Tag: abhi das

  • ಮುದ್ದಾದ ಹಾಡಾಗಿ ಬಂತು ನಗುವಿನ ಹೂಗಳ ಮೇಲೆ

    ಮುದ್ದಾದ ಹಾಡಾಗಿ ಬಂತು ನಗುವಿನ ಹೂಗಳ ಮೇಲೆ

    ವೆಂಕಟ್ ಭಾರದ್ವಾಜ್ (Venkat Bharadwaj) ನಿರ್ದೇಶನದ `ನಗುವಿನ ಹೂಗಳ ಮೇಲೆ’ (Naguvina Hoogala Mele) ಚಿತ್ರ ನಾಳೆ ಬಿಡುಗಡೆಗೊಳ್ಳಲಿದೆ. ತೆರೆಗಾಣುವ ಕಡೇ ಘಳಿಗೆಯವರೆಗೂ ಪ್ರೇಕ್ಷಕರನ್ನು ಬೆರಗಾಗಿಸುವ ಸಲುವಾಗಿ ಇದೀಗ ಮುದ್ದಾದ ಹಾಡೊಂದನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ. ಈಗಾಗಲೇ ನಗುವಿನ ಹೂಗಳ ಮೇಲೆ ಗಾಢ ನಿರೀಕ್ಷೆಗಳ ಇಬ್ಬನಿ ಮೂಡಿಕೊಂಡಿದೆ. ಅದನ್ನು ಮತ್ತಷ್ಟು ತೀವ್ರವಾಗಿಸುವ ನಿಟ್ಟಿನಲ್ಲಿ ಈ ಹಾಡು ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಸದರಿ ಸಿನಿಮಾದಲ್ಲಿ ಪ್ರೇಮದ ನಾನಾ ಮಜಲುಗಳಿವೆ. ಅದರಲ್ಲೊಂದು ಭಾವದ ಅಭಿವ್ಯಕ್ತಿಯೆಂಬಂತೆ ಸದರಿ ಹಾಡನ್ನು ರೂಪಿಸಿದಂತಿದೆ.

    ಮುದ್ದು ಬೇಬಿ ಲವ್ ಯು ಬೇಬಿ ಅಂತ ಶುರುವಾಗುವ ಈ ಗೀತೆ ಲವ್ ಫ್ರಾನ್ ಮೆಹತಾ ಸಂಗೀತ ಸ್ಪರ್ಶದೊಂದಿಗೆ ಮೂಡಿ ಬಂದಿದೆ. ಕಿರಣ್ ನಾಗರಾಜ್ ಸಾಹಿತ್ಯ ಮತ್ತು ರೋನಿ, ಮೇಘನಾ ಕಠಸಿರಿಯಲ್ಲಿ ಮುದ್ದಾಗಿ ರೂಪುಗೊಂಡಿರುವ ಈ ಹಾಡು ಫಲಿಸಿದ ಪ್ರೇಮದ ಎಲ್ಲ ಭಾವಗಳನ್ನೂ ಸಶಕ್ತವಾಗಿ ಹಿಡಿದಿಟ್ಟಂತೆ ಭಾಸವಾಗುತ್ತದೆ. ಜೀ ಮ್ಯೂಸಿಕ್ ಮೂಲಕ ಬಿಡುಗಡೆಗೊಂಡಿರುವ ಮುದ್ದು ಬೇಬಿ ಹಾಡು ಬಹು ಬೇಗನೆ ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ. ಇನ್ನೇನು ಪ್ರೇಮಿಗಳ ದಿನ ಹತ್ತಿರದಲ್ಲಿದೆ. ಆ ಹೊತ್ತಿಗೆಲ್ಲ ಈ ಹಾಡು ಸಮಸ್ತ ಪ್ರೇಮಿಗಳ ಫೇವರಿಟ್ ಆಗಿ ಬದಲಾಗುವ ಲಕ್ಷಣಗಳಿವೆ.

    ನಿರ್ದೇಶಕ ವೆಂಕಟ್ ಭಾರದ್ವಾಜ್ ಸಣ್ಣ ಸಣ್ಣ ವಿಚಾರಗಳನ್ನೂ ಗಮನದಲ್ಲಿಟ್ಟುಕೊಂಡು ಈ ಸಿನಿಮಾವನ್ನು ರೂಪಿಸಿದ್ದಾರೆ. ಅದರಲ್ಲಿಯೂ ಕಥೆಯ ಓಘಕ್ಕೆ ತಕ್ಕುದಾಗಿ ಹಾಡುಗಳನ್ನು ರೂಪಿಸಲು ಒಂದು ಅನ್ವೇಷಣೆಯನ್ನೇ ನಡೆಸಿದ್ದರಂತೆ. ಅದರ ಭಾಗವಾಗಿ ಪಂಜಾಬ್ ಮೂಲದ ಪ್ರಸಿದ್ಧ ಸಂಗೀತ ನಿರ್ದೇಶಕ ಲವ್ ಫ್ರಾನ್ ಮೆಹತ ಮಾತ್ರವಲ್ಲದೇ, ಬೇರೆ ಬೇರೆ ರಾಜ್ಯಗಳ ಗಾಯಕರನ್ನೂ ಒಂದೆಡೆ ಕಲೆಹಾಕಿದ್ದಾರೆ. ಇಂಥಾದ್ದೊಂದು ಪರಿಶ್ರಮ, ಕನಸಿನ ಪ್ರತಿಫಲವಾಗಿಯೇ ನಗುವಿನ ಹೂಗಳ ಮೇಲೆ ಚಿತ್ರದ ಒಂದೊಂದು ಹಾಡುಗಳೂ ಒಂದೊಂದು ಬೆರಗು ಹೊತ್ತು ಬಂದಿವೆ. ಇದೀಗ ಬಿಡುಗಡೆಗೊಂಡಿರುವ ಹಾಡಿನಲ್ಲಿಯೂ ಅಂತಹ ಛಾಯೆಯಿದೆ.

     

    ಇದು ಪರಿಶುದ್ಧ ಪ್ರೇಮ ಕಥನದ ಭೂಮಿಕೆಯಲ್ಲಿ ತೆರೆದುಕೊಳ್ಳುವ ಬದುಕಿಗೆ ಹತ್ತಿರವಾದ ಕಥನ. ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕ ಕೆ.ಕೆ ರಾಧಾ ಮೋಹನ್ ಶ್ರೀ ಸತ್ಯಸಾಯಿ ಆಟ್ರ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಅಭಿ ದಾಸ್ (Abhi Das) ಹಾಗೂ ಶರಣ್ಯಾ ಶೆಟ್ಟಿ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣ ಈ ಚಿತ್ರದಲ್ಲಿದೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ಅಭಿದಾಸ್‌, ಶರಣ್ಯ ಶೆಟ್ಟಿ ನಟನೆಯ ‌’ನಗುವಿನ ಹೂಗಳ ಮೇಲೆ’ ಸಿನಿಮಾದ ಸಾಂಗ್ ಔಟ್

    ಅಭಿದಾಸ್‌, ಶರಣ್ಯ ಶೆಟ್ಟಿ ನಟನೆಯ ‌’ನಗುವಿನ ಹೂಗಳ ಮೇಲೆ’ ಸಿನಿಮಾದ ಸಾಂಗ್ ಔಟ್

    ಕಿರುತೆರೆಯ ‘ಗಟ್ಟಿಮೇಳ'(Gattimela) ಖ್ಯಾತಿಯ ಅಭಿದಾಸ್(Abhidas), ನಟಿ ಶರಣ್ಯಾ ಶೆಟ್ಟಿ ಜೋಡಿಯಾಗಿ ಅಭಿನಯಿಸಿರುವ ‘ನಗುವಿನ ಹೂಗಳ ಮೇಲೆ’ (Naguvina Hoogala Mele) ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಎಸ್‌ಆರ್‌ವಿ ಥಿಯೇಟರ್‌ನಲ್ಲಿ ‘ಗೊತ್ತಿಲ್ಲ ಯಾರಿಗೂ’ (Gottilla Yarigu) ಎಂಬ ರೊಮ್ಯಾಂಟಿಕ್ ಹಾಡೊಂದನ್ನ ಚಿತ್ರತಂಡ ರಿಲೀಸ್ ಮಾಡಿದೆ. ಸದ್ಯ ಶರಣ್ಯ ಶೆಟ್ಟಿ-ಅಭಿ ಜೋಡಿ ನೋಡುಗರನ್ನ ಮೋಡಿ ಮಾಡ್ತಿದೆ.

    ನಿರ್ದೇಶಕ ವೆಂಕಟ್ ಭಾರದ್ವಾಜ್ ಮಾತನಾಡಿ, ‘ನಗುವಿನ ಹೂಗಳ ಮೇಲೆ’ ಹೆಸರು ತುಂಬಾ ಚೆನ್ನಾಗಿದೆ ಮತ್ತು ತುಂಬಾ ತೂಕವಾದ ಹೆಸರು. ಡಾ.ರಾಜ್ ಕುಮಾರ್ ಸರ್ ಹಾಡಿರುವ, ಚಿ. ಉದಯ್ ಶಂಕರ್ ಬರೆದಿರುವ ಭಾಗ್ಯವಂತರು ಸಿನಿಮಾದ ಹಾಡಿನ ಎರಡನೇ ಚರಣದಲ್ಲಿ ಬರುವ ತೂಕವಿರುವ ಪದ ಇದು. ಹೀಗಾಗಿ ನಮ್ಮ ಕಂಟೆಂಟ್ ಚೆನ್ನಾಗಿ ಮಾಡುವ ಜವಾಬ್ದಾರಿ ಹೆಚ್ಚಿತ್ತು. ಶರಣ್ಯ ಶೆಟ್ಟಿ- ಅಭಿ ಕಾಂಬಿನೇಷನ್ ಸಿನಿಮಾದಲ್ಲಿ ತುಂಬಾ ಚೆನ್ನಾಗಿ ವರ್ಕೌಟ್ ಆಗಿದೆ. ನಗುವಿನ ಹೂಗಳ ಮೇಲೆ ಒಂದೊಳ್ಳೆ ಪ್ರೇಮಕಥೆ. 18 ವರ್ಷದಿಂದ 80 ವರ್ಷದವರು ನೋಡಬಹುದು. ಪ್ರೇಮ ಅನ್ನೋದಕ್ಕೆ ಸಾವಿಲ್ಲ. ವಯಸ್ಸಿಲ್ಲ. ಪ್ರತಿಯೊಬ್ಬ ಕಲಾವಿದರು, ತಂತ್ರಜ್ಞರು ನಮಗೆ ಬೆಂಬಲವಾಗಿ ನಿಂತಿದ್ದರು. 27 ದಿನಗಳು ಶೂಟಿಂಗ್ ಮಾಡಿ ಮುಗಿಸಿದ್ದೇವೆ ಎಂದು ತಿಳಿಸಿದರು.

    ನಟ ಅಭಿದಾಸ್ ಮಾತನಾಡಿ, ಸೋಲೋ ಹೀರೋ ಆಗಿ ಇದು ನನ್ನ ಮೊದಲ ಸಿನಿಮಾ. ವೆಂಕಟ್ ಸರ್, ರಾಧಾ ಮೋಹನ್ ಸರ್ ಧನ್ಯವಾದ ನನ್ನ ಸೆಲೆಕ್ಟ್ ಮಾಡಿದ್ದಕ್ಕೆ. ನಾಲ್ಕು ಮೆಲೋಡಿ ಹಾಡು ಕೊಟ್ಟಿದ್ದಾರೆ. ಇರಲಿ ಬಿಡು, ಗೊತ್ತಿಲ್ಲ ಯಾರಿಗೂ ನನ್ನ ಫೇವರೇಟ್ ಹಾಡುಗಳು ಎಂದರು. ಇದನ್ನೂ ಓದಿ:ಬಿಗ್ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್- ದೊಡ್ಮನೆ ಆಟಕ್ಕೆ ಮುಹೂರ್ತ ಫಿಕ್ಸ್

    ಶರಣ್ಯ ಶೆಟ್ಟಿ (Sharanya Shetty) ಮಾತನಾಡಿ, ನಗುವಿನ ಹೂಗಳ ಮೇಲೆ ನನಗೆ ತುಂಬಾ ಸ್ಪೆಷಲ್ ಸಿನಿಮಾ. ಸೋಲೋ ಹೀರೋಯಿನ್ ಆಗಿ ಫಸ್ಟ್ ಸೈನ್ ಮಾಡಿದ ಮೂವಿ. ಎರಡು ವರ್ಷದ ಹಿಂದೆ ಶೂಟ್ ಮಾಡಿದ್ದು ಇದು. ಸ್ಕ್ರೀನ್‌ನಲ್ಲಿ ನನ್ನ ಮುಗ್ದತೆ ಕಾಣಿಸುತ್ತದೆ. ಶೂಟಿಂಗ್ ಪ್ರೋಸೆಸ್ ತುಂಬಾ ಚೆನ್ನಾಗಿತ್ತು. ಈ ಸಿನಿಮಾ ಟ್ರೂ ಲವ್ ಸ್ಟೋರಿ ಬೆಸೆಡ್ ಇದೆ. ತನು ಮನುವಿನ ಪ್ರೇಮಕಥೆ ನಗುವಿನ ಹೂಗಳ ಮೇಲೆ. ನಾನು ತೆರೆಮೇಲೆ ಚಿತ್ರ ನೋಡಲು ಕಾತುರಳಾಗಿದ್ದೇನೆ ಎಂದರು.

    ಗೊತ್ತಿಲ್ಲ ಯಾರಿಗೂ ಎಂಬ ಪ್ರೇಮಗೀತೆಗೆ ಲವ್ ಪ್ರಾನ್ ಮೆಹತಾ ಟ್ಯೂನ್ ಹಾಕಿದ್ದು, ಚಿದಂಬರ ನರೇಂದ್ರ ಸಾಹಿತ್ಯ ಬರೆದಿದ್ದು, ತಜೀಂದರ್ ಸಿಂಗ್ ಧ್ವನಿಯಾಗಿದ್ದಾರೆ. ಈ ಹಾಡಿನಲ್ಲಿ ಶರಣ್ಯ ಹಾಗೂ ಅಭಿದಾಸ್ ಮಿಂಚಿದ್ದಾರೆ. ಈ ಹಿಂದೆ ರಿಲೀಸ್ ಆಗಿದ್ದ ಇರಲಿ ಬಿಡು ಈ ಜೀವ ನಿನಗಾಗಿ ಗಾನಲಹರಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು.

    ಆಮ್ಲೆಟ್, ಕೆಂಪಿರ್ವೆ ಸೇರಿದಂತೆ ಹತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿರುವ ವೆಂಕಟ್ ಭಾರದ್ವಾಜ್ ಆಕ್ಷನ್ ಕಟ್ ಹೇಳಿದ್ದು, ಅಭಿದಾಸ್, ಶರಣ್ಯ ಶೆಟ್ಟಿ ಜೋಡಿಯಾಗಿ ನಟಿಸುತ್ತಿದ್ದು, ಬಾಲ ರಾಜವಾಡಿ, ಆಶಾ ಸುಜಯ್, ಗಿರೀಶ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತ್ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ತಾರಾಬಳಗದಲ್ಲಿದ್ದಾರೆ.

    ಟಾಲಿವುಡ್ ನಲ್ಲಿ ಬೆಂಗಾಲ್ ಟೈಗರ್, ಪಂಥಂ, ಬಾಸ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ಕೆ. ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೊದಲ ಕನ್ನಡ ಸಿನಿಮಾವಾಗಿದೆ. ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಚಂದನ್ ಪಿ ಸಂಕಲನ, ಲವ್ ಪ್ರಾನ್ ಮೆಹತಾ ಸಂಗೀತ ನಿರ್ದೇಶನ, ಟೈಗರ್ ಶಿವು ಸಾಹಸ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]