Tag: Aazan

  • ಆಜಾನ್ ವಿರುದ್ಧ ಮತ್ತೆ ಸಮರ – 23ರಂದು ರಾಜ್ಯಾದ್ಯಂತ ಹೋರಾಟಕ್ಕೆ ಶ್ರೀರಾಮಸೇನೆ ಕರೆ

    ಆಜಾನ್ ವಿರುದ್ಧ ಮತ್ತೆ ಸಮರ – 23ರಂದು ರಾಜ್ಯಾದ್ಯಂತ ಹೋರಾಟಕ್ಕೆ ಶ್ರೀರಾಮಸೇನೆ ಕರೆ

    ಕಲಬುರಗಿ: ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ನೀಡಿದ್ದ ಆಜಾನ್ ಯುದ್ಧ ಮತ್ತೆ ಸದ್ದು ಮಾಡ್ತಿದೆ. ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಜಾನ್ ವಿರುದ್ಧ ಹಿಂದೂ ಸಂಘಟನೆಗಳು ಹೋರಾಟಕ್ಕೆ ನಿರ್ಧರಿಸಿವೆ.

    ಮಸೀದಿ ಧ್ವನಿವರ್ಧಕ ವಿರುದ್ಧ ಆಗಸ್ಟ್ 23ರಂದು, ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ಜಿಲ್ಲೆಯ ಎಸ್‌ಪಿ ಕಚೇರಿಗಳ ಎದುರು ಪ್ರತಿಭಟನೆ ಮಾಡೋದಾಗಿ ಶ್ರೀರಾಮಸೇನೆ ಕರೆ ನೀಡಿದೆ. ಇದನ್ನೂ ಓದಿ: ಇಂಡಿಗೋ ವಿಮಾನದಲ್ಲಿ ಹೊಗೆ ಎಚ್ಚರಿಕೆ – ಕೋಲ್ಕತ್ತಾದಲ್ಲಿ ಲ್ಯಾಂಡಿಂಗ್

    loudspeakers

    ಈ ಕುರಿತು ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು, ರಾಜ್ಯದ ಅನೇಕ ಮಸೀದಿಗಳಲ್ಲಿ ಇನ್ನೂ ಅನಧಿಕೃತವಾಗಿ ಆಜಾನ್ ಕೂಗಲು ಮೈಕ್‌ಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರಂದು ಹೋರಾಟದ ಜೊತೆಗೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕ್ಲಬ್‌ಹೌಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ- ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ FIR

    ಕ್ಲಬ್‌ಹೌಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ- ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ FIR

    ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದಂದು ಕ್ಲಬ್ ಹೌಸ್‌ನಲ್ಲಿ ಕಿಡಿಗೇಡಿಗಳ ಗುಂಪೊಂದು ಪಾಕ್ ಧ್ವಜ ಹಾಕಿ ಉದ್ಧಟತನ ಪ್ರದರ್ಶಿಸಿದೆ.

    ಪಾಕಿಸ್ತಾನ ಜಿಂದಾಬಾದ್, ಭಾರತಕ್ಕೆ ನಿಂದನೆ ಮಾಡುವ ಕಾಮೆಂಟ್‌ಗಳನ್ನ ಕನ್ನಡದಲ್ಲಿ ಹಾಕಿ ವಿಕೃತಿ ಮೆರೆದಿದ್ರು. ಪಾಕಿಸ್ತಾನದ ರಾಷ್ಟ್ರಗೀತೆ ಸಹ ಅಪ್ಲೋಡ್ ಮಾಡಿದ್ರು, ನಮ್ಮನ್ನ ಏನೂ ಮಾಡೋಕೆ ಆಗಲ್ಲ ಅಂತ ಜಂಬ ಮೆರೆದಿದ್ದಾರೆ. ಇದೀಗ ಕಿಡಿಗೇಡಿಗಳ ವಿರುದ್ಧ ಐಪಿಸಿ 353A ಅಡಿ ಸಂಪಿಗೆಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸದ್ಯ ಕಿಡಿಗೇಡಿಗಳ ಎಸ್ಕೇಪ್ ಆಗಿದ್ದು ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ಆಜಾನ್ ಸಮರಕ್ಕೆ ಕರೆ: ರಾಜ್ಯದಲ್ಲಿ ಮತ್ತೆ ಮೈಕ್ ದಂಗಲ್ ಶುರುವಾಗಿದೆ. ಆಜಾನ್‌ಗೆ ಬಳಸೋ ಧ್ವನಿವರ್ಧಕ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಶ್ರೀರಾಮಸೇನೆ ಸಜ್ಜಾಗಿದೆ. ಆಗಸ್ಟ್ 23 ರಂದು ರಾಜ್ಯದ ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡೋದಾಗಿ ಕಲಬುರಗಿಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ಹೇಳಿದ್ದಾರೆ.  ಇದನ್ನೂ ಓದಿ: ರೀಲ್ಸ್ ಮಾಡಲು ಮಹಿಳೆಯ ಕತ್ತು ಸೀಳಿ ಮೊಬೈಲ್ ಕದ್ದ ಅಪ್ರಾಪ್ತ

    ರಾಜ್ಯದಲ್ಲಿ ಅನಧಿಕೃತವಾಗಿ ಆಜಾನ್‌ಗೆ ಮೈಕ್ ಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರಂದು ಬೃಹತ್ ಪ್ರತಿಭಟನೆ ನಡೆಸುತ್ತೇವೆ ಅಂತ ಸಿದ್ದಲಿಂಗ ಸ್ವಾಮಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಜಾನ್ ವೇಳೆ ಗಣೇಶ ಮೆರವಣಿಗೆ ನಿಲ್ಲಿಸಿದ ಯುವಕರಿಗೆ ಪ್ರಶಂಸೆ: ವಿಡಿಯೋ ನೋಡಿ

    ಆಜಾನ್ ವೇಳೆ ಗಣೇಶ ಮೆರವಣಿಗೆ ನಿಲ್ಲಿಸಿದ ಯುವಕರಿಗೆ ಪ್ರಶಂಸೆ: ವಿಡಿಯೋ ನೋಡಿ

    ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಆಜಾನ್ ಕೇಳಿದ್ದರಿಂದ ಯುವಕರು ಮೆರವಣಿಗೆಯನ್ನು ನಿಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪ್ರಂಶಸೆಗೆ ಕಾರಣವಾಗಿದೆ.

    ಹೌದು, ಸಂಗಾಪೂರದ ವಿನಾಯಕ ಗೆಳೆಯರ ಬಳಗದ ಯುವಕರು ಅದ್ಧೂರಿಯಾಗಿ ಬುಧವಾರ ಗಣೇಶ ವಿಸರ್ಜನೆ ಮೆರವಣಿಗೆಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಮೆರವಣಿಗೆ ಸಾಗುತ್ತಿರುವಾಗ ಹತ್ತಿರದ ಮಸೀದಿಯಿಂದ ಆಜಾನ್ ಕೇಳಿಬಂದಿದೆ. ಆಜಾನ್ ಕೇಳಿದ ಕೂಡಲೇ ಯುವಕರು ಮೆರವಣಿಗೆಯನ್ನು ಸ್ವಲ್ಪ ಸಮಯದ ಕಾಲ ನಿಲ್ಲಿಸಿ ಬಳಿಕ ಮುಂದುವರಿಸಿದ್ದರು.

    ಯುವಕರು ಆಜಾನ್ ವೇಳೆ ಮೆರವಣಿಗೆಯನ್ನು ನಿಲ್ಲಿಸಿ ಗೌರವ ಸೂಚಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು, ವಿನಾಯಕ ಗೆಳೆಯರ ಬಳಗದ ಯುವಕರ ತಂಡಕ್ಕೆ ಜಾಲತಾಣಿಗರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಗಣೇಶ ಹಬ್ಬವು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾಗಿದೆ ಎಂಬುದನ್ನು ಯುವಕರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಹೀಗೆ ಹಲವರು ತಮ್ಮ-ತಮ್ಮ ಅಭಿಪ್ರಾಯಗಳನ್ನು ಫೇಸ್ಬುಕ್‍ಗಳಲ್ಲಿ ಹಂಚಿಕೊಂಡಿದ್ದಾರೆ.

    https://www.youtube.com/watch?v=KSo13tmCOgU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv