆರೋಪ

    ನವದೆಹಲಿ: ಗೃಹ ಸಚಿವ ಅಮಿತ್ ಶಾ (Amit Shah) ಅವರು ಚುನಾವಣೆಯಲ್ಲಿ ನಿರತರಾಗಿದ್ದಾರೆ. ಇತ್ತ ದೆಹಲಿಯು (New Delhi) ದರೋಡೆಕೋರರ ನಿಯಂತ್ರಣದಲ್ಲಿದ್ದು, ಅಪರಾಧ ಸಂಖ್ಯೆ ಹೆಚ್ಚುತ್ತಿದೆ ಎಂದು ಮಾಜಿ ಸಿಎಂ, ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ವಾಗ್ದಾಳಿ ನಡೆಸಿದ್ದಾರೆ.

    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಪರಾಧ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೆಹಲಿಯ ಕಾನೂನು ಮತ್ತು ಸುವ್ಯವಸ್ಥೆ ಅಮಿತ್ ಶಾ ಅವರ ಜವಾಬ್ದಾರಿಯಾಗಿದೆ. ಆದರೆ ಅವರು ಚುನಾವಣೆಗಳಲ್ಲಿ ನಿರತರಾಗಿದ್ದಾರೆ. ದೆಹಲಿ ದರೋಡೆಕೋರರ ನಿಯಂತ್ರಣದಲ್ಲಿದೆ. ಶೂಟರ್‌ಗಳು ಅವರ ಹಿಂದಿನ ಮಾಸ್ಟರ್ ಮೈಂಡ್‌ಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪ್ರಾಮಾಣಿಕರನ್ನ ಸಿಎಂ ಮಾಡ್ಬೇಕು ಅಂದ್ರೆ ನನ್ನ ಹೆಸರೇ ಮೊದಲು ಬರುತ್ತೆ: ಯತ್ನಾಳ್‌

    ದೆಹಲಿಯ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಶನಿವಾರ ಬೆಳಗ್ಗೆ ವಿಶ್ವಾಸ್ ನಗರದಲ್ಲಿ ಉದ್ಯಮಿ ಸುನೀಲ್ ಜೈನ್ ಅವರನ್ನು ಹಗಲು ಹೊತ್ತಿನಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಅಪರಾಧಿಗಳು ಹೇಗೆ ನಿರ್ಭೀತರಾದರು? ಬೆದರಿಕೆ ಕರೆಗಳಿಂದ ಹಲವು ಪ್ರಮುಖರು ದೆಹಲಿಯನ್ನು ತೊರೆಯುವ ಪರಿಸ್ಥಿತಿ ಬಂದಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದ ಅಮೆರಿಕದ ನಿಯೋಜಿತ ಅಧ್ಯಕ್ಷ ಟ್ರಂಪ್ ಬಿಸಿನೆಸ್ ಪಾರ್ಟ್ನರ್

    ದೆಹಲಿಯಲ್ಲಿ ಮಹಿಳೆಯರು ಅಸುರಕ್ಷಿತರಾಗಿದ್ದಾರೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ವರದಿಯಾಗುತ್ತಿವೆ. ದೆಹಲಿ ಪೊಲೀಸರು ದೆಹಲಿ ನಿವಾಸಿಗಳನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ. ದೆಹಲಿ ಮತದಾರರು ಶಾಲೆ ಮತ್ತು ಆಸ್ಪತ್ರೆಗಳನ್ನು ಸರಿಪಡಿಸುವ ಜವಾಬ್ದಾರಿಯನ್ನು ನಮಗೆ ವಹಿಸಿದ್ದಾರೆ. ಮತದಾರರು ಬಿಜೆಪಿಗೆ ನೀಡಿದ ಏಕೈಕ ಜವಾಬ್ದಾರಿ ಕಾನೂನು ಮತ್ತು ಸುವ್ಯವಸ್ಥೆ. ಅದನ್ನು ಅವರು ಸರಿಯಾಗಿ ನಿಭಾಯಿಸುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಣಿಪಾಲ ಬಾಣಸಿಗನ ಸಾವಿಗೆ ಬಿಗ್ ಟ್ವಿಸ್ಟ್ – ಬಾಟಲಿಯಿಂದ ಕತ್ತು ಇರಿದುಕೊಂಡು ಆತ್ಮಹತ್ಯೆ?

    ಗ್ಯಾಂಗ್ ವಾರ್‌ಗಳು, ಸುಲಿಗೆ ಬೆದರಿಕೆಗಳು ಮತ್ತು ಪಾವತಿಸದ ಸಾಲಗಳ ಮೇಲೆ ಗುಂಡು ಹಾರಿಸುವುದನ್ನು ಪ್ರಚಲಿತ ಸಮಸ್ಯೆಗಳೆಂದು ಸೂಚಿಸಿದ್ದರಿಂದ ನಿವಾಸಿಗಳು, ವ್ಯಾಪಾರಿಗಳು, ಮಹಿಳೆಯರು ಮತ್ತು ವೃದ್ಧರು ದೆಹಲಿಯಲ್ಲಿ ನಿರಂತರ ಭಯದಿಂದ ಬದುಕುತ್ತಿದ್ದಾರೆ ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಆರೋಪಿಸಿದರು. ಇದನ್ನೂ ಓದಿ: ನಾನು ರಾಜಕೀಯ ಕೊನೆಗಾಲದಲ್ಲಿದ್ದೇನೆ: ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

  • ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

    ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

    ನವದೆಹಲಿ: ಇಲ್ಲಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಪಾದಯಾತ್ರೆ ವೇಳೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮೇಲೆ ವ್ಯಕ್ತಿಯೊಬ್ಬರು ಲಿಕ್ವಿಡ್ (Liquid) ಎರಚಿರುವ ಘಟನೆ ನಡೆದಿದೆ.

    ಘಟನೆ ಸಂಬಂಧ ಅಶೋಕ್ ಝಾ‌ ಎಂಬ ವ್ಯಕ್ತಿಯನ್ನ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಕೇಜ್ರಿವಾಲ್ ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಬೆಂಬಲಿಗರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ದೃಶ್ಯಾವಳಿ ವೀಡಿಯೋಗಳು ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕೆ ಅದ್ದೂರಿ ತೆರೆ – ಲಕ್ಷಾಂತರ ಭಕ್ತರು ಸಾಕ್ಷಿ

    ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಎಎಪಿ, ಮಾಜಿ ಮುಖ್ಯಮಂತ್ರಿಯೊಬ್ಬರು ರಾಷ್ಟ್ರ ರಾಜಧಾನಿಯಲ್ಲಿ ಸುರಕ್ಷಿತವಾಗಿಲ್ಲದಿದ್ದರೆ, ಇನ್ನು ಜನಸಾಮಾನ್ಯರ ಗತಿ ಏನು? ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ನಮ್ಮ ಮಠ-ಮಾನ್ಯಗಳ ಜೀರ್ಣೋದ್ಧಾರಕ್ಕೆ ಆ ಮುಲ್ಲಾಗಳಿಂದ ಹಣ ತೆಗೆದುಕೊಳ್ಳಬೇಡಿ: ಯತ್ನಾಳ್

    ಕೇಜ್ರಿವಾಲ್ ಅವರು ತಮ್ಮ ಭದ್ರತಾ ಸಿಬ್ಬಂದಿ ಹಿಂದೆ ನಿಂತಿರುವ ಜನರತ್ತ ಕೈಬೀಸುತ್ತಿದ್ದ ವೇಳೆ ಅವರ ಬಳಿಗೆ ಬಂದ ವ್ಯಕ್ತಿಯೊಬ್ಬ ಮಾಜಿ ಸಿಎಂ ಮೇಲೆ ದ್ರವ ಎರಚಿದ್ದಾನೆ. ತಕ್ಷಣ ಭದ್ರತಾ ಸಿಬ್ಬಂದಿ ಆತನನ್ನು ತಡೆದರು. ನಂತರ ಕೇಜ್ರಿವಾಲ್ ಮತ್ತು ಅವರ ಜೊತೆಗಿದ್ದ ಭದ್ರತಾ ಸಿಬ್ಬಂದಿ ಮುಖ ಒರೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅದೇ ಪ್ರದೇಶದ ನಿವಾಸಿಯಾಗಿರುವ ಲಿಕ್ವಿಡ್ ಎರಚಿದ ವ್ಯಕ್ತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇನ್ನೂ ಮತ್ತೊಬ್ಬ ಆಪ್‌ ನಾಯಕ ಸೌರಭ್‌ ಭಾರದ್ವಾಜ್‌ ಮಾತನಾಡಿ, ಈ ದಾಳಿಯ ಹಿಂದೆ ಬಿಜೆಪಿ ಕೈವಾಡವಿದೆ. ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಮತ್ತು ಕೇಂದ್ರ ಸರ್ಕಾರ ಮತ್ತು ಗೃಹ ಸಚಿವರು ಏನನ್ನೂ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡು, ಆಂಧ್ರದಲ್ಲಿ ಫೆಂಗಲ್ ಅಬ್ಬರ – ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ